Tag: ಪಬ್ಲಿಕ್ ಟಿವಿ Vehicle

  • ವಾಹನಗಳ ಸುಳ್ಳು ದಾಖಲಾತಿ ಸೃಷ್ಟಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್

    ವಾಹನಗಳ ಸುಳ್ಳು ದಾಖಲಾತಿ ಸೃಷ್ಟಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್

    – 2 ಕೋಟಿ 60 ಲಕ್ಷದ ಮೌಲ್ಯದ ವಾಹನಗಳು ಜಪ್ತಿ

    ಚಿಕ್ಕೋಡಿ: ಅಂತರರಾಜ್ಯಗಳಲ್ಲಿ ವಾಹನ ಮಾರಾಟ ಮಾಡುತ್ತಿದ್ದ ಗ್ಯಾಂಗ್‍ವೊಂದನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರಿಂದ ಒಟ್ಟು 2 ಕೋಟಿ 60 ಲಕ್ಷ ಮೌಲ್ಯದ 9 ಟಿಪ್ಪರ್ ವಾಹನ, 1 ಜೆಸಿಬಿ, 2 ಟ್ರಕ್ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರ ಮೂಲದ ಫಯಾಜ ದಾಲಾಯತ ಎಂಬವರು ನೀಡಿದ ದೂರಿನ ಹಿನ್ನಲೆ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಯೂಸುಫ್ ಸೈಯದ್‍ನನ್ನು ಬಂಧಿಸಿ ಮೋಸದ ಜಾಲವನ್ನು ಭೇದಿಸಿದ್ದಾರೆ.

    ಪ್ರಕರಣ ಪ್ರಮುಖ ಆರೋಪಿ ಯೂಸುಫ್ ತನ್ನ ಸಹಚರೊಂದಿಗೆ ಸೇರಿಕೊಂಡು ಫೈನಾನ್ಸ್ ಕಂಪನಿಗಳಿಂದ ಲೋನ್ ಪಡೆದು ಹಣ ಮರುಪಾವತಿ ಮಾಡಲು ಆಗದೇ ವಾಹನಗಳನ್ನು ಮಾರಾಟ ಮಾಡುವವರನ್ನು ಹುಡುಕುತ್ತಿದ್ದರು. ಅಂತವರನ್ನ ಗುರುತಿಸಿ ನಿಮ್ಮ ವಾಹನವನ್ನು ಮಾರಾಟ ಮಾಡಿ ಕೊಡುತ್ತೇವೆ ಜೊತೆಗೆ ವಿಮಾ ಕಂಪನಿಯಿಂದ ನಿಮಗೆ ಹಣ ಕೂಡ ಕೊಡಿಸುತ್ತೇವೆ ಎಂದು ನಂಬಿಸಿ ಕಡಿಮೆ ಬೆಲೆಗೆ ವಾಹನ ಪಡೆದು, ಬಳಿಕ ಅದೇ ವಾಹನಗಳನ್ನು ಪ್ರಕರಣದ ಎರಡನೇ ಆರೋಪಿಯಾದ ದಾಂಡೇಲಿಯ ದಿಲಾವರ ಕಾಕರ ಎಂಬವರಿಂದ ವಾಹನದ ಚೆಸ್ಸಿ ನಂಬರ್ ಹಾಗೂ ನಂಬರ್ ಪ್ಲೇಟ್ ಬದಲಾಯಿಸಿ ಅದಕ್ಕೆ ಬೇರೆ ಆರ್.ಸಿ ತಯಾರಿಸಿ ಬೇರೆ ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದರು.

    ದೂರುದಾರ ಫಯಾಜ ಧಾಲಾಯತ್ ಎಂಬವರಿಗೆ ಕೂಡ ಆರೋಪಿ ಯೂಸುಫ್ ಒಂದು ಜೆಸಿಬಿಯನ್ನು ನೀಡಿದ್ದ 30 ಲಕ್ಷ ಮೌಲ್ಯದ ಜೆಸಿಬಿಯನ್ನ 12 ಲಕ್ಷಕ್ಕೆ ಮಾರಾಟ ಮಾಡಿ 6 ಲಕ್ಷ ರೂಪಾಯಿಗಳನ್ನ ಮುಂಗಡವಾಗಿ ಪಡೆದಿದ್ದ, ಕೆಲ ದಿನಗಳು ಕಳೆದರೂ ವಾಹನದ ಆರ್.ಸಿ ಪತ್ರಗಳನ್ನ ನೀಡದೇ ಸತಾಯಿಸಿದ್ದ ಹಿನ್ನೆಲೆಯಲ್ಲಿ ಫಯಾಜ್ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಡಿಮೆ ಬೆಲೆ, ಭರ್ಜರಿ ಆಫರ್ – ಅಜಿಯೋದಲ್ಲಿ ಜು.5ರವರೆಗೆ ಬಿಗ್ ಬೋಲ್ಡ್ ಸೇಲ್‍

  • ಇದೇನಾ ಕರ್ಫ್ಯೂ? ಸಬ್ ಇನ್ಸ್‌ಪೆಕ್ಟರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿ – ಚಾಮರಾಜನಗರ ಡಿಸಿ ಗರಂ

    ಇದೇನಾ ಕರ್ಫ್ಯೂ? ಸಬ್ ಇನ್ಸ್‌ಪೆಕ್ಟರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿ – ಚಾಮರಾಜನಗರ ಡಿಸಿ ಗರಂ

    ಚಾಮರಾಜನಗರ: ಕಳೆದ ಮೂರು ದಿನಗಳಿಂದ ಲಾಕ್ ಡೌನ್ ಮಾದರಿಯ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಚಾಮರಾಜನಗರದಲ್ಲಿ ವಾಹನ ಸವಾರರು ಯಾವುದಕ್ಕೂ ಕೇರ್ ಮಾಡದೇ ಜನರು ಒಂದಲ್ಲ ಒಂದು ಕಾರಣ ಹೇಳಿಕೊಂಡು ಓಡಾಡುತ್ತಿದ್ದಾರೆ.

    ನಗರದ ಭುವನೇಶ್ವರಿ ವೃತ್ತದ ದೃಶ್ಯಗಳನ್ನು ಕಣ್ಣಾರೆ ಕಂಡು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಸ್ಥಳದಲ್ಲೇ ಎಸ್ಪಿಗೆ ಫೋನ್ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿಗೆ ಬಂದು ನೋಡಿ. ಯಾವ ರೀತಿ ಕರ್ಫ್ಯೂ ಉಲ್ಲಂಘನೆ ಆಗುತ್ತಿದೆ. ಮೂವರು ಪೊಲೀಸ್ ಸಿಬ್ಬಂದಿ ಬಿಟ್ಟರೆ ಸ್ಥಳದಲ್ಲಿ ಯಾವ ಹಿರಿಯ ಪೊಲೀಸ್ ಅಧಿಕಾರಿಯು ಇಲ್ಲ. ಸಂಬಂಧಪಟ್ಟ ಸಬ್ ಇನ್ಸ್ ಪೆಕ್ಟರ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಎಂದು ಸೂಚನೆ ನೀಡಿದರು.

    ಹೀಗೆ ಹೇಳಿ ಫೋನ್ ಸಂಪರ್ಕ ಕಡಿತ ಮಾಡಿದ ಕೆಲವೇ ಹೊತ್ತಿನಲ್ಲಿ ತಕ್ಷಣ ಸ್ಥಳಕ್ಕೆ ಬಂದ ಡಿವೈಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರನ್ನು ಸಹ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಸಮಜಾಯಿಷಿ ನೀಡಲು ಬಂದ ಪೊಲೀಸ್ ಅಧಿಕಾರಿಗಳ ವಿರುದ್ದ ಮತ್ತೆ ಗರಂ ಆದ ಜಿಲ್ಲಾಧಿಕಾರಿ, ಇದೇನಾ ಕರ್ಫ್ಯೂ? ಅರ್ಥ ಆಗ್ತಾ ಇಲ್ವಾ? ಯಾವ ಭಾಷೆಯಲ್ಲಿ ಹೇಕಬೇಕು? ಮಾತು ಕಡಿಮೆ ಮಾಡಿ ಕೆಲಸ ಮಾಡಿ. ಹೀಗೆ ಜನ ಸಂಚರಿಸಲು ಬಿಟ್ಟರೆ ಏನು ಪ್ರಯೋಜನ? ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡಿ, ಕೇಸ್ ಹಾಕಿ ಜನಸಂಚಾರ ನಿಯಂತ್ರಣ ಮಾಡಿ ಎಂದು ಖಡಕ್ ಸೂಚನೆ ನೀಡಿದರು.