Tag: ಪಬ್ಲಿಕ್ ಟಿವಿ Murugesh Nirani

  • ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

    ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

    ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಪ್ರಬಲ ಖಾತೆಗಾಗಿ ಪೈಪೋಟಿ ಶುರುವಾಗಿದೆ. ವಲಸಿಗ ಸಚಿವರಂತೂ ತಮಗೆ ಇದೇ ಖಾತೆ ಬೇಕು ಅಂತಾ ಪಟ್ಟು ಹಿಡಿದಿದ್ದಾರೆ. ಆದರೆ ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ನಾನು ನಿಭಾಯಿಸುವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ನೂತನವಾಗಿ ಸಚಿವರಾದ ಮೇಲೆ ಕ್ಷೇತ್ರಕ್ಕೂ ತೆರಳುವ ಮುನ್ನ ಸಚಿವ ಶಂಕರಪಾಟೀಲ್, ಮುನೇನಕೊಪ್ಪ ಜೊತೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ, ನೂತನವಾಗಿ ಮಂತ್ರಿ ಮಂಡಲ ರಚನೆಯಾಗಿದೆ. ನಾನು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಇಬ್ಬರು ಬರುವ ದಿನಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

    ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪರ ನೇತೃತ್ವದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇವೆ. ಎಲ್ಲರೂ ಬಿಟ್ಟಿರುವ ಖಾತೆಯನ್ನು ನನಗೆ ಕೊಟ್ಟರೂ ನಾನು ನಿರ್ವಹಿಸುತ್ತೇನೆ ಎಂದು ಹೇಳುವ ಮೂಲಕ ಮುರುಗೇಶ್ ನಿರಾಣಿ ಅಚ್ಚರಿ ಮೂಡಿಸಿದ್ದಾರೆ.  ಇದನ್ನೂ ಓದಿ:ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!

  • ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ

    ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ

    – ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ
    – ಸಿಎಂ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು
    – ಜಗದೀಶ್ ಶೆಟ್ಟರ್ ನಿರ್ಧಾರ ತಮಗೆ ತಿಳಿದಿಲ್ಲ

    ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು ಎಂದರು.

    ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಅತ್ಯುತ್ತಮವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರೈತರು, ಹಿರಿಯರು, ವಿಧವೆಯರು, ಅಂಗವಿಕಲರಿಗೆ ಆದ್ಯತೆ ನೀಡುವ ನಿರ್ಣಯಗಳನ್ನು ಕೈಗೊಂಡಿರುವುದು ಉತ್ತಮ ನಿರ್ಧಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬಸವರಾಜ್ ಬೊಮ್ಮಾಯಿ ಅವರ ನಡೆ ಉತ್ತಮವಾಗಿ ಮುಂದುವರೆದಿದೆ. ಇದು ಆಡಳಿತದ ದಿಕ್ಸೂಚಿ ಏನಿರಲಿದೆ ಎಂಬುದನ್ನು ಮೊದಲ ದಿನವೇ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಜನಪರವಾದ ಆಡಳಿತಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಲಿದೆ ಎಂದು ಹೇಳಿದರು. ಇದನ್ನೂ ಓದಿ:ಬೊಮ್ಮಾಯಿ ಜನತಾದಳದ ಸಿಎಂ – ಎಚ್‍ಡಿ ಕುಮಾರಸ್ವಾಮಿ

    ಸಂಪುಟಕ್ಕೆ ಸೇರ್ಪಡೆಯಾಗದಿರಲು ತೀರ್ಮಾನಿಸಿರುವ ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ನಿರಾಣಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ಅತ್ಯಂತ ಹಿರಿಯರು, ಮುಖ್ಯಮಂತ್ರಿ, ಸ್ಪೀಕರ್, ರಾಜ್ಯಾಧ್ಯಕ್ಷ ಆಗಿದ್ದವರು. ಅವರು ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ತನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಶೆಟ್ಟರ್ ಜತೆ ಚರ್ಚೆ ಮಾಡುತ್ತೇನೆ. ಉಳಿದ ಹಿರಿಯರ ನಿರ್ಧಾರದ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಯಾರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ನನಗೆ ಗೊತ್ತಿಲ್ಲ. ಶೆಟ್ಟರ್ ಅವರದು ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಯಾವುದೇ ಗೊಂದಲ ಸೃಷ್ಟಿಸಲು ಇಚ್ಚಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ:ನನ್ನನ್ನು ಬಿಟ್ಟು ಕ್ಯಾಬಿನೆಟ್ ಮಾಡಲ್ಲ – ಮಂತ್ರಿಗಿರಿಗಾಗಿ ದೆಹಲಿಯಲ್ಲಿ ಕತ್ತಿ ಲಾಬಿ

  • ನಿರಾಣಿ ಅವರಿಗೆ ಸಿಎಂ ಆಗುವ ಯೋಗ್ಯತೆ ಇದೆ : ಸಿದ್ದಲಿಂಗ ಸ್ವಾಮೀಜಿ

    ನಿರಾಣಿ ಅವರಿಗೆ ಸಿಎಂ ಆಗುವ ಯೋಗ್ಯತೆ ಇದೆ : ಸಿದ್ದಲಿಂಗ ಸ್ವಾಮೀಜಿ

    ಬಾಗಲಕೋಟೆ: ನಮ್ಮ ಮುರುಗೇಶ್ ನಿರಾಣಿ ಒಳ್ಳೆ ಮನುಷ್ಯ. ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ರೇಸ್ ನಲ್ಲಿ ಅವರು ಇದ್ದಾರಾ ಗೊತ್ತಿಲ್ಲ, ಆದರೆ ಮುರುಗೇಶ್ ನಿರಾಣಿ ಅವರಿಗೆ ಸಿಎಂ ಆಗುವ ಯೋಗ್ಯತೆ ಇದೆ ಎಂದು ಹರಿಹರ ಪಂಚಮಸಾಲಿ ಪೀಠದ ಮಾಜಿ ಪೀಠಾಧಿಪತಿ ಸಿದ್ದಲಿಂಗೇಶ್ವರ ಸ್ವಾಮೀಜಿ ಪರೋಕ್ಷವಾಗಿ ಸಚಿವ ಮುರಗೇಶ್ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ರೇಸ್ ನಲ್ಲಿ ನಿರಾಣಿ ಅವರ ಹೆಸರಿದ್ದರೆ, ಖುಷಿ ಪಡೋಣ, ನಾನು ಸಂತೋಷ ಪಡುತ್ತೇನೆ. ನಿಮ್ಮಂತೆ ನಾನು ನಗುತ್ತೇನೆ. ಸಿಎಂ ಆದರೆ ಪೇಡ ಹಂಚೋಣ, ನಮ್ಮ ಭಾಗದ ಮನುಷ್ಯ ಆಗ್ತಾನೆ ಅಂತ ಸಿಹಿ ಹಂಚೋಣ. ಆಗದಿದ್ದರೂ ಹೆಸರು ಹೇಳುತ್ತಾರೆ ಅಂದರೆ ಮುಂದೆ ಒಂದಲ್ಲ ದಿನ ಆಗೇ ಆಗುತ್ತಾರೆ ಎಂದು ಪರೋಕ್ಷವಾಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ಇಡೀ ರಾಜ್ಯವನ್ನು ನಿಭಾಯಿಸುವ ಶಕ್ತಿ ನಿರಾಣಿ ಅವರಿಗಿದೆ. ಅವರಂತೆ ಉತ್ತರ ಕರ್ನಾಟಕದಲ್ಲಿ ಅನೇಕ ರಾಜಕಾರಣಿಗಳಿಗೆ ಆ ಯೋಗ್ಯತೆ ಇದೆ. ನಿರಾಣಿ ಸಿಎಂ ಆದರೆ ನಮ್ಮಷ್ಟು ಸಂತೋಷ ಪಡುವವರು ಬೇರೆ ಯಾರು ಇಲ್ಲ ಎನ್ನುವ ಮೂಲಕ ಸಿದ್ದಲಿಂಗ ಸ್ವಾಮೀಜಿ ಮುರಗೇಶ್ ನಿರಾಣಿ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಪರೋಕ್ಷವಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಅಭಿಮಾನಿ