Tag: ಪಬ್ಲಿಕ್ ಟಿವಿ doctor

  • ವೈದ್ಯನ ನಿರ್ಲಕ್ಷ್ಯದಿಂದ ಸಾವು – ಆಸ್ಪತ್ರೆಯ ಮುಂದೆ ಶವ ಇಟ್ಟು  ಪ್ರತಿಭಟನೆ

    ವೈದ್ಯನ ನಿರ್ಲಕ್ಷ್ಯದಿಂದ ಸಾವು – ಆಸ್ಪತ್ರೆಯ ಮುಂದೆ ಶವ ಇಟ್ಟು ಪ್ರತಿಭಟನೆ

    ಮಂಡ್ಯ: ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್‍ನಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಯುವಕನ ಪೋಷಕರು ಶವವನ್ನು ಅಂತ್ಯಕ್ರಿಯೆ ನಡೆಸದೇ ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಗಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಮಂಡ್ಯ ತಾಲೂಕಿನ ಚಂದಗಾಲು ಗ್ರಾಮದ ವಿಜಯ್‍ಕುಮಾರ್‍ರವರ ಮಗ ನಿಶಾಂತ್ (17) ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಿಶಾಂತ್‍ಗೆ ಜ್ವರ ಇದ್ದ ಕಾರಣ ವಿ.ಸಿ ಫಾಂ ಗೇಟ್ ಬಳಿ ಇರುವ ಖಾಸಗಿ ಕ್ಲಿನಿಕ್‍ಗೆ ಹೋದ ವೇಳೆ ವೈದ್ಯ ಸಂತೋಷ್ ಇಂಜೆಕ್ಷನ್ ನೀಡಿದ್ದಾರೆ. ಇದಾದ ಬಳಿಕ ನಿಶಾಂತ್ ಆರೋಗ್ಯದಲ್ಲಿ ಏರುಪೇರು ಆದ ಕಾರಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

    ನಂತರ ಮೈಸೂರಿಗೆ ಕರೆದುಕೊಂಡು ಹೋಗಿ ಎಂದು ಮಿಮ್ಸ್ ಸಿಬ್ಬಂದಿ ಶಿಫಾರಸ್ಸು ಮಾಡಿದ್ದಾರೆ. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಶಾಂತ್ ಸಾವನ್ನಪ್ಪಿದ್ದಾರೆ. ನಿಶಾಂತ್ ಸಾವಿಗೆ ವಿ.ಸಿ ಫಾಂ ಗೇಟ್ ಬಳಿಯ ಖಾಸಗಿ ಕ್ಲಿನಿಕ್‍ನ ವೈದ್ಯ ಸಂತೋಷ್ ನೀಡಿದ ಇಂಜೆಕ್ಷನ್‍ನಿಂದಲೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

    ವೈದ್ಯ ಸಂತೋಷ್‍ರನ್ನು ಬಂಧಿಸಿ, ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಸದ್ಯ ಈ ಪ್ರಕರಣ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ:ಬ್ಲೂ ಬೇಬಿ ಸಿಂಡ್ರೋಮ್ – ಸಿದ್ದಾರ್ಥ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

  • ಕೋವಿಡ್ ಸೋಂಕಿತನ ಸ್ಥಳಾಂತರಕ್ಕೆ 1 ಲಕ್ಷ ಬೇಡಿಕೆ ಇಟ್ಟ ವೈದ್ಯ ಅರೆಸ್ಟ್

    ಕೋವಿಡ್ ಸೋಂಕಿತನ ಸ್ಥಳಾಂತರಕ್ಕೆ 1 ಲಕ್ಷ ಬೇಡಿಕೆ ಇಟ್ಟ ವೈದ್ಯ ಅರೆಸ್ಟ್

    ನವದೆಹಲಿ: ಗುರುಗ್ರಾಮದಿಂದ ಲುಧಿಯಾನಾಗೆ ಕೋವಿಡ್-19 ಸೋಂಕಿತರನ್ನು ಸಾಗಿಸಲು 1 ಲಕ್ಷ ಬೇಡಿಕೆ ಇಟ್ಟಿದ್ದ ಅಂಬ್ಯುಲೆನ್ಸ್ ಮಾಲೀಕನನ್ನು ಬಂಧಿಸಿರುವುದಾಗಿ ಪೋಲಿಸರು ಶುಕ್ರವಾರ ತಿಳಿಸಿದ್ದಾರೆ.

    ಆರೋಪಿ ಮಿಮೋಹ್ ಕುಮಾರ್ ಬುಂಡ್ವಾಲ್, ಎಂಬಿಬಿಎಸ್ ವೈದ್ಯನಾಗಿದ್ದು, ಇಂದರ್ ಪುರಿಯ ದಶಗಢ್ ಗ್ರಾಮದ ನಿವಾಸಿಯಾಗಿದ್ದಾನೆ.

    ಸೋಂಕಿತರ ಕುಟುಂಬಸ್ಥರು ಅಂಬುಲೆನ್ಸ್ ಹುಡುಕಲು ಸಾಧ್ಯವಾಗದ ಕಾರಣ, ದೆಹಲಿ ಮೂಲದ ಆಪರೇಟರ್‌ರನ್ನು ಸಂಪರ್ಕಿಸಿದೇವು. ಆಪರೇಟರ್‌ಗಳು ಆರಂಭದಲ್ಲಿ 1.40 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟರು. ನಂತರ ಅವರು 20,000 ಕಡಿತಗೊಳಿಸಿ, ಅವರ ಬಳಿ ಆಕ್ಸಿಜನ್ ಸ್ಟಾಕ್ ಇದ್ದಿದ್ದರಿಂದ ಹಣ ನೀಡಲು ಕುಟುಂಬಸ್ಥರು ಒಪ್ಪಿಕೊಂಡಿರುದಾಗಿ ತಿಳಿಸಿದ್ದಾರೆ. ಅಂಬುಲೆನ್ಸ್ ಆಪರೇಟರ್‌ಗಳಿಗೆ ಮುಂಗಡವಾಗಿ 95,000 ಮೊತ್ತವನ್ನು ಪಾವತಿಸಲಾಗಿದ್ದು, ಉಳಿದ 25,000 ರೂ. ವನ್ನು ಲುಧಿಯಾನಕ್ಕೆ ತಲುಪಿದ ಕೂಡಲೇ ಪಾವತಿಸಿರುವುದಾಗಿ ರೋಗಿಯ ಮಗಳು ಆರೋಪಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಇಂದರ್‍ಪುರಿಯ ದಶಗಢ ಗ್ರಾಮದಲ್ಲಿರುವ ಕಾರ್ಡಿಕೇರ್ ಅಂಬುಲೆನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಅಂಬುಲೆನ್ಸ್ ಸೇವೆಗಳನ್ನು ಒದಗಿಸುತ್ತಿದ್ದು, ಸೋಂಕಿತರ ಬಳಿ ಹಣ ಲೂಟಿ ಮಾಡುತ್ತಿದೆ ಎಂದು ಮಾಹಿತಿ ಬಂದಿತು. ಈ ಬಗ್ಗೆ ತನಿಖೆ ನಡೆಸಿ, ಅಂಬುಲೆನ್ಸ್ ಸೇವೆ ಒದಗಿಸುತ್ತಿದ್ದ ಕಂಪನಿಯನ್ನು ಬುಂಡ್ವಾಲ್‍ನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಸಂಬಂಧ ಇಂದರ್‍ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಬಳಿಕ ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಎಂಬಿಬಿಎಸ್ ವೈದ್ಯನಾಗಿದ್ದು, ಕಳೆದ ಎರಡು ವರ್ಷಗಳಿಂದ ಅಂಬುಲೆನ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯಲ್ ತಿಳಿಸಿದ್ದಾರೆ.