Tag: ಪಬ್ಲಿಕ್ ಟಿವಿ Puneet Raj Kumar

  • ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಬೆಂಗಳೂರು: ಇಂದು ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರು ವರ್ಕೌಟ್ ಮಾಡುತ್ತಿರುವ ಪವರ್ ಫುಲ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವಿಭಿನ್ನವಾಗಿ ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

    ಚಂದನವನದಲ್ಲಿ ತಮ್ಮದೇ ಆದ ಅಭಿನಯ, ಡ್ಯಾನ್ಸ್ ಹಾಗೂ ಸ್ಟಂಟ್ಸ್ ಮೂಲಕವೇ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಪುನೀತ್ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಯಾವುದೇ ಕಷ್ಟಕರ ಪಾತ್ರ ಕೊಟ್ಟರೂ ಸುಲಭವಾಗಿ ನಟಿಸಿ ಸೈ ಎನಿಸಿಕೊಳ್ಳುವ ಪುನೀತ್ ಮೊದಲಿನಿಂದಲೂ ಸಖತ್ ಫಿಟ್ ಹಾಗೂ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಪುನೀತ್ ತಮ್ಮ ಮನೆಯಲ್ಲಿರುವ ಜಿಮ್‍ನಲ್ಲಿ ಸಖತ್ ವರ್ಕೌಟ್ ಮಾಡಿದ್ದು, ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದ್ವಿತ್ವ ಸಿನಿಮಾಗೆ ಪುನೀತ್ ರಾಜ್‍ಕುಮಾರ್ ಜೋಡಿಯಾದ ತ್ರಿಷಾ ಕೃಷ್ಣ

    ವೀಡಿಯೋದಲ್ಲಿ ಪುನೀತ್ ಹಸಿರು ಕಲರ್ ಟಿ-ಶರ್ಟ್ ಹಾಗೂ ಶಾರ್ಟ್ಸ್ ಧರಿಸಿ ಕಿಕ್ ಬಾಕ್ಸಿಂಗ್ ಬ್ಯಾಗ್‍ಗೆ ಒದೆಯುತ್ತಿರುವುದನ್ನು ಕಾಣಬಹುದಾಗಿದೆ. ವೀಡಿಯೋ ಜೊತೆಗೆ ಆರೋಗ್ಯವೇ ನಿಜವಾದ ಸಂಪತ್ತು ಎಂಬುವುದನ್ನು ನಾವು ಅರಿತುಕೊಳ್ಳೋಣ. ಹ್ಯಾಪಿ ವರಮಹಾಲಕ್ಷ್ಮೀ ಎಂದು ಎಂದು ವಿಶ್ ಮಾಡಿದ್ದಾರೆ.

    ಇತ್ತೀಚೆಗಷ್ಟೇ ನಗರದ ಖಾಸಗಿ ಹೋಟೆಲ್‍ನಲ್ಲಿ ಡಾ. ರಾಜ್ ಕುಮಾರ್ ಅಕಾಡೆಮಿಯಿಂದ ಡಾ. ರಾಜ್‍ಕುಮಾರ್ ಲರ್ನಿಂಗ್ ಆ್ಯಪ್‍ನನ್ನು ಲೋಕಾರ್ಪಣೆ ಸಮಾರಂಭ ನಡೆಯಿತು. ಪುನೀತ್ ರಾಜ್‌ಕುಮಾರ್‌ರವರು ಈ ಆ್ಯಪ್‍ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿಯವರು ಅಪ್ಪು ನೀವು ಫಾರ್ಮಲ್ ಎಜುಕೇಶನ್ ಬಗ್ಗೆ ಕಲಿಯಲಿಲ್ಲ ಅಂದರೂ ಪರವಾಗಿಲ್ಲ. ಫಾರ್ಮಲ್ ಎಜುಕೇಶನ್ ಮುಖ್ಯವಲ್ಲ. ಜ್ಞಾನ ಬಹಳ ಮುಖ್ಯ. ಜ್ಞಾನದಿಂದಲೇ ವಿದ್ಯೆ. ನೀವೊಬ್ಬರು ಐಕಾನ್ ಎಂದು ಹಾಡಿ ಹೊಗಳಿದ್ದರು.  ಇದನ್ನೂ ಓದಿ:ಅಪ್ಪು ಡೋಂಟ್‍ವರಿ, ನೀವು ಓದಿಲ್ಲ ಆದ್ರೂ ನೀವೊಬ್ಬರು ಐಕಾನ್: ಬೊಮ್ಮಾಯಿ

  • ಕೊರೊನಾ ಜಾಗೃತಿ – ಪವರ್ ಸ್ಟಾರ್ ಹೇಳಿದ 5 ಸೂತ್ರಗಳ್ಯಾವುದು ಗೊತ್ತಾ?

    ಕೊರೊನಾ ಜಾಗೃತಿ – ಪವರ್ ಸ್ಟಾರ್ ಹೇಳಿದ 5 ಸೂತ್ರಗಳ್ಯಾವುದು ಗೊತ್ತಾ?

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕೊರೊನಾದಿಂದ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುವುದಕ್ಕೆ 5 ಸಲಹೆ ನೀಡಿದ್ದಾರೆ.

    ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಲಾಕ್‍ಡೌನ್ ಘೋಷಿಸಿದ್ದರೂ, ದಿನದಿಂದ ದಿನ ಅತೀ ವೇಗವಾಗಿ ಹರಡುತ್ತಿರುವ ಕೊರೊನಾದಿಂದ ಮುಕ್ತಿ ಪಡೆಯಲು ಜನರು ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ನಟ ಪುನೀತ್ ರಾಜ್ ಕುಮಾರ್ ವೀಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ಎರಡನೆ ಅಲೆಯು ಎಲ್ಲರ ಮೇಲೂ ಪರಿಣಾಮ ಬೀರುತ್ತಿದೆ. ಈ ಮಾರಕ ವೈರಸ್ ವಿರುದ್ಧ ಹೋರಾಡಲು ನಾವೆಲ್ಲರೂ ಒಟ್ಟಾಗಿ ಸೇರಬೇಕಾಗಿದೆ. ನಾವು ಸುರಕ್ಷಿತವಾಗಿರೋಣ ಮತ್ತು ನಮ್ಮ ಸುತ್ತಲಿರುವವರನ್ನು ಸುರಕ್ಷಿತವಾಗಿರಿಸೋಣ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಕೊರೊನಾ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿರುವ ಪುನೀತ್ ರಾಜ್ ಕುಮಾರ್‍ರವರು ಕೆಲವು ಸಾಕ್ಷ್ಯ ಚಿತ್ರಗಳ ಮೂಲಕ 5 ಸೂತ್ರಗಳನ್ನು ತಿಳಿಸಿದ್ದಾರೆ. ವೀಡಿಯೋದಲ್ಲಿ, ಕೊರೊನಾ ಟೆಸ್ಟ್ ರಿಪೋರ್ಟ್‍ಗಾಗಿ ಕಾಯುತ್ತಿದ್ದೀರಾ ಅಥವಾ ಕೊರೊನಾ ಇರುವುದು ದೃಢವಾಗಿದ್ಯಾ? ಹಾಗಾದರೆ ಪ್ರತಿ ಮನೆಯಲ್ಲಿಯೂ ಜೊತೆಯಾಗಿ ಕೊರೊನಾ ಗೆಲ್ಲಿ ಎಂದಿದ್ದಾರೆ. ಈ ವೇಳೆ ಇಬ್ಬರು ಮಕ್ಕಳನ್ನು ಸಂಯಮ ಹಾಗೂ ಎಚ್ಚರದ ಮಾತಿನಂತೆ ಬಿಂಬಿಸಿ 5 ಸೂತ್ರಗಳನ್ನು ತಿಳಿಸಿದ್ದಾರೆ.

    *ಜಾಗರೂಕತೆಯಿಂದ ಒಂದು ಪ್ರತ್ಯೇಕ ಕೊಠಡಿಯಲ್ಲಿ ಕನಿಷ್ಠ ಪಕ್ಷ ಒಬ್ಬರೇ ಉಳಿದು ಬಿಡಿ.
    *ಸ್ವತಃ ಚಿಕಿತ್ಸೆ ಮಾಡಿಕೊಳ್ಳದೇ ವೈದ್ಯರನ್ನು ಸಂಪರ್ಕಿಸಿ.
    *ಮನೆಯಲ್ಲಿರುವವರು ಕಾಲಕಾಲಕ್ಕೆ ಸೋಪಿನಿಂದ ಕೈ ತೋಳಿಯುವಂತೆ ನೋಡಿಕೊಳ್ಳಿ.
    *ನೀವು ಕೊರೊನಾ ಸೋಂಕಿತರನ್ನು ಮನೆಯಲ್ಲಿಯೇ ನೋಡಿಕೊಳ್ಳುತ್ತಿದ್ದರೆ, ಮಾಸ್ಕ್‍ನನ್ನು ಮೂಗು ಹಾಗೂ ಬಾಯಿಯನ್ನು ಮುಚ್ಚುವಂತೆ ಸರಿಯಾಗಿ ಧರಿಸಿ.
    *ಮುಂದಿನ ಕೆಲವು ದಿನಗಳಲ್ಲಿ ಜ್ವರ ಕಡಿಮೆಯಾಗದಿದ್ದರೆ ಹಾಗೂ ಉಸಿರಾಟದ ತೊಂದರೆಯಾಗುತ್ತಿದ್ದರೆ, ನಿಮ್ಮ ವೈದ್ಯರನ್ನು ಸಂಪರ್ಕಿಸಿ, ವೈದ್ಯರು ಸೂಚಿಸಿದರೆ ಮಾತ್ರ ಹತ್ತಿರ ಆಸ್ಪತ್ರೆಯನ್ನು ಸಂಪರ್ಕಿಸಿ.

    ಹೀಗೆ ಸಂಯಮ ಹಾಗೂ ಎಚ್ಚರವನ್ನು ತಿಳಿಸುತ್ತಿರುವ ಈ 5 ಸೂತ್ರಗಳನ್ನು ಪಾಲಿಸಿದರೆ ನಾವು ಖಂಡಿತ ಕೊರೊನಾವನ್ನು ಸೋಲಿಸಬಹುದು. ಪ್ರತಿ ಮನೆಯು ಪಣ ತೊಟ್ಟಿದೆ ಎಂದ ಮೇಲೆ ಕೊರೊನಾ ಖಂಡಿತ ಸೋಲುತ್ತದೆ ಎಂದಿದ್ದಾರೆ.