Tag: ಪಬ್ಲಿಕ್ ಟಿವಿ Police

  • ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

    ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

    ದಾವಣಗೆರೆ: ಬಂದೂಕು ಕ್ಲೀನ್ ಮಾಡುವಾಗ ಮಿಸ್ ಫೈರಿಂಗ್ ಆಗಿ ಪೊಲೀಸ್ ಪೇದೆಯ ಕುತ್ತಿಗೆ ಸೀಳಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಮೃತ ಡಿಎಆರ್ ಪೊಲೀಸ್ ಪೇದೆಯನ್ನು ಚೇತನ್.ಆರ್(28) ಎಂದು ಗುರುತಿಸಲಾಗಿದೆ. ಈ ಘಟನೆ ದಾವಣಗೆರೆ ಡಿಎಆರ್ ಶಸ್ತ್ರಾಸ್ತ್ರಗಾರದಲ್ಲಿ ಸೋಮವಾರ ಬೆಳಗ್ಗೆ ನಡೆದಿದ್ದು, ತಕ್ಷಣ ಖಾಸಗಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    2012 ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದ ಚೇತನ್, ಹುಣಸಘಟ್ಟೆ ಫೈರಿಂಗ್ ಸೆಂಟರ್ ನಿಂದ ಬಂದಂತಹ ಬಂದೂಕು, ರೈಫಲ್ ಗಳನ್ನು ಸೋಮವಾರ ಬೆಳಗ್ಗೆ ಕ್ಲೀನ್ ಮಾಡುತ್ತಿದ್ದರು, ಇದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಸ್ನೇಹಿತರನ್ನು ಚೇತನ್ ಮಾತನಾಡಿಸಿಕೊಂಡು ನಿಂತಿದ್ದರು. ಈ ವೇಳೆ ಬಂದೂಕು ಕ್ಲೀನ್ ಮಾಡುತ್ತಿರುವಾಗ ಮಿಸ್ ಫೈರಿಂಗ್ ಆಗಿದ್ದು, ಎದುರಿಗೆ ಇದ್ದ ಚೇತನ್ ಗಂಟಲು ಭಾಗದಿಂದ ತಲೆಗೆ ಬುಲೆಟ್ ಬಿದ್ದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವುದರೊಳಗೆ ಪ್ರಾಣಪಕ್ಷಿ ಹಾರಿ ಹೋಗಿದೆ. ಇದನ್ನೂ ಓದಿ:ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ

    ಸದ್ಯ ಮೃತ ಪೊಲೀಸ್ ಪೇದೆಯನ್ನು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು, ಚೇತನ್ ಕಳೆದ ಐದು ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಅವರಿಗೆ ಎರಡು ವರ್ಷದ ಮಗು ಇದ್ದು, ಇದೀಗ ಚೇತನ್ ಹೆಂಡತಿ ಮತ್ತೆ 9 ತಿಂಗಳ ಗರ್ಭಿಣಿಯಾಗಿದ್ದಾರೆ. ಹೆಣ್ಣು ಮಗು ಆಗಬೇಕು ಎಂದು ಪುಟ್ಟ ಮಗುವಿಗಾಗಿ ಕಾತುರದಿಂದ ಕಾಯುತ್ತಿದ್ದರು. ಆದರೆ ಇಂದು ನಡೆದ ಆ ದುರ್ಘಟನೆಯಿಂದ ಆತನ ಕನಸಿನ ಗೋಪುರವೇ ಕಳಚಿ ಬಿದ್ದಿದೆ. ಅಲ್ಲದೇ ಶಸ್ತ್ರಾಸ್ತ್ರ ಮೀಸಲು ಪಡೆಯಲ್ಲಿ ಚೇತನ್ ಎಲ್ಲಾ ಸಿಬ್ಬಂದಿಗೂ ಅಚ್ಚುಮೆಚ್ಚಾಗಿದ್ದರು. ಆಸ್ಪತ್ರೆಗೆ ಪೂರ್ವ ವಲಯ ಐಜಿಸಿ ರವಿ.ಎಸ್ ಹಾಗೂ ಎಸ್.ಪಿ. ರಿಷ್ಯಂತ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು. ಇದನ್ನೂ ಓದಿ:ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

  • ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

    ಮುಂದೊಂದು, ಹಿಂದೊಂದು ನಂಬರ್ – ನಕಲಿ ಪೊಲೀಸ್ ವ್ಯಾನ್ ಕಂಡು ತಬ್ಬಿಬ್ಬಾದ ಜನ

    ಗದಗ: ನಗರದಲ್ಲಿ ನಕಲಿ ಪೊಲೀಸ್ ವಾಹನ ಓಡಾಟ ಕಂಡು ಗದಗ-ಬೆಟಗೇರಿ ಅವಳಿ ನಗರದ ಜನರು ಗೊಂದಲಕ್ಕೀಡಾದ ಘಟನೆ ನಡೆದಿದೆ. ನಗರದ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ರಸ್ತೆಯಲ್ಲಿ ನಕಲಿ ಪೊಲೀಸ್ ವಾಹನ ನಿಂತಿದೆ.

    ಈ ಬೊಲೆರೊ ವಾಹನಕ್ಕೆ ಮುಂದೊಂದು ನಂಬರ್, ಹಿಂದೊಂದು ಎರಡೆರಡು ನಂಬರ್ ಪ್ಲೇಟ್ ಇರುವುದನ್ನು ಅನೇಕರು ಗಮನಿಸಿದ್ದಾರೆ. ನೋಡಿದ ಜನರಿಗೆ ಕೆಲಕಾಲ ಗೊಂದಲ ಸೃಷ್ಟಿಯಾಗಿದೆ. ವಾಹನಕ್ಕೆ ಎರಡು ನಂಬರ್ ಇರಲ್ವಲ್ಲಾ, ಏನಿದು ಅಂತ ತಲೆಕೆಡಿಸಿಕೊಂಡಿದ್ದಾರೆ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ:ಬೆಕ್ಕಿಗಾಗಿಯೇ ಎಸಿ ರೂಮ್, ಮಿನಿ ಥಿಯೇಟರ್ ನಿರ್ಮಾಣ – ಗುಜರಾತಿನಲ್ಲೊಬ್ಬ ಕ್ಯಾಟ್ ಪ್ರಿಯ

    ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು. ಆಗ ಪೊಲೀಸ್ ಸಿಬ್ಬಂದಿ ಒಂದು ಕ್ಷಣ ಕಂಗಾಲಾಗಿದ್ದರು. ಪರಿಶೀಲಿಸಿದಾಗ ವಾಸ್ತವಿಕತೆ ಬಯಲಾಗಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ಕ್ಷೇತ್ರಪತಿ” ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಈ ಬೊಲೆರೋ ವಾಹನ ಬಳಸಲಾಗಿತ್ತು ಎಂದು ತಿಳಿದು ಬಂದಿದೆ. ಪರವಾನಿಗೆ ಪತ್ರ ನೋಡಿ ನಂತರ ಶೂಟಿಂಗ್ ಸ್ಥಳ ಬಿಟ್ಟು ಎಲ್ಲಂದರಲ್ಲಿ ಓಡಾಡದಂತೆ ವಾಹನ ಚಾಲಕನಿಗೆ ವಾರ್ನ್ ಮಾಡಿ ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ:ವಿಕೇಂಡ್ ಕರ್ಫ್ಯೂ – ಕೊಡಗಿನಲ್ಲಿ ಉತ್ತಮ ಸ್ಪಂದನೆ, ಬೀದರ್ ನಲ್ಲಿ ಡೋಂಟ್ ಕೇರ್

  • ಸೋಶಿಯಲ್ ಮೀಡಿಯಾದಲ್ಲಿ ಧೂಳ್ ಎಬ್ಬಿಸುತ್ತಿದೆ ಪೊಲೀಸ್ ಡ್ಯಾನ್ಸ್

    ಸೋಶಿಯಲ್ ಮೀಡಿಯಾದಲ್ಲಿ ಧೂಳ್ ಎಬ್ಬಿಸುತ್ತಿದೆ ಪೊಲೀಸ್ ಡ್ಯಾನ್ಸ್

    ಮುಂಬೈ: ಮುಂಬೈ ಪೊಲೀಸ್ ಸಿಬ್ಬಂದಿಯೊಬ್ಬರ ಡ್ಯಾನ್ಸ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಧೂಳ್ ಎಬ್ಬಿಸುತ್ತಿದೆ.

    ಇತ್ತೀಚೆಗಷ್ಟೇ ಅವರು ಡ್ಯಾನ್ಸ್ ಮಾಡಿರುವ ಕೆಲವು ವೀಡಿಯೋಗಳನ್ನು ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಸಾವಿರಾರು ಲೈಕ್ಸ್ ಹಾಗೂ ಕಾಮೆಂಟ್‍ಗಳು ಹರಿದು ಬರುತ್ತಿದೆ.

    38 ವರ್ಷದ ಅಮೋಲ್ ಯಶವಂತ್ ಕಾಂಬ್ಳೆ ನೈಗಾಂವ್ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಆಫೀಸ್ ಕೆಲಸ ಮುಗಿದ ಬಳಿಕ ಅಥವಾ ರಜಾದಿನಗಳಲ್ಲಿ ಚಲನಚಿತ್ರ ಗೀತೆಗಳಿಗೆ ನೃತ್ಯ ಅಭ್ಯಾಸ ಮಾಡುತ್ತಾರೆ ಮತ್ತು ಅವುಗಳನ್ನು ವೀಡಿಯೋ ಮಾಡುತ್ತಾರೆ. ಸದ್ಯ ಅಪ್ಪು ರಾಜ ಚಿತ್ರದ ‘ಆಯಾ ಹೈ ರಾಜಾ’ ಸಾಂಗ್‍ಗೆ ಅಮೋಲ್ ಯಶವಂತ್ ಕಾಂಬ್ಳೆಯವರು ಮಾಡಿರುವ ನೃತ್ಯ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ.

    ವೀಡಿಯೋವೊಂದರಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಮಾಸ್ಕ್ ಸರಿಯಾಗಿ ಧರಿಸುವಂತೆ ತಿಳಿಸುವ ಥೀಮ್‍ನನ್ನು ಆಧರಿಸಿ ನೃತ್ಯ ಮಾಡಲಾಗಿದ್ದು, ಈ ವೀಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಗಟ್ಟಲೆ ಲೈಕ್ ಬಂದಿದೆ. ಕುಂಬ್ಳೆಯವರು 2004ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿಕೊಂಡಿದ್ದು, ಬಾಲ್ಯದಿಂದಲೂ ನೃತ್ಯ ಕುರಿತಂತೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ.  ಇದನ್ನೂ ಓದಿ:ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

  • ಅರೆಸ್ಟ್ ವೇಳೆ ಸೈನೈಡ್ ತಿಂದು ಸರಗಳ್ಳ ಸಾವು

    ಅರೆಸ್ಟ್ ವೇಳೆ ಸೈನೈಡ್ ತಿಂದು ಸರಗಳ್ಳ ಸಾವು

    ಬೆಂಗಳೂರು: ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಸರಗಳ್ಳತನ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಅರೆಸ್ಟ್ ಮಾಡುವುದಕ್ಕೆಂದು ಪೊಲೀಸರು ಮುಂದಾದಾಗ ಸೈನೈಡ್ ತಿಂದು ಆರೋಪಿ ಸಾವನ್ನಪ್ಪಿದ್ದಾನೆ.

    ಆಂಧ್ರದ ಮದನಪಲ್ಲಿ ಮೂಲದ ಶಂಕರ್ ಮೃತ ಆರೋಪಿ. ಶಂಕರ್ ವೈ.ಎಸ್.ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ಶಂಕರ್ ಮತ್ತು ಚಂದ್ರಶೇಖರ್ ಎಂಬವರ ಜೊತೆ ಸರಗಳ್ಳತನ ಮಾಡುತ್ತಿದ್ದನು.

    ಈ ಆರೋಪಿಗಳ ಬೆನ್ನು ಹತ್ತಿದ್ದ ಕೆ.ಆರ್ ಪುರಂ ಪೊಲೀಸರಿಗೆ ಆರೋಪಿಗಳು ಹೊಸಕೋಟೆ ಬಳಿಯ ಪಿಲ್ಲಗುಂಪಾದ ದೇವಾಲಯಕ್ಕೆ ಬರುತ್ತಿರುವ ಮಾಹಿತಿ ಸಿಕ್ಕಿದೆ. ಕಳ್ಳತನಕ್ಕೂ ಮೊದಲು ದೇವಾಲಯಕ್ಕೆ ಆರೋಪಿಗಳು ತೆರಳಿ ಕೈ ಮುಗಿದು ಬರುತ್ತಿದ್ದರು. ಹೀಗಾಗಿ ದೇವಾಲಯದ ಬಳಿ ಪೊಲೀಸರು ಕಾದು ಆರೋಪಿಗಳನ್ನು ಅರೆಸ್ಟ್ ಮಾಡಲು ಮುಂದಾಗಿದ್ದಾರೆ.ಇದನ್ನೂ ಓದಿ:ಹೆಡ್‍ಲೈಟ್ ಡಿಮ್ ಅಂಡ್ ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

    ಈ ವೇಳೆ ಆರೋಪಿ ಶಂಕರ್ ಜೇಬಿನಲ್ಲಿದ್ದ ಸೈನೈಡ್ ಸೇವಿಸಿ ರಕ್ತಕಾರಿ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಆರೋಪಿ ಚಂದ್ರಶೇಖರನನ್ನ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ:ಠಾಣೆಗೆ ದೂರು ಕೊಡಲು ಬಂದ ಬಾಲಕಿಗೆ ಕಿರುಕುಳ – ಮಂಗಳೂರಿನ ಹೆಡ್ ಕಾನ್ಸ್‌ಟೇಬಲ್ ಅಂದರ್

  • ಹಳೇ ವೈಷಮ್ಯ, ಬಿಜೆಪಿ ನಾಯಕನ ಸಂಬಂಧಿ ಹತ್ಯೆ ಕೇಸ್ – ಆರೋಪಿಗಳು ಅಂದರ್

    ಹಳೇ ವೈಷಮ್ಯ, ಬಿಜೆಪಿ ನಾಯಕನ ಸಂಬಂಧಿ ಹತ್ಯೆ ಕೇಸ್ – ಆರೋಪಿಗಳು ಅಂದರ್

    ಹುಬ್ಬಳ್ಳಿ: ಬಿಜೆಪಿ ಪಕ್ಷದ ಧಾರವಾಡ ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಈಶ್ವರ ಗೌಡ ಪಾಟೀಲ್ ಸೋದರ ಸಂಬಂಧಿಯನ್ನ ಹತ್ಯೆ ಮಾಡಿದ್ದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಎಸಿಪಿ ವಿನೋದ್ ಮುಕ್ತೆದಾರ್ ತಂಡ ಕೇವಲ ಮೂರು ಗಂಟೆಯಲ್ಲಿ ಬಂಧಿಸಿದೆ. ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರ ಗೌಡ ಪಾಟೀಲ್ ಅವರ ಚಿಕ್ಕಪ್ಪನ ಮಗ ಅಭಿಷೇಕ್ ಗೌಡ ಪಾಟೀಲ್ ಎಂಬವರನ್ನು ಚಾಕುವಿನಿಂದ ಇರಿದು ಕಳೆದ ರಾತ್ರಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ್ ಬೇವಿನ ಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ್ ಇದ್ದಲಗಿ ಎಂಬವರನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ಕೆಲವು ದಿನಗಳ ಹಿಂದೆ ಅಭಿಷೇಕ್‍ನೊಂದಿಗೆ ಜಗಳವಾಡಿದ್ದ ಆರೋಪಿಗಳಾದ ಪ್ರವೀಣ್ ಬೇವಿನ ಕಟ್ಟಿ, ಪಾಟೀಲ್‍ರ ಮನೆಯ ಮುಂದಿನ ಕಾರಿನ ಗಾಜನ್ನು ಒಡೆದು ಹೋಗಿದ್ದ. ಅದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗುತ್ತಿತ್ತು. ಅದೇ ಕಾರಣದಿಂದಲೇ ಭಾನುವಾರವೂ ಕೂಡಾ ಜಗಳವಾದ ನಂತರ ಪ್ರವೀಣ್ ತನ್ನ ಸ್ನೇಹಿತರಾದ ಸಾಯಿ ಮತ್ತು ಕುಮಾರ್‍ನನ್ನು ಕಳಿಸಿ ಕೊಲೆ ಮಾಡಿಸಿದ್ದಾನೆ.

    ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಘಟನೆಯ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಮಾರಣ್ಣ ಕೈಕಟ್ಟಿ ನಿಲ್ಲುವುದು ಭಯದಿಂದ ಅಲ್ಲ, ಸಂಸ್ಕಾರದಿಂದ – ಜೆಡಿಎಸ್ ಅಭಿಮಾನಿಗಳು

  • ಪೊಲೀಸ್ ಸಮವಸ್ತ್ರ ಧರಿಸಿ ದರೋಡೆಗೆ ಇಳಿದ ಖದೀಮರು – ಇಬ್ಬರ ಬಂಧನ

    ಪೊಲೀಸ್ ಸಮವಸ್ತ್ರ ಧರಿಸಿ ದರೋಡೆಗೆ ಇಳಿದ ಖದೀಮರು – ಇಬ್ಬರ ಬಂಧನ

    ದಾವಣಗೆರೆ: ಪೊಲೀಸ್ ಸಮವಸ್ತ್ರ ಧರಿಸಿ ತಾವು ಪೊಲೀಸರು ಎಂದು ಹೇಳಿಕೊಂಡು ಜನರ ಬಳಿ ಅಪಾರ ಪ್ರಮಾಣದ ಚಿನ್ನಾಭರಣ, ಹಣ ದರೋಡೆ ಮಾಡಿದ ಇಬ್ಬರು ವ್ಯಕ್ತಿಗಳನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

    ಆರ್. ರಘು (36), ಆನಂದಬಾಬು (28) ಬಂಧಿತರು. ಆರೋಪಿಗಳಿಂದ ಮಾರುತಿ ಸುಜುಕಿ ಸ್ವಿಪ್ಟ್ ಕಾರ್ ಮತ್ತು ದರೋಡೆ ಮಾಡಿದ್ದ 5 ಗ್ರಾಂ ಬಂಗಾರದ ಉಂಗುರ, 17 ಗ್ರಾಂ ಬೆಳ್ಳಿ ಕೈ ಕಡಗ, 20 ಗ್ರಾಂ ಬೆಳ್ಳಿಯ ಚೈನ್ ಸೇರಿದಂತೆ 7,000 ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

    ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಕೆರೆಏರಿಯ ಮೇಲೆ ಇಸ್ಪೀಟ್ ಆಡುತ್ತಿದ್ದಾಗ ನಾಲ್ಕೈದು ಜನರು ಪೊಲೀಸರ ಸೋಗಿನಲ್ಲಿ ಬಂದು 27 ಸಾವಿರ ನಗದು, 5 ಗ್ರಾಂ ಬಂಗಾರದ ಉಂಗುರ ಮತ್ತು ಬೆಳ್ಳಿ ಚೈನ್, ಕಡಗ ಹಾಗೂ ಮೊಬೈಲ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಪ್ರಭಾಕರ್ ಎಂಬವರು ದೂರು ನೀಡಿದ್ದಾರೆ.

    ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಲು ಇನ್ಸ್‌ಪೆಕ್ಟರ್‌ ಮಧು ಪಿ.ಬಿ ಅವರ ನೇತೃತ್ವದಲ್ಲಿ ಪಿಎಸ್‍ಐ ಜಗದೀಶ್ ಅವರನ್ನೊಳಗೊಂಡ ತಂಡ ಬೇಧಿಸುವಲ್ಲಿ ಯಶಸ್ವಿಯಾಗಿದೆ.  ಇದನ್ನೂ ಓದಿ: ಬೀದರ್‌ನಲ್ಲಿ ಜೀವ ಕೈಯಲ್ಲಿ ಹಿಡಿದು ಹಳ್ಳ ದಾಟಿದ ರೈತರು- 9 ಜಿಲ್ಲೆಗಳಲ್ಲಿ ಇಂದು, ನಾಳೆ ರೆಡ್ ಅಲರ್ಟ್

  • ನೆಲಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ – 1.08 ಕೋಟಿ ಮೌಲ್ಯದ ಚಿನ್ನ, ನಗದು ವಶ

    ನೆಲಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ – 1.08 ಕೋಟಿ ಮೌಲ್ಯದ ಚಿನ್ನ, ನಗದು ವಶ

    ನೆಲಮಂಗಲ: ನೆಲಮಂಗಲ ಉಪವಿಭಾಗ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣವನ್ನ ಭೇದಿಸಿ ಜನರು ಹಾಗೂ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ಕಳೆದ ಜನವರಿ ಹಾಗೂ ಲಾಕ್ ಡೌನ್ ಸಮಯದಲ್ಲಿ ಮನೆಗಳ ಕಳವು, ಹೆದ್ದಾರಿಯಲ್ಲಿ ದರೋಡೆ, ಸುಲಿಗೆ, ಸರಗಳ್ಳತನ, ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಬರೋಬ್ಬರಿ 1 ಕೋಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಲಕ್ಷಾಂತರ ರೂ. ಹಣವನ್ನ ವಶ ಪಡಿಸಿಕೊಂಡಿದ್ದು, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ನೇತೃತ್ವದಲ್ಲಿ ಸಿಬ್ಬಂದಿಗೆ ಪ್ರಶಂಸೆ ನೀಡಲಾಯಿತು. ಇದನ್ನು ಓದಿ: ಕೊರೊನಾ ನಿಯಮ ಮರೆತು ಲಸಿಕೆಗೆ ಮುಗಿಬಿದ್ದ ಜನರು

    ಇದೇ ವೇಳೆ ಚಿನ್ನಾಭರಣ, ಹಣ ಕಳೆದುಕೊಂಡ ಜನರಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ವಾಪಸ್ ನೀಡಿದರು. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣವರ್, ಎಎಸ್ಪಿ ಲಕ್ಷ್ಮಿ ಗಣೇಶ್, ಡಿವೈಎಸ್ ಪಿ ಜಗದೀಶ್ ವೃತ್ತ ನಿರೀಕ್ಷಿತರಾದ ಕುಮಾರ್, ಹರೀಶ್, ಮಂಜುನಾಥ್, ಅರುಣ್, ಉಪ ವಿಭಾಗದ ಪಿಎಸ್‍ಐ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ವೇಳೆ ಅಪರಾಧ ವಿಭಾಗದಲ್ಲಿ ಪ್ರಕರಣ ಭೇದಿಸಿದ ಸಿಬ್ಬಂದಿಗೆ ಪ್ರಶಂಸೆ ಪತ್ರವನ್ನ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನು ಓದಿ: ಇಬ್ಬರು ಮನೆಗಳ್ಳರ ಬಂಧನ- ಭಾರೀ ಪ್ರಮಾಣ ಚಿನ್ನಾಭರಣ, ನಗದು ವಶ

  • ಕೋವಿಡ್-19 ಜಾಗೃತಿ ಮೂಡಿಸಲು ‘ಎಂಜಾಯ್ ಎಂಜಾಮಿ’ ಸಾಂಗ್‍ಗೆ ಪೊಲೀಸರ ನೃತ್ಯ

    ಕೋವಿಡ್-19 ಜಾಗೃತಿ ಮೂಡಿಸಲು ‘ಎಂಜಾಯ್ ಎಂಜಾಮಿ’ ಸಾಂಗ್‍ಗೆ ಪೊಲೀಸರ ನೃತ್ಯ

    ಚೆನ್ನೈ: ಕೊರೊನಾ ವೈರಸ್‍ನಿಂದ ವಿಶ್ವದಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ ಮತ್ತು ಅನೇಕ ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈ ಮಧ್ಯೆ ಕೆಲವರು ತಮಗೆ ಮತ್ತು ಇತರರಿಗೆ ಉತ್ಸಾಹ ತುಂಬಲು ಕೊರೊನಾ ವಿರುದ್ಧ ಹೋರಾಟ ಮುಂದುವರೆಸುವುದಕ್ಕೆ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ.

    ಇದಕ್ಕೆ ಸಾಕ್ಷಿ ಎಂಬಂತೆ ಚೆನ್ನೈ ರೈಲ್ವೆ ಪೊಲೀಸ್ ಅಧಿಕಾರಿಗಳು ‘ಎಂಜಾಯ್ ಎಂಜಾಮಿ’ ಎಂಬ ಜನಪ್ರಿಯ ತಮಿಳು ಹಾಡಿಗೆ ರೈಲ್ವೆ ನಿಲ್ದಾಣದಲ್ಲಿ ನೃತ್ಯ ಮಾಡಿದ್ದಾರೆ.

    ಈ ವಿಡಿಯೋವನ್ನು ತಮಿಳುನಾಡಿನ ಪ್ರೆಸ್ ಇನ್‍ಫಾರ್ಮೆಷನ್ ಬ್ಯೂರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್ ಅಧಿಕಾರಿಗಳು ಚೆನ್ನೈ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮಾಸ್ಕ್ ಮತ್ತು ಗ್ಲೌವ್ಸ್ ಧರಿಸಿ ಹಾಡಿಗೆ ನೃತ್ಯ ಮಾಡುತ್ತಾರೆ. ಈ ನೃತ್ಯ ಪ್ರದರ್ಶನವನ್ನು ವೀಕ್ಷಿಸಲು ಜನರು ಕೂಡ ಒಟ್ಟಿಗೆ ಸೇರಿರುವುದನ್ನು ಕಾಣಬಹುದಾಗಿದೆ.

    ತಮಿಳಿನ ‘ಎಂಜಾಯ್ ಎಂಜಾಮಿ’ ಹಾಡನ್ನು ಧೀರವರು ಹಾಡಿದ್ದು, ಅರಿವು ಎಂಬವರು ಗೀತೆಯನ್ನು ರಚಿಸಿದ್ದಾರೆ.

  • ಕೊರೊನಾ ತಡೆಗಾಗಿ ಗುಂಡ್ಲುಪೇಟೆ ಪೊಲೀಸರಿಗೆ ಸ್ಟೀಮ್ ವ್ಯವಸ್ಥೆ

    ಕೊರೊನಾ ತಡೆಗಾಗಿ ಗುಂಡ್ಲುಪೇಟೆ ಪೊಲೀಸರಿಗೆ ಸ್ಟೀಮ್ ವ್ಯವಸ್ಥೆ

    ಚಾಮರಾಜನಗರ: ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಗುಂಡ್ಲುಪೇಟೆ ಪೊಲೀಸರಿಗೆ ಸ್ಟೀಮ್ ವ್ಯವಸ್ಥೆ ಮಾಡಲಾಗಿದೆ.

    ಕುಕ್ಕರ್ ಗೆ ನೀರು, ಅರಿಶಿನ, ಮೆಣಸು, ಜೀರಿಗೆ ಹಾಕಿ ಕುದಿಸಿ ಕುಕ್ಕರ್ ನಲ್ಲಿ ಬರುವ ಸ್ಟೀಮ್ ಪೈಪ್‍ಗಳ ಮೂಲಕ ಸರಬರಾಜಾಗುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಒಮ್ಮೆಗೆ ನಾಲ್ಕು ಮಂದಿ ಪೊಲೀಸರು ಸ್ಟೀಮ್ ತೆಗೆದುಕೊಳ್ಳಬಹುದಾಗಿದೆ.

    ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಹೋರಾಡುತ್ತಿರುವ ಪೊಲೀಸರೀಗ ಕೊರೊನಾಗೆ ತುತ್ತಾಗದಂತೆ ರಕ್ಷಿಸಿಕೊಳ್ಳಲು ಆಯುರ್ವೇದದ ಹಬೆಯ ಮೊರೆ ಹೋಗಿದ್ದಾರೆ.

    ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಸ್ಟೀಮ್ ವ್ಯವಸ್ಥೆ ಮಾಡಿಕೊಂಡಿದ್ದು, ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮತ್ತು ಕರ್ತವ್ಯದ ನಂತರ 5 ನಿಮಿಷಗಳ ಕಾಲ ಪೊಲೀಸ್ ಸಿಬ್ಬಂದಿ ಆಯುರ್ವೇದದ ಹಬೆ ತೆಗೆದುಕೊಳ್ಳುತ್ತಿದ್ದಾರೆ. ಜನರ ನಡುವೆ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಠಾಣೆ ಪಿಎಸ್‍ಐ ರಾಜೇಂದ್ರ ಕೈಗೊಂಡ ಕ್ರಮಕ್ಕೆ ಸಹೋದ್ಯೋಗಿಗಳು ಸಂತಸಗೊಂಡಿದ್ದಾರೆ.

  • ಕರ್ತವ್ಯನಿರತ ಪೊಲೀಸರಿಗೆ ಬಿರಿಯಾನಿ ಊಟ ನೀಡಿದ ಕಾಫಿನಾಡ ಯುವಕರು

    ಕರ್ತವ್ಯನಿರತ ಪೊಲೀಸರಿಗೆ ಬಿರಿಯಾನಿ ಊಟ ನೀಡಿದ ಕಾಫಿನಾಡ ಯುವಕರು

    ಚಿಕ್ಕಮಗಳೂರು: ಇಡೀ ದಿನ ರಸ್ತೆಯಲ್ಲಿ ನಿಂತು ಟ್ರಾಫಿಕ್ ಕಂಟ್ರೋಲ್ ಮಾಡುವುದರ ಜೊತೆ ಕೊರೊನಾ ನಿಯಂತ್ರಣಕ್ಕೆ ಜನರನ್ನು ಗುಂಪು ಸೇರದಂತೆ ರಸ್ತೆ ಕಾಯುವ ಪೊಲೀಸರಿಗೆ ಕಾಫಿನಾಡಿನ ಯುವಕರು ಇಂದು ಮಧ್ಯಾಹ್ನ ಬಿರಿಯಾನಿ ಊಟ ನೀಡಿದ್ದಾರೆ.

    ಚಿಕ್ಕಮಗಳೂರು ನಗರದ ಜೆಡಿಎಸ್ ಮುಖಂಡ ಸಿರಾಜ್ ಹಾಗೂ ಅವರ ಸ್ನೇಹಿತರು ವೆಜ್ ಬಿರಿಯಾನಿ ಹಾಗೂ ಚಿಕನ್ ಬಿರಿಯಾನಿ ಎರಡೂ ಊಟವನ್ನ ತಯಾರಿಸಿಕೊಂಡು ಎಲ್ಲಾ ಪೊಲೀಸರಿಗೂ ವಿತರಿಸಿದ್ದಾರೆ. ನಗರದ ಮುಖ್ಯ ಸರ್ಕಲ್, ಪೊಲೀಸ್ ಠಾಣೆ ಹಾಗೂ ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಡ್ಯೂಟಿ ಮಾಡುವ 18 ಸರ್ಕಲ್‍ಗಳಿಗೂ ಹೋಗಿ ಊಟ ಹಾಗೂ ನೀರಿನ ಬಾಟಲಿ ನೀಡಿದ್ದಾರೆ.

    ಕೊರೊನಾ ಮೊದಲ ಅಲೆಯಲ್ಲೂ ಕೂಡ ಇದೇ ತಂಡ ಆಗಲೂ ಪೊಲೀಸರಿಗೆ ಮಧ್ಯಾಹ್ನದ ಊಟವಾಗಿ ಬಿರಿಯಾನಿ ನೀಡಿದ್ದರು. ಇದೇ ವೇಳೆ, ಕೇವಲ ಪೊಲೀಸರಿಗಷ್ಟೇ ಅಲ್ಲದೆ ನಗರದಲ್ಲಿ ಠಾಣೆಯಿಂದ ಠಾಣೆಗೆ ಸಂಚರಿಸುತ್ತಿರುವಾಗ ದಾರಿಯುದ್ಧಕ್ಕೂ ಸಿಕ್ಕ ಜನಸಾಮಾನ್ಯರು, ನಿರ್ಗತಿಕರು, ನಿರಾಶ್ರಿತರಿಗೂ ಬಿರಿಯಾನಿ ಹಾಗೂ ನೀರಿನ ಬಾಟಲಿ ನೀಡಿದ್ದಾರೆ. ಜೊತೆಗೆ ಇದೇ ಯುವಕರ ತಂಡ ಕೆಲ ಬಡವರಿಗೆ ಆಹಾರ ಸಾಮಾಗ್ರಿಯ ಕಿಟ್ ಕೂಡ ಹಂಚಿದ್ದಾರೆ.

    ಪೊಲೀಸರು ಗೂಂಡಾಗಳಲ್ಲ. ಹೊಡೆಯುತ್ತಾರೆ ಎಂದು ಹೇಳೋದು ತಪ್ಪು. ಅವರು ಹೊಡೆಯುವು ನಮ್ಮ ಜೀವ ಉಳಿಸಲು. ಜನಸಾಮಾನ್ಯರು ಬೇಕಾಬಿಟ್ಟಿ ಓಡಾಡಬಾರದು. ಸರ್ಕಾರ ಹಾಗೂ ಪೊಲೀಸರಿಗೆ ಸಹಕಾರ ಕೊಡಬೇಕು. ಪೊಲೀಸರು ಇಡೀ ದಿನ ಬಿಸಿಲಲ್ಲಿ ನಿಂತು ನಮ್ಮನ್ನ ಕಾಯುತ್ತಾರೆ. ಅವರು ಹೊಡೆಯುವುದು ಕೂಡ ನಮ್ಮ ಒಳ್ಳೆದಕ್ಕೆ ಅವರೊಂದಿಗೆ ಸಹಕರಿಸುವಂತೆ ಜನಸಾಮಾನ್ಯರಿಗೆ ಮನವಿ ಮಾಡಿದ್ದಾರೆ.

    ಇಂತಹಾ ಕಾಲದಲ್ಲ ಒಬ್ಬರು ಒಬ್ಬರಿಗೆ ಸಹಾಯ ಮಾಡಬೇಕು. ನಾವು ಮಾನವೀಯತೆಯಿಂದ ಈ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನ ನೋಡಿ ಮತ್ತಷ್ಟು ಜನ ಬಡವರಿಗೆ ಸಹಾಯ ಮಾಡಲಿ ಎಂಬುದು ನಮ್ಮ ಉದ್ದೇಶ ಎನ್ನುವುದು ಯುವಕರ ಅಭಿಪ್ರಾಯ.