Tag: ಪಬ್ಲಿಕ್ ಟಿವಿ Children

  • ಮಕ್ಕಳ ಸಮವಸ್ತ್ರಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

    ಮಕ್ಕಳ ಸಮವಸ್ತ್ರಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

    ಶಿವಮೊಗ್ಗ: ಶಾಲಾ ಮಕ್ಕಳಿಗೆ ವಿತರಿಸಲು ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಸಮವಸ್ತ್ರಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮದಲ್ಲಿ ನಡೆದಿದೆ.

    ಮಾರುತಿಪುರದ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಸಲುವಾಗಿ ಕಳೆದ ನಾಲ್ಕು ದಿನಗಳ ಹಿಂದೆ ಶಿಕ್ಷಕರು ಸುಮಾರು 300 ಜೊತೆ ಸಮವಸ್ತ್ರ ತೆಗೆದುಕೊಂಡು ಬಂದು ಶಾಲೆಯ ಕೊಠಡಿಯೊಂದರಲ್ಲಿ ಇರಿಸಿ ಬೀಗ ಹಾಕಿಕೊಂಡು ತೆರಳಿದ್ದರು. ಆದರೆ ಇಂದು ಶಾಲಾ ಕೊಠಡಿ ಬೀಗ ತೆರೆದು ನೋಡಿದಾಗ ಎಲ್ಲಾ ಸಮವಸ್ತ್ರಗಳು ಬೆಂಕಿಗಾಹುತಿ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಇನ್ನು ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಘಟನೆ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಇನ್ನು ಘಟನೆ ಕುರಿತು ಶಾಲೆಯ ಶಿಕ್ಷಕರು ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ:ಪ್ರಿಯತಮನ ಮೇಲಿನ ಮೋಹಕ್ಕಾಗಿ ಸ್ಕೆಚ್ ಹಾಕಿ ಗಂಡನನ್ನೇ ಕೊಲ್ಲಿಸಿದ್ಳು!

  • ಮಕ್ಕಳನ್ನು ರಕ್ಷಿಸಲು ಕಟ್ಟಡವೇರಿದ ವ್ಯಕ್ತಿಗಳ ಧೈರ್ಯಕ್ಕೆ ನೆಟ್ಟಿಗರ ಮೆಚ್ಚುಗೆ

    ಮಕ್ಕಳನ್ನು ರಕ್ಷಿಸಲು ಕಟ್ಟಡವೇರಿದ ವ್ಯಕ್ತಿಗಳ ಧೈರ್ಯಕ್ಕೆ ನೆಟ್ಟಿಗರ ಮೆಚ್ಚುಗೆ

    ಬೆಂಕಿ ಹೊತ್ತಿಕೊಂಡಿದ್ದ ಅಪಾರ್ಟ್‍ವೊಂದರಲ್ಲಿ ಸಿಲುಕಿದ್ದ ಮಕ್ಕಳನ್ನು ರಷ್ಯಾದ ಮೂವರು ವ್ಯಕ್ತಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕೊಸ್ಟ್ರೋಮಾದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿಕೊಂಡಿದ್ದ ಮಕ್ಕಳನ್ನು ಕಟ್ಟಡದ ಹೊರಗೆ ಇದ್ದ ಪೈಪ್ ಏರಿ ಮೂವರು ವ್ಯಕ್ತಿಗಳು ರಕ್ಷಿಸಿದ್ದಾರೆ. ಅಲ್ಲದೇ ಈ ಘಟನೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಅಲ್ಲಿನ ಸ್ಥಳೀಯರು ಬಾಗಿಲನ್ನು ಒಡೆದು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಮದುವೆ ಸ್ಕ್ವಾಡ್ ಕನ್ನಡದಲ್ಲೇ ಬರೆದು, ಕಲರ್‍ಫುಲ್ ಫೋಟೋ ಹಂಚಿಕೊಂಡ ಸಾಯಿ ಪಲ್ಲವಿ

    ಆದರೆ ಅದರು ಸಾಧ್ಯವಾಗದೇ ಇದ್ದಾಗ ಕಟ್ಟಡದ ಹೊರಗಿದ್ದ ಡ್ರೈನ್ ಪೈಪ್‍ಗಳನ್ನು ಮೂವರು ವ್ಯಕ್ತಿಗಳು ಒಬ್ಬರ ನಂತರ ಒಬ್ಬರು ಹತ್ತಿ, ಕಿಟಕಿ ಮೂಲಕ ಒಬ್ಬರ ನಂತರ ಒಬ್ಬರಂತೆ ಮಕ್ಕಳನ್ನು ಪಾಸ್ ಮಾಡುತ್ತಾರೆ. ಇತ್ತ ಕೆಳಗಡೆ ನಿಂತಿದ್ದ ಮಹಿಳೆಯರು ಮಕ್ಕಳನ್ನು ಇಳಿಸಿಕೊಂಡಿದ್ದಾರೆ. ಘಟನೆ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗತ್ತಿದ್ದು, ಮಕ್ಕಳನ್ನು ರಕ್ಷಿಸಲು ಹರಸಹಾಸ ಪಟ್ಟ ಮೂವರು ವ್ಯಕ್ತಿಗಳ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಪಾಟ್ನಾದ ಏಮ್ಸ್‌ನಲ್ಲಿ ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆ ಪ್ರಯೋಗ ಆರಂಭ

    ಪಾಟ್ನಾದ ಏಮ್ಸ್‌ನಲ್ಲಿ ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆ ಪ್ರಯೋಗ ಆರಂಭ

    ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ ಮಕ್ಕಳ ಮೇಲೆ ಭಾರತ್ ಬಯೋಟೆಕ್ ಕಂಪನಿಯ ಕೊವಾಕ್ಸಿನ್ ಲಸಿಕೆಯ ಪ್ರಯೋಗ ಆರಂಭವಾಗಿದೆ.

    ಮೇ 18 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೀತಿ ಆಯೋಗದ ಸದಸ್ಯ (ಆರೋಗ್ಯ ವಿಭಾಗ) ಡಾ.ವಿ.ಕೆ.ಪೌಲ್, ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆಯ ವೈದ್ಯಕೀಯ ಪ್ರಯೋಗ 10-12 ದಿನಗಳಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.

    ಕೊವಾಕ್ಸಿನ್ ಲಸಿಕೆಯನ್ನು 2ರಿಂದ 18 ವರ್ಷದವರ ಮೇಲೆ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಅನುಮತಿ ನೀಡಿದೆ ಎಂದು ವಿವರಿಸಿದ್ದರು. ಭಾರತದ ಹಲವು ವೈದ್ಯಕೀಯ ಸಂಸ್ಥೆಗಳಲ್ಲಿ 525 ಮಕ್ಕಳ ಮೇಲೆ ಕೊವಾಕ್ಸಿನ್ ಲಸಿಕೆ ಪ್ರಯೋಗ ನಡೆಸಲು ಸಿದ್ಧತೆ ನಡೆದಿದೆ.

    ಕೆಲವು ಷರತ್ತುಗಳನ್ನು ವಿಧಿಸಿ ಲಸಿಕೆಯ ಪ್ರಯೋಗಕ್ಕೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ) ವಿಷಯ ತಜ್ಞರ ಸಮಿತಿ ಶಿಫಾರಸು ಮಾಡಿತ್ತು. ಶಿಫಾರಸಿನ ಹಿನ್ನೆಲೆಯಲ್ಲಿ ಮೇ 11 ರಂದು ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಕೊವಾಕ್ಸಿನ್ ಲಸಿಕೆಗೆ ಅನುಮತಿ ನೀಡಿತ್ತು. ಇದನ್ನು ಓದಿ:ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ 35,000 ಕೋಟಿ ಏನಾಯ್ತು? ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್ ಆದೇಶ

    5 ರಿಂದ 18 ವರ್ಷದ ಒಳಗಿನವರಲ್ಲಿ ಲಸಿಕೆ ಪ್ರಯೋಗ ನಡೆಸಲು ಅನುಮತಿ ನೀಡುವಂತೆ ಫೆಬ್ರುವರಿಯಲ್ಲಿ ಭಾರತ್ ಬಯೋಟೆಕ್ ಮನವಿ ಮಾಡಿತ್ತು. ಈ ಸಮಯದಲ್ಲಿ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ) ವಯಸ್ಕರ ಮೇಲೆ ಈ ಲಸಿಕೆಯ ಪರಿಣಾಮದ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.

    ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಬೀಳಲಿದೆ. ಹೀಗಾಗಿ ಕೂಡಲೇ ಮಕ್ಕಳಿಗೆ ಲಸಿಕೆ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಈ ಆಗ್ರಹಕ್ಕೆ ಕೇಂದ್ರ ಸರ್ಕಾರ ಕಳೆದ ವಾರ ಸ್ಪಷ್ಟನೆ ನೀಡಿತ್ತು.

    ವಿಶ್ವದ ಯಾವುದೇ ದೇಶವು ಮಕ್ಕಳಿಗೆ ಲಸಿಕೆಗಳನ್ನು ನೀಡುತ್ತಿಲ್ಲ. ಅಲ್ಲದೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ಶಿಫಾರಸು ಮಾಡಿಲ್ಲ. ಮಕ್ಕಳಲ್ಲಿ ಲಸಿಕೆಗಳ ಸುರಕ್ಷತೆಯ ಬಗ್ಗೆ ಅಧ್ಯಯನಗಳು ನಡೆದಿದೆ ಎಂದು ತಿಳಿಸಿತ್ತು. ಇದನ್ನು ಓದಿ:ರಾಜ್ಯದಲ್ಲಿ 1 ಸಾವಿರ ವೆಂಟಿಲೇಟರ್ ಕೊಳೆಯುತ್ತಿವೆ: ಶಾಸಕ ಡಾ.ಅಜಯ್ ಸಿಂಗ್

    ಭಾರತದಲ್ಲಿ ಮಕ್ಕಳ ಮೇಲೆ ಶೀಘ್ರವೇ ಕ್ಲಿನಿಕಲ್ ಟ್ರಯಲ್ ಆರಂಭವಾಗಲಿದೆ. ಪ್ರಯೋಗಗಳ ಆಧಾರದ ಮೇಲೆ ಸಾಕಷ್ಟು ದತ್ತಾಂಶಗಳು ಲಭ್ಯವಾದ ನಂತರ ಈ ಬಗ್ಗೆ ನಮ್ಮ ವಿಜ್ಞಾನಿಗಳು ನಿರ್ಧಾರ ಕೈಗೊಳ್ಳಬೇಕೇ ಹೊರತು, ವಾಟ್ಸಪ್ ಗ್ರೂಪ್‍ಗಳಲ್ಲಿ ಸೃಷ್ಟಿಸಲಾಗುವ ಭೀತಿ ಮತ್ತು ಕೆಲವು ರಾಜಕಾರಣಿಗಳ ರಾಜಕೀಯ ಆಧರಿಸಿ ಮಕ್ಕಳಿಗೆ ಲಸಿಕೆ ಹಾಕುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗದು ಎಂದಿತ್ತು.