Tag: ಪಬ್ಲಿಕ್ ಟಿವಿ Jaggesh

  • ಅಪಮಾನ ಸಹಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದೆ: ಜಗ್ಗೇಶ್

    ಅಪಮಾನ ಸಹಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದೆ: ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನವರಸ ನಾಯಕ ಜಗ್ಗೇಶ್ ತಮ್ಮ ಎಸ್‍ಎಸ್‍ಎಲ್‍ಸಿ ಮಾರ್ಕ್ಸ್ ಕಾರ್ಡ್ ನನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸೆಕೆಂಡ್ ಕ್ಲಾಸ್ ಪಡೆದಿದ್ದ ನಟ ಜಗ್ಗೇಶ್ ಅಂಕ ನೋಡಿ ಅವರ ತಂದೆ ಬೂಟಿನಿಂದ ಹೊಡೆದಿದ್ದರಂತೆ, ಇದರಿಂದ ಬೇಸರಗೊಂಡು ಅವಮಾನ ಸಹಿಸಲಾಗದೇ ಜಗ್ಗೇಶ್ ಆತ್ಮಹತ್ಯೆಗೆ ಮುಂದಾಗಿದ್ದ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆದರೆ ಅದೃಷ್ಟವಶಾತ್ ಹೇಗೋ ಪ್ರಾಣಾಪಾಯದಿಂದ ಪಾರಾದ ಜಗ್ಗೇಶ್, ಅಂದು ಅನಾಹುತ ಸಂಭವಿಸಿದ್ದರೆ ಇಂದು ಈಶ್ವರ ಇರುತ್ತಿರಲಿಲ್ಲ ಎಂಬ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಜಗ್ಗೇಶ್ ಅವರು ತಮ್ಮ ಎಸ್‍ಎಸ್‍ಎಲ್‍ಸಿ ಮಾರ್ಕ್ಸ್ ಕಾರ್ಡ್‍ನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಂದು ಅವರು ಅನುಭವಿಸಿದ ಕಷ್ಟವನ್ನು ಅಕ್ಷರಗಳ ಮೂಲಕ ತೋಡಿಕೊಂಡಿದ್ದಾರೆ.

    ಅಂದು ಈ ಜಗ್ಗೇಶ ಶಾಲೆಯಲ್ಲಿ ಈಶ್ವರ. ತಾತ ರಾಜಣ್ಣನಂತೆ ನಟನಾಗು ಎಂದು ತಲೆಯಲ್ಲಿ ಹುಳಬಿಟ್ಟ. ಅದು ನನ್ನ ಚಿಂತನೆಯ ಚಿತೆಯಾಯಿತು. ಪರೀಕ್ಷೆ ಅರ್ಧಮನಸ್ಸಿನಲ್ಲಿಯೇ ಓದಿಬರೆದೆ. ಯಾಕೋ ಕನ್ನಡ ಮಾತ್ರ ನನ್ನ ಅಚ್ಚುಮೆಚ್ಚಿನ ವಿಷಯವಾಯಿತು. ಕನ್ನಡ ವ್ಯಾಕರಣ ಸಿಹಿ ತಿನಿಸಂತೆ ಪ್ರೀತಿ. ಬಾಲ್ಯದಿಂದ ಕನ್ನಡ ಭಾಷಾ ಪ್ರೀತಿ ಹುಟ್ಟಿದರೆ ಸಾಯುವವರೆಗೂ ಅದು ಅವನ ಹೃದಯದ ನಾಡಿ ಬಡಿತದಂತೆ ಜೊತೆ ಉಳಿಯುತ್ತದೆ. ಸ್ವಾರ್ಥಕ್ಕೆ ಬಳಕೆಯಾದರೆ ಆತ್ಮ ದ್ರೋಹವಾಗುತ್ತದೆ. ಈ ಅಂಕ ನೋಡಿದ ಅಪ್ಪ ನಡು ರೋಡಿನಲ್ಲಿ ಜನನೋಡುವಂತೆ ಬೂಟಿನಲ್ಲಿ ಹೊಡೆದು ಬಿಟ್ಟರು. ಅಪಮಾನ ಸಹಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದೆ. ಆಗ ದಿವಂಗತ ಶ್ರೀರಾಮಪುರದ ಕಿಟ್ಟಿ (ಆ ದಿನಗಳು ಕುಖ್ಯಾತಿ)ನನ್ನ ಬಾಚಿ ಎಳೆದು ರೈಲಿನ ಅನಾಹುತ ತಪ್ಪಿಸಿದ. ಆ ವಿಷಯ ತಿಳಿದು ಅಪ್ಪನಿಗೆ ದುಃಖವಾಗಿ ಮನನೊಂದು ಬಂಧುಮಿತ್ರರ ಮುಂದೆ ಕಣ್ಣೀರು ಇಟ್ಟು ಪಶ್ಚಾತಾಪಪಟ್ಟರು. ಅಂದು ಅನಾಹುತ ಸಂಭವಿಸಿದ್ದರೆ ಇಂದು ಈಶ್ವರ ಜಗ್ಗೇಶನಾಗಿ ಇರುತ್ತಿರಲಿಲ್ಲಾ. ಬದಲಾಗಿ ಸತ್ತ ಕೋಟಿ ಜನರಲ್ಲಿ ಒಬ್ಬನಾಗುತ್ತಿದ್ದೆ.

    ತಂದೆ-ತಾಯಿ-ಮಕ್ಕಳನ್ನು ಬರೀ ಓದಿನ ಯಂತ್ರವಾಗಿ ಬೆಳೆಸದೇ ಜಗದ ಪಾಠ ಕಲಿಸುವ ಯತ್ನ ಮಾಡಿ. ಓದಿದ ಮಕ್ಕಳು ಸರ್ಕಸ್ ಸಿಂಹದಂತೆ ಓದಿನ ಜೊತೆಗೆ ಜಗದ ಪಾಠ ಕಲಿತವರು ಬೇಟೆಯಾಡುವ ಕಾಡಿನ ಸಿಂಹದಂತೆ. ಇಂದಿನ ಜಗತ್ತಿಗೆ ಮಕ್ಕಳು ಬೇಟೆಯಾಡುವ ಸಿಂಹದಂತೆ ಬಾಳಬೇಕು ಕಾರಣ ಜಗ ಕಾಡಿನಂತೆ ಆಗಿದೆ, ಮನುಷ್ಯ ಬೇಟೆಯಾಡುವ ಪ್ರಾಣಿಯಂತೆ. ಇಂತಹ ಸಮಯದಲ್ಲಿ ಮಕ್ಕಳು ಕಾಡು ಸಿಂಹವಾದರೆ, ಕೆಣಕುವವರು ದೂರ ಉಳಿಯುತ್ತಾರೆ. ಎಸ್‍ಎಸ್‍ಎಲ್‍ಸಿ ಫಲಿತಾಂಶ ಏನೇ ಬರಲಿ ನಿಮ್ಮ ಮಕ್ಕಳನ್ನು ಸಿಂಹದಂತೆ ಸಾಕಿ. ಮಿಕ್ಕಂತೆ ಜಗತ್ತೆ ಮನುಜನಿಗೆ ಜೀವನಪಾಠ ಕಲಿಸುತ್ತದೆ. ಅಮರ ಹಳೆ ನೆನಪು, ಶುಭದಿನ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೀವು ಕೆಟ್ಟವರಲ್ಲ, ಸಮಾಜ ಕೆಟ್ಟದ್ದು : ಜಾಕ್ವೆಲಿನ್ ಫರ್ನಾಂಡಿಸ್

  • ತಲೆಬಾಗಿ ಕ್ಷಮೆ ಕೋರುವೆ – ಮಾಲಾಶ್ರೀಗೆ ಸಾಂತ್ವನ ಹೇಳಿದ ಜಗ್ಗೇಶ್

    ತಲೆಬಾಗಿ ಕ್ಷಮೆ ಕೋರುವೆ – ಮಾಲಾಶ್ರೀಗೆ ಸಾಂತ್ವನ ಹೇಳಿದ ಜಗ್ಗೇಶ್

    ಬೆಂಗಳೂರು: ಕೋಟಿ ರಾಮು ಎಂದೇ ಖ್ಯಾತಿ ಪಡೆದಿದ್ದ ನಿರ್ಮಾಪಕ ರಾಮು ಕೊರೊನಾದಿಂದ ನಿಧನರಾಗಿದ್ದರೆ ಎಂದರೆ ಇಂದಿಗೂ ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ ರಾಮುರನ್ನು ಕಳೆದುಕೊಂಡ ಚಂದನವನಕ್ಕೆ ಭರಿಸಲಾಗದ ನಷ್ಟವುಂಟಾಗಿದೆ.

    ಪತಿಯ ಅಗಲಿಕೆಯಿಂದ ನೊಂದಿರುವ ನಟಿ ಮಾಲಾಶ್ರೀಗೆ ಸ್ಯಾಂಡಲ್‍ವುಡ್‍ನ ಅನೇಕ ಕಲಾವಿದರು ಸಾಂತ್ವನ ಹೇಳುತ್ತಿದ್ದಾರೆ. ಇದೀಗ ನವರಸ ನಾಯಕ ಜಗ್ಗೇಶ್ ಕೂಡ ಮಾಲಾಶ್ರೀಯವರಿಗೆ ಟ್ವಿಟ್ಟರ್ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ.

    ‘ಮೇಡಂ ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರಿ ನಿಮ್ಮ ಮನೆಯಲ್ಲೇ  ರಾಮು ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ ಎಂದು ಟ್ವೀಟ್ ಮಾಡಿದ್ದಾರೆ.

    ದಯಮಾಡಿ ನೀವು ಧೈರ್ಯದಿಂದ ಈ ಸಂಕಷ್ಟ ಎದುರಿಸಿ ಮಕ್ಕಳನ್ನು ರಾಮು ಎತ್ತರಕ್ಕೆ ಬೆಳೆಸಿ. ನಿಮ್ಮ ಜೊತೆ ನಾವು ಉದ್ಯಮದ ಎಲ್ಲ ಸ್ನೇಹಿತರು ಸದಾ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ ನಿಮ್ಮ ಕಲಾಬಂಧು ಎಂದು ಟ್ವೀಟ್ ಮಾಡಿದ್ದಾರೆ.

    ಈ ಮುನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಶ್ರುತಿ, ಸುದೀಪ್, ಮಾಳವಿಕ ಅವಿನಾಶ್, ಶ್ರೀ ಮುರುಳಿ ಸೇರಿದಂತೆ ಅನೇಕ ಕಲಾವಿದರೂ ಸಾಂತ್ವನ ಹೇಳಿದ್ದರು.