Tag: ಪಬ್ಲಿಕ್ ಟಿವಿ People

  • ಗಮನ ಬೇರೆಡೆ ಸೆಳೆದು ಕಳ್ಳತನ ಮಾಡೋ ಗ್ಯಾಂಗ್ – ಪೊಲೀಸರ ವಶಕ್ಕೆ

    ಗಮನ ಬೇರೆಡೆ ಸೆಳೆದು ಕಳ್ಳತನ ಮಾಡೋ ಗ್ಯಾಂಗ್ – ಪೊಲೀಸರ ವಶಕ್ಕೆ

    ಬೆಂಗಳೂರು/ನೆಲಮಂಗಲ: ಜನರ ಗಮನವನ್ನು ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಹಣವನ್ನು ಕ್ಷಣಾರ್ಧದಲ್ಲಿ ತಮ್ಮ ಚಾಣಾಕ್ಷತೆಯಿಂದ ದೋಚುವ ಕುಖ್ಯಾತ ಓಜಿಕುಪ್ಪಂ ಗ್ಯಾಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಗ್ರಾಮಾಂತರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ, ನಾಲ್ವರು ಓಜಿಕುಪ್ಪಂನ ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ ಮತ್ತು ಆರೋಪಿಗಳಿಂದ ಬರೋಬ್ಬರಿ 15,20,000 ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಈ ಓಜಿಕುಪ್ಪಂ ಗ್ಯಾಂಗ್‍ನವರಿಗೆ ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರೇ ಇವರ ಟಾರ್ಗೆಟ್ ಆಗಿರುತ್ತಾರೆ. ಸಬ್ ರಿಜಿಸ್ಟರ್ ಕಚೇರಿ, ಬ್ಯಾಂಕ್, ಜ್ಯೂವೆಲರಿ ಅಂಗಡಿ ಹಾಗೂ ಇನ್ನಿತರ ಕಡೆ ಜನರನ್ನು ಗಮನಿಸುವ ಗ್ಯಾಂಗ್, ಬೇರೆ ಬೇರೆ ರೀತಿಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಿ ಜನರನ್ನು ನಂಬಿಸುವ ಕೆಲಸ ಮಾಡುತ್ತಾರೆ. ನಂತರ ಹಣವನ್ನು ದೋಚಿ ಯಾರಿಗೂ ಅನುಮಾನ ಬಾರದಂತೆ ಸ್ಥಳದಿಂದ ಎಸ್ಕೇಪ್ ಆಗುತ್ತಾರೆ. ಇದನ್ನೂ ಓದಿ:ಕಾಬೂಲ್‍ನಲ್ಲಿ ಸುರಕ್ಷಿತವಾಗಿದ್ದೇನೆ: ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಸಂದೇಶ

    ಈ ಕುಖ್ಯಾತ ಓಜಿಕುಪ್ಪಂ ಗ್ಯಾಂಗ್ ಬಂಧಿಸಲು ನೆಲಮಂಗಲ ಗ್ರಾಮಾಂತರ ಪೊಲೀಸರು ನಡೆಸಿದ ಕಾರ್ಯಾಚರಣೆ ಕುರಿತು ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕಾರ್ಯಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ. ಈ ವೇಳೆ ಗ್ರಾಮಾಂತರ ಎಎಸ್ಪಿ ಲಕ್ಷ್ಮಿ ಗಣೇಶ್, ನೆಲಮಂಗಲ ಉಪವಿಭಾಗ ಡಿವೈಎಸ್ ಪಿ.ಜಗದೀಶ್, ಸಿಪಿಐ ಹರೀಶ್, ಎ.ವಿ.ಕುಮಾರ್, ಅರುಣ್ ಕುಮಾರ್ ಸಾಲಂಕಿ, ಮಂಜುನಾಥ್ ಹಾಗೂ ಪಿಎಸ್ ವಸಂತ್ ಕುಮಾರ್ ಉಪಸ್ಥಿತರಿದ್ದರು. ಇದನ್ನೂ ಓದಿ:ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

  • ಅಗತ್ಯ ವಸ್ತುಗಳ ಖರೀದಿಗೆ ನೂಕು ನುಗ್ಗಲು – ಪೊಲೀಸರೊಂದಿಗೆ ಲಾಠಿ ಹಿಡಿದು ಫೀಲ್ಡಿಗಿಳಿದ ಗ್ರಾಂ.ಪಂ ಅಧ್ಯಕ್ಷೆ

    ಅಗತ್ಯ ವಸ್ತುಗಳ ಖರೀದಿಗೆ ನೂಕು ನುಗ್ಗಲು – ಪೊಲೀಸರೊಂದಿಗೆ ಲಾಠಿ ಹಿಡಿದು ಫೀಲ್ಡಿಗಿಳಿದ ಗ್ರಾಂ.ಪಂ ಅಧ್ಯಕ್ಷೆ

    ಮಡಿಕೇರಿ: ಲಾಕ್‍ಡೌನ್ ಆರಂಭವಾಗಿ ಇಂದಿಗೆ ಆರು ದಿನವಾದರೂ ಅನಗತ್ಯ ಓಡಾಟ ವಸ್ತುಗಳ ಖರೀದಿಗೆ ಜನರು ನೂಕು ನುಗ್ಗಲು ಮುಂದುವರೆಸಿದ್ದಾರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ಇಂದು ಜನರು ಅಗತ್ಯ ವಸ್ತುಗಳ ಖರೀದಿ ಹೆಸರಿನಲ್ಲಿ ಅನಗತ್ಯವಾಗಿ ಓಡಾಟ ಮಾಡುತ್ತಿದ್ದರು. ದಿನಸಿ ಅಂಗಡಿಗಳಲ್ಲಿ ಹಾಗೂ ತರಕಾರಿ ಅಂಗಡಿಗಳಲ್ಲಿ ಜನರು ಅಗತ್ಯ ವಸ್ತುಗಳನ್ನು ತಗೆದುಕೊಳ್ಳಲು ಮುಗಿಬೀಳುತ್ತಿದ್ದರು.

    ಪೊಲೀಸರು ಜನರಿಗೆ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ವಸ್ತುಗಳನ್ನು ತೆಗೆದುಕೊಳ್ಳಿ ಎಂದು ಎಷ್ಟೇ ಮನವರಿಕೆ ಮಾಡಿದರೂ ಜನ ಮಾತ್ರ ಇದಕ್ಕೆಲ್ಲ ಕೇರ್ ಮಾಡದೇ, ವಸ್ತುಗಳ ಖರೀದಿಯಲ್ಲಿ ಫುಲ್ ಬ್ಯುಸಿ ಆಗಿದ್ದರು. ಇದನ್ನ ಕಂಡ ಸಿದ್ದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ರೀನಾ ಅವರು ಜನರಿಗೆ ಎಷ್ಟೇ ಹೇಳಿದರೂ ಅವರಿಗೆ ಅರ್ಥ ಅಗೋಲ್ಲ ಎಂದು ನೂಕು ನುಗ್ಗಲು ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರೊಂದಿಗೆ ಲಾಠಿ ಹಿಡಿದು ಫೀಲ್ಡಿಗಿಳಿದರು.

    ರೀನಾ ಅವರು ಜನರನ್ನು ಕಂಟ್ರೋಲ್ ಮಾಡಿ ಜನರನ್ನು ಸಾರತಿ ಸಾಲಿನಲ್ಲಿ ನಿಲ್ಲಿಸಿ, ಕೊರೊನಾ ಮಹಾಮಾರಿ ಬಗ್ಗೆ ಜನರೇ ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಸಾಮಾನ್ಯರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ಸಹಕಾರ ಮಾಡಬೇಕು ಎಂದು ಜನರಿಗೆ ಬುದ್ದಿ ಮಾತು ಹೇಳಿದರು. ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಿ ಮನೆಗೆ ತೆರಳುವಂತೆ ಮನವಿ ಮಾಡಿದರು.