Tag: ಪಬ್ಲಿಕ್ ಟಿವಿ Farmers

  • ಬೆಳೆ ವೀಕ್ಷಿಸಿ ರೈತರ ಅಹವಾಲು ಆಲಿಸಿದ ಡಿಕೆಶಿ

    ಬೆಳೆ ವೀಕ್ಷಿಸಿ ರೈತರ ಅಹವಾಲು ಆಲಿಸಿದ ಡಿಕೆಶಿ

    ಧಾರವಾಡ: ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿ ರೈತರ ಅಹವಾಲು ಆಲಿಸಿದರು.

    ಧಾರವಾಡ ಸಮೀಪದ ರಾಯಾಪುರದ ಅಮರಗೋಳ ಬಳಿಯ ಜಮೀನುಗಳಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೋವಿಡ್ ಲಾಕ್‍ಡೌನ್ ವೇಳೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

    ರೈತರು ಬೆಳೆದ ಮೆಣಿಸಿನಕಾಯಿ, ಟೊಮ್ಯಾಟೊ, ಗಜ್ಜರಿ, ಬೀಟ್‍ರೂಟ್ ಸೇರಿದಂತೆ ಇತರೆ ತರಕಾರಿ ಬೆಳೆ ವೀಕ್ಷಣೆ ಮಾಡಿ ರೈತರು ಲಾಕಡೌನ್ ವೇಳೆ ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಪರದಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದರು. ಇದನ್ನು ಓದಿ:ಪ್ರಧಾನಿ ಮೋದಿಯವರಿಂದ ಐತಿಹಾಸಿಕ ಆಡಳಿತ- ಪ್ರಲ್ಹಾದ್ ಜೋಶಿ

    ಈ ವೇಳೆ ರೈತರ ಜೊತೆ ಕೆಲ ಕಾಲ ಸಂವಾದ ನಡೆಸಿ ರೈತರಿಂದ ಮಾಹಿತಿ ಸಂಗ್ರಹಿಸಿದ ಡಿಕೆಶಿ, ಸರ್ಕಾರ ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ರೈತರ ಬೆಳೆ ಬೆಳೆಗಳ ಮಾರಾಟಕ್ಕೆ ಸೂಕ್ತ ವ್ಯವ್ಯಸ್ಥೆ ಕಲ್ಪಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ಸರ್ಕಾರ ಕಳೆದ ಬಾರಿ ಘೋಷಿಸಿದ ಪರಿಹಾರವೇ ಇನ್ನೂ ತಲುಪಿಲ್ಲ. ಇದೀಗ ಮತ್ತೊಮ್ಮೆ ಪರಿಹಾರ ಘೋಷಿಸಿದೆ. ಅದು ಅವೈಜ್ಞಾನಿಕವಾಗಿದೆ ಎಂದು ಕಿಡಿಕಾರಿದರು.

    ಲಾಕ್‍ಡೌನ್ ವೇಳೆ ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಹೆಚ್ಚಿನ ಸಮಯಾವಕಾಶ ಕಲ್ಪಿಸಬೇಕು ಹಾಗೂ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನ ಸರಿಪಡಿಸಬೇಕೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

  • ರೈತರ ನಿದ್ದೆಗೆಡಿಸಿದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ರೈತರ ನಿದ್ದೆಗೆಡಿಸಿದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

    ಹಾವೇರಿ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದ ಬಳಿ ಇರುವ ಗುಡ್ಡದಲ್ಲಿ ನಡೆದಿದೆ.

    ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿತ್ತು. ಇದರಿಂದ ರೈತರು ಹಾಗೂ ಗ್ರಾಮದ ಜನರು ಸಂಜೆಯಾಗುತ್ತಿದ್ದಂತೆ ಮನೆ ಸೇರಿಕೊಳ್ಳುತ್ತಿದ್ದರು.

    ಇಂದು ಅರಣ್ಯ ಇಲಾಖೆಯು ಇರಿಸಿದ ಬೋನಿಗೆ ಎರಡು ವರ್ಷದ ಗಂಡು ಚಿರತೆ ಬಿದ್ದಿದೆ. ಚಿರತೆ ಬೋನಿಗೆ ಬಿದ್ದಿದ್ದರಿಂದ ಅರಳೀಕಟ್ಟಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನ ಅರಣ್ಯ ಇಲಾಖೆಯ ಸಿಬ್ಬಂದಿ ಅರಣ್ಯಕ್ಕೆ ಬಿಡಲು ತೆಗೆದುಕೊಂಡು ಹೋಗಿದ್ದಾರೆ.

  • ಬಿಜೆಪಿ ಶಾಸಕನ ಬಟ್ಟೆ ಹರಿದು ಹಲ್ಲೆ – ಸಿಎಂ ಅಮರೀಂದರ್ ಸಿಂಗ್ ಖಂಡನೆ

    ಬಿಜೆಪಿ ಶಾಸಕನ ಬಟ್ಟೆ ಹರಿದು ಹಲ್ಲೆ – ಸಿಎಂ ಅಮರೀಂದರ್ ಸಿಂಗ್ ಖಂಡನೆ

    ಚಂಡೀಗಢ: ಮುಕ್ತಸರ್ ಜಿಲ್ಲೆಯ ಮಾಲೌಟ್‍ನಲ್ಲಿ ಶನಿವಾರ ಪ್ರತಿಭಟನೆ ನಡೆಸುತ್ತಿದ್ದ ರೈತರು ಪಂಜಾಬ್‍ನ ಬಿಜೆಪಿ ಶಾಸಕ ಅರುಣ್ ನಾರಂಗ್ ಬಟ್ಟೆ ಹರಿದು ಹೋಗುವಂತೆ ಹಲ್ಲೆ ನಡೆಸಿದ್ದಾರೆ.

    ಸ್ಥಳೀಯ ನಾಯಕರೊಂದಿಗೆ ಸುದ್ದಿಗೋಷ್ಠಿಗೆಂದು ಅಬೋಹರ್ ಶಾಸಕ ಅರುಣ್ ನಾರಂಗ್ ಮಾಲೌಟ್‍ಗೆ ಆಗಮಿಸಿದ್ದ ವೇಳೆ, ರೈತರು ಶಾಸಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ ಅವರ ವಾಹನದ ಮೇಲೆ ಕಪ್ಪು ಮಸಿ ಎಸೆದಿದ್ದಾರೆ. ಬಳಿಕ ಪೊಲೀಸರು ಅರುಣ್ ನಾರಂಗ್‍ರನ್ನು ರಕ್ಷಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್, ರೈತರು ಬಿಜೆಪಿ ಶಾಸಕ ಅರುಣ್ ನಾರಂಗ್‍ರವರಿಗೆ ಸುದ್ದಿಗೋಷ್ಠಿ ನಡೆಸಲು ಬಿಡಲಿಲ್ಲ ಎಂದು ಹೇಳಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಬಟ್ಟೆ ಹರಿದು ಹೋಗಿದ್ದ ಶಾಸಕರನ್ನು ಪೊಲೀಸರು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದಯ್ಯುತ್ತಿವುದನ್ನು ಕಾಣಬಹುದಾಗಿದೆ. ಸದ್ಯ ಘಟನೆ ಕುರಿತಂತೆ 7 ಮಂದಿ ಹೆಸರಿನಲ್ಲಿ ಹಾಗೂ 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಸಾರ್ವಜನಿಕ ಸೇವೆಗೆ ಅಡ್ಡಿ, ಕೊಲೆ, ಹಲ್ಲೆ, ಜೀವ ಬೆದರಿಕೆ ಮತ್ತು ಗಲಭೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಘಟನೆ ಕುರಿತಂತೆ ಮಾತನಾಡಿದ ಶಾಸಕ ಅರುಣ್ ನಾರಂಗ್, ಸುದ್ದಿಗೋಷ್ಠಿಗೆಂದು ನಾನು ಮಾಲೌಟ್‍ಗೆ ಹೋಗಿದ್ದೆ. ಈ ವೇಳೆ ಪ್ರತಿಭಟನಕಾರರು ನನಗೆ ಮಾತನಾಡಲು ಅವಕಾಶ ಮಾಡಿಕೊಡಲಿಲ್ಲ. ನನ್ನನ್ನು ಸುತ್ತುವರೆದರು. ನನ್ನ ಮೇಲೆ ಕೆಲವರು ಹಲ್ಲೆ ಮಾಡಿ ಹಿಂಸಾಕೃತ್ಯವನ್ನು ಎಸಗಿದರು ಎಂದು ಹೆಳಿದರು.

    ಈ ವಿಚಾರವಾಗಿ ಯಾರ ಮೇಲೆ ದೂರು ನೀಡಿದ್ದೀರಾ ಎಂಬ ಪ್ರಶ್ನೆಗೆ ಈ ಬಗ್ಗೆ ನಾನು ಪಕ್ಷದ ನಾಯಕರೊಂದಿಗೆ ಮಾತನಾಡುತ್ತೇನೆ ಎಂದರು.

    ಸದ್ಯ ಶಾಸಕರ ಮೇಲಿನ ಹಲ್ಲೆಯನ್ನು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಖಂಡಿಸಿದ್ದು, ಶಾಂತಿಯತೆಯನ್ನು ಹಾಳು ಮಾಡಲು ಪ್ರಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾ ನಿರತ ರೈತರು ಹಿಂಸೆ ಮಾರ್ಗದತ್ತ ತೆರಳಬಾರದು ಹಾಗೂ ನೂತನ ಕೃಷಿ ಕಾಯಿದೆ ವಿಚಾರವಾಗಿ ಉಂಟಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

  • 5ಎ ಕಾಲುವೆ ಹೋರಾಟ – ಸ್ಪಂದನೆ ಸಿಗದಿದ್ದಕ್ಕೆ ವಿಷ ಕುಡಿಯಲು ಮುಂದಾದ ರೈತ

    5ಎ ಕಾಲುವೆ ಹೋರಾಟ – ಸ್ಪಂದನೆ ಸಿಗದಿದ್ದಕ್ಕೆ ವಿಷ ಕುಡಿಯಲು ಮುಂದಾದ ರೈತ

    ರಾಯಚೂರು: ಎನ್‍ಆರ್‍ಬಿಸಿ 5ಎ ಕಾಲುವೆಗೆ ಆಗ್ರಹಿಸಿ ನಗರದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಹೋರಾಟ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸದ ಹಿನ್ನೆಲೆ ರೈತರು ವಿಷ ಕುಡಿಯಲು ಮುಂದಾಗಿದ್ದಾರೆ. ಈ ವೇಳೆ ರೈತರು ವಿಷ ಕುಡಿಯುವುದನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ.

    ರೈತರ ಹೋರಾಟಕ್ಕೆ ಸ್ಪಂದಿಸಿ ಮನವಿ ಪತ್ರ ಪಡೆಯಲು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೋರಾಟ ನಿರತ ರೈತರು ಬೆದರಿಕೆ ಹಾಕಿದ್ದಾರೆ. ಒಂದೆಡೆ ಸರ್ಕಾರ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ. ಇತ್ತ ಜಿಲ್ಲಾಧಿಕಾರಿ ಕನಿಷ್ಠ ಮನವಿ ಪತ್ರ ಸ್ವೀಕರಿಸಲು ಬರುತ್ತಿಲ್ಲ ಎಂದು ರೈತ ಮಲ್ಲಿಕಾರ್ಜುನ್ ವಿಷ ಕುಡಿಯಲು ಯತ್ನಿಸಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ರೈತನನ್ನು ತಡೆದಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಹೋರಾಟ ಮುಂದುವರೆಸಿದ್ದಾರೆ.

    ಮಸ್ಕಿ ಭಾಗದ 58 ಹಳ್ಳಿಗಳಿಗೆ ನೀರು ಒದಗಿಸುವ ಯೋಜನೆಗೆ ಆಗ್ರಹಿಸಿ 105 ದಿನಗಳಿಂದ ರೈತರು ಅನಿರ್ಧಿಷ್ಟವಾಧಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಸ್ಪಂದಿಸದ ಹಿನ್ನೆಲೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ರಾಯಚೂರಿನಲ್ಲಿ ಬೃಹತ್ ಹೋರಾಟ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆ ಹಾಗೂ ಪ್ರತಿಭಟನೆಯಲ್ಲಿ ಮಕ್ಕಳು, ಮಹಿಳೆಯರು, ವಯೋವೃದ್ದ ರೈತರು ಸಹ ಭಾಗವಹಿಸಿದರು.