Tag: ಪಬ್ಲಕ್ ಟಿವಿ

  • ಕೊರೊನಾ ಸಂಕಷ್ಟದಲ್ಲಿ ಕಂಗಾಲಾಗಿದ್ದ ಗುಲಾಬಿ ಬೆಳೆಗಾರರಿಗೆ ಪ್ರೇಮ ದಿನದ ಬಂಪರ್- ಕೈ ಹಿಡಿದ ಗುಲಾಬಿ ಬೆಲೆ

    ಕೊರೊನಾ ಸಂಕಷ್ಟದಲ್ಲಿ ಕಂಗಾಲಾಗಿದ್ದ ಗುಲಾಬಿ ಬೆಳೆಗಾರರಿಗೆ ಪ್ರೇಮ ದಿನದ ಬಂಪರ್- ಕೈ ಹಿಡಿದ ಗುಲಾಬಿ ಬೆಲೆ

    ಕೋಲಾರ: ಕೊರೊನಾ ಸಂಕಷ್ಟದಲ್ಲಿ ನೆಲಕಚ್ಚಿದ್ದ ಗುಲಾಬಿ ಬೆಳೆಗಾರರಿಗೆ ಪ್ರೇಮ ದಿನದ ಬಂಪರ್ ಸಿಕ್ಕಿದ್ದು, ಗುಲಾಬಿ ಬೆಲೆಯಲ್ಲಿ ಏರಿಕೆಯಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಕೊರೊನಾ ಸಂಕಷ್ಟದಿಂದ ಹೂವು ಬೆಳೆಗಾರರಿಗೆ ಮುಳ್ಳಿನ ಹಾಸಿಗೆಯ ಮೇಲೆ ಮಲಗಿದಂತಾಗಿತ್ತು, ಕಳೆದ ಹತ್ತು ತಿಂಗಳಿಂದ ಯಾವುದೇ ಸಭೆ ಸಮಾರಂಭಗಳಿಲ್ಲದೆ, ಜಾತ್ರೆ ಪೂಜೆಗಳಿಲ್ಲದೆ ಹೂವಿಗೆ ಬೇಡಿಕೆ ಇರಲಿಲ್ಲ. ಅಲ್ಲದೆ ವಿದೇಶಗಳಿಗೆ ರಫ್ತು ಮಾಡಲೂ ಸಾಧ್ಯವಾಗಿರಲಿಲ್ಲ. ಹೀಗಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ಕೋಲಾರ ಜಿಲ್ಲೆಯ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದರು.

    ಫೆಬ್ರವರಿ ತಿಂಗಳಲ್ಲಿ ಪ್ರೇಮಿಗಳ ದಿನದ ವಿಶೇಷವಾಗಿ ಗುಲಾಬಿ ಹೂವು ಬೆಳೆದ ರೈತರಿಗೆ ಸುಗ್ಗಿ ಹಬ್ಬ ಎನ್ನುವಂತಾಗಿದೆ. ಹತ್ತು ತಿಂಗಳಿಂದ ಮಕಾಡೆ ಮಲಗ್ಗಿದ್ದ ಗುಲಾಬಿ ಹೂವಿಗೆ ಈಗ ಒಳ್ಳೆಯ ಬೆಲೆ ಬಂದಿದೆ ಅನ್ನೋದು ಹೂವು ಬೆಳೆಗಾರರ ಮಾತು. ಅದಕ್ಕಾಗಿಯೇ ಫ್ರೆಬ್ರವರಿ ತಿಂಗಳು ಬಂತೆಂದ್ರೆ ಗುಲಾಬಿ ಹೂವಿಗೆ ಎಲ್ಲಿಲ್ಲದ ಬೇಡಿಕೆ. ನಮ್ಮ ದೇಶಕ್ಕಿಂತ ವಿದೇಶಗಳಲ್ಲಿ ಡಿಮ್ಯಾಂಡ್ ಜಾಸ್ತಿ ಇರುತ್ತದೆ. ಅದಕ್ಕಾಗಿ ಈಗ ಗುಲಾಬಿ ಹೂವಿಗೆ ಒಳ್ಳೆಯ ಬೇಡಿಕೆ ಬಂದಿದೆ. ಒಂದು ಹೂವಿನ ಬೆಲೆ 8 ರಿಂದ 10 ರೂಪಾಯಿ ವರಗೆ ಮಾರಾಟವಾಗುತ್ತಿದೆ.

    ಕೋಲಾರ ಜಿಲ್ಲೆಯಲ್ಲಿ ಒಟ್ಟು 540 ಹೆಕ್ಟೇರ್ ಪ್ರದೇಶದಲ್ಲಿ ಗುಲಾಬಿ ಹೂವು ಬೆಳೆದರೆ, ಸುಮಾರು 50 ಹೆಕ್ಟೇರ್ ಪ್ರದೇಶದಲ್ಲಿ ಗುಲಾಬಿ ಹೂವನ್ನು ರೈತರು ಪಾಲಿ ಹೌಸ್‍ನಲ್ಲಿ ಬೆಳೆಯುತ್ತಾರೆ.

    ಅದರಲ್ಲೂ ದೇಶ ಹಾಗೂ ವಿದೇಶಗಳಲ್ಲೂ ಬಹು ಬೇಡಿಕೆ ಇರುವ ತಾಜ್‍ಮಹಲ್, ಗೋಸ್ಟ್ರೈಕ್, ಅವಲಂಚ್ ವೈಟ್, ಎಲ್ಲೋ, ಸೇರಿದಂತೆ ಹಲವು ಬಗೆಯ ಗುಲಾಬಿ ಹೂ ಗಳನ್ನು ಆಸ್ಟ್ರೇಲಿಯಾ, ಜಪಾನ್, ಸಿಂಗಪೂರ್, ಮಲೇಶಿಯಾ ಗಳಿಗೆ ರಫ್ತು ಮಾಡುತ್ತಾರೆ. ಆದರೆ ಈ ವರ್ಷ ಕೊರೊನಾ ಹಿನ್ನೆಲೆ ಹೂವಿಗೆ ಬೇಡಿಕೆ ಇಲ್ಲದೆ ಎಷ್ಟೋ ಜನರು ಹೂವಿನ ತೋಟವನ್ನೇ ನಾಶ ಮಾಡಿದ್ದು, ಶಕ್ತಿ ಇದ್ದವರು ಮಾತ್ರ ತೋಟವನ್ನು ಕಾಪಾಡಿಕೊಂಡಿದ್ದಾರೆ ಅನ್ನೋದು ರೈತರ ಮಾತು. ಹೀಗೆ ತೋಟವನ್ನು ಕಾಪಾಡಿಕೊಂಡವರಿಗೆ ಈಗ ಉಸಿರಾಡೋದಕ್ಕೆ ಒಳ್ಳೆಯ ಬೆಲೆ ಬಂದಿದೆ.

  • 7 ಲಕ್ಷ ಬೆಲೆ ಬಾಳುವ 46 ಮೊಬೈಲ್ ಕದ್ದ ಆರೋಪಿ ಅರೆಸ್ಟ್!

    7 ಲಕ್ಷ ಬೆಲೆ ಬಾಳುವ 46 ಮೊಬೈಲ್ ಕದ್ದ ಆರೋಪಿ ಅರೆಸ್ಟ್!

    ಮುಂಬೈ: ಮೊಬೈಲ್ ಅಂಗಡಿಯೊಂದರಿಂದ 7 ಲಕ್ಷ ಬೆಲೆಬಾಳುವ 46 ಮೊಬೈಲ್ ಫೋನ್‍ಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ಬಂಧಿತ ಆರೋಪಿಯನ್ನು ಅಜ್ಮತ್ ಅಲಿ ಶೇಖ್ (46) ಎಂದು ಗುರುತಿಸಲಾಗಿದೆ. ಆರೋಪಿಯ ಕಿರಿಯ ಸಹೋದರ ಕೂಡ ಕಳ್ಳತನದಲ್ಲಿ ಭಾಗಿಯಾಗಿದ್ದು, ಈಗ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ಶೇಖ್‍ನಿಂದ 7 ಲಕ್ಷ ರೂಪಾಯಿ ಮೌಲ್ಯದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಮತಾ ನಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ತಿಂಗಳು ಸಮುತಾ ನಗರದ ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 46 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಸಿದ್ದಾರ್ಥನಗರದಿಂದ ಬಂಧಿಸಲಾಗಿದೆ. ಆರೋಪಿಗಳಿಬ್ಬರು ಮೊಬೈಲ್ ಅಂಗಡಿಯೊಂದಕ್ಕೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಗಳೊಂದಿಗೆ ಪರಾರಿಯಾಗಿದ್ದರು.

    ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಆರೋಪಿಗಳನ್ನು ಗುರುತಿಸಿದೆವು. ನಲಸೋಪರಾದಲ್ಲಿರುವ ಆರೋಪಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದೆವು. ಆದರೆ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಆಗ ಆರೋಪಿಗಳ ನೆರೆಹೊರೆಯವರನ್ನು ಪ್ರಶ್ನಿಸಿದಾಗ ಆರೋಪಿಗಳು ಉತ್ತರಪ್ರದೇಶದಲ್ಲಿರುವ ಅವರ ಊರಿಗೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಉತ್ತರದೇಶದಲ್ಲಿರುವ ಅವರ ಮನೆಯ ಮೇಲೆ ದಾಳಿ ಮಾಡಿದಾಗ ಒಬ್ಬ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳದಿಂದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಸಹೋದರ ಬಹುಶಃ ಉಳಿದ ಫೋನ್ ಗಳೊಂದಿಗೆ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆರೋಪಿಗಳು ಉನ್ನತ ಮಟ್ಟದ ಮೊಬೈಲ್ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಈ ಇಬ್ಬರು ಖದೀಮರ ವಿರುದ್ಧ ನಲಸೋಪರಾ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮೊದಲು ಎಷ್ಟು ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕು. ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಈ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತೇವೆ ಎಂದು ಡಿಸಿಪಿ ಡಿಎಸ್ ಸ್ವಾಮಿ ತಿಳಿಸಿದ್ದಾರೆ.

  • ಪರೀಕ್ಷಾ ಅಕ್ರಮ ತಡೆಗಟ್ಟಲು ಸೈಬರ್ ಕ್ರೈಂ ಪೊಲೀಸರ ಮೊರೆ ಹೋದ ಶಿಕ್ಷಣ ಇಲಾಖೆ

    ಪರೀಕ್ಷಾ ಅಕ್ರಮ ತಡೆಗಟ್ಟಲು ಸೈಬರ್ ಕ್ರೈಂ ಪೊಲೀಸರ ಮೊರೆ ಹೋದ ಶಿಕ್ಷಣ ಇಲಾಖೆ

    ಬೆಂಗಳೂರು: ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಈ ಬಾರಿ ಸೈಬರ್ ಕ್ರೈಂ ಕದ ತಟ್ಟಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಶಿಕ್ಷಣ ಇಲಾಖೆ ಹೊಸ ಹೊಸ ಪ್ರಯೋಗಳನ್ನು ಮಾಡಿದರು ಟೆಕ್ನಾಲಜಿ ಬಳಸಿಕೊಂಡು ಆ ಪರೀಕ್ಷೆಯಲ್ಲಿ ಅಕ್ರಮಗಳು ನಡೆಯುತ್ತವೇ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಶಿಕ್ಷಣ ಇಲಾಖೆ ಚಾಪೆ ಕೆಳಗೆ ನುಸಳಿದರೆ ಪರೀಕ್ಷಾ ಅಕ್ರಮ ಎಸಗುವರು ರಂಗೋಲಿ ಕೆಳಗೆ ನುಸಳಿ ಅಕ್ರಮ ಎಸಗುತ್ತಿರುವುದು ಶಿಕ್ಷಣ ಇಲಾಖೆ ಗಮನಕ್ಕೆ ಬಂದಿದೆ. ಈಗಾಗಲೇ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಹಲವು ಪ್ರಮುಖ ನಿರ್ಧಾರಗಳನ್ನು ತಗೆದುಕೊಂಡು ಯಶಸ್ವಿಯಾಗಿದೆ.

    ಶಿಕ್ಷಣ ಇಲಾಖೆ ಈಗಾಗಲೇ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಯ ಮೊಬೈಲ್ ನಂಬರ್ ಗಳ ಮೇಲೆ ಗಮನ ಇಡಲಾಗುತ್ತಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪ್ರಶ್ನೆ ಪತ್ರಿಕೆ ಸಂಗ್ರಹಿಸಿಡುವ ಖಜಾನೆ, ಪ್ರಶ್ನೆ ಪತ್ರಿಕೆ ಕಾಲೇಜುಗಳಿಗೆ ಕಳುಹಿಸಿಕೊಡುವಾಗ ವಿಡಿಯೋಗಳನ್ನು ಮಾಡಿಕೊಂಡು ಪರೀಕ್ಷಾ ಅಕ್ರಮ ತಡೆಗಟ್ಟಲು ಕ್ರಮಕೈಗೊಳ್ಳಲಾಗಿದೆ.

    ಪರೀಕ್ಷಾ ಅಕ್ರಮ ತಡೆಗಟ್ಟಲು ಶಿಕ್ಷಣ ಇಲಾಖೆ ಇದೇ ರೀತಿ ಹತ್ತಾರು ಕ್ರಮಗಳನ್ನ ಕೈಗೊಂಡು ಯಶಸ್ಸು ಪಡೆದುಕೊಂಡಿದೆ. ಆದರೂ ಕೆಲ ಕಿಡಿಗೇಡಿಗಳು ಟೆಕ್ನಾಲಜಿ ಬಳಿಸಿಕೊಂಡು ಅಕ್ರಮ ಎಸಗಲು ಪ್ರಯತ್ನಿಸುತ್ತಿದ್ದಾರೆ. ಟೆಕ್ನಾಲಜಿ ಬಳಸಿ ಪರೀಕ್ಷಾ ಅಕ್ರಮ ತಡೆಗಟ್ಟಲು ಶಿಕ್ಷಣಾ ಇಲಾಖೆ ಸೈಬರ್ ಕ್ರೈಂ ಮೊರೆ ಹೋಗಿದೆ.

  • ಮಗನ ಅಂಗಾಂಗ ದಾನ ಮಾಡಿದ ತಂದೆ-ತಾಯಿ

    ಮಗನ ಅಂಗಾಂಗ ದಾನ ಮಾಡಿದ ತಂದೆ-ತಾಯಿ

    – ಸಾರ್ವಜನಿಕರಿಂದ ಮೆಚ್ಚುಗೆ

    ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

    ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಕಳೆದ 15 ದಿನದ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು.

    ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಚಿನ್ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ. ಮಗನ ಸಾವಿನ ನಂತರವೂ ಆತನಿಂದ ಯಾರಿಗಾದರೂ ಸಹಾಯ ಆಗಲಿ ಎಂದು ತಂದೆ-ತಾಯಿ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ತಮ್ಮ ದುಃಖದಲ್ಲೂ ಬೇರೆಯವರ ಹಿತಕ್ಕಾಗಿ ಮಗನ ಅಂಗಾಂಗ ದಾನ ಮಾಡಿದ ತಂದೆ-ತಾಯಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

  • ಮನೆಯಲ್ಲಿ ಪ್ರಸಿದ್ಧ ಅಂತಾರಾಷ್ಟ್ರೀಯ ಪಾಪ್ ಗಾಯಕಿ ಶವವಾಗಿ ಪತ್ತೆ

    ಮನೆಯಲ್ಲಿ ಪ್ರಸಿದ್ಧ ಅಂತಾರಾಷ್ಟ್ರೀಯ ಪಾಪ್ ಗಾಯಕಿ ಶವವಾಗಿ ಪತ್ತೆ

    ಸಿಯೋಲ್: ಪಾಪ್ ಗಾಯಕಿ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸೋಮವಾರ ದಕ್ಷಿಣ ಕೊರಿಯಾದ ಜಿಯೊಂಗ್ಲಿನಲ್ಲಿ ನಡೆದಿದೆ.

    ಸುಲ್ಲಿ(25) ಶವವಾಗಿ ಪತ್ತೆಯಾದ ಗಾಯಕಿ. ಸುಲ್ಲಿ ಮ್ಯಾನೇಜರ್ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದನು. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಗಾಬರಿಗೊಂಡ ಮ್ಯಾನೇಜರ್ ಆಕೆಯ ಮನೆಗೆ ಬಂದಿದ್ದಾನೆ. ಈ ವೇಳೆ ಸುಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಮಾರ್ಚ್ 29, 1994ರಂದು ಹುಟ್ಟಿದ ಸುಲ್ಲಿ, ಕೆ-ಪಾಪ್ ಬ್ಯಾಂಡ್‍ನ ಸದಸ್ಯೆ ಆಗಿದ್ದಳು. ಮಾಧ್ಯಮಗಳ ಪ್ರಕಾರ ಸಾಮಾಜಿಕ ಜಾಲತಾಣದಲ್ಲಿ ಜನರು ನಿಂದಿಸುತ್ತಿದ್ದಕ್ಕೆ 2014ರಲ್ಲಿ ಸುಲ್ಲಿ ತನ್ನ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ದಳು. ಬಳಿಕ 2015ರಲ್ಲಿ ಆ ತಂಡದಿಂದ ಹೊರಬಂದು ನಟನೆಯತ್ತ ಆಸಕ್ತಿ ವಹಿಸಿದ್ದಳು.

    ಸುಲ್ಲಿ ಮೂರು ವರ್ಷಗಳ ನಂತರ ಅಂದರೆ 2018ರಲ್ಲಿ ಸಂಗೀತ ಕೆಲಸವನ್ನು ಪುನರಾಂಭಿಸಿದ್ದಳು. ಜೂನ್ 2019ರಲ್ಲಿ ಸುಲ್ಲಿ ಗಾಬ್ಲಿನ್ ಎಂಬ ಆಲ್ಬಂ ಮೂಲಕ ಸೋಲೋ ಗಾಯಕಿಯಾಗಿ ಡೆಬ್ಯು ಮಾಡಿದ್ದಳು. ನಂತರ 2005ರಲ್ಲಿ ಸುಲ್ಲಿ ಕಿರುತೆರೆಯಲ್ಲಿ ನಟಿಸಲು ಶುರು ಮಾಡಿದ್ದಳು.

    2012ರಲ್ಲಿ ‘ಬ್ಯೂಟಿಫುಲ್ ಯೂ’ ಕಾರ್ಯಕ್ರಮಕ್ಕಾಗಿ ಸುಲ್ಲಿ ನ್ಯೂ ಸ್ಟಾರ್ ಅವಾರ್ಡ್ ಪಡೆದುಕೊಂಡಿದ್ದಳು. ಸುಲ್ಲಿ ಪ್ಯಾನಿಕ್ ಡಿಸಾರ್ಡರ್ (ಭಯದಿಂದ ಅಸ್ವಸ್ಥತೆ)ನಿಂದ ಬಳಲುತ್ತಿದ್ದಳು. ಅಲ್ಲದೆ ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ, “ನನಗೆ ಜೊತೆ ಆತ್ಮೀಯರಾಗಿದ್ದವರೇ ನನ್ನನ್ನು ಬಿಟ್ಟು ಹೋಗಿದ್ದಾರೆ. ನನಗೆ ಅವರಿಂದ ತುಂಬಾ ನೋವಾಗಿತ್ತು. ನನ್ನನ್ನು ಅರ್ಥ ಮಾಡಿಕೊಳ್ಳುವವರು ಯಾರು ಇಲ್ಲ ಎಂದು ಅನಿಸುತ್ತಿತ್ತು” ಎಂದು ಹೇಳಿಕೊಂಡಿದ್ದಳು.

  • ಇಡೀ ಊರನ್ನೇ ತನ್ನ ಹೆಸರಿಗೆ ಮಾಡಿಕೊಂಡ ಪಂಚಾಯ್ತಿ ಸದಸ್ಯ..!- ನ್ಯಾಯಕ್ಕಾಗಿ ಹೋರಾಡುತ್ತಿರುವ ಗ್ರಾಮಸ್ಥರು

    ಇಡೀ ಊರನ್ನೇ ತನ್ನ ಹೆಸರಿಗೆ ಮಾಡಿಕೊಂಡ ಪಂಚಾಯ್ತಿ ಸದಸ್ಯ..!- ನ್ಯಾಯಕ್ಕಾಗಿ ಹೋರಾಡುತ್ತಿರುವ ಗ್ರಾಮಸ್ಥರು

    ಮಂಡ್ಯ: ಸ್ಥಳೀಯ ಶಾಸಕ, ಎಂಎಲ್‍ಸಿಯ ಬೆಂಬಲಿಗನಾಗಿರುವ ತಾಲೂಕು ಪಂಚಾಯಿತಿ ಸದಸ್ಯರೊಬ್ಬರು ಇಡೀ ಹಳ್ಳಿಯನ್ನೇ ತಮ್ಮ ತಾಯಿಯ ಹೆಸರಿಗೆ ರಿಜಿಸ್ಟಾರ್ ಮಾಡಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಜಿಲ್ಲೆಯ ನಾಗಮಂಗಲ ತಾಲೂಕಿನ ಮದಲಹಳ್ಳಿ ಗ್ರಾಮದ ಜನ ಹಲವು ವರ್ಷಗಳಿಂದ ಅಲ್ಲೇ ವಾಸಿಸುತ್ತಿದ್ದಾರೆ. ಆದರೆ ಇದೀಗ ಗ್ರಾಮದಲ್ಲಿರುವ ಮನೆ, ದೇವಾಲಯ, ಸರ್ಕಾರಿ ಶಾಲೆ ಸೇರಿದಂತೆ ಸಂಪೂರ್ಣ ಹಳ್ಳಿಯನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಕಳೆದುಕೊಳ್ಳುವ ಭೀತಿಯಲ್ಲಿ ತಮ್ಮ ಹಳ್ಳಿಯ ಉಳಿವಿಗಾಗಿ ಬೀದಿಗಿಳಿದು ಪ್ರತಿಭಟನೆಯನ್ನು ಕೂಡ ಮಾಡಿ ಹೋರಾಡುತ್ತಿದ್ದಾರೆ.

    ಗ್ರಾಮದ ಸರ್ವೆ ನಂಬರ್ 190/1 ರಲ್ಲಿ ಬರುವ 4 ಎಕರೆ 16 ಗುಂಟೆ ಜಮೀನು ಮುಜರಾಯಿ ಇಲಾಖೆಗೆ ಸೇರಿದ್ದು, ಶ್ರೀ ಲಕ್ಷ್ಮಿ ದೇವರ ದೇವಸ್ಥಾನಕ್ಕೆ ಜಮೀನನ್ನು ಅರ್ಚಕರ ಹೆಸರಿಗೆ ವಿಲ್ ಮಾಡಲಾಗಿತ್ತು. ಈ ನಾಲ್ಕು ಎಕರೆ 16 ಗುಂಟೆ ಜಮೀನಿನಲ್ಲಿ 1 ಎಕರೆ 16 ಗುಂಟೆ ಜಮೀನನ್ನು ನಿಯಮಾನುಸಾರ ಶಾಲೆ, ದೇವಸ್ಥಾನ ಮತ್ತು ಮನೆ ನಿರ್ಮಿಸಲು ಮದಲಹಳ್ಳಿ ಗ್ರಾಮಸ್ಥರಿಗೆ ಅವಕಾಶ ಮಾಡಿಕೊಡಲಾಗಿತ್ತು. ಹೀಗಾಗಿ ಮದಲಹಳ್ಳಿಯ ಸುಮಾರು 30 ಕುಟುಂಬಗಳು ಈ ಜಾಗದಲ್ಲಿ ಕಳೆದ 50 ವರ್ಷಗಳ ಹಿಂದೆಯೇ ಮನೆಕಟ್ಟಿಕೊಂಡು ವಾಸವಾಗಿದ್ದಾರೆ.

    ಆದರೆ ಇದೀಗ 4 ಎಕರೆ 16 ಗುಂಟೆ ಸಂಪೂರ್ಣ ಜಮೀನನ್ನು ಶಾಸಕ ಸುರೇಶ್‍ಗೌಡ ಬೆಂಬಲಿಗ ತಾಲೂಕು ಪಂಚಾಯಿತಿ ಸದಸ್ಯ ಹೇಮರಾಜ್ ತನ್ನ ತಾಯಿ ಲಕ್ಷ್ಮಿದೇವಿ ಹೆಸರಿಗೆ ಅಕ್ರಮವಾಗಿ ರಿಜಿಸ್ಟಾರ್ ಮಾಡಿದ್ದಾರೆ. ಅಕ್ರಮ ಎಸಗಲು ಲಕ್ಷ್ಮಿದೇವಿಯ ಸಹೋದರ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಶಿಕ್ಷಕ ಸಿ.ಜೆ.ಕುಮಾರ್ ತಮ್ಮ ಪ್ರಭಾವ ಬಳಸಿ ಹೇಮರಾಜ್ ಅವರಿಗೆ ಈ ಅಕ್ರಮ ಮಾಡಲು ಸಹಾಯ ಮಾಡಿದ್ದಾರೆ ಎಂದು ಮದಲಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

    ಗ್ರಾಮದ 40 ಕ್ಕೂ ಹೆಚ್ಚು ಮನೆಗಳು, ಸರ್ಕಾರಿ ಶಾಲೆ, ದೇವಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಗ್ರಾಮಸ್ಥರು ನಾಗಮಂಗಲ ತಹಶಿಲ್ದಾರ್ ನಂಜುಂಡಯ್ಯ ಅವರನ್ನು ಭೇಟಿ ಮಾಡಿ ರಕ್ಷಣೆಗೆ ಮನವಿ ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ನ್ಯಾಯ ದೊರಕಿಸಿಕೊಡುವುದಾಗಿ ತಹಶಿಲ್ದಾರ್ ನಂಜುಂಡಯ್ಯ ಭರವಸೆ ನೀಡುತ್ತಿದ್ದಾರೆ. ಆದರೆ ಗ್ರಾಮಸ್ಥರ ಆರೋಪ ನಿರಾಕರಿಸುತ್ತಿರುವ ಲಕ್ಷ್ಮಿದೇವಿಯ ತಮ್ಮ, ಶಿಕ್ಷಕ ಸಿ.ಜೆ.ಕುಮಾರ್ ಜಮೀನಿನ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ. ಲಕ್ಷ್ಮಿದೇವಿ ನನ್ನ ಅಕ್ಕನೇ ಆಗಿದ್ದರೂ ಜಮೀನು ಪರಬಾರೆಯಲ್ಲಿ ನಾನು ಯಾವ ಪ್ರಭಾವವನ್ನು ಬಳಸಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರ ವಿರುದ್ಧ ಮಾನನಷ್ಟ ಕೇಸ್ ಹಾಕಲಾಗುವುದು ಎಂದು ತಿಳಿಸಿದ್ದಾರೆ.

    ಇತ್ತ ಲಕ್ಷ್ಮಿದೇವಿಯ ಮಗ, ತಾಲೂಕು ಪಂಚಾಯ್ತಿ ಸದಸ್ಯ ಹೇಮರಾಜ್ ನಾನು ಕಾನೂನು ಬದ್ಧವಾಗಿ ನನ್ನ ತಾಯಿಯ ಹೆಸರಿಗೆ ಜಮೀನು ಕೊಂಡುಕೊಂಡಿದ್ದೇನೆ. ನನ್ನ ಬಳಿ ಎಲ್ಲ ಸೂಕ್ತ ದಾಖಲೆ ಇದೆ. ಅಲ್ಲಿ ಮನೆ ಕಟ್ಟಿರುವವರೇ ಅಕ್ರಮವಾಗಿ ಮನೆ ಕಟ್ಟಿದ್ದಾರೆ. ಈ ಬಗ್ಗೆ ನ್ಯಾಯಾಲಯದ ತೀರ್ಪಿಗೆ ನಾನು ಬದ್ಧನಾಗಿರುತ್ತೇನೆ ಅಂತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೆಕ್ಸ್ ವಿಡಿಯೋ ವೈರಲ್ ಆಗಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ!

    ಸೆಕ್ಸ್ ವಿಡಿಯೋ ವೈರಲ್ ಆಗಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ!

    ಭುವನೇಶ್ವರ್: ತನ್ನ ಪ್ರಿಯಕರ ಜೊತೆಗಿನ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ನಾಬರಂಗ್‍ಪುರದಲ್ಲಿ ನಡೆದಿದೆ.

    ಬಾಲಕಿ ತನ್ನದೇ ಏರಿಯಾದ ಯುವಕನನ್ನು ಪ್ರೀತಿಸುತ್ತಿದ್ದಳು. ಆತನ ಜೊತೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಳು. ದೈಹಿಕ ಸಂಪರ್ಕ ಬೆಳೆಸಿದ ಆ ವಿಡಿಯೋವನ್ನು ಯುವಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾನೆ.

    ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಇಂದು ಬೆಳಗ್ಗೆ ಹತ್ತಿರದ ಕಾಡಿಗೆ ಹೋಗಿ ಅಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ದೊರೆತ್ತಿದ್ದು, ನಂತರ ಆಕೆಯ ಮೃತದೇಹವನ್ನು ಮನೆಗೆ ಕರೆತರಲಾಗಿತ್ತು.

    ಗ್ರಾಮಸ್ಥರು ಆಕೆಯ ಮೃತದೇಹವನ್ನು ಕಾಡಿನಿಂದ ಆಕೆಯ ಮನೆಗೆ ತಂದರು. ನಂತರ ವೈರಲ್ ಆಗಿದ ಆಕೆಯ ವಿಡಿಯೋವನ್ನು ಗ್ರಾಮಸ್ಥರು ಬಾಲಕಿಯ ತಂದೆಗೆ ತೋರಿಸಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ನಿನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗ್ರಾಮಸ್ಥರು ಬಾಲಕಿಯ ತಂದೆಗೆ ತಿಳಿಸಿದ್ದಾರೆ.

    ಈ ಬಗ್ಗೆ ಬಾಲಕಿಯ ತಂದೆ ಜರಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಪ್ರಕರಣದ ನಂತರ ಯುವಕ ಪರಾರಿಯಾಗಿದ್ದಾನೆ. ಇನ್ನೂ ಬಾಲಕಿಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

  • ಖಡಕ್ ಕೆಲಸ, ಮೃದು ಮಾತಿನಿಂದಲೇ ಜಿಲ್ಲೆಯನ್ನು ಕಂಟ್ರೋಲ್ ಮಾಡ್ತಿರೋ ಜಿಲ್ಲಾಧಿಕಾರಿ ಶ್ರೀವಿದ್ಯಾ

    ಖಡಕ್ ಕೆಲಸ, ಮೃದು ಮಾತಿನಿಂದಲೇ ಜಿಲ್ಲೆಯನ್ನು ಕಂಟ್ರೋಲ್ ಮಾಡ್ತಿರೋ ಜಿಲ್ಲಾಧಿಕಾರಿ ಶ್ರೀವಿದ್ಯಾ

    ಮಡಿಕೇರಿ: ಹೆಣ್ಣುಮಗಳೊಬ್ಬಳು ಜಿಲ್ಲಾಧಿಕಾರಿಯಾಗಿ ಉತ್ತಮ ಕಾರ್ಯ ಮಾಡುವ ಮೂಲಕ ಇಡೀ ಜಿಲ್ಲೆಯನ್ನು ಕಂಟ್ರೋಲ್ ಗೆ ತೆಗೆದುಕೊಂಡು ಹೆಣ್ಮಕ್ಕಳಿಗೆ ಮಾದರಿಯಾಗಿದ್ದಾರೆ.

    ಕೇರಳ ಮೂಲದ ಪಿ.ಐ ಶ್ರೀವಿದ್ಯಾ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಖಡಕ್ ಕೆಲಸ ಹಾಗೂ ಮೃದು ಮಾತಿನಿಂದಲೇ ಜಿಲ್ಲೆಯಲ್ಲಿ ಜನಮನ್ನಣೆ ಗಳಿಸಿರೋ ಈ ಇವರಿಗೆ ಬಡವರು, ರೈತರಿಗೆ ಸಹಾಯ ಮಾಡೋದರಲ್ಲಿ ತುಂಬಾ ಸಂತಸ ಸಿಗುತ್ತಂತೆ.

    ಸಹಾಯ ಮಾಡಿದ ಬಳಿಕ ಅವರು ಕರೆ ಮಾಡಿ ಧನ್ಯವಾದ ಹೇಳೋದಕ್ಕಿಂತ ದೊಡ್ಡ ಸಂತೋಷ ಮತ್ತೊಂದು ಇಲ್ಲ ಎಂದು ವಿದ್ಯಾ ಹೇಳ್ತಾರೆ. ಇನ್ನು ಜಿಲ್ಲಾಧಿಕಾರಿ ಡ್ಯೂಟಿ ಜೊತೆಗೆ ಕುಟುಂಬ ನಿರ್ವಹಣೆ ಹೇಗೆ ಮಾಡಿಡುತ್ತೀರ ಎಂಬ ಪ್ರಶ್ನೆಗೆ, ಹಾಗೇನೂ ವ್ಯತ್ಯಾಸ ಕಾಣಿಸುತ್ತಿಲ್ಲ ನಂಗೆ. ಎಲ್ಲವನ್ನೂ ಸರಳವಾಗಿಯೇ ಹ್ಯಾಂಡಲ್ ಮಾಡುತ್ತೀನಿ. ನಾನು ಸ್ವತಂತ್ರವಾಗಿ ದುಡೀತಿದ್ದೀನಿ ಎನ್ನುವ ಆತ್ಮತೃಪ್ತಿ ನನಗಿದೆ ಎಂದು ಉತ್ತರಿಸಿದ್ದಾರೆ.

    ಎಲ್ಲಾ ಹೆಣ್ಮಕ್ಕಳೂ ಕೂಡಾ ತಮ್ಮ ಸ್ವಂತ ದುಡಿಮೆಯ ಬಗ್ಗೆ ಯೋಜನೆ ಮಾಡಬೇಕು. ಒಳ್ಳೆಯ ಉದ್ಯೋಗ ಪಡೆದುಕೊಳ್ಳಬೇಕು ಎಂದು ವಿದ್ಯಾ ಸಲಹೆ ನೀಡಿದ್ದಾರೆ.

  • ಬೌನ್ಸರ್ ಗಳು ನನ್ನನ್ನು ಪಬ್‍ನಿಂದ ಹೊರ ಹಾಕಿದ್ದೆ ಸ್ಫೂರ್ತಿ ಆಯ್ತು!

    ಬೌನ್ಸರ್ ಗಳು ನನ್ನನ್ನು ಪಬ್‍ನಿಂದ ಹೊರ ಹಾಕಿದ್ದೆ ಸ್ಫೂರ್ತಿ ಆಯ್ತು!

    ಬೆಂಗಳೂರು: ಕನ್ನಡ ನಾಡಿನಲ್ಲಿ `ಮೂರೇ ಮೂರು ಪೆಗ್ಗಿಗೆ’ ಹಾಡಿನ ಮೂಲಕ ಫೀನಿಕ್ಸ್ ನಂತೆ ಎದ್ದು ಬಂದ ಅದೇ ಚಂದನ್ ಶೆಟ್ಟಿ ಬಿಗ್ ಬಾಸ್ ವೇದಿಕೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಗ್ ಬಾಸ್ ಪಟ್ಟವನ್ನು ತಮ್ಮದಾಗಿಸಿಕೊಂಡ ಚಂದನ್ ಶೆಟ್ಟಿಗೆ ಚಿತ್ರರಂಗ ಹಾಗೂ ಸಹ ಸ್ಪರ್ಧಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

    ಕನ್ನಡಿಗರ ಮನಗೆದ್ದು ಬಿಗ್ ಬಾಸ್ ಪಟ್ಟ ಅಲಂಕರಿಸಿದ ಚಂದನ್ ಶೆಟ್ಟಿ ಸೋಮವಾರ ರಾತ್ರಿ ಪಬ್ಲಿಕ್ ಟಿವಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಚಂದನ್ ಅವರಿಗೆ ಶುಭಾಶಯ ತಿಳಿಸಲು ಅಭಿಮಾನಿಗಳ ದಂಡೇ ಆಗಮಿಸಿತ್ತು. ಇದೇ ಸಂದರ್ಭದಲ್ಲಿ ಬಂದಂತಹ ಅಭಿಮಾನಿಯೊಬ್ಬ ತಮ್ಮ ಹೊಸ ಗಿಟಾರ್ ಮೇಲೆ ಚಂದನ್ ಅವರ ಅಟೋಗ್ರಾಫ್ ಪಡೆಯಲು ಇಚ್ಛಿಸಿದ್ದರು. ಕೂಡಲೇ ಚಂದನ್ ಶೆಟ್ಟಿ ಅವರು ಅಭಿಮಾನಿಯ ಆಸೆ ಈಡೇರಿಸಿದ್ರು. ನಂತರ ಆ ಗಿಟಾರ್ ಹಿಡಿದು ಹಾಡನ್ನು ಕೂಡ ಹಾಡಿದ್ದರು. ಈ ಮೂಲಕ 108 ದಿನಗಳ ಬಳಿಕ ಗಿಟಾರ್ ಹಿಡಿದಿದ್ದು, ಇದು ನನಗೆ ಖುಷಿ ತಂದಿದೆ ಅಂತ ಅವರು ಹೇಳಿದ್ರು.

    ಮೊದಲ ಪಬ್ ಅನುಭವ ಹಂಚಿಕೊಂಡ ಶೆಟ್ರು: ಮೈಸೂರಿನಲ್ಲಿ ಚಂದನ್ ಗಿಟಾರ್ ಹಿಡಿದುಕೊಂಡು ಹೋಗಿದ್ದಾಗ ಒಂದು ಘಟನೆ ನಡೆದಿತ್ತು. ಈ ಘಟನೆಯಿಂದ ತುಂಬಾ ಬೇಸರವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ ಈ ಘಟನೆಯ ಬಗ್ಗೆ ಮೊದಲ ಬಾರಿ ಹೇಳಲು ಇಷ್ಟಪಡುತ್ತೇನೆ ಅಂದ ಶೆಟ್ರು, ಮೈಸೂರಿನ ಬಸ್ ಸ್ಟಾಪ್ ಹತ್ತಿರವಿರುವ ಪಬ್‍ಗೆ ನನ್ನ ಗಿಟಾರ್ ಹಿಡಿದುಕೊಂಡು ಹೋಗಿದ್ದೆ. ಅದು ನಾನು ಮೊದಲ ಬಾರಿಗೆ ಪಬ್‍ಗೆ ಹೋಗಿರುವುದು. ಅಲ್ಲಿ ಹೋದ ಮೇಲೆ ಕನ್ನಡ ಹಾಡನ್ನು ಹಾಕಲು ಹೇಳಿದೆ. ಆದರೆ ಅವರು ಒಪ್ಪಲಿಲ್ಲ. ನಾನು ತುಂಬಾನೇ ಒತ್ತಾಯ ಮಾಡಿದೆ ಆಗ ಬೌನ್ಸರ್ ಗಳು ನನ್ನನ್ನು ಹಿಡಿದು ಪಬ್‍ನಿಂದ ಹೊರ ಹಾಕಿದ್ದರು. ಅವರು ನನ್ನನ್ನು ಹೊರ ಹಾಕಿರುವುದೇ ಇಂದು ನನಗೆ ಸ್ಫೂರ್ತಿ ಆಯಿತು. ಈ ಘಟನೆಯಿಂದ ನಾನು ಬೇಸರಗೊಂಡೆ. ಆದರೆ ಅಂದೇ ನಾನು ಮುಂದಿನ ದಿನಗಳಲ್ಲಿ ನನ್ನ ಹಾಡುಗಳು ಈ ಪಬ್ ನಲ್ಲಿ ಪ್ಲೇ ಆಗ್ಲೇಬೇಕು ಎಂದು ಡಿಸೈಡ್ ಮಾಡಿದೆ. ಪರಿಣಾಮ ಈಗ ಇಡೀ ಕರ್ನಾಟಕ, ದುಬೈ, ಆಸ್ಟ್ರೇಲಿಯಾ ಹಾಗೂ ಜರ್ಮನಿಯ ಪಬ್ ಗಳಲ್ಲಿ ಈ ಹಾಡು ಪ್ಲೇ ಆಗುತ್ತಿರುವುದಕ್ಕೆ ನನಗೆ ಸಂತಸ ತಂದಿದೆ ಎಂದರು.

    105 ದಿನ ಬಿಗ್‍ಬಾಸ್ ಮನೆಯಲ್ಲಿ ಭರ್ಜರಿ ಮನರಂಜನೆ ನೀಡಿ ಜನರ ಮನ ಗೆದ್ದಿದ್ದ ಚಂದನ್ ಶೆಟ್ಟಿಯನ್ನು ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಮೆರವಣಿಗೆ ಮೂಲಕ ಸಾವಿರಾರು ಜನರೊಂದಿಗೆ ಆಗಮಿಸಿದ್ದರು. ನಗರದಲ್ಲಿರೋ ಆಂಜನೇಯ ದೇವಸ್ಥಾನಕ್ಕೆ ತೆರಳಿ ಚಂದನ್ ಶೆಟ್ಟಿ ಪೂಜೆ ಸಲ್ಲಿಸಿ ಪಬ್ಲಿಕ್ ಟಿವಿಗೆ ಆಗಮಿಸಿದ್ದರು.

  • ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

    ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

    ಬೆಂಗಳೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರು ತಿರಸ್ಕರಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ನಾನು ಬೇರೆ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಚೆನ್ನೈಗೆ ತೆರಳಿದ್ದೇನೆ. ಈ ಸುದ್ದಿ ಕೇಳಿ ಶಾಕ್ ಆಗಿದೆ. ಆದರೆ ನಾನು ಯಾವುದೇ ಮಸಾಜ್ ಪಾರ್ಲರ್ ಗೆ ಹೋಗಲ್ಲ, ಆಕೆ ಯಾರೆಂದು ಗೊತ್ತಿಲ್ಲ ಎಂದರು.

    ಯುವತಿ ಆರೋಪದ ಕುರಿತು ನನ್ನ ಕುಟುಂಬ ಸದಸ್ಯರು ಮಾಹಿತಿ ನೀಡಿದರು. ಆದರೆ ನಾವು ಕಲಾವಿದರಾಗಿರುವುದರಿಂದ ಹೆಚ್ಚು ಹೊರಗಡೆ ತೆರಳಲು ಸಾಧ್ಯವಾಗುವುದಿಲ್ಲ. ಅದ್ದರಿಂದ ನಾನು ಅವರನ್ನು ಮನೆಗೆ ಕರೆಸಿಕೊಳ್ಳುತ್ತೇನೆ. ಘಟನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರು? ಏನು? ಎಂಬ ಮಾಹಿತಿ ಇಲ್ಲ. ಬೆಂಗಳೂರಿಗೆ ಹಿಂದುರಿದ ತಕ್ಷಣ ಘಟನೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ನನ್ನ ಮೇಲಿನ ಆರೋಪ ಅಚ್ಚರಿ, ದಿಗ್ಭ್ರಮೆ ಉಂಟು ಮಾಡಿದೆ: ನಟ ಮಂಡ್ಯ ರಮೇಶ್

    ನಟ ಜಗ್ಗೇಶ್ ಟ್ವೀಟ್: ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಟ್ವೀಟ್ ಮಾಡಿ ಧೈರ್ಯ ಹೇಳಿದ್ದಾರೆ.

    ಆರೋಪದ ಸತ್ಯಾಂಶ ತಿಳಿಯಲು ಪಾರ್ಲರ್ ನ ಸಿಸಿಟಿವಿ ದೃಶ್ಯವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಆಗ ರಮೇಶ್ ಅವರು ಆಪಾದನೆಯಿಂದ ಪಾರಾಗುತ್ತಾರೆ ಎಂಬ ಆಶಾಭಾವನೆ ಇದೆ. ಬರಿ ಬಾಯಿ ಮಾತಿನ ಆರೋಪಗಳಿಗೆ ಮಹತ್ವ ಕೊಡಬೇಡಿ. ಇತ್ತೀಚೆಗೆ ಸುಳ್ಳು ಆಪಾದನೆ, ಕಾನೂನು ದುರ್ಬಳಕೆ ಹೆಚ್ಚಾಗುತ್ತಿದೆ. ಆರೋಪ ಸುಳ್ಳಾದರೆ ಯಾರೇ ಆದರು ಕಠಿಣ ಕ್ರಮ ಕೈಗೊಳ್ಳಬೇಕು. ಧೈರ್ಯದಿಂದಿರಿ ರಮೇಶ್ ದೇವರಿದ್ದಾರೆ. ಸತ್ಯ ಹೊರಬರುತ್ತೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ ಮಸಾಜ್ : ಮಂಡ್ಯ ರಮೇಶ್, ಸಾಧು ವಿರುದ್ಧ ಯುವತಿಯಿಂದ ದೂರು

    https://www.youtube.com/watch?v=dpHAGiEYHLY