Tag: ಪಬ್ಲಿಕ್ ಟಿವಿ Former CM Siddaramaiah

  • ಅಚ್ಛೇದಿನ್, ಅಚ್ಛೇದಿನ್ ಹೇಳ್ಕೊಂಡೆ ಪ್ರಧಾನಿ ದೇಶದ ಜನತೆಗೆ ಟೋಪಿ ಹಾಕ್ತಿದ್ದಾರೆ: ಸಿದ್ದರಾಮಯ್ಯ

    ಅಚ್ಛೇದಿನ್, ಅಚ್ಛೇದಿನ್ ಹೇಳ್ಕೊಂಡೆ ಪ್ರಧಾನಿ ದೇಶದ ಜನತೆಗೆ ಟೋಪಿ ಹಾಕ್ತಿದ್ದಾರೆ: ಸಿದ್ದರಾಮಯ್ಯ

    ಬಳ್ಳಾರಿ: ಅಚ್ಛೇದಿನ್, ಅಚ್ಛೇದಿನ್ ಎಂದು ಹೇಳಿಕೊಂಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನರಿಗೆ ಟೋಪಿ ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

    ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಸಹ ಜನರಿಗೆ ಕಷ್ಟಗಳು ತಪ್ಪಲಿಲ್ಲ.

    ಸಂಡೂರಿನಲ್ಲಿ ಶಾಸಕ ತುಕಾರಾಂ ಅವರು ಆಯೋಜಿಸಿದ್ದ ಜನತೆಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು, ಸತತವಾಗಿ ಗಗನಕ್ಕೇರುತ್ತಿರುವ ಪೆಟ್ರೋಲ್ ಬೆಲೆಗಳ ಬಗ್ಗೆ ಪ್ರಸ್ತಾಪಿಸಿ, ಪೆಟ್ರೋಲ್‍ಗೆ ರೂ.31.84 ಪೈಸೆ ಕೇಂದ್ರ ಸರಕಾರ ತೆರಿಗೆ ವಿಧಿಸುತ್ತಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ರೂ. 37.98 ಪೈಸೆ ವಿಧಿಸುತ್ತಿದೆ. ಕೇಂದ್ರ ರಾಜ್ಯ ಸರ್ಕಾರಗಳ ತೆರಿಗೆ ಫಲವಾಗಿ ಇಂದು ಪೆಟ್ರೋಲ್ ಬೆಲೆ ರೂ.100ಕ್ಕೂ ಹೆಚ್ಚಾಗಿವೆ. ಪಕ್ಕದ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ರೂ.57 ಇದೆ ಎಂದರು.

    ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಟ್ರಾಕ್ಟರ್, ಆಟೋ ಡ್ರೈವರ್, ಬೈಕ್ ಇಟ್ಟುಕೊಂಡಿರುವವರ ಕಥೆ ಏನು, ಇಷ್ಟೊಂದು ಬೆಲೆಗಳು ಏರಿಕೆಯಾದರೆ ಹೇಗೆ? ಗ್ಯಾಸ್ ಸಿಲಿಂಡರ್ ಬೆಲೆಗಳ ಸಹ ಗಗನಕ್ಕೇರಿದೆ. ಹೀಗಾದರೆ ಜನರು ಜೀವಿಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ: ಸಭಾಪತಿ ಹೊರಟ್ಟಿ

  • ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

    ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

    ಬಾಗಲಕೋಟೆ: ಕೊರೊನಾ ಎರಡನೇ ಅಲೆ ತಡೆಯುವಲ್ಲಿ ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ದೂರಿದ್ದಾರ.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣಕ್ಕೆ ಆಗಮಿಸಿ, ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣ ಕುರಿತಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2ನೇ ಅಲೆಯ ಬಗ್ಗೆ ಮಾಹಿತಿ ಇದ್ದರೂ ಸರ್ಕಾರ ಜಾಗೃತಿ ವಹಿಸಲಿಲ್ಲ. ಆಕ್ಸಿಜನ್, ರೆಮ್ ಡಿಸಿವರ್, ವೆಂಟಿಲೇಟರ್ ಬೆಡ್‍ಗಳ ಸಿದ್ದತೆ ನಡೆಸಲಿಲ್ಲ. ರೋಗಿಗಳಿಗೆ ಆಕ್ಸಿಜನ್, ರೆಮ್‍ಡಿಸಿವರ್ ಇಂಜೆಕ್ಷನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

    ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅದು ನಮ್ಮ ರೋಗವಲ್ಲ. ಬಿಜೆಪಿಯವರಿಗೆ ಬಂದ ರೋಗ. ಬಿಜೆಪಿ ಅವರು ಬೀದಿ ಜಗಳ ಮಾಡುತ್ತಿದ್ದಾರೆ. ಮಾಡಲಿ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಮೊದಲೇ ಆಡಳಿತ ಇಲ್ಲ, ಈ ಬೀದಿ ಜಗಳದಿಂದ ಇನ್ನಷ್ಟು ಆಡಳಿತ ಕುಸಿದು ಹೋಗುತ್ತದೆ ಎಂದು ಹೇಳಿದರು.

    ಸಿಎಂ ಬದಲಾವಣೆ ಆಗುತ್ತದೆ ಎಂಬ ಮಾಹಿತಿ ನನಗಿದೆ. ಆದರೆ ಕೊರೊನಾ ಹಿನ್ನೆಲೆ ಮುಂದಕ್ಕೆ ಹಾಕುತ್ತಾ ಇರಬೇಕು, ನನಗೆ ಗೊತ್ತಿಲ್ಲ ಎಂದರು. ಇದೇ ಸಮಯದಲ್ಲಿ ಹಕ್ಕು ಚ್ಯುತಿ ಮಂಡನೆ ವಿಚಾರವಾಗಿ ಮಾತನಾಡಿ, ಜಿಲ್ಲಾಧಿಕಾರಿಗಳ ಜೊತೆ ಝೂಮ್ ಮೀಟ್‍ಗೆ ಅವಕಾಶ ಕೇಳಿದ್ದೆ. ಕೊಡುವುದಕ್ಕೆ ಆಗಲ್ಲ ನೀವು ಸರ್ಕಾರದ ಭಾಗವಲ್ಲ ಅಂದರು. ನಾನೊಬ್ಬ ವಿರೋಧ ಪಕ್ಷದ ನಾಯಕ, ನಾನು ಎಕ್ಸ್ ಚೀಫ್ ಮಿನಿಸ್ಟರ್. ವಿರೋಧ ಪಕ್ಷದ ನಾಯಕ ಅಂದರೆ ಶ್ಯಾಡೋ ಆಫ್ ಚೀಫ್ ಮಿನಿಸ್ಟರ್ ಇದ್ದಾಂಗೆ ನಾನು ಮಾಹಿತಿ ತಿಳಿದುಕೊಳ್ಳುವಂತಿಲ್ಲ ಎಂದರೆ ಇದು ಪ್ರಜಾಪ್ರಭುತ್ವದ ವ್ಯವಸ್ಥೆ ನಾ ಎಂದು ಆಕ್ಷೇಪಿಸಿ ಪ್ರಶ್ನೆ ಮಾಡಿದರು. ಇದನ್ನು ಓದಿ: ರಾಜಕಾರಣದಲ್ಲಿ ಬೆಂಕಿ ಇಲ್ಲದೆಯೂ ಹೊಗೆಯಾಡುತ್ತೆ, ಆಧಾರವಿಲ್ಲದ ಸುದ್ದಿಯೂ ಬರುತ್ತೆ: ಸಿ.ಟಿ.ರವಿ