Tag: ಪಬ್ಲಿಕ್ ಟಿವಿ.mangaluru

  • ದೆಹಲಿ ಬಳಿಕ ಮಂಗ್ಳೂರಲ್ಲಿ ಭೀತಿ- ಗಾಳಿಯಲ್ಲಿ ಹೆಚ್ಚಾಗಿ ಬೆರೆತಿದ್ಯಂತೆ ಸೀಸದ ಅಂಶ..!

    ದೆಹಲಿ ಬಳಿಕ ಮಂಗ್ಳೂರಲ್ಲಿ ಭೀತಿ- ಗಾಳಿಯಲ್ಲಿ ಹೆಚ್ಚಾಗಿ ಬೆರೆತಿದ್ಯಂತೆ ಸೀಸದ ಅಂಶ..!

    ಮಂಗಳೂರು: ಬೆಂಗಳೂರಿನ ನಂತರ ಅತಿ ಹೆಚ್ಚು ಮಾಲಿನ್ಯಕ್ಕೆ ತುತ್ತಾಗುತ್ತಿರೋ ನಗರವೆಂಬ ಕುಖ್ಯಾತಿ ಮಂಗಳೂರಿಗೆ ದಕ್ಕಿದೆ. ಆಂಟಿ ಪೊಲ್ಯುಶನ್ ಡ್ರೈವ್(ಎಪಿಡಿ) ಎಂಬ ಖಾಸಗಿ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಈ ವಿಚಾರ ಕಂಡುಬಂದಿದ್ದು ವಿಷಕಾರಿ ಸೀಸದ ಅಂಶ ಗಾಳಿಯಲ್ಲಿ ಸೇರಿಕೊಂಡಿದ್ದಾಗಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ.

    ಮಂಗಳೂರಿನ ಬಂಟ್ಸ್ ಹಾಸ್ಟೆಲ್, ಪಂಪ್ ವೆಲ್, ಲಾಲ್‍ಬಾಗ್, ಬೈಕಂಪಾಡಿ ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರದೇಶದಲ್ಲಿ ಅಧ್ಯಯನ ಕೈಗೊಳ್ಳಲಾಗಿತ್ತು. ಈ ವೇಳೆ ಗಾಳಿಯಲ್ಲಿ ವಿಷಕಾರಿ ಅಂಶಗಳು ಸೇರಿಕೊಂಡಿದ್ದನ್ನು ಪತ್ತೆ ಮಾಡಿದ್ದಾರೆ. ಸೀಸದ ಅಂಶಗಳ ಜೊತೆಗೆ ನೈಟ್ರೋಜನ್ ಡೈಆಕ್ಸೈಡ್, ಸಲ್ಫರ್ ಡೈ ಆಕ್ಸೈಡ್ ಕಣಗಳು ಗಾಳಿಯಲ್ಲಿ ಇರುವುದಾಗಿ ಪತ್ತೆಯಾಗಿದೆ. ಹೆಚ್ಚು ವಾಹನ ದಟ್ಟಣೆ ಇರುವ ಬಂಟ್ಸ್ ಹಾಸ್ಟೆಲ್, ಪಿವಿಎಸ್, ಲಾಲ್ ಬಾಗ್ ವೃತ್ತದಲ್ಲಿ ಗಾಳಿಯಲ್ಲಿ ವಿಷಕಾರಿ ಅಂಶಗಳು ಹೆಚ್ಚು ಇರುವುದಾಗಿ ವರದಿಯಲ್ಲಿ ಹೇಳಿದೆ.

    ವಾಹನಗಳ ದಟ್ಟಣೆಯಿಂದ ವಾಯುಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದ್ದು ಹೊಗೆಯ ಪರಿಣಾಮ ಹೆಚ್ಚು ಎದುರಿಸುವ ಟ್ರಾಫಿಕ್ ಪೊಲೀಸರು, ಆಟೋ ಚಾಲಕರು ಮತ್ತು ಬೀದಿ ವ್ಯಾಪಾರಿಗಳನ್ನು ಸರ್ವೆಗೆ ಒಳಪಡಿಸಿದ್ದಾರೆ. ಈ ಪೈಕಿ 40 ಶೇಕಡಾ ಮಂದಿ ಶ್ವಾಸಕೋಶದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಕಂಡುಬಂದಿದೆ. ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಈಗಲೇ ಎಚ್ಚತ್ತುಕೊಂಡು ಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಅಬ್ದುಲ್ಲಾ ರೆಹ್ಮಾನ್ ಹೇಳಿದ್ದಾರೆ.

    ವಾಯು ಮಾಲಿನ್ಯದ ಕಾರಣ ದೆಹಲಿ, ಬೆಂಗಳೂರು ನಗರಗಳು ಗಂಭೀರ ಪರಿಣಾಮ ಎದುರಿಸುತ್ತಿರುವ ಮಧ್ಯೆ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಮಂಗಳೂರಿಗೂ ಗಂಡಾಂತರ ಎದುರಾಗಿರುವುದು ಹೊಸ ಬೆಳವಣಿಗೆಯಾಗಿದ್ದು ಆತಂಕದ ಛಾಯೆ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್- ಟಾರ್ಗೆಟ್ ಗ್ರೂಪ್ ಮೂಲಕ ಸುಪಾರಿ

    ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್- ಟಾರ್ಗೆಟ್ ಗ್ರೂಪ್ ಮೂಲಕ ಸುಪಾರಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಸ್ಫೋಟಕ ತಿರುವೊಂದು ದೊರೆತಿದೆ.

    ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್ ಬಂದಿದ್ದು, ಉಳ್ಳಾಲದ ಟಾರ್ಗೆಟ್ ಗ್ರೂಪ್ ಮೂಲಕ ಹತ್ಯೆಗೆ ಸುಪಾರಿ ಕೊಡಲಾಗಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರೋ ನಾಲ್ವರು ಈ ಟಾರ್ಗೆಟ್ ಗ್ರೂಪ್ ಪ್ರಮುಖನ ಸಹಚರರಾಗಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಟಾರ್ಗೆಟ್ ಗ್ರೂಪಿನಲ್ಲಿದ್ದ ಕಾಟಿಪಳ್ಳದ ಸಫ್ವಾನ್ ಸುರತ್ಕಲ್ ಪ್ರದೇಶದಲ್ಲಿ ಗ್ಯಾಂಗ್ ಕಟ್ಟಿಕೊಂಡಿದ್ದ. ಹೀಗಾಗಿ ಪೊಲೀಸರು ರೌಡಿ ಸಫ್ವಾನ್ ಬಂಧನಕ್ಕೆ ಬಲೆ ಬೀಸಿದ್ದರು. ಆದ್ರೆ ರಾಜಕಾರಣಿಗಳಿಂದ ಇದಕ್ಕೆ ತಡೆಹಿಡಿಯಲಾಗುತ್ತಿತ್ತು. ಎರಡು ತಿಂಗಳ ಹಿಂದೆಯಷ್ಟೇ ರೌಡಿ ತಂಡವೊಂದು ಸಫ್ವಾನ್ ನನ್ನು ಕೊಲೆ ಮಾಡಿತ್ತು. ಇತ್ತೀಚೆಗೆ ಚಾರ್ಮಡಿಯಲ್ಲಿ ಸಫ್ವಾನ್ ಎಂಬಾತನ ಶವ ಪತ್ತೆಯಾಗಿತ್ತು. ಆತನ ಕೊಲೆಯನ್ನು ಉಳ್ಳಾಲದ ಟಾರ್ಗೆಟ್ ಗುಂಪಿನ ಇನ್ನೊಬ್ಬ ಸಫ್ವಾನ್ ಎಂಬಾತ ನಡೆಸಿದ್ದ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿತ್ತು. ಸದ್ಯ ಆರೋಪಿ ಸಫ್ವಾನ್ ಜೈಲಿನಲ್ಲಿದ್ದಾನೆ ಅಂತ ಪಬ್ಲಿಕ್ ಟಿವಿಗೆ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ನಾನು ನಂಬಿದ ದೇವರು ಆರೋಪಿಗಳಿಗೆ ಶಿಕ್ಷೆ ನೀಡ್ತಾನೆ: ದೀಪಕ್ ತಾಯಿ ಕಣ್ಣೀರು

    ಟ್ರಾವೆಲ್ ಏಜೆನ್ಸಿ ಮೂಲಕ ತೆರೆದುಕೊಂಡಿದ್ದ ಟಾರ್ಗೆಟ್ ಗ್ರೂಪ್, ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಎಂಟು ವರ್ಷಗಳ ಹಿಂದೆ ಆರಂಭಗೊಂಡಿತ್ತು. ಸುರತ್ಕಲ್, ಮಂಗಳೂರು, ಉಳ್ಳಾಲದಲ್ಲಿ ಸಕ್ರಿಯವಾಗಿರುವ ಈ ತಂಡದಿಂದ ಮೂರು ತಿಂಗಳ ಹಿಂದೆ ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತ ಝುಬೈರ್ ಎಂಬವರನ್ನು ಕೊಲೆ ಮಾಡಲಾಗಿದೆ. ಇನ್ನು ಈ ಟಾರ್ಗೆಟ್ ಗ್ರೂಪ್ ಗೆ ಸೌದಿ, ದುಬೈನಿಂದ ಹಣಕಾಸಿನ ನೆರವು ಹರಿದುಬರುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್

    ಬುಧವಾರ ಮಧ್ಯಾಹ್ನ ಸುಮಾರು 1.30ರ ಸಮಯಕ್ಕೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ರು. ಕೂಡಲೇ ಎಚ್ಚೆತ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ

    https://www.youtube.com/watch?v=h2ySxt7VrtE

    https://www.youtube.com/watch?v=0iJpHrCbDbc

    ಝುಬೈರ್ ಕೊಲೆ ಆರೋಪಿಗಳು

                                                                                    

  • ರೆಡ್‍ಲೈಟನ್ನು ನನ್ನ ತಲೆ ಮೇಲೆ ಇಟ್ಕೊಂಡು ಸುತ್ತಾಡ್ತಿಲ್ಲ: ಖಾದರ್

    ರೆಡ್‍ಲೈಟನ್ನು ನನ್ನ ತಲೆ ಮೇಲೆ ಇಟ್ಕೊಂಡು ಸುತ್ತಾಡ್ತಿಲ್ಲ: ಖಾದರ್

    ಮಂಗಳೂರು: ಕೆಂಪು ದೀಪ ಸರ್ಕಾರಿ ಕಾರು ಮೇಲೆ ಇದೆ. ಕೆಂಪು ದೀಪ ನನ್ನ ತಲೆ ಮೇಲೆ ಇಲ್ಲ ಅಂತಾ ಆಹಾರ ಸಚಿವ ಯುಟಿ ಖಾದರ್ ಖಡಕ್ ಉತ್ತರ ನೀಡಿದ್ದಾರೆ.

    ವಿಐಪಿ ಸಂಸ್ಕೃತಿ ಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರಿಗೆ ಕೆಂಪು ಗೂಟವನ್ನು ಇಂದಿನಿಂದ ಅಧಿಕೃತವಾಗಿ ನಿಷೇದಿಸಿದ್ದು, ಆದ್ರೆ ಯು ಟಿ ಖಾದರ್ ಮಾತ್ರ ಇಂದು ಕೆಂಪುಗೂಟ ಇದ್ದ ಕಾರಿನಲ್ಲೇ ತಿರುಗಾಡಿದ್ದಾರೆ.

    ಕಾರಿನಿಂದ ಕೆಂಪು ದೀಪ ತೆಗೆಯೋಕೆ ಕೆಂಪು ದೀಪ ನನ್ನ ತಲೆ ಮೇಲಿಲ್ಲ. ತಲೆ ಮೇಲೆ ಇರ್ತಿದ್ರೆ ಕೆಳಗಿಡ್ತಾ ಇದೆ. ಆದ್ರೆ ಇದು ಸರ್ಕಾರಿ ಕಾರಿನ ಮೇಲೆ ಇದೆ. ಕೆಂಪು ದೀಪ ತೆಗೆಯೋದ್ರಿಂದ ಬಡವರ ಹೊಟ್ಟೆ ತುಂಬುವುದಿಲ್ಲ. ನನಗೆ ರಾಜ್ಯ ಸರ್ಕಾರ ಕಾರು ಕೊಟ್ಟಿರೋದು. ಕೇಂದ್ರ ಸರ್ಕಾರ ಕೊಟ್ಟಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಆದೇಶ ಕೊಟ್ರೆ ಕಾರಿನಿಂದ ಕೆಂಪು ದೀಪ ತೆಗೆಯೋದಾಗಿ ಹೇಳಿದ್ದಾರೆ.

    ಇದನ್ನೂ ಓದಿ: ಇಂದಿನಿಂದ ವಿಐಪಿ ಸಂಸ್ಕೃತಿಗೆ ಅಧಿಕೃತ ಬ್ರೇಕ್ – ಕೆಂಪೂಗೂಟದ ಕಾರು ಬಳಸಿದ್ರೆ ಬೀಳುತ್ತೆ ದಂಡ

    ಸರ್ಕಾರ ಕೊಟ್ಟ ಕಾರಿನಲ್ಲಿ ನಾನು ಕುತ್ಕೊಂಡು ಓಡಾಡೋದಷ್ಟೇ ನಮ್ಮ ಕೆಲಸ ಹೊರತು ಅದನ್ನು ಆಲ್ಟರ್ ಮಾಡೋ ಅವಕಾಶ ನಮಗಿಲ್ಲ. ಅಂತಹ ಸಂದರ್ಭಗಳು ಬಂದ್ರೆ ಇಲಾಖೆಯೇ ಕಾರನ್ನು ಆಲ್ಟರ್ ಮಾಡ್ತಾರೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಆದೇಶಕ್ಕೆ ನಾವು ಬದ್ಧರಾಗುತ್ತೇವೆ ಅಂತಾ ಖಡಕ್ಕಾಗಿಯೇ ನುಡಿದಿದ್ದಾರೆ.

    ಇದನ್ನೂ ಓದಿ: ನಾನು ಈಗ ಯಾಕೆ ಕೆಂಪು ದೀಪ ತೆಗೆಯಬೇಕು?- ಪ್ರಶ್ನಿಸಿದ್ದಕ್ಕೆ ಕಣ್ಣು ಕೆಂಪಾಗಿಸಿದ ಸಿಎಂ

    https://www.youtube.com/watch?v=XRZCCsr64A8