Tag: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ

  • ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ

    ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ

    ಪುಣೆ: ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ಹೃದಯಾಘಾತದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ.

    ಸಿಂಧೂತಾಯಿ ಸಪ್ಕಾಲ್(74) ಪುಣೆಯ ಗ್ಯಾಲಕ್ಸಿ ಕೇರ್ ಆಸ್ಪತ್ರೆಯಲ್ಲಿ ಮಂಗಳವಾರ 8.10ಕ್ಕೆ ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಮಂಗಳವಾರ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

    ಹಿನ್ನೆಲೆ: ಮಹಾರಾಷ್ಟ್ರದ ವಾರ್ಧಾದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಸಿಂಧೂತಾಯಿ, ಹುಟ್ಟಿನಿಂದಲೇ ತಾರತಮ್ಯಕ್ಕೆ ಒಳಗಾಗಿದ್ದರು. ಸಿಂಧೂತಾಯಿಯ ತಾಯಿ ಶಿಕ್ಷಣದಿಂದ ದೂರವಾಗಿದ್ದರು. ದನ ಮೇಯಿಸಲು ಹೊರಗೆ ಹೋಗುತ್ತಾಳೆ ಎನ್ನುವ ನೆಪದಲ್ಲಿ ಅವರ ತಾಯಿಗೆ ಯಾರಿಗೂ ತಿಳಿಯದಂತೆ ಶಾಲೆಗೆ ಕಳುಹಿಸುತ್ತಿದ್ದರು. ಇದನ್ನೂ ಓದಿ: ಆಸ್ತಿ ವಿವಾದಕ್ಕೆ 70ರ ತಂದೆಯ ಕತ್ತು ಸೀಳಿ ಹತ್ಯೆಗೈದ ಮಗ

    ಮಾಯಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಪ್ಕಾಲ್, ಪುಣೆಯಲ್ಲಿ ಸನ್ಮತಿ ಬಾಲ ನಿಕೇತನ ಸಂಸ್ಥೆ ಅನಾಥಾಶ್ರಮ ಹಾಗೂ ಪ್ರಭುನೆ ಪುನರುತ್ತನ್ ಸಮರಸತಾ ಗುರುಕುಲಂ ಎಂಬ ಎನ್‍ಜಿಒ ನಡೆಸುತ್ತಿದ್ದರು. ಎನ್‍ಜಿಒ ಪಾರ್ಧಿ ಸಮುದಾಯ ಮತ್ತು ಅವರ ಮಕ್ಕಳ ಉನ್ನತಿಗಾಗಿ ಕೆಲಸ ಮಾಡುತ್ತದೆ. ಅವರು ಪಾರ್ಧಿ ಮಕ್ಕಳಿಗಾಗಿ ಶಾಲೆ ಮತ್ತು ಹಾಸ್ಟೆಲ್ ಸಹ ನಡೆಸುತ್ತಿದ್ದಾರೆ.

    ಸಾಮಾಜಿಕ ಕಾರ್ಯ: ಸಪ್ಕಾಲ್ ತನ್ನ ಸುದೀರ್ಘ ವೃತ್ತಿಜೀವನದಲ್ಲಿ 1,000ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ದತ್ತು ಪಡೆದ್ದರು. ಸಾಮಾಜಿಕ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. 2010ರಲ್ಲಿ, ಮಹಾರಾಷ್ಟ್ರದಲ್ಲಿ ಮಿ ಸಿಂಧುತೈ ಸಪ್ಕಲ್ ಬೋಲ್ತೆ ಎಂಬ ಶೀರ್ಷಿಕೆಯ ಸಪ್ಕಾಲ್‍ನ ಮರಾಠಿ ಜೀವನಚರಿತ್ರೆ ಬಯೊಪಿಕ್ ಬಿಡುಗಡೆಯಾಗಿದೆ.

    ಮೋದಿ ಟ್ವೀಟ್: ಡಾ.ಸಿಂಧೂತಾಯಿ ಸಪ್ಕಲ್ ಅವರು ಸಮಾಜಕ್ಕೆ ಸಲ್ಲಿಸಿದ ಉದಾತ್ತ ಸೇವೆಗಾಗಿ ಸ್ಮರಣೀಯರು. ಅವರ ಪ್ರಯತ್ನದಿಂದಾಗಿ, ಅನೇಕ ಮಕ್ಕಳು ಉತ್ತಮ ಗುಣಮಟ್ಟದ ಜೀವನವನ್ನು ನಡೆಸಿದ್ದರೆ. ಅವರ ನಿಧನದ ಸುದ್ದಿಯಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡು ಸಂತಾಪವನ್ನು ಸೂಚಿಸಿದ್ದಾರೆ.

  • ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಪ್ರಸ್ಟಿ ನಿಧನ

    ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಪ್ರಸ್ಟಿ ನಿಧನ

    ಭುವನೇಶ್ವರ: ಒಡಿಶಾದ ಅಕ್ಷರ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಂದಾ ಪ್ರಸ್ಟಿ ಅವರು ಇಂದು ನಿಧನರಾಗಿದ್ದಾರೆ.

    ನಂದಾ ಪ್ರಸ್ಟಿ (102) ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಒಡಿಶಾದ ಜೈಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಸ್ಟಿ ಅವರು ಕಳೆದ ಒಂದು ತಿಂಗಳಿಂದಲೂ ಜ್ವರ, ಕೆಮ್ಮು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ  ಕೊರೊನಾ ಆತಂಕ- ಯಾದಗಿರಿಯಲ್ಲಿ ಸಿದ್ಧವಾಯ್ತಿ ಹೈಟೆಕ್ ಐಸಿಯು ವಾರ್ಡ್

    ನಂದಾ ಪ್ರಸ್ಟಿ ಹಲವು ದಶಕಗಳಿಂದಲೂ ಒಡಿಶಾದ ಜೈಪುರ ಜಿಲ್ಲೆಯಲ್ಲಿ ಅನೇಕ ಮಕ್ಕಳು ಮತ್ತು ದೊಡ್ಡವರಿಗೆ ಉಚಿತ ಶಿಕ್ಷಣ ನೀಡುತ್ತಿದ್ದರು. ಹಣಕಾಸಿನ ಸಮಸ್ಯೆಯಿಂದಾಗಿ ಏಳನೇ ತರಗತಿಗೇ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಇವರು ತಮ್ಮ ಹಳ್ಳಿಯಲ್ಲಿ ಅನಕ್ಷರತೆ ಹೋಗಲಾಡಿಸಲು ಪಣತೊಟ್ಟಿದ್ದರು. ಸ್ವಾತಂತ್ರ್ಯ ಬಂದಾಗಿನಿಂದಲೂ ಮುಕ್ತ ಮನಸಿನಿಂದ ಉಚಿತವಾಗಿ ಶಿಕ್ಷಣ ನೀಡುತ್ತಿದ್ದರು. ನಂದಾ ಮಾಸ್ಟರ್ ಎಂದೇ ಖ್ಯಾತರಾಗಿದ್ದ ಇವರು ಈ ಬಾರಿಯ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಕೈಯಿಂದ ಸ್ವೀಕರಿಸಿದ್ದರು. ರಾಮನಾಥ್ ಕೋವಿಂದ್ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿ ಪ್ರಶಸ್ತಿ ಸ್ವೀಕರಿಸಿದ್ದರು. ಇದನ್ನೂ ಓದಿ:  ಬೆಂಜ್ ಗುದ್ದಿದ ರಭಸಕ್ಕೆ 3 ವಾಹನಗಳು ಜಖಂ – 1 ಸಾವು, ಇಬ್ಬರು ಗಂಭೀರ

    ನಂದಾ ಪ್ರಸ್ಟಿ ಜಿಯವರ ನಿಧನದಿಂದ ನೋವಾಗಿದೆ. ಒಡಿಶಾದಲ್ಲಿ ಶಿಕ್ಷಣದ ಸಂತೋಷವನ್ನು ಹರಡಲು ಅವರು ಮಾಡಿದ ಪ್ರಯತ್ನಗಳಿಂದಾಗಿ ಹೆಚ್ಚು ಗೌರವಾನ್ವಿತ ನಂದಾ ಸರ್ ತಲೆಮಾರುಗಳವರೆಗೆ ನೆನಪಿನಲ್ಲಿ ಉಳಿಯುತ್ತಾರೆ. ಅವರು ಕೆಲವು ವಾರಗಳ ಹಿಂದೆ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರದ ಗಮನ ಮತ್ತು ಪ್ರೀತಿಯನ್ನು ಸೆಳೆದರು. ಓಂ ಶಾಂತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.