Tag: ಪಬ್ಲಿಕ್ ಟಿಬಿ

  • ರಾಮಮಂದಿರ ನಿರ್ಮಾಣಕ್ಕೆ 1 ಪೈಸೆ ಕೊಡಬೇಡಿ – ಮುಸ್ಲಿಮರಿಗೆ ಪಿಎಫ್‍ಐ ಕರೆ

    ರಾಮಮಂದಿರ ನಿರ್ಮಾಣಕ್ಕೆ 1 ಪೈಸೆ ಕೊಡಬೇಡಿ – ಮುಸ್ಲಿಮರಿಗೆ ಪಿಎಫ್‍ಐ ಕರೆ

    – ರಾಮಮಂದಿರ ಅಲ್ಲ ಅದು ಆರ್‍ಎಸ್‍ಎಸ್ ಮಂದಿರ
    – ಆರ್‍ಎಸ್‍ಎಸ್ ಕ್ಯಾನ್ಸರ್ ಇದ್ದ ಹಾಗೆ ಅದು ವಾಸಿ ಆಗಲ್ಲ

    ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ 1 ಪೈಸ್ ಕೊಡಬೇಡಿ. ಅದು ರಾಮಮಂದಿರ ಅಲ್ಲ ಆರ್‍ಎಸ್‍ಎಸ್ ಮಂದಿರ ಎಂದು ಪಿಎಫ್‍ಐನ ಜನರಲ್ ಸೆಕ್ರೆಟರಿ ಅನಿಸ್ ಅಹಮ್ಮದ್ ಹೇಳಿಕೆ ನೀಡಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

    ರಾಮ ಮಂದಿರ ನಿರ್ಮಾಣಕ್ಕೆ 1 ಪೈಸೆಯನ್ನೂ ಕೊಡಬೇಡಿ. ನಿಮ್ಮ ಮನೆ ಬಾಗಿಲಿಗೆ ಚಂದಾ ಸಂಗ್ರಹಕ್ಕೆ ಬಂದ್ರೆ ಹಣ ಕೊಡಬೇಡಿ ಎಂದು ಮುಸ್ಲಿಮರಿಗೆ ಕರೆ ನೀಡಿದ್ದಾರೆ.

    ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಬಿಟ್ಟು ಕೊಡಿ ಎಂದಿದ್ದರು. ಈಗ ಜಾಗ ಬಿಟ್ಟು ಕೊಟ್ಟಾಯ್ತು. ಆದರೆ ದೇಶದಲ್ಲಿ ಶಾಂತಿ ಸ್ಥಾಪನೆ ಆಯ್ತಾ? ಇನ್ನೂ ಕೂಡ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಆ್ಯಂಟಿ ಹಿಂದೂ ಸಂಘಟನೆ ನಮ್ಮದಲ್ಲ, ಆರ್‍ಎಸ್‍ಎಸ್ ಆ್ಯಂಟಿ ಹಿಂದೂ ಸಂಘಟನೆ ಎಂದು ಕಿಡಿಕಾರಿದ್ದಾರೆ.

    ದೇಶದಲ್ಲಿರೋ ಆರ್‍ಎಸ್‍ಎಸ್ ಕ್ಯಾನ್ಸರ್ ಇದ್ದ ಹಾಗೆ ಅದು ವಾಸಿ ಆಗಲ್ಲ. ಆಗಾಗ ದೇಶದ ಶಾಂತಿಯನ್ನ ಕದಡುವ ಕೆಲಸ ಮಾಡುತ್ತಿದೆ. ಹಿಂದೂ ವರ್ಸಸ್ ಮುಸ್ಲಿಂ ಅಲ್ಲ, ಮುಸ್ಲಿಂ ವರ್ಸಸ್ ಆರ್‍ಎಸ್‍ಎಸ್ ಪರಿಸ್ಥಿತಿ ನಿರ್ಮಾಣ ಆಗ್ತಿದೆ. ಪಿಎಫ್‍ಐನ ದುಷ್ಮನ್ ಏನೇ ಇದ್ದರೂ ಆರ್‍ಎಸ್‍ಎಸ್ ಮಾತ್ರ. ನಿಮ್ಮಲ್ಲಿರೋ ಪ್ರತಿ ಆರ್‍ಎಸ್‍ಎಸ್ ನಾಯಕರನ್ನೂ ಗುರುತಿಸಿ ಇಟ್ಕೊಳ್ಳಿ ಎಂದು ಧಮ್ಕಿ ಭಾಷಣ ಮಾಡಿದ್ದಾರೆ.

  • ಬೈಂದೂರಿನ ಸುರಭಿ ಶೆಟ್ಟಿಗೆ 625ಕ್ಕೆ 624-ಒಂದು ಅಂಕಕ್ಕಾಗಿ ಮರು ಮೌಲ್ಯಮಾಪನ

    ಬೈಂದೂರಿನ ಸುರಭಿ ಶೆಟ್ಟಿಗೆ 625ಕ್ಕೆ 624-ಒಂದು ಅಂಕಕ್ಕಾಗಿ ಮರು ಮೌಲ್ಯಮಾಪನ

    ಉಡುಪಿ: ಬಹುನಿರೀಕ್ಷಿತ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ರಿಸಲ್ಟ್ ಅನೌನ್ಸ್ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಸುರಭಿ ಶೆಟ್ಟಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದ್ದಾಳೆ. ಕಿರಿಮಂಜೇಶ್ವರದ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುರಭಿ ಶೆಟ್ಟಿ 625ಕ್ಕೆ 624 ಅಂಕಗಳನ್ನು ಸುರಭಿ ಪಡೆದಿದ್ದಾಳೆ.

    ಫಲಿತಾಂಶ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುರಭಿ, 624 ಅಂಕ ಬರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸಮಾಜ ವಿಜ್ಞಾನದಲ್ಲಿ 1 ಅಂಕ ಕಳೆದುಕೊಂಡಿದ್ದೇನೆ. ನನಗೆ ಫುಲ್ ಮಾರ್ಕ್ ಬರುವ ನಂಬಿಕೆ ಇತ್ತು. ಮರು ಮೌಲ್ಯಮಾಪನಾ ಅರ್ಜಿ ಹಾಕುತ್ತೇನೆ. ನನ್ನ ತಂದೆತಾಯಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಲಾಕ್‍ಡೌನ್ ಸಮಯದಲ್ಲಿ ಮೂರು ತಿಂಗಳು ಏಕಾಗ್ರತೆಯಿಂದ ಓದಲು ಬಹಳ ಕಷ್ಟವಾಯಿತು ಎಂದಿದ್ದಾಳೆ.

    ಪೋಷಕರ ಸಹಕಾರ ಬಹಳ ಮುಖ್ಯವಾಗಿದೆ. ನನ್ನ ಶಾಲೆಯ ಎಲ್ಲಾ ಟೀಚರ್ ಗಳಿಗೆ ಕೃತಜ್ಞತೆಗಳು. ನನಗೆ ನನ್ನ ಮೇಲೆ ನಿರೀಕ್ಷೆ ಇರಲಿಲ್ಲ. ನನ್ನ ಶಿಕ್ಷಕರಿಗೆ ನನ್ನ ಮೇಲೆ ಬಹಳ ನಿರೀಕ್ಷೆ ಇತ್ತು. ಅವರ ನಿರೀಕ್ಷೆ ನಿಜ ಆಗಿದೆ. ಗೆಳತಿಯರ ಜೊತೆ ನಡೆದ ಗ್ರೂಪ್ ಸ್ಟಡಿಯಿಂದ ಇಷ್ಟು ಅಂಕ ಬರಲು ಸಾಧ್ಯವಾಯಿತು ಎಂದು ಹೇಳಿದ್ದಾಳೆ.

  • ಸುಶಾಂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ!

    ಸುಶಾಂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ!

    ಮುಂಬೈ: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಟ್ವಿಟ್ಟರ್ ಕವರ್ ಪೇಜ್‌ನ ವರ್ಣಚಿತ್ರಕಾರನೂ ಆತ್ಮಹತ್ಯೆಗೆ ಶರಣಾಗಿದ್ದ ಎನ್ನುವ ವಿಚಾರ ರಿವೀಲ್ ಆಗಿದೆ.

    ಹೌದು. ಖ್ಯಾತ ವರ್ಣಚಿತ್ರಕಾರ ಡಚ್‍ನ ವಿನ್ಸೆಂಟ್ ವಾನ್ ಗೋ ಅವರ “ಸ್ಟಾರಿ ನೈಟ್ಸ್” ಎಂಬ ಪ್ರಸಿದ್ಧ ಚಿತ್ರಕಲೆಯನ್ನು ಸುಶಾಂತ್ ಸಿಂಗ್ ಅವರು ಟ್ವಿಟ್ಟರ್ ಕವರ್ ಪೇಜ್‌ನಲ್ಲಿ ಹಾಕಿಕೊಂಡಿದ್ದರು. ವಾನ್ ಗೋ 1889ರಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಗ “ಸ್ಟಾರಿ ನೈಟ್” ಅನ್ನು ಚಿತ್ರಿಸಿದ್ದರು. ನಂತರದ ಒಂದು ವರ್ಷ ಅಂದ್ರೆ 1890ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ.

    ಡಚ್ ವರ್ಣಚಿತ್ರಕಾರ ವಿನ್ಸೆಂಟ್ ವಾನ್ ಗೋ ಅವರು ಉತ್ತರ ಫ್ರಾನ್ಸ್‌ನ ಆವೆರ್ಸ್-ಸುರ್-ಓಯಿಸ್ ಹಳ್ಳಿಯ ಮನೆಯಲ್ಲಿ ವಾಸವಾಗಿದ್ದರು. ಆದರೆ 1890ರ ಜುಲೈ 29ರಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ಹೊಟ್ಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

    ಲಾಕ್‍ಡೌನ್ ಹಿನ್ನೆಲೆ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸುಶಾಂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಒಬ್ಬರೇ ವಾಸವಾಗಿದ್ದರು. ಇಂದು ಮನೆಗೆ ಕೆಲಸದವರು ಬಂದಾಗ ಸಾವಿನ ವಿಷಯ ಬೆಳಕಿಗೆ ಬಂದಿದೆ. ಲಾಕ್‍ಡೌನ್ ಹಿನ್ನೆಲೆ ಒಂಟಿಯಾಗಿದ್ದ ಸುಶಾಂತ್ ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗುತ್ತಿದೆ. ಪೊಲೀಸರು ಸುಶಾಂತ್ ಪಾರ್ಥಿವ ಶರೀರವವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಪೊಲೀಸರು ಸುಶಾಂತ್ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಹಾಗೆ ನೆರೆಹೊರೆಯವರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ವಿಮಾನ ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟು 15ರ ಬಾಲಕಿ ಜೊತೆ ಕೋಟ್ಯಧಿಪತಿ ಸೆಕ್ಸ್!

    ವಿಮಾನ ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟು 15ರ ಬಾಲಕಿ ಜೊತೆ ಕೋಟ್ಯಧಿಪತಿ ಸೆಕ್ಸ್!

    ವಾಷಿಂಗ್ಟನ್: 15 ವರ್ಷದ ಅಪ್ರಾಪ್ತ ಬಾಲಕಿಯ ಜೊತೆ ಸೆಕ್ಸ್ ಮಾಡಲು ತನ್ನ ಖಾಸಗಿ ವಿಮಾನವನ್ನು ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟಿದ್ದ ಕೋಟ್ಯಧಿಪತಿ ಉದ್ಯಮಿ ಈಗ ಕಂಬಿ ಏಣಿಸುತ್ತಿದ್ದಾನೆ.

    ಶ್ರೀಮಂತ ಉದ್ಯಮಿ, ನ್ಯೂ ಜೆರ್ಸಿಯ ಕೋಟ್ಯಧಿಪತಿ ಸ್ಟೀಫನ್ ಬ್ರಾಡ್ಲಿ ಮೆಲ್(53) ಮೆಲ್‍ಗೆ ಮೂರು ಮಕ್ಕಳಿದ್ದಾರೆ. ಆದರೂ ಕೂಡ ಆತ ಅಪ್ರಾಪ್ತ ಬಾಲಕಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದನು. 2018ರ ಡಿಸೆಂಬರ್ ನಲ್ಲಿ ಈ ಕೃತ್ಯ ಎಸಗಿದ್ದು, ಈಗ ನ್ಯಾಯಾಲಯ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಬಾಲಕಿಯು ಬಡ ಕುಟುಂಬದವಳು. ಆಕೆಯ ತಾಯಿ ಮೆಲ್ ಬಳಿ ತನ್ನ ಮಗಳಿಗೆ ವಿಮಾನ ಹಾರಾಟದ ತರಬೇತಿ ನೀಡಿ ಎಂದು ಮನವಿ ಮಾಡಿದ್ದರು. ಆದರೆ ತರಬೇತಿ ನೀಡುವ ನೆಪದಲ್ಲಿ ಉದ್ಯಮಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಸಂಬಂಧ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೊತೆಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

    ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಮೆಲ್ ಪರ ವಕೀಲರು, ಉದ್ಯಮಿ ಉತ್ತಮ ಗುಣ ನಡತೆಯುಳ್ಳ ವ್ಯಕ್ತಿ. ಆದರೆ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ. ಹೀಗಾಗಿ ಹಿಂದೊಮ್ಮೆ 2012ರಲ್ಲಿ ಸ್ನೇಹಿತರೊಂದಿದೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಮೇಲೆ ಕೂಡ ಹೀಗೆ ಮಾಡಿದ್ದ ಎಂದು ವಾದಿಸಿದ್ದರು. ಆದರೆ ನ್ಯಾಯಲಯವು ಈಗಾಗಲೇ ಆಟೋ ಪೈಲಟ್ ಮೋಡ್‍ನಲ್ಲಿ ಪ್ಲೇನ್ ಚಲಾಯಿಸಿದ್ದ ಆರೋಪಕ್ಕೆ ಮಾತ್ರ ಉದ್ಯಮಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇನ್ನೂ ಅಪ್ರಾಪ್ತ ಬಾಲಕಿಯೊಂದಿಗೆ ಸೆಕ್ಸ್ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.

    ಆರೋಪಿಯು ತನ್ನದೇ ಚಾರಿಟಿ ಸಂಸ್ಥೆಯನ್ನು ಹೊಂದಿದ್ದಾನೆ. ಜೊತೆಗೆ ಏರ್ ಲೈಫ್ ಲೈನ್ ವ್ಯವಸ್ಥೆಯನ್ನು ಕೂಡ ಆರಂಭಿಸಿದ್ದನು. ಈ ಸಂಸ್ಥೆಗಳ ಮೂಲಕ ಆರೋಗ್ಯ ಸಮಸ್ಯೆಯಿದ್ದ ಬಡ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದನು.

  • ಪತ್ನಿಯನ್ನು ಕೊಂದ ಪ್ರಸಿದ್ಧ ವೈದ್ಯ – 7 ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಜೀವಂತ ಇಟ್ಟ!

    ಪತ್ನಿಯನ್ನು ಕೊಂದ ಪ್ರಸಿದ್ಧ ವೈದ್ಯ – 7 ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಜೀವಂತ ಇಟ್ಟ!

    ಗೋರಖ್‍ಪುರ: ನಗರದ ಪ್ರಸಿದ್ಧ ವೈದ್ಯನೊಬ್ಬ ತನ್ನ ಮಾಜಿ ಪತ್ನಿಯನ್ನು ಕೊಂದು, ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ತಿಂಗಳುಗಟ್ಟಲೆ ಆಕೆಯ ಫೇಸ್‍ಬುಕ್ ಖಾತೆಯನ್ನು ಬಳಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿ ಧರ್ಮೇಂದ್ರ ಪ್ರತಾಪ್ ಸಿಂಗ್ ಬ್ಲಾಕ್‍ಮೇಲ್ ಮಾಡುತ್ತಿದ್ದಳು ಎನ್ನುವ ಕಾರಣಕ್ಕೆ ಕಳೆದ ಜೂನ್ ತಿಂಗಳಲ್ಲಿ ತನ್ನ ಮಾಜಿ ಪತ್ನಿ ರಾಖಿ ಅಲಿಯಾಸ್ ರಾಜೇಶ್ವರಿಯನ್ನು ನೇಪಾಳದ ಪ್ರೋಖ್ರಾ ಪರ್ವತದ ತುದಿಯಿಂದ ದೂಡಿ ಕೊಂದಿದ್ದ. ಬಳಿಕ ಅವಳು ಅಸ್ಸಾಂನಲ್ಲಿ ಇದ್ದಾಳೆ ಎಂದು ಬಿಂಬಿಸಲು ಆಕೆ ಬಳಸುತ್ತಿದ್ದ ಫೇಸ್‍ಬುಕ್ ಖಾತೆಯನ್ನು ಸಕ್ರಿಯವಾಗಿಟ್ಟಿದ್ದ.

    ಕಳೆದ ಜೂನ್ ತಿಂಗಳಲ್ಲಿ ರಾಖಿ ತನ್ನ ಎರಡನೇ ಪತಿ ಮನೀಶ್ ಜೊತೆ ನೇಪಾಳಕ್ಕೆ ತೆರಳಿದ್ದಳು. ಆದರೆ ಅಲ್ಲಿಂದ ಮನೀಶ್ ಮಾತ್ರ ವಾಪಾಸ್ ಬಂದಿದ್ದ. ಬಳಿಕ ರಾಖಿ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು. ಆದರೆ ರಾಖಿಯ ಫೇಸ್‍ಬುಕ್ ಖಾತೆಯಲ್ಲಿ ಆಕೆ ಅಸ್ಸಾಂನಲ್ಲಿ ಇರುವ ಹಾಗೆ ಅಪ್‍ಡೇಟ್ ಇದ್ದಿದ್ದರಿಂದ ಅವಳು ಅಲ್ಲಿಯೇ ಇದ್ದಾಳೆ ಎಂದು ಕುಟುಂಬಸ್ಥರು ಭಾವಿಸಿದ್ದರು.

    ನಾಪತ್ತೆ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಲೇ ಇದ್ದರು. ಈ ವೇಳೆ ರಾಖಿ ಎರಡನೇ ಪತಿ ಮನೀಶ್ ಸಿನ್ಹಾನನ್ನು ವಶಕ್ಕೆ ಪಡೆದು ನಿರಂತರ ವಿಚಾರಣೆ ನಡೆಸಿದಾಗ, ತಾನೋಬ್ಬನೆ ಊರಿಗೆ ವಾಪಸ್ ಬಂದೆ. ರಾಖಿ ನೇಪಾಳದಲ್ಲಿಯೇ ಉಳಿದುಕೊಂಡಳು ಎಂದು ಹೇಳಿದ್ದಾನೆ. ಬಳಿಕ ಈ ಕುರಿತು ದೀರ್ಘ ತನಿಖೆಗಳನ್ನು ನಡೆಸಿ ರಾಖಿಯ ಮೊಬೈಲ್ ಟ್ರಾಕ್ ಮಾಡಿದಾಗ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿದೆ.

    ಹಣ ಹಾಗೂ ಆಸ್ತಿಗಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದಳು ಎಂಬ ಕಾರಣಕ್ಕೆ ಆಕೆಯ ಮೊದಲ ಪತಿಯೇ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ಆಕೆಯನ್ನು ಕೊಂದಿರುವುದು ಬಯಲಾಗಿದೆ. ರಾಖಿ ಕುಡಿಯುತ್ತಿದ್ದ ಜ್ಯೂಸ್‍ಗೆ ಪ್ರಜ್ಞೆ ತಪ್ಪುವ ಮಾತ್ರೆ ಸೇರಿಸಿ ಬಳಿಕ ಆಕೆಯನ್ನು ಪರ್ವತದಿಂದ ದೂಡಿ ಕೊಲೆ ಮಾಡಿರುವ ಸತ್ಯಾಂಶ ಹೊರಬಿದ್ದಿದೆ.

    ಅಷ್ಟೇ ಅಲ್ಲದೆ ರಾಖಿ ಸಾವನ್ನಪ್ಪಿರುವ ವಿಷಯ ಮುಚ್ಚಿಡಲು ಆಕೆಯ ಮೊಬೈಲ್ ಬಳಸಿಕೊಂಡು ನಿರಂತರವಾಗಿ ಅವಳ ಫೇಸ್‍ಬುಕ್ ಖಾತೆಯಿಂದ ಅಪ್‍ಡೇಟ್ ಮಾಡುತ್ತಿದ್ದ ವಿಷಯವನ್ನು ಕೂಡ ಆರೋಪಿ ಬಾಯಿಬಿಟ್ಟಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಿನಿಂದ ಐಪಿಎಲ್ ಹರಾಜು ಪ್ರಕ್ರಿಯೆ ಶಿಫ್ಟ್

    ಬೆಂಗ್ಳೂರಿನಿಂದ ಐಪಿಎಲ್ ಹರಾಜು ಪ್ರಕ್ರಿಯೆ ಶಿಫ್ಟ್

    ಮುಂಬೈ: ಐಪಿಎಲ್ 12ನೇ ಆವೃತ್ತಿಗೆ ಬಿಸಿಸಿಐ ಸಿದ್ಧತೆ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಟೂರ್ನಿಯ ದಿನಾಂಕ ನಿಗದಿ ಮುನ್ನವೇ ಆಟಗಾರರ ಹರಾಜು ದಿನಾಂಕವನ್ನು ಬಿಸಿಸಿಐ ಘೋಷಣೆ ಮಾಡಿದೆ.

    ಡಿ.17 ಮತ್ತು 18 ರಂದು ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದ್ದು, ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲಿನಲ್ಲಿ ನಡೆಯುತ್ತಿದ್ದ ಹರಾಜು ಪ್ರಕ್ರಿಯೆಯನ್ನು ಜೈಪುರಕ್ಕೆ ಶಿಫ್ಟ್ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಬಿಸಿಸಿಐ ಐಪಿಎಲ್ ಆವೃತ್ತಿಯನ್ನು ಯುಎಇ ಅಥವಾ ದಕ್ಷಿಣ ಆಫ್ರಿಕಾದಲ್ಲಿ ನಡೆಸುವ ಚಿಂತನೆ ಮಾಡಲಾಗಿದೆ. ಈ ಕಾರಣದಿಂದಲೇ ಮೊದಲು ಹರಾಜು ದಿನಾಂಕವನ್ನು ಪ್ರಕಟ ಮಾಡಿದೆ ಎನ್ನಲಾಗಿದೆ.

    ಬಿಸಿಸಿಐ ಈ ತೀರ್ಮಾನಕ್ಕೆ ಕೆಲ ಫ್ರಾಂಚೈಸಿಗಳು ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದ್ದು, ಐಪಿಎಲ್ ಆವೃತ್ತಿ ದಿನಾಂಕ ಪ್ರಕಟಿಸಿದ ಬಳಿಕ ಆಟಗಾರರ ಹರಾಜು ಪ್ರಕ್ರಿಯೆ ನಡೆದರೆ ಉತ್ತಮ. ಇದರಿಂದ ಆಟಗಾರರ ಆಯ್ಕೆಗೆ ಅನುಕೂಲ ಆಗಲಿದೆ ಎಂದು ಕೆಲ ಫ್ರಾಂಚೈಸಿಗಳು ತಿಳಿಸಿದ್ದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

    ಈ ಹಿಂದೆ 2014ರ ಲೋಕಸಭಾ ಚುನಾವಣೆಯ ವೇಳೆಯೂ ಭಾರತದಿಂದ ದಕ್ಷಿಣ ಆಫ್ರಿಕಾಗೆ ಐಪಿಎಲ್ ಶಿಫ್ಟ್ ಮಾಡಲಾಗಿತ್ತು. ಚುನಾವಣೆಯ ವೇಳೆ ಕ್ರೀಡಾಂಗಣದ ಬಳಿ ಹೆಚ್ಚಿನ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಬಿಸಿಸಿಐ ಸಮಿತಿಗೆ ತಿಳಿಸಿತ್ತು. ಕಳೆದ ಬಾರಿ ಚಾಂಪಿಯನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದು, 2016 ಮತ್ತು 2017 ಆವೃತ್ತಿಗಳ ವೇಳೆ ವಿಧಿಸಲಾಗಿದ್ದ ನಿಷೇಧದ ಬಳಿಕವೂ ಚೆನ್ನೈ ಭರ್ಜರಿ ಕಮ್ ಬ್ಯಾಕ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಅಸಮಾಧಾನ ಹೊರಹಾಕಿದ ಪುತ್ರಿ

    ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಅಸಮಾಧಾನ ಹೊರಹಾಕಿದ ಪುತ್ರಿ

    ನವದೆಹಲಿ: ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪುತ್ರಿ ಶರ್ಮಿಷ್ಠ ಮುಖರ್ಜಿ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಣಬ್ ಮುಖರ್ಜಿ ಅವರ ಭೇಟಿಯನ್ನು ಈಗಾಗಲೇ ತಮ್ಮ ಸಿದ್ದಾಂತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಆರ್ ಎಸ್‍ಎಸ್ ಹಾಗೂ ಸಂಘ ಪರಿವಾರ ಬಿಂಬಿಸಿದೆ. ಸಮಾರಂಭದಲ್ಲಿನ ಭಾಷಣ ಬಹುಬೇಗ ಮರೆತು ಹೋಗುತ್ತದೆ. ಆದರೆ ಈ ದೃಶ್ಯಗಳು ಮಾಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

    ಮತ್ತೊಂದು ಟ್ವೀಟ್ ನಲ್ಲಿ ನಾಗಪುರದ ಈ ಭೇಟಿ ಹಲವು ಸುಳ್ಳು, ವದಂತಿಗಳನ್ನು ಹರಡುವುದಕ್ಕೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ. ಈ ನಡೆ ಹೆಚ್ಚು ಕಾಲ ಪರಿಣಾಮ ಬೀರಲಿದ್ದು, ಇದು ಆರಂಭ ಮಾತ್ರ ಎಂದು ಟ್ವೀಟ್ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಇಂದು ನಡೆಯಲಿರುವ ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಣಬ್ ಮುಖರ್ಜಿ ಅವರು ಈಗಾಗಲೇ ನಾಗಪುರಕ್ಕೆ ಆಗಮಿಸಿದ್ದಾರೆ. ಆದರೆ ಪ್ರಣಬ್ ಅವರ ಈ ನಿರ್ಧಾರಕ್ಕೆ ಹಲವು ಕಾಂಗ್ರೆಸ್ ನಾಯಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದರು.

    ಪ್ರಣಬ್ ಅವರ ನಿರ್ಧಾರ ಕುರಿತು ಸೋನಿಯಾ ಅವರ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿದ್ದ ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಸಹ ಟ್ವೀಟ್ ಮಾಡಿ ಪ್ರಣಬ್ ದಾ ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. ಇವೆಲ್ಲವುಗಳ ನಡುವೆಯೂ ಮಾಜಿ ರಾಷ್ಟ್ರಪತಿಗಳು ಕಾರ್ಯಕ್ರಮದಲ್ಲಿ ಭಾವಹಿಸುತ್ತಿದ್ದು, ಸಮಾರಂಭದಲ್ಲಿ ಅವರು ಮಾಡುವ ಭಾಷಣ ಕುತೂಹಲಕ್ಕೆ ಕಾರಣವಾಗಿದೆ.

    ಕಥಕ್ ನೃತ್ಯಪಟು ಆಗಿರುವ ಶರ್ಮಿಷ್ಠಾ ಮುಖರ್ಜಿ 2014ರಲ್ಲಿ ಕಾಂಗ್ರೆಸ್ ಸೇರಿದ್ದು, 2015ರಲ್ಲಿ ದೆಹಲಿಯ ಗ್ರೇಟರ್ ಕೈಲಾಸ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಪ್ ಅಭ್ಯರ್ಥಿ ವಿರುದ್ಧ ಸೋತು ಮೂರನೇ ಸ್ಥಾನ ಪಡೆದಿದ್ದರು. ಪ್ರಸ್ತುತ ದೆಹಲಿಯ ಕಾಂಗ್ರೆಸ್ಸಿನ ವಕ್ತಾರೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಪ್ರಧಾನ ಕಚೇರಿ ನಾಗ್ಪುರದಲ್ಲಿ ಸ್ವಯಂಸೇವಕರಿಗೆ ನಡೆಸುವ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಪ್ರಣಬ್ ಮುಖರ್ಜಿ ಅವರನ್ನು ಆರ್ ಎಸ್‍ಎಸ್ ಆಹ್ವಾನಿಸಿದೆ. 25 ದಿನಗಳ ಶಿಕ್ಷಾ ವರ್ಗ ಜೂನ್ 7ರಂದು ಮುಕ್ತಾಯವಾಗಲಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಣಬ್ ಮುಖರ್ಜಿ ಒಪ್ಪಿಗೆ ನೀಡಿರುವುದು ಎಲ್ಲರ ಹುಬ್ಬೇರಿಸಿದೆ.

     

  • ಪಾಕ್ ಉದ್ಧಟತನಕ್ಕೆ ಭಾರತದ ಪ್ರತ್ಯುತ್ತರ: ದಯವಿಟ್ಟು ದಾಳಿ ನಿಲ್ಲಿಸಿ ಎಂದ ಪಾಕ್ – ವಿಡಿಯೋ ನೋಡಿ

    ಪಾಕ್ ಉದ್ಧಟತನಕ್ಕೆ ಭಾರತದ ಪ್ರತ್ಯುತ್ತರ: ದಯವಿಟ್ಟು ದಾಳಿ ನಿಲ್ಲಿಸಿ ಎಂದ ಪಾಕ್ – ವಿಡಿಯೋ ನೋಡಿ

    ಶ್ರೀನಗರ: ಗಡಿ ಪ್ರದೇಶದಲ್ಲಿ ಭಾರತದ ಪ್ರತ್ಯುತ್ತರಕ್ಕೆ ಹೆದರಿ ನಡುಗಿದ ಪಾಕ್ ದಾಳಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿದೆ.

    ಈ ಕುರಿತು ಮಾಹಿತಿ ನೀಡಿರುವ ಗಡಿ ನಿಯಂತ್ರಣ ಪಡೆ (ಬಿಎಸ್‍ಎಫ್) ಹಿರಿಯ ಅಧಿಕಾರಿ, ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ದಾಳಿಗೆ ಭಾರತದ ಬಿಎಸ್‍ಎಫ್ ಯೋಧರು ತಕ್ಕ ಉತ್ತರ ನೀಡಿದ್ದಾರೆ. ಸದ್ಯ ಪಾಕ್ ಬಿಎಸ್‍ಎಫ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ದಾಳಿ ನಿಲ್ಲಿಸುವಂತೆ ಮನವಿ ಮಾಡಿದೆ ಎಂದು ಹೇಳಿದ್ದಾರೆ.

    ದೇಶಾದ್ಯಂತ ರಂಜಾನ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಸರ್ಕಾರ ಸೈನ್ಯಕ್ಕೆ ಸೂಚನೆ ನೀಡಿತ್ತು. ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಂಡ ಪಾಕ್ ಕಳೆದ ಮೂರು ದಿನಗಳಿಂದ ಅಪ್ರಚೋದಿತ ದಾಳಿ ನಡೆಸಿತ್ತು. ಪರಿಣಾಮ ಭಾರತದ ಇಬ್ಬರು ನಾಗರೀಕರು ಸೇರಿದಂತೆ ಜಮ್ಮುವಿನ ಅರ್ನಿಯಾ ಸೆಕ್ಟರ್ ನಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿ, ಒಬ್ಬರು ಯೋಧರು ಗಾಯಗೊಂಡಿದ್ದರು.

    ಸದ್ಯ ಬಿಎಸ್‍ಎಫ್ ಬಿಡುಗಡೆ ಮಾಡಿರುವ ವಿಡಿಯೋ ಪ್ರಕಾರ ಅಂತರಾಷ್ಟ್ರೀಯ ಗಡಿಯ ಉದ್ದಕ್ಕೂ ಪಾಕ್ ನಿರ್ಮಿಸಿದ್ದ ಎರಡು ಬಂಕರ್ ಮೇಲೆ ಭಾರತ ದಾಳಿ ನಡೆಸಿ ನಾಶಪಡಿಸಿದೆ. ಇದಕ್ಕೂ ಮುನ್ನ ಪಾಕ್ ಭಾರತದ ವಿರುದ್ಧ ಶೆಲ್ ದಾಳಿ ನಡೆಸಿತ್ತು.

    ಮೇ 15 ನಡೆದ ದಾಳಿಯಲ್ಲಿ ಯೋಧ ದೇವೇಂದ್ರ ಸಿಂಗ್ ಹುತಾತ್ಮರಾಗಿದ್ದರು. ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ 700 ಅಪ್ರಚೋದಿತ ದಾಳಿಯಲ್ಲಿ 18 ರಕ್ಷಣಾ ಪಡೆಯ ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿ ಸಾವನ್ನಪ್ಪಿದ್ದಾರೆ.

  • ಸ್ವೀವ್ ಸ್ಮಿತ್, ವಾರ್ನರ್ ಐಪಿಎಲ್ ಭವಿಷ್ಯ ಶೀಘ್ರವೇ ನಿರ್ಧಾರ

    ಸ್ವೀವ್ ಸ್ಮಿತ್, ವಾರ್ನರ್ ಐಪಿಎಲ್ ಭವಿಷ್ಯ ಶೀಘ್ರವೇ ನಿರ್ಧಾರ

    ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಕಳ್ಳಾಟ ಬಯಲಾದ ಬಳಿಕ ನಾಯಕ ಸ್ಮಿತ್ ಹಾಗೂ ಉಪನಾಯಕ ವಾರ್ನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣ ಏಪ್ರಿಲ್ 6 ರಂದು ಆರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕೆಲ ಬದಲಾವಣೆಗೆ ಕಾರಣವಾಗಲಿದೆ ಎನ್ನಲಾಗಿದೆ.

    ರಾಜಸ್ಥಾನ ರಾಯಲ್ಸ್ ತಂಡ ನಾಯಕತ್ವ ವಹಿಸುವ ಸ್ಮಿತ್ ಹಾಗೂ ಸನ್‍ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವ ವಹಿಸುವ ಡೇವಿಡ್ ವಾರ್ನರ್ ಸ್ಥಾನಗಳು ಬದಲಾಗುವ ಸಾಧ್ಯತೆಗಳಿವೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ, ಈ ಘಟನೆ ಬಹಳ ಗಂಭೀರವಾಗಿದ್ದು, ಐಸಿಸಿ ಸಮಿತಿ ತೆಗೆದುಕೊಳ್ಳುವ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

    2018ರ ಐಪಿಎಲ್ ಪಂದ್ಯಗಳು ಏಪ್ರಿಲ್ 7 ರಿಂದ ಆರಂಭವಾಗುತ್ತಿರುವುದರಿಂದ ಈ ಅವಧಿಗೂ ಮುನ್ನವೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ವೇಳೆಯಲ್ಲಿ ನಿರ್ಧಾರ ಪ್ರಕಟಿಸುವುದು ಸೂಕ್ತ ಕ್ರಮವಲ್ಲ, ತನಿಖೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ಬಿಸಿಸಿಐ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಸಮಿತಿ ಕೈಗೊಳ್ಳುವ ತೀರ್ಮಾನ ನಿರೀಕ್ಷಿಸುತ್ತಿರುವುದಾಗಿ ತಿಳಿಸಿದ್ದಾರೆ.

    ಪ್ರಕರಣದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ರಾಜಸ್ತಾನ ರಾಯಲ್ಸ್ ತಂಡದ ಮುಖ್ಯಸ್ಥ ರಂಜಿತ್ ಬಾರ್ತಕುರ್, ಸ್ಮಿತ್ ಅವರ ಬಗ್ಗೆ ನಿರ್ಧಾರ ಕೈಗೊಳ್ಳುವ ಮುನ್ನ ಬಿಸಿಸಿಐ ನಿರ್ದೇಶನಗಳನ್ನು ಪಡೆಯುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕ್ರಿಕೆಟ್ ಆಟಕ್ಕೆ ಕಳಂಕ ತರುವ ಘಟನೆಗಳನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಕುರಿತು ಇದುವರೆಗೆ ಹೈದರಾಬಾದ್ ತಂಡ ಮಾಲೀಕರು ಯಾವುದೇ ಪ್ರತಿಕ್ರಿಯೇ ನೀಡಿಲ್ಲ.

    ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಕ್ಯಾಮರಾನ್ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಟಿವ್ ಸ್ಮಿತ್ ಹಾಗೂ ಉಪ ನಾಯಕ ಡೇವಿಡ್ ವಾರ್ನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್‍ನ ಇನ್ನು 2 ದಿನದ ಆಟ ಬಾಕಿಯಿರುವಾಗಲೆ ರಾಜೀನಾಮೆ ನೀಡಿದ್ದು, ವಿಕೇಟ್ ಕೀಪರ್ ಟೈಮ್ ಪೈನ್ ತಂಡದ ಉಸ್ತುವಾರಿ ನಾಯಕರಾಗಲಿದ್ದಾರೆ. ಇಬ್ಬರು ತಮ್ಮ ಸ್ಥಾನದಿಂದ ಕೆಳಗಿಳಿದಿರುವ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಸಿಇಒ ಜೇಮ್ಸ್ ಸುಟರ್‍ಲ್ಯಾಂಡ್ ಸ್ಪಷ್ಟಪಡಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸದ್ಯ ಐಸಿಸಿ ಸ್ಮಿತ್ ಗೆ ಪಂದ್ಯದ 100% ದಂಡ, ಒಂದು ಪಂದ್ಯ ನಿಷೇಧ ಹಾಗೂ ಕ್ಯಾಮರಾನ್ ಬ್ಯಾನ್‍ಕ್ರಾಪ್ಟ್ ಗೆ ಪಂದ್ಯದ 75% ದಂಡ, 3 ಡಿಮೆರಿಟ್ ಅಂಕಗಳನ್ನು ನೀಡಿದೆ.

    ರಾಜಸ್ಥಾನ ರಾಯಲ್ಸ್ ತಂಡ 2 ವರ್ಷದ ನಿಷೇಧದ ಬಳಿಕ ಐಪಿಎಲ್ ಗೆ ಆಗಮಿಸುತ್ತಿದೆ. ಈ ಹಿಂದಿನ 2014 ಮತ್ತು 15 ಸರಣಿಗಳಲ್ಲಿ ಸ್ಮಿತ್ ಆರ್ ಆರ್ ತಂಡವನ್ನು ಮುನ್ನಡೆಸಿದ್ದರು. ಈ ಬಾರಿಯ ಹರಾಜು ವೇಳೆಯು ತಂಡದ ಮಾಲೀಕರು ಸ್ಮಿತ್ ರನ್ನು ಉಳಿಸಿಕೊಂಡಿದ್ದರು. 2017 ರಲ್ಲಿ ಪುಣೆ ತಂಡದ ನಾಯಕತ್ವ ವಹಿಸಿದ್ದ ಸ್ಮಿತ್, ತಂಡ ಫೈನಲ್ ಪ್ರವೇಶ ಪಡೆಯುವುದರಲ್ಲಿ ಪ್ರಮುಖ ಸ್ಥಾನ ವಹಿಸಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪ್ರಶಸ್ತಿ ಪಡೆದಿತ್ತು.

    ನಡೆದಿದ್ದು ಏನು?
    ಆಸೀಸ್ ಆರಂಭಿಕ ಆಟಗಾರ ಕ್ಯಾಮರಾನ್ ಬ್ಯಾನ್‍ಕ್ರಾಪ್ಟ್ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದ ವೇಳೆ ಚೆಂಡನ್ನ ವಿರೂಪಗೊಳಿಸಿದ್ದರು. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದಿನದಾಟದ ಬಳಿಕ ಮಾತನಾಡಿದ ಆಸೀಸ್ ನಾಯಕ ಸ್ಮಿತ್ ಹಾಗೂ ಬ್ಯಾನ್‍ಕ್ರಾಫ್ಟ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದ ಆಸೀಸ್ ಆಟಗಾರ – ಸ್ಮಿತ್ ನಾಯಕತ್ವ ತಲೆದಂಡ

  • ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ಹುಬ್ಬಳ್ಳಿ: ನಟ ಉಪೇಂದ್ರ ತಮ್ಮ `ಪ್ರಜಾಕೀಯ’ (ಕೆಪಿಜೆಪಿ) ಪಕ್ಷದ ಅಧಿಕೃತ ಚಿಹ್ನೆ “ಆಟೋ ರಿಕ್ಷಾ” ಎಂದು ಘೋಷಣೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಾ ಪಕ್ಷದ ಚಿಹ್ನೆಯಾಗಿ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ. ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಶಂಕರ್ ನಾಗ್ ಸರ್ ಅವರಿಗೆ ಇದನ್ನು ಅರ್ಪಣೆ ಮಾಡುತ್ತೇನೆ. ಶಂಕರ್ ನಾಗ್ ಅವರು ಹಲವು ಕನಸುಗಳನ್ನು ಹೊಂದಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ಭಾರತಕ್ಕೆ ಮೆಟ್ರೋ ರೈಲು, ಬಡವರಿಗೆ ಕಡಿಮೆ ದರದಲ್ಲಿ ಮನೆ ನಿರ್ಮಾಣ ಮಾಡುವಂತಹ ಹಲವು ಯೊಜನೆಗಳನ್ನು ಹೊಂದಿದ್ದರು. ಅವರ ಆಟೋ ರಾಜ ಸಿನಿಮಾ ಮೂಲಕ ಎಲ್ಲರಿಗೂ ಪ್ರೇರಣೆ, ಅವರ ಚಿಂತನೆಗಳಿಂದ ಸ್ಫೂರ್ತಿ ಪಡೆದು ನಾನು ಖಾಕಿ ಬಟ್ಟೆ ಧರಿಸಿ, ಪಕ್ಷ ಸ್ಥಾಪನೆ ಮಾಡಿದೆ ಎಂದು ಹೇಳಿದರು.

    ಇನ್ನು ಪಕ್ಷದ ಚಿಹ್ನೆಯ ಕುರಿತು ವಿವರಣೆ ನೀಡಿದ ಅವರು, ಆಟೋ ಎಂಬ ಪದಕ್ಕೆ ವಿಶಾಲ ಅರ್ಥವಿದೆ. ನಮಗೇ ನಾಯಕರು ಬೇಡ, ಕಾರ್ಮಿಕರು ಬೇಕು ಎಂಬ ಹಿನ್ನೆಲೆಯಲ್ಲಿ ಖಾಕಿ ಧರಿಸಿ ಕೆಪಿಜಿಪಿ ಪಕ್ಷ ಸಂಘಟನೆ ಮಾಡಿದ್ದೇವೆ. ಆಟೋ ಎಂಬ ಪದ ಮಿಷನ್, ಆಟೋಮೆಟಿಕ್ ಆಂದರೆ ಸ್ವಯಂ ಚಾಲಿತವಾದದ್ದು ಎಂಬ ಅರ್ಥ ಹೊಂದಿದೆ. ಸರ್ಕಾರವು ಹಾಗೆಯೇ ಕಾರ್ಯ ನಿರ್ವಹಿಸಬೇಕು. ಒಂದು ದೊಡ್ಡ ಕಾಪೋರೇಟ್ ಸಂಸ್ಥೆ ಹೇಗೆ ಭ್ರಷ್ಟಚಾರ ಮುಕ್ತವಾಗಿ ನಡೆಯುತ್ತದೆ. ಅಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಕೋಟ್ಯಾಂತರ ಹಣ, ಬಜೆಟ್ ಹೊಂದಿದ್ದರೂ ಸರ್ಕಾರದಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಮಾಡುವ ನಾಯಕರು ಬೇಡ. ಜನರ ಸಂಪರ್ಕದಲ್ಲಿರುವ ಸೇವಕರು ಬೇಕಾಗಿದ್ದಾರೆ. ಪ್ರಜಾಕೀಯದ ಮೂಲಕ ಆಡಳಿತದಲ್ಲಿ ಪರದರ್ಶಕತೆ ತರುವುದು ನಮ್ಮ ಉದ್ದೇಶವಾಗಿದೆ. ಆದೇ ರೀತಿ ಸರ್ಕಾರವು ಭ್ರಷ್ಟಚಾರ ಮುಕ್ತವಾಗಿ ನಡೆಯಬೇಕು ಎಂದರು.

    ರಾಜಕೀಯದಲ್ಲಿ ಹಣ, ಜಾತಿ, ಜನರ ಮನೋಭಾವನೆ ವಿಷಯಗಳನ್ನು ಇಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಬದಲಾಗಬೇಕಿದೆ. ಅದರಿಂದಲೇ ಪ್ರಜಾಕೀಯ ಎಂಬ ವೇದಿಕೆ ಸೃಷ್ಟಿಯಾಗಿದೆ. ಪ್ರತಿಯೊಬ್ಬರಲ್ಲೂ ಹಲವಾರು ಯೋಜನೆ, ಚಿಂತನೆಗಳು ಇರುತ್ತವೆ. ಅವುಗಳನ್ನು ನಮಗೆ ತಿಳಿಸಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

    ಚುನಾವಣೆಯಲ್ಲಿ ವಿಷಯಾಧಾರಿತವಾದ ಅಂಶಗಳ ಮೇಲೆ ಚರ್ಚೆ ನಡೆದು, ಅವುಗಳ ಮೇಲೆ ಮತದಾನ ಮಾಡುವ ನಿರ್ಣಯ ಮಾಡಬೇಕಿದೆ. ತಂತ್ರಜ್ಞಾನವನ್ನು ಬಳಸಿ ಪ್ರತಿಯೊಂದು ಕಾರ್ಯವನ್ನ ಪರದರ್ಶಕವಾಗಿ ಮಾಡಬಹುದು. ಪ್ರತಿ ಸರ್ಕಾರಿ ಅಧಿಕಾರಿಯ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು. ಸಮಸ್ಯೆಗಳ ಕುರಿತು ಚರ್ಚೆ ಮಾಡುವ ಬದಲು ಅವುಗಳಿಗೆ ಪರಿಹಾರ ಹುಡುಕುವ ಕಾರ್ಯ ನಡೆಯಬೇಕಿದೆ. ಪಕ್ಷ ಪ್ರಣಾಳಿಕೆಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅವುಗಳ ಕುರಿತು ವಿಸ್ತಾರ ಚರ್ಚೆ ಮಾಡಲಾಗುತ್ತದೆ. ನಾನು ಸಾಮಾನ್ಯ ಪ್ರಜೆಯಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.