Tag: ಪದವಿ ಪರೀಕ್ಷೆ

  • ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ಸೂಚನೆ: ಅಶ್ವಥ್ ನಾರಾಯಣ

    ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ಸೂಚನೆ: ಅಶ್ವಥ್ ನಾರಾಯಣ

    ಬೆಂಗಳೂರು: ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

    ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತಮಿಳುನಾಡು ಸಿಎಂ ಮನೆಗೆ ಶಿವರಾಜ್‍ಕುಮಾರ್ ದಂಪತಿ ಭೇಟಿ

    ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

     

  • ಪದವಿ ಪರೀಕ್ಷೆಯಲ್ಲಿ ನಕಲು- ಪ್ರಾಂಶುಪಾಲರೇ ಸಾಥ್

    ಪದವಿ ಪರೀಕ್ಷೆಯಲ್ಲಿ ನಕಲು- ಪ್ರಾಂಶುಪಾಲರೇ ಸಾಥ್

    ಕೊಪ್ಪಳ: ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಬಿಎ ಮೂರನೇ ಸೆಮೆಸ್ಟರ್ ನ ಇತಿಹಾಸ ವಿಷಯದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.

    ಮಂಗಳವಾರ ಕೊಠಡಿಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕುರಿಸಿ ಪರೀಕ್ಷೆ ಬರೆಯಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಈ ಕಾಲೇಜು ಅಕ್ಕಮಹಾದೇವಿ ಮಹಿಳಾ ವಿವಿ ವ್ಯಾಪ್ತಿಗೆ ಒಳಪಡುತ್ತದೆ. ಪರೀಕ್ಷಾ ಕಾರ್ಯಕ್ಕೆ ಖಾಯಂ, ಅತಿಥಿ ಉಪನ್ಯಾಸಕರು ಗೈರಾಗಿದ್ದರಿಂದ ಅನ್ಯವ್ಯಕ್ತಿಗಳ ಮೂಲಕ ಕೊಠಡಿ ಮೇಲ್ವಿಚಾರಣೆ ಕಾರ್ಯ ನಡೆಸಿದ ಆರೋಪ ಇದೀಗ ಪ್ರಾಚಾರ್ಯ ಡಾ.ಗಣಪತಿ ಲಮಾಣಿ ವಿರುದ್ಧ ಕೇಳಿಬಂದಿದೆ.

    ಮಂಗಳವಾರ ಬಿಎ ಮೂರನೇ ಸೆಮಿಸ್ಟರ್ ನ ಇತಿಹಾಸ ವಿಷಯದ ಪರೀಕ್ಷೆ ಇತ್ತು. ಈ ವೇಳೆ ಪ್ರಾಚಾರ್ಯ ಡಾ.ಗಣಪತಿ ಲಮಾಣಿ ವಿದ್ಯಾರ್ಥಿಗಳಿಂದ ಹಣ ಪಡೆದು ಒಂದು ಕೊಠಡಿಯಲ್ಲಿ ಇಬ್ಬರೇ ವಿದ್ಯಾರ್ಥಿನಿಯರನ್ನು ಕುರಿಸಿ, ಪರೀಕ್ಷೆ ಬರೆಯಿಸಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಡಾ.ಗಣಪತಿ ವಿರುದ್ಧ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ತನಿಖೆ ಆರಂಭವಾಗಿದ್ದು, ಕಾಲೇಜಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಾಜಕುಮಾರ್ ಪಾಟೀಲ್, ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ಬಡಿಗೇರ್, ನಗರ ಠಾಣೆ ಇನ್‍ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದ್ದು, ತನಿಖಾ ತಂಡ ಕುಲಪತಿಗಳಿಗೆ ವರದಿ ಸಲ್ಲಿಸಲಿದೆ.

  • ಸಿಇಟಿ, ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ

    ಸಿಇಟಿ, ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ

    – ಶಿವಮೊಗ್ಗದ ವಿನೋಬನಗರ ಬಡಾವಣೆಯಲ್ಲಿನ ಸಿಎಂ ನಿವಾಸಕ್ಕೆ ಮುತ್ತಿಗೆ

    ಶಿವಮೊಗ್ಗ: ಸಿಇಟಿ ಹಾಗೂ ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರ್ಕಾರ ಸಿಇಟಿ ಹಾಗೂ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸುವುದಾಗಿ ಘೋಷಿಸಿರುವುದನ್ನು ಖಂಡಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ನಗರದ ವಿನೋಬಗರ ಬಡಾವಣೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಈ ಕೂಡಲೇ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದ ಕಾರ್ಯಕರ್ತರನ್ನು ವಿನೋಬನಗರ ಠಾಣೆ ಪೊಲೀಸರು ವಶಪಡಿಸಿಕೊಂಡರು.

  • ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳು: ವಿಡಿಯೋ ವೈರಲ್

    ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳು: ವಿಡಿಯೋ ವೈರಲ್

    – ಶಾಂತಿಯುತ ಪರೀಕ್ಷೆ ನಡೆಯುತ್ತಿದೆ ಎಂದ ಪ್ರಾಂಶುಪಾಲರು

    ಪಾಟ್ನಾ: ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಗುಂಪುಗುಂಪಾಗಿ ಕುಳಿತು ಪರೀಕ್ಷೆ ಬರೆದ ಘಟನೆ ಬಿಹಾರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಶ್ಚಿಮ ಚಂಪಾರಣ್ ಜಿಲ್ಲೆಯ ಬೇತಿಯಾ ಪಟ್ಟಣದ ರಾಮ್ ಲಖನ್ ಸಿಂಗ್ ಯಾದವ್ (ಆರ್‌ಎಲ್‍ಎಸ್‍ವೈ) ಕಾಲೇಜಿನಲ್ಲಿ ಪರೀಕ್ಷಾ ನಕಲು ನಡೆದಿದೆ. ಆರ್‌ಎಲ್‍ಎಸ್‍ವೈ ಕಾಲೇಜು ಬಾಬಾ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಬಿಹಾರ ವಿಶ್ವವಿದ್ಯಾಲಯದ ಘಟಕವಾಗಿದ್ದು, ಅಂತಿಮ ವರ್ಷದ ಪದವಿಪೂರ್ವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಗುಂಪು ಗುಂಪಾಗಿ ಕುಳಿತು ಬರೆದಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ತಲೆಗೆ ಡಬ್ಬ ಕಟ್ಟಿದ್ದ ಕಾಲೇಜ್

    ವಿಶ್ವವಿದ್ಯಾಲಯ ಪರೀಕ್ಷೆ  ನಡೆಸಿದ ಹಲವಾರು ಕಾಲೇಜುಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಕಂಡುಬಂದಿದೆ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‍ನಲ್ಲಿ ಎಲ್ಲಿಯಾದರೂ ಕುಳಿತು ಸಾಮೂಹಿಕ ನಕಲು ಮಾಡುವಲ್ಲಿ ತೊಡಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ವಿದ್ಯಾರ್ಥಿಗಳು ಮಹಡಿಗಳಲ್ಲಿ ಮತ್ತು ಕಾರಿಡಾರ್ ಗಳಲ್ಲಿ ಏಕೆ ಕುಳಿತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರ್‌ಎಲ್‍ಎಸ್‍ವೈ ಕಾಲೇಜಿನ ಪ್ರಾಂಶುಪಾಲ ರಾಜೇಶ್ವರ್ ಪ್ರಸಾದ್ ಯಾದವ್, ಕಾಲೇಜಿನಲ್ಲಿ ಸ್ಥಳಾವಕಾಶದ ಕೊರತೆ ಇದೆ. ಕಾಲೇಜು ಕಟ್ಟಡದಲ್ಲಿ ಕೇವಲ 2,500 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಸಾಧ್ಯ. ಆದರೆ ವಿಶ್ವವಿದ್ಯಾಲಯವು ನಮ್ಮ ಕಾಲೇಜಿಗೆ ಸುಮಾರು 6,000 ವಿದ್ಯಾರ್ಥಿಗಳನ್ನು ನಿಗದಿಪಡಿಸಿದೆ ಎಂದು ದೂರಿದ್ದಾರೆ.

    ಸಾಮೂಹಿಕ ಪರೀಕ್ಷಾ ನಕಲು ನಡೆಯುತ್ತಿದೆ ಎಂಬ ಆರೋಪವನ್ನು ಪ್ರಾಂಶುಪಾಲರು ತಳ್ಳಿ ಹಾಕಿದ್ದಾರೆ. ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸಲಾಗಿದೆ ಎಂದು ಹೇಳಿದರು.

    ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ಒಟ್ಟಿಗೆ ಪರೀಕ್ಷೆಗೆ ನಡೆಯುತ್ತಿವೆ. ಒಂದು ದಿನಕ್ಕೆ ಎರಡು ಬ್ಯಾಚ್‍ನಂತೆ ಪರೀಕ್ಷೆ ನಡೆಸಲಾಗುತ್ತಿದೆ. ಬೆಳಗ್ಗೆ 9ರಿಂದ 12 ಗಂಟೆ ವೆರೆಗೆ ನಡೆಯುವ ಮೊದಲ ಬ್ಯಾಚ್‍ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ 2,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಬಳಿಕ ಮಧ್ಯಾಹ್ನ 2ರಿಂದ 5ಗಂಟೆ ವರೆಗೆ ನಡೆಯುವ ಕಲಾ ಪರೀಕ್ಷೆಗೆ 6,000 ವಿದ್ಯಾರ್ಥಿಗಳು ಬರುತ್ತಾರೆ ಎಂದು ತಿಳಿಸಿದರು.

  • ಪುತ್ರಿಯ ಪ್ರೇರಣೆಯಿಂದ 55ರ ಶಾಸಕ ಪದವಿ ಪರೀಕ್ಷೆ ಬರೆದ್ರು

    ಪುತ್ರಿಯ ಪ್ರೇರಣೆಯಿಂದ 55ರ ಶಾಸಕ ಪದವಿ ಪರೀಕ್ಷೆ ಬರೆದ್ರು

    ಲಖ್ನೋ: ಪುತ್ರಿಯರ ಪ್ರೇರಣೆಯಿಂದ ಉತ್ತರ ಪ್ರದೇಶದ ಶಾಸಕರೊಬ್ಬರು ತಮ್ಮ 55 ನೇ ವಯಸ್ಸಿನಲ್ಲಿ ಪದವಿ ಪ್ರಥಮ ವರ್ಷದ ಪರೀಕ್ಷೆ ಬರೆದಿದ್ದಾರೆ.

    ಉದಯಪುರ ಗ್ರಾಮೀಣ ಮತಕ್ಷೇತ್ರದ ಶಾಸಕ ಫೋಲ್ ಸಿಂಗ್ ಮೀನಾ ಪದವಿ ಶಿಕ್ಷಣದ ಪ್ರಥಮ ವರ್ಷದ ಪರೀಕ್ಷೆ ಬರೆದಿದ್ದು, ಪಿ.ಎಚ್‍ಡಿ ಮಾಡುವ ಅಭಿಲಾಸೆಯನ್ನು ವ್ಯಕ್ತಪಡಿಸಿದ್ದಾರೆ.

    ನೀವು ಏಕೆ ಶಿಕ್ಷಣವನ್ನು ಮುಂದುವರೆಸಬಾರದು ಅಂತಾ ನನ್ನ ಇಬ್ಬರು ಪುತ್ರಿಯರು ಕೇಳಿದರು. ಆದರೆ ವಯಸ್ಸು ಆಗಿದ್ದರಿಂದ ನಿರಾಕರಿಸಿದ್ದೇ. ಮಕ್ಕಳು ಬಿಡಲಿಲ್ಲ ಪರೀಕ್ಷೆ ಬರೆಯಲು ಪ್ರೇರಣೆ ನೀಡಿದರು ಎಂದು ಶಾಸಕ ಫೋಲ್ ಸಿಂಗ್ ತಿಳಿಸಿದ್ದಾರೆ.

  • ಪರೀಕ್ಷೆ ಸರಿಯಾಗಿ ಬರೆದಿಲ್ಲ ಅಂತಾ ನೇಣಿಗೆ ಶರಣಾದ ವಿದ್ಯಾರ್ಥಿನಿ

    ಪರೀಕ್ಷೆ ಸರಿಯಾಗಿ ಬರೆದಿಲ್ಲ ಅಂತಾ ನೇಣಿಗೆ ಶರಣಾದ ವಿದ್ಯಾರ್ಥಿನಿ

    ಚಿಕ್ಕಬಳ್ಳಾಪುರ: ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಗೇಪಲ್ಲಿಯ ಪಟ್ಟಣದ 16 ನೇ ವಾರ್ಡ್ ನಲ್ಲಿ ನಡೆದಿದೆ.

    21 ವರ್ಷದ ತನುಜಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತನುಜಾ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ರಸಾಯನ ಶಾಸ್ತ್ರದ ಪರೀಕ್ಷೆ ಬರೆದು ಬಂದ ತನುಜಾ ಚೆನ್ನಾಗಿ ಬರೆದಿಲ್ಲ ಅಂತಾ ಕುಟುಂಬಸ್ಥರ ಮುಂದೆ ಹೇಳಿಕೊಂಡಿದ್ರು. ಮನೆಯ ಸದಸ್ಯರು ಪರವಾಗಿಲ್ಲ ಏನಾಗಲ್ಲ ಅಂತಾ ಸಮಾಧಾನಪಡಿಸಿದ್ರು. ನಂತರ ಕೋಣೆ ಸೇರಿಕೊಂಡ ತನುಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಅಂತಿಮ ವರ್ಷದ ಪರೀಕ್ಷೆ ಸರಿಯಾಗಿ ಎದುರಿಸಲಿಲ್ಲ. ಹೀಗಾಗಿ ತಾನು ಅನುತ್ತೀರ್ಣಗೊಳ್ಳುತ್ತೇನೆ ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.