Tag: ಪಬ್ಲಿಕ್ ಟಿವಿ Corona

  • ನಾಳೆಯಿಂದ ಅನ್‍ಲಾಕ್ – ಗಂಟು, ಮೂಟೆ ಹೊತ್ತು ಕುಟುಂಬ ಸಮೇತ ಬೆಂಗಳೂರಿನತ್ತ ಜನ

    ನಾಳೆಯಿಂದ ಅನ್‍ಲಾಕ್ – ಗಂಟು, ಮೂಟೆ ಹೊತ್ತು ಕುಟುಂಬ ಸಮೇತ ಬೆಂಗಳೂರಿನತ್ತ ಜನ

    ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಲಾಕ್‍ಡೌನ್ ತೆರವು ಹಿನ್ನೆಲೆ ರಾಜ್ಯದ ಗಡಿ ಅತ್ತಿಬೆಲೆ ಮೂಲಕ ಸಾಲು-ಸಾಲು ವಾಹನಗಳ ಮೂಲಕ ಜನರು ಬೆಂಗಳೂರಿನತ್ತ ಬರುತ್ತಿದ್ದಾರೆ.

    ನಾಳೆಯಿಂದ ಅನ್‍ಲಾಕ್ ಆಗಿರುವುದರಿಂದ ವಲಸೆ ಹೋಗಿದ್ದ ಕಾರ್ಮಿಕರು ಕರ್ನಾಟಕ- ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ವಾಹನಗಳ ಮೂಲಕ ಮತ್ತೆ ಮರಳಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಜನರು ಕಾರುಗಳಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ತಮ್ಮ ಕುಟುಂಬ ಸಮೇತರಾಗಿ ಲಗೇಜುಗಳೊಂದಿಗೆ ಒಂದುವರೆ ತಿಂಗಳ ಬಳಿಕ ತಮ್ಮ ನಿವಾಸಗಳಿಗೆ ಆಗಮಿಸುತ್ತಿದ್ದಾರೆ.

    ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಪೇದೆಯೊಬ್ಬರು ಹಾಗೂ ನಾಲ್ಕು ಜನ ಹೋಂ ಗಾರ್ಡ್‍ಗಳು, ಶಿಕ್ಷಕರು ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಇದನ್ನು ಹೊರತುಪಡಿಸಿ ಚೆಕ್ ಪೋಸ್ಟ್ ಗೆ ನೇಮಕ ಮಾಡಿದ್ದ ರೆವಿನ್ಯೂ ಇಲಾಖೆ ಅಧಿಕಾರಿಗಳು ಸೇರಿದಂತೆ ಕೆಲ ಇಲಾಖೆಯ ಅಧಿಕಾರಿಗಳು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ, ಡ್ಯೂಟಿ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ.  ಇದನ್ನೂ ಓದಿ: ನಾಳೆಯಿಂದ ದೆಹಲಿಯಲ್ಲಿ ಅನ್‍ಲಾಕ್ – ಹೋಟೆಲ್‍ಗಳಲ್ಲಿ ಶೇ.50, ಮಾಲ್ ಫುಲ್ ಓಪನ್

    ಬೆಳಗ್ಗೆಯಿಂದ ಸಂಜೆಯವರೆಗೂ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಸರಿಯಾದ ಮಾರ್ಗಸೂಚಿ ನೀಡದ ಹಾಗೂ ಬೆರಳೆಣಿಕೆಯಷ್ಟು ಸಿಬ್ಬಂದಿಗಳ ನಿಯೋಜನೆಯಿಂದ ಯಾವುದೇ ಕಟ್ಟುನಿಟ್ಟಿನ ತಪಾಸಣೆ ಮಾಡದೇ ಇರುವುದು ಕಂಡು ಬಂತು. ಒಟ್ಟಿನಲ್ಲಿ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬೆಂಗಳೂರು ತೊರೆದಿದ್ದ ವಲಸೆ ಕಾರ್ಮಿಕರು ಮತ್ತೆ ಬೆಂಗಳೂರಿನತ್ತ ಮರಳಿ ಮುಖ ಮಾಡಿದ್ದು, ಮತ್ತಷ್ಟು ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮೊದಲ ಪ್ರಯತ್ನ- ಹುಬ್ಬಳ್ಳಿಯಲ್ಲಿ 2 ರೂ.ಗೆ ಸಿಗುತ್ತೆ ಸರ್ಜಿಕಲ್ ಮಾಸ್ಕ್!

  • ಶಿವಮೊಗ್ಗ ಜಿಲ್ಲೆಯಲ್ಲಿ ಜೂ.21 ರವರೆಗೆ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ ಜಿಲ್ಲೆಯಲ್ಲಿ ಜೂ.21 ರವರೆಗೆ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಜೂ.21ರವರೆಗೆ ಒಂದು ವಾರಗಳ ಕಾಲ ಮುಂದುವರಿಯಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.7 ರಷ್ಟಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ.

    ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6 ರಿಂದ 8 ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಇನ್ನುಳಿದಂತೆ ಅಗತ್ಯವಿರುವ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‍ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಗ್ಗೆ 6 ರಿಂದ 8 ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದ್ದಾರೆ.

    ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಭೆಯಲ್ಲಿ ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸಾದ್, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಜೂ.30ರವರೆಗೆ ಮದುವೆ ಸೇರಿ ಎಲ್ಲ ಸಭೆ, ಸಮಾರಂಭಗಳಿಗೆ ನಿರ್ಬಂಧ

  • ನನಗೆ ವ್ಯಾಕ್ಸಿನ್ ಬೇಡ, ನಾನು ಬೇವಿನ ಚೆಕ್ಕೆ ಕುಡಿಯುತ್ತೇನೆ – ವೃದ್ಧೆ ಕಿಡಿ

    ನನಗೆ ವ್ಯಾಕ್ಸಿನ್ ಬೇಡ, ನಾನು ಬೇವಿನ ಚೆಕ್ಕೆ ಕುಡಿಯುತ್ತೇನೆ – ವೃದ್ಧೆ ಕಿಡಿ

    ಚಿತ್ರದುರ್ಗ: ಕೊರೊನಾ ವ್ಯಾಕ್ಸಿನ್ ಪಡೆಯಲು ಜನರು ನಾ ಮುಂದು, ತಾ ಮುಂದು ಅಂತ ಮುಗಿ ಬೀಳುತ್ತಿದ್ದಾರೆ. ಆದರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿಯ ವೃದ್ದೆ ಹನುಮಕ್ಕ (61), ಮಾತ್ರ ನನಗೆ ಕೊರೊನಾ ಬಂದರೆ ಬರಲಿ, ಬಿಟ್ಟರೆ ಬಿಡಲಿ ವ್ಯಾಕ್ಸಿನ್ ಮಾತ್ರ ಬೇಡ ಎಂದಿದ್ದಾರೆ.

    ಕೆ.ಆರ್ ಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ನರ್ಸರಿಯಲ್ಲಿ ಗಿಡ ಸಾಕಣೆ ಕೆಲಸ ಮಾಡುವ ಈ ವೃದ್ಧೆ ಹನುಮಕ್ಕನಿಗೆ ಗ್ರಾಮದ ಯುವಕರು ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಕೊರೊನಾ ಭೀತಿ ಇಲ್ಲದೇ ಯುವಕರಿಗೆ ತಿರುಗೇಟು ನೀಡಿರುವ ವೃದ್ದೆಯೂ ನನಗೆ ಯಾವುದೇ ರೋಗವಿಲ್ಲ. ಅದರಲ್ಲೂ ಬಿಪಿ, ಶುಗರ್ ಕೂಡ ನನಗಿಲ್ಲ. ನಾನು ಗುಂಡುಕಲ್ಲು ಇದ್ದಂಗೆ ಇದ್ದೀನಿ ಎಂದು ಧೈರ್ಯವಾಗಿ ಹೇಳಿದ್ದಾರೆ. ಇದನ್ನು ಓದಿ: ವೇಷಭೂಷಣ ತೊಟ್ಟು ಬೆಣ್ಣೆ ನಗರಿ ಯುವಕರಿಂದ ಕೊರೊನಾ ಜಾಗೃತಿ

    ಎಲ್ಲೆಡೆ ಬಾರಿ ಬೇಡಿಕೆಯಿಂದ ಜನರು ಕೊರೊನಾ ವ್ಯಾಕ್ಸಿನ್‍ಗಾಗಿ ಮುಗಿ ಬೀಳುತ್ತಿದ್ದಾರೆ. ಆದರೆ ನನಗೆ ಆ ವ್ಯಾಕ್ಸಿನ್‍ನ ಅಗತ್ಯವಿಲ್ಲ. ಅಂತಹ ಸಮಸ್ಯೆ ಏನಾದರು ಉಲ್ಬಣಿಸಿದರೆ ನಮ್ಮ ನರ್ಸರಿಯಲ್ಲಿರುವ ಬೇವಿನ ಚೆಕ್ಕೆಯೇ ನನಗೆ ವ್ಯಾಕ್ಸಿನ್ ಎನಿಸಿದೆ. ಹೀಗಾಗಿ ನಿತ್ಯ ನಾನು ಬೇವಿನ ಚೆಕ್ಕೆ ಕಾಯಿಸಿ, ಕುದಿಸಿ ಕುಡಿಯುತ್ತೇನೆ. ಆದರಿಂದ ನನಗೆ ಯಾವುದೇ ಕೊರೊನಾ ಸೋಂಕಿನ ಭಯವಿಲ್ಲ. ಈವರೆಗೆ ಯಾವುದೇ ಸಮಸ್ಯೆ ಸಹ ನನಗೆ ಎದುರಾಗಿಲ್ಲ ಎಂದು ವೃದ್ಧೆ ಹೇಳಿದ್ದಾರೆ. ಒಟ್ಟಾರೆ ಅಜ್ಜಿಯ ಗಟ್ಟಿತನ ನೋಡಿದ ಕೋಟೆನಾಡಿನ ಜನರಲ್ಲಿ ಬಾರಿ ಅಚ್ಚರಿ ಮೂಡಿಸಿದೆ. ಇದನ್ನು ಓದಿ: ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

  • ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ರೂಪುರೇಷೆ ಸಿದ್ದವಾಗಿಲ್ಲ – ಸಚಿವ ಅಂಗಾರ

    ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ರೂಪುರೇಷೆ ಸಿದ್ದವಾಗಿಲ್ಲ – ಸಚಿವ ಅಂಗಾರ

    ಕಾರವಾರ: ರಾಜ್ಯದಲ್ಲಿ ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ವಿಚಾರದಲ್ಲಿ ಇನ್ನೂ ಸರಿಯಾದ ರೂಪುರೇಷೆ ಸಿದ್ದವಾಗಿಲ್ಲ ಎಂದು ಮೀನುಗಾರಿಕೆ ಸಚಿವ ಎಸ್ ಅಂಗಾರ ಹೇಳಿದ್ದಾರೆ. ಇದನ್ನು ಓದಿ: ತುಮಕೂರು, ಎರಡು ಪ್ರತ್ಯೇಕ ಅಪಘಾತ – ನಾಲ್ವರ ಸಾವು

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಮತ್ತು ಬೈತಖೋಲ್ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಮೀನುಗಾರರಿಗೆ ಸೂಕ್ತ ಪರಿಹಾರ ಘೋಷಿಸಿರಲಿಲ್ಲ. ಈ ಬಾರಿ ಮುಖ್ಯಮಂತ್ರಿಗಳು ಗಮನ ನೀಡಿದ್ದಾರೆ. ಮೀನುಗಾರರ ಉಳಿತಾಯ ಪರಿಹಾರ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಬರುವ ಶುಕ್ರವಾರ ಮೀನುಗಾರಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೈನಲ್ ಮಾಡುತ್ತೇವೆ. ಡಿಸೇಲ್, ಸೀಮೆಎಣ್ಣೆ ಸಬ್ಸಿಡಿ ಬಾಕಿ ಇರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಹೆಚ್ಚುವರಿ ಹಣ ಬಿಡುಗಡೆಗೆ ಒತ್ತಾಯಿಸಿದ್ದೇವೆ ಎಂದರು.

    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವೆಲ್ಲರೂ ಒಂದು ವಿಚಾರದಲ್ಲಿ ಬೆಳೆದು ಬಂದವರು. ನಮಗೆ ನಾಯಕತ್ವದ ಪ್ರಶ್ನೆ ಬರೋದಿಲ್ಲ. ನಾವು ಯಾವ ನಾಯಕತ್ವದಲ್ಲಿ ಇರಲು ಸಿದ್ದರಿದ್ದೇವೆ. ಹಾಗಂತ ಯಡಿಯೂರಪ್ಪ ಅವರನ್ನ ಬದಲಾಯಿಸಲು ಬಯಸುವುದಿಲ್ಲ ಎಂದು ಅಂಗಾರ ಹೇಳಿದರು. ಇದನ್ನು ಓದಿ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ

  • ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ

    ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ

    ಬೆಂಗಳೂರು: ಕೊರೊನಾ ಸೋಂಕು ಕಮ್ಮಿಯಾಗುತ್ತಿರುವ ಬೆನ್ನಲ್ಲೇ ಜನ ಇರಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ನಿಯಮಗಳ ಪಾಲನೆ ಗಾಳಿಗೆ ತೂರುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಹೆಬ್ಬಾಳದಲ್ಲಿ ಸ್ವಪಕ್ಷದ ಮುಖಂಡ ಎಂಸಿಎ ಸಂಸ್ಥೆಯ ಅಧ್ಯಕ್ಷ ಸಿ.ಮುನಿಕೃಷ್ಣ ಅವರ ಬರ್ತಡೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಮಾಜಿಕ ಅಂತರ ಪಾಲನೆ ಮಾಡದೇ ಭಾಗವಹಿಸಿರುವುದು ಟೀಕೆಗೆ ಗುರಿಯಾಗಿದೆ. ಇದನ್ನು ಓದಿ: ರಾಜೀನಾಮೆಗೆ ಸಿದ್ಧ, ಅವಮಾನ ಮಾಡಿ ಕೆಳಗೆ ಇಳಿಸುತ್ತೇವೆ ಎಂದರೆ ನಾನು ಬಗ್ಗಲ್ಲ

    ಸಿ. ಮುನಿಕೃಷ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ಹೆಬ್ಬಾಳದ ಚೋಳನಾಯಕನ ಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಗೃಹ, ಕಾನೂನು ಮತ್ತು ಸಂಸದ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪೌರ ಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ ವಿ ಸದಾನಂದಗೌಡ, ಸಿ ಮುನಿಕೃಷ್ಣ ಉಪಸ್ಥಿತರಿದ್ದರು. ಇದನ್ನು ಓದಿ:ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ನಮ್ಮ ನಿಷ್ಠೆ – ಸುಧಾಕರ್

    ಆದರೆ ಯಾರೊಬ್ಬರೂ ಸಾಮಾಜಿಕ ಅಂತರ ಪಾಲಿಸದೇ ಅಕ್ಕಪಕ್ಕ ಅಂಟಿಕೊಂಡೇ ಇದ್ದರು. ಇದೇನಾ ಜನಪ್ರತಿನಿಧಿಗಳ ನಡವಳಿಕೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ.

  • ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

    ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

    ಬೆಂಗಳೂರು: ಕೊರೊನಾ ಪರಿಹಾರ ಪ್ಯಾಕೇಜ್‍ನಲ್ಲಿ ಮಸ್ಜಿದ್ ಇಮಾಮರಿಗೂ ಸಹಾಯ ಧನ ಘೋಷಿಸಿರುವ ರಾಜ್ಯ ಸರಕಾರದ ಕ್ರಮವನ್ನು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಸ್ವಾಗತಿಸಿದ್ದಾರೆ.

    ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿದ್ದ ಲಾಕ್‍ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ಘೋಷಿಸಿತ್ತು. ಅದರಂತೆ ಮಸ್ಜಿದ್ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಈ ಮುನ್ನ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿರವರು ಮನವಿ ಮಾಡಿಕೊಂಡಿದ್ದರು.

    ಕೊರೊನಾ ಮತ್ತು ಲಾಕ್ ಡೌನ್ ಸಂಕಷ್ಟದ ಪ್ರಾರಂಭದಿಂದಲೂ ಮಸ್ಜಿದ್ ಇಮಾಮರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಜೀವನ ನಿರ್ವಹಣೆಗಾಗಿ ಆದಾಯವಿಲ್ಲದೆ ಅವರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರು. ಇದನ್ನು ಮನಗಂಡಿದ್ದ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ಇಮಾಮರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರಕಾರವನ್ನು ನಿರಂತರವಾಗಿ ಆಗ್ರಹಿಸುತ್ತಾ ಬಂದಿತ್ತು. ಪತ್ರಿಕಾ ಪ್ರಕಟನೆ ಮೂಲಕ ಮತ್ತು ಶಾಸಕರು ಹಾಗೂ ಸರಕಾರದ ಅಧಿಕೃತರನ್ನು ಸಂಪರ್ಕಿಸಿ ತನ್ನ ಬೇಡಿಕೆಯನ್ನು ಮುಂದಿಟ್ಟಿತ್ತು. ಇದೀಗ ಪರಿಹಾರ ಪ್ಯಾಕೇಜ್ ನಲ್ಲಿ ಮಸ್ಜಿದ್ ಇಮಾಮರು ಮತ್ತು ಮುಅಝ್ಝಿನ್ ಗಳನ್ನು ಪರಿಗಣಿಸಿರುವುದು ಸಂತಸದ ವಿಚಾರವಾಗಿದೆ ಮತ್ತು ಇದಕ್ಕಾಗಿ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯ ಸರಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದೆ. ಇದನ್ನು ಓದಿ: ಕೊರೊನಾ ನಿಯಮ ಉಲ್ಲಂಘನೆ-ಹುಟ್ಟುಹಬ್ಬ ಆಚರಿಸಿಕೊಂಡ ಸಬ್ ಇನ್‌ಸ್ಪೆಕ್ಟರ್

    ಪರಿಹಾರ ವಿತರಣೆಯ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಮತ್ತು ಸಂಕಷ್ಟದಲ್ಲಿರುವ ಎಲ್ಲಾ ಇಮಾಮರಿಗೂ ಸಮರ್ಪಕವಾಗಿ ಸಹಾಯಧನ ತಲುಪಿಸಲು ಕ್ರಮಕೈಗೊಳ್ಳಬೇಕು. ಅದೇ ರೀತಿ ಈ ಪರಿಹಾರ ಪ್ಯಾಕೇಜನ್ನು ರಾಜ್ಯದಲ್ಲಿರುವ ಮದ್ರಸ ಅಧ್ಯಾಪಕರಿಗೂ ವಿಸ್ತರಿಸಬೇಕೆಂದು ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಒತ್ತಾಯಿಸಿದ್ದಾರೆ. ಇದನ್ನು ಓದಿ:ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

  • ಎಲ್ಲ ಜನರಿಗೆ ಲಸಿಕೆ – ಬೀದರ್ ಜಿಲ್ಲೆಯ ಗ್ರಾಮ ಈಗ ರಾಜಕ್ಕೆ ಮಾದರಿ

    ಎಲ್ಲ ಜನರಿಗೆ ಲಸಿಕೆ – ಬೀದರ್ ಜಿಲ್ಲೆಯ ಗ್ರಾಮ ಈಗ ರಾಜಕ್ಕೆ ಮಾದರಿ

    ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಉಚ್ಛಾ ಗ್ರಾಮದ ಜನರು ನೂರಕ್ಕೆ ನೂರು ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

    ಆರಂಭದಲ್ಲಿ ಲಸಿಕೆ ಪಡೆದರೆ ಅಡ್ಡಪರಿಣಾಮಗಳು ಆಗುತ್ತವೆ ವದಂತಿ ಹರಡಿದ್ದರೂ ಜನ ಈ ಸುಳ್ಳು ವದಂತಿಯನ್ನು ನಂಬದ ಕಾರಣ 45 ವರ್ಷ ಮೇಲ್ಪಟ್ಟ ಎಲ್ಲ ಜನ ಲಸಿಕೆ ಹಾಕಿದ್ದಾರೆ. ಈ ಗ್ರಾಮದ ಒಟ್ಟು 2,473 ಜನರು ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿ ಗ್ರಾಮವಾಗಿ ಹೊರಹೊಮ್ಮಿದೆ.

    45 ವರ್ಷ ಮೇಲ್ಪಟ್ಟ 1,054 ಮಂದಿ, 18 ದಿಂದ 44 ವರ್ಷದ ಒಳಗಿನ ವಿಶೇಷ ಚೇತನರು, ವ್ಯಾಪಾರಿಗಳು ಸೇರಿದಂತೆ 589 ಜನ ಲಸಿಕೆ ಪಡೆದಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ 758 ವಯೋವೃದ್ಧರಿಗೂ ಮತ್ತು 71 ಜನ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದವರಿಗೂ ಲಸಿಕೆ ನೀಡಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೆ ಗ್ರಾಮಸ್ಥರು ಎಲ್ಲರು ಲಸಿಕೆ ಸ್ವೀಕರಿಸಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ.

    ಹಲವು ತಿಂಗಳಿಂದ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಭುವನೇಶ್ ಪಾಟೀಲ್, ತಹಸೀಲ್ದಾರ್, ಸ್ಥಳೀಯ ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಹಲವು ಬಾರಿಗೆ ಭೇಟಿ ನೀಡಿ ಜನರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ಥಳೀಯ ಸಿಬ್ಬಂದಿ ಕೂಡಾ ಹಗಲಿ ಇರುಳು ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ ಶ್ರಮಿಸಿದ್ದರಿಂದ ಈ ಸಾಧನೆ ನಿರ್ಮಾಣವಾಗಿದೆ. ಇದನ್ನು ಓದಿ:ಬೆಂಗಳೂರಿನ ಸ್ಮಶಾನಗಳಲ್ಲಿರುವ ಅನಾಥ ಅಸ್ಥಿಗಳಿಗೆ ಇಂದು ಮಂಡ್ಯದಲ್ಲಿ ಮೋಕ್ಷ

    ಸ್ಥಳೀಯ ಶಾಸಕರಾದ ಈಶ್ವರ್ ಖಂಡ್ರೆ ಕೂಡಾ ಗ್ರಾಮದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸಿ ಲಸಿಕೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸತತ ಪರಿಶ್ರಮದಿಂದಾಗಿ ಇಂದು ಈ ಗ್ರಾಮ ಸಂಪೂರ್ಣವಾಗಿ ಲಸಿಕೆ ಪಡೆಯುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ.

    ಜಿಲ್ಲೆಯ 19 ಲಕ್ಷ ಜನಗಳ ಪೈಕಿ ಸದ್ಯ 3 ಲಕ್ಷ ಲಸಿಕೆ ವಿತರಣೆಯಾಗಿದೆ. ಇಡೀ ಜಿಲ್ಲೆಗೆ ಸಂಪೂರ್ಣವಾಗಿ ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಅಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ಪರಿಶ್ರಮದಿಂದಾಗಿ ಸಂರ್ಪೂಣವಾಗಿ ಈ ಗ್ರಾಮದಲ್ಲಿ ಲಸಿಕೆ ಮಾಡಲಾಗಿದೆ. ನಮ್ಮದು ಗಡಿ ಜಿಲ್ಲೆಯಾಗಿದ್ದರಿಂದ ಯಾವುದೇ ಸಮಸ್ಯೆಯಾಗದಂತೆ ವೇಗವಾಗಿ ಈ ಲಸಿಕೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಲಸಿಕೆ ಪಡೆದ ಗ್ರಾಮಸ್ಥರು ಸುರಕ್ಷವಾಗಿದ್ದು, ಎಲ್ಲರು ಈ ಗ್ರಾಮವನ್ನು ಮಾದರಿಯಾಗಿ ತೆಗೆದುಕೊಂಡು ಎಲ್ಲರು ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಓದಿ:ಜುಲೈ ಮಧ್ಯ, ಆಗಸ್ಟ್ ಆರಂಭದಲ್ಲಿ ದಿನಕ್ಕೆ 1 ಕೋಟಿ ಲಸಿಕೆ ಲಭ್ಯ – ಕೇಂದ್ರ

  • ಕಾರಿನಲ್ಲಿ ಸಂಚಾರ – ಪಾಸಿಟಿವ್ ವ್ಯಕ್ತಿಯ ಕುಟುಂಬವೇ ಆಸ್ಪತ್ರೆಗೆ ಶಿಫ್ಟ್

    ಕಾರಿನಲ್ಲಿ ಸಂಚಾರ – ಪಾಸಿಟಿವ್ ವ್ಯಕ್ತಿಯ ಕುಟುಂಬವೇ ಆಸ್ಪತ್ರೆಗೆ ಶಿಫ್ಟ್

    – ಒಂದೇ ದಿನ 100 ಕ್ಕೂ ಹೆಚ್ಚು ವಾಹನ ಸೀಜ್ ಮಾಡಿದ ಪೊಲೀಸರು

    ಚಿಕ್ಕೋಡಿ: ಕೊರೊನಾ ಪಾಸಿಟಿವ್ ಇದ್ದರೂ ಅನಗತ್ಯವಾಗಿ ಕಾರಿನಲ್ಲಿ ಕುಟುಂಬ ಸಮೇತ ಓಡಾಡುತ್ತಿದ್ದ ವ್ಯಕ್ತಿಯನ್ನು ಪೆÇಲೀಸರುವ ತಡೆದು ಆಸ್ಪತ್ರೆಗೆ ರವಾನಿಸಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

    ಹುಕ್ಕೇರಿ ಪಟ್ಟಣದ ಕೋರ್ಟ್ ವೃತ್ತದಲ್ಲಿ ಹುಕ್ಕೇರಿ ಸಿಪಿಐ ರಮೇಶ್ ಚಾಯಾಗೋಳ ನೇತೃತ್ವದಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಪಾಸಿಟಿವ್ ಇರುವ ವ್ಯಕ್ತಿ ಕುಟುಂಬ ಸಮೇತ ಪರ ಊರಿಗೆ ತೆರಳುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಪಾಸಿಟಿವ್ ಇರುವುದನ್ನ ಸ್ವತಃ ರೋಗಿಯೇ ಹೇಳುತ್ತಿದ್ದಂತೆ ಗರಂ ಆದ ಸಿಪಿಐ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ಕುಟುಂಬ ಸಮೇತ ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು. ಇದನ್ನು ಓದಿ: ಭಾರತದಲ್ಲಿಯೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆ

    ಕೊರೊನಾ ಲಾಕ್ ಡೌನ್ ಇದ್ದರೂ ಜನರ ಅನಗತ್ಯ ಓಡಾಟ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅನಗತ್ಯ ಓಡಾಡುವರಿಗೆ ಪೊಲೀಸರು ಬಿಸಿ ಮುಟ್ಟಿಸಿ ಒಂದೇ ದಿನ 100ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಕಲಿ ಕೋವಿಡ್ ಡ್ಯೂಟಿ ಪಾಸ್ ಅಳವಡಿಸಿದ ವ್ಯಕ್ತಿಯ ಕಾರ್ ಸೇರಿದಂತೆ ಮಹಾರಾಷ್ಟ್ರದಿಂದ ಕಳ್ಳ ಮಾರ್ಗದ ಮೂಲಕ ಬಂದವರ ಕಾರನ್ನು ಸೀಜ್ ಮಾಡಿ ಸಿಪಿಐ ರಮೇಶ್ ಚಾಯಾಗೋಳ ತರಾಟೆಗೆ ತೆಗೆದುಕೊಂಡರು. ಹುಕ್ಕೇರಿ ಪಿಎಸ್‍ಐ ಸಿದ್ದರಾಮಪ್ಪ ಉನ್ನದ ಸೇರಿದಂತೆ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆಯಲ್ಲಿ ಭಾಗಿಯಾಗಿದ್ದರು.

  • ಕೊರೊನಾದಿಂದ ಅನಾಥರಾದ ವಿದ್ಯಾರ್ಥಿಗಳಿಗೆ ಸತ್ಯಸಾಯಿಯಿಂದ ಉಚಿತ ಶಿಕ್ಷಣ, ವಿದ್ಯಾರ್ಥಿವೇತನ

    ಕೊರೊನಾದಿಂದ ಅನಾಥರಾದ ವಿದ್ಯಾರ್ಥಿಗಳಿಗೆ ಸತ್ಯಸಾಯಿಯಿಂದ ಉಚಿತ ಶಿಕ್ಷಣ, ವಿದ್ಯಾರ್ಥಿವೇತನ

    ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ತಂದೆ ಅಥವಾ ತಾಯಿ ಕಳೆದುಕೊಂಡು ಅನಾಥರಾಗಿರುವ ಕರ್ನಾಟಕ ರಾಜ್ಯದ ಮಕ್ಕಳಿಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮ ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವುದಾಗಿ ಪ್ರಕಟಣೆ ಹೊರಡಿಸಿದೆ.

    1 ನೇ ತರಗತಿಯಿಂದ 12 ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಹಾಗೂ ತಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗದಿದ್ದಲ್ಲಿ ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಅನಾಥ ವಿದ್ಯಾರ್ಥಿಗಳಿಗೆ ವಾರ್ಷಿಕ 20 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುವುದು.

    ಅನಾಥರಾದ ಮಕ್ಕಳು ಸತ್ಯಸಾಯಿ ಗುರುಕುಲದಲ್ಲಿ ಸೇರಲು ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ನೊಂದಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಿಗೆ ಇಂಟರ್ ವ್ಯೂ ಮಾಡಿ ತದನಂತರ ದಾಖಲಾತಿ ಮಾಡಿಕೊಳ್ಳಲಾಗುವುದು. ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಯಾವುದಾದರೊಂದು ಶಾಲೆಯಲ್ಲಿ 6 ರಿಂದ 12ನೇ ತರಗತಿಯವರೆಗೆ ಊಟ ವಸತಿ ಸಹಿತ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು. ಇದನ್ನು ಓದಿ: ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಐಡಿಯಾಗೆ ಜನರಿಂದ ಮೆಚ್ಚುಗೆ

    ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಶಾಲೆಗಳು ಕರ್ನಾಟಕ ರಾಜ್ಯಾದ್ಯಂತ ಅನೇಕ ಶಾಖೆಗಳನ್ನು ಹೊಂದಿವೆ. ಈ ಪೈಕಿ ಯಾವುದಾದರೊಂದು ಶಾಲೆಯಲ್ಲಿ ರಾಷ್ಟ್ರೀಯ ಮುಕ್ತ ಶಿಕ್ಷಣ ಯೋಜನೆಯಡಿಯಲ್ಲಿ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳು ತಿಳಿಸಿದ್ದು, ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಹರಲ್ಲದ ಮತ್ತು ಸದರಿ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯಲಿಚ್ಚಿಸದ ವಿದ್ಯಾರ್ಥಿಗಳಿಗೂ ಸಹ ಅವರುಗಳು ಇತರ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗವನ್ನು ಮುಂದುವರೆಸಲು ವಾರ್ಷಿಕ ರೂ 20,000 ವಿದ್ಯಾರ್ಥಿ ವೇತನವನ್ನು ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನೀಡಲಾಗುವುದು.

    ಕೋವಿಡ್ ಪಿಡುಗಿನಿಂದ ಪೋಷಕರನ್ನು ಕಳೆದುಕೊಂಡು ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಶಿಷ್ಯ ವೇತನಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು. ಸಂಸ್ಥೆಯ ಅಧಿಕೃತ ವೆಬ್ ಸೈಟ್‍ನಲ್ಲಿ <<Student Sahay Link >> ಮೂಲಕ ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ನ ಪ್ರತಿನಿಧಿಯವರು ಅರ್ಜಿದಾರರನ್ನು ಸಂಪರ್ಕಿಸುವರು. ಇದಲ್ಲದೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಟ್ರಸ್ಟ್ ವತಿಯಿಂದಲೂ ಸಹ ಈ ರೀತಿಯ ನೆರವಿನ ಕಾರ್ಯ ಕೈಗೊಂಡಿದ್ದು, ಅನಾಥ ಮಕ್ಕಳಿಗೆ ಉಚಿತ ಊಟ ವಸತಿ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಒದಗಿಸಲಾಗುತ್ತಿದೆ. ಇದನ್ನು ಓದಿ: ಮಾಸ್ಕ್ ವಿಚಾರಕ್ಕೆ ಕಿರಿಕ್ – ದೊಣ್ಣೆಯಿಂದ ಮಹಿಳೆಗೆ ಬಡಿದ ಯುವತಿ

    ಈ ರೀತಿಯ ನೆರವಿಗೆ ಜಿಲ್ಲಾಡಳಿತವನ್ನು ಅಥವಾ ಆದಿಚುಂಚನಗಿರಿ ಮಠದ ಶಾಖೆಯನ್ನು ಖುದ್ದಾಗಿ ದೂರವಾಣಿ ಸಂಪರ್ಕ ಮುಖಾಂತರ ಸಂಪರ್ಕಿಸಿ ಸೌಲಭ್ಯಗಳನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ಅಂತ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಸಂಸ್ಥೆಗಳ ಸಾಮಾಜಿಕ ಕಳಿಕಳಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

  • ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಲಸಿಕೆ ವ್ಯರ್ಥ – ಕೇಂದ್ರ ಸಚಿವರಿಂದ ಆರೋಪ

    ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಲಸಿಕೆ ವ್ಯರ್ಥ – ಕೇಂದ್ರ ಸಚಿವರಿಂದ ಆರೋಪ

    ಜೈಪುರ: ರಾಜಸ್ಥಾನವು ಸುಮಾರು 11.5 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ವ್ಯರ್ಥ ಮಾಡಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗಂಭೀರ ಆರೋಪ ಮಾಡಿದ್ದಾರೆ.

    ಲಸಿಕೆಯ ಶೀಷೆಯನ್ನು ಕಸದ ರಾಶಿಗೆ ಎಸೆಯಲಾಗುತ್ತಿದೆ ಎಂಬ ವರದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ರಾಜಸ್ಥಾನವು ಕೇರಳವನ್ನು ನೋಡಿ ಕಲಿಯಬೇಕು. ಕೇರಳದಲ್ಲಿ ಕೆಲವೇ ಪ್ರಮಾಣದ ಶೀಷೆಗಳು ವ್ಯರ್ಥವಾಗುತ್ತಿದೆ ಎಂದು ಹೇಳಿದ್ದಾರೆ.

    18 ವರ್ಷ ಮೇಲ್ಟಟ್ಟವರಿಗೆ ಲಸಿಕೆ ನೀಡಲು ತಾನಾಗಿಯೇ ಅನುಮತಿ ಕೋರಿದ್ದ ರಾಜಸ್ಥಾನ ಸರ್ಕಾರ ಜಾಗತಿಕ ಟೆಂಡರ್ ಕರೆಯಲು ಮುಂದಾಗಿತ್ತು. ಈ ಪ್ರಯತ್ನ ಯಶಸ್ವಿಯಾಗದೇ ಇದ್ದಾಗ ಕೇಂದ್ರದ ವಿರುದ್ಧ ಆರೋಪ ಮಾಡತೊಡಗಿತು ಎಂದು ಗಜೇಂದ್ರ ಸಿಂಗ್ ಶೇಖಾವತ್ ದೂರಿದ್ದಾರೆ.

    ಸದ್ಯ ಲಸಿಕೆಗಳು ವ್ಯರ್ಥವಾಗುತ್ತಿದೆ ಎಂಬ ಮಾಧ್ಯಮದ ವರದಿಯನ್ನು ರಾಜಸ್ಥಾನ ವೈದ್ಯಕೀಯ ಮತ್ತು ಆರೋಗ್ಯ ಪ್ರಧಾನ ಕಾರ್ಯದರ್ಶಿ ಅಖಿಲ್ ಅರೋರಾ ನಿರಾಕರಿಸಿದ್ದಾರೆ. ಲಸಿಕೆ ನೀಡುತ್ತಿರುವ ಸ್ಥಳಗಳಲ್ಲಿ ಲೆಕ್ಕ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿದ್ದಾರೆ. ಇದನ್ನು ಓದಿ: ಮುಖ್ಯ ಕಾರ್ಯದರ್ಶಿಗಾಗಿ ದೀದಿ V/s ಮೋದಿ – ಮತ್ತೆ ಕೇಂದ್ರದ ವಿರುದ್ಧ ಸಿಡಿದ ಮಮತಾ ಬ್ಯಾನರ್ಜಿ

    ರಾಜಸ್ಥಾನದಲ್ಲಿ ಲಸಿಕೆಯ ವ್ಯರ್ಥ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇದೆ. ದೇಶದ ಒಟ್ಟಾರೆ ಲಸಿಕೆಯ ವ್ಯರ್ಥ ಪ್ರಮಾಣ ಶೇ.6ರಷ್ಟಿದೆ ಎಂದು ಅಖಿಲ್ ಅರೋರಾ ಹೇಳಿದ್ದಾರೆ.