Tag: ಪಬ್ಲಿಕ್ ಟಿವಿ. PSI

  • ಹೋಮ್ ಗಾರ್ಡ್ ಮೇಲೆ ಪಿಎಸ್‍ಐ ದಬ್ಬಾಳಿಕೆ – ಕೆಂಬಾವಿ ಠಾಣೆಯಲ್ಲಿ ಗುಲಾಮ ಪದ್ಧತಿ

    ಹೋಮ್ ಗಾರ್ಡ್ ಮೇಲೆ ಪಿಎಸ್‍ಐ ದಬ್ಬಾಳಿಕೆ – ಕೆಂಬಾವಿ ಠಾಣೆಯಲ್ಲಿ ಗುಲಾಮ ಪದ್ಧತಿ

    – ವರ್ಕಿಂಗ್ ಟೈಮ್‍ನಲ್ಲಿ ಹೋಮ್ ಗಾರ್ಡ್‍ನಿಂದ ಕಾರು ಕ್ಲೀನ್

    ಯಾದಗಿರಿ: ಕೆಂಬಾವಿ ಠಾಣೆಯ ವರ್ಕಿಂಗ್ ಟೈಮ್ ನಲ್ಲಿ ಹೋಮ್ ಗಾರ್ಡ್ ಕೈಯಲ್ಲಿ ಖಾಸಗಿ ವಾಹನ ಕ್ಲೀನ್ ಮಾಡಿಸಿ ಪಿಎಸ್‍ಐ ದಬ್ಬಾಳಿಕೆ ಮೆರೆದಿದ್ದಾರೆ. ಠಾಣೆಯ ಪಿಎಸ್‍ಐ ಗಜಾನನ ಹೋಮ್ ಗಾರ್ಡ್ ಕೈಯಲ್ಲಿ ತಮ್ಮ ಖಾಸಗಿ ಕಾರನ್ನು ಕ್ಲೀನ್ ಮಾಡಿಸಿಕೊಂಡಿದ್ದಾರೆ.

    ಬಂದೋಬಸ್ತ್ ಡ್ಯೂಟಿಗೆ ಬಂದ ಹೋಮ್ ಗಾರ್ಡ್ ಸಮವಸ್ತ್ರ ಕಳಚಿ ಠಾಣೆಯ ಮೈದಾನದಲ್ಲಿ ಪಿಎಸ್‍ಐ ಗಜಾನನ ಕಾರನ್ನು ಕ್ಲೀನ್ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಕೆಂಬಾವಿ ಪೊಲೀಸ್ ಠಾಣೆ ಇದೆ.

    ಪಿಎಸ್‍ಐ ವರ್ತನೆಗೆ ಸಾರ್ವಜನಿಕರು ಅಸಮಾಧಾನ ಹೊರಹಾಕಿತ್ತಿದ್ದು, ಕಾನೂನು ಕರ್ತವ್ಯ ನಿರ್ವಹಿಸುವವರು ಎಲ್ಲರೂ ಒಂದೇ. ಆದರೆ ಯಾದಗಿರಿ ಪೊಲೀಸ್ ಇಲಾಖೆಯಲ್ಲಿ ಮಾತ್ರ ಹಿರಿಯ ಅಧಿಕಾರಿಗಳು, ಕೆಳ ಹಂತದ ಸಿಬ್ಬಂದಿಯನ್ನು ಗುಲಾಮರಂತೆ ಕಾಣುತ್ತಿರುವುದು ಬ್ರಿಟಿಷ್ ಅಧಿಕಾರಿಗಳ ದರ್ಪವನ್ನು ನೆನಪು ಮಾಡುತ್ತಿದೆ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದನ್ನೂ ಓದಿ: ಮಂಡ್ಯಕ್ಕೆ ಅಂಬರೀಶ್ ಕೊಡುಗೆ ಶೂನ್ಯ, ಸಿನಿಮಾದಂತೆಯೇ ಸಂಸದೆಯಾಗಿ ಸುಮಲತಾ ನಟನೆ : ಶಿವರಾಮೇಗೌಡ

  • ದಂಧೆಕೋರರ ಪರ ನಿಂತ ಸಿಪಿಐಗೆ ಸಿಂಗಂ ಸ್ಟೈಲಲ್ಲಿ ಪಿಎಸ್‍ಐ ಅವಾಜ್!

    ದಂಧೆಕೋರರ ಪರ ನಿಂತ ಸಿಪಿಐಗೆ ಸಿಂಗಂ ಸ್ಟೈಲಲ್ಲಿ ಪಿಎಸ್‍ಐ ಅವಾಜ್!

    ಚಿಕ್ಕಬಳ್ಳಾಪುರ: ಅನುಮತಿಯಿಲ್ಲದೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಲಾರಿಗಳನ್ನು ಸೀಜ್ ಮಾಡುವ ವೇಳೆ ದಂಧೆಕೋರರ ಪರವಾಗಿ ನಿಂತ ಸಿಪಿಐ ಅಧಿಕಾರಿಗೆ ಪಿಎಸ್‍ಐ ಅವಾಜ್ ಹಾಕಿದ ಘಟನೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.

    ದೇವನಹಳ್ಳಿಯ ಜೆಡಿಎಸ್‍ನ ಮಾಜಿ ಅಧ್ಯಕ್ಷನಾದ ಕೃಷ್ಣಮೂರ್ತಿ ಕಡೆಯವರು ಅಕ್ರಮವಾಗಿ ಲಾರಿಗಳಲ್ಲಿ ಗ್ರಾನೈಟ್ ಸಾಗಿಸುತ್ತಿದ್ದರು. ಕಳೆದ ಭಾನುವಾರ ಕಾನೂನು ಬಾಹಿರವಾಗಿ ಗ್ರಾನೈಟ್ ಸಾಗಿಸುತ್ತಿರುವ ಖಚಿತ ಮಾಹಿತಿ ವಿಶ್ವನಾಥಪುರ ಪೊಲೀಸರಿಗೆ ಸಿಕ್ಕಿದೆ. ಈ ಕುರಿತು ಪೊಲೀಸ್ ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾಗ ದಂಧೆಕೋರರು ಪೊಲೀಸರ ಮೇಲೆಯೇ ದಬ್ಬಾಳಿಕೆ ನಡೆಸಿದ್ದಾರೆ.

    ಸಿಬ್ಬಂದಿಗೆ ಲಾರಿಯನ್ನು ವಶಪಡಿಸಿಕೊಳ್ಳದಂತೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಬ್ಬಂದಿಯು ವಿಶ್ವನಾಥಪುರದ ಪಿಎಸ್‍ಐ ಶ್ರೀನಿವಾಸ್‍ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಿಎಸ್‍ಐ ಮೇಲೆಯೂ ದಬ್ಬಾಳಿಕೆ ನಡೆಸಿದ್ದಾರೆ. ಪಿಎಸ್‍ಐ ಬಗ್ಗದಿದ್ದಾಗ ಮೇಲಾಧಿಕಾರಿಗಳ ಮುಖಾಂತರ ಒತ್ತಡ ಮುಂದಾಗಿದ್ದಾರೆ.

    ದೂರವಾಣಿ ಮೂಲಕ ಮಾತನಾಡಿದ ವಿಜಯಪುರ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ದಂಧೆಕೋರರ ಪರನಿಂತು ಲಾರಿಗಳನ್ನು ಬಿಡುವಂತೆ ಒತ್ತಡ ಹೇರಿದ್ದಾರೆ. ಈ ವೇಳೆ ಪಿಎಸ್‍ಐಯು ಮೇಲಾಧಿಕಾರಿಯ ಒತ್ತಡಕ್ಕೆ ಮಣಿಯದೇ ಕಾನೂನು ಎಲ್ಲರಿಗೂ ಒಂದೇ ಅಂತ ಖಡಕ್ ಆಗಿ ಉತ್ತರಿಸಿದ್ದಾರೆ. ದಂಧೆಕೋರರ ಪರ ನಿಂತ ಮೇಲಾಧಿಕಾರಿಗೆ ಫೋನ್‍ನಲ್ಲಿಯೇ ತರಾಟೆ ತೆಗೆದುಕೊಂಡಿದ್ದಾರೆ.

    ಈ ಎಲ್ಲಾ ಘಟನೆಯನ್ನು ಸ್ಥಳೀಯರು ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ಹಾಕಿದ್ದಾರೆ. ಸದ್ಯ ಪಿಎಸ್‍ಐ ಶ್ರೀನಿವಾಸ್‍ರವರು ಮೇಲಾಧಿಕಾರಿಗೆ ಖಡಕ್ ಆವಾಜ್ ಹಾಕಿದ ವಿಡಿಯೋ ವೈರಲ್ ಆಗಿದ್ದು, ಪಿಎಸ್‍ಐ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=1UsgtKiMocA