Tag: ಪಬ್ಲಿಕ್ ಟಿವಿ Sudhakar

  • ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

    ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

    -ಗ್ಯಾಂಗ್ ರೇಪ್ ಪ್ರಕರಣ ನಡೆದಿದ್ದು ದುರದೃಷ್ಟಕರ

    ಚಿಕ್ಕಬಳ್ಳಾಪುರ: ಕರ್ನಾಟಕ ಒಳ್ಳೆಯ ರಾಜ್ಯ ಎಂಬುದಕ್ಕೆ ಹೆಸರು ವಾಸಿ ಇಂತಹ ರಾಜ್ಯದಲ್ಲಿ ಈ ಘಟನೆ ನಡೆದದ್ದು ದುರದೃಷ್ಟಕರ ಸಂಗತಿಯಾಗಿದೆ ಎಂದು ಹೇಳುವುದರ ಜೊತೆಗೆ, ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸರ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಸಿಎಂ ಹಾಗೂ ಹೋಂ ಮಿನಿಸ್ಟರ್ ಮಾತನಾಡಿದ್ದಾರೆ. ಬೇರೆಯವರು ಮಾತನಾಡಿ ಗೊಂದಲದ ಗೂಡಾಗೋದು ಬೇಡ. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ದಕ್ಷ ಹಾಗೂ ಪರಿಣಿತರು. ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಇನ್ನೂ ಮುಂದೆ ಇಂತಹ ಘಟನೆಗಳು ನಡೆಯದಂತೆ ನಮ್ಮ ಸರ್ಕಾರ ಗಟ್ಟಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

    ಕೋಲಾರ-ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಯಾವ ಮೂಲೆಗಳಿಂದ ನೀರು ತರುತ್ತೀವಿ ಎನ್ನುವುದನ್ನು ಈಗಲೇ ಹೇಳಲ್ಲ ಕಾದು ನೋಡಿ. ಬಸವರಾಜ್ ಬೊಮ್ಮಾಯಿಯವರಿಗೆ ನೀರಾವರಿ ವಿಚಾರದಲ್ಲಿ ಆಳವಾದ ಜ್ಞಾನ ಇದೆ. ನಾನು ಈಗಾಗಲೇ ಎತ್ತಿನಹೊಳೆ ಸಂಬಂಧ ಅವರ ಜೊತೆ ಚರ್ಚೆ ಮಾಡಿದ್ದೇನೆ. ಆದ್ಯತೆಯ ಮೇರೆಗೆ ಈ ಜಿಲ್ಲೆಗಳಿಗೆ ಆದಷ್ಟು ಬೇಗ ನೀರು ತರುವ ಕೆಲಸ ಆಗಲಿದೆ ಎಂದು ಭರವಸೆಯ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

    ಬಸವರಾಜ್ ಬೊಮ್ಮಾಯಿಯವರು ಹಾಗೂ ನಾನು ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರ ಜೊತೆ ಪ್ರತಿದಿನ ರಾಜ್ಯಕ್ಕೆ 5 ಲಕ್ಷ ಕೊರೊನಾ ಲಸಿಕೆ ಕೊಡಲು ಮಾತನಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಈಗಾಗಲೇ 4 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ. ಪ್ರತಿದಿನ ಕನಿಷ್ಠ 5 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕಿಕೊಳ್ಳಲಾಗಿದೆ. ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

    ಇನ್ನು ಮುಂದೆ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಿದ್ದು, ಸಿಎಂ ಕೈಯಲ್ಲಿ ಉದ್ಘಾಟನೆ ಮಾಡಿಸಿಲಿದ್ದೇವೆ. ಅಂದು 15 ರಿಂದ 30 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕುವ ಗುರಿ ಇದೆ. ಬೆಂಗಳೂರಿನ ಸ್ಲಂಗಳಲ್ಲಿ ಇರುವವರಿಗೆ ಬಹಳ ಪ್ರಾಮುಖ್ಯತೆ ನೀಡಲಾಗುವುದು. ಶುಕ್ರವಾರ ಬೆಂಗಳೂರಿನಲ್ಲಿ ಒಂದು ಕೋಟಿ ಲಸಿಕೆ ತಲುಪಿದ್ದೇವೆ. ಎರಡು ಡೋಸ್ ಪಡೆದವರಲ್ಲಿ 2 ತಿಂಗಳಲ್ಲಿ ಬೆಂಗಳೂರು ನಗರ ದೇಶದಲ್ಲಿ ಮೊದಲ ಸ್ಥಾನ ಅಲಂಕರಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಆ ದೃಷ್ಟಿ, ಆ ದಾರಿಯಲ್ಲಿ, ಹೋಗುತ್ತಿದ್ದು, ಬೆಂಗಳೂರಿಗೆ ಹೆಚ್ಚಿನ ಪ್ರಾಮಖ್ಯತೆ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

  • ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಕೊಳವನಹಳ್ಳಿ ಗ್ರಾಮದ ಡಿ. ಮಾರಪ್ಪನವರ ಅಂತಿಮ ದರ್ಶನವನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಪಡೆದಿದ್ದಾರೆ.

    ತಾಲೂಕಿನ ಕೊಳವನಹಳ್ಳಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಡಿ.ಮಾರಪ್ಪನವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದಂತಹ ಧೀಮಂತ ವ್ಯಕ್ತಿಯ ಸಾವು ನಮಗೆಲ್ಲಾ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

    ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಟ್ಟಿದ್ದರು. ಅನೇಕ ಪುಸ್ತಕಗಳನ್ನು ಸಹ ರಚನೆ ಮಾಡಿದ್ದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದವರು. ಅವರನ್ನು ಕಳೆದುಕೊಂಡಿರುವುದು ಇಡೀ ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟ ಅಂತ ಮಾರಪ್ಪನವರನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

  • ಸಿದ್ದರಾಮಯ್ಯಗೆ ಯಾಕೆ ಬಿಜೆಪಿ ಉಸಾಬರಿ – ಸುಧಾಕರ್ ಪ್ರಶ್ನೆ

    ಸಿದ್ದರಾಮಯ್ಯಗೆ ಯಾಕೆ ಬಿಜೆಪಿ ಉಸಾಬರಿ – ಸುಧಾಕರ್ ಪ್ರಶ್ನೆ

    – ಸಿದ್ದರಾಮಯ್ಯ ಕನಸು ನನಸಾಗಲ್ಲ

    ಚಿಕ್ಕಬಳ್ಳಾಪುರ: ಸಿಎಂ ಬದಲಾವಣೆ ಹಾಗೂ ಸಂಪುಟ ರಚನೆಯಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕನಸು ನನಸಾಗಲ್ಲ. ಸಿದ್ದರಾಮಯ್ಯನವರು ಕನಸು ಕಾಣುತ್ತಲೇ ಇರಲಿ. ಅವರ ಕನಸು ಯಾವತ್ತು ನನಸಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಸಿಎಂ ಬದಲಾವಣೆ ಸಂಪುಟ ರಚನೆ ಮಾಡಿದ್ದು, ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬ ಹೇಳಿಕೆಗೆ, ಸಿಎಂ ಬದಲಾವಣೆ ಸಂಪುಟ ರಚನೆ ಬಿಜೆಪಿ ಪಕ್ಷದ ತೀರ್ಮಾನ. ನಮ್ಮ ಪಕ್ಷ ಹಾಗೂ ನಾಯಕರ ತೀರ್ಮಾನ. ಸಿದ್ದರಾಮಯ್ಯನವರಿಗೆ ಯಾಕೆ ಈ ಉಸಾಬರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಅವರಿಗೇನು ಈ ವಿಚಾರ ಅಗತ್ಯ ಇಲ್ಲ. ಈ ಸರ್ಕಾರ ಆಡಳಿತ ಹೇಗೆ ಕೊಡುತ್ತದೆ ಅಂತ ವ್ಯಾಖ್ಯಾನ ಕೊಡಲಿ. 2-3 ತಿಂಗಳು ಸಿಎಂ ಹೇಗೆ ವ್ಯವಹರಿಸುತ್ತಾರೆ ಅಂತ ನೋಡುತ್ತೇವೆ ಎಂದು ಹೇಳಿದರು. ಆದರೆ ಈಗ ಎರಡೇ ದಿನಕ್ಕೆ ಈ ರೀತಿ ಮಾತಾನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯನವರ ವಿರುದ್ಧ ಮಾತನಾಡಿದ್ದಾರೆ.

    ಇದೇ ವೇಳೆ ಸಚಿವ ಸಂಪುಟ ರಚನೆಯಿಂದ ಅಸಮಾಧಾನಿತರಾದವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ. ಎಲ್ಲಾ ಶಾಸಕರಿಗೆ ಮಂತ್ರಿಯಾಗಬೇಕು ಎಂಬ ಆಸೆ ಇರುತ್ತೆ. ಅದಕ್ಕೆ ಅರ್ಹತೆ ಆಕಾಂಕ್ಷೆ ಸಹ ಇರುತ್ತೆ. ಆದರೆ ಎಲ್ಲರನ್ನೂ ಸಂಪುಟದಲ್ಲಿ ಸೇರಿಸಿಕೊಳ್ಳಲು ಅಸಾಧ್ಯ. ಪ್ರಾದೇಶಿಕ ಸಮತೋಲನ, ಜಾತಿವಾರು ಅವಕಾಶದ ಆಧಾರದ ಮೇಲೆ ಸಿಎಂ ಹಾಗೂ ಬಿಜೆಪಿ ನಾಯಕರು ಸಂಪುಟ ರಚನೆ ಮಾಡಿದ್ದಾರೆ. ಅವಕಾಶ ವಂಚಿತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿದ್ದು, ಅವರ ಆಕಾಂಕ್ಷೆ ಫಲಿಸುತ್ತೆ ಎಂದಿದ್ದಾರೆ. ಇದನ್ನೂ ಓದಿ:ಇಡಿಯವರು ಅವರ ಕೆಲಸ ಮಾಡ್ಲೇಬಾರದಾ: ಮಾಧುಸ್ವಾಮಿ ಪ್ರಶ್ನೆ

  • ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ : ಡಾ.ಕೆ.ಸುಧಾಕರ್

    ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ : ಡಾ.ಕೆ.ಸುಧಾಕರ್

    ಬೆಂಗಳೂರು: ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದರು.

    ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

    ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದರು. ಇದನ್ನೂ ಓದಿ: ಹಾಸನ ಪೊಲೀಸರ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ ಪೋಷಕರನ್ನು ಸೇರಿದ ಹೆಣ್ಣುಮಕ್ಕಳು

    ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

    ರಾಜ್ಯದಲ್ಲಿರುವ ಸುಮಾರು 1 ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಕೇಸ್ ದಾಖಲು – ಸುಧಾಕರ್

  • ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜಿನ ಜೊತೆಗೆ ಎಂಜಿನಿಯರಿಂಗ್, ಲಾ ಕಾಲೇಜು : ಸುಧಾಕರ್

    ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜಿನ ಜೊತೆಗೆ ಎಂಜಿನಿಯರಿಂಗ್, ಲಾ ಕಾಲೇಜು : ಸುಧಾಕರ್

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಕಾರಿಡಾರ್‍ನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

    ಜಿಲ್ಲೆಯ ಬಹುದಿನಗಳ ಕನಸಾಗಿದ್ದ ಮೆಡಿಕಲ್ ಕಾಲೇಜು ಆರಂಭಕ್ಕೆ ಸಿದ್ಧತೆಗಳು ನಡೆದಿವೆ. ಈಗಾಗಲೇ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣ ಭರದಿಂದ ಸಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಜೂನ್ ಅಥವಾ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಂಡು ಉದ್ಘಾಟಿಸಲಾಗುವುದು. ಹಾಗೆಯೇ ನರ್ಸಿಂಗ್, ಪ್ಯಾರಾ ಮೆಡಿಕಲ್, ಫಾರ್ಮಸಿ ಕೋಸ್‍ಗಳನ್ನೂ ಆರಂಭಿಸಲಾಗುವುದು. ಆಯುಷ್ ಆಸ್ಪತ್ರೆ ಮತ್ತು ಕಾಲೇಜು ಆರಂಭಕ್ಕೂ ಮುಂದಿನ ದಿನಗಳಲ್ಲಿ ಚಾಲನೆ ನೀಡಲಾಗುವುದು. ಇದರ ಜೊತೆಗೆ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಸಹಿತ ಉನ್ನತ ಶಿಕ್ಷಣದ ಎಲ್ಲಾ ಕೋರ್ಸ್‍ಗಳ ಆರಂಭಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆ ರಾಜಧಾನಿಗೆ ಸಮೀಪ ಇರುವುದರಿಂದ ಉನ್ನತ ಶಿಕ್ಷಣ ಮತ್ತು ಆರೋಗ್ಯ ವಲಯದಲ್ಲಿನ ಸವಲತ್ತುಗಳನ್ನು ಅಭಿವೃದ್ಧಿಪಡಿಸಿದರೆ, ತಾನೇ ತಾನಾಗಿ ಈ ಎರಡೂ ಕ್ಷೇತ್ರದ ಕೇಂದ್ರವಾಗಿ ಬೆಳವಣಿಗೆ ಹೊಂದಲಿದೆ. ಆ ನಿಟ್ಟಿನಲ್ಲಿ ನೀಲನಕ್ಷೆ ರೂಪಿಸಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಮಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಈ ಎರಡೂ ಖಾತೆಗಳನ್ನು ನೀಡಿರುವುದು ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಿದೆ ಎಂದರು.

    ಸದ್ಯ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುತ್ತಿರುವವರ ಸಂಖ್ಯೆ ಕಡಿಮೆಯಿದೆ. ಶಿಕ್ಷಣಕ್ಕೆ ದಾಖಲಾಗುವ ಶೇ.75 ರಷ್ಟು ಮಂದಿಯಾದರೂ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವಂತಾಗಬೇಕು. ಅದಕ್ಕೆ ತಕ್ಕನಾಗಿ ಸವಲತ್ತುಗಳನ್ನು ನಾವು ಒದಗಿಸಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯನ್ನು ಮಾದರಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಕಾರಿಡಾರ್‍ನ್ನಾಗಿ ರೂಪಿಸಲಾಗುವುದು ಎಂದರು.

    ಕಾಲೇಜುಗಳ ಅಭಿವೃದ್ಧಿಗೆ ಕ್ರಮ: ನಗರದ ಕಾಲೇಜುಗಳ ಅಭಿವೃದ್ಧಿಗೆ ಒಟ್ಟು 6.67 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಯೋಗಾಲಯ, ಹೆಚ್ಚುವರಿ ಕೊಠಡಿಗಳು, ಶೌಚಾಲಯ ನಿರ್ಮಾಣಗಳಿಗೆ ಹಣ ನೀಡಲಾಗಿದೆ. ಹಾಗೆಯೇ ಜಿಲ್ಲೆಯ ಪ್ರಥಮ ಮಹಿಳಾ ಕಾಲೇಜು ನಿರ್ಮಾಣಕ್ಕೂ ಡಿಎಂಎಫ್ ನಿಧಿ ಅಡಿಯಲ್ಲಿ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಆರಂಭಗೊಂಡಿರುವ ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ಇದೇ ವರ್ಷ ಪೂರ್ಣಗೊಂಡು ಉದ್ಘಾಟನೆ ಆಗಲಿದೆ. ಕಾಲೇಜು ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿ ಹೆಚ್ಚು ಮುತುವರ್ಜಿ ವಹಿಸಿ ಕಾಲೇಜು ಆವರಣವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಬೋಧನೆ ಜತೆಗೆ ಶುಚಿತ್ವಕ್ಕೂ ಒತ್ತು ನೀಡಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

    ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶಿಕ್ಷಣ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮೊದಲ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡುತ್ತಿದೆ. ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 4,200 ಮಂದಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಉಚಿತವಾಗಿ ನೀಡುತ್ತಿದ್ದು ಇದರ ಸೌಲಭ್ಯಗಳನ್ನು ಪಡೆದು ವಿದ್ಯಾರ್ಥಿಗಳು ಜಿಲ್ಲೆಗೆ ಒಳ್ಳೇಯ ಹೆಸರು ತರಬೇಕು ಎಂದರು.

    ಮೊದಲು ಕಾಲೇಜು ಆರಂಭ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತಜ್ಞರ ಅಭಿಪ್ರಾಯ ಪಡೆದು ಕೆಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಮೊದಲು ಕಾಲೇಜುಗಳನ್ನು ಆರಂಭಿಸಲಾಗುವುದು. ಆ ನಂತರವಷ್ಟೇ ಶಾಲೆಗಳ ಆರಂಭದ ಬಗ್ಗೆ ನಿರ್ಧರಿಸಲಾಗುವುದು. ಆದಷ್ಟು ಶೀಘ್ರದಲ್ಲೇ ಎಲ್ಲಾ ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

    ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಫಸ್ಟ್: ಸೋಮವಾರ ನಡೆದ ಲಸಿಕಾ ಮೇಳದಂದು ಜಿಲ್ಲೆಯಲ್ಲಿ ನಲವತ್ತು ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ. ಇದಕ್ಕೆ ಕಾರಣರಾದ ಜಿಲ್ಲಾಧಿಕಾರಿ, ಡಿಎಚ್‍ಒ, ನರ್ಸ್‍ಗಳು ಹಾಗೂ ಇತರೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಜನರಿಗೆ ಲಸಿಕೆಯನ್ನು ಆದ್ಯತೆ ಮೇರೆಗೆ ನೀಡಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ಕೊರೊನಾ ಮುಕ್ತ ಜಿಲ್ಲೆ ಎಂದೂ ಕರ್ನಾಟಕವು ಕೊರೊನಾ ಮುಕ್ತ ರಾಜ್ಯ ಆಗಬೇಕು. ನಿನ್ನೆಯವರೆಗೆ ರಾಜ್ಯದ ಎರಡೂ ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 11.24 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಮೂರನೇ ಅಲೆ ಎದುರಿಸಲು ಸಕಲ ಸಿದ್ದತೆ: ಮುಂದೆ ಬರುತ್ತದೆ ಎಂದು ನಿರೀಕ್ಷಿಸಲಾಗಿರುವ ಕೊರೊನಾ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆಸಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಐವತ್ತರಿಂದ ಅರವತ್ತು ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಸಿದ್ಧಪಡಿಸಲಾಗುತ್ತಿದೆ. ಇದರ ಜತೆಗೆ ವಿಶೇಷ ನಿಗಾ ಘಟಕಗಳನ್ನೂ ಸ್ಥಾಪಿಸಲಾಗುವುದು. ಒಟ್ಟಾರೆ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

    ರಾಜ್ಯದ ಆರೋಗ್ಯ ಕ್ಷೇತ್ರದ ಸುಧಾರಣೆ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೆಳ ಹಂತದ ಚಿಕಿತ್ಸಾ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ 250 ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಹೊಸದಾಗಿ ವೈದ್ಯರು, ನರ್ಸ್ ಮತ್ತು ಇತರೆ ಸಿಬ್ಬಂದಿಗಳನ್ನೂ ದೊಡ್ಡ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಕಾಳಜಿ ವಹಿಸಿ ಆದ್ಯತೆ ನೀಡುತ್ತಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದರು. ಇದನ್ನೂ ಓದಿ:  ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ

  • ಜೈನ್ ಮಿಷನ್ ಆಸ್ಪತ್ರೆ ಉದ್ಘಾಟಿಸಿದ ಸಚಿವ ಸುಧಾಕರ್

    ಜೈನ್ ಮಿಷನ್ ಆಸ್ಪತ್ರೆ ಉದ್ಘಾಟಿಸಿದ ಸಚಿವ ಸುಧಾಕರ್

    – 1 ವರ್ಷದೊಳಗೆ ಸರ್ಕಾರಿ ಮೆಡಿಕಲ್ ಕಾಲೇಜು ಲೋಕಾರ್ಪಣೆ

    ಚಿಕ್ಕಬಳ್ಳಾಪುರ: ನಗರದ ಬೆಂಗಳೂರು ಮುಖ್ಯ ರಸ್ತೆಯ ಜಡಲತಿಮ್ಮನಹಳ್ಳಿ ಕ್ರಾಸ್ ಬಳಿ ನಿರ್ಮಾಣಗೊಂಡಿರುವ ನೂತನ ಜೈನ್ ಮಿಷನ್ ಆಸ್ಪತ್ರೆಯನ್ನ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಲೋಕಾರ್ಪಣೆ ಮಾಡಿದರು.

    ಜೈನ್ ಮಿಷನ್ ಸಂಸ್ಥೆಯಿಂದ ನೂತನ ಅತ್ಯಾಧುನಿಕ ಸೌಲಭ್ಯಗಳುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ನೂತನ ಆಸ್ಪತ್ರೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್‍ರವರು, ಜಿಲ್ಲೆಗೆ ಇಂತಹದೊಂದು ಆಸ್ಪತ್ರೆ ಅತ್ಯವಶ್ಯಕವಾಗಿದ್ದು, ಜೈನ್ ಮಿಷನ್ ವತಿಯಿಂದ ಆರಂಭವಾಗಿರುವ ಈ ಆಸ್ಪತ್ರೆಯನ್ನ ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

    ಜೈನ್ ಸಮುದಾಯದವರು ಸೇವಾ ಮನೋಭಾವದವರು ಆ ಸಮುದಾಯದ ಬಗ್ಗೆ ನನಗೆ ಹೆಮ್ಮೆ ಇದೆ. ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿ ಜನರ ಸೇವೆ ಮಾಡಲು ಮುಂದಾಗಿರುವ ಜೈನ್ ಮಿಷನ್ ಸೇವೆ ಶ್ಲಾಘನೀಯವಾದದ್ದು. ಲಾಭ ರಹಿತ ಉದ್ದೇಶದಿಂದ ಈ ಆಸ್ಪತ್ರೆ ಆರಂಭವಾಗಿದೆ. ಈ ಆಸ್ಪತ್ರೆಗೆ ಬೇಕಾದ ಎಲ್ಲ ಸಹಕಾರವನ್ನ ತಾವು ನೀಡುವುದಾಗಿ ತಿಳಿಸಿದರು.

    ಆಸ್ಪತ್ರೆ ಶೇ. 90 ರಷ್ಟು ನಿರ್ಮಾಣ ಆಗಿದ್ದಾಗಲೇ ಇಡೀ ಆಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆ ಮಾಡಿ ಸೋಂಕಿತರಿಗೆ ಚಿಕಿತ್ಸೆ ಕೊಡಲು ಬಳಸಿಕೊಳ್ಳಿ ಅಂತ ಆಸ್ಪತ್ರೆಯ ಮುಖ್ಯಸ್ಥರಾದ ನರಪತ್ ಸೋಲಂಕಿಯವರು, ಉತ್ತಮ್ ಚಂದ್‍ರವರು ಉದಾರತಾ ಭಾವದಿಂದ ಹೇಳಿದ್ದರು. ಕೋವಿಡ್ ಆಸ್ಪತ್ರೆ ಮಾಡಲು ಸಕಲ ಸಿದ್ದತೆಗಳನ್ನ ಸಹ ಜಿಲ್ಲಾಡಳಿತ ಮಾಡಿಕೊಂಡಿತ್ತು. ಆದರೆ ಈಗ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆ ಆರಂಭ ಮಾಡುವುದು ಅವಶ್ಯಕವಾಗಲಿಲ್ಲ. ಹೀಗಾಗಿ ಸದ್ಯ ಜೈನ್ ಮಿಷನ್ ಸಂಸ್ಥೆಯವರೇ ಜನರಲ್ ಆಸ್ಪತ್ರೆ ಆರಂಭಿಸಿದ್ದು, ಜನತೆಗೆ ಉತ್ತಮ ಚಿಕಿತ್ಸೆ ಸಿಗುವಂತಗಾಲಿ ಎಂದು ಸಚಿವರು ಆಶಿಸಿದರು. ಇದನ್ನೂ ಓದಿ: ಲಾಕ್‍ಡೌನ್ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷ ಜೋಡಿ

    ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯ ಸಹ ಭರದಿಂದ ಸಾಗುತ್ತಿದ್ದು 1 ವರ್ಷದೊಳಗೆ ಕಾಲೇಜು ಲೋಕಾರ್ಪಣೆ ಮಾಡುವುದಾಗಿ ತಿಳಿಸಿದರು.

  • ತಜ್ಞರ ಸಲಹೆ ಆಧರಿಸಿ ಅನ್‍ಲಾಕ್ ಸ್ವರೂಪ ನಿರ್ಧಾರ: ಡಾ.ಕೆ.ಸುಧಾಕರ್

    ತಜ್ಞರ ಸಲಹೆ ಆಧರಿಸಿ ಅನ್‍ಲಾಕ್ ಸ್ವರೂಪ ನಿರ್ಧಾರ: ಡಾ.ಕೆ.ಸುಧಾಕರ್

    ಬೆಂಗಳೂರು: ಒಂದೇ ಬಾರಿಗೆ ಎಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಬಹುದು. ಅನ್‍ಲಾಕ್ ಸ್ವರೂಪದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಚಟುವಟಿಕೆಗೆ ನಿಬರ್ಂಧ ಹೇರಿ, ಇನ್ನೂ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚಿಸಿ ಅನ್ ಲಾಕ್ ಯಾವ ರೀತಿ ಇರಬೇಕೆಂದು ತೀರ್ಮಾನ ಮಾಡುತ್ತಾರೆ. ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆ, 5 ಸಾವಿರಕ್ಕಿಂತ ಕಡಿಮೆ ಪ್ರಕರಣ ಇದ್ದರೆ ಅನ್ ಲಾಕ್ ಮಾಡಬಹುದೆಂಬ ಅಭಿಪ್ರಾಯ ಇದೆ ಎಂದರು.

    ಅನ್ ಲಾಕ್ ಬಗ್ಗೆ ಯಾವುದೇ ಗೊಂದಲ ಇಲ್ಲ. ಮಹಾರಾಷ್ಟ್ರದಲ್ಲಿ ಪ್ರಕರಣ ಇಳಿಕೆಯಾದ ಬಳಿಕ ಅನ್ ಲಾಕ್ ಕಡೆಗೆ ಹೋಗಿದ್ದಾರೆ. ಆ ರಾಜ್ಯಕ್ಕಿಂತ ಬಹಳ ಬೇಗ ನಮ್ಮಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ. ಕೆಲ ದೇಶಗಳಲ್ಲಿ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿಲ್ಲ. ಅನೇಕ ಮಕ್ಕಳಿಗೆ ಮನೆ ಆರೈಕೆ ಮಾಡಲಾಗಿದೆ ಎಂದು ಏಮ್ಸ್ ನಿರ್ದೇಶಕರು ಹೇಳಿದ್ದಾರೆ. ಆದರೂ ರಾಜ್ಯದಲ್ಲಿ ಮಕ್ಕಳ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ನುಡಿದರು.

    ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 2,281 ಪ್ರಕರಣಗಳಿದ್ದು, 1,948 ಮಂದಿಗೆ ಚಿಕಿತ್ಸೆ ನೀಡುತ್ತಿದ್ದು, 102 ಮಂದಿ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನು ಓದಿ: ಪಾಸಿಟಿವಿಟಿ ರೇಟ್ ಶೇ.6.68ಕ್ಕೆ ಇಳಿಕೆ, 20,246 ಡಿಸ್ಚಾರ್ಜ್- 10,959 ಹೊಸ ಕೊರೊನಾ ಕೇಸ್, 192 ಸಾವು

    ತಪ್ಪಿತಸ್ಥರ ರಕ್ಷಣೆ ಇಲ್ಲ: ಇತ್ತೀಚೆಗೆ ಹುಬ್ಬಳ್ಳಿ ಕಿಮ್ಸ್‌ಗೆ ಭೇಟಿ ನೀಡಿದ್ದಾಗ ಬೇರೆ ಸಚಿವರು ದೂರು ನೀಡಿದ್ದರು. ಆಗ ಸ್ಥಳದಲ್ಲೇ ತನಿಖೆಗೆ ಆದೇಶಿಸಿ ವರದಿ ನೀಡಲು ಸೂಚಿಸಲಾಗಿತ್ತು. ವರದಿ ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ನನ್ನ ಬಳಿ ವರದಿ ಬಂದ ಕೂಡಲೇ ಕ್ರಮ ವಹಿಸುತ್ತೇನೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

    ವೈದ್ಯರು ಆಸ್ಪತ್ರೆಯಿಂದ ಹೊರಗೆ 100 ಮೀಟರ್ ದೂರ ಹೋದ ಕೂಡಲೇ ಗೊತ್ತಾಗುವಂತೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಲಾಗುವುದು. ಪ್ರತಿ ಆಸ್ಪತ್ರೆಯ ವಾರ್ಡ್, ಐಸಿಯುನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಒಂದೇ ಕಡೆ ನಿರ್ವಹಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

    ಆಕ್ಸಿಜನ್ ಸಾಂದ್ರಕ ಕೊಡುಗೆ: ಹರ್ಬಲೈಫ್ ನ್ಯೂಟ್ರೀಶಿಯನ್ ಕಂಪನಿಯು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ 150 ಆಕ್ಸಿಜನ್ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದೆ. ಸಪ್ತ ಸಚಿವರ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಕಂಪನಿಯ ಪ್ರತಿನಿಧಿಗಳು ಕಾನ್ಸಂಟ್ರೇಟರ್‌ಗಳನ್ನು ಹಸ್ತಾಂತರಿಸಿದರು. ಇದನ್ನು ಓದಿ: ಕೋವಿಡ್ ನಡುವೆ ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ

  • ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

    ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

    ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನ ನೆಪದಲ್ಲಿ ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪಗಳ ಮಧ್ಯೆ ಹಿರಿಯ ಆರೋಗ್ಯಾಧಿಕಾರಿ ಹಣ ಹಾಗೂ ರೆಮ್ಡಿಸಿವಿರ್ ಔಷಧಿಗಳಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

    ಮೇ 13 ಹಾಗೂ ಮೇ 14 ರಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರ ಚಿಕ್ಕಬಳ್ಳಾಪುರ ಜಿಲ್ಲೆಯ ಭೇಟಿಯ ಸಮಯದಲ್ಲಿ ಜೊತೆಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಜಂಟಿ ನಿರ್ದೇಶಕ ಡಾ.ಮುರಳಿ ಕೃಷ್ಣ ಅವರು ಶಿಡ್ಲಘಟ್ಟ ಹಾಗೂ ಬಾಗೇಪಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಬಲವಂತವಾಗಿ ಬೆದರಿಕೆ ಹಾಕಿ ಇಬ್ಬರ ಬಳಿಯೂ 5 ವಯಲ್ ರೆಮ್‍ಡಿಸಿವಿರ್ ಔಷಧಿ ಪಡೆದಿದ್ದಾರೆ.

    ಈ ಸಂಬಂಧ ಬಾಗೇಪಲ್ಲಿ ಟಿಎಚ್‍ಓ ಡಾ.ಸತ್ಯನಾರಾಯಣ ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿದ್ದರಿಂದ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಮುರುಳಿ ಕೃಷ್ಣ ಶಿಡ್ಲಘಟ್ಟ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಪಿ ಡಾ.ಮುರಳಿಕೃಷ್ಣರಿಂದ ರೆಮ್‍ಡಿಸಿವಿರ್ ಔಷಧಿಗಳನ್ನ ವಶಪಡಿಸಿಕೊಳ್ಳಲಾಗಿದೆ.

    ಕೊರೊನಾ ಸೋಂಕನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ದೂರ್ತರು ಜನರ ಜೊತೆಯಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು, ಬೆಡ್, ವೆಂಟಿಲೇಟರ್, ಔಷಧಗಳನ್ನ ಬ್ಲಾಕ್ ನಲ್ಲಿ ಮಾರಾಟ ಮಾಡಿಕೊಂಡಿರುವ ಪ್ರಕರಣ ಜೀವಂತ ಇರುವಾಗಲೇ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರ ಕರ್ಮಕಾಂಡ ಬಯಲಾಗಿದೆ. ಇಲ್ಲಿ ಇವರೊಬ್ಬರೇ ಪಾಲುದಾರರಾ? ಅಥವಾ ಇನ್ನೂ ಇದ್ದಾರಾ ಎನ್ನುವ ಅನುಮಾನ ಬಲವಾಗಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.

  • ಬೆಂಗಳೂರಿಗೆ ಬಿಗಿ ಕ್ರಮ ತೆಗೆದುಕೊಳ್ಳದೇ ಹೋದರೆ ಕಷ್ಟ: ಸುಧಾಕರ್

    ಬೆಂಗಳೂರಿಗೆ ಬಿಗಿ ಕ್ರಮ ತೆಗೆದುಕೊಳ್ಳದೇ ಹೋದರೆ ಕಷ್ಟ: ಸುಧಾಕರ್

    ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರಿಗೆ ಕೆಲವು ವಿಶೇಷವಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯ ಇದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರೋಕ್ಷವಾಗಿ ಲಾಕ್‍ಡೌನ್ ಸುಳಿವು ನೀಡಿದ್ದಾರೆ.

    ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಇಂದು ಭೇಟಿ ಮಾಡಿ ತಾಂತ್ರಿಕ ಸಮಿತಿಯವರು ನೀಡಿದ ಕೆಲವೊಂದು ವರದಿಗಳ ಕುರಿತಂತೆ ಚರ್ಚೆ ನಡೆಸುತ್ತೇನೆ. ಅಲ್ಲದೆ ನಿನ್ನೆ ಸಂಜೆ ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಅವರು ಕೂಡ ಕೆಲ ಸಲಹೆಗಳನ್ನು ನೀಡಿದ್ದಾರೆ ಎಂದು ನುಡಿದರು.

    ಇದೇ ವೇಳೆ ಬೆಂಗಳೂರಿಗೆ ವಿಶೇಷ ಕ್ರಮ ಅವಶ್ಯಕತೆ ಇದೆ. ಅಂತಹ ಅನಿವಾರ್ಯ ಉದ್ಭವವಾಗಿದೆ. ಅಲ್ಲದೆ ಕೊರೊನಾ ಸಮುದಾಯಕ್ಕೆ ಹರಿಡಿದೆ ಎಂದು ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಸಮುದಾಯಕ್ಕೆ ಕೊರೊನಾ ಹರಡಿದೆ ಎಂದರು.

    ಬೆಂಗಳೂರು ಲಾಕ್‍ಡೌನ್ ಬಗ್ಗೆ ಇಂದು ನಾನು ಸಿಎಂ ಬಿಎಸ್‍ವೈರನ್ನು ಭೇಟಿ ಮಾಡುತ್ತಿದ್ದು, ಬೆಂಗಳೂರಿಗೆ ಬಿಗಿ ಕ್ರಮ ತೆಗೆದುಕೊಳ್ಳದೇ ಹೋದರೆ ನಾವು ಇದನ್ನು ನಿಯಂತ್ರಿಸುವುದು ಅಸಾಧ್ಯ ಎಂದು ಒಬ್ಬ ಆರೋಗ್ಯ ಸಚಿವನಾಗಿ ನಾನು ಕೂಡ ಹೇಳುತ್ತಿದ್ದೇನೆ. ನಾಳೆಯ ಸಭೆಯಲ್ಲಿ ಚರ್ಚೆ ಮಾಡಿ ಕಠಿಣ ನಿರ್ಧಾರ ಪ್ರಕಟ ಮಾಡ್ತೀವಿ ಎಂದು ಹೇಳಿದರು.