Tag: ಪದವಿ

  • ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ತಡವಾದರೆ, ಮುಂದಿನ ಸೆಮಿಸ್ಟರ್ ಆನ್‍ಲೈನ್ ಬೋಧನೆ ಮುಂದುವರಿಕೆ: ಅಶ್ವಥ್ ನಾರಾಯಣ್

    ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ತಡವಾದರೆ, ಮುಂದಿನ ಸೆಮಿಸ್ಟರ್ ಆನ್‍ಲೈನ್ ಬೋಧನೆ ಮುಂದುವರಿಕೆ: ಅಶ್ವಥ್ ನಾರಾಯಣ್

    – ಕೊರೊನಾ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆ, ಭೌತಿಕ ತರಗತಿ ಕುರಿತು ನಿರ್ಧಾರ

    ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಪದವಿ ಕೋರ್ಸ್‍ಗಳ ಸಮ ಸ್ಥಾನಿಕ ಸೆಮಿಸ್ಟರ್ ಕೋರ್ಸ್‍ಗಳಿಗೆ ಆನ್‍ಲೈನ್ ತರಗತಿಗಳನ್ನು ಮುಂದುವರಿಸಬೇಕು. ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದರು.

    ಬೆಸ ಸ್ಥಾನಿಕ ಸೆಮಿಸ್ಟರ್‍ಗಳಿಗೆ ಪರೀಕ್ಷೆಗಳನ್ನು ಇನ್ನೂ ಪೂರೈಸದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೂಡ ಸಮ ಸ್ಥಾನಿಕ ಸೆಮಿಸ್ಟರ್‍ಗಳಿಗೆ (2ನೇ, 4ನೇ, 6ನೇ ಮತ್ತು 8ನೇ ಸೆಮಿಸ್ಟರ್‍ಗಳು) ಆನ್‍ಲೈನ್ ತರಗತಿಗಳನ್ನು ಶುರು ಮಾಡಬೇಕು. ಬಹುತೇಕ ಕೋರ್ಸ್‍ಗಳಿಗೆ ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದರಿಂದ ಪದವಿ ಕೋರ್ಸ್‍ಗಳ ಬೆಸ ಸ್ಥಾನಿಕ ಸೆಮಿಸ್ಟರ್‍ಗಳಿಗೆ ಕೋವಿಡ್ ಪರಿಸ್ಥಿತಿ ತಹಬಂದಿಗೆ ಬಂದಮೇಲೆ ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

    ಕೆಲವು ಎಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್‍ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್‍ಗಳಿಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು ಎಂದು ತಿಳಿಸಿದರು.

    ಸ್ನಾತಕೋತ್ತರ ಕೋರ್ಸ್‍ಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಕೋವಿಡ್ ಕಾರಣದಿಂದಾಗಿ ಕೆಲವು ವಿಶ್ವವಿದ್ಯಾಲಯಗಳಲ್ಲಿ ಮೊದಲ ಸೆಮಿಸ್ಟರ್‍ಗೆ ಪ್ರವೇಶಾತಿ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಹೆಚ್ಚಿನ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಮೂರನೇ ಸೆಮಿಸ್ಟರ್‍ನ ತರಗತಿಗಳು ಮುಗಿದಿದ್ದು, ಕೆಲವೆಡೆ ಪರೀಕ್ಷೆಗಳು ಕೂಡ ಆರಂಭವಾಗಿದ್ದವು. ಹೀಗಾಗಿ ಸ್ನಾತಕೋತ್ತರ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ ಮೂರನೇ ಸೆಮಿಸ್ಟರ್‍ನ ತರಗತಿಗಳು ಈಗಾಗಲೇ ಮುಗಿದಿದ್ದು, ಪರೀಕ್ಷೆಗಳನ್ನು ನಡೆಸುವುದು ಮಾತ್ರ ಬಾಕಿ ಉಳಿದಿದ್ದರೆ, ಸಮ ಸ್ಥಾನಿಕ ಸೆಮಿಸ್ಟರ್‍ಗಳಿಗೆ ಆನ್‍ಲೈನ್ ತರಗತಿಗಳನ್ನು ಆರಂಭಿಸಬೇಕು. ಬೆಸ ಸ್ಥಾನಿಕ ಸೆಮಿಸ್ಟರ್‍ಗಳಿಗೆ ಬಾಕಿ ಉಳಿಯುವ ಪರೀಕ್ಷೆಗಳನ್ನು ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುವುದು ಎಂದರು.

    ಬೆಸ ಸ್ಥಾನಿಕ ಸೆಮಿಸ್ಟರ್‍ಗಳಿಗೆ (1ನೇ, 3ನೇ, 5ನೇ, 7ನೇ ಸೆಮಿಸ್ಟರ್ ಗಳು) ಇನ್ನೂ ತರಗತಿಗಳನ್ನು ಮುಗಿಸದ ವಿಶ್ವವಿದ್ಯಾಲಯಗಳು ಆನ್‍ಲೈನ್ ತರಗತಿಗಳನ್ನು ಮುಂದುವರಿಸಬೇಕು. ಈ ತರಗತಿಗಳು ಮುಗಿದ ಮೇಲೂ ಕೋವಿಡ್‍ನಿಂದಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದಿದ್ದರೆ, ತಕ್ಷಣವೇ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್‍ಗಳಿಗೆ ಆನ್‍ಲೈನ್ ತರಗತಿಗಳನ್ನು ಶುರುಮಾಡಬೇಕು. ಇದರಿಂದಾಗಿ ಬಾಕಿ ಉಳಿಯುವ ಬೆಸ ಸ್ಥಾನಿಕ ಸೆಮಿಸ್ಟರ್ ಗಳ ಪರೀಕ್ಷೆಗಳನ್ನು ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುತ್ತದೆ ಎಂದು ತಿಳಿಸಿದರು.

    ಪರಿಸ್ಥಿತಿಯ ಬೆಳವಣಿಗೆಗಳಿಗೆ ಅನುಗುಣವಾಗಿ ಕುಲಪತಿಗಳು ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲಿ ಕೈಗೊಳ್ಳುವ ನಿರ್ಧಾರಗಳನ್ನು ಆಧರಿಸಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಬೇಕಾದ ಮಾರ್ಗದರ್ಶಿ ಸೂತ್ರಗಳು ಹಾಗೂ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಅವರು ಹೇಳಿದರು.

  • ಪದವಿ ಪಡೆದ ಶಾರೂಕ್ ಪುತ್ರ ಆರ್ಯನ್ – ಫೋಟೋ ವೈರಲ್

    ಪದವಿ ಪಡೆದ ಶಾರೂಕ್ ಪುತ್ರ ಆರ್ಯನ್ – ಫೋಟೋ ವೈರಲ್

    ಮುಂಬೈ: ಬಾಲಿವುಡ್ ಬಾದ್ ಶಾ ನಟ ಶಾರೂಕ್ ಖಾನ್‍ರವರ ಪುತ್ರ ಆರ್ಯನ್ ಖಾನ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆರ್ಯನ್ ಖಾನ್‍ರವರು ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಸಮಾರಂಭದ ಉಡುಪು ಧರಿಸಿ ಕೈನಲ್ಲಿ ಸರ್ಟಿಫಿಕೇಟ್ ಹಿಡಿದುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಆರ್ಯನ್ ಅಷ್ಟಾಗಿ ಆಕ್ಟೀವ್ ಆಗಿಲ್ಲ. ಆದರೆ ಅವರ ಅಭಿಮಾನಿಗಳು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರಧಾನ ಸಮಾರಂಭ ನಡೆಸಲಾಗಿದೆ. ಈ ಸಮಾರಂಭದಲ್ಲಿ ಶಾರೂಕ್ ಪುತ್ರ ಆರ್ಯನ್ ಕೂಡ ಭಾಗಿಯಾಗಿದ್ದರು.

     

    View this post on Instagram

     

    A post shared by ???????????????? (@devoted2srk65)

    ಆರ್ಯನ್ ಖಾನ್ 2020ರ ಬ್ಯಾಚ್‍ನ ಬ್ಯಾಚುಲರ್ ಆಫ್ ಫೈನ್ ಆಟ್ರ್ಸ್, ಸಿನಿಮ್ಯಾಟಿಕ್ ಆಟ್ರ್ಸ್, ಫಿಲ್ಮ್ ಅಂಡ್ ಟೆಲಿವಿಷನ್ ಪ್ರೊಡಕ್ಷನ್, ಸ್ಕೂಲ್ ಆಫ್ ಸಿನಿಮ್ಯಾಟಿಕ್ ಆಟ್ರ್ಸ್ ನಲ್ಲಿ ಪದವಿ ಪಡೆದಿದ್ದಾರೆ. ಸದ್ಯ ಆರ್ಯನ್‍ನ ಈ ಫೋಟೋವನ್ನು ಅಭಿಮಾನಿಗಳು ಶೇರ್ ಮಾಡಿಕೊಳ್ಳುವ ಮೂಲಕ ವಿಶ್ ಮಾಡುತ್ತಿದ್ದಾರೆ.

     

    View this post on Instagram

     

    A post shared by kiara ♡ (@aryankhanforever)

    ಆರ್ಯನ್ ಖಾನ್ ಹಾಗೂ ಗೌರಿ ಖಾನ್ ಏಪ್ರಿಲ್‍ನಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ತಾಯಿ-ಮಗ ವಿದೇಶಕ್ಕೆ ಹಾರಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದರು. ಆದರೆ ಗೌರಿ ಖಾನ್ ಮಗನ ಪದವಿ ಪ್ರಧಾನ ಕಾರ್ಯಕ್ರಮಕ್ಕೆ ತೆರಳಿದ್ದರು. ಶಾರೂಖ್ ಪುತ್ರಿ ಸುಹಾನಖಾನ್ ಕೂಡ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

  • ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಎಕ್ಸಾಂ ಘೋಷಿಸಿದ ಮಧ್ಯಪ್ರದೇಶ

    ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಎಕ್ಸಾಂ ಘೋಷಿಸಿದ ಮಧ್ಯಪ್ರದೇಶ

    ಭೋಪಾಲ್: ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿಗಳನ್ನು ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓಪನ್ ಬುಕ್(ತೆರೆದ ಪುಸ್ತಕ)ಪರೀಕ್ಷೆ ನೀಡಲು ಮಧ್ಯ ಪ್ರದೇಶದ ಸರ್ಕಾರ ನಿರ್ಧರಿಸಿದೆ. ಈ ಮುನ್ನ ಸರ್ಕಾರ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ಓಪನ್ ಬುಕ್ ಎಕ್ಸಾಂ ಘೋಷಿಸಿತ್ತು.

    ಈ ಕುರಿತಂತೆ ಮಧ್ಯಪ್ರದೇಶದ ಶಿಕ್ಷಣ ಸಚಿವ ಮೋಹನ್ ಯಾದವ್, ಕಾಲೇಜು ಹಾಗೂ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ದೈಹಿಕ ಪರೀಕ್ಷೆಗಳು ಇರುವುದಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮೊದಲ ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದಂತೆಯೇ, ಯುಜಿ ಹಾಗೂ ಪಿಜಿ ಅಂತಿಮ ವರ್ಷದ ವಿದ್ಯಾರ್ಥಿಗಳು ಓಪನ್ ಬುಕ್ ಪರೀಕ್ಷೆಗಳು ನಡೆಸಲಾಗುತ್ತದೆ. ಆದರೆ ಕಾಲೇಜಿನಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ. ಜುಲೈ ಹೊತ್ತಿಗೆ ಎಲ್ಲ ಸಹಜ ಸ್ಥಿತಿಗೆ ಬರುತ್ತದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.

    ಮಧ್ಯ ಪ್ರದೇಶದ ಶಾಲಾ ಶಿಕ್ಷಣ ಇಲಾಖೆ ಈಗಾಗಲೇ 9 ಮತ್ತು 11ನೇ ತರಗತಿಯ ಅಂತಿಮ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

  • ಆಟೋ ಹತ್ತಿದ ಪದವಿ ವಿದ್ಯಾರ್ಥಿನಿ- ಪೊದೆಯತ್ತ ಎಳೆದು ಚಾಲಕ ರೇಪ್!

    ಆಟೋ ಹತ್ತಿದ ಪದವಿ ವಿದ್ಯಾರ್ಥಿನಿ- ಪೊದೆಯತ್ತ ಎಳೆದು ಚಾಲಕ ರೇಪ್!

    ಹೈದರಾಬಾದ್: ಪದವಿ ವಿದ್ಯಾರ್ಥಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಹೈದರಾಬಾದ್‍ನ ಘಟ್ಕಸರ್ ನಲ್ಲಿ ಬುಧವಾರ ನಡೆದಿದೆ.

    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ವಾಪಸ್ಸಾಗುತ್ತಿದ್ದಳು. ಈ ಸಂದರ್ಭದಲ್ಲಿ ಮನೆಗೆ ತೆರಳಲೆಂದು ಆಕೆ ಆಟೋ ಹತ್ತಿದ್ದಾಳೆ. ಆದರೆ ಚಾಲನ ಇದೇ ಸಮಯದಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿ ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲದೆ ಪೊದೆಯ ಬಳಿ ಆಕೆಯನ್ನು ಎಳೆದುಕೊಂಡು ಹೋಗಿ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ.

    ಅತ್ಯಾಚಾರ ಎಸಗಿದ ಬಳಿಕ ಚಾಲಕ ತನ್ನ ಆಟೋದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ವಿದ್ಯಾರ್ಥಿನಿ ರಸ್ತೆ ಬದಿ ಬಂದು ಸಹಾಯಕ್ಕಾಗಿ ಅಂಗಲಾಚಿದ್ದಾಳೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕುಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಘಟನೆ ಸಂಬಂಧ ಘಟ್ಕಸರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗಳೂರು: ಪದವಿ ಪೂರ್ಣಗೊಳಿಸಲು ಸಾಧ್ಯವಾಗದೆ ಸಮಸ್ಯೆ ಎದುರಿಸಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಮತ್ತೊಮ್ಮೆ ಪರೀಕ್ಷೆ ಬರೆಯಲು ಒಂದು ಸುವರ್ಣ ಅವಕಾಶ ನೀಡಲು ಚಿಂತನೆ ನಡೆಸಿದೆ. ವಿವಿಯ ಹಳೆಯ ವಿದ್ಯಾರ್ಥಿಗಳಿಗೆ ಪದವಿ ಪಡೆದುಕೊಳ್ಳಲು ಅವಕಾಶವನ್ನು ಮಾಡಿಕೊಡಲಿದೆ.

    ಹಳೆಯ ವಿದ್ಯಾರ್ಥಿಗಳು ಪಾಸ್ ಆಗದ ವಿಷಯಗಳನ್ನು ಮತ್ತೆ ಪರೀಕ್ಷೆ ಬರೆದು ಪಾಸ್ ಮಾಡಿಕೊಳ್ಳುವ ಸುವರ್ಣ ಅವಕಾಶವನ್ನು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಲಿದೆ ಎಂಬ ಮಾಹಿತಿ ಲಭಿಸಿದೆ.

    2004ರಿಂದ 2019ರವರೆಗೆ ಇಂಜಿನಿಯರಿಂಗ್ ಒಳಗೊಂಡಂತೆ ಎಲ್ಲಾ ಪದವಿ ಕೋರ್ಸ್‌ಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬಹುದಾಗಿದೆ. ಇಂತಹ ಸಾವಿರಾರು ವಿದ್ಯಾರ್ಥಿಗಳ ಪೈಕಿ ಕೆಲವರು ಮತ್ತೊಮ್ಮೆ ಅವಕಾಶ ನೀಡುವಂತೆ ಬೆಂ.ವಿ.ವಿ.ಗೆ ಪತ್ರ ಬರೆದು ಮನವಿ ಮಾಡಿದ್ದರು. ಒಂದಾದ ಮೇಲೆ ಒಂದರಂತೆ ಸಾಕಷ್ಟು ಮನವಿ ಪತ್ರಗಳು ವಿವಿಗೆ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

    ಅದಷ್ಟು ಬೇಗ ಪ್ರಕಟಣೆ ಹೊರಡಿಸಿ 2004 ರಿಂದ 2019 ರ ನಡುವೆ ವ್ಯಾಸಂಗ ಮಾಡಿ ಪದವಿ ಪಡೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಅವಕಾಶ ಮಾಡಿಕೊಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. ಅನುತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಆಶಾಕಿರಣ ಮತ್ತೊಮ್ಮೆ ಮೂಡಿದೆ.

  • ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹ

    ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹ

    ಬೆಳಗಾವಿ: ಸರ್ಕಾರಿ ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುವಂತೆ ಒತ್ತಾಯಿಸಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.

    ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್‍ಟಾಪ್ ನೀಡುತ್ತಿದೆ. ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಉನ್ನತ ಶಿಕ್ಷಣ ನಿರ್ದೇಶಕ ಮತ್ತು ಕಾಲೇಜಿನ ಪ್ರಾಚಾರ್ಯರರು ಕೇವಲ ಪ್ರಥಮ ವರ್ಷ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿದ್ದಾರೆ. ಎಲ್ಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡಬೇಕೆಂದು ಆಗ್ರಹಿಸಿದರು.

    ಕಿರಣ ದುಶಾಂದಾರ, ಕಿಶೋರಿ ಪಾಟೀಲ, ಸಂದ್ಯಾ ಹೆಗಡೆ, ರಾಕೇಶ ಬಲಭೀಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಹಣ ಕೊಟ್ಟು ಡಾಕ್ಟರೇಟ್ ಪಡೆದ ರೌಡಿಶೀಟರ್ ಯಶಸ್ವಿನಿ ಗೌಡ?

    ಹಣ ಕೊಟ್ಟು ಡಾಕ್ಟರೇಟ್ ಪಡೆದ ರೌಡಿಶೀಟರ್ ಯಶಸ್ವಿನಿ ಗೌಡ?

    ಬೆಂಗಳೂರು: ಶಿಕ್ಷಣ ಪಡೆದು ಡಾಕ್ಟರೇಟ್ ಪದವಿ ಪಡೆಯುವುದು ನೋಡಿದ್ದೇವೆ, ಆದರೆ ಹಣ ಕೊಟ್ಟರೆ ರೌಡಿ ಶೀಟರ್ ಗೂ ಡಾಕ್ಟರ್ ನೀಡುವ ದಂಧೆ ನಗರದಲ್ಲಿ ನಡೆಯುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ರೌಡಿಶೀಟರ್ ಹೊಂದಿರುವ ಯಶಸ್ವಿನಿ ಗೌಡ ಅವರ ಸಾಮಾಜಿಕ ಸೇವೆ ಮೆಚ್ಚಿ ವಿಶ್ವವಿದ್ಯಾಲಯವೊಂದು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

    ಅಮೆರಿಕ ಮೂಲದ `ಇಂಟರ್‍ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ’ ಮೂಲಕ ಯಶಸ್ವಿನಿ ಗೌಡ ಡಾಕ್ಟರೇಟ್ ಪಡೆದಿದ್ದಾರೆ. ಯಶಸ್ವಿನಿ ಗೌಡ ಅವರ ಸಾಮಾಜಿಕ ಸೇವೆ ಮೆಚ್ಚಿ ಡಾಕ್ಟರೇಟ್ ನೀಡಿದ್ದಾಗಿ ಯೂನಿವರ್ಸಿಟಿ ತಿಳಿಸಿದೆ. ಆದರೆ ಇಂಟರ್‍ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿಗೆ ದುಡ್ಡು ಕೊಟ್ಟು ಡಾಕ್ಟರೇಟ್ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

    ಬೆಂಗಳೂರಲ್ಲಿ ಡಾಕ್ಟರೇಟ್ ಕೊಡಿಸಲು ಗ್ಯಾಂಗ್ ಒಂದು ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದ್ದು, ಒಂದು ಡಾಕ್ಟರೇಟ್ ಪದವಿ ನೀಡಲು 75 ಸಾವಿರ ರೂ. ನಿಂದ 1.50 ಲಕ್ಷದವರೆಗೂ ವಸೂಲಿ ಮಾಡುತ್ತಾರೆ. ಹೆಚ್ಚು ಸುದ್ದಿಯಾಗುವ ಜನರನ್ನೇ ಟಾರ್ಗೆಟ್ ಮಾಡುವ ಈ ‘ಡಾಕ್ಟರೇಟ್ ಗ್ಯಾಂಗ್’, ಅರ್ಜಿ ಕೊಟ್ಟು ನಿಮ್ಮ ಅವರ ಮಾಹಿತಿ ಪಡೆದುಕೊಂಡು ಡಾಕ್ಟರೇಟ್ ಕೊಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆಯಂತೆ.

    ಭಾರತದಲ್ಲಿ ಈ ಹಿಂದೆ ಇಂತಹ ಅಕ್ರಮದಲ್ಲಿ ತೊಡಗಿದ್ದ ಕೆಲ ಯೂನಿವರ್ಸಿಟಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಕಡಿವಾಣ ಹಾಕಿತ್ತು. ಆದರೆ ವಿದೇಶಿ ವಿಶ್ವವಿದ್ಯಾಲಯಗಳಿಂದ ಸದ್ಯ ಡಾಕ್ಟರೇಟ್ ಪಡೆದುಕೊಳ್ಳುತ್ತಿರುವ ದಂಧೆಗೆ ಸರ್ಕಾರ ಕಡಿವಾಣ ಹಾಕುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವೈದೇಹಿ ಮೆಡಿಕಲ್ ಕಾಲೇಜಿನಲ್ಲಿ ಪಾಠ ಮಾಡುತ್ತೆ ರೋಬೋ!

    ವೈದೇಹಿ ಮೆಡಿಕಲ್ ಕಾಲೇಜಿನಲ್ಲಿ ಪಾಠ ಮಾಡುತ್ತೆ ರೋಬೋ!

    ಬೆಂಗಳೂರು: ಭಾರತದ ಅಗ್ರಗಣ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ `ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ 2018ರಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದ್ದು, ರೋಬೋ ಮೂಲಕ ಬೋಧನೆ ಮಾಡುವ ನವೀನ ತಂತ್ರಜ್ಞಾನವನ್ನು ಅಳವಡಿಸಲು ಮುಂದಾಗಿದೆ.

    ರೋಬೋ ಬೋಧನೆ ಮಾಡಲು `ಪೆಪ್ಪರ್’ ಎನ್ನುವ ರೋಬೋವನ್ನು ಬಳಕೆ ಮಾಡುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗೆಳೆಯ, ಒಡನಾಡಿ ಮತ್ತು ಮಾರ್ಗದರ್ಶಕನಂತೆ ಕೆಲಸ ಮಾಡಲಿದೆ.

    ಹೊಸ ತಂತ್ರಜ್ಞಾನ ಮೂಲಕ ಬೋಧನೆ ಮಾಡುವ ಮೂಲಕ ಶೈಕ್ಷಣಿಕ ವರ್ಷದಲ್ಲಿ, ವಿದ್ಯಾರ್ಥಿಗಳ ಅಗತ್ಯಗಳಿಗೆ ತಕ್ಕಂತೆ ರೋಬೋದ ಪ್ರೋಗ್ರಾಮಿಂಗ್ ತಯಾರಿಸಿಸಲಾಗುತ್ತದೆ. ಅಲ್ಲದೇ ಕಲಿಕಾ ಕೊಠಡಿಗಳ ಸ್ಥಿತಿಗತಿಗಳು, ಗುಣಮಟ್ಟ ಇತ್ಯಾದಿಗಳನ್ನು ಅಳೆಯಲು ಗೇಮಿಂಗ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ದೂರಸಂವೇದಿ ತಂತ್ರಜ್ಞಾನವನ್ನು ಆಧರಿಸಿದ ರೇಡಿಯೋ ಫ್ರೀಕ್ವೆನ್ಸಿ ಕುರಿತ ಸಂಶೋಧನೆಗಳನ್ನು ಕೂಡ ಆರಂಭಿಸಲಾಗುತ್ತಿದೆ. ಗುಣಮಟ್ಟದಿಂದ ಕೂಡಿದ ಮತ್ತು ಡಿಜಿಟಲ್ ರೂಪದ ಶಿಕ್ಷಣವನ್ನು ಸಾಕಾರಗೊಳಿಸುವುದಕ್ಕಾಗಿ ಭವಿಷ್ಯದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತದೆ.

    ಭವಿಷ್ಯದ ಕಲಿಕೆಯ ದೂರದರ್ಶಿತ್ವ ಮತ್ತು ವಿಶ್ವ ಮಟ್ಟದ ಆರೋಗ್ಯ ಚಿಕಿತ್ಸಾ ವ್ಯವಸ್ಥೆಯನ್ನು ಹೊಂದಿರುವುದು ನಮ್ಮ ಈ ಸಂಸ್ಥೆಯ ವೈಶಿಷ್ಟ್ಯ. ಸಂಸ್ಥೆಯು 65 ಎಕರೆ ವಿಸ್ತಾರವಾದ ಕ್ಯಾಂಪಸ್ ಹೊಂದಿದ್ದು, ವಿಶ್ವ ದರ್ಜೆಯ ಬೋಧನ ಸೌಲಭ್ಯಗಳನ್ನು ಹೊಂದಿದೆ. ಅಲ್ಲದೇ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಬೇಕಾದ ವಸತಿ ವ್ಯವಸ್ಥೆ, ನುರಿತ ಉಪನ್ಯಾಸಕ ವೃಂದ ಮತ್ತು ಸಂಪೂರ್ಣ ಅನುಕೂಲವುಳ್ಳ 1,600 ಹಾಸಿಗೆಗಳ ಸಾಮಥ್ರ್ಯದ ಸುಸಜ್ಜಿತ ಆಸ್ಪತ್ರೆಯನ್ನು ಈ ಕ್ಯಾಂಪಸ್ ಹೊಂದಿದೆ.

    2016ರಲ್ಲಿಯೇ ವಿದ್ಯಾರ್ಥಿಗಳಿಗೆ 3ಡಿ ದೃಶ್ಯಾವಳಿಗಳೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಕಲಿಯುವ ಸೌಲಭ್ಯವನ್ನು ಒದಗಿಸುವ `ಇಮ್ಮರ್ಸೀವ್ ತಂತ್ರಜ್ಞಾನ’ವನ್ನು ಸಂಸ್ಥೆಯಲ್ಲಿ ಅಳವಡಿಸಿಕೊಂಡಿದೆ. ಈ ವಿಶಿಷ್ಟ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಜಗತ್ತಿನ ಮೊಟ್ಟಮೊದಲ ವೈದ್ಯಕೀಯ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆಗೆಯನ್ನು ಪಡೆದುಕೊಂಡಿದೆ. ಹೊಸ ತಂತ್ರಜ್ಞಾನದ ಅಳವಡಿಕೆಯಿಂದ ಯಾವುದೇ ಒಂದು ವಿಷಯದ ಬಗ್ಗೆ ಆಳವಾದ ಗ್ರಹಿಕೆ ಮತ್ತು ಅನುಸಂಧಾನ ಸಾಧ್ಯವಾಗುತ್ತದೆ. ಇದರ ಜೊತೆಗೆ, ವಿದ್ಯಾರ್ಥಿಗಳು ದೀರ್ಘಕಾಲ ಒಂದು ವಿಚಾರದ ಮೇಲೆ ತಮ್ಮ ಮನಸ್ಸನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ.

    ಸಂಸ್ಥೆಯಲ್ಲಿ ಸುಸಜ್ಜಿತವಾದ `ಸಂಶೋಧನಾ ಮ್ಯೂಸಿಯಂ’ (ಡಿಸ್ಕವರಿ ಮ್ಯೂಸಿಯಂ) ಅನ್ನು 50,000 ಚದರ ಅಡಿಗಳಷ್ಟು ವಿಸ್ತಾರವಾದ ಜಾಗದಲ್ಲಿ ನೂರಾರು ಬಗೆಯ ವೈದ್ಯಕೀಯ ಮಾದರಿಗಳೊಂದಿಗೆ ನಿರ್ಮಿಸಲಾಗಿದೆ. ವೈದೇಹಿ ಆಸ್ಪತ್ರೆಯು ಸ್ಥಾಪನೆ ಬಳಿಕ ಇಲ್ಲಿವರೆಗೂ 60 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಮೂಲಕ, ನಮ್ಮ ಸಂಸ್ಥೆಯು ಆರೋಗ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ಮಹಾನಗರದ ಬಹುದೊಡ್ಡ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವುದು ವಿಶೇಷ.

    ಸಂಸ್ಥೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ, 300 ಹಾಸಿಗೆಗಳ ಸಾಮರ್ಥ್ಯದ ಕ್ಯಾನ್ಸರ್ ಕೇಂದ್ರ (ವೈದೇಹಿ ಆಂಕಾಲಜಿ ಇನ್ಸ್ಟಿಟ್ಯೂಟ್ ಅಂಡ್ ಸೆಂಟರ್ ಆಫ್ ಎಕ್ಸಲೆನ್ಸ್) 14 ಬಗೆಯ ಪದವಿ ಕೋರ್ಸುಗಳು, 6 ಬಗೆಯ ಸ್ನಾತಕೋತ್ತರ ಪದವಿಗಳು ಮತ್ತು 19 ಬಗೆಯ ಸೂಪರ್ ಸ್ಪೆಷಾಲಿಟಿ ಕೋರ್ಸುಗಳನ್ನು ಹೊಂದಿದೆ. ಇಲ್ಲಿ ಜಗತ್ತಿನ 12 ರಾಷ್ಟ್ರಗಳಿಗೆ ಸೇರಿದ ವಿದ್ಯಾರ್ಥಿಗಳು ಓದುತ್ತಿದ್ದಾರೆ.

    ಕಳೆದ 8 ವರ್ಷಗಳಲ್ಲಿ ಸಂಸ್ಥೆಯಲ್ಲಿ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಪದವೀಧರರಾಗಿದ್ದು, ಇವರಲ್ಲಿ 405 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಅಂತರರಾಷ್ಟ್ರೀಯ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಬೇಕೆನ್ನುವುದೇ `ವೈದೇಹಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ’ಯ ಗುರಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಎಸ್‍ಒಯುಗೆ ಮತ್ತೆ ಸಿಕ್ಕಿತು ಯುಜಿಸಿ ಮಾನ್ಯತೆ – 17 ಕೋರ್ಸ್ ಗಳ ಆರಂಭಕ್ಕೆ ಒಪ್ಪಿಗೆ

    ಕೆಎಸ್‍ಒಯುಗೆ ಮತ್ತೆ ಸಿಕ್ಕಿತು ಯುಜಿಸಿ ಮಾನ್ಯತೆ – 17 ಕೋರ್ಸ್ ಗಳ ಆರಂಭಕ್ಕೆ ಒಪ್ಪಿಗೆ

    ಮೈಸೂರು: ಯುಜಿಸಿ ಮಾನ್ಯತೆ ನವೀಕರಣದ ಸಮಸ್ಯೆ ಎದುರಿಸುತ್ತಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಕೊನೆಗೂ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ದೂರ ಶಿಕ್ಷಣದಡಿ ಕೋರ್ಸ್‍ಗಳನ್ನು ನಡೆಸಲು ಅನುಮತಿ ನೀಡಿದೆ.

    ಯುಜಿಸಿಯಿಂದ ಮುಕ್ತ ವಿವಿಗೆ 2018-19ನೇ ಸಾಲಿನಿಂದ 2022-23ನೇ ಸಾಲಿನವರೆಗೆ ದೂರ ಶಿಕ್ಷಣದಡಿ ಒಟ್ಟು ಆಯ್ದ 17 ಕೋರ್ಸ್ ನಡೆಸಲು ಅನುಮತಿ ನೀಡಲಾಗಿದೆ. ಕಳೆದ ಐದು ವರ್ಷಗಳಿಂದ ಯುಜಿಸಿ ದೂರ ಶಿಕ್ಷಣ ಕೋರ್ಸ್‍ಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ಮುಕ್ತಿ ವಿವಿಯಲ್ಲಿ ಸರ್ಟಿಫಿಕಟ್ ಪಡೆದ ವಿದ್ಯಾರ್ಥಿಗಳ ಭವಿಷ್ಯ ಅಂತಂತ್ರವಾಗಿತ್ತು. ಆದ್ರೆ 5 ವರ್ಷಕ್ಕೆ ಯುಜಿಸಿ ಹೊಸ ಮಾನ್ಯತೆ ಘೋಷಿಸಿದೆ.

     

    ಮುಕ್ತ ವಿವಿಯ ದೂರ ಶಿಕ್ಷಣಕ್ಕೆ ಅನುಮತಿ ರದ್ದುಗೊಂಡಿದ್ದರಿಂದ ಸಾವಿರಾರು ಆಕಾಂಕ್ಷಿಗಳು ಗೊಂದಲಕ್ಕೆ ಈಡಾಗಿದ್ದರು. ಜತೆಗೆ ವಿವಿಧ ಕೋರ್ಸ್‍ಗಳಲ್ಲಿ ಈಗಾಗಲೇ ನೋಂದಾಯಿಸಿ ಪರೀಕ್ಷೆ ಬರೆದಿದ್ದವರು ಕೂಡ ಆತಂಕಕ್ಕೆ ಒಳಗಾಗಿದ್ದರು. ಕೊನೆಗೂ ಯುಜಿಸಿ ಮಾನ್ಯತೆ ನೀಡಿದ್ದರಿಂದ ಕೋರ್ಸ್ ಆಕಾಂಕ್ಷಿಗಳಿಗೆ ಪ್ರಯೋಜನವಾಗಲಿದೆ. ಬಿಎ, ಬಿಕಾಂ,ಲೈಬ್ರರಿ ಸೈನ್ಸ್. ಎಂ.ಎ ಹಿಸ್ಟರಿ, ಒಂ-ಅರ್ಥಶಾಸ್ತ್ರ, ಹಿಂದಿ, ಇಂಗ್ಲಿಷ್, ಪತ್ರಿಕೋದ್ಯಮ, ಕನ್ನಡ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಉರ್ದು, ಪರಿಸರ ಅಧ್ಯಾಯನ, ಎಂಕಾಂ. ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ವಿಷಯಗಳಿಗೆ ಮಾನ್ಯತೆ ಸಿಕ್ಕಿದ್ದು, ಉಳಿದ ಯಾವುದೇ ವಿಷಯದ ಕೋರ್ಸ್ ಪ್ರಾರಂಭ ಮಾಡುವಂತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಎಂಬಿಬಿಎಸ್ ನಲ್ಲಿ 15 ಚಿನ್ನದ ಪದಕ ಗೆದ್ದ ಕನ್ನಡ ಕುವರಿ

    ಎಂಬಿಬಿಎಸ್ ನಲ್ಲಿ 15 ಚಿನ್ನದ ಪದಕ ಗೆದ್ದ ಕನ್ನಡ ಕುವರಿ

    ಧಾರವಾಡ: ಕನ್ನಡ ಮಾಧ್ಯಮದಲ್ಲಿ ಎಸ್‍ಎಸ್‍ಎಲ್‍ಸಿ ವರೆಗೂ ಶಿಕ್ಷಣ ಪಡೆದು ನಂತರ ಎಂಬಿಬಿಎಸ್ ಪದವಿಯಲ್ಲಿ 15 ಚಿನ್ನದ ಪದಕ ಪಡೆಯುವ ಮೂಲಕ ಧಾರವಾಡ ಯುವತಿಯೊಬ್ಬರು ಮಾದರಿಯಾಗಿದ್ದಾರೆ.

    ಹೌದು, ಧಾರವಾಡದ ಎಸ್‍ಡಿಎಂ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿನಿ ಅರ್ಪಿತಾ ಜೆ ಎಸ್ ಅವರೇ ಎಂಬಿಬಿಎಸ್ ಪದವಿಯಲ್ಲಿ 15 ಚಿನ್ನದ ಪದಕ ಪಡೆದು ಚಿನ್ನದ ಬೆಡಗಿಯಾಗಿ ಹೊರ ಹೊಮ್ಮಿದ್ದಾರೆ.

    ಇಂದು ನಗರದ ಹೆಗಡೆ ಕಲಾಕ್ಷೇತ್ರದಲ್ಲಿ ನಡೆದ ಎಸ್‍ಡಿಎಂ ವೈದ್ಯಕೀಯ ಮಹಾವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅವರು ಅರ್ಪಿತಾಗೆ ಚಿನ್ನದ ಪದಕ ನೀಡಿ ಗೌರವಿಸಿದರು. ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನವರಾದ ಅರ್ಪಿತಾ ಅವರು ಸರ್ಕಾರಿ ಶಾಲೆ ಶಿಕ್ಷಕರಾದ ಜಯಶೀಲರೆಡ್ಡಿ ಹಾಗೂ ಶಾಂತಕುಮಾರಿ ದಂಪತಿಗಳ ಪುತ್ರಿ. ಎಸ್‍ಎಸ್‍ಎಲ್‍ಸಿ ವರೆಗೂ ಕನ್ನಡದ ಶಾಲೆಯಲ್ಲೇ ವಿದ್ಯಾಭ್ಯಾಸ ನಡೆಸಿದ್ದಾರೆ.

    ಇನ್ನು ಕಾರ್ಯಕ್ರಮದಲ್ಲಿ ಚಿನ್ನದ ಪದಕ ವಿತರಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರು, ಮಾತನಾಡಿ ಅರ್ಪಿತಾ ಅವರ ಸಾಧನೆಗೆ ಶುಭಾಶಯ ಕೋರಿದರು. ಅಲ್ಲದೇ ಅರ್ಪಿತಾ 15 ಚಿನ್ನದ ಪದಕ ಪಡೆದಿದ್ದು, ಅವರಿಗೆ ಮದುವೆ ಸಮಯದಲ್ಲಿ ಚಿನ್ನ ಖರೀದಿ ಮಾಡುವ ಅವಶ್ಯಕತೆವಿಲ್ಲ ಎಂದು ಹಾಸ್ಯ ಚಟಾಕಿ ಹರಿಸಿದರು.

    ಕಾರ್ಯಕ್ರಮದ ವೇಳೆ ಚಿನ್ನದ ಪದಕ ಸ್ವೀಕರಿಸಿ ಮಾತನಾಡಿದ ಅರ್ಪಿತಾ ಅವರು, ತಮ್ಮ ಸಾಧನೆಗೆ ತಂದೆ ತಾಯಿಯ ಆಶೀರ್ವಾದ ಕಾರಣ ಎಂದು ತಿಳಿಸಿದ್ದಾರೆ. ಮಗಳ ಸಾಧನೆ ಕಂಡ ಅರ್ಪಿತಾ ತಂದೆ ಜಯಶೀಲರೆಡ್ಡಿ ಅವರು ನಾನು ಮಾಡಿದ ಆಸ್ತಿಯೇ ಮಕ್ಕಳು ಎಂದು ಮಗಳ ಸಾಧನೆಯನ್ನ ಹೊಗಳಿದರು.