Tag: ಪಬ್ಲಿಕ್ ಟಿವಿ hubli

  • ಲಾರಿ ಮುಷ್ಕರ ಬೆಂಬಲಿಸಿ ಹೆದ್ದಾರಿಯಲ್ಲಿ ಪ್ರತಿಭಟನೆ

    ಲಾರಿ ಮುಷ್ಕರ ಬೆಂಬಲಿಸಿ ಹೆದ್ದಾರಿಯಲ್ಲಿ ಪ್ರತಿಭಟನೆ

    ಹುಬ್ಬಳ್ಳಿ: ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿದ ಲಾರಿ ಮುಷ್ಕರಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

    ಹುಬ್ಬಳ್ಳಿಯ ಗಬ್ಬೂರ ಟೋಲ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಳೆ ಲಾರಿಗಳನ್ನು ಬಂದ್ ಮಾಡುವ ಕಾನೂನುನ್ನು ಹಿಂಪಡೆಯಬೇಕು. ಥರ್ಡ್ ಪಾರ್ಟಿ ಇನ್ಸೂರೆನ್ಸ್ ಕಡಿಮೆ ಮಾಡಬೇಕು. ಇ.ವೇ ಬಿಲ್ ಹಿಂಪಡೆಯಬೇಕು ಟೋಲ್ ದರವನ್ನು ಕಡಿಮೆ ಮಾಡಬೇಕು ಹಾಗೂ ಇತರೆ ಸಮಸ್ಯೆಗಳಾದ ಗ್ಯಾಸ್ ಡೀಸೆಲ್, ಪೆಟ್ರೋಲ್ ದರವನ್ನು ಜಿಎಸ್‍ಟಿಯಲ್ಲಿ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ರೈತರ ಕೃಷಿ ಕಾಯ್ದೆ, ವಿದ್ಯುತ್ ಕಾಯ್ದೆ ಎಪಿಎಂಸಿ ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಮಧ್ಯದಲ್ಲಿಯೇ ಪ್ರತಿಭಟನೆ ನಡೆಸಿದರು. ಇನ್ನೂ ರಸ್ತೆಯ ಮೇಲೆ ಸಂಚರಿಸುತ್ತಿರುವ ಲಾರಿಗಳನ್ನು ಬಂದ್ ಮಾಡಲು ಮುಂದಾದ ಕಾರ್ಯಕರ್ತರ ಮಧ್ಯದಲ್ಲಿಯೇ ಮಾತಿನ ಚಕಮಕಿ ನಡೆಯಿತು.

  • ದೇಶಪಾಂಡೆ ಫೌಂಡೇಶನ್ ವೆಬಿನಾರ್ – ಗ್ರಾಮೀಣಾಭಿವೃದ್ಧಿ ಕುರಿತು ಅಮೀರ್ ಖಾನ್ ಮಾತು

    ದೇಶಪಾಂಡೆ ಫೌಂಡೇಶನ್ ವೆಬಿನಾರ್ – ಗ್ರಾಮೀಣಾಭಿವೃದ್ಧಿ ಕುರಿತು ಅಮೀರ್ ಖಾನ್ ಮಾತು

    ಹುಬ್ಬಳ್ಳಿ: ದೇಶಪಾಂಡೆ ಫೌಂಡೇಶನ್ ವತಿಯಿಂದ ಫೆಬ್ರವರಿ 11 ರಂದು ಆಯೋಜಿಸಲಾಗಿರುವ ವೆಬಿನಾರ್‍ನಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಪಿಪಲ್ ಮೂವ್‍ಮೆಂಟ್ ಫಾರ್ ರೂರಲ್ ಡೆವಲಪ್‍ಮೆಂಟ್ (ಗ್ರಾಮೀಣಾಭಿವೃದ್ಧಿಗಾಗಿ ಜನರ ಚಳುವಳಿ) ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ದೇಶಪಾಂಡೆ ಫೌಂಡೇಶನ್ ಸಿಇಒ ವಿವೇಕ್ ಪವಾರ್ ಹೇಳಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಫೆಬ್ರವರಿ 11 ರಂದು ಸಂಜೆ 6 ಗಂಟೆಗೆ ವೆಬ್ ನಾರ್ ನಡೆಯಲಿದ್ದು, ದೇಶಪಾಂಡೆ ಫೌಂಡೇಶನ್ ಸಂಸ್ಥಾಪಕ ಡಾ.ಗುರುರಾಜ್ ದೇಶಪಾಂಡೆ, ಪಾನಿ ಫೌಂಡೇಶನ್ ಸಹ-ಸಂಸ್ಥಾಪಕರಾಗಿರುವ ಅಮೀರ್ ಖಾನ್ ಮತ್ತು ಅವರ ಪತ್ನಿ ಕಿರಣ್ ರಾವ್ ಮತ್ತು ಪಾನಿ ಪ್ರತಿಷ್ಠಾನದ ಸಿಇಒ ಸತ್ಯಜಿತ್ ಭಟ್ಕಲ್‍ರವರು ವೆಬ್‍ನಾರ್‍ನ ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

    ಆಸಕ್ತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿತರಿಗೆ ವೆಬ್‍ನಾರ್‍ಗಾಗಿ ಜೂಮ್ ಲಿಂಕ್ ಕಳುಹಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ದೇವಕಿ ಪುರೋಹಿತ್ ಅವರನ್ನು 96234 68822ಗೆ ಸಂಪರ್ಕಿಸಬಹುದು ಎಂದು ದೇಶಪಾಂಡೆ ಫೌಂಡೇಶನ್ ಸಿಇಒ ವಿವೇಕ್ ಪವಾರ್ ತಿಳಿಸಿದ್ದಾರೆ.

  • ಖೋಟಾ ನೋಟು ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ

    ಖೋಟಾ ನೋಟು ಜಾಲ ಪತ್ತೆ – ನಾಲ್ವರು ಆರೋಪಿಗಳ ಬಂಧನ

    ಹುಬ್ಬಳ್ಳಿ: ಖೋಟಾ ನೋಟು ಜಾಲವನ್ನು ಪತ್ತೆ ಹಚ್ಚಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಗೋಪಿನಾಥ್ ಜಗನ್ನಾಥ್ ಹಬೀಬ, ಶ್ರೀನಿವಾಸ್ ವಾಸಪ್ಪ ತಟ್ಟಿ, ಮೌಲಾಸಾಬ ಮುಕ್ತಂಸಾಬ ಗೂಡಿಹಾಳ ಹಾಗೂ ಸಲಿಂ ಇಮಾಮಸಾಬ ಮುಲ್ಲಾ ಎಂದು ಗುರುತಿಸಲಾಗಿದೆ.

    ಹುಬ್ಬಳ್ಳಿಯ ಕೇಶ್ವಾಪೂರ ಠಾಣಾ ವ್ಯಾಪ್ತಿಯಲ್ಲಿ 4 ಮಂದಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಡಿಸಿಪಿ ಕೆ. ರಾಮ್‍ರಾಜನ್, ಆರ್ ಬಿ ಬಸರಗಿ ಮಾರ್ಗದರ್ಶನದಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುರೇಶ್ ಜಿ ಕುಂಬಾರ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಪತ್ತೆ ಹಚ್ಚಿದ್ದಾರೆ.

    ಸದ್ಯ ಆರೋಪಿಗಳಿಂದ 500 ರೂ. ಮುಖ ಬೆಲೆಯ 93 ಖೋಟಾ ನೋಟುಗಳನ್ನು ಹಾಗೂ 100 ರೂ. ಮುಖ ಬೆಲೆಯ 200 ಖೋಟಾ ನೋಟುಗಳನ್ನು (ಒಟ್ಟು 66,500-00 ರೂ. ಮೌಲ್ಯದ ಖೋಟಾ ನೋಟುಗಳನ್ನು) ಹಾಗೂ 500 ರೂ. ಮುಖ ಬೆಲೆಯ 10 ಅಸಲಿ ನೋಟುಗಳನ್ನು ಮತ್ತು 100 ರೂ. ಮುಖ ಬೆಲೆಯ 2 ಅಸಲಿ ನೋಟುಗಳನ್ನು (ಒಟ್ಟು 5200-00 ರೂ ಮೌಲ್ಯದ ಅಸಲಿ ನೋಟುಗಳನ್ನು) ಜೊತೆಗೆ 4 ವಿವಿಧ ಕಂಪನಿಯ ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಇದೀಗ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಇನ್ನೂ ಈ ಪ್ರಕರಣ ಕುರಿತಂತೆ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಸುರೇಶ್ ಜಿ ಕುಂಬಾರ ಮತ್ತು ಸಿಬ್ಬಂದಿಯವರ ಕಾರ್ಯವೈಖರಿಗೆ ಪೊಲೀಸ್ ಆಯುಕ್ತರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

  • ಸಾಕು ನಾಯಿಗೂ ಸೀಮಂತ ಭಾಗ್ಯ

    ಸಾಕು ನಾಯಿಗೂ ಸೀಮಂತ ಭಾಗ್ಯ

    ಹುಬ್ಬಳ್ಳಿ: ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.

    ಸಾಮಾನ್ಯವಾಗಿ ಮೊದಲ ಬಾರಿಗೆ ಗರ್ಭವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದನ್ನು ನೋಡಿದ್ದೇವೆ. ಆದರೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿರುವ ಕುಟುಂಬವೊಂದು ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದೆ.

    ಗ್ರಾಮದ ಸಾರಿಗೆ ನೌಕರ ರಮೇಶ್ ಪಡತೇರ್ ಎಂಬವರು ತಮ್ಮ ಮನೆಗೆ ಕಳೆದ ವರ್ಷ ಶ್ವಾನವೊಂದನ್ನು ತಗೆದುಕೊಂಡು ಬಂದಿದ್ದರು. ಅದಕ್ಕೆ ಲೂಸಿ ಎಂದು ನಾಮಕರಣ ಮಾಡಿದ್ದರು. ಇದೀಗ ಈ ಶ್ವಾನ ಗರ್ಭವನ್ನು ಧರಿಸಿದೆ.

    ಹಾಗಾಗಿ ಸಾರಿಗೆ ನೌಕರ ರಮೇಶ್ ಪಡತೇರ್ ಅವರ ಪುತ್ರ ಪೃಥ್ವಿರಾಜ್ ಪಡತೇರ್ ಮತ್ತು ಕುಟುಂಬದವರು ಮಹಿಳೆಯರಿಗೆ ಸೀಮಂತ ಮಾಡುವಂತೆ ಶ್ವಾನಕ್ಕೂ ಬಳೆ ಹಾಕಿ, ಸೀರೆ ಉಡಿಸಿ, ಹೂವಿನ ಮಾಲೆಯನ್ನು ಹಾಕಿ, ಮೊದಲ ಬಾರಿಗೆ ಗರ್ಭವತಿಯಾದ ಶ್ವಾನಕ್ಕೂ ಅದ್ದೂರಿಯಾಗಿ ಸೀಮಂತ ಮಾಡಿದರು.

    ಈ ವಿಭಿನ್ನ ಸೀಮಂತ ಕಾರ್ಯಕ್ರಮವನ್ನು ವೀಕ್ಷಿಸಿದ ಬಡಾವಣೆಯ ಜನ ಸಂತಸ ವ್ಯಕ್ತಪಡಿಸಿದರು.

  • ಅಪರಾಧವನ್ನು ವಿರೋಧಿಸಿ ಅಪರಾಧಿಯನ್ನಲ್ಲ: ರಾಘವೇಂದ್ರ ಸುಹಾಸ್

    ಅಪರಾಧವನ್ನು ವಿರೋಧಿಸಿ ಅಪರಾಧಿಯನ್ನಲ್ಲ: ರಾಘವೇಂದ್ರ ಸುಹಾಸ್

    ಹುಬ್ಬಳ್ಳಿ: ನಾವೆಲ್ಲ ಅಪರಾಧವನ್ನು ವಿರೋಧಿಸುತ್ತೇವೆ. ಅಪರಾಧಿಗಳನ್ನಲ್ಲ ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಚ್.ಜಿ.ರಾಘವೇಂದ್ರ ಸುಹಾಸ್ ಹೇಳಿದ್ದಾರೆ.

    ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್‍ನ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ವತಿಯಿಂದ 7ನೇ ತಂಡದ ಮಹಿಳಾ ಜೈಲ್ ವಾರ್ಡರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ಇದೇ ವೇಳೆ ಪ್ರಶಿಕ್ಷಣಾರ್ಥಿಗಳು ನಿರ್ಗಮನ ಪಥ ಸಂಚಲನದ ಮೂಲಕ ಗೌರವ ಸಮರ್ಪಣೆ ಮಾಡಿದರು.

    ಬಳಿಕ ಮಾತನಾಡಿದ ಪೊಲೀಸ್ ಮಹಾ ನಿರೀಕ್ಷಕ ಎಚ್.ಜಿ.ರಾಘವೇಂದ್ರ ಸುಹಾಸ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ವತಿ ಈಗಾಗಲೇ ಉತ್ತಮ ತರಬೇತಿಯನ್ನು ನೀಡಿದ್ದಾರೆ. ದೇಶಕ್ಕೆ ಬಾರ್ಡರ್ ಎಷ್ಟು ಮುಖ್ಯವೋ ದೇಶದ ಒಳಗೆ ಜೈಲ್ ವಾರ್ಡರ್ ಕೂಡ ಅಷ್ಟೇ ಮುಖ್ಯವಾಗಿದೆ. ನಾವೆಲ್ಲ ಅಪರಾಧವನ್ನು ವಿರೋಧಿಸುತ್ತೇವೆ. ಅಪರಾಧಿಗಳನ್ನಲ್ಲ ಎಂಬುವಂತ ಘೋಷ ವಾಕ್ಯವನ್ನು ಎಲ್ಲ ವಾರ್ಡರ್‍ಗಳು ಕೂಡ ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಇದೇ ಕಾರ್ಯಕ್ರಮದಲ್ಲಿ ರಿವ್ಹೀಜ್ ಆರ್ಡರ್, ರಾಷ್ಟ್ರ ಧ್ವಜ ಹಾಗೂ ಪೊಲೀಸ್ ಧ್ವಜ ಆಗಮನ, ಪ್ರತಿಜ್ಞಾವಿಧಿ ಸ್ವೀಕಾರ, ಧ್ವಜಗಳ ನಿರ್ಗಮನ, ಬಹುಮಾನ ವಿತರಣೆ ಸೇರಿದಂತೆ ಹಲವಾರು ಕಾರ್ಯವನ್ನು ನೆರವೇರಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಲಾಬುರಾಮ್, ಡಿಸಿಪಿಗಳಾದ ಕೆ.ರಾಮರಾಜನ್, ಆರ್.ಬಿ.ಬಸರಗಿ ಸೇರಿದಂತೆ ಇತರರು ಉಪಸ್ಥಿತರಾಗಿದ್ದರು.

  • 200 ಕೋಟಿ ಸಾಲ ಪಡೆಯಲು ವಾಯುವ್ಯ ಸಾರಿಗೆ ಸಂಸ್ಥೆಯಿಂದ ಅರ್ಜಿ ಆಹ್ವಾನ

    200 ಕೋಟಿ ಸಾಲ ಪಡೆಯಲು ವಾಯುವ್ಯ ಸಾರಿಗೆ ಸಂಸ್ಥೆಯಿಂದ ಅರ್ಜಿ ಆಹ್ವಾನ

    ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಹಾಗೂ ಹಣಕಾಸು ಸಂಸ್ಥೆಗಳಿಂದ 200 ಕೋಟಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.

    2020-21 ನೇ ಸಾಲಿನಲ್ಲಿ ಭವಿಷ್ಯ ನಿಧಿ ನ್ಯಾಸ ಮಂಡಳಿಯ ಬಾಕಿ ಮೊತ್ತ ಪಾವತಿಸಲು 200 ರೂ. ಕೋಟಿ ದೀರ್ಘಾವದಿ ಸಾಲವನ್ನು, 7 ವರ್ಷಗಳ ಅವಧಿಗೆ ಸಂಸ್ಥೆ ಪಡೆಯಲಿದೆ. ಆಸಕ್ತಿ ಹೊಂದಿದ ಬ್ಯಾಂಕ್, ವಾಣಿಜ್ಯ ಹಾಗೂ ಹಣಕಾಸು ಸಂಸ್ಥೆಗಳು ಮುಚ್ಚಿದ ಲಕೋಟಿಯಲ್ಲಿ ಅರ್ಜಿಯನ್ನು ಫೆಬ್ರವರಿ 19ರ ಮಧ್ಯಾಹ್ನ 3 ಗಂಟೆಯೊಳಗೆ ಗೋಕಲ ರಸ್ತೆಯ ಕೇಂದ್ರ ಕಚೇರಿಗೆ ಸಲ್ಲಿಸಬೇಕು.

     

    ಗೋಕುಲ ರೋಡ್ ನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಲೆಕ್ಕ ಪತ್ರ ಇಲಾಖೆಯವರಿಗೆ ಸಲ್ಲಿಸಬೇಕು. ಅದೇ ದಿನ 4 ಗಂಟೆಗೆ ಲಕೋಟೆಯನ್ನು ತೆರೆಯಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ ಸೈಟ್ www.nwksrtc.in ಹಾಗೂ ಮೊಬೈಲ್ ಸಂಖ್ಯೆ 77609 91527, 77609 91512 ಸಂಪರ್ಕಿಸಬಹುದು ಎಂದು ಮುಖ್ಯ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ವಿಶ್ವನಾಥ್ ನಮ್ಮ ಗುರುಗಳು, ಸಿಡಿ ಬಗ್ಗೆ ನನಗೆ ಗೊತ್ತಿಲ್ಲ – ರಮೇಶ್ ಜಾರಕಿಹೊಳಿ

    ವಿಶ್ವನಾಥ್ ನಮ್ಮ ಗುರುಗಳು, ಸಿಡಿ ಬಗ್ಗೆ ನನಗೆ ಗೊತ್ತಿಲ್ಲ – ರಮೇಶ್ ಜಾರಕಿಹೊಳಿ

    ಹುಬ್ಬಳ್ಳಿ: ಹೆಚ್ ವಿಶ್ವನಾಥ್ ಅವರು ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಅವರು ನಮ್ಮ ಗುರುಗಳು. ಅವರ ಮಾತು ನಮಗೆ ಆಶೀರ್ವಾದ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಚ್ ವಿಶ್ವನಾಥ್ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ಏನು ಮಾತನಾಡಿದರು ನಮಗೆ ಆಶಿರ್ವಾದವಿದ್ದಂತೆ. ಆದರೆ ಅವರಿಗೆ ಮಂತ್ರಿ ಸ್ಥಾನ ನೀಡುವುದಕ್ಕೆ ಅಡೆತಡೆಗಳಿದ್ದು, ಈ ವಿಚಾರ ಕೋರ್ಟ್‍ನಲ್ಲಿದೆ ಎಂದು ಹೇಳಿದರು.

    ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಕೂಡ ಅಪಾರ ಗೌರವವಿದೆ. ಹಿರಿಯ ನಾಯಕರು ಅವರಿಗೆ ಸ್ಥಾನಮಾನ ಸಿಗಬೇಕು ಎಂಬ ಆಗ್ರಹವಿದೆ. ಆದರೆ ಸಿಡಿ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಧ್ಯಮಗಳ ಮುಂದೆ ಪಕ್ಷದ ಆಂತರಿಕ ವಿಚಾರ ಮಾತನಾಡಬಾರದು ಎಂದು ಅವರು ಮನವಿ ಮಾಡಿದರು.

    ಸಿಪಿ ಯೋಗೇಶ್ವರ್ ಅವರ ಮೇಲೆ ಗಂಭೀರ ಆರೋಪಗಳಿದ್ದಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಆಗ ಅವರು ಕ್ರಮ ತಗೆದುಕೊಳ್ಳುತ್ತಾರೆ. ಅಲ್ಲದೆ ವಿಜಯೇಂದ್ರ ಅವರು ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಾರೆ ಎಂಬುದು ಸುಳ್ಳು. ಸಿಎಂ ಮಗನೆಂದು ಎಲ್ಲರೂ ಆರೋಪ ಮಾಡುತ್ತಾರೆ. ನಮ್ಮ ಇಲಾಖೆ ಅಲ್ಲ. ಬೇರೆ ಇಲಾಖೆಗೂ ಅವರು ಕೈ ಹಾಕಿಲ್ಲ ಎಂದರು.

     

  • ಹುಬ್ಬಳ್ಳಿ, ಧಾರವಾಡದಲ್ಲಿ 5000 ಕೋಟಿ ಬಂಡವಾಳ ಹೂಡಿಕೆ – 20 ಸಾವಿರ ಉದ್ಯೋಗ ಸೃಷ್ಟಿ

    ಹುಬ್ಬಳ್ಳಿ, ಧಾರವಾಡದಲ್ಲಿ 5000 ಕೋಟಿ ಬಂಡವಾಳ ಹೂಡಿಕೆ – 20 ಸಾವಿರ ಉದ್ಯೋಗ ಸೃಷ್ಟಿ

    – 12 ಕೈಗಾರಿಕೆ ಸ್ಥಾಪನೆಗೆ ಹಣಕಾಸು ಇಲಾಖೆ ಅನುಮತಿ
    – ಸುದ್ದಿಗೋಷ್ಠಿ ನಡೆಸಿ ಸಚಿವ ಶೆಟ್ಟರ್ ವಿವರಣೆ

    ಹುಬ್ಬಳ್ಳಿ: ಧಾರವಾಡ – ಹುಬ್ಬಳ್ಳಿ ಮಹಾನಗರದಲ್ಲಿ ಏಕಸ್ ಹಾಗೂ ಯುಫ್ಲೇಕ್ಸ್ ಕಂಪನಿಗಳ ಸ್ಥಾಪನೆಗೆ ಹಣಕಾಸು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರ ಸಂಪೂರ್ಣ ಅನುಮತಿ ನೀಡಿದೆ. ಯೋಜನೆಗಳ ಸ್ಥಾಪನೆಗೆ ಅಗತ್ಯವಾದ ಭೂಮಿಯನ್ನು ಶೀಘ್ರವಾಗಿ ಕಂಪನಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಹುಬ್ಬಳ್ಳಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ನೂತನ ಕೈಗಾರಿಕೆಗಳ ಸ್ಥಾಪನೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿಯಲ್ಲಿ ನೂತನ ಕೈಗಾರಿಕೆಗಳ ಸ್ಥಾಪನೆಯ ಕುರಿತು ಸುದೀರ್ಘ ಚರ್ಚೆ ನಡೆಸಿ ಅನುಮತಿ ನೀಡಲಾಗಿತ್ತು. ಜನವರಿ 12 ರಂದು ಕೈಗಾರಿಕೆಗಳ ಸ್ಥಾಪನೆಗೆ ಹಣಕಾಸು ಇಲಾಖೆಯ ಅನುಮತಿ ಲಭಿಸಿದ್ದು, ಶೀಘ್ರವಾಗಿ ಕಂಪನಿಗಳಿಗೆ ಅನುಮೋದನೆ ಪ್ರಮಾಣ ಪತ್ರಗಳನ್ನು ಸಹ ನೀಡಲಾಗುವುದು ಎಂದರು.

    20 ಸಾವಿರ ಉದ್ಯೋಗ ಸೃಷ್ಟಿ
    ಏಕಸ್ ಕಂಪನಿ 3524 ಕೋಟಿ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ರಾಜ್ಯ ಸರ್ಕಾರದಿಂದ 358 ಎಕರೆ ಜಮೀನನ್ನು ಇಟಗಟ್ಟಿ ಹಾಗೂ ಗಾಮಗಟ್ಟಿ ಕೈಗಾರಿಕಾ ವಸಹಾತುಗಳಲ್ಲಿ ಕಂಪನಿಗೆ ಮಂಜೂರು ಮಾಡಲಾಗಿದೆ. ಮುಖ್ಯವಾಗಿ ದಿನನಿತ್ಯ ಉಪಯೋಗಿಸುವ ಗ್ರಾಹಕ ವಸ್ತುಗಳ ತಯಾರಿಕಾ ಘಟವನ್ನು ಕಂಪನಿ ಸ್ಥಾಪನೆ ಮಾಡಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದಲ್ಲಿ 20 ಸಾವಿರ ಉದ್ಯೋಗ ಅವಕಾಶಗಳು ಲಭಿಸಲಿವೆ. ಪೊಟ್ಟಣ ತಯಾರಿಕಾ ಉದ್ದಿಮೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಯುಫ್ಲೇಕ್ಸ್ ಕಂಪನಿ 1,464 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ. ಧಾರವಾಡ ಮಮ್ಮಿಗಟ್ಟಿ ಬಳಿಗೆ 50 ಎಕರೆ ಜಮೀನು ಕಂಪನಿಗೆ ಮಂಜೂರು ಮಾಡಲಾಗಿದೆ. ಕಂಪನಿಯಿಂದ ನೇರವಾಗಿ ಒಂದು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ

    ಕ್ಲಸ್ಟರ್ ಘೋಷಣೆ:
    ರಾಜ್ಯ ಸರ್ಕಾರ ಹುಬ್ಬಳ್ಳಿಯನ್ನು ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ವಸ್ತುಗಳ(ಎಫ್‍ಎಂಸಿಜಿ) ಕ್ಲಸ್ಟರ್ ಎಂದು ಘೋಷಣೆ ಮಾಡಿದೆ. ಎಫ್‍ಎಂಸಿಜಿ ಕ್ಲಸ್ಟರ್ ಸ್ಥಾಪನೆಯಾದರೆ, ಹುಬ್ಬಳ್ಳಿ ದಕ್ಷಿಣ ಭಾರತದಲ್ಲಿ ಹಬ್ ಆಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಇದು ಕಾರಣೀಭೂತವಾಗಲಿದೆ. ಪ್ರತಿ ಹಂತದಲ್ಲಿ 2,500 ಕೋಟಿಯಂತೆ 3 ಹಂತಗಳಲ್ಲಿ 7,500 ಕೋಟಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಕ್ಲಸ್ಟರ್ ಸ್ಥಾಪನೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಕೈಗಾರಿಕೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಹಣಕಾಸು ಇಲಾಖೆಯೊಂದಿಗೆ ಸಮಾಲೋಚಿಸಿ, ಮುಖ್ಯಮಂತ್ರಿಗಳ ನೇತೃತ್ವದ ಸಚಿವ ಸಂಪುಟ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಉತ್ತರ ಭಾರತದ ಗುವಾಹಟಿಯಲ್ಲಿ ಸದ್ಯ ಎಫ್‍ಎಂಸಿಜಿ ಕ್ಲಸ್ಟರ್ ಇದ್ದು, ಕೇಂದ್ರ ಸರ್ಕಾರದ ಪ್ರೋತ್ಸಾಹದಿಂದ ಉದ್ದಿಮೆ ಬಲವಾಗಿ ಬೆಳದು ನಿಂತಿದೆ. ಅಲ್ಲಿನ ಉದ್ಯಮಿಗಳ ಮನ ಒಲಿಸಿ ಹುಬ್ಬಳ್ಳಿ ಕರೆ ತರಲು ಉದ್ದಮಿ ಉಲ್ಲಾಸ್ ಕಾಮತ್ ರ ನೇತೃತ್ವದಲ್ಲಿ ಪ್ರಯತ್ನ ನಡೆಸಲಾಗುತ್ತದೆ.

    ಉತ್ತರ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿ
    ನೂತನ ಕೈಗಾರಿಕಾ ನೀತಿಯಲ್ಲಿ ಎರಡನೇ ಹಾಗೂ ಮೂರನೇ ಸ್ತರದ ನಗರಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೊಪ್ಪಳದಲ್ಲಿ ಬಾಣಾವರ ಗ್ರಾಮದಲ್ಲಿ 400 ಎಕರೆ ಜಮೀನು ಖರೀದಿಸಿ ಎಸ್‍ಇಝಢ್ ಘೋಷಣೆ ಮಾಡಲಾಗಿದೆ. ಆಟಿಕೆ ತಯಾರಿಕಾ ಕ್ಲಸ್ಟರ್ ನಿರ್ಮಾಣ ಮಾಡಲಾಗುತ್ತಿದೆ. ಏಕಸ್ ಕಂಪನಿ 5000 ಕೋಟಿ ಬಂಡವಾಳ ಹೂಡಿಕೆ ಮಾಡಿ ಆಟಿಕೆ ತಯಾರಿಕೆ ಘಟಕ ಸ್ಥಾಪಿಸಲಿದೆ. ಇದರಿಂದ 20 ಸಾವಿರ ಉದ್ಯೋಗ ಸ್ಥಳೀಯ ಜನರಿಗೆ ಲಭಿಸಲಿದೆ. ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ 4000 ಎಕರೆ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಅಭಿವೃದ್ಧಿ ಪಡಿಸಲಾಗಿದೆ. ಹೈದರಬಾದ್ ಮೂಲದ ಔಷಧ ತಯಾರಿಕಾ ಕಂಪನಿಗಳು ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಘಕಗಳನ್ನು ಸ್ಥಾಪಿಸಲು ಮುಂದೆ ಬಂದಿವೆ. ರಾಜ್ಯ ಮಟ್ಟದ ಸಮಿತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕೂಡ 55 ಔಷದ ಕಂಪನಿಗಳು ಸೇರಿದಂತೆ ಒಟ್ಟು 70 ಕಂಪನಿಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ. 2289 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. 11,000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಅಭಿವೃದ್ದಿ ಪರ್ವ ಶುರುವಾಗಿದೆ ಎಂದರು.

    ಶೇ.100 ರಷ್ಟು ಉದ್ಯೋಗಗಳು ರಾಜ್ಯದವರಿಗೆ ಮೀಸಲು
    ಕೈಗಾರಿಕೆ ಸ್ಥಾಪನೆಗಳಿಗೆ ರಾಜ್ಯ ಸರ್ಕಾರದಿಂದ ಹಲವು ರಿಯಾತಿಗಳನ್ನು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಏಕಸ್ ಹಾಗೂ ಯುಪ್ಲೇಕ್ಸ್ ಕಂಪನಿಗಳಿಗೆ ಅಭಿವೃದ್ಧಿ ಪಡಿಸದ ಭೂಮಿಯನ್ನು ನೀಡಲಿದ್ದೇವೆ. ಹಾಗಾಗಿ ದರ ಹಾಗೂ ಪಾವತಿಯಲ್ಲಿ ಸ್ವಲ್ಪ ವಿನಾಯಿತಿ ನೀಡಲಾಗಿದೆ. ಕಟ್ಟಡ, ಕ್ಲಸ್ಟರ್ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸ್ಥಾಪಿಸಲು ಅನುಕೂಲವಾಗುವಂತೆ, ಮೂಲ ಬಂಡವಾಳದ ಹೂಡಿಕೆಯಲ್ಲಿ ಶೇ.25 ರಷ್ಟು ವಿನಾಯಿತಿ ನೀಡಲಾಗಿದೆ. ಹೊಸದಾಗಿ ಸ್ಥಾಪನೆಯಾದ ಕಂಪನಿಗಳ ವಾರ್ಷಿಕ ವಹಿವಾಟಿನ ಮೇಲೆ ಶೇ.2 ರಷ್ಟು ಉತ್ತೇಜಕ ದರವನ್ನು ನೀಡಲಾಗುವುದು. ರಾಜ್ಯ ಸರ್ಕಾರದಿಂದ ಕೈಗಾರಿಕೆ ಸ್ಥಾಪನೆ ಮಾಡುವ ಕಂಪನಿಗಳಿಗೆ ಕಡ್ಡಾಯವಾಗಿ ಸ್ಥಳೀಯರು ಹಾಗೂ ರಾಜ್ಯದವರಿಗೆ ಶೇ.100 ರಷ್ಟು ಉದ್ಯೋಗ ಅವಕಾಶಗಳನ್ನು ನೀಡುವಂತೆ ನಿಯಮಗಳನ್ನು ವಿಧಿಸಲಾಗಿದೆ. ಕೆಲವೊಂದು ಪರಿಣಿತ ಹುದ್ದೆಗಳಿಗ ಹೊರ ರಾಜ್ಯ ಹಾಗೂ ರಾಷ್ಟ್ರವರನ್ನು ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಉದ್ದಿಮೆಗಳ ಅಗತ್ಯಕ್ಕೆ ತಕ್ಕಂತೆ ಕೌಶಲ್ಯಗಳ ತರಬೇತಿಗೆ ಟಾ.ಟಾ ಟೆಕ್ನಾಲಜೀಸ್ ನೊಂದಿಗೆ ತರಬೇತಿ ಕೇಂದ್ರವನ್ನು ತೆರೆಯಲಾಗುವುದು. ಐ.ಟಿ.ಐ ಕೇಂದ್ರಗಳಲ್ಲಿ ಕೂಡ ತರಬೇತಿ ನೀಡಲಾಗುವುದು. ಸ್ಥಳೀಯರಿಗೆ ಉದ್ಯೋಗ ನೀಡುವುದು ಕಂಪನಿಗಳಿಗೂ ಲಾಭದಾಯವಾಗಿದೆ. ಟೆಸ್ಲಾ ಕಾರು ತಯಾರಿಕಾ ಕಂಪನಿ ಬೆಂಗಳೂರಿನಲ್ಲಿ ಕಚೇರಿ ಸ್ಥಾಪನೆ ಮಾಡುವುದರ ಮೂಲಕ ಭಾರತದ ಮಾರುಕಟ್ಟೆ ಪ್ರವೇಶಿಸಿದೆ. ಮುಂಬರುವ ದಿನಗಳಲ್ಲಿ ಕಂಪನಿ ಬಂಡವಾಳ ಹಾಗೂ ಕೈಗಾರಿಕಾ ಸ್ಥಾಪನೆ ಮುಂದೆ ಬಂದರೆ ರಾಜ್ಯದಲ್ಲಿ ಅವಕಾಶ ಮಾಡಿ ಕೊಡಲಾಗುವುದು ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಶಾಸಕ ಪ್ರದೀಪ್ ಶೆಟ್ಟರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಗೌರವ ಗುಪ್ತಾ, ಮುಂಡರಾದ ಮಲ್ಲಿಕಾರ್ಜುನ ಸವಕಾರ, ಸಂತೋಷ್ ಚವ್ಹಾಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕೆಪಿಎಂಇ ತಿದ್ದುಪಡಿ ಮಸೂದೆಗೆ ಜೆಡಿಎಸ್ ಸಂಪೂರ್ಣ ವಿರೋಧ- ಎಚ್‍ಡಿ ದೇವೇಗೌಡ

    ಕೆಪಿಎಂಇ ತಿದ್ದುಪಡಿ ಮಸೂದೆಗೆ ಜೆಡಿಎಸ್ ಸಂಪೂರ್ಣ ವಿರೋಧ- ಎಚ್‍ಡಿ ದೇವೇಗೌಡ

    ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೆಪಿಎಂಇ ತಿದ್ದುಪಡಿ ಮಸೂದೆಗೆ ಜೆಡಿಎಸ್ ಸಂಪೂರ್ಣ ವಿರೋಧವಿದೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಂಇ ಮಸೂದೆಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಈ ಸರ್ಕಾರ ಇಷ್ಟೊಂದು ತರಾತುರಿ ಮಾಡಬಾರದಿತ್ತು. ಈ ಮಸೂದೆಯನ್ನು ಇನ್ನೂ ಸದನದಲ್ಲಿ ಮಂಡಿಸಿಯೇ ಇಲ್ಲ ಅಂದ್ರು.

    ಒಂದು ವೇಳೆ ಸದನದಲ್ಲಿ ಮಸೂದೆ ಮಂಡನೆ ಆದ್ರೆ ಈ ಬಗ್ಗೆ ಸದನದಲ್ಲೂ ಜೆಡಿಎಸ್ ವಿರೋಧ ವ್ಯಕ್ತಪಡಿಸಲಿದೆ. ಯಾರು ನಕಲಿ ವೈದ್ಯರಿದ್ದಾರೋ ಅವರ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿ. ಅದನ್ನು ಬಿಟ್ಟು ಕಾಯ್ದೆಯನ್ನು ಜಾರಿ ಮಾಡಬಾರದು. ಈ ಕಾಯ್ದೆ ಜಾರಿಯಾದ್ರೆ ವೈದ್ಯರ ಗತಿ ಏನಾಗುತ್ತೆ ಎಂದು ಹೇಳಿದ್ರು.