Tag: ಪದ್ಮಶ್ರೀ ಪುರಸ್ಕೃತೆ

  • ಸಿನಿಮಾ ಭರಾಟೆಲಿ ತೊಗಲು ಬೊಂಬೆ ಕಲೆ ನಶಿಸಿ ಹೋಗುತ್ತಿದೆ: ಪದ್ಮಶ್ರೀ ವಿಜೇತೆ ಭೀಮವ್ವ

    ಸಿನಿಮಾ ಭರಾಟೆಲಿ ತೊಗಲು ಬೊಂಬೆ ಕಲೆ ನಶಿಸಿ ಹೋಗುತ್ತಿದೆ: ಪದ್ಮಶ್ರೀ ವಿಜೇತೆ ಭೀಮವ್ವ

    – ಈ ವಯಸ್ಸಿನಲ್ಲಿ ಕಲೆ ಗುರುತಿಸಿ ಪುರಸ್ಕಾರ ಮಾಡಿದ ಮೋದಿ ಸರ್ಕಾರಕ್ಕೆ ಧನ್ಯವಾದ

    ಹುಬ್ಬಳ್ಳಿ: ಸಿನಿಮಾ ಭರಾಟೆಯಲ್ಲಿ ತೊಗಲು ಬೊಂಬೆ ಕಲೆಯು ನಶಿಸಿ ಹೋಗುತ್ತಿದೆ. ಆದರೆ ಈ ಕಲೆ ಉಳಿಯಬೇಕು ಎಂದು ಪದ್ಮಶ್ರೀ ಪ್ರಶಸ್ತಿ ವಿಜೇತೆ ಭೀಮವ್ವ (Bhimavva) ಹೇಳಿದರು.

    ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಜನಾಂಗಕ್ಕೆ, ಮಕ್ಕಳಿಗೆ, ಮೊಮ್ಮಕ್ಕಳಿಗೆ ಈ ತೊಗಲು ಗೊಂಬೆ (Togalu Gombe) ಕಲೆಯನ್ನು ಕಲಿಸುತ್ತೇನೆ. ಈ ವಯಸ್ಸಿನಲ್ಲಿ ಕಲೆ ಗುರುತಿಸಿ ಪುರಸ್ಕಾರ ಮಾಡಿದ ಮೋದಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಬಹಳಷ್ಟು ಸಂತೋಷವಾಗಿದೆ. ದೇಶ, ವಿದೇಶದಲ್ಲಿ ಕಲೆ ಪ್ರದರ್ಶನ ಮಾಡಿದ್ದೇನೆ. ಇನ್ನೂ ಮುಂದೆ ಕಲೆ ಉಳಿಸುವ ಕಾರ್ಯ ಮಾಡುವೆ ಎಂದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

    ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ (Padma Shri award) ಪಡೆದಿರುವ ಕೊಪ್ಪಳ ಜಿಲ್ಲೆಯ ಭೀಮವ್ವ ಅವರು ದೆಹಲಿಯಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದರು. ಬಳಿಕ ಹುಬ್ಬಳ್ಳಿಯಿಂದ ಕುಟುಂಬಸ್ಥರ ಜೊತೆಗೆ ಸ್ವಗ್ರಾಮಕ್ಕೆ ತೆರಳಿದರು.

  • ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಬೆಳೆಸಿದ್ದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

    ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಬೆಳೆಸಿದ್ದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

    ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ (Tulasi Gowda) ಅವರು ಇಂದು ಸಂಜೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

    ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದಾರೆ. ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಮೊಮ್ಮಕ್ಕಳೊಂದಿಗೆ ನೀರಿನಲ್ಲಿ ನಿಂತು ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ

    ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳಸುತ್ತಿದ್ದರು. ಈವರೆಗೆ ಲಕ್ಷಾಂತರ ಗಿಡಗಳನ್ನು ಬೆಳಸಿ ಪಾಲನೆ ಮಾಡಿದ ಕೀರ್ತಿ ಇವರದ್ದು. ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಇಲಾಖೆಯಿಂದ ಹೇಳದಿದ್ದರೂ ಸಂಬಳ ಬಯಸದೇ ಸೇವೆ ರೂಪದಲ್ಲಿ ಅರಣ್ಯ ಬೆಳಸುವ ಕಾಯಕಕ್ಕೆ ಕೈಹಾಕಿದರು. ಇದಲ್ಲದೇ ಅರಣ್ಯದಲ್ಲಿ ಅಳವಿನಂಚಿನಲ್ಲಿ ಇರುವ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದರು.

    ಹಾಲಕ್ಕಿ ಜನಾಂಗದಲ್ಲಿ ಹುಟ್ಟಿದ ಇವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಸಿರು ಬೆಳಸುವ ಕಾಯಕ ಮಾಡುತ್ತಾ ಸಾಗಿದರು. ಅಳವಿನಂಚಿನ ಸಸ್ಯಗಳನ್ನು ಬೆಳಸಿದ ಕೀರ್ತಿ ಇವರದ್ದು. ‘ಪಬ್ಲಿಕ್ ಟಿವಿ’ಯ ಪಬ್ಲಿಕ್ ಹೀರೋ ಆಗಿದ್ದ ಇವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಸಹ 2021 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ನಾಳೆ ಹಾಲಕ್ಕಿ ಜನಾಂಗದ ವಿಧಿವಿಧಾನಗಳ ಮೂಲಕ ಹೊನ್ನಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ: ನಡೆದಾಡುವ ಅರಣ್ಯ ವಿಶ್ವಕೋಶ ತುಳಸಿ ಗೌಡರಿಗೆ ಪದ್ಮಶ್ರೀ ಗೌರವ

  • ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ನಿಧನ- ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ

    ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ನಿಧನ- ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ

    ಭುವನೇಶ್ವರ್: ಸಮಾಜ ಸೇವಕಿ ಹಾಗೂ ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ (88) ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

    ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಂತಿದೇವಿ ಪ್ರಜ್ಞಾಹೀನರಾಗಿದ್ದರು. ಕುಟುಂಬಸ್ಥರು ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಾಂತಾದೇವಿ ಆಗಿನ ಅವಿಭಜಿತ ಕೊರಾಪುಟ್ ಜಿಲ್ಲೆಯ ಬುಡಕಟ್ಟು ಜನಾಂಗದ ಮಹಿಳೆಯರ ಉನ್ನತಿಗಾಗಿ ಹೋರಾಡಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.

    ಬುಡಕಟ್ಟು ಮಕ್ಕಳಿಗಾಗಿ ರಾಯಗಡ ಜಿಲ್ಲೆಯ (ಅವಿಭಜಿತ ಕೊರಾಪುಟ್ ಜಿಲ್ಲೆ) ಸಂಖಲ್ಪದರ್ ಗ್ರಾಮದಲ್ಲಿ ಆಶ್ರಮವನ್ನು ಸ್ಥಾಪಿಸಿ ಕುಷ್ಠ ರೋಗಿಗಳ ಸೇವೆಯನ್ನು ಮಾಡಿದ್ದರು. ಅಷ್ಟೇ ಅಲ್ಲದೇ ಅನಾಥರು, ನಿರ್ಗತಿಕರು ಮತ್ತು ಬಡ ಮಕ್ಕಳ ಪುನರ್ವಸತಿಗಾಗಿ ಅವರು 1964ರಲ್ಲಿ ರಾಯಗಡ ಜಿಲ್ಲೆಯ ಗುಣಪುರದಲ್ಲಿ ಸೇವಾ ಸಮಾಜ ಆಶ್ರಮವನ್ನು ಸ್ಥಾಪಿಸಿದರು. ಇದನ್ನೂ ಓದಿ:  ಪಾಕ್ ಪ್ರಧಾನಿ ಅಂತರಾಷ್ಟ್ರೀಯ ಭಿಕ್ಷುಕ: ಸಿರಾಜುಲ್ ಹಕ್

    ಶಾಂತಿದೇವಿಯು ಗುಣಪುರ್ ಮತ್ತು ರಾಯಗಡದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾದ ಮೂರು ಅನಾಥಾಶ್ರಮಗಳನ್ನು ಸ್ಥಾಪಿಸಿದ್ದಾರೆ. ಬುಡಕಟ್ಟು ಬಾಲಕಿಯರಿಗಾಗಿ ಲಿಮಾಮೆಡಾದಲ್ಲಿ ಹಾಸ್ಟೆಲ್, ರಾಯಗಡ ಮತ್ತು ಗಜಪತಿಯಲ್ಲಿ ಬುಡಕಟ್ಟು ಮಕ್ಕಳಿಗಾಗಿ ಎಂಟು ಕಲ್ಯಾಣ ಕೇಂದ್ರಗಳನ್ನು ತೆರೆದಿದ್ದಾರೆ. ಒಡಿಶಾದ ಪ್ರಸಿದ್ಧ ಸಮಾಜ ಸೇವಕಿ, ಗಾಂಧಿವಾದಿ ಅನುಯಾಯಿಯಾದ ಶಾಂತಿದೇವಿ ಅವರಿಗೆ ಪದ್ಮಶ್ರೀ ಸೇರಿದಂತೆ ಜಮುನಾಲಾಲ್ ಬಜಾಜ್ ಪ್ರಶಸ್ತಿ ಮತ್ತು ರಾಧಾನತ್ ರಥ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು 

    ಶಾಂತಿದೇವಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಬಡವರ ಹಾಗೂ ಹಿಂದುಳಿದವರ ಧ್ವನಿಯಾಗಿದ್ದ ಶಾಂತಿ ದೇವಿ ಅವರು ನೆನಪಿನಲ್ಲಿರುತ್ತಾರೆ. ಅವರು ಹಿಂದುಳಿದವರ ಹಾಗೂ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರಲ್ಲದೇ, ನ್ಯಾಯಯುತ ಸಮಾಜಕ್ಕಾಗಿ ಹೋರಾಡಿದ್ದರು. ಅವರ ನಿಧನದಿಂದ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.