Tag: ಪಬ್ಲಿಕ್ ಟಿವಿ chikkaballapura

  • ಯಾರಿಗೆ ದೇಣಿಗೆ ಕೊಡೋದಕ್ಕೆ ಆಗಲ್ವೋ ಅವರು ಕೊಡೋದು ಬೇಡ : ಸುಧಾಕರ್

    ಯಾರಿಗೆ ದೇಣಿಗೆ ಕೊಡೋದಕ್ಕೆ ಆಗಲ್ವೋ ಅವರು ಕೊಡೋದು ಬೇಡ : ಸುಧಾಕರ್

    ಚಿಕ್ಕಬಳ್ಳಾಪುರ: ರಾಮ ಮಂದಿರ ನಿರ್ಮಾಣಕ್ಕೆ ಯಾರಿಗೆ ದೇಣಿಗೆ ಕೊಡುವುದಕ್ಕೆ ಆಗುವುದಿಲ್ಲವೋ ಅವರು ಕೊಡುವುದು ಬೇಡ. ಯಾರಿಗೂ ಬಲವಂತ ಮಾಡುತ್ತಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ಟೀಕೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಟೀಕೆ ಮಾಡುವವರಿಗೆ ಬೀಗ ಹಾಕುವುದಕ್ಕೆ ಆಗುವುದಿಲ್ಲ. ಶ್ರೀರಾಮ ಅಯೋಧ್ಯೆಯಲ್ಲಿ ನೆಲೆಸಿದ್ದ ಎಂಬುದು ಹಿಂದೂ ಧರ್ಮದಲ್ಲಿ ಇದೆ. ಹಾಗಾಗಿ ಶ್ರೀರಾಮಚಂದ್ರ ನಮ್ಮ ಆರಾಧ್ಯ ದೈವ. ರಾಮ ಮಂದಿರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಕೊಡುಗೆ ಇರಬೇಕು ಎಂಬುವುದು ನಮ್ಮ ಭಾವನೆ. ಆದರೆ ಯಾರಿಗೆ ದೇಣಿಗೆ ಕೊಡುವುದಕ್ಕೆ ಆಗುವುದಿಲ್ಲವೋ ಅವರು ದೇಣಿಗೆ ಕೊಡುವುದು ಬೇಡ. ನಾವು ಯಾರಿಗೂ ಬಲವಂತ ಮಾಡುತ್ತಿಲ್ಲ. ಈ ವಿಚಾರದಲ್ಲಿ ಸಿದ್ದರಾಮಯ್ಯ ಆಗಲಿ, ಕುಮಾರಸ್ವಾಮಿ ಆಗಲಿ ಟೀಕೆ ಮಾಡಬಾರದು ಎಂದು ಹೇಳಿದರು.

    ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಸಂಬಂಧ ಈಗಾಗಲೇ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಕೋವಿಡ್ ಶಮನವಾಗಿದೆ ಎಂದು ಕೆಲವರು ತಿಳಿದು ಕೊರೋನಾ ಕುರಿತಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದು ಪರಿಣಾಮಕಾರಿಯಾಗಿದ್ದು, ಜನ ಎಚ್ಚರದಿಂದ ಇರಬೇಕು ಎಂದು ಸೂಚನೆ ನೀಡಿದರು.

    ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ಆಗಿದೆ. ಎಲ್ಲ ಸಚಿವರು ಅವರವರ ಅಭಿಪ್ರಾಯಗಳನ್ನ ತಿಳಿಸಿದ್ದಾರೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಕೊಡುವ ಆಶಯ ನಮ್ಮದಿದೆ. ಸಂವಿಧಾನದ ಆಶಯದಂತೆ ನೊಂದವರಿಗೆ ಮೀಸಲಾತಿ ಸಿಗಲಿದೆ. ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

    ಬಹಿರಂಗವಾಗಿ ಯಾರೂ ಎಲ್ಲೂ ಕೇವಲವಾಗಿ ಮೀಸಲಾತಿ ಬಗೆಗೆ ಮಾತನಾಡಬಾರದು. ಏನೇ ಅಭಿಪ್ರಾಯ ಇದ್ದರೂ ಸಿಎಂ ಯಡಿಯೂರಪ್ಪರವರ ಗಮನಕ್ಕೆ ತರಬೇಕು. ಎಲ್ಲಾ ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಹಾಗಾಗಿ ಬಹಿರಂಗವಾಗಿ ಯಾರು ಮಾತನಾಡದಂತೆ ಎಚ್ಚರಿಕೆ ನೀಡಿದರು.

  • ಹಬ್ಬ, ಮಗನ ಹುಟ್ಟುಹಬ್ಬ ಮುಗಿಸಿ ಬೆಂಗ್ಳೂರಿಗೆ ಮರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ತಂದೆ ಸಾವು!

    ಹಬ್ಬ, ಮಗನ ಹುಟ್ಟುಹಬ್ಬ ಮುಗಿಸಿ ಬೆಂಗ್ಳೂರಿಗೆ ಮರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ತಂದೆ ಸಾವು!

    ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರ ಹೊರವಲಯದ ಶೀತಲೀಕರಣ ಕೇಂದ್ರದ ಬಳಿ ನಡೆದಿದೆ.

    ಅಪಘಾತದಲ್ಲಿ ಆಂಧ್ರದ ಪರಿಗಿ ಮೂಲದ ಬೈಕ್ ಸವಾರ ಕಾರ್ತಿಕ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಬೈಕ್ ಸವಾರ ರವಿಕುಮಾರ್ ಅವರ ಕಾಲು ಮುರಿದಿದೆ. ಗಾಯಾಳು ಗೌರಿಬಿದನೂರು ಮೂಲದ ರವಿಕುಮಾರ್ ರನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತ ಕಾರ್ತಿಕ್ ಬೆಂಗಳೂರಿನಲ್ಲಿ ಮೆಡಿಕಲ್ ರೆಪ್ರಿಸೆಂಟೀವ್ ಆಗಿ ಕೆಲಸ ಮಾಡುತ್ತಿದ್ದು, ಹಬ್ಬದ ಪ್ರಯುಕ್ತ ಸ್ವಗ್ರಾಮ ಆಂಧ್ರಕ್ಕೆ ಬಂದಿದ್ದರು. ಕಳೆದ ರಾತ್ರಿಯಷ್ಟೇ ಮಗನ ಬರ್ತ್‍ಡೇ ಆಚರಣೆ ಮಾಡಿದ್ದ ಮೃತ ಕಾರ್ತಿಕ್, ಮಗ ಹಾಗೂ ಪತ್ನಿಯನ್ನ ಸ್ವಗ್ರಾಮದಲ್ಲೇ ಬಿಟ್ಟು ಬೆಂಗಳೂರಿಗೆ ಬೈಕ್ ನಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.