Tag: ಪಬ್ಲಿಕ್ ಟಿವಿ Alcohol

  • ಅಬಕಾರಿ ಅಧಿಕಾರಿಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಉಪ ಆಯುಕ್ತರಿಂದ ನೋಟಿಸ್

    ಅಬಕಾರಿ ಅಧಿಕಾರಿಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಉಪ ಆಯುಕ್ತರಿಂದ ನೋಟಿಸ್

    – 5 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ಜಪ್ತಿ
    – ಲಾಕ್ ಡೌನ್ ನಿಯಮ ಉಲ್ಲಂಘಿಸಿ ತಡರಾತ್ರಿವರೆಗೆ ಮದ್ಯ ಹಂಚಿಕೆ

    ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯಲು ಸಾಥ್ ನೀಡುತ್ತಿದ್ದ ಅಬಕಾರಿ ಇನ್ಸ್‌ಪೆಕ್ಟರ್ ಗೆ, ಅಬಕಾರಿ ಉಪ ಆಯುಕ್ತೆ ಲಕ್ಷ್ಮೀ ಎಂ ನಾಯಕ್ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ.

    ಲಾಕ್ ಡೌನ್ ಹಿನ್ನೆಲೆ ರಾಯಚೂರು‌ ಜಿಲ್ಲೆಯಲ್ಲಿ ವಾರಕ್ಕೆ ಎರಡು ದಿನ ಮಾತ್ರ ಅದೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರ ವರೆಗೆ ಮದ್ಯದಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ವಾರಪೂರ್ತಿ ಅಕ್ರಮ ಮದ್ಯ ಮಾರಾಟ ನಡೆಯಲು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳೇ ಸಾಥ್ ನೀಡಿದ್ದಾರೆ. ಅಬಕಾರಿ ಉಪ ಆಯುಕ್ತರ ದಾಳಿ ವೇಳೆ ಅಬಕಾರಿ ಇನ್ಸ್ ಪೆಕ್ಟರ್ ಬಣ್ಣ ಬಯಲಾಗಿದೆ.

    ರಾಯಚೂರಿನ ರಾಜ್ಯ ಪಾನೀಯ ನಿಗಮ ನಿಯಮಿತ ಗೋದಾಮಿನಿಂದಲೇ ಕಳ್ಳವ್ಯವಹಾರ ನಡೆದಿದ್ದು, ಅಬಕಾರಿ ಇನ್ಸ್ ಪೆಕ್ಟರ್ ಮೋನಪ್ಪ, ಗೋದಾಮಿನ ವ್ಯವಸ್ಥಾಪಕ ಶಿವಪ್ಪರಿಂದ ಅಕ್ರಮ ದಂಧೆ ನಡೆದಿರುವುದು ಬಯಲಾಗಿದೆ. ಲಾಕ್ ಡೌನ್ ಹಿನ್ನೆಲೆ ಅಧಿಕಾರಿಗಳಿಂದಲೇ ಅಕ್ರಮ ಮಾರಾಟಕ್ಕೆ ಮದ್ಯ ಸರಬರಾಜಾಗುತ್ತಿರುವುದು ಬೆಳಕಿಗೆ ಬಂದಿದೆ. ಲಾಕ್ ಡೌನ್ ನಿಯಮ ಮೀರಿ ತಡರಾತ್ರಿವರೆಗೆ ಮದ್ಯ ಹಂಚಿಕೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತೆ ಲಕ್ಷ್ಮೀ ಎಂ.ನಾಯಕ ಗೋದಾಮಿನ ಮೇಲೆ ದಾಳಿ ಮಾಡಿ ವಾಹನಗಳಿಗೆ ತುಂಬಿದ್ದ ಮದ್ಯವನ್ನ ಅನ್‍ಲೋಡ್ ಮಾಡಿಸಿದ್ದಾರೆ. ಅಬಕಾರಿ ಇನ್ಸ್ ಪೆಕ್ಟರ್ ಮೋನಪ್ಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದನ್ನು ಓದಿ: ದಕ್ಷಿಣ ಕನ್ನಡದಲ್ಲಿ ಜೂನ್ 20ರವರೆಗೆ ಲಾಕ್‍ಡೌನ್ ಮುಂದುವರಿಕೆ

    ಅಕ್ರಮಕ್ಕೆ ಆಸ್ಪದ ನೀಡಿ ಕರ್ತವ್ಯ ಲೋಪ ಎಸಗಿದ್ದಲ್ಲದೆ, ಅಧಿಕಾರಿಗಳಿಗೆ ಮಾಹಿತಿ ನೀಡದೆ ಮನಬಂದತೆ ತಡರಾತ್ರಿವರೆಗೆ ಮದ್ಯ ಹಂಚಿಕೆ ಮಾಡಿರುವ ಆರೋಪ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಮದ್ಯ ಹೊರಗಡೆಗೆ ಸಾಗಿಸುತ್ತಿದ್ದ ಎರಡು ವಾಹನ, 5 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಮದ್ಯದಂಗಡಿ ಮಾಲೀಕರಿಗೆ ಮದ್ಯ ವಿತರಣೆ ನೆಪದಲ್ಲಿ ಮಧ್ಯರಾತ್ರಿ ಕಳ್ಳ ವ್ಯವಹಾರ ನಡೆದಿರುವುದು ಬಯಲಾಗಿದೆ.

    ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಸ್.ಬಿ.ಸಿಎಲ್ ಡಿಪೋ ಗೋದಾಮಿನಿಂದ ನೇರವಾಗಿ ಗ್ರಾಮೀಣ ಭಾಗಗಳಿಗೆ ಮದ್ಯ ಸರಬರಾಜು ಆಗಿದ್ದು, ಮದ್ಯದ ಅಂಗಡಿಗಳ ಮಾಲೀಕರಿಗೂ ಮನಬಂದಂತೆ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಪಿಎಂಸಿ ಬಳಿಯೇ ರಾತ್ರಿ ವೇಳೆ ಸಿಕ್ಕಿಬಿದ್ದ ಬೈಕ್ ಹಾಗೂ ಮಹೀಂದ್ರಾ ವಾಹನದಲ್ಲಿ ಲಕ್ಷಾಂತರ ರೂ. ಮದ್ಯ ಸಾಗಣೆ ಮಾಡಲಾಗುತ್ತಿತ್ತು, ಅಕ್ರಮ ಮದ್ಯ ಸಾಗಣೆ ಹಿನ್ನೆಲೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನು ಓದಿ:ಕೋವಿಡ್ ನಿಯಮ ಉಲ್ಲಂಘನೆ- ಅಂಗಡಿಗಳ ಪರವಾನಗಿ ರದ್ದು, ಬೀಗ ಜಡಿದ ಪಾಲಿಕೆ ಅಧಿಕಾರಿಗಳು

    ಕಳ್ಳ ವ್ಯವಹಾರದಲ್ಲಿ ಸಿಕ್ಕಿಬಿದ್ದರೂ ಇನ್ಸ್ ಪೆಕ್ಟರ್ ಮೋನಪ್ಪ ಅಧಿಕಾರದಲ್ಲಿ ಮುಂದುವರಿದಿದ್ದು ಕೂಡಲೇ ಅಮಾನತ್ತುಗೊಳಿಸುವಂತೆ ಅನ್ಯಾಯಕ್ಕೊಳಗಾದ ಮದ್ಯದ ಅಂಗಡಿಗಳ ಮಾಲೀಕರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಲಾಕ್ ಡೌನ್‍ನಲ್ಲೂ ಕರ್ತವ್ಯ ಲೋಪವೆಸಗಿ ಅಮಾನತ್ತಾಗಿದ್ದ ಅಬಕಾರಿ ನಿರೀಕ್ಷಕ ಮೋನಪ್ಪ ಮತ್ತೊಮ್ಮೆ ಭ್ರಷ್ಟಾಚಾರದ ಆರೋಪಗಳನ್ನ ಹೊತ್ತಿದ್ದಾರೆ.

  • ತರಕಾರಿ ವಾಹನದಲ್ಲಿ ಮದ್ಯ ಸಾಗಾಟ – 500 ಲೀಟರ್ ಎಣ್ಣೆ ವಶಕ್ಕೆ ಪಡೆದ ಪೊಲೀಸರು

    ತರಕಾರಿ ವಾಹನದಲ್ಲಿ ಮದ್ಯ ಸಾಗಾಟ – 500 ಲೀಟರ್ ಎಣ್ಣೆ ವಶಕ್ಕೆ ಪಡೆದ ಪೊಲೀಸರು

    ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿಗೆ ತರಕಾರಿ ಸಾಗಿಸುವ ವಾಹನದಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದ ಕೆಆರ್ ಮಾರ್ಕೆಟ್ ನಲ್ಲಿ ನಡೆದಿದೆ.

    ಮಂಗಳವಾರ ತಡರಾತ್ರಿ ಪೊಲೀಸರು ತಪಾಸಣೆ ಮಾಡುವ ವೇಳೆ ತರಕಾರಿ ತುಂಬಿದ್ದ ಜೀಪ್ ಕಲಾಸಿಪಾಳ್ಯ ಕಡೆಯಿಂದ ಬರುತ್ತಿತ್ತು. ಇಡೀ ಜೀಪ್ ತುಂಬಾ ಬೇರೆ ಬೇರೆ ರೀತಿಯ ತರಕಾರಿಗಳು ತುಂಬಿದ್ದವು. ಮಾರ್ಕೆಟ್ ಕಡೆಯಿಂದ ಬರುತ್ತಿದ್ದ ತರಕಾರಿ ವಾಹನ, ಕಲಾಸಿಪಾಳ್ಯ ಕಡೆಯಿಂದ ಬರುತ್ತಿದ್ದನ್ನು ನೋಡಿದ ಪೊಲೀಸರು, ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತರಕಾರಿಗಳ ನಡುವೆ, ಎರಡು ಬಗೆಯ ಬರೋಬ್ಬರಿ ಐನೂರು ಲೀಟರ್ ಮದ್ಯ ಪತ್ತೆಯಾಗಿದೆ.

    ತಕ್ಷಣ ಡ್ರೈವರ್ ರಾಮಕೃಷ್ಣನ್ ಮತ್ತು ಕ್ಲೀನರ್ ರಾಜಕುಮಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ವಿಚಾರಣೆ ವೇಳೆ ತಮಿಳುನಾಡಿನಲ್ಲಿ ಸದ್ಯ ಲಾಕ್‍ಡೌನ್ ಇರುವ ಕಾರಣ, ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಹಾಗಾಗಿ ಕರ್ನಾಟಕದಿಂದ ತರಕಾರಿ ವಾಹನಗಳಲ್ಲಿ ಮದ್ಯ ಸಾಗಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರತಿನಿತ್ಯ ತರಕಾರಿ ವ್ಯಾಪಾರಕ್ಕೆ ಅಂತಾ ಬೆಂಗಳೂರಿಗೆ ಬರುವ ವಾಹನಗಳು, ತರಕಾರಿ ಜೊತೆಗೆ ಮದ್ಯವನ್ನು ಖರೀದಿ ಮಾಡಿ ತರಕಾರಿ ನಡುವೆ ಸಾಗಾಟ ಮಾಡುತ್ತಿರುವುದು ಬಹಿರಂಗಗೊಂಡಿದೆ. ಇದನ್ನು ಓದಿ:ಸರಕಾರಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ- ಮೂರು ತಿಂಗಳ ಸಂಬಳ ಬಾಕಿ

    ಕರ್ನಾಟಕದಿಂದ ತೆಗೆದುಕೊಂಡು ಹೋಗುವ ಮದ್ಯವನ್ನು ತಮಿಳುನಾಡಿನಲ್ಲಿ ಮೂರು, ನಾಲ್ಕು ಪಟ್ಟು ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ತರಕಾರಿ ವ್ಯಾಪಾರಕ್ಕಿಂತ ಇದೇ ವ್ಯವಹಾರದಲ್ಲಿ ಅಧಿಕ ಲಾಭ ಬರುತ್ತಿದ್ದ ಕಾರಣ, ಈ ಇಬ್ಬರು ಆರೋಪಿಗಳು ಈ ಕೆಲಸ ಮಾಡುತ್ತಿದ್ದರು. ಇದು ಕೇವಲ ಒಂದು ವಾಹನದ ಕಥೆಯಲ್ಲ. ಬಹುತೇಕ ತಮಿಳುನಾಡಿನಿಂದ ತರಕಾರಿಗಾಗಿ ಬೆಂಗಳೂರಿಗೆ ಬರುವ ವಾಹನ ಸವಾರರು, ಇದೇ ವ್ಯವಹಾರ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರುವ ಪೊಲೀಸರು, ಸ್ಪೆಷಲ್ ಡ್ರೈವ್ ಮೂಲಕ ಮದ್ಯ ಸಾಗಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ. ಇದನ್ನು ಓದಿ:ಬಾಳೆಹಣ್ಣಿನ ಗದ್ದೆಗೆ ಬೆಂಕಿ ಹಚ್ಚಿದ ಅನ್ನದಾತ

  • ಮದ್ಯ ಹೋಂ ಡೆಲಿವರಿಗೆ ದೆಹಲಿಯಲ್ಲಿ ಅವಕಾಶ- ಷರತ್ತು ಅನ್ವಯ

    ಮದ್ಯ ಹೋಂ ಡೆಲಿವರಿಗೆ ದೆಹಲಿಯಲ್ಲಿ ಅವಕಾಶ- ಷರತ್ತು ಅನ್ವಯ

    ನವದೆಹಲಿ: ನಗರದಲ್ಲಿ ಕೋವಿಡ್-10 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಭಾರತೀಯ ಮದ್ಯ ಮತ್ತು ವಿದೇಶಿ ಮದ್ಯಗಳನ್ನು ಹೋಂ ಡೆಲಿವರಿ ಮಾಡಲು ದೆಹಲಿ ಸರ್ಕಾರ ಅನುಮತಿ ನೀಡಿದೆ.

    ದೆಹಲಿಯ ಹೊಸ ಅಬಕಾರಿ ನಿಯಮಗಳ ಅನುಗುಣವಾಗಿ ಆನ್‍ಲೈನ್ ಹಾಗೂ ಪೋರ್ಟಲ್‍ಗಳ ಮೂಲಕ ಮದ್ಯವನ್ನು ಆರ್ಡರ್ ಮಾಡಿ ಹೋಂ ಡೆಲಿವರಿ ಪಡೆಯಬಹುದು ಎಂದು ತಿಳಿಸಲಾಗಿದೆ. ಈ ಹಿಂದೆ ಕೂಡ ಮದ್ಯವನ್ನು ಹೋಂ ಡೆಲಿವರಿ ನೀಡಲಾಗುತ್ತಿತ್ತು. ಆದರೆ ಎಲ್-13 ಪರವಾನಗಿ ಹೊಂದಿದವವರಿಗೆ ಮಾತ್ರ ಹೋಂ ಡೆಲಿವರಿ ಮಾಡಲಾಗುತ್ತಿತ್ತು.

    ಅದರಂತೆ ಈ ಬಾರಿ ಹೊಸ ಅಬಕಾರಿ ನಿಯಮಗಳ ಪ್ರಕಾರ ಎಲ್-14 ಪರವನಾಗಿ ಹೊಂದಿರುವವರಿಗೆ ಮಾತ್ರ ದೆಹಲಿಯಲ್ಲಿ ಮದ್ಯವನ್ನು ಹೋಂ ಡೆಲಿವರಿ ಮಾಡಲು ಅವಕಾಶ ನೀಡಲಾಗಿದೆ. ಇದನ್ನು ಓದಿ: ಲಸಿಕೆ ತೆಗೆದುಕೊಳ್ಳದವರಿಗೆ ಮದ್ಯ ಸಿಗಲ್ಲ – ಎಣ್ಣೆ ಪ್ರಿಯರಿಗೆ ಶಾಕ್

    ಕಳೆದ ವರ್ಷ ಮೊದಲ ಬಾರಿ ಲಾಕ್‍ಡೌನ್ ಘೋಷಿಸಿದ ಬಳಿಕ ಅಂಗಡಿಗಳಲ್ಲಿ ಮದ್ಯಕೊಳ್ಳಲು ಜನ ಮುಗಿಬಿದ್ದಿದ್ದರು. ಈ ವೇಳೆ ಕೊರೊನಾ ಸೋಂಕಿನ ಹರಡುವಿಕೆ ಭೀತಿಯಿಂದ ಸುಪ್ರೀಂ ಕೋರ್ಟ್ ಮದ್ಯವನ್ನು ಹೋಂ ಡೆಲಿವರಿ ಮಾಡಲು ಸಲಹೆ ನೀಡಿತ್ತು.

  • ಮದ್ಯವೇ ನಿಜವಾದ ಔಷಧಿ, ಲಿಕ್ಕರ್ ಶಾಪ್ ತೆರೆದರೆ ಆಸ್ಪತ್ರೆಯ ಬೆಡ್ ಖಾಲಿ – ಮಹಿಳೆ ವೀಡಿಯೋ ವೈರಲ್

    ಮದ್ಯವೇ ನಿಜವಾದ ಔಷಧಿ, ಲಿಕ್ಕರ್ ಶಾಪ್ ತೆರೆದರೆ ಆಸ್ಪತ್ರೆಯ ಬೆಡ್ ಖಾಲಿ – ಮಹಿಳೆ ವೀಡಿಯೋ ವೈರಲ್

    ನವದೆಹಲಿ: ಮೆಡಿಸನ್‍ಗಿಂತ ಮದ್ಯ ಸೇವಿಸಬೇಕೆಂದು ಮಾತನಾಡಿರುವ ಮಹಿಳೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ವೀಡಿಯೋದಲ್ಲಿ ವಯಸ್ಸಾದ ಡಾಲಿ ಎಂಬಾಕೆ, ಯಾವುದೇ ಲಸಿಕೆ ಆಲ್ಕೋಹಾಲ್‍ಗೆ ಸಮವಾದದ್ದಲ್ಲ. ಆಲ್ಕೋಹಾಲ್‍ಲೇ ನಿಜವಾದ ಔಷಧಿ. 35 ವರ್ಷಗಳಿಂದ ನಾನು ಕುಡಿಯುತ್ತಿದ್ದೇನೆ ಮತ್ತು ನನಗೆ ಯಾವುದೇ ಔಷಧಿಯ ಅಗತ್ಯವಿಲ್ಲ ಎಂದಿದ್ದಾಳೆ.

    ದೆಹಲಿಯಲ್ಲಿ ಮದ್ಯದಂಗಡಿಯನ್ನು ಮತ್ತೆ ತೆರೆಯುವಂತೆ ದೆಹಲಿ ಸರ್ಕಾರಕ್ಕೆ ಮನವಿ ಮಾಡಿದ್ದಾಳೆ. ಅಲ್ಲದೆ ಮದ್ಯದಂಗಡಿಯನ್ನು ತೆರೆದರೆ ಆಸ್ಪತ್ರೆಯ ಬೆಡ್‍ಗಳು ಸಂಪೂರ್ಣವಾಗಿ ಖಾಲಿಯಾಗುತ್ತದೆ. ಸರ್ಕಾರವು ಯಾವುದೇ ಸಮಸ್ಯೆಗಳನ್ನು ಎದುರಿಸಬೇಕಾಗುವುದಿಲ್ಲ ಎಂದು ನುಡಿದಿದ್ದಾಳೆ.

    ಹೌದು, ಮದ್ಯದಂಗಡಿಯನ್ನು ತೆರೆದರೆ ಆಸ್ಪತ್ರೆಗಳಲ್ಲಿರುವ ಬೆಡ್‍ಗಳು ಖಾಲಿಯಾಗುತ್ತದೆ ಮತ್ತು ದೆಹಲಿ ಸರ್ಕಾರವು ಅಷ್ಟೊಂದು ತೊಂದರೆಗಳನ್ನು ಎದುರಿಸಬೇಕಾಗಿರುವುದಿಲ್ಲ. ಆಕ್ಸಿಜನ್ ಸಿಲಿಂಡರ್ ಸಮಸ್ಯೆಗಳು ಹೋಗುತ್ತದೆ. ಒಮ್ಮೆ ಜನರು ಮದ್ಯ ಸೇವಿಸಿದರೆ, ಕೊರೊನಾ ಮಾಯವಾಗುತ್ತದೆ ಎಂದು ಮಹಿಳೆ ವೀಡಿಯೋದಲ್ಲಿ ಹೇಳಿದ್ದಾಳೆ.

    ವೀಡಿಯೋ ಸೆರೆ ಹಿಡಿಯುತ್ತಿದ್ದ ವ್ಯಕ್ತಿ ನೀವು ಲಾಕ್‍ಡೌನ್ ಸಮಯದಲ್ಲಿ ಮದ್ಯ ಸೇವಿಸುತ್ತಿದ್ದೀರಾ ಎಂದು ಪ್ರಶ್ನೆ ಕೇಳಿದಾಗ, ಡಾಲಿ ಹೌದು ಎಂದು ಹೇಳಿದ್ದಾಳೆ. ಅಲ್ಲದೆ ಇದೀಗ ಸ್ಟಾಕ್ ಮಾಡಿದ್ದ ಮದ್ಯ ಕೂಡ ಖಾಲಿಯಾಗಿದ್ದು, ಸರ್ಕಾರಕ್ಕೆ ಮದ್ಯದಂಗಡಿಯನ್ನು ಮರು ತೆರೆಯಲು ಮನವಿ ಮಾಡಿದ್ದಾಳೆ.