Tag: ಪಬ್ಲಿಕ್ ಟಿವಿ robbery

  • ಮನೆ ಬೀಗ ಮುರಿದು ಕಳ್ಳತನ – ಚಿನ್ನಾಭರಣದ ಜೊತೆ ದವಸ ಧಾನ್ಯ ದೋಚಿದ್ರು!

    ಮನೆ ಬೀಗ ಮುರಿದು ಕಳ್ಳತನ – ಚಿನ್ನಾಭರಣದ ಜೊತೆ ದವಸ ಧಾನ್ಯ ದೋಚಿದ್ರು!

    ರಾಯಚೂರು: ಮನೆಬೀಗ ಮುರಿದು ಚಿನ್ನಾಭರಣದ ಜೊತೆಗೆ ದವಸ ಧಾನ್ಯವನ್ನು ದೋಚಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ದಾಮ್ಲನಾಯ್ಕ ತಾಂಡದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಬೂದೆಮ್ಮ ಎಂಬವರಿಗೆ ಸೇರಿದ ಮನೆಯಲ್ಲಿ 30 ಗ್ರಾಂ ಚಿನ್ನ, 10 ಗ್ರಾಂ ಬೆಳ್ಳಿ, 50 ಸಾವಿರ ರೂಪಾಯಿ ನಗದು ಸೇರಿ ಸುಮಾರು 3 ಲಕ್ಷ ರೂಪಾಯಿ ಬೆಲೆಬಾಳುವ ವಸ್ತುಗಳ ಜೊತೆಗೆ ದವಸ ಧಾನ್ಯವನ್ನು ಖದೀಮರು ದೋಚಿದ್ದಾರೆ. ಇದನ್ನು ಓದಿ:ಮನೆಯಲ್ಲಿ ನೀರಿಲ್ಲ, ನೀರು ತರಲು ಬಿಡ್ತಿಲ್ಲ – ಯುವಕನ ಅಳಲು

    ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ಮನೆ ಯಜಮಾನಿಗೆ ಇಂದು ಮಧ್ಯಾಹ್ನ ಮನೆಗೆ ಮರಳಿ ಬಂದಾಗ ಕಳ್ಳತನ ನಡೆದಿರುವುದರ ಬಗ್ಗೆ ತಿಳಿದುಬಂದಿದೆ. ಇದನ್ನು ಓದಿ: ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ: ಎಸ್.ಟಿ.ಸೋಮಶೇಖರ್

    ಚಿನ್ನಾಭರಣ ಜೊತೆಗೆ 50 ಕೆ.ಜಿ ಸಜ್ಜೆ ಸೇರಿದಂತೆ ಮನೆಯಲ್ಲಿನ ದವಸ ಧಾನ್ಯಗಳನ್ನು ಸಹ ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಈ ಘಟನೆ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಆಭರಣ ಕಳ್ಳನ ಬಂಧನ – ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು

    ಆಭರಣ ಕಳ್ಳನ ಬಂಧನ – ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು

    ಕೊಪ್ಪಳ: ಕೊಪ್ಪಳದ ಕುಕನೂರು ತಾಲೂಕಿನ ಇಟಗಿ ಗ್ರಾಮದ ಮನೆಯೊಂದರಲ್ಲಿ ಆಭರಣ ಕಳ್ಳತನ ಮಾಡಿದ ಪ್ರಕರಣದಡಿ ಒಂದೇ ದಿನದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಆಭರಣ ಸೇರಿ ಇತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಯನ್ನು ಆಸೀಫ್ ಎಲಿಗಾರ ಎಂದು ಗುರುತಿಸಲಾಗಿದೆ. ಈತನು ಮಸಬಂಚಿನಾಳ ಗ್ರಾಮದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ವೇಳೆ ಪೊಲೀಸರು ಅನುಮಾನಗೊಂಡು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿದ ಕುರಿತು ಬಾಯಿ ಬಿಟ್ಟಿದ್ದಾನೆ.

    ಬಂಧಿತನಿಂದ ಬಂಗಾರ, ಹಣ ಸೇರಿದಂತೆ ಒಟ್ಟಾರೆ 2,92,000 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣವನ್ನು ಕೇವಲ ಒಂದೇ ದಿನದಲ್ಲಿ ಪೊಲೀಸರು ಬೇಧಿಸಿದ್ದು ನಿಜಕ್ಕೂ ಪೊಲೀಸರ ಶ್ಲಾಘನೀಯ ಕಾರ್ಯವಾಗಿದೆ. ಪ್ರಕರಣ ಕುರಿತು ಡಿಎಸ್‍ಪಿ ಗೀತಾ ಮಾರ್ಗದರ್ಶನದಲ್ಲಿ ಸಿಪಿಐ ವೆಂಕಟೇಶ, ಪಿಎಸ್‍ಐ ಹಾಗೂ ಪೇದೆಗಳ ತಂಡವು ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಿದ್ದಕ್ಕೆ ಎಸ್ಪಿ ಅವರು ಶ್ಲಾಘಿಸಿ ಸೂಕ್ತ ಬಹುಮಾನ ಘೋಷಣೆ ಮಾಡಿದ್ದಾರೆ.