Tag: ಪಬ್ಲಿಕ್ ಟಿವಿ Darshan

  • ‘ಏನಯ್ಯಾ ದರ್ಶನ್‍ಗೆ ತಲೆ ಇಲ್ವೇನಯ್ಯಾ, ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ’

    ‘ಏನಯ್ಯಾ ದರ್ಶನ್‍ಗೆ ತಲೆ ಇಲ್ವೇನಯ್ಯಾ, ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ’

    – ಇನ್ನು ಒಂದೆರಡು ಸೇರಿಸಿಕೊಂಡು ಹೇಳಲಿ
    – ಇಂದ್ರಜಿತ್ ಆರೋಪಗಳಿಗೆ ದರ್ಶನ್ ತಿರುಗೇಟು

    ಬೆಂಗಳೂರು: ದಾರಿಯಲ್ಲಿ ನಾಯಿ ಬಂದು ನಂಗೆ ಕಚ್ಚಿದರೆ ಸ್ಕ್ರೋಲಿಂಗ್ ನ್ಯೂಸ್. ಅದೇ ದರ್ಶನ್ ನಾಯಿಗೆ ಕಚ್ಚಿದರೆ, ಏನಯ್ಯಾ ದರ್ಶನ್‍ಗೆ ತಲೆ ಇಲ್ವೆನಯ್ಯಾ. ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ ಎನ್ನುತ್ತಾರೆ ಎಂದು ಚಾಲೆಂಜಿಂಗ್ ಸ್ಟಾರ್ ಹೇಳಿದ್ದಾರೆ.

    25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿದಂತೆ ದರ್ಶನ್ ಮೊದಲು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಈ ಪ್ರಕರಣಕ್ಕೆ ಹಲವು ರೆಕ್ಕೆಪುಕ್ಕಗಳು ಬರುತ್ತಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಮಾಧ್ಯಮಗಳು ಕೇಳಿದ್ದಕ್ಕೆ, ಯಾರಿದ್ದಾರೋ ಗೊತ್ತಿಲ್ಲ. ನಾನು ರೆಕ್ಕೆ ಪುಕ್ಕ ಅಲ್ಲ ತಲೆಯನ್ನೇ ತೆಗೆಯುವವನು ಎಂದು ದರ್ಶನ್ ಡೈಲಾಗ್ ಹೊಡೆದಿದ್ದರು. ಇದನ್ನೂ ಓದಿ:ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಹೊಡೆದಿಲ್ಲ: ಸಂದೇಶ್ ನಾಗರಾಜ್ ಪುತ್ರ

    ದರ್ಶನ್ ಅವರ ಈ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಆಕ್ಷೇಪ ವ್ಯಕ್ತಪಡಿಸಿ, ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ಕತ್ತರಿಸುತ್ತೇನೆ, ತುಂಡರಿಸುತ್ತೇನೆ ಎಂದು ಹೇಳುತ್ತಾರೆ. ನಟನಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದರು.

    ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಹೋಟೆಲ್‍ನಲ್ಲಿ ಊಟ ಲೇಟಾಗಿ ಬಂದಾಗ ಕೇಳಿದ್ದೇವೆ. ಒಬ್ಬ ಹೋಟೆಲ್ ಕೆಲಸಗಾರನಿಗೆ ಬೈದರೆ ಹೋಟೆಲ್ ಮಾಲೀಕ ಕೇಳುತ್ತಾನೆ. ಆದರೆ ಹೊಡೆದಿರುವ ಆರೋಪ ಅವರು ಮಾಡಿದ್ದಾರೆ ಹೀಗಾಗಿ ಅವರನ್ನೇ ಕೇಳಿಕೊಳ್ಳಿ. ಇದನ್ನೇ ರೆಕ್ಕೆ ಪುಕ್ಕದ ಮಾತುಗಳು ಎಂದು ಹೇಳುವುದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀವೆಲ್ಲಾ ಸೇರಿದ್ದೀರಿ, ನಿಮ್ಮ ಜಾತಿಯನ್ನು ನಾವು ಕೇಳ್ತೀವಾ – ಇಂದ್ರಜಿತ್‍ಗೆ ದರ್ಶನ್ ತಿರುಗೇಟು

    ಅರುಣಾ ಕುಮಾರಿ ವಿಚಾರದ ಜೊತೆಗೆ ಇನ್ನು ಒಂದೆರಡು ಸೇರಿಸಿಕೊಂಡು ಹೇಳಲಿ ನನಗೆ ಯಾವುದೇ ತೊಂದರೆ ಇಲ್ಲ. ಈ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಾರೆ ನಂತರ ಮಾತನಾಡೋಣ ಎಂದರು.

    ಸೆಲೆಬ್ರಿಟಿ ಎಂಬ ಪದವನ್ನು ಪಕ್ಕದಲ್ಲಿ ಇಡೀ ನಾನೊಬ್ಬ ಮನುಷ್ಯ. ನಾನು ಸೆಲೆಬ್ರೆಟಿಯಾಗಿದ್ದರೆ, ಈಗಲೂ ಮೇಕಪ್ ಹಾಕಿಕೊಂಡು ನಾಟಕ ಆಡಬೇಕಾಗುತ್ತದೆ. ಆರೋಪಗಳು ಮಾಡುವವರು ಮಾಡಲಿ. ನಾವು ಒಂದು ಏನಾದರೂ ಮಾತನಾಡಿದರೆ ಇನ್ನೊಂದು ತಪ್ಪಾಗುತ್ತದೆ. ಯಾರೋ ಬುದ್ಧಿವಂತರು ನಿನ್ನೆ ಒಂದು ಮಾತು ಹೇಳಿದರು. ದಾರಿಯಲ್ಲಿ ನಾಯಿ ಬಂದು ಕಚ್ಚಿದರೆ ಸ್ಕ್ರೋಲಿಂಗ್. ಅದೇ ದರ್ಶನ್ ನಾಯಿಗೆ ಕಚ್ಚಿದರೆ, ಏನಯ್ಯಾ ದರ್ಶನ್ ತಲೆ ಇಲ್ವೆನಯ್ಯಾ ಹೋಗಿ ನಾಯಿಗೆ ಕಚ್ಚಿದ್ದಾನೆ ಎಂದು ಹೇಳಿ ಟಾಂಗ್ ನೀಡಿದರು. ಇದನ್ನೂ ಓದಿ:ನನಗೇನು ಗೊತ್ತಿಲ್ಲ, ಈಗಲೇ ಗೊತ್ತಾಗಿದ್ದು: ಸಂದೇಶ್ ನಾಗರಾಜ್

    ಅರುಣ್ ಕುಮಾರಿಯ ವಿಚಾರದೊಂದಿಗೆ ಇನ್ನೊಂದನ್ನು ತೆಗೆದಿರುವ ಊಹಾಪೋಹಗಳನ್ನು ಬಿಟ್ಟು ಬಿಡಿ. ಈ ವಿಚಾರದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿದೆ. ಅಲ್ಲದೇ ಈ ವಿಚಾರವನ್ನು ಇಲ್ಲಿಯೇ ಮುಚ್ಚಿ ಹಾಕುತ್ತಿದ್ದೇನೆ ಎಂದು ಹೇಳುತ್ತಿದ್ದರು. ಇದನ್ನು ಇಲ್ಲಿಯೇ ಮುಚ್ಚಿ ಹಾಕುತ್ತಿಲ್ಲ. ಪೊಲೀಸರಿಗೆ ತನಿಖೆಗೆ ನೀಡಲು ಸಮಯ ಬೇಕು. ಬಳಿಕ ಮಾತನಾಡುತ್ತೇನೆ ಎಂದರು.

  • ದರ್ಶನ್ ಒಂದು ಮನವಿಗೆ ಹರಿದು ಬಂತು ಬರಪೂರ ದೇಣಿಗೆ

    ದರ್ಶನ್ ಒಂದು ಮನವಿಗೆ ಹರಿದು ಬಂತು ಬರಪೂರ ದೇಣಿಗೆ

    ಮೈಸೂರು: ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕರಿಸಿ ಮೃಗಾಲಯಗಳನ್ನು ಆರ್ಥಿಕ ಸಂಕಷ್ಟದಿಂದ ಮುಕ್ತಗೊಳಿಸಿ ಎಂಬ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ಮೃಗಾಲಯಕ್ಕೆ 3 ಕೋಟಿ ದೇಣಿಗೆ ಬಂದಿದೆ.

    ವೀಡಿಯೋ ಮೂಲಕ ಪ್ರಾಣಿ ದತ್ತು ತೆಗೆದುಕೊಳ್ಳುವಂತೆ ದರ್ಶನ್ ಕರೆ ನೀಡಿದ್ದರು. ರಾಜ್ಯದ 9 ಮೃಗಾಲಯಗಳಿಗೆ ಪ್ರಾಣಿ ಪ್ರಿಯರಿಂದ ನೆರವು ಸಿಕ್ಕಿದೆ. Zoos ಆ್ಯಪ್ ಕರ್ನಾಟಕ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ನಡೆದಿದ್ದು, ಸುಮಾರು 6 ಸಾವಿರಕ್ಕೂ ಅಧಿಕ ಜನರು ಪ್ರಾಣಿ ದತ್ತು ಸ್ವೀಕಾರ ಮಾಡಿದ್ದಾರೆ. ಕೇವಲ 20 ದಿನಗಳಲ್ಲಿ ಎರಡು ಕೋಟಿ ದೇಣಿಗೆ ಸಂಗ್ರಹವಾಗಿದೆ.

    ಪ್ರಾಣಿ ದತ್ತು ಪಡೆದವರಿಗೆ ದರ್ಶನ್ ಭೇಟಿ ಮಾಡುವ ಅವಕಾಶವಿದ್ದು, ಪ್ರತಿ ಮೃಗಾಲಯದಲ್ಲಿ ಆಯ್ದ 50 ಜನರಿಗೆ ದರ್ಶನ್‍ರಿಂದ ಪ್ರಶಂಸನಾ ಪತ್ರ ಸಿಗಲಿದೆ. ದರ್ಶನ್ ಮನವಿಗೆ ಓಗೊಟ್ಟು ಚಿತ್ರ ನಟರಿಂದಲೂ ದತ್ತು ಸ್ವೀಕಾರ ಆಗಿದೆ.

    ನವಿಲು ಹಾಗೂ ನಾಗರಹಾವನ್ನೇ ಹೆಚ್ಚು ದತ್ತು ಪಡೆದಿದ್ದು, ಇಂದಿನಿಂದ ಬೆಳಗಾವಿ, ಗದಗ ಹಾಗೂ ಹಂಪಿ ಮೃಗಾಲಯ ಓಪನ್ ಆಗಲಿದೆ. ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸಿಗರಿಗೆ ಮುಕ್ತ ಅವಕಾಶವಿದೆ. ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಿ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

  • ಮೈಸೂರು ಮೃಗಾಲಯದಲ್ಲಿ ಪ್ರಾಣಿ ದತ್ತು ಪಡೆದ ದರ್ಶನ್ ಅಭಿಮಾನಿ ದಂಪತಿ

    ಮೈಸೂರು ಮೃಗಾಲಯದಲ್ಲಿ ಪ್ರಾಣಿ ದತ್ತು ಪಡೆದ ದರ್ಶನ್ ಅಭಿಮಾನಿ ದಂಪತಿ

    ಚಿಕ್ಕಮಗಳೂರು: ಡಿ ಬಾಸ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿದ ಹಿನ್ನೆಲೆ ನಗರದ ದರ್ಶನ್ ಅಭಿಮಾನಿ ದಂಪತಿ ಮೈಸೂರು ಮೃಗಾಲಯದಲ್ಲಿ ಎರಡು ಎಮೋ ಪಕ್ಷಿ ಹಾಗೂ ಒಂದು ಬಿಳಿ ನವಿಲನ್ನ ದತ್ತು ಪಡೆದಿದ್ದಾರೆ.

    ನಗರದ ದಂಟರಮಕ್ಕಿ ಬಡಾವಣೆಯಲ್ಲಿ ನಿವಾಸಿಯಾಗಿರುವ ಸಂದೀಪ್ ದಂಪತಿ ವಾರ್ಷಿಕ ಹತ್ತು ಸಾವಿರದಂತೆ ಎರಡು ಎಮೋ ಪಕ್ಷಿ ಹಾಗೂ ವಾರ್ಷಿಕ ನಾಲ್ಕೂವರೆ ಸಾವಿರಕ್ಕೆ ಒಂದು ಬಿಳಿ ನವಿಲನ್ನ ದತ್ತು ಪಡೆದು ಮೂಕ ಪ್ರಾಣಿಗಳ ನೆರವಿಗೆ ಕೈಜೋಡಿಸಿದ್ದಾರೆ. ದರ್ಶನ್ ಕೇವಲ ಡಿ ಬಾಸ್ ಅಷ್ಟೆ ಅಲ್ಲ. ನಿಸ್ವಾರ್ಥಿ ಕೂಡ. ಪ್ರಾಣಿಗಳನ್ನ ಅವರಷ್ಟು ಪ್ರೀತಿಸುವವರು ಯಾರೂ ಇಲ್ಲ. ಅವರಷ್ಟು ಪರಿಸರ ಪ್ರೇಮವೂ ಯಾರಿಗೂ ಇಲ್ಲ. ಸೆಲಿಬ್ರಿಟಿಯಾಗಿ ಪ್ರಾಣಿ-ಪರಿಸರದ ಬಗ್ಗೆ ಅವರ ಆಸಕ್ತಿ ನಿಜಕ್ಕೂ ಅತ್ಯದ್ಭುತ. ನಾವು ಅವರ ಮಾತಿನಿಂದಲೇ ಪ್ರೇರೇಪಣೆಗೊಂಡು ಇಂತಹ ಪುಣ್ಯದ ಕೆಲಸ ಮುಂದಾಗಿದ್ದೇವೆ ಎಂದು ಸಂದೀಪ್ ಹೇಳಿದ್ದಾರೆ.

    ಸಂದೀಪ್ ಕೂಡ ಪ್ರಾಣಿ ಪ್ರಿಯ. ತಮ್ಮ ತೋಟದಲ್ಲಿ ಕುದುರೆಯನ್ನ ಸಾಕಿದ್ದರು. ತೀವ್ರ ಅನಾರೋಗ್ಯದಿಂದ ಅದು ಸಾವನ್ನಪ್ಪಿದ ಮೇಲೆ ಸಾಕುವುದನ್ನ ಬಿಟ್ಟಿದ್ದಾರೆ. ವರ್ಷಕ್ಕೆ ಮೂರ್ನಾಲ್ಕು ಬಾರಿ ಕುಟುಂಬದ ಜೊತೆ ಮೈಸೂರು ಮೃಗಾಲಯಕ್ಕೆ ಹೋಗಿ ಬರುತ್ತಾರೆ. ದರ್ಶನ್ ಮಾತಿಗೆ ರಾಜ್ಯಾದ್ಯಂತ ಸಾವಿರಾರು ಅಭಿಮಾನಿಗಳು ಪ್ರಾಣಿಪಕ್ಷಿಗಳನ್ನ ದತ್ತು ಪಡೆದಿದ್ದಾರೆ. ಅವರ ಅಭಿಮಾನಿಯಾಗಿ ಪ್ರಾಣಿ ಪಕ್ಷಿಗಳಿಗೆ ನಮ್ಮದೊಂದು ಕಿರುಕಾಣಿಕೆ ಎಂದು ನಾವು ದತ್ತು ಪಡೆದಿದ್ದೇವೆ ಎಂದರು.

    ಮೈಸೂರು ಮೃಗಾಲಯದಲ್ಲಿ ನಾವೇ ನೋಡಿ ಬಂದಿರುವ ಪ್ರಾಣಿಗಳು ಈಗ ಸಂಕಷ್ಟದಲ್ಲಿದೆ. ಕೊರೊನಾದಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಕೂಡ ಕಡಿಮೆ ಇದೆ. ಪ್ರಾಣಿ-ಪಕ್ಷಿಗಳ ನಿರ್ವಹಣೆ ಕೂಡ ಕಷ್ಟವಾಗಿದೆ. ಹಾಗಾಗಿ, ನಾವು ಕೆಲ ಪಕ್ಷಿಗಳನ್ನ ದತ್ತು ಪಡೆದಿದ್ದೇವೆ. ಮುಂದಿನ ವರ್ಷ ದೊಡ್ಡ ಪ್ರಮಾಣದಲ್ಲಿ ದತ್ತು ಪಡೆಯಲು ತೀರ್ಮಾನಿಸಿದ್ದಾರೆ. ಇದನ್ನು ಓದಿ: ಗುಡೇಕೋಟೆ ದೇವಸ್ಥಾನದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ

    ಈ ವರ್ಷ ಮೂರು ಪಕ್ಷಿಗಳ ದತ್ತು ಪಡೆದಿರುವ ಸಂದೀಪ್ ಕುಟುಂಬ. ಮುಂದಿನ ವರ್ಷ ಹುಲಿ, ಆನೆಯನ್ನ ದತ್ತು ಪಡೆಯಲು ನಿರ್ಧರಿಸಿದ್ದಾರೆ. ಒಂದು ಹುಲಿಗೆ ವರ್ಷಕ್ಕೆ ಒಂದು ಲಕ್ಷ. ಒಂದು ಆನೆಗೆ ಒಂದು ವರ್ಷಕ್ಕೆ ಒಂದು ಲಕ್ಷದ ಎಪ್ಪತ್ತೈದು ಸಾವಿರ. ಮುಂದಿನ ವರ್ಷ ಹುಲಿ-ಆನೆಯನ್ನ ದತ್ತು ಪಡೆಯಲು ನಿರ್ಧರಿಸಿದ್ದಾರೆ. ಹೀಗೆ ದತ್ತು ಪಡೆಯುವುದರಿಂದ ಟ್ಯಾಕ್ಸ್ ಕೂಡ ಕಡಿಮೆಯಾಗಲಿದ್ದು, ವರ್ಷಕ್ಕೆ ಐದು ಜನಕ್ಕೆ ಎರಡು ಬಾರಿ ಫ್ರೀ ಪಾಸ್ ಕೂಡ ಸಿಗಲಿದೆ. ಜೊತೆಗೆ, ಸರ್ಟಿಫಿಕೇಟ್ ನೀಡುತ್ತಾರೆ. ಅದಕ್ಕೆಲ್ಲಾಕ್ಕಿಂತ ಮಿಗಿಲಾಗಿ ಸಂಕಷ್ಟದ ಸಮಯದಲ್ಲಿ ಹೀಗೆ ಪ್ರಾಣಿಗಳನ್ನ ದತ್ತು ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಸಂದೀಪ್ ಕುಟುಂಬಸ್ಥರು ತಿಳಿಸಿದ್ದಾರೆ.

    ಸಂದೀಪ್ ಅವರ ಸ್ನೇಹಿತರು ಕೂಡ ಮುಂದಿನ ವರ್ಷ ಹುಲಿ-ಆನೆಯನ್ನ ದತ್ತು ಪಡೆಯುವಾಗ ನಾವು ಅವರ ನೆರವಿಗೆ ನಿಲ್ಲುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.’ ಇದನ್ನು ಓದಿ: ಸದಾ ನೆನಪಿನಲ್ಲಿಯೇ ಇರ್ತಿಯಾ ಗೆಳೆಯ: ಚಿರು ನೆನೆದ ದಚ್ಚು

  • ಪ್ರಾಣಿಗಳನ್ನು ಉಳಿಸಿ, ಅವು ಈ ಪ್ರಪಂಚದ ಒಂದು ಭಾಗ – ಇಂತಿ ನಿಮ್ಮ ದಾಸ

    ಪ್ರಾಣಿಗಳನ್ನು ಉಳಿಸಿ, ಅವು ಈ ಪ್ರಪಂಚದ ಒಂದು ಭಾಗ – ಇಂತಿ ನಿಮ್ಮ ದಾಸ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಮೊದಲಿನಿಂದಲೂ ಪ್ರಾಣಿಗಳ ಮೇಲೆ ಒಲವಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಡಿ-ಬಾಸ್ ಕೆಲವೊಂದು ಪ್ರಾಣಿಗಳ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

    ಮೊದಲಿನಿಂದಲೂ ನಟ ದರ್ಶನ್‍ಗೆ ಪ್ರಾಣಿಗಳೆಂದರೆ ಅಚ್ಚು-ಮೆಚ್ಚು. ಪ್ರಾಣಿಗಳೊಂದಿಗೆ ಅಪರೂಪದ ಭಾಂದವ್ಯ ಹೊಂದಿರುವ ದರ್ಶನ್ ಮೈಸೂರು ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಅಲ್ಲದೆ ಸಿನಿಮಾದ ಶೂಟಿಂಗ್ ಮಧ್ಯೆ ಆಗಾಗ ಬಿಡುವು ಮಾಡಿಕೊಂಡು ಸಫಾರಿಗೆ ಹೋಗಿ ಪ್ರಾಣಿಗಳ ಫೋಟೋಗಳನ್ನು ಬಹಳ ಹತ್ತಿರದಿಂದ ತಮ್ಮ ಕೈಯಾರೇ ಕ್ಯಾಮೆರಾದಿಂದ ಸೆರೆಹಿಡಿಯುತ್ತಾರೆ.

    ಸದ್ಯ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನದ ಅಂಗವಾಗಿ ದರ್ಶನ್ ತಾವೇ ತಮ್ಮ ಕೈಯಾರೇ ಕ್ಲಿಕ್ಕಿಸಿರುವ ಹುಲಿ, ಆನೆ, ಚಿರತೆ ಹಾಗೂ ವಿವಿಧ ಪ್ರಭೇದದ ಪಕ್ಷಿಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ. ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ. ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ. ವನ್ಯಜೀವಿಗಾಗಿ ನಿಲ್ಲುವ ಸಮಯ. ನಿಮ್ಮ ದಾಸ ದರ್ಶನ್ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    ದರ್ಶನ್‍ಗೆ ಪ್ರಾಣಿಗಳ ಮೇಲೆ ಕ್ರೇಜ್ ಎಷ್ಟಿದೆ ಎಂಬುವುದಕ್ಕೆ ಮತ್ತೊಂದು ಸಾಕ್ಷಿ ಡಿ-ಬಾಸ್ ತಮ್ಮ ಫಾರ್ಮ್ ಹೌಸ್‍ನಲ್ಲಿ ಹಲವು ಪ್ರಾಣಿ ಮತ್ತು ಪಕ್ಷಿಗಳನ್ನು ಸಾಕಿದ್ದಾರೆ. ಅಲ್ಲದೆ ಕುದುರೆ ಸವಾರಿ ಎಂದರೆ ದರ್ಶನ್‍ಗೆ ಬಹಳ ಇಷ್ಟ. ಬೃಂದಾವನ, ಯಜಮಾನ, ಅಂಬರೀಶ ಹೀಗೆ ಹಲವು ಸಿನಿಮಾಗಳಲ್ಲಿ ಕೂಡ ದರ್ಶನ್ ಪ್ರಾಣಿಗಳೊಂದಿಗೆ ಕಾಣಿಸಿಕೊಂಡಿದ್ದಾರೆ.

  • ಪ್ರಚಾರದ ವೇಳೆ ಹಸುವಿನ ಹಾಲು ಕರೆದ `ಯಜಮಾನ’

    ಪ್ರಚಾರದ ವೇಳೆ ಹಸುವಿನ ಹಾಲು ಕರೆದ `ಯಜಮಾನ’

    ಮಂಡ್ಯ: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೆಆರ್ ಪೇಟೆ ಸೋಮನಹಳ್ಳಿಯಲ್ಲಿ ಹಸುವಿನ ಹಾಲು ಕರೆಯುವ ಮೂಲಕ ನೆರೆದವರ ಗಮನ ಸೆಳೆದಿದ್ದಾರೆ.

    ಪ್ರಚಾರದ ವೇಳೆ ಅಭಿಮಾನಿ ಚಂದ್ರು ಅವರ ಮನೆಗೆ ಡಿ ಬಸ್ ಆಗಮಿಸಿದ್ದರು. ಈ ವೇಳೆ ಅಲ್ಲಿದ್ದ ಹಸುವಿನ ಹಾಲು ಕರೆದು ಅಭಿಮಾನಿಗಳ ಮನ ಗೆದ್ದಿದ್ದಾರೆ. ದಚ್ಚು ಸ್ವಲ್ಪವು ಮುಜುಗರ ಮಾಡಿಕೊಳ್ಳದೇ ಜನರ ನಡುವೆ ಖುಷಿಯಿಂದ ಹಸುವಿನ ಹಾಲು ಕರೆದು ಅವರು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋದನ್ನ ಸಾಬೀತು ಮಾಡಿದರು.

    ಈ ಅಪರೂಪ ದೃಶ್ಯ ನೋಡಲು ಅಭಿಮಾನಿಗಳು ತಾ ಮುಂದು ನಾ ಮುಂದು ಎಂದು ಮುಗಿಬಿದ್ದಿದ್ದು, ದರ್ಶನ್ ಅವರು ಹಸುವಿನ ಕಾಲು ಕರೆಯುತ್ತಿರುವುದನ್ನು ನೋಡಿದ್ದಾರೆ. ಅದರಲ್ಲೂ ಕೆಲವರು ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡು ಡಿ ಬಾಸ್‍ಗೆ ಜೈಕಾರ ಹಾಕಿದರು.