Tag: ಪಬ್ಲಿಕ್ ಟಿವಿ Biggboss

  • ದೊಡ್ಮನೆಯಲ್ಲಿ ಗಳಗಳನೇ ಅತ್ತ ದಿವ್ಯಾ ಸುರೇಶ್

    ದೊಡ್ಮನೆಯಲ್ಲಿ ಗಳಗಳನೇ ಅತ್ತ ದಿವ್ಯಾ ಸುರೇಶ್

    ದೊಡ್ಮನೆಯಲ್ಲಿ ಬುಧವಾರ ನಡೆದ ಮನುಷ್ಯರು ಮತ್ತು ವೈರಸ್ ಟಾಸ್ಕ್ ಬಗ್ಗೆ ಮನೆಯ ಸದಸ್ಯರು ಶ್ರದ್ಧೆ, ಗಮನ ವಹಿಸದೇ ನಿಯಮ ಉಲ್ಲಂಘಿಸಿದ್ದಾರೆ ಎಂದು ಬಿಗ್ ಟಾಸ್ಕ್ ನನ್ನು ರದ್ದು ಗೊಳಿಸಿದ್ದರು.

    ಮೊದಲ ಭಾಗದಲ್ಲಿ ಹಲವು ಬಾರಿ ಗೆದ್ದ ವೈರಸ್ ತಂಡ, ಎರಡನೇ ಭಾಗದಲ್ಲಿ ಗೆಲ್ಲಲು ಪ್ರಯತ್ನವನ್ನು ಮಾಡದೇ ಪಂದ್ಯವನ್ನು ಸುಲಭವಾಗಿ ಕೈಚೆಲ್ಲಿ ಸೋಲನ್ನು ಅನುಭವಿಸಿತು. ಈ ವಿಚಾರವಾಗಿ ವೈರಸ್ ತಂಡ ಸೋಲಲು ಪ್ರಮುಖ ಕಾರಣ ದಿವ್ಯಾ ಸುರೇಶ್ ಹಾಗೂ ನಿಧಿ ಸುಬ್ಬಯ್ಯ ಎಂದು ಮನೆಯ ಎಲ್ಲ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ನಡುವೆ ಲ್ಯಾಗ್ ಮಂಜು ಬೆಳಗ್ಗೆ ಆಟದ ಬಗ್ಗೆ ದಿವ್ಯಾ ಸುರೇಶ್ ಜೊತೆ ಚರ್ಚೆ ನಡೆಸಿದರು. ನೀನು ಪಂದ್ಯವನ್ನು ಕೈ ಚೆಲ್ಲಿದ್ದು ಏಕೆ? ಅಷ್ಟೇಲ್ಲಾ ಕಷ್ಟಪಟ್ಟು, ಅಷ್ಟು ಮಂದಿ ಹುಡುಗರ ಮದ್ಯೆ ಸಮವಾಗಿ ಆಟ ಆಡಿದ್ದೀಯಾ. ಏಕಾಂಗಿಯಾಗಿ ಆಟವಾಡಲು ಆರಂಭಿಸಿದಾಗ ನೀನು ನಿನ್ನ ಬಲವನ್ನು ತೋರಿಸಬೇಕಿತ್ತು. ಸೋತರೂ ಪರವಾಗಿಲ್ಲ ಕೇವಲ ಪಂದ್ಯದಲ್ಲಿ ಭಾಗವಹಿಸಬೇಕಾಗಿತ್ತು. ನೀನು ಒಬ್ಬಳು ಕ್ರೀಡಾಪಟುವಾಗಿ ನೀನು ನಿನ್ನ ಬಲವನ್ನು ಪ್ರದರ್ಶಿಸಬೇಕಿತ್ತು. ನೀನು ಮಾಡಿದ್ದು ತಪ್ಪಲ್ಲವೇ? ಈ ವಿಚಾರವಾಗಿ ನನಗೆ ನಿನ್ನ ಮೇಲೆ ಬಹಳ ಸಿಟ್ಟಿತ್ತು. ಹಾಗಾಗಿ ಆತ್ಮೀಯವಾಗಿದ್ದೇನೆ, ಏನಾದರೂ ತಪ್ಪಾಗಿ ಮಾತನಾಡಿಬಿಡುತ್ತೇನೆ ಎಂದು ನಾನು ನಿನ್ನೆ ನಿನ್ನೊಂದಿಗೆ ಮಾತನಾಡಿಲ್ಲ. ನಾವು ಇಲ್ಲಿಗೆ ಬರಲು ಬೇರೆಯವರ ಮಾತನ್ನು ಕೇಳಿಕೊಂಡು ಬಂದಿದ್ದೇವಾ? ಇಲ್ಲ ಅಲ್ಲವೇ? ಬೇರೆಯವರು ಹೀಗೋ ಆಟ ಆಡುತ್ತಾರೆ ಎಂದು ನಾವು ಅವರ ರೀತಿಯಲ್ಲಿಯೇ ಆಟವಾಡುವುದಕ್ಕೆ ಆಗುತ್ತಾ? ಬೇರೆ ಯಾರು ಹೇಗಾದರೂ ಆಡಿಕೊಳ್ಳಲಿ ಅದು ನಮಗೆ ಸಂಬಂಧವಿಲ್ಲದ ವಿಚಾರ. ನಾವು ಏಕಾಂಗಿಯಾಗಿ ನಿಂತ ಮೇಲೆ ನಾವು ಏಕಾಂಗಿಯಾಗಿ ಹೋರಾಟ ಮಾಡಬೇಕು. ನೀನು ಯಾವ ಕಾರಣಕ್ಕೆ ಇಲ್ಲಿಗೆ ಬಂದಿದ್ದೀಯಾ ಎಂಬುವುದರ ಬಗ್ಗೆ ಆಲೋಚಿಸು. ಒಟ್ಟಾರೆ ನೀನು ನಿನ್ನೆ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು ಎಂದು ತಿಳಿ ಹೇಳಿದರು.

    ಈ ವೇಳೆ ಪಂದ್ಯ ಸೋಲುವುದಕ್ಕೆ ದಿವ್ಯಾ ಸುರೇಶ್ ಕಾರಣರೆಂದು ನೀವು ಹೇಳಿದ್ದೀರಿ ಎಂಬ ಮಾತನ್ನು ರಾಜೀವ್‍ರವರು ಹೇಳುತ್ತಿದ್ದರು ಎಂದು ದಿವ್ಯಾ ಸುರೇಶ್ ಲ್ಯಾಗ್ ಮಂಜುಗೆ ಪ್ರತಿಕ್ರಿಯಿಸಿದರು. ಇದಕ್ಕೆ ಪ್ರತಿಯಾಗಿ ಲ್ಯಾಗ್ ಮಂಜು ಬೇರೆಯವರು ಹೇಳುವ ಮಾತನ್ನು ನೀನು ನಂಬಿ ಬಿಡುತ್ತೀಯಾ? ನಿನ್ನ ಬುದ್ದಿಗೆ ಏನಾಗಿದೆ? ನಾವೇನು ಪಂದ್ಯದ ವೇಳೆ ಡಂಬಲ್ಸ್ ಹಾಕಲು ಬಂದಿದ್ದೇವಾ ಕೇವಲ ನೀರನ್ನಷ್ಟೇ ತಾನೇ ಹಾಕಲು ಮುಂದಾದೇವು ಎಂದು ಕಿಡಿಕಾರಿದರು.

    ನಾನು ಕೊನೆಯವರೆಗೂ ಸರಿಯಾದ ರೀತಿಯಲ್ಲಿ ಆಟವಾಡಿದೆ. ಆದರೆ ಪ್ರಶಾಂತ್‍ರವರು ಕನ್ಫೆಷನ್ ರೂಮ್‍ಗೆ ಹೋಗಿ ಹಿಂದಿರುಗಿ ಬಂದ ನಂತರ ನನ್ನ ಮೇಲೆ ನಾನು ನಾನು ಮಾಡದೇ ಇರುವ ಆರೋಪಗಳನ್ನು ಹೊರಿಸಿದರು ಎಂದು ಲ್ಯಾಗ್ ಮಂಜುಗೆ ದಿವ್ಯಾ ಸುರೇಶ್ ಆರೋಪಿಸಿದರು. ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಹೇಳಿದರು.

    ಬಳಿಕ ಮನೆಯ ಸದಸ್ಯರಿಗೆ ದಿವ್ಯಾ ನಾನು ಮಾಡಿದ್ದು ತಪ್ಪು ಎಂದು ಕ್ಷಮೆ ಯಾಚಿಸಿದರು. ಈ ವೇಳೆ ಶುಭಾ ಪೂಂಜಾ ಬೇರೆಯವರ ಆಲೋಚನೆಗೆ ಪ್ರೇರಿತವಾಗಿ ಯಾವ ಕೆಲಸವನ್ನು ಮಾಡಬೇಡ. ನಾವು ಇಲ್ಲಿ ಆಟವಾಡಲು ಏಕಾಂಗಿಯಾಗಿ ಬಂದಿದ್ದೇವೆ. ನಮಗೆ ನಮ್ಮದೇಯಾದಂತಹ ವೈಯಕ್ತಿಕ ಅಭಿಪ್ರಾಯಗಳಿರುತ್ತದೆ. ಒಂದು ಟೀಂ ಎಂದು ಬಂದಾಗ ಟೀಂನಲ್ಲಿರುವವರೆಲ್ಲ ಸರಿ ಎಂದು ಹೇಳಲು ಸಾಧ್ಯವಾಗುವುದಿಲ್ಲ. ನಮಗೆ ಹಾನಿಯಾಗುತ್ತದೆ, ಬೇಸರವಾಗುತ್ತದೆ ಎಂದು ನಾವು ಪಂದ್ಯವನ್ನು ಅರ್ಧದಲ್ಲಿಯೇ ಕೈಚೆಲ್ಲಿ ಬಂದೆವಾ ಆಟ ಪೂರ್ಣಗೊಳಿಸಲಿಲ್ಲವೇ? ನಾವು ಆಟ ಆಡಿದಾಗ ನೀವು ಆಟದ ಬಗ್ಗೆ ಅಸಡ್ಡೆ ತೋರಿದ್ದೀರಾ ಎಂಬುವುದು ನಮಗಿಂತ ಜನರಿಗೆ ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆದ ದಿವ್ಯಾ ಸುರೇಶ್ ರಾಜೀವ್ ಅವರ ಭುಜದ ಮೇಲೆ ಒರಗಿಕೊಂಡು ಗಳಗಳನೇ ಅಳಲು ಆರಂಭಿಸಿದರು. ನಂತರ ರಾಜೀವ್ ಹಾಗೂ ಸಮರ್ಥ್, ಮಂಜು ಸಮಾಧಾನ ಪಡಿಸುವ ಮೂಲಕ ದಿವ್ಯಾ ಸುರೇಶ್ ಮುಖದಲ್ಲಿ ನಗು ತರಿಸಿದರು.

  • ದೊಡ್ಮನೆಯಲ್ಲೂ ಕಿಚ್ಚೆಬ್ಬಿಸಿದ ಕೊರೊನಾ..!

    ದೊಡ್ಮನೆಯಲ್ಲೂ ಕಿಚ್ಚೆಬ್ಬಿಸಿದ ಕೊರೊನಾ..!

    ಬೆಂಗಳೂರು: ಇಷ್ಟು ದಿನ ಕೂಲ್ ಆಗಿ ಆಟವಾಡಿದ ಬಿಗ್‍ಬಾಸ್ ಮನೆ ಸದಸ್ಯರ ನಡುವೆ ನಿನ್ನೆ ಆಕ್ರೋಶದ ಕಿಚ್ಚು ಹೊತ್ತಿಕೊಂಡಿದೆ. ವಿಶ್ವದೆಲ್ಲೆಡೆ ಕೇಕೆ ಹಾಕಿದ ಕೊರೊನಾ ಇದೀಗ ಬಿಗ್‍ಬಾಸ್ ಮನೆಗೆ ಎಂಟ್ರಿಕೊಟ್ಟಿದೆ. ಈ ವಿಚಾರವಾಗಿ ಬಿಗ್‍ಬಾಸ್ ಟಾಸ್ಕ್‍ವೊಂದನ್ನು ನೀಡಿದ್ದು, ಸದ್ಯ ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳು ಜಿದ್ದಾ-ಜಿದ್ದಿ ನಡೆಸಿದ್ದಾರೆ.

    ನಿನ್ನೆ ಬಿಗ್‍ಬಾಸ್ ಇಡೀ ಜಗತ್ತು ಕಳೆದ ವರ್ಷ ವೈರಸ್‍ನಿಂದ ಕಂಗಲಾಗಿದ್ದು ಎಲ್ಲರೂ ನೋಡಿದ್ದೀರಿ. ಇದೀಗ ನೀವೆಲ್ಲರೂ ಕೊರೊನಾ ವೈಸ್ ವಿರುದ್ಧ ಹೋರಾಡಲು ಸಿದ್ಧರಾಗಿ ಎಂದು ಘೋಷಿಸಿದರು. ಅದರಂತೆ ಮನೆಯ ಸದಸ್ಯರನ್ನು ಮನುಷ್ಯ ತಂಡ ಹಾಗೂ ವೈರಸ್ ತಂಡ ಎಂದು ಎರಡು ವಿಭಾಗಗಳಾಗಿ ಮಾಡಲಾಯಿತು. ಲ್ಯಾಂಗ್ ಮಂಜುರನ್ನು ಮನುಷ್ಯ ತಂಡದ ನಾಯಕರಾಗಿ ಹಾಗೂ ಪ್ರಶಾಂತ್ ಸಂಬರಗಿಯನ್ನು ವೈರಸ್ ತಂಡದ ನಾಯಕರಾಗಿ ನೇಮಿಸಿದರು. ಮನುಷ್ಯ ತಂಡದಲ್ಲಿ ಮಂಜು, ಅರವಿಂದ್, ಚಂದ್ರಕಲಾ, ಗೀತಾ, ದಿವ್ಯಾ ಉರುಡುಗ, ಶಮಂತ್ ಶುಭ, ವಿಶ್ವನಾಥ್ ಹಾಗೂ ವೈರಸ್ ತಂಡದ ಸದಸ್ಯರಾಗಿ ಪ್ರಶಾಂತ್, ದಿವ್ಯಾ, ಸುರೇಶ್, ನಿಧಿ, ನಿರ್ಮಲ, ರಾಜೀವ್, ಶಂಕರ್, ರಘು, ವೈಷ್ಣವಿ ಎಂದು ವಿಂಗಡಿಸಲಾಯಿತು.

    ಕೊರೊನಾ ಟಾಸ್ಕ್ ಪ್ರಕಟಣೆಯನ್ನು ಓದಿದ ಲ್ಯಾಂಗ್ ಮಂಜು, ಬಿಗ್ ಕ್ಯಾಪ್ಟನ್ಸಿ ಕಂಟೆಂಟರ್ ಟಾಸ್ಕ್‍ವೊಂದನ್ನು ನೀಡುತ್ತಿದ್ದು, ಅದುವೇ ಲಾಕ್‍ಡೌನ್. ಬಜರ್ ಆಗುತ್ತಿದ್ದಂತೆಯೇ ಮನುಷ್ಯರ ಮೇಲೆ ವೈರಸ್ ದಾಳಿ ಮಾಡಬೇಕು. ಮನುಷ್ಯರು ವೈರಸ್ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ದಾಳಿ ಮಾಡಿದಾಗ ವೈರಸ್ ಯಶಸ್ವಿಯಾದಲ್ಲಿ ಮನುಷ್ಯರು ಕ್ವಾರಂಟೈನ್‍ಗೆ ಹೋಗಬೇಕು. ಮನುಷ್ಯ ಕ್ವಾರಂಟೈನ್ ಅವಧಿಯಲ್ಲಿ ವೈರಸ್ ಹಿಂಸೆಯನ್ನು ಸಹಿಸಿಕೊಂಡು ಯಶಸ್ವಿಯಾದರೆ ಅವರು ಉಳಿಯುತ್ತಾರೆ ಎಂದು ತಿಳಿಸಲಾಯಿತು.

    ಗಾರ್ಡನ್ ಏರಿಯಾದಲ್ಲಿ 6 ಮನುಷ್ಯಾಕೃತಿಗಳು ಅಂದರೆ ಮ್ಯಾನಿಕ್ವೀನ್‍ಗಳನ್ನು ಇರಿಸಲಾಗಿದೆ. ಈ ಮ್ಯಾನಿಕ್ವೀನ್‍ನ ಎದೆಯ ಭಾಗದಲ್ಲಿ ಎರಡು ಪೌಚ್‍ಗಳನ್ನು ಇರಿಸಲಾಗಿದ್ದು, ಅದು ಮನುಷ್ಯನ ಜೀವಂತಿಕೆಯನ್ನು ಸೂಚಿಸುತ್ತದೆ. ಒಂದು ಮ್ಯಾನಿಕ್ವೀನ್‍ನ ಎರಡು ಪೌಚ್‍ಗಳು ನಾಶವಾದರೆ, ಆ ಮ್ಯಾನಿಕ್ವೀನ್‍ನ ವೈರಸ್ ಸೋಂಕು ತಗುಲಿದಂತೆ ಎಂದರು. ಮ್ಯಾನಿಕ್ವೀನ್ ಮೇಲೆ ದಾಳಿ ಮಾಡಿ ಪೌಚ್ ನಾಶಪಡಿಸಲು ವೈರಸ್ ಬಳಿ 2 ಸ್ಟಾಂಪ್‍ಗಳನ್ನು ನೀಡಲಾಗಿರುತ್ತದೆ. ಈ ಸ್ಟಾಂಪ್‍ಗಳನ್ನು ಬಳಸಿ ವೈರಸ್ ಮ್ಯಾನಿಕ್ವೀನ್ ಮೇಲೆ ದಾಳಿ ನಡೆಸಬೇಕು. ಮ್ಯಾನಿಕ್ವೀನ್ ಸುತ್ತ ಕೆಂಪು ಹಾಗೂ ಹಳದಿ ಬೌಂಡರಿಗಳನ್ನು ಇರಿಸಲಾಗಿದ್ದು, ವೈರಸ್ ಹಳದಿ ಬಣ್ಣದ ಬೌಂಡರಿಯನ್ನು ದಾಟದಂತೆ ನೋಡಿಕೊಳ್ಳಬೇಕು. ಹಳದಿ ಬಣ್ಣ ಬೌಂಡರಿ ದಾಟಿ ಕೆಂಪು ಬೌಂಡರಿ ಒಳಗೆ ಹೋದರೆ ಆಗ ಮ್ಯಾನಿಕ್ವೀನ್ ಪೌಚ್‍ಗಳನ್ನು ನಾಶ ಮಾಡಬಹುದು ಎಂದು ಸೂಚಿಸಲಾಯಿತು.

    ಅದರಂತೆ ಮೊದಲ ಬಜಾರ್ ಆದಾಗ ಆಟ ಶುರು ಮಾಡಿದ ಎರಡು ತಂಡ ಕಾದಾಡುತ್ತಾ, ಒಬ್ಬರಿಗೊಬ್ಬರು ತಳ್ಳಾಡುತ್ತಾ, ಕಿರುಚಾಡುತ್ತಾ ಜಗಳ ಮಾಡಿದರು. ಕೊನೆಗೆ ಮನುಷ್ಯ ತಂಡ ವೈರಸ್ ತಂಡದ ಬಳಿ ಇದ್ದ ಸ್ಟಾಂಪ್‍ನನ್ನು ವಶಪಡಿಸಿಕೊಂಡು ಗೆಲ್ಲುತ್ತಾರೆ. ಈ ವೇಳೆ ದಿವ್ಯಾ ಉರುಡುಗ ಕಾಲನ್ನು ಬಳಸಿ ಒದ್ದಿದ್ದಕ್ಕೆ ರಘು ಕಿಡಿಕಾರಿದರು.

    ಎರಡನೇ ಸುತ್ತಿನ ಪಂದ್ಯದಲ್ಲಿ ವೈರಸ್ ತಂಡ ಸ್ಟಾಂಪ್‍ಗಳನ್ನು ಮ್ಯಾನಿಕ್ವೀನ್ ಮೇಲೆ ದಾಳಿ ನಡೆಸುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಸೋತ ಮನುಷ್ಯ ತಂಡದಿಂದ ಚಂದ್ರಕಲಾ ಕ್ವಾರಂಟೈನ್‍ಗೆ ಬಂದರು. ಈ ವೇಳೆ ಹಗ್ಗದ ಮೇಲೆ ಕೈ ಇರಿಸಿದ್ದ ಚಂದ್ರಕಲಾ ಕೈ ಬಿಡಿಸಲು ವೈರಸ್ ತಂಡ ಬಟ್ಟೆಗಳ ರಾಶಿಯನ್ನು ಹಾಕಿದರು. ಮೈ ಮೇಲೆ ತಣ್ಣೀರು ಸುರಿದರು. ಅಲ್ಲದೆ ತಪ್ಪಲೆಯನ್ನು ಸೌಟಿನಿಂದ ಬಡಿಯುವ ಮೂಲಕ ಸದ್ದು ಮಾಡಿ ಕಿರಿಕಿರಿ ಮಾಡಿದರು. ಆದರೂ ದೃಢಗೆಡದೆ ಚಂದ್ರಕಲಾ ಅರ್ಧಗಂಟೆ ನಿಂತು ಕೊರೊನಾ ಗೆದ್ದು ಬಂದರು. ಈ ವೇಳೆ ಚಂದ್ರಕಲಾಗೆ ವೈರಸ್ ತಂಡ ನೀಡಿದ ಹಿಂಸೆಯನ್ನು ಖಂಡಿಸಿ ಮನುಷ್ಯ ತಂಡದವರು ಆಕ್ರೋಶ ವ್ಯಕ್ತಪಡಿಸಿದರು.

    ಮೂರನೇ ಸುತ್ತಿನಲ್ಲಿ ಮನುಷ್ಯ ತಂಡ ವೈರಸ್ ತಂಡದ ಬಳಿ ಇದ್ದ ಸ್ಟಾಂಪ್‍ನನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡು ಗೆದ್ದರು. ಈ ವೇಳೆ ನಿರ್ಮಲರವರ ಕತ್ತಿಗೆ ಪೆಟ್ಟಾಗಿ ಅವರನ್ನು ಮನೆಯ ಸದಸ್ಯರು ಕಾನ್ಫೆಷನ್ ರೂಮ್‍ಗೆ ಚಿಕಿತ್ಸೆಗಾಗಿ ಕರೆದೊಯ್ದರು. ಬಳಿಕ ಮನುಷ್ಯ ತಂಡ ಆಟದ ನಿಯಮ ಉಲ್ಲಂಘಿಸಿ ವೈರಸ್ ತಂಡದೊಂದಿಗೆ ಸ್ನೇಹದಿಂದ ನಡೆದುಕೊಂಡಿದ್ದರಿಂದ ಮನುಷ್ಯ ತಂಡದ ಕ್ಯಾಪ್ಟನ್ ಮಂಜು, ಶುಭ ಹಾಗೂ ಚಂದ್ರಕಲಾ ಆಟದಿಂದ ಹೊರ ನಡೆದರು.

    ನಂತರ ನಾಲ್ಕನೇ ಸುತ್ತಿನಲ್ಲಿ ಮನುಷ್ಯ ತಂಡ ವೈರಸ್ ತಂಡದ ಬಳಿ ಇದ್ದ ಸ್ಟಾಂಪ್‍ಗಳನ್ನು ಮತ್ತೊಮ್ಮೆ ವಶಪಡಿಸಿಕೊಂಡರು ಆದರೂ ಹಠ ಬಿಡದ ವೈರಸ್ ತಂಡ ಸ್ಟಾಂಪ್‍ಗಳನ್ನು ಕಿತ್ತುಕೊಂಡು ಮ್ಯಾನಿಕ್ವೀನ್ ಮೇಲೆ ದಾಳಿ ನಡೆಸಿ ಜಯಶಾಲಿಯಾದರು. ಈ ವೇಳೆ ಬ್ರೋಗೌಡ ಪ್ರಶಾಂತ್‍ರಿಂದ ಹಾನಿಗೊಂಡಿರುವುದಾಗಿ ಆರೋಪಿಸಿ ಇಬ್ಬರು ಜಗಳವಾಡಿದರು. ಇದರಿಂದ ಮಾತಿಗೆ ಮಾತು ಬೆಳಸಿದ ಬ್ರೋ ಗೌಡ ಪ್ರಶಾಂತ್ ಸಂಬರಗಿಯವರಿಗೆ ಅವಾಚ್ಯ ಶಬ್ದಗಳಿಂದ ಬಾಯಿಗೆ ಬಂದಂತೆ ನಿಂದಿಸಿದರು.

    ಈ ಸುತ್ತಿನಲ್ಲಿ ಮನುಷ್ಯ ತಂಡ ಸೋತ್ತಿದ್ದರಿಂದ ಗೀತಾ ಕ್ವಾರಂಟೈನ್‍ಗೆ ಬಂದರು. ಅವರ ಕೈಗಳನ್ನು ಹಗ್ಗದ ಮೇಲಿನಿಂದ ಬಿಡಿಸಲು ವೈರಸ್ ತಂಡ ಹಲವಾರು ರೀತಿ ಸರ್ಕಸ್ ನಡೆಸಿತು. ಆದರೆ ಕೊನೆಗೆ ಬಟ್ಟೆಗಳಿಗೆ ಡಾಂಬಲ್ಸ್‍ಗಳನ್ನು ಕಟ್ಟಿ ಗೀತಾ ಕೈ ಮೇಲೆ ಹಾಕಿದರು. ಹೀಗಾಗಿ ಡಾಂಬಲ್ಸ್ ತೂಕ ತಡಯಲಾರದೇ ಗೀತಾ ಕೊನೆಗೆ ಹಗ್ಗದ ಮೇಲಿನಿಂದ ಕೈ ಬಿಟ್ಟು ವೈರಸ್‍ಗೆ ಶರಣಾದರು.

    ಒಟ್ಟಾರೆ ಇಷ್ಟು ದಿನ ವಿಶ್ವದಲ್ಲೆಲ್ಲಾ ಅಬ್ಬರಿಸಿದ್ದ ಕೊರೊನಾ ಇದೀಗಾ ಬಿಗ್‍ಬಾಸ್ ಮನೆ ಮಂದಿ ಮದ್ಯೆ ಮನಸ್ತಾಪ, ಕಾದಾಟ, ಆಕ್ರೋಶದ ಕಿಚ್ಚು ಹೊತ್ತಿಸಿದೆ ಎಂದರೆ ತಪ್ಪಾಗಲಾರದು.

  • ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬೆಂಗಳೂರು: ಬಿಗ್‍ಬಾಸ್ ಸದಸ್ಯರೊಂದಿಗೆ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆ ಮುಂದುವರಿಸಿದ ಸುದೀಪ್ ಭಾನುವಾರ ವೈಟ್ ಆ್ಯಂಡ್ ವೈಟ್ ಲುಕ್‍ನಲ್ಲಿ ವೇದಿಕೆ ಮೇಲೆ ಪ್ರೇಕ್ಷಕರ ಮುಂದೆ ಎಂಟ್ರಿಕೊಟ್ಟರು. ವಾರದ ಪಂಚಾಯತಿ ಜೊತೆ ಜೊತೆಗೆ ಕಿಚ್ಚ ಈ ಮನೆಯಲ್ಲಿ ಅತೀ ಹೆಚ್ಚು ಗೊರಕೆ ಹೊಡೆಯುವವರು ಯಾರು ಎಂದು ಪ್ರಶ್ನಿಸುತ್ತಾರೆ.

    ಆಗ ಎಲ್ಲರೂ ಮಂಜು ಹಾಗೂ ರಾಘವೇಂದ್ರರವರು ಎಂದು ಹೇಳಿದರೆ, ಶಂಕರ್‍ರವರು ಪ್ರಶಾಂತ್ ಹಾಗೂ ಮಂಜು ಕೂಡ ಸ್ಟೀರಿಯೋ ಫೋನ್ ರೀತಿ ಗೊರಕೆ ಹೊಡೆಯುತ್ತಾರೆ ಜೊತೆಗೆ ಇಬ್ಬರೂ ಸದ್ದು ಮಾಡದಂತೆ ಮಲಗಿಬಿಡುತ್ತಾರೆ ಎಂದರು. ಬಳಿಕ ಕಿಚ್ಚ ಕ್ಷಮಿಸಿ ಸರ್ ಪ್ರಶಾಂತ್‍ರವರದ್ದು ಗೊರಕೆ ಸದ್ದು ಅಲ್ಲ. ಅದು ಲೋಕದ ಜ್ಞಾನ, ವಿಚಾರಣೆ, ಅವರ ಒಳಗಿನಿಂದ ಬರುತ್ತಿರುವುದು ಅವರ ಧ್ವನಿಯಲ್ಲ. ಕರ್ನಾಟಕದ ಧ್ವನಿ. ಅವರು ನಿದ್ದೆಯಲ್ಲಿ ಕೂಡ ಮಾಹಿತಿ ಹಂಚುತ್ತಿರುತ್ತಾರೆ. ಅದನ್ನು ನೀವು ಸದ್ದು ಎಂದು ಭಾವಿಸಿದ್ದಿರಾ ಎಂದು ಹಾಸ್ಯಮಯವಾಗಿ ನುಡಿದರು.

    ಬಳಿಕ ರಘುರವರು ನಿಧಿ ಸುಬ್ಬಯ್ಯರವರು ಕೂಡ ಗೊರಕೆ ಹೊಡೆಯುತ್ತಾರೆ. ನಾನು ಅಂದು ಸ್ವಲ್ಪ ಬೇಗ ಎದ್ದಿದ್ದೆ ಮೊಬೈಲ್ ಏನಾದರೂ ಸಿಕ್ಕಿದ್ದರೆ ರೆಕಾರ್ಡ್ ಮಾಡಿ ತೋರಿಸಿಬಿಡುತ್ತಿದ್ದೆ. ಆದರೆ ನನ್ನ ಬಳಿ ಮೊಬೈಲ್ ಇರಲಿಲ್ಲ. ಈ ವೇಳೆ ರಾಜೀವ್ ನಿಧಿಯವರು ಗೊರಕೆ ಹೊಡೆಯುವುದು ಬಹಳ ಚೆನ್ನಾಗಿರುತ್ತದೆ ಎಂದು ಹೇಳುವ ಮೂಲಕ ಗೊರಕೆ ಸದ್ದನ್ನು ಮಿಮಿಕ್ರಿ ಮಾಡಿ ತೋರಿಸಿದ್ರು. ಇದಕ್ಕೆ ನಿಧಿ ಸುಬ್ಬಯ್ಯ ಮುಖ ಮುಚ್ಚಿಕೊಂಡು ನಾಚುತ್ತಾ ಮುಗುಳುನಗೆ ಬೀರಿದ್ರು. ಈ ಸದ್ದು ಕೇಳಿ ಮಂಜು ಹಾಗೂ ರಘು ಇಬ್ಬರು ಎರಡು ಬಾರಿ ರಾತ್ರಿ ಎದ್ದು ನನ್ನ ಮುಖ ನೋಡಿ ನಕ್ಕಿದ್ದಾರೆ ಎಂದರು. ಇನ್ನೂ ನಿಧಿ ಸುಬ್ಬಯ್ಯ ಗೊರಕೆ ಹೊಡೆಯುವ ಸೌಂಡ್ ಮಿಮಿಕ್ರಿ ನೋಡಿ ಕಿಚ್ಚ ಹಾಗೂ ಮನೆಯ ಸದಸ್ಯರು ಹೊಟ್ಟೆ ಹುಣ್ಣಾಗುವಂತೆ ನಕ್ಕರು.

    ಬಳಿಕ ಲ್ಯಾಗ್ ಮಂಜು ಶಂಕರ್ ರಾತ್ರಿವಿಡೀ ಸ್ಕ್ರಿಪ್ಟ್ ಓದುತ್ತಾರೆ. ಒಮ್ಮೆ ನಿದ್ದೆ ಮಾಡುವ ವೇಳೆ ಶಂಕರ್‍ರವರು ಅಗರ್‍ವಾಲ್ ಎಂದು ಕರೆದರು. ರಾಜೀವ್ ನಿದ್ದೆಯಲ್ಲಿ ಮಾತನಾಡುತ್ತಿರಬಹುದು ಎಂದು ಹೇಳುತ್ತಾರೆ ಆದರೆ ಮಂಜು ಅವರು ನಿಮಗೆ ಗೊತ್ತಿಲ್ಲ. ಬಿಗ್‍ಬಾಸ್ ಎಲ್ಲೋ ಕನಸಿನಲ್ಲಿ ಸ್ಕ್ರಿಪ್ಟ್ ನೀಡಿರಬೇಕು ಅದನ್ನು ಓದುತ್ತಿದ್ದಾರೆ ಎಂದು ಹೇಳಿರುವುದಾಗಿ ರಾಜೀವ್ ತಿಳಿಸಿದರು.

    ಒಮ್ಮೆ ನಾನು ಶಂಕರ್ ಅವರ ಪಕ್ಕದಲ್ಲಿ ಮಲಗಲೆಂದು ಹೋದೆ ಸರ್ ಆದರೆ ಐದು ನಿಮಿಷದ ನಂತರ ಶಂಕರ್‍ರವರು ಗೊರಕೆ ಹೊಡೆಯಲು ಆರಂಭಿಸಿದರು. ಅವರು ಹೊಡೆದ ಗೊರಕೆ ಸದ್ದು ಹೇಗಿತ್ತು ಎಂದರೆ ಅವರೆಲ್ಲೋ ನನಗೆ ಉಗುಳುತ್ತಿದ್ದಾರೆ ಎಂಬಂತೆ ಇತ್ತು. ಆಗ ತಕ್ಷಣ ಅವರ ಕಡೆ ಮುಖ ಮಾಡಿಕೊಂಡು ಮಲಗಿದ್ದ ನಾನು ಮತ್ತೊಂದೆಡೆ ತಿರುಗಿಸಿಕೊಂಡು ಮಲಗಿದೆ ಎಂದು ಹೇಳುವ ಮೂಲಕ ಮಂಜು ಹಾಸ್ಯಚಟಾಕಿ ಹರಿಸಿದರು.

    ಸದ್ಯ ಮನೆಯ ಸದಸ್ಯರ ಗೊರಕೆ ಕಥೆ ಕೇಳಿದ ಸುದೀಪ್ ವೇದಿಕೆ ಮೇಲೆ ಜೋರು ನಗೆಬೀರಿದರು. ನಂತರ ಇಂದು ಎಲ್ಲರೂ ಎಷ್ಟು ಚೆಂದದ ಬಟ್ಟೆಗಳನ್ನು ಧರಿಸಿ ಕುಳಿತಿದ್ದೀರಿ ಆದರೆ ಎಲ್ಲರ ಅಭಿಪ್ರಾಯಗಳೇ ಬದಲಾಗಿ ಹೋಯಿತು ಎಂದು ಹೇಳಿದರು.

  • ಆ ಯಮ್ಮನ ಸಹವಾಸಕ್ಕೆ ಹೋಗೋದನ್ನೇ ಬಿಟ್ಟು ಬಿಟ್ಟಿದ್ದೇನೆ ಅಂದಿದ್ಯಾಕೆ ಲ್ಯಾಗ್ ಮಂಜು?

    ಆ ಯಮ್ಮನ ಸಹವಾಸಕ್ಕೆ ಹೋಗೋದನ್ನೇ ಬಿಟ್ಟು ಬಿಟ್ಟಿದ್ದೇನೆ ಅಂದಿದ್ಯಾಕೆ ಲ್ಯಾಗ್ ಮಂಜು?

    ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮ ಆರಂಭವಾಗಿ ಒಂದು ವಾರ ಕಳೆದಿದೆ. ಶನಿವಾರ ಕಿಚ್ಚನ ಜೊತೆ ಮೊದಲ ವಾರದ ಪಂಚಾಯತಿ ನಡೆದಿದ್ದು, ಈ ವೇಳೆ ಸ್ಪರ್ಧಿಗಳ ಕುರಿತಂತೆ ಕೊಂಚ ಸಿರಿಯಸ್, ಸ್ವಲ್ಪ ಕಾಮಿಡಿ ವಿಚಾರಗಳ ಚರ್ಚೆಯಾಗಿದೆ. ಅದರಲ್ಲೂ ಲ್ಯಾಗ್ ಮಂಜು ವಾರದ ಕಥೆ ಕಿಚ್ಚನ ಜೊತೆ ಮೊದಲ ಸಂಚಿಕೆಯಲ್ಲಿ ಮನೆಯ ಎಲ್ಲಾ ಸದಸ್ಯರಿಗಿಂತಲೂ ಸೆಂಟರ್ ಆಫ್ ದಿ ಆ್ಯಟ್ರಕ್ಷನ್ ಆಗಿದ್ದರು.

    ಈ ವೇಳೆ ಕಿಚ್ಚ ಮನೆಯಲ್ಲಿರುವ ಪ್ರತಿ ಸದಸ್ಯರ ಹೆಸರುಗಳನ್ನು ಹೇಳಿಕೊಂಡು ಹೋಗುತ್ತೇನೆ. ಅವರಲ್ಲಿರುವ ಒಳ್ಳೆಯ ಗುಣ ಹಾಗೂ ಈ ಒಂದು ವಿಚಾರದಲ್ಲಿ ಇವರೊಂದಿಗೆ ಎಚ್ಚರಿಕೆ ಇರಬೇಕು ಎಂದು ನಿಮಗೆ ಅನಿಸುವ ಕೆಲವು ವಿಚಾರಗಳನ್ನು ತಿಳಿಸುತ್ತಾ ಹೋಗುವಂತೆ ಲ್ಯಾಗ್ ಮಂಜುಗೆ ಸೂಚಿಸಿದ್ದಾರೆ.

    ಅದರಂತೆ ಎಲ್ಲ ಸದಸ್ಯರ ವಿಚಾರವಾಗಿ ಅಭಿಪ್ರಾಯ ತಿಳಿಸುತ್ತಾ ಬಂದ ಲ್ಯಾಗ್ ಮಂಜು ವೈಷ್ಣವಿ ಗೌಡ ಸರದಿ ಬಂದಾಗ, ವೈಷ್ಣವಿ ಗೌಡರೊಂದಿಗೆ ಎಚ್ಚರಿಕೆಯಿಂದ ಇರಬೇಕಾದಂತಹ ವಿಚಾರವೇನಿಲ್ಲ. ಆದರೆ ಯೋಗ ಮಾಡುವಾಗ ಮಾತ್ರ ಬಹಳ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಬೆಳಗ್ಗೆ ಎದ್ದು ಹೊರಗಡೆ ಹೋದಾಗ ಬನ್ನಿ ನೀವು ಕೂಡ ಯೋಗ ಮಾಡಿ ಎಂದು ಕರೆಯುತ್ತಾರೆ. ನಾನು ಕೂಡ ಒಂದೇ ಒಂದು ಬಾರಿ ಟ್ರೈ ಮಾಡೋಣ ಎಂದು ಹೋಗಿದ್ದೆ. ಈ ವೇಳೆ ಇದು ಬಹಳ ಸಿಂಪಲ್ ಯೋಗಾಸನ ಎಂದು ಹಿಂದೆ ತಿರುಗಿ ಮುಂದೆ ನೋಡುವಷ್ಟರಲ್ಲಿ ಒಂದು ಕಾಲನ್ನು ಮೇಲಕ್ಕೆ ಎತ್ತಿ ಕೈನಲ್ಲಿ ಹಿಡಿದುಕೊಂಡರು. ಬಳಿಕ ಇದು ಕೇವಲ ಬೇಸಿಕ್ ಯೋಗಾಸನ ನಿಮಗೆ ಇಷ್ಟವಿದ್ದರೆ ಮಾತ್ರ ಮಾಡಿ ಎಂದು ಹೇಳುತ್ತಾರೆ. ಹಾಗಾಗಿ ಈ ಯೋಗದ ವಿಚಾರದಲ್ಲಿ ಮಾತ್ರ ಅವರೊಂದಿಗೆ ಬಹಳ ಹುಷಾರಾಗಿರಬೇಕು. ಅಂದಿನಿಂದ ಆ ಯಮ್ಮನ ಸಹವಾಸಕ್ಕೆ ಹೋಗುವುದನ್ನು ಬಿಟ್ಟುಬಿಟ್ಟಿದ್ದೇನೆ. ಯೋಗದ ವಿಚಾರಕ್ಕೆ ಹೋಗುತ್ತಿಲ್ಲ ಎಂದರು.

    ಒಳ್ಳೆಯ ವಿಚಾರಕ್ಕೆ ಬಂದರೆ ವೈಷ್ಣವಿ ಸದಾ ನಗುತ್ತಾ ಇರುತ್ತಾರೆ. ಅದನ್ನು ನೋಡುವುದೇ ಒಂದು ರೀತಿಯ ಆನಂದ ಎಂದು ಹೇಳಿದರು. ಒಟ್ಟಾರೆ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟಾಗಲಿಂದ ಲ್ಯಾಗ್ ಮಂಜು ಮನೆಯ ಎಲ್ಲಾ ಸದಸ್ಯರನ್ನು ನಗುವಿನ ಅಲೆಯಲ್ಲಿ ತೇಲಿಸುತ್ತಿದ್ದಾರೆ. ಇದೀಗ ಶನಿವಾರದ ಎಪಿಸೋಡ್‍ನಲ್ಲಿ ಕಿಚ್ಚ ಸುದೀಪ್ ಮುಖದಲ್ಲಿ ಕೂಡ ನಗು ಮೂಡಿಸಿದ್ದಾರೆ.

  • ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮ ಆರಂಭವಾಗಿ ನಾಲ್ಕು ದಿನ ಪೂರ್ಣಗೊಂಡಿದ್ದು, ಇಷ್ಟು ದಿನದಲ್ಲಿ ಒಬ್ಬರಿಗೊಬ್ಬರು ಎಷ್ಟು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಯಲು ಬಿಗ್‍ಬಾಸ್ ಟಾಸ್ಕ್‍ವೊಂದನ್ನು ನೀಡಿದ್ದರು. ಅದರ ಅನುಸಾರ ಆ್ಯಕ್ಟಿವಿಟಿ ಏರಿಯಾದಲ್ಲಿ ಲೈಕ್ ಹಾಗೂ ಡಿಸ್ ಲೈಕ್ ಬ್ಯಾಡ್ಜ್ ಗಳನ್ನು ಇರಿಸಲಾಗಿತ್ತು. ಅದರಂತೆ ಮನೆಯ ಸದಸ್ಯರು ಸರದಿಯಲ್ಲಿ ಬಂದು ಮನೆಯಲ್ಲಿ ತಾವು ಹೊಂದಿಕೊಳ್ಳುವ ಒಬ್ಬ ಸದಸ್ಯರಿಗೆ ಲೈಕ್ ಬ್ಯಾಡ್ಜ್ ಮತ್ತು ಹೊಂದಿಕೊಳ್ಳಲಾಗದ ಮತ್ತೊಬ್ಬ ಸದಸ್ಯರಿಗೆ ಡಿಸ್ ಲೈಕ್ ಬ್ಯಾಡ್ಜ್ ನೀಡಿ ಅದಕ್ಕೆ ಸೂಕ್ತ ಕಾರಣ ತಿಳಿಸುವಂತೆ ಸೂಚಿಸಿದ್ದರು.

    ಈ ವೇಳೆ ಮನೆಯ ಬಹುತೇಕ ಸ್ಪರ್ಧಿಗಳು ನಿರ್ಮಲರ ನಡುವಳಿಕೆಯನ್ನು ವಿರೋಧಿಸಿ, ಅವರು ಯಾರೊಂದಿಗೂ ಬೆರೆಯುತ್ತಿಲ್ಲ. ಎಲ್ಲರೊಂದಿಗೆ ಮಾತನಾಡಬೇಕು ಹೀಗೆ ಹಲವು ಕಾರಣಗಳನ್ನು ನೀಡಿ ಡಿಸ್ ಲೈಕ್ ಬ್ಯಾಡ್ಜ್ ನೀಡಿದರು. ಆದರೆ ದಿವ್ಯಾ ಸುರೇಶ್ ಮಾತ್ರ ಎಲ್ಲರ ಹೇಳಿಕೆಗಿಂತಲೂ ವಿಭಿನ್ನವಾಗಿ ಉತ್ತರಿಸುವ ಮೂಲಕ ನಿರ್ಮಲಗೆ ಲೈಕ್ ಬ್ಯಾಡ್ಜ್ ನೀಡಿದರು.

    ಮೊದಲಿಗೆ ನಾನು ಡಿಸ್ ಲೈಕ್‍ನನ್ನು ನೀಡಲು ಇಚ್ಛಿಸುತ್ತೇನೆ. ಇದು ಡಿಸ್ ಲೈಕ್ ಎಂದಲ್ಲಾ. ನನಗೆ ಆ ವ್ಯಕ್ತಿ ಜೊತೆ ಹೆಚ್ಚಾಗಿ ಬೆರೆಯಲು ಆಗಲಿಲ್ಲ. ಮಾತಾನಾಡಿದ್ದೇನೆ, ಆದರೆ ಅಷ್ಟಾಗಿ ಮಾತನಾಡಿಲ್ಲ. ಡಿಸ್ ಲೈಕ್ ಬ್ಯಾಡ್ಜ್ ನೀಡುತ್ತಿದ್ದೇನೆ ಎಂದ ಮಾತ್ರಕ್ಕೆ ನಾನು ಆ ವ್ಯಕ್ತಿಯನ್ನು ದೂಷಿಸುತ್ತಿಲ್ಲ ಅಷ್ಟೇ ಎಂದು ಕ್ಷಮಿಸಿ ನಾನು ನಿಮಗೆ ಡಿಸ್ ಲೈಕ್ ಬ್ಯಾಡ್ಜ್ ನೀಡುತ್ತಿದ್ದೇನೆ ಅಂತ ಶಂಕರ್‍ಗೆ ಡಿಸ್‍ಲೈಕ್ ಬ್ಯಾಡ್ಜ್ ನೀಡಿದರು.

    ಬಳಿಕ ಲೈಕ್ ಬ್ಯಾಡ್ಜ್ ಅನ್ನು ನಿರ್ಮಲರಿಗೆ ನೀಡಲು ಇಷ್ಟಪಡುತ್ತೇನೆ. ಇಲ್ಲಿ ಕೆಲವರು ಗುಂಪಿನಲ್ಲಿ ಗೋವಿಂದ ಆಗುತ್ತಿದ್ದಾರೆ. ಅದರಲ್ಲಿ ನಾನು ಕೂಡ ಇರಬಹುದು. ಆದರೆ ನಿರ್ಮಲರಿಗೆ ಲೈಕ್ ಬ್ಯಾಡ್ಜ್ ಕೊಡಲು ಕಾರಣವೆಂದರೆ ನಾನು ಒಬ್ಬ ಮನುಷ್ಯಳು, ನನಗೂ ಭಾವನೆಗಳಿವೆ. ನನಗೂ ಸ್ವಲ್ಪ ನನ್ನದೇ ಆದ ಟೈಮ್ ನೀಡಬೇಕೆಂದು ಏಕಾಂಗಿಯಾಗಿ ಕುಳಿತುಕೊಳ್ಳುವುದು ಅಥವಾ ನಾನು ಈ ವಾರ ಎಲಿಮಿನೆಟ್ ಆಗುತ್ತಿದ್ದೇನೆ, ನಾನು ಅವರೊಂದಿಗೆ ಮಾತನಾಡಬೇಕು. ನಾನು ಕ್ಯಾಮೆರಾ ಕಣ್ಣೆದುರಿಗೆ ಕಾಣಿಸಿಕೊಳ್ಳಬೇಕು. ಎಲ್ಲರೊಂದಿಗೆ ನಾನು ಸೇರಿ ಜೋರಾಗಿ ನಗಬೇಕು ಎನ್ನುವ ಆಲೋಚನೆಯನ್ನು ಬಿಟ್ಟು, ನಾನು ಒಬ್ಬಳು ಮನುಷ್ಯಳು, ನಾನು ಒಬ್ಬಳು ಸ್ಪರ್ಧಿಯೇ ಎಂದು ನನಗೆ ನನ್ನದೇಯಾದಂತಹ ಸ್ಪೇಸ್ ಬೇಕು. ನಾನು ನಾನಾಗಿ ಇರುತ್ತೇನೆ ಎಂದು ತಾನಾಗಿಯೇ ಇರುವುದು ನಿರ್ಮಲರವರು ಎಂದು ನನ್ನ ಅಭಿಪ್ರಾಯ. ಹಾಗಾಗಿ ನಾನು ಲೈಕ್ ಬ್ಯಾಡ್ಜ್ ನನ್ನು ಅವರಿಗೆ ನೀಡುತ್ತೇನೆ ಎಂದು ವಿವರಿಸಿದರು.

    ಒಟ್ಟಾರೆ ಮನೆಮಂದಿಯೆಲ್ಲ ಡಿಸ್ ಲೈಕ್ ಬ್ಯಾಡ್ಜ್ ನೀಡಿದ ನಿರ್ಮಲಗೆ ದಿವ್ಯಾ ಲೈಕ್ ನೀಡಿದ್ದನ್ನು ನೋಡಿ ಸ್ಪರ್ಧಿಗಳೆಲ್ಲರೂ ಜೋರಾಗಿ ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.