Tag: ಪನ್ನೀರ್ ಸೆಲ್ವಂ

  • ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

    ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

    ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮ್ಮ ಬಣಗಳ ವಿಲೀನ ಒಪ್ಪಂದದಂತೆ ನಿರ್ಣಯ ಅಂಗೀಕರಿಸಿದ್ದಾರೆ. ಇದರ ಜೊತೆ ಜಯಲಲಿತಾ ಅವರನ್ನ ಎಐಎಡಿಎಂಕೆಯ ಶಾಶ್ವತ ಮುಖ್ಯ ಕಾರ್ಯದರ್ಶಿಯಾಗಿ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಜಯಲಲಿತಾ ಸಾವಿನ ಬಳಿಕ ಸೃಷ್ಟಿಯಾಗಿದ್ದ ರಾಜಕೀಯ ಹೈಡ್ರಾಮಕ್ಕೆ ಸದ್ಯ ಫುಲ್‍ಸ್ಟಾಪ್ ಬಿದ್ದಿದೆ.

    ಈ ಹಿಂದೆ ಪನ್ನಿರ್ ಸೆಲ್ವಂ ಎಐಡಿಎಂಕೆ ಸೇರ್ಪಡೆಯಾಗುವ ಮೊದಲು ಶಶಿಕಲಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂಬ ಬೇಡಿಕೆಯನ್ನು ಇರಿಸಿದ್ದರು.

    ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕಣದಲ್ಲಿ ದೋಷಿಯಾಗಿರುವ ಶಶಿಕಲಾ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

  • ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

    ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

    – ಜಯಲಲಿತಾ ಕ್ಷೇತ್ರದ ಉಪಸಮರಕ್ಕೆ ಎರಡೆಲೆ ಇಲ್ಲ

    ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿರೋ ಚೆನ್ನೈನ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಮಾನ್ಯತೆಯನ್ನೇ ಕಳೆದುಕೊಂಡಿದೆ.

    ಎಐಎಡಿಎಂಕೆ ಪಕ್ಷದ ಚಿಹ್ನೆ ತಮಗೆ ನೀಡುವಂತೆ ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದ್ರೆ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎರಡೂ ಬಣಕ್ಕೂ ಎಐಎಡಿಎಂಕೆ ಪಕ್ಷದ ಎರಡು ಎಲೆಯ ಚಿಹ್ನೆಯನ್ನು ಕೊಡಲು ಚುನಾವಣಾ ಆಯೋಗ ನಿರಾಕರಿಸಿದೆ. ಅಲ್ಲದೆ ಎಐಎಡಿಎಂಕೆ ಪಕ್ಷದ ವಿಸ್ತøತ ಹೆಸರನ್ನು ಚುನಾವಣೆಯಲ್ಲಿ ಬಳಸುವಂತಿಲ್ಲ ಎಂದು ಹೇಳಿದೆ.

    ಸದ್ಯ ಪಕ್ಷದ ಚಿಹ್ನೆಯನ್ನ ಚುನಾವಣಾ ಆಯೋಗ ತಡೆ ಹಿಡಿದಿದೆ. ಹೀಗಾಗಿ ಆರ್‍ಕೆ ನಗರ ಚುನಾವಣೆಯಲ್ಲಿ ಶಶಿಕಲಾ ಬಣದ ಅಭ್ಯರ್ಥಿ ಟಿಟಿವಿ ದಿನಕರನ್ ಹಾಗೂ ಸೆಲ್ವಂ ಬಣದ ಅಭ್ಯರ್ಥಿ ಮಧುಸೂದನನ್ ಬೇರೆ ಚಿಹ್ನೆಯಲ್ಲಿ ಸ್ಪರ್ಧಿಸಬೇಕಾದ ಅನಿವಾರ್ಯತೆ ಎದುರಾಗಿದೆ.

    ಏಪ್ರಿಲ್ 12ರಂದು ಆರ್‍ಕೆ ನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.

  • ಜಯಾ ಸಾವಿನ ತನಿಖೆಗೆ ಡಿಎಂಕೆ ಬೆಂಬಲ

    ಜಯಾ ಸಾವಿನ ತನಿಖೆಗೆ ಡಿಎಂಕೆ ಬೆಂಬಲ

    ಚೆನ್ನೈ: ತಮಿಳುನಾಡು ಮಾಜಿ ಸಿಎಂ ಮೃತ ಜಯಲಲಿತಾ ಸಾವಿನ ಬಗ್ಗೆ ತನಿಖೆ ನಡೆಯಬೇಕೆಂಬ ಓ ಪನ್ನೀರ್ ಸೆಲ್ವಂ ಅವರ ಒತ್ತಾಯಕ್ಕೆ ಡಿಎಂಕೆ ಬೆಂಬಲ ನೀಡಿದೆ.

    ಈ ಬಗ್ಗೆ ಟ್ವೀಟ್ ಮಾಡಿದ್ದ ಪನ್ನೀರ್ ಸೆಲ್ವಂ, ನಾನು ಸಿಎಂ ಆಗಿದ್ದಾಗ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ಆರಂಭಿಸಲಾಗಿತ್ತು. ಆದರೆ ನಂತರ ಎಲ್ಲಾ ತಲೆಕೆಳಗಾಯಿತು ಎಂದು ಹೇಳಿದ್ದರು.

    ಶುಕ್ರವಾರದಂದು ಜಯಲಲಿತಾ ಅವರ 69ನೇ ಜನ್ಮವಾರ್ಷಿಕೋತ್ಸವದ ಪ್ರಯುಕ್ತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪನ್ನೀರ್‍ಸೆಲ್ವಂ, ಅಮ್ಮನ ಹೋರಾಟದಿಂದಲೇ ನಾವು ಇವತ್ತು ಇಲ್ಲಿದ್ದೀವಿ. ಅಮ್ಮನ ಸಾವಿನ ಬಗ್ಗೆ ನಮಗೆ ಉತ್ತರ ಬೇಕು ಅಂದ್ರು.

    ಈ ಬಗ್ಗೆ ಮಾತನಾಡಿರೋ ಡಿಎಂಕೆ ವಕ್ತಾರರಾದ ಸರವಣನ್, ನಮ್ಮ ನಾಯಕ ಎಂಕೆ ಸ್ಟ್ಯಾಲಿನ್ ಕೂಡ ಜಯಾ ಸಾವಿನ ತನಿಖೆಗೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಜಯಾ ಸಾವಿನ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳಿದ್ದರು. ಇದರಲ್ಲಿ ಏಮ್ಸ್‍ನ ವೈದ್ಯರು ಕೂಡ ಇರುವುದರಿಂದ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಹೇಳಿದ್ದರು. ಇದೀಗ ಪನ್ನೀರ್ ಸೆಲ್ವಂ ಕೂಡ ಜಯಾ ಸಾವಿನ ತನಿಖೆ ಆಗಬೇಕು ಎಂದಿದ್ದು ನಮ್ಮ ನಾಯಕ ಹೇಳಿದ ವಿಚಾರಕ್ಕೆ ಪುಷ್ಠಿ ನೀಡಿದೆ ಅಂತ ಹೇಳಿದ್ರು.

    ಈ ನಡುವೆ ಶುಕ್ರವಾರದಂದು ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ವರದಿಗಾರರೊಂದಿಗೆ ಮಾತನಾಡಿ, ಜಯಲಲಿತಾ ಸಾವಿನ ಕುರಿತು ಯಾವುದೇ ರಹಸ್ಯಗಳಿಲ್ಲ ಎಂದು ಹೇಳಿದ್ದಾರೆ. ಕೆಲವರು ಆರೋಪ ಮಾಡುತ್ತಿರುವಂತೆ ಜಯಲಲಿತಾ ಸಾವಿನ ಹಿಂದೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ.

    ಕಳೆದ ವರ್ಷ ಸುಮಾರು ಎರಡು ತಿಂಗಳ ಕಾಲ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಡಿಎಂಬರ್ 5ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ರು.

  • ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆ – ರೆಸಾರ್ಟ್‍ನಲ್ಲೇ ಬೀಡುಬಿಟ್ಟ ಸಿಎಂ ಪಳನಿಸ್ವಾಮಿ

    ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆ – ರೆಸಾರ್ಟ್‍ನಲ್ಲೇ ಬೀಡುಬಿಟ್ಟ ಸಿಎಂ ಪಳನಿಸ್ವಾಮಿ

    ಚೆನ್ನೈ: ತಮಿಳುನಾಡು ರಾಜಕೀಯ ಬೆಳವಣಿಗೆಯಲ್ಲಿ ಗುರುವಾರ ಸಿಎಂ ಪಟ್ಟಕ್ಕೇರಿರೋ ಪಳನಿಸ್ವಾಮಿಗೆ ಇಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಬೇಕಿದೆ. ಹೀಗಾಗಿ ಪಳನಿಸ್ವಾಮಿ ಬಣದ ಶಾಸಕರು ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದಾರೆ.

    ಸಂಖ್ಯಾ ಬಲ ಈಗ ಅತಿಮುಖ್ಯವಾಗಿರುವ ಕಾರಣ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಪಳನಿಸ್ವಾಮಿ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಪಳನಿಸ್ವಾಮಿ ಬಳಿ 123 ಶಾಸಕರ ಬೆಂಬಲ ಇದೆ ಅಂತ ಹೇಳಲಾಗ್ತಿದೆ. ನಿನ್ನೆಯಷ್ಟೇ ಶಾಸಕ ಮೈಲಾಪುರ ಶಾಸಕ ನಟರಾಜನ್, ಸಿಎಂ ಪಳನಿಸ್ವಾಮಿ ಕ್ಯಾಂಪ್ ತೊರೆದು ಸೆಲ್ವಂ ಬಣ ಸೇರಿದ್ದಾರೆ. ಇನ್ನೂ 30 ಮಂದಿ ಸೆಲ್ವಂಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.

    ಇದೇ ಏನಾದ್ರೂ ನಿಜವಾದಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಪಳನಿಸ್ವಾಮಿಗೆ ಸೋಲುಂಟಾಗೋದು ಖಚಿತ. ಈ ನಡುವೆ, ವಿಶ್ವಾಸಯಾಚನೆ ವಿರುದ್ಧ ಮತ ಚಲಾಯಿಸಿ ಅಮ್ಮನಿಗೆ ನಿಷ್ಠೆ ತೋರಿಸಬೇಕೆಂದು ಪನ್ನೀರ್ ಸೆಲ್ವಂ ಶಾಸಕರಿಗೆ ಕರೆ ನೀಡಿದ್ದಾರೆ. ಕುಟುಂಬ ರಾಜಕಾರಣಕ್ಕೆ ಜಯಾ ವಿರೋಧಿ.. ಈಗ ನೀವೂ ವಿರೋಧಿಸಿ ಎನ್ನುತ್ತಿದ್ದಾರೆ. ಈ ನಡುವೆ, ಪಳನಿಸ್ವಾಮಿಗೆ ವಿರುದ್ಧ ಮತ ಹಾಕಲು ಡಿಎಂಕೆ ನಿರ್ಧರಿಸಿದೆ. ಆದ್ರೆ, ಕಾಂಗ್ರೆಸ್ ಮಾತ್ರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಹೈಕಮಾಂಡ್ ಆದೇಶಕ್ಕೆ ಬದ್ಧ ಎಂದಿದೆ.

    ಇಂದು ಬಹುಮತ ಸಾಬೀತು ಮಾಡಬೇಕಿರುವ ಬೆನ್ನಲ್ಲೇ ಅಣ್ಣಾ ಡಿಎಂಕೆಯಿಂದ ಸಿಎಂ ಪಳನಿಸ್ವಾಮಿ, ಶಶಿಕಲಾ ಸಂಬಂಧಿಗಳಾದ ದಿನಕರನ್, ವೆಂಕಟೇಶನ್ ಸೇರಿದಂತೆ 16 ಮಂದಿಯನ್ನು ಪನ್ನೀರ್ ಸೆಲ್ವಂ ಬಣ ಪಕ್ಷದಿಂದ ಉಚ್ಛಾಟಿಸಿದೆ. ಅಲ್ಲದೆ, ಸೆಲ್ವಂ ಬಣದ ಕೆಲ ಶಾಸಕರು ಸ್ಪೀಕರ್ ಭೇಟಿಯಾಗಿ ಮಾತುಕತೆ ನಡೆಸಿ ರಹಸ್ಯ ಮತದಾನಕ್ಕೆ ಒತ್ತಾಯಿಸಿದ್ದಾರೆ. ಇನ್ನು ನಿನ್ನೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮತ್ತು ಸಚಿವರ ತಂಡ ಇವತ್ತು ಪರಪ್ಪನ ಅಗ್ರಹಾರಕ್ಕೆ ಭೇಟಿಕೊಟ್ಟು ಶಶಿಕಲಾರನ್ನ ಭೇಟಿಯಾಗ್ಬೇಕಿತ್ತು. ಆದ್ರೆ ಯಾವ ಸಚಿವರು ಜೈಲಿಗೆ ಭೇಟಿ ಕೊಡ್ಲಿಲ್ಲ. ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿ, ಸಿಹಿಸುದ್ದಿ ಜೊತೆ ಬರೋದಕ್ಕೆ ಪಳಿನಿಸ್ವಾಮಿ ಕಾಯ್ತಿದ್ದಾರೆ. ಈ ಮಧ್ಯೆ ಜೈಲಲ್ಲಿರೋ ಶಶಿಕಲಾ ಪಳಿನಿಸ್ವಾಮಿಯವ್ರು ಬಂದಾಗ ಚರ್ಚೆ ಮಾಡೋದಕ್ಕೆ ವಿಶೇಷವಾದ ಕೊಠಡಿ ನೀಡಿ ಅಂತ ಮನವಿ ಮಾಡಿದ್ದಾರೆ. ಆದ್ರೆ ಪೊಲೀಸರು ಇನ್ನು ನಿರ್ಧಾರ ಮಾಡಿಲ್ಲ.

  • ರಾಜಕೀಯ ಹೈಡ್ರಾಮಕ್ಕೆ ತೆರೆ: ಎಡಪ್ಪಾಡಿ ಪಳನಿಸ್ವಾಮಿ ಈಗ ತಮಿಳುನಾಡು ಸಿಎಂ

    ರಾಜಕೀಯ ಹೈಡ್ರಾಮಕ್ಕೆ ತೆರೆ: ಎಡಪ್ಪಾಡಿ ಪಳನಿಸ್ವಾಮಿ ಈಗ ತಮಿಳುನಾಡು ಸಿಎಂ

    ಚೆನ್ನೈ: 10 ದಿನಗಳ ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ವಿ.ಕೆ.ಶಶಿಕಲಾ ಅವರ ನಿಷ್ಠಾವಂತ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಗುರುವಾರ ಸಂಜೆ ಸಂಜೆ 4 ಗಂಟೆ ವೇಳೆಗೆ ರಾಜಭವನದಲ್ಲಿ 63 ವರ್ಷದ ಪಳನಿಸ್ವಾಮಿ ಅವರಿಗೆ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪಳನಿಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು.

    ಪಳನಿಸ್ವಾಮಿ ಸಂಪುಟಕ್ಕೆ 27 ಶಾಸಕರು ಸೇರ್ಪಡೆಯಾಗಿದ್ದಾರೆ. ಏಕಕಾಲದಲ್ಲಿ 8 ಜನ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು. ಇನ್ನು ನಾಲ್ವರು ಮಹಿಳೆಯರು ಪಳನಿಸ್ವಾಮಿ ಸಂಪುಟ ಸೇರಿದ್ದು, 18 ಖಾತೆಗಳನ್ನು ಪಳನಿಸ್ವಾಮಿ ಅವರೇ ಉಳಿಸಿಕೊಂಡಿದ್ದಾರೆ.

    ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಇ.ಕೆ.ಪಳನಿಸ್ವಾಮಿಯವರಿಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ. 234 ಮಂದಿ ಸದಸ್ಯರುಳ್ಳ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ 117 ಶಾಸಕರ ಬೆಂಬಲ ಬೇಕು. ಸದ್ಯ 134 ಮಂದಿ ಎಐಎಡಿಎಂಕೆ ಶಾಸಕರ ಪೈಕಿ 124 ಮಂದಿಯ ಬೆಂಬಲ ಪಳನಿ ಸ್ವಾಮಿಗೆ ಇದೆ.

    ಶಶಿಕಲಾ ಬಣಕ್ಕೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವರು ಅವಕಾಶ ನೀಡಿದ್ದಕ್ಕೆ ಪನ್ನೀರ್ ಸೆಲ್ವಂ ಬಣದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

     

  • ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

    ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

    ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ತೀರ್ಪು ಪ್ರಕಟ ಆಗಲು ಸಮಯ ನಿಗದಿಯಾಗುತ್ತಿದ್ದ ಹಾಗೆ ಸೋಮವಾರವೇ ಶಾಸಕರ ಜೊತೆ ರೆಸಾರ್ಟ್ ಸೇರಿದ್ದ ಚಿನ್ನಮ್ಮ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ಬಂದಿದ್ದಾರೆ. ನಿನ್ನೆ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ತೆರಳುವುದಕ್ಕೆ ಮುಂಚೆ ಸ್ಥಳೀಯ ಮಾಧ್ಯಮವೊಂದರ ಜೊತೆ ಮಾತನಾಡಿರುವ ಶಶಿಕಲಾ, ಒಂದು ರೀತಿಯ ವಿದಾಯ ಭಾಷಣ ಮಾಡಿದ್ದಾರೆ.

    ನನಗೆ ಬೆಂಬಲ ಸೂಚಿಸಿದ ಎಲ್ಲಾ ಶಾಸಕರುಗಳಿಗೂ ಧನ್ಯವಾದ. ಎಐಡಿಎಂಕೆ ಪಕ್ಷ ಮಾತ್ರ ನನಗೆ ಮುಖ್ಯವಾಗಿದ್ದು, ನನ್ನನ್ನು ಪಕ್ಷದಿಂದ ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ವಿಚಾರವನ್ನು ಅಲ್ಲಿನ ಜಯಾ ಟಿವಿ ಪ್ರಸಾರ ಮಾಡಿದೆ. ಇದಾದ ಬಳಿಕ ಪೋಯಸ್ ಗಾರ್ಡನ್ ಮನೆ ಮುಂದೆ ಜಮಾಯಿಸಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಚಿನ್ನಮ್ಮ, ನಾನು ಜೈಲಿಗೆ ಹೋಗುತ್ತಿದ್ದೇನೆ ಅಂತಾ ನೀವು ಅಳಬೇಡಿ ಅಂತಾ ಹೇಳಿದ್ದಾರೆ.

    ಬಳಿಕ ಜಯಲಲಿತಾ ಹಾಗೂ ನನ್ನ ಮೇಲೆ ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ದು ಡಿಎಂಕೆ ಅಂತಾ ದೂರಿದ್ದಾರೆ. ಇದರ ಮಧ್ಯೆ ಕೊವತ್ತೂರು ರೆಸಾರ್ಟ್ ಖಾಲಿ ಮಾಡುವಂತೆ ಎಐಡಿಎಂಕೆ ಪಕ್ಷದ ಶಶಿಕಲಾ ಗುಂಪಿನ ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ರು. ಆದ್ರೆ ಶಾಸಕರು ಗೋಲ್ಡನ್ ಬೇ ರೆಸಾರ್ಟ್ ಖಾಲಿ ಮಾಡಲು ನಿರಾಕರಿಸಿದ್ರು, ಏನಾದ್ರು ಒತ್ತಾಯ ಮಾಡಿ ದಬ್ಬಾಳಿಕೆ ಮಾಡಿದ್ರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ರು. ಆ ಬಳಿಕ ರೆಸಾರ್ಟ್‍ಗೆ ನೀಡಿದ್ದ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿದೆ. ಆದ್ರೂ ಕೂಡ ಶಾಸಕರು ಅಲ್ಲೇ ಬೀಡುಬಿಟ್ಟಿದ್ದಾರೆ.

    ಜಯಾ ಸಮಾಧಿಗೆ ಪನ್ನೀರ್, ದೀಪಾ ಭೇಟಿ: ಮಂಗಳವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ತೀರ್ಪು ಪ್ರಕಟ ಆಗ್ತಿದ್ದ ಹಾಗೆ ಜಯಲಲಿತಾ ಸೋದರ ಸಂಬಂಧಿಗಳಾದ ದೀಪಾ ಹಾಗೂ ದೀಪಕ್‍ರನ್ನು ಕರೆದು ಚಿನ್ನಮ್ಮ ಶಶಿಕಲಾ ಮಾತನಾಡಿದ್ರು. ಇದಾದ ಬಳಿಕ ಸಂಜೆ ದೀಪಾ, ಪನ್ನೀರ್ ಸೆಲ್ವಂ ಬಳಗ ಸೇರಿದ್ದು, ರಾತ್ರಿ ಜಯಾ ಸಮಾಧಿಗೆ ಪನ್ನೀರ್ ಸೆಲ್ವಂ ಹಾಗೂ ಈಗಾಗಲೇ ಪಕ್ಷದಿಂದ ವಜಾಗೊಂಡಿರುವ ಶಾಸಕರು ಹಾಗೂ ಸಂಸದರ ಜೊತೆ ಭೇಟಿ ನೀಡಿದ್ರು. ಇಂದಿನಿಂದ ನಾನು ಸಕ್ರಿಯ ರಾಜಕಾರಣಕ್ಕೆ ಬರುತ್ತೇನೆ ಅಂತಾ ದೀಪಾ ಸಮಾಧಿ ಬಳಿಯೇ ಘೋಷಣೆ ಮಾಡಿದ್ರು. ಈ ಮೂಲಕ ಪನ್ನೀರ್ ಸೆಲ್ವಂ ಬಣದ ಬಲ ನಿಧಾನವಾಗಿ ಹೆಚ್ಚಾಗುತ್ತಿದೆ. ಇದಕ್ಕೂ ಮೊದಲು ಎಐಎಡಿಎಂ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಎಡಪ್ಪಾಡಿ ಕೆ ಪಳನಿಸ್ವಾಮಿ ರಾಜ್ಯಪಾಲ ಸಿ ವಿದ್ಯಾಸಾಗರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಹಲವು ಸಚಿವರು ಪಳನಿಸ್ವಾಮಿಗೆ ಸಾಥ್ ನೀಡಿದ್ರು.

  • ಪನ್ನೀರ್ ಸೆಲ್ವಂಗೆ ಹೆಚ್ಚಿದ ಸಂಸದರ ಬಲ- ಮಾಧ್ಯಮಗಳ ಮುಂದೆ ಶಶಿಕಲಾ ಶಾಸಕರ ಪರೇಡ್

    ಚೆನ್ನೈ: ಕಳೆದೊಂದು ವಾರದಿಂದ ತಮಿಳುನಾಡು ರಾಜಕೀಯದಲ್ಲಿ ಎದ್ದಿರುವವ ಅಸ್ಥಿರತೆ ಮುಂದುವರಿದಿದೆ. ಎಐಎಡಿಎಂಕೆ ಮಧ್ಯಂತರ ಕಾರ್ಯದರ್ಶಿ ಶಶಿಕಲಾ ನಟರಾಜನ್‍ಗೆ ದಿನದಿಂದ ದಿನಕ್ಕೆ ಬೆಂಬಲ ಕಡಿಮೆಯಾಗುತ್ತಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಬಣದಲ್ಲೀಗ 9 ಮಂದಿ ಲೋಕಸಭಾ ಸದಸ್ಯರು ಮತ್ತು ಇಬ್ಬರು ರಾಜ್ಯಸಭಾ ಸಂಸದರು ಸೇರಿ 11 ಮಂದಿ ಕಾಣಿಸಿಕೊಂಡಿದ್ದಾರೆ. ಆದರೆ ಶಾಸಕರ ಸಂಖ್ಯೆ ಏಳರಲ್ಲೇ ಇದೆ.

    ಇತ್ತ ಯಾರನ್ನೂ ಕೂಡಿಹಾಕಿಲ್ಲ ಎಂದು ಸ್ಪಷ್ಟಪಡಿಸಿರುವ ಶಶಿಕಲಾ ಭಾನುವಾರ ರಾತ್ರಿ ಮಾಧ್ಯಮಗಳ ಮುಂದೆ ಚೆನ್ನೈನ ಗೋಲ್ಡನ್ ಬೇ ರೆಸಾರ್ಟ್‍ನಲ್ಲಿರುವ ಶಾಸಕರ ಪರೇಡ್ ನಡೆಸಿದ್ರು. ಆದ್ರೆ ಅವರಿಗ್ಯಾರಿಗೂ ಮಾಧ್ಯಮಗಳ ಮುಂದೆ ಮಾತಾಡಲು ಅವಕಾಶ ಮಾಡಿಕೊಟ್ಟಿಲ್ಲ. ಈ ವೇಳೆ ಮಾತಾಡಿದ ಶಶಿಕಲಾ ತಮಗೆ ಇನ್ನೂ 129 ಶಾಸಕರ ಬೆಂಬಲವಿದೆ ಅಂತಾ ಹೇಳಿಕೊಂಡಿದ್ದಾರೆ.

    ಇತ್ತ ಚುನಾಯಿತ ಸರ್ಕಾರದ ಹಣೆಬರಹ ವಿಧಾನಸಭೆಯಲ್ಲೇ ನಿರ್ಧಾರವಾಗಬೇಕೆಂದು ಪ್ರಸಿದ್ಧ ಬೊಮ್ಮಾಯಿ ತೀರ್ಪು ನೀಡಿದ್ದ ಸಂವಿಧಾನಿಕ ಪೀಠದ ಸದಸ್ಯರಾಗಿದ್ದ ನ್ಯಾಯಮೂರ್ತಿ ಪಿವಿ ಸಾವಂತ್ ತಮಿಳುನಾಡು ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಶಿಕಲಾ ನಟರಾಜನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬರುವವರೆಗೆ ರಾಜ್ಯಪಾಲರು ಕಾಯಬಹುದು. ಆದರೆ ಆದಷ್ಟು ಬೇಗ ಏನಾದರೊಂದು ನಿರ್ಧಾರ ಕೈಗೊಳ್ಳಬೇಕೆಂದು ಬೊಮ್ಮಾಯಿ ತೀರ್ಪು ನೀಡಿದ್ದ ಒಂಭತ್ತು ಸದಸ್ಯರ ಸಂವಿಧಾನಿಕ ಪೀಠದ ಸದಸ್ಯರಾಗಿದ್ದ ನ್ಯಾಯಮೂರ್ತಿ ಸಾವಂತ್ ಹೇಳಿದ್ದಾರೆ. ಆದಷ್ಟು ಬೇಗ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಸೂಚಿಸಬಹುದು. ಅದೊಂದಷ್ಟೇ ರಾಜ್ಯಪಾಲರ ಮುಂದಿರುವ ಆಯ್ಕೆ. ಈ ವೇಳೆ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂಗೆ ಮೊದಲ ಅವಕಾಶ ನೀಡಬಹುದು ಎಂದು ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.

    ಮೂಲಗಳ ಪ್ರಕಾರ ಬುಧವಾರ ಅಥವಾ ಗುರುವಾರ ವಿಶ್ವಾಸಮತ ಸಾಬೀತಿಗೆ ಸೂಚಿಸುವ ಸಾಧ್ಯತೆ ಇದೆ. 235 ಸದಸ್ಯ ಬಲದ ವಿಧಾನಸಭೆಯಲ್ಲಿ ಎಐಎಡಿಎಂಕೆ 134 ಶಾಸಕರನ್ನು ಹೊಂದಿದೆ. ಡಿಎಂಕೆ 9 ಮತ್ತು ಕಾಂಗ್ರೆಸ್ 8 ಶಾಸಕರನ್ನು ಹೊಂದಿದೆ. ಬಹುಮತಕ್ಕೆ ಬೇಕಾಗಿರುವ ಅಗತ್ಯ ಶಾಸಕರ ಸಂಖ್ಯೆ 118. ಒಂದು ವೇಳೆ ಶಶಿಕಲಾ ಬಣದಲ್ಲಿರುವ 20 ರಿಂದ 30 ಶಾಸಕರು ಪನ್ನೀರ್ ಬಣಕ್ಕೆ ಸೇರ್ಪಡೆಗೊಂಡರೂ ಶಶಿಕಲಾ ಸಿಎಂ ಪಟ್ಟಕ್ಕೆ ಏರುವ ಕನಸು ಭಗ್ನವಾಗಲಿದೆ.

  • ರಜನಿಕಾಂತ್ ಬಿಜೆಪಿಗೆ ಸೇರುತ್ತಾರಾ? ಹೊಸ ಪಕ್ಷ ಕಟ್ಟುತ್ತಾರಾ?

    ಚೆನ್ನೈ: ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ನಡುವಿನ ರಾಜಕೀಯ ಗುದ್ದಾಟವನ್ನು ಬಿಜೆಪಿ ಎನ್‍ಕ್ಯಾಶ್ ಮಾಡಿಕೊಳ್ಳಲು ಮುಂದಾದಂತೆ ಕಾಣುತ್ತಿದ್ದು, ಸೂಪರ್‍ಸ್ಟಾರ್ ರಜನಿಕಾಂತ್‍ಗೆ ಗಾಳ ಹಾಕಿದೆ.

    ಪಕ್ಷಕ್ಕೆ ಸೇರ್ಪಡೆಯಾದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನಿಮ್ಮನ್ನು ಬಿಂಬಿಸುತ್ತೇವೆ ಎಂದು ಬಿಜೆಪಿ ನಾಯಕರು ರಜನಿಕಾಂತ್ ಅವರಲ್ಲಿ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

    ಆರ್‍ಎಸ್‍ಎಸ್ ಒಲವುಳ್ಳ, ಸ್ವದೇಶಿ ಜಾಗರಣ್ ಮಂಚ್ ಸಹ ಸಂಚಾಲಕ ಗುರುಮೂರ್ತಿ ರಜನಿಕಾಂತ್ ಅವರನ್ನು ಭೇಟಿ ಮಾಡಿ ಹೊಸ ಪಕ್ಷವನ್ನು ಕಟ್ಟುವಂತೆ ಸಲಹೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಷ್ಟೇ ಅಲ್ಲದೇ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಕೂಡಾ ರಜನಿಕಾಂತ್ ರಾಜಕೀಯಕ್ಕೆ ಬರಬೇಕೆಂದು ಆಗ್ರಹಿಸುತ್ತಿದ್ದಾರೆ.

    ಈ ನಡುವೆ ರಜನಿಕಾಂತ್ ರಾಜಕೀಯ ಎಂಟ್ರಿಗೆ ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಜಿನಿಕಾಂತ್ ರಾಜಕೀಯಕ್ಕೆ ಬರೋದು ಬೇಡ ಅಂತ ಸಲಹೆ ನೀಡಿದ್ದಾರೆ.

    ರಜನಿಕಾಂತ್ ಸಹೋದರ ಸತ್ಯನಾರಾಯಣ ರಾವ್ ಪ್ರತಿಕ್ರಿಯಿಸಿ, ರಜನಿ ರಾಜಕೀಯಕ್ಕೆ ಬರಲು ಈಗ ಕಾಲ ಕೂಡಿಬಂದಿದೆ. ತಮಿಳುನಾಡು ರಾಜಕೀಯದಲ್ಲಿ ಏನು ಆಗುತ್ತಿದೆ ಎನ್ನುವುದನ್ನು ಅವರು ನೋಡಲಿದ್ದಾರೆ ಎಂದು ಹೇಳಿದ್ದಾರೆ.

    ಒಂದ್ವೇಳೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಯಾದ್ರೆ ತಮಿಳುನಾಡಲ್ಲಿ ಸರ್ಕಾರ ಛಿದ್ರವಾಗಿ ರಾಷ್ಟ್ರಪತಿ ಆಡಳಿತ ಬಂದ್ರೂ ಅಚ್ಚರಿಯಿಲ್ಲ ಎನ್ನಲಾಗಿದೆ.

    ಶುಕ್ರವಾರ ಸಂಜೆ ಗುರುಮೂರ್ತಿ,ನಾನು ಕೇಳಿದ್ದಕ್ಕೆ ರಜನಿಕಾಂತ್ ರಾಜಕೀಯಕ್ಕೆ ಸೇರುತ್ತಾರೆ ಎನ್ನುವ ಸುದ್ದಿ ಸುಳ್ಳು. ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಕಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

  • ರಾಜ್ಯಪಾಲರ ಜೊತೆ ಸೆಲ್ವಂ, ಶಶಿಕಲಾ ಚರ್ಚೆ- ಕೇಂದ್ರಕ್ಕೆ ವರದಿ ರವಾನಿಸಿದ ವಿದ್ಯಾಸಾಗರ್ ರಾವ್

    ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕಟ್ಟು ಒಂದು ರೀತಿಯಲ್ಲಿ ರೋಚಕ ಘಟ್ಟ ತಲುಪಿದೆ. ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಹಾಗೂ ಹೊಸ ಸರ್ಕಾರ ರಚನೆಗೆ ಅವಕಾಶ ಕೇಳ್ತಿರೋ ಶಶಿಕಲಾ ನಟರಾಜನ್ ಗುರುವಾರದಂದು ಚೆನ್ನೈನಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನ ಭೇಟಿಯಾಗಿದ್ರು. ಇಬ್ಬರ ಭೇಟಿ ಬಳಿಕ ತಮಿಳುನಾಡಿನ ಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ರಾಜ್ಯಪಾಲರು ವರದಿ ರವಾನಿಸಿದ್ದಾರೆ.

    ಜೊತೆಗೆ ಸಾಂವಿಧಾನಿಕ ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. ಶಶಿಕಲಾ ವಿರುದ್ಧ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದ್ರೆ ಮತ್ತಷ್ಟು ಬಿಕ್ಕಟ್ಟು ಉಂಟಾಗಬಹುದು ಅಂತ ತಜ್ಞರು ಹೇಳಿದ್ದಾರೆ. ಹೀಗಾಗಿ ತಕ್ಷಣ ಸರ್ಕಾರ ರಚನೆಗೆ ಅವಕಾಶ ನೀಡದೇ ಕಾದು ನೋಡುವ ತಂತ್ರಕ್ಕೆ ಮೊರೆಹೋಗೋ ಸಾಧ್ಯತೆಯಿದೆ. ತೀರ್ಪು ಶಶಿಕಲಾ ವಿರುದ್ಧ ಬಂದ್ರೆ ಕೇಂದ್ರ ಸರ್ಕಾರನೂ ಪನ್ನೀರ್ ಸೆಲ್ವಂ ಪರ ನಿಲ್ಲುತ್ತೆ ಅಂತ ಮೂಲಗಳು ತಿಳಿಸಿವೆ.

    ಗುರುವಾರದಂದು ರಾಜ್ಯಪಾಲರನ್ನು ಭೇಟಿಯಾಗಿದ್ದ ಸೆಲ್ವಂ, ರಾಜೀನಾಮೆ ಹಿಂಪಡೀತಿನಿ. ಬಹುಮತ ಸಾಬೀತಿಗೆ ಅವಕಾಶ ಕೊಡಿ ಅಂತ ಕೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಧರ್ಮ ಗೆಲ್ಲುತ್ತೆ ಅಂತ ಮಾಧ್ಯಮಗಳ ಮುಂದೆನೂ ಹೇಳಿದ್ದಾರೆ. ಇನ್ನು ಶಶಿಕಲಾ ತನಗೆ 130 ಶಾಸಕರ ಬೆಂಬಲ ಇದೆ ಅಂತ ಸಹಿ ಇರೋ ಪತ್ರವನ್ನ ರಾಜ್ಯಪಾಲರಿಗೆ ನೀಡಿದ್ದಾರೆ. ಈ ಮಧ್ಯೆ, ಶಶಿಕಲಾ ಪರ ರೆಸಾರ್ಟ್ ಸೇರಿರೋ ಶಾಸಕರಲ್ಲಿ ಸುಮಾರು 30ರಷ್ಟು ಮಂದಿ ಸೆಲ್ವಂ ಪರವಾಗಿದ್ದಾರೆ ಅಂತ ತಿಳಿದುಬಂದಿದೆ.

  • ಇಂದು ಚೆನ್ನೈಗೆ ರಾಜ್ಯಪಾಲ: ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‍ಗೆ ಸೆಲ್ವಂ ಪತ್ರ

    ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ.

    ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರು ಕೂಡ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ನೀಡೋ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ಹೋಗಿರೋ ಎಐಎಡಿಎಂಕೆಯ 130 ಶಾಸಕರು ರಾಷ್ಟ್ರಪತಿ ಮುಂದೆ ನಡೆಸಲು ಉದ್ದೇಶಿಸಿದ್ದ ಪರೇಡ್‍ನ್ನ ಕೈಬಿಟ್ಟಿದ್ದಾರೆ.

    ಇದಕ್ಕೂ ಮುನ್ನ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ಪ್ರಮಾಣ ವಚನ ಕಾರ್ಯಕ್ರಮವನ್ನ ಮುಂದೂಡ್ತಿದ್ದಾರೆ ಅಂತ ಶಶಿಕಲಾ ಆರೋಪಿಸಿದ್ರು. ಪಕ್ಷದ ಖಜಾಂಚಿ ಹುದ್ದೆಯಿಂದ ವಜಾಗೊಂಡಿರೋ ಪನ್ನೀರ್ ಸೆಲ್ವಂ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್‍ಗೆ ಪತ್ರ ಬರೆದಿದ್ದು, ಚಾಲ್ತಿ ಖಾತೆಯಲ್ಲಿರೋ ಪಕ್ಷದ ನಿಧಿಯನ್ನು ಹಿಡಿದಿಟ್ಟುಕೊಳ್ಳಬೇಕು. ನನ್ನ ಲಿಖಿತ ಅನುಮತಿ ಇಲ್ಲದೆ ಬೇರೆಯವ್ರಿಗೆ ಪಾರ್ಟಿ ಫಂಡ್ ಅನ್ನು ಆಪರೇಟ್ ಮಾಡೋಕೆ ಅವಕಾಶ ನೀಡಬಾರದು ಅಂತ ಮನವಿ ಮಾಡಿದ್ದಾರೆ.