Tag: ಪಬ್ಲಕ್ ಟಿವಿ

  • ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಕಂಪನಿಯಿಂದ ನೂರಾರು ಜನರಿಗೆ ಮೋಸ

    ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಕಂಪನಿಯಿಂದ ನೂರಾರು ಜನರಿಗೆ ಮೋಸ

    ಕೋಲಾರ: ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಮೂಲದ ಕಂಪನಿಯೊಂದು ನೂರಾರು ಜನರಿಗೆ ಮೋಸ ಮಾಡಿರುವ ಘಟನೆ ಕೋಲಾರ ತಾಲೂಕು ಕಿತ್ತಂಡೂರು ಗ್ರಾಮದಲ್ಲಿ ನಡೆದಿದೆ.

    ತಮಿಳುನಾಡು ತಂಜಾವೂರಿನ ಕ್ರೈಸ್ಟ್ ಇಂಟರ್ ನ್ಯಾಷನಲ್ ಟೂರಿಸಂ ಅಂಡ್ ಫೈನಾನ್ಸ್ ಗ್ರೂಪ್ ಆಫ್ ಕಂಪನಿ ಕಳೆದ ಮೂರು ತಿಂಗಳಿನಿಂದ ರೈತರಿಂದ 50 ಲಕ್ಷ ಹಣ ವಸೂಲಿ ಮಾಡಿ ಪರಾರಿಯಾಗಿದ್ದರು. ತಲೆಮರೆಸಿಕೊಂಡಿದ್ದ ಕಂಪನಿ ಮಾಲೀಕ ಸೆಂದಿಲ್ ಜಾಮೀನಿಗಾಗಿ ಕೋರ್ಟ್‍ಗೆ ಬಂದಿದ್ದು, ಈ ವೇಳೆ ಮೋಸ ಹೋಗಿದ್ದ ನೂರಾರು ಜನರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು. ತಮ್ಮ ಹಣ ತಮಗೆ ವಾಪಸ್ ನೀಡುವಂತೆ ಆಗ್ರಹಿಸಿದ್ರು.

    ಈ ಬಗ್ಗೆ ಫೈನಾನ್ಸ್ ಕಂಪನಿ ಮಾಲೀಕ ಸೆಂದಿಲ್ ಮಾತನಾಡಿ ನನ್ನ ಸಿಬ್ಬಂದಿ ಮೋಸ ಮಾಡಿದ್ದಾರೆ. ನನಗೆ ಜಾಮೀನು ಸಿಕ್ಕಿದೆ. ಒಂದು ತಿಂಗಳು ಕಾಲಾವಕಾಶ ಕೇಳಿದ್ದು ಜನರ ಹಣ ವಾಪಸ್ ಕೊಡುತ್ತೇನೆ ಎಂದು ಹೇಳಿದ್ದಾನೆ.

    ಸದ್ಯ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬ್ಲೇಡ್ ಕಂಪನಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

  • ಕೆರೆಯ ನೀರಿನ ಮಧ್ಯೆ ಮುಳ್ಳಿನ ಮೇಲೆ ಸ್ವಾಮೀಜಿ ಜಪ

    ಕೆರೆಯ ನೀರಿನ ಮಧ್ಯೆ ಮುಳ್ಳಿನ ಮೇಲೆ ಸ್ವಾಮೀಜಿ ಜಪ

    ಬಾಗಲಕೋಟೆ: ಸ್ವಾಮೀಜಿಯೊಬ್ಬರು ಎರಡು ದಿನಗಳಿಂದ ನೀರಿನಲ್ಲಿಯೇ ಮುಳ್ಳಿನ ಮೇಲೆ ಕುಳಿತು ಧ್ಯಾನ ಮಾಡಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಮಹಾ ಸಿದ್ದೇಶ್ವರ ಮಠದ ಪೀಠಾಧಿಪತಿ ಸುರೇಶ ಸ್ವಾಮೀಜಿ ಎರಡು ದಿನಗಳ ಹಿಂದೆ ಏಕಾಏಕಿ ಕಾರಣ ಹೇಳದೆ ತುಂಗಳ ಗ್ರಾಮದ ಹೊಸಕೆರೆಯಲ್ಲಿ ಮುಳ್ಳಿನೊಂದಿಗೆ ನೀರಿನಲ್ಲಿ ತೇಲುತ್ತ ಜಪಕ್ಕೆ ಮುಂದಾಗಿದ್ದರು.

    ಈ ಬಗ್ಗೆ ಸುದ್ದಿ ತಿಳಿಯುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ಸಹ ಸ್ವಾಮೀಜಿಯನ್ನ ನೋಡೋಕೆ ಆಗಮಿಸುತ್ತಿದ್ದ ದೃಶ್ಯ ಸರ್ವೆ ಸಾಮಾನ್ಯವಾಗಿತ್ತು. ನಿರಂತರ ನೀರಿನಲ್ಲಿ ಇರುವುದು ಆರೋಗ್ಯಕ್ಕೆ ಸರಿಯಲ್ಲ ಎಂಬ ಉದ್ದೇಶದಿಂದ ಇತ್ತ ತಹಶಿಲ್ದಾರರು ಮತ್ತು ಪೊಲೀಸ್ ಸಿಬ್ಬಂದಿ ಸ್ವಾಮೀಜಿಯನ್ನ ಹೊರಕರೆಯುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ.

    ಆದರೆ ಅಂದುಕೊಂಡಂತೆ ಸ್ವಾಮೀಜಿ ಸೋಮವಾರದಂದು ಭಕ್ತರ ಸಮ್ಮುಖದಲ್ಲಿ ಹೊರಬಂದಿದ್ದು, ಭಕ್ತರು ಹರ್ಷಗೊಂಡರು. ಇತ್ತ ಸುರೇಶ ಸ್ವಾಮೀಜಿ ಲೋಕ ಕಲ್ಯಾಣಾರ್ಥ ಕೆರೆಯಲ್ಲಿ ಜಪ ಮಾಡಿದ್ದೇನೆ ಎಂದು ಹೇಳಿದರು.

  • ಅಪ್ಪ ಅಮ್ಮನ ಜಗಳದಲ್ಲಿ ಮಗಳಿಗೆ ಬಿತ್ತು ಮಚ್ಚಿನೇಟು

    ಅಪ್ಪ ಅಮ್ಮನ ಜಗಳದಲ್ಲಿ ಮಗಳಿಗೆ ಬಿತ್ತು ಮಚ್ಚಿನೇಟು

    ತುಮಕೂರು: ಅಪ್ಪ ಅಮ್ಮನ ಜಗಳವನ್ನು ಬಿಡಿಸಲು ಹೋದ ಮಗಳಿಗೆ ಅಪ್ಪನಿಂದಲೇ ಮಚ್ಚಿನೇಟು ಬಿದ್ದಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಪಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    12 ವರ್ಷದ ಬೃಂದಾ ತೀವ್ರವಾಗಿ ಗಾಯಗೊಂಡಿರುವ ಮಗಳು. ಅಪ್ಪ ಅಮ್ಮನ ಜಗಳ ಬಿಡಿಸಲು ಹೋದಾಗ ಬೃಂದಾ ತಲೆಗೆ ಏಟು ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ.

    ಗ್ರಾಮದ ನಿವಾಸಿ ನಾಗರಾಜ್ ಹಾಗೂ ಪತ್ನಿ ಶಾಂತಮ್ಮ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಜಗಳ ಆರಂಭವಾಗಿದೆ. ಹೆಂಡತಿಯ ವರ್ತನೆಯಿಂದ ತೀವ್ರ ಆಕ್ರೋಶಗೂಂಡ ನಾಗರಾಜ್ ಅಲ್ಲೇ ಪಕ್ಕದಲ್ಲಿದ್ದ ಮಚ್ಚಿನಿಂದ ಹೊಡೆಯಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಹತ್ತಿರವಿದ್ದ ಬೃಂದಾ ಅಡ್ಡ ಬಂದಿದ್ದಾಳೆ. ಪತ್ನಿಗೆ ಬೀಸಿದ ಮಚ್ಚು ನೇರವಾಗಿ ಮಗಳ ತಲೆಗೆ ಬಂದು ಬಿದ್ದಿದ್ದೆ. ಪರಿಣಾಮ ಬೃಂದಾ ಗಂಭೀರವಾಗಿ ಗಾಯಗೂಂಡಿದ್ದಾಳೆ.

    ಕೂಡಲೇ ಅಕ್ಕ ಪಕ್ಕದ ಮನೆಯವರು ಬಂದು ಬಾಲಕಿಯನ್ನ ಸಮೀಪದ ಚೇಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು, ನಂತರ ಬೆಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿ ತಂದೆ ನಾಗರಾಜ್‍ನನ್ನು ಚೇಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಸದ್ದಿಲ್ಲದೇ ಚೀನಾಗೆ ಸರಬರಾಜಾಗುವ ಮೀನು, ಮಾಂಸ ಬ್ಯಾನ್

    ಸದ್ದಿಲ್ಲದೇ ಚೀನಾಗೆ ಸರಬರಾಜಾಗುವ ಮೀನು, ಮಾಂಸ ಬ್ಯಾನ್

    ಮಂಗಳೂರು: ಭಾರತದಲ್ಲಿ ಚೀನಾ ಐಟಂಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ನಮ್ಮಲ್ಲಿ ಚೀನಾ ವಸ್ತುಗಳ ನಿಷೇಧಕ್ಕಾಗಿ ಹೋರಾಟ ತೀವ್ರಗೊಂಡಿದೆ.

    ಇದೇ ಹೊತ್ತಲ್ಲಿ ಸದ್ದೇ ಇಲ್ಲದಂತೆ ಚೀನಾ ದೇಶಕ್ಕೆ ಭಾರತದಿಂದ ಸರಬರಾಜಾಗುವ ಮೀನು, ಮಾಂಸ ಮೇಲೆ ನಿಷೇಧವನ್ನು ವಿಧಿಸಲಾಗಿದೆ. ಕರಾವಳಿಯಿಂದ ರಫ್ತಾಗುವ ಆಹಾರ ಉತ್ಪನ್ನಗಳು, ಮೀನು ಹಾಗೂ ಮಾಂಸಕ್ಕೆ ಬ್ರೇಕ್ ಹಾಕಿದೆ.

    ಕರಾವಳಿಯಿಂದ ಬೃಹತ್ ಪ್ರಮಾಣದಲ್ಲಿ ರಿಬ್ಬನ್ ಫಿಶ್ ಹಾಗೂ ಕಪ್ಪೆ ಬೊಂಡಾಸ್ ಮೀನು ಚೀನಾಕ್ಕೆ ರಫ್ತಾಗುತ್ತಿತ್ತು. ಆದರೆ ಒಂದು ತಿಂಗಳಿಂದ ಚೀನಾದಲ್ಲಿ ಭಾರತದ ಮೀನುಗಳಿಗೆ ಮಾರುಕಟ್ಟೆಯೇ ಇಲ್ಲವಾಗಿದೆ. ಕರಾವಳಿಯಿಂದ 1.30 ಟನ್ ನಷ್ಟು ಮೀನು ಸರಬರಾಜು ಆಗುತ್ತಿತ್ತು. ಇದರಿಂದ ಮೀನಿನ ಬೆಲೆ ಕೂಡಾ ಪಾತಳಕ್ಕೆ ಇಳಿದಿದ್ದು ಮೀನುಗಾರರು ಕಂಗಾಲಾಗಿದ್ದಾರೆ.

  • ಹೆಡ್ ಮಾಸ್ಟರ್ ನಿಂದ್ಲೇ ರೇಪ್- ಗರ್ಭಿಣಿಯಾಗಿದ್ದಕ್ಕೆ ಗ್ರಾಮದಿಂದಲೇ ಬಾಲಕಿ ಕುಟುಂಬಕ್ಕೆ ಬಹಿಷ್ಕಾರ

    ಹೆಡ್ ಮಾಸ್ಟರ್ ನಿಂದ್ಲೇ ರೇಪ್- ಗರ್ಭಿಣಿಯಾಗಿದ್ದಕ್ಕೆ ಗ್ರಾಮದಿಂದಲೇ ಬಾಲಕಿ ಕುಟುಂಬಕ್ಕೆ ಬಹಿಷ್ಕಾರ

    ಭುವನೇಶ್ವರ್: ಮೂರು ವಾರಗಳ ಹಿಂದೆ ಶಾಲೆಯ ಮುಖ್ಯೋಪಾದ್ಯಾಯನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿ ಮಾಡಿ ಜೈಲಿಗೆ ಹೋದ ಘಟನೆ ಒಡಿಶಾದ ಕೊರತ್ ಪುತ್ ಜಿಲ್ಲೆಯಲ್ಲಿ ನಡೆದಿದೆ.

    ಮದುವೆಯ ಮುಂಚೆ ಬಾಲಕಿ ಗರ್ಭವತಿ ಆಗಿರುವ ವಿಷಯ ತಿಳಿದು ಗ್ರಾಮಸ್ಥರು ಬಾಲಕಿಯ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಅಕ್ಟೋಬರ್ ತಿಂಗಳ ಮೊದಲು ಕೊರತ್ ಪುತ್ ಜಿಲ್ಲೆಯ ನಂದಾಪುರ್ ಬ್ಲಾಕ್ ನ ಬಾಲ್ದಾ ಸರ್ಕಾರಿ ಶಾಲೆಯ ಮುಖ್ಯೋಪಾದ್ಯಾಯ 9ನೇ ತರಗತಿಯ ಬಾಲಕಿಯನ್ನು ಅತ್ಯಾಚಾರ ಮಾಡಿ ಅವಳನ್ನು ಗರ್ಭವತಿ ಮಾಡಿಸಿದ್ದಕ್ಕೆ ಆತನನ್ನು ಬಂಧಿಸಿದ್ದರು.

    ದೈಹಿಕವಾಗಿ ನನ್ನ ಜೊತೆ ನೀನು ಸಂಬಂಧವಿಟ್ಟುಕೊಳ್ಳಬೇಕು ಎಂದು ಬಾಲಕಿಗೆ ಕಿರುಕುಳ ನೀಡುತ್ತಿದ್ದನು. ಈ ವಿಷಯ ತಿಳಿದ ಬಾಲಕಿಯ ತಂದೆ ಮುಖ್ಯೋಪಾದ್ಯಾಯ ಬಿದುಬೂಷಣ್ ನಾಯಕ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

    5 ತಿಂಗಳು ಗರ್ಭಿಣಿ ಆಗಿದ್ದ ಬಾಲಕಿಯನ್ನು ಪೋಷಕರು ವೈದ್ಯರ ಹತ್ತಿರ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದರು. ಬಾಲಕಿಯ ಆರೋಗ್ಯದ ಬಗ್ಗೆ ಪೋಷಕರು ಚಿಂತಿಸುತ್ತಿರುವಾಗಲೇ, ಇತ್ತ ಮದುವೆಗೆ ಮೊದಲೇ ಬಾಲಕಿ ಗರ್ಭವತಿ ಆಗಿರುವುದಕ್ಕೆ ಗ್ರಾಮಸ್ಥರು ಬಾಲಕಿಯ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ ಮತ್ತು ಸಮುದಾಯದ ದಂಡ ಕಟ್ಟಲು ಹೇಳಿದ್ದಾರೆ.

    ನಾನು ಒಬ್ಬ ಕೂಲಿ ಕಾರ್ಮಿಕ. ಸಮುದಾಯದ ದಂಡ ಸುಮಾರು ರೂ. 30,000 ಇರುತ್ತದೆ. ನಾನು ಅಷ್ಟು ದೊಡ್ಡ ಮೊತ್ತ ಹೇಗೆ ಕೊಡಲಿ. ನನ್ನ ಮಗಳ ಆರೋಗ್ಯ ತಪಾಸಣೆಗೆ ನನಗೆ ದುಡ್ಡು ಬೇಕಾಗಿದೆ ಎಂದು ಬಾಲಕಿಯ ತಂದೆ ಮಾಧ್ಯಮದ ಮುಂದೆ ತಮ್ಮ ಅಳಲುತೋಡಿಕೊಂಡಿದ್ದಾರೆ.

    ಈ ಸಂಬಂಧದ ಬಗ್ಗೆ ಮಾತನಾಡಿದ ಕೊರತ್ ಪುತ್ ಜಿಲ್ಲಾ ಆಡಳಿತದ ಅಧಿಕಾರಿಯಾದ ಜಗನ್ನಾಥ್ ಸೋರೆನ್, ಬಾಲಕಿಯ ಕುಟುಂಬದವರಿಗೆ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ತಿಳಿಸಿದ್ದಾರೆ.

  • ರಾಜ್ಯ ಸರ್ಕಾರದಿಂದ ಎಸಿಬಿ ದುರುಪಯೋಗ: ಸಿಎಂ ವಿರುದ್ಧ ಬಿಜೆಪಿಯಿಂದ ಭಾರೀ ಪ್ರತಿಭಟನೆ

    ರಾಜ್ಯ ಸರ್ಕಾರದಿಂದ ಎಸಿಬಿ ದುರುಪಯೋಗ: ಸಿಎಂ ವಿರುದ್ಧ ಬಿಜೆಪಿಯಿಂದ ಭಾರೀ ಪ್ರತಿಭಟನೆ

    ಬೆಂಗಳೂರು: ರಾಜ್ಯ ಸರ್ಕಾರ ಬಿ.ಎಸ್ ಯಡಿಯೂರಪ್ಪ ಅವರನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಕೆ.ಜಿ.ರಸ್ತೆಯ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ಎಸಿಬಿ ಅಧಿಕಾರಿಗಳು ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಬಿಎಸ್‍ವೈ ವಿರುದ್ಧ ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ ಹೇರಿರುವ ವಿಚಾರ ಬೆಳಕಿಗೆ ಬಂದಿದೆ.

    ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಕೆಯಾದ ಅರ್ಧ ಗಂಟೆಗೆ ಎಫ್‍ಐಆರ್ ದಾಖಲು ಮಾಡಿದ್ದಾರೆ. 80 ಲಕ್ಷದ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಮುಂದೆ ಕೇಸ್ ಆಗಿ ಒಂದು ವರ್ಷ ಆಯ್ತು. ಸಿದ್ದರಾಮಯ್ಯ ನಿದ್ದೆ ಮಾಡ್ತಿದ್ದಾರೆ ತೊಂದರೆ ಕೊಡಬಾರದು ಅಂತಾ ಎಸಿಬಿ ಇನ್ನೂ ಎಫ್‍ಐಆರ್ ಹಾಕಿಲ್ಲ. ಎಸಿಬಿಗೆ ಸಿದ್ದರಾಮಯ್ಯನವರೇ ಹೆಡ್ ಆಗಿದ್ದಾರೆ ಎಂದು ಮಾಜಿ ಡಿಸಿಎಂ ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಟೀಕಿಸಿದರು.

    ಜನ ಗೇಟ್ ಪಾಸ್ ಕೊಡ್ತಾರೆ:  ಬಸವರಾಜೇಂದ್ರ ದೂರು ಕೊಟ್ಟಿದ್ದಕ್ಕೆ ಅವರನ್ನ ಸರ್ಕಾರ ಕೊಡಗಿಗೆ ತಕ್ಷಣ ಟ್ರಾನ್ಸ್ ಫರ್ ಮಾಡಿದೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಡಿ.ರೂಪಾ ಅವರನ್ನೂ ಟ್ರಾನ್ಸ್ ಫರ್ ಮಾಡಿದ್ರು. ಅಧಿಕಾರಿಗಳು ರಕ್ಷಣೆ ಇಲ್ಲದೆ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡರು. ನಿದ್ದೆ ಮಾಡೋ ಈ ಸರ್ಕಾರಕ್ಕೆ ಇನ್ನೂ ನಾಲ್ಕು ತಿಂಗಳು ಮಾತ್ರ ಇರೋದು. ಸರ್ಕಾರಕ್ಕೆ ಜನ ಗೇಟ್ ಪಾಸ್ ಕೊಡಲು ನಿರ್ಧರಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದರು.

    ಸಿಎಂ ಸಿದ್ದರಾಮಯ್ಯ 900 ಎಕರೆ ಡಿನೋಟಿಫೈ ಮಾಡಿದ್ರೆ ಅದು ರೀಡು ಅಂತೆ. ಅದೇ ಯಡಿಯೂರಪ್ಪ, ಕುಮಾರಸ್ವಾಮಿ, ಎಸ್‍ಎಂ ಕೃಷ್ಣ ಅವರು ಮಾಡಿದ್ರೆ ಡಿನೋಟಿಫಿಕೇಶನ್ ಅಂದ್ರ ಹೆಂಗೆ ಎಂದು ಪ್ರಶ್ನಿಸಿದರು. ಬಿಜೆಪಿ ನಾಯಕರ ಮೇಲೆ ಎಷ್ಟೇ ಕೇಸ್ ಹಾಕಿದ್ರೂ ನಾವು ಹೆದರಲ್ಲ. ಯಡಿಯೂರಪ್ಪ ಜೊತೆ ನಾವಿದ್ದೇವೆ ಎಂದು ಹೇಳಿದರು.

    ಕುರ್ಚಿ ಬಿಟ್ಟು ತೊಲಗಿ: ಸಿಎಂ ಅಧಿಕಾರಿಗಳಿಗೆ ಧಮ್ಕಿ ಹಾಕಿ ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ಹಾಕಿಸಿದ್ದಾರೆ. ಸಿಎಂ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಮಹದೇವಪ್ಪ ಅವರಿಗೆ ನೋಟಿಸ್ ನೀಡಿ. ಅಕ್ರಮ ಗಣಿಗಾರಿಕೆ ವಿರುದ್ಧ ದೂರಿನ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಎಸಿಬಿ ಮುಖ್ಯಸ್ಥ ಎಂ.ಎನ್ ರೆಡ್ಡಿಗೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ.

    ಬಸವರಾಜೇಂದ್ರ ಅವರು ಹೇಳಿದ್ದು ಸರಿಯಾಗಿದೆ. ಸಿಎಂ ಪ್ರತಿ ದಿನ ಅಧಿಕಾರಿಗಳಿಗೆ ಧಮ್ಕಿ ಹಾಕಿ ಬಿಜೆಪಿ ನಾಯಕರ ವಿರುದ್ಧ ಕೇಸ್ ಹಾಕಿಸಲು ಒತ್ತಡ ಹೇರುತ್ತಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು ತೊಲಗಿ ನಿಮ್ಮ ಪಾಪದ ಕೊಡ ತುಂಬಿದೆ ಎಂದು ಕಿಡಿಕಾರಿದರು.

    ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗ ಮಾಡಿಕೊಂಡು, ಇಲ್ಲದ್ದನ್ನ ಹುಡುಕಿ ಯಡಿಯೂರಪ್ಪ ವಿರುದ್ಧ ಎಸಿಬಿ ಮೂಲಕ ಕೇಸ್ ದಾಖಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿ. ಸೋಮಣ್ಣ ಟೀಕಿಸಿದರು.

    ಸಿಎಂ 550 ಎಕರೆ ಡಿನೋಟಿಫೈ ಮಾಡಿದ್ದಾರೆ. ಸಿದ್ದರಾಮಯ್ಯ ಅವರನ್ನ ಜೈಲಿಗೆ ಕಳಿಸಲು ಸಾಕಷ್ಟು ಪುರಾವೆಗಳಿದ್ದಾರೆ. ಅದಕ್ಕಿಂತ ಮೊದಲು ಬಿಜೆಪಿ ನಾಯಕರನ್ನ ಜೈಲಿಗೆ ಕಳಿಸಬೇಕು ಅಂತಾ ಸಿಎಂ ಎಸಿಬಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅರವಿಂದ ಲಿಂಬಾವಳಿ ಹೇಳಿದರು.

    ಪ್ರತಿಭಟನೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಅಶೋಕ್, ಮಾಜಿ ಸಚಿವ ವಿ ಸೋಮಣ್ಣ, ಸಂಸದೆ ಶೋಭಾ ಕರಂದ್ಲಾಜೆ, ಕಟ್ಟಾ ಸುಬ್ರಮಣ್ಯ ನಾಯ್ಡು, ಅರವಿಂದ್ ಲಿಂಬಾವಳಿ, ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಬೆಂಗಳೂರು ಬಿಜೆಪಿಯ ಜಿಲ್ಲಾಧ್ಯಕ್ಷ ಸುಬ್ಬಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    https://twitter.com/ShobhaBJP/status/898871570424143872