Tag: ಪಬ್ಲಿಕ್ ಟಿವಿ Young Woman

  • ಸೋಷಿಯಲ್ ಮೀಡಿಯಾದಲ್ಲಿ ಪರಿಚಯ – ಯುವತಿಗೆ ಲಕ್ಷಾಂತರ ರೂ. ವಂಚಿಸಿದ್ದ ವಂಚಕ ಅಂದರ್

    ಸೋಷಿಯಲ್ ಮೀಡಿಯಾದಲ್ಲಿ ಪರಿಚಯ – ಯುವತಿಗೆ ಲಕ್ಷಾಂತರ ರೂ. ವಂಚಿಸಿದ್ದ ವಂಚಕ ಅಂದರ್

    ಬೆಂಗಳೂರು: ಸೋಶಿಯಲ್ ಮೀಡಿಯಾ ಮೂಲಕ ಪರಿಚಯಗೊಂಡ ಯುವತಿಯನ್ನು ಪುಸಲಾಯಿಸಿ ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದ ವಂಚಕನನ್ನು ಗಂಗಮ್ಮಗುಡಿ ಪೊಲೀಸರು ಬಂಧಿಸಿದ್ದಾರೆ.

    ಮಾದನಾಯಕಹಳ್ಳಿ ನಿವಾಸಿ ಘನಶ್ಯಾಮ್ ಬಂಧಿತ. ಸದ್ಯ ಆರೋಪಿಯಿಂದ 8 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಅನುತೀರ್ಣಗೊಂಡಿದ್ದ ಘನಶ್ಯಾಮ್, ಸಣ್ಣ-ಪುಟ್ಟ ಕೆಲಸ ಮಾಡಿ ತಿರುಗಾಡುತ್ತಿದ್ದನು. ಆದರೆ ಒಮ್ಮೆ ಯುವತಿಯ ತಂದೆ ಗೋಪಾಲ್ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ಗಂಗಮ್ಮ ಗುಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆಗಿಳಿದ ಪೊಲೀಸರಿಗೆ ಯಾರೋ ಪರಿಚಯದವರೇ ಈ ಕೃತ್ಯ ಎಸಗಿದ್ದಾರೆ ಅಂತ ತಿಳಿದುಬಂದಿದೆ. ಇದೇ ಅನುಮಾನದಲ್ಲಿ ದೂರುದಾರರ ಮಗಳನ್ನು ವಿಚಾರಣೆ ಮಾಡಿದಾಗ ಅಸಲಿ ವಿಷಯ ಹೊರಗೆ ಬಂದಿದೆ. ಇದನ್ನೂ ಓದಿ:ಸ್ನಾನಕ್ಕೆಂದು ಬಾತ್‍ರೂಮಿಗೆ ಹೋದ ಮಹಿಳೆಯ ಅನುಮಾನಾಸ್ಪದ ಸಾವು

    ದೂರದಾರರ ಮಗಳಿಗೆ ಆರೋಪಿ ಘನಶ್ಯಾಮ್ ಇನ್​ಸ್ಟಾಗ್ರಾಮ್​ನಲ್ಲಿ ಪರಿಚಯ ಆಗಿದ್ದ. ಹೀಗೆ ಪರಿಚಯ ಆದ ಮೇಲೆ ಕಷ್ಟ ಇದೆ ಎಂದು ಯುವತಿ ಬಳಿ ಚಿನ್ನ ಕೇಳಿದ್ದ. ಮೊದಲಿಗೆ ಯುವತಿ ಪೋಷಕರಿಗೆ ತಿಳಿಸದೇ 10 ಗ್ರಾಂ ಚಿನ್ನ ನೀಡಿದ್ದಳು. ಬಳಿಕ ಜೊತೆಗೂಡಿ ಒಟ್ಟಿಗೆ ಸುತ್ತಾಡುತ್ತಿದ್ದರು. ಯುವತಿಯ ವೀಕ್ನೆಸ್ ಅರಿತ ಆರೋಪಿ ಮತ್ತೆ ಚಿನ್ನಾಭರಣ ನೀಡುವಂತೆ ಒತ್ತಡ ಹೇರಿದ್ದಾನೆ. ಚಿನ್ನಾಭರಣ ನೀಡದಿದ್ದರೆ ನನ್ನ ಜೊತೆ ಸುತ್ತಾಡಿದ ವೀಡಿಯೋ ಕುಟುಂಬಸ್ಥರಿಗೆ ಕಳುಹಿಸಿ ಮಾನ ಹರಾಜು ಹಾಕುವುದಾಗಿ ಬೆದರಿಸಿದ್ದ. ಇದರಿಂದ ಹೆದರಿದ ಯುವತಿ ಆರೋಪಿ ಅಣತಿಯಂತೆ ಚಿನ್ನ ನೀಡಿದ್ದಳು. ಆದರೆ ಇಷ್ಟಕ್ಕೆ ಸುಮ್ಮನಾಗದ ಆರೋಪಿ ಪೋಷಕರಿಲ್ಲದ ವೇಳೆ ಮನೆಗೆ ಬಂದು ಇದ್ದ ಚಿನ್ನವನ್ನೆಲ್ಲಾ ಕಳ್ಳತನ ಮಾಡಿದ್ದಾನೆ. ಇದನ್ನೂ ಓದಿ:ಎಲ್ಲೆಲ್ಲೋ ರೇಪ್ ಕೇಸ್ ಆದ್ರೇ ನನ್ನನ್ನು ಯಾಕೆ ಕೇಳ್ತಿರಾ: ಜಿ.ಎಂ ಸಿದ್ದೇಶ್ವರ್ ಉಡಾಫೆ

  • ಮದುವೆ ನಿಶ್ಚಯವಾಗಿದ್ದ ಯುವತಿ – ವಿವಾಹಿತ ಪ್ರೇಮಿಯೊಂದಿಗೆ ಆತ್ಮಹತ್ಯೆಗೆ ಶರಣು

    ಮದುವೆ ನಿಶ್ಚಯವಾಗಿದ್ದ ಯುವತಿ – ವಿವಾಹಿತ ಪ್ರೇಮಿಯೊಂದಿಗೆ ಆತ್ಮಹತ್ಯೆಗೆ ಶರಣು

    ಚಿತ್ರದುರ್ಗ: ಮದುವೆ ನಿಶ್ಚಯವಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಹಿರಿಯೂರು ತಾಲೂಕಿನ ಕೂನಿಕೆರೆ ಗ್ರಾಮದ ಬಳಿ ನಡೆದಿದೆ.

    ಕಳೆದ ಆರು ತಿಂಗಳ ಹಿಂದೆ ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮಕ್ಕೆ ಪೈಂಟ್ ಕೆಲಸಕ್ಕಾಗಿ ಬಂದಿದ್ದ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಮೂಲದ ತಿಪ್ಪೇಸ್ವಾಮಿ ಎಂಬ ಆಸಾಮಿಯು, ಪುಷ್ಪಲತಾರನ್ನು ಪ್ರೇಮಿಸಿದ್ದನು. ಈ ತಿಪ್ಪೇಸ್ವಾಮಿಗೆ ಈಗಾಗಲೇ ವಿವಾಹವಾಗಿದ್ದು, ತನ್ನ ಪತ್ನಿಗೆ ಮಕ್ಕಳಾಗದ ಹಿನ್ನೆಲೆಯಲ್ಲಿ ಉಡುವಳ್ಳಿ ಗ್ರಾಮದ ಪುಷ್ಪಲತಾರನ್ನು ಪ್ರೇಮಿಸಿ, ಅದೇ ಗ್ರಾಮಕ್ಕೆ ವಾರಕ್ಕೊಮ್ಮೆ ಬಂದು ಹೋಗುತ್ತಿದ್ದ.

    ಪುಷ್ಪಲತ ಹಾಗೂ ತಿಪ್ಪೇಸ್ವಾಮಿ ನಡುವಿನ ಪ್ರೀತಿ ಅಗಾಧವಾಗಿ ಬೆಳೆದಿದ್ದು, ಆಕೆಯನ್ನು ವಿವಾಹವಾಗುವುದಾಗಿ ಪುಷ್ಪಲತಳ ಮನೆಯಲ್ಲಿ ತಿಪ್ಪೇಸ್ವಾಮಿ ಕೇಳಿದ್ದನು. ಆದರೆ ಅವರ ಪ್ರೀತಿಗೆ ಪುಷ್ಪ ಅವರ ಕುಟುಂಬಸ್ಥರು ವಿರೋಧಿಸಿ, ಯುವತಿಯ ಸೋದರ ಮಾವನ ಜೊತೆ ಮದುವೆ ನಿಶ್ಚಯ ಮಾಡಿದ್ದರು. ಇದನ್ನೂ ಓದಿ:ಮನೆಗೆ ಬಂದ್ರೆ ಚೆನ್ನಾಗಿ ನೋಡಿಕೊಳ್ಳುತ್ತೇವೆ, ಬರದೆ ಇದ್ರೆ ನಮ್ಮಪ್ಪನ ಮನೆ ಗಂಟು ಏನೂ ಹೋಗಲ್ಲ: ರೇವಣ್ಣ

    ಇದರಿಂದಾಗಿ ಮನನೊಂದ ಪುಷ್ಪಲತ ಹಾಗೂ ತಿಪ್ಪೇಸ್ವಾಮಿ ಆಗಸ್ಟ್ 13 ರಂದು ಮನೆ ಬಿಟ್ಟು ತೆರಳಿದ್ದರು. ನಾಪತ್ತೆಯಾದ ಮಗಳ ಪತ್ತೆಗಾಗಿ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಆಕೆಯ ತಂದೆ ದೂರನ್ನು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿವ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಇಂದು ಕೂನಿಕೆರೆ ಗ್ರಾಮ ಬಳಿಯ ಕಾಲುವೆ ಬಳಿ ಇವರಿಬ್ಬರ ಶವ ಪತ್ತೆಯಾಗಿವೆ.

    ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರೆಸಿದ್ದಾರೆ. ಯುವತಿಯನ್ನು ಓದಿಸಿ ಸರ್ಕಾರಿ ಕೆಲಸಕ್ಕೆ ಸೇರಿಸಬೇಕೆಂಬ ಕನಸು ಕಂಡಿದ್ದ ಆಕೆಯ ತಂದೆ ಕನಸು ನುಚ್ಚುನೂರಾಗಿದೆ. ಇನ್ನೂ ಶವಗಳು ಪತ್ತೆಯಾದ ಹಿನ್ನೆಲ್ಲೆಯಲ್ಲಿ ಸ್ಥಳಕ್ಕೆ ಗ್ರಾಮದ ಮಹಿಳೆಯರು ಹಾಗು ಗ್ರಾಮಸ್ಥರು ಜಮಾವಣೆಯಾಗಿದ್ದೂ, ಹಿರಿಯೂರು ತಾಲೂಕು ಆಸ್ಪತ್ರೆಗೆ ಎರಡು ಶವಗಳನ್ನು ರವಾನಿಸಿಸಲಾಗಿದೆ. ಅಲ್ಲಿಗೂ ಧಾವಿಸಿರುವ ಯುವತಿಯ ಸಂಬಂಧಿಗಳು ಈ ಯುವತಿಯ ಸಾವಿನ ಹಿಂದೆ ಕೊಲೆಯ ಸಂಚು ನಡೆದಿರಬಹುದು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂಬ ಆಗ್ರಹ ಕೇಳಿಬಂದಿದೆ.ಇದನ್ನೂ ಓದಿ:ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

  • ನಡು ರಸ್ತೆಯಲ್ಲಿ ಕ್ಯಾಬ್ ಡ್ರೈವರ್​​​ಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

    ನಡು ರಸ್ತೆಯಲ್ಲಿ ಕ್ಯಾಬ್ ಡ್ರೈವರ್​​​ಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

    ಲಕ್ನೋ: ಲಕ್ನೋ ನಗರದ ಅವಧ್ ಸಿಗ್ನಲ್‍ನಲ್ಲಿ ರಸ್ತೆ ಮಧ್ಯೆ ಯುವತಿಯೊಬ್ಬಳು ಕ್ಯಾಬ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋವನ್ನು ಮೇಘ್ ಅಪ್‍ಡೇಟ್ಸ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಯುವತಿ ಕ್ಯಾಬ್ ಡ್ರೈವರ್​​​ಗೆ ನಿರಂತರವಾಗಿ ಹೊಡೆದಿದ್ದಾರೆ. ಈ ವೇಳೆ ಗಲಾಟೆ ಮಧ್ಯೆ ಕ್ಯಾಬ್ ಡ್ರೈವರ್‌ನನ್ನು ರಕ್ಷಿಸಲು ಬಂದ ವ್ಯಕ್ತಿ ಕೂಡ ಯುವತಿಯಿಂದ ಹಲ್ಲೆಗೊಳಗಾಗಿದ್ದಾರೆ. ಜೊತೆಗೆ ಯುವತಿಗೆ ಕಾರು ಗುದ್ದಿರುವುದಾಗಿ ಹೇಳುತ್ತಿರುವುದನ್ನು ಕೇಳಬಹುದಾಗಿದೆ.

    ವೀಡಿಯೋದಲ್ಲಿ ಮಹಿಳೆ ಜೀಬ್ರಾ ಕ್ರಾಸಿಂಗ್ ಮಧ್ಯೆ ನಿಂತು ಕ್ಯಾಬ್ ಚಾಲಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿ ಟ್ರಾಫಿಕ್ ಜಾಮ್ ಆಗಿದೆ. ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಜಗಳವನ್ನು ತಪ್ಪಿಸಲು ಪ್ರಯತ್ನಿಸುತ್ತಿರುತ್ತಾರೆ. ಆದರೂ ಮಹಿಳೆ ಬಿಡದೇ ಚಾಲಕನನ್ನು ಎಳೆದಾಡಿಕೊಂಡು ಕಪಾಳಕ್ಕೆ ಹೊಡೆಯುತ್ತಲೇ ಇರುತ್ತಾರೆ. ಈ ವೇಳೆ ಚಾಲಕ ಮಹಿಳಾ ಪೊಲೀಸ್ ಠಾಣೆಗೆ ಕರೆ ಮಾಡುವಂತೆ ಸ್ಥಳೀಯರಿಗೆ ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ:ಇಲ್ಲಿ ಕಿಸ್ ಮಾಡುವಂತಿಲ್ಲ – ಜೋಡಿಗಳ ಚುಂಬನದಿಂದ ಬೇಸತ್ತ ಸೊಸೈಟಿ

  • ಶ್ರೀಮಂತನ ಸ್ನೇಹ ಬೆಳೆಸಿ ಸುಲಿಗೆ – ಹನಿಟ್ರ್ಯಾಪ್ ಸಂಚುಕೋರರಿಗೆ ಜೀವಾವಧಿ ಶಿಕ್ಷೆ

    ಶ್ರೀಮಂತನ ಸ್ನೇಹ ಬೆಳೆಸಿ ಸುಲಿಗೆ – ಹನಿಟ್ರ್ಯಾಪ್ ಸಂಚುಕೋರರಿಗೆ ಜೀವಾವಧಿ ಶಿಕ್ಷೆ

    ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸಲುಗೆ ಬೆಳೆಸಿಕೊಂಡು ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಹಚರರೊಂದಿಗೆ ಚಾಕುವಿನಿಂದ ಇರಿದು ಸುಲಿಗೆ ಮಾಡಿದ ಯುವತಿ ಸೇರಿದಂತೆ ನಾಲ್ವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.

    ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಹುಬ್ಬಳ್ಳಿಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದು, ಸುಲಿಗೆಕೋರರು ಕಂಬಿ ಪಾಲಾಗಿದ್ದಾರೆ.

    ಏನಿದು ಪ್ರಕರಣ?
    ಶ್ರೀಮಂತರನ್ನು ಪತ್ತೆ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ ಸಲುಗೆಯಿಂದ ಹಣ ಕೀಳುವ ಉದ್ದೇಶದಿಂದ ಹುಬ್ಬಳ್ಳಿಯ ನಾಲ್ವರು ಹೊಂಚು ಹಾಕಿದ್ದರು. ಅನಘಾ ವಡವಿ ಎನ್ನುವ ಯುವತಿಯೊಂದಿಗೆ ಸ್ನೇಹ ಬೆಳೆಸಿದ ಬಲಬೀರ ದುರ್ಗಾಜಿರಾವ್ ಎಂಬವರನ್ನು 2017ರ ಜುಲೈ 30 ರಂದು ಅನಘಾ ಕಾರವಾರ ರಸ್ತೆಯ ಸೈನಿಕ ಶಾಲೆಯ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ಯಿದ್ದಳು. ಈ ವೇಳೆಗೆ ಅಲ್ಲಿಗೆ ಬಂದ ಅನಘಾ ಸಹಚರರಾದ ರಮೇಶ್ ಹಜಾರೆ, ಗಣೇಶ ಶೆಟ್ಟಿ, ವಿನಾಯಕ ಹಜಾರೆ, ಬಲಬೀರ ಮೇಲೆ ದಾಳಿ ಮಾಡಿದ್ದರು. ನಮ್ಮ ಹುಡುಗಿಯನ್ನ ರೇಪ್ ಮಾಡಲು ಬಂದಿದ್ದೀಯ ಎಂದು ಬೆದರಿಸಿ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಹನಿಟ್ರ್ಯಾಪ್ ಗೆ ಒಳಗಾದ ಬಲಬೀರ ತನ್ನ ಬಳಿ ಹಣವಿಲ್ಲ ಎಂದಾಗ ಸುಲಿಗೆಕೋರರು ಬಲಬೀರಗೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

    ಬಲಬೀರ ಬಳಿಯ ಇದ್ದ ಮೊಬೈಲ್ ಫೋನ್, ಎಟಿಎಂ ಕಾರ್ಡ್ ಕಿತ್ತುಕೊಂಡು ಹತ್ತಿರದ ಎಟಿಎಂಗೆ ಕರೆದುಕೊಂಡು ಹೋಗಿ 10 ಸಾವಿರ ರೂಪಾಯಿ ಡ್ರಾ ಮಾಡಿಸಿಕೊಂಡು ಬಲಬೀರನನ್ನ ಸಿದ್ಧಾರೂಢ ಮಠದ ಬಳಿ ಬಿಟ್ಟು ಪರಾರಿಯಾಗಿದ್ದರು. ಘಟನೆಯ ಕುರಿತು ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್. ಗಂಗಾಧರ್ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲು ಆದೇಶಿಸಿದ್ದಾರೆ.

    ಆರೋಪಿಗಳಾದ ನಾಲ್ವರಿಗೆ ಜೀವಾವಧಿ ಶಿಕ್ಷೆ ಹಾಗೂ ರಮೇಶ್, ಗಣೇಶ್. ವಿನಾಯಕ್‍ಗೆ ತಲಾ 17,500 ರೂಪಾಯಿ ದಂಡ ಹಾಗೂ ಆರೋಪಿತಳಾದ ಯುವತಿ ಅನಘಾಗೆ 15,000 ಸಾವಿರ ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

  • ಗ್ರಾಮ ಪಂಚಾಯತಿ ಕಾರ್ಯದರ್ಶಿ ಆತ್ಮಹತ್ಯೆ – ಅಕ್ಕ, ತಂದೆ ಹಾದಿಯನ್ನೇ ಹಿಡಿದ ಯುವತಿ

    ಗ್ರಾಮ ಪಂಚಾಯತಿ ಕಾರ್ಯದರ್ಶಿ ಆತ್ಮಹತ್ಯೆ – ಅಕ್ಕ, ತಂದೆ ಹಾದಿಯನ್ನೇ ಹಿಡಿದ ಯುವತಿ

    ಕೋಲಾರ: ತಂದೆ ಇಲ್ಲದ ಕುಟುಂಬದ ಜವಾಬ್ದಾರಿ ಹೊತ್ತಿದ್ದ, ಗ್ರಾಮ ಪಂಚಾಯತಿಯೊಂದರ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಈ ಘಟನೆ ಕೋಲಾರದಲ್ಲಿ ನಡೆದಿದ್ದು, ಕಾವ್ಯಾಂಜಲಿ ಮೃತ ಯುವತಿ. ಕಾವ್ಯಾಂಜಲಿ ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಈಕೆ ನಿನ್ನೆ ರಾತ್ರಿ ಇದ್ದಕ್ಕಿದಂತೆ ತನ್ನದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಿನ್ನೆ ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ ತಡವಾಗಿ ಮನೆಗೆ ಬಂದ ಕಾವ್ಯಾ, ತನ್ನ ತಾಯಿಗೆ ತಿನ್ನೋದಕ್ಕೆ ಏನಾದರೂ ತೆಗೆದುಕೊಂಡು ಬರುವಂತೆ ಕೇಳಿದ್ದಾಳೆ. ತಾಯಿ ಇಷ್ಟೊತ್ತಿಗೆ ಏನು ಸಿಗುವುದಿಲ್ಲ ಎಂದು ಹೇಳಿದರೂ ಕೇಳದೇ, ಏನಾದರೂ ಬೇಕೆ,ಬೇಕು ಎಂದು ಹಠ ಮಾಡಿದ್ದಾರೆ.

    ಆಗ ತಾಯಿ ಪುಷ್ಟಲತಾ ಬಜ್ಜಿ ಬೊಂಡ ಸಿಗಬಹುದು ತೆಗೆದುಕೊಂಡು ಬರುತ್ತೀನಿ ಎಂದು ಮನೆಯಿಂದ ಹೊರಹೋಗಿದ್ದಾರೆ. ವಾಪಸ್ಸು ಬರುವಷ್ಟರಲ್ಲಿ ಮನೆಯ ರೂಮಿನಲ್ಲಿ ಕಾವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಗೆ ಬಂದ ತಾಯಿ ಮನೆಯ ಬಾಗಿಲು ತೆರೆಯದ್ದನ್ನು ಕಂಡು ಬೇರೊಂದು ಕೀ ಬಳಸಿ ಮನೆಯ ಬಾಗಿಲು ತೆಗೆದು ನೋಡಿದಾಗ ಕಾವ್ಯ ಸಾವನ್ನಪಿರುವುದನ್ನು ನೋಡಿದ್ದಾರೆ. ಇನ್ನು ಜೀವ ಇದೆ ಎಂದು ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಯಲಿಲ್ಲ. ಕಾವ್ಯಾಳಿಗೆ ತಂದೆ, ತಾಯಿ, ಅಕ್ಕ, ತಂಗಿ, ಸ್ನೇಹಿತೆ ಎಲ್ಲವೂ ತಾಯಿನೇ ಆಗಿದ್ದರೂ ಅವರ ಬಳಿಯೂ ಕಾವ್ಯ ಏನು ಹೇಳಿಕೊಂಡಿಲ್ಲ. ಹಾಗಾಗಿ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಸದ್ಯ ತಿಳಿದು ಬಂದಿಲ್ಲ.

    ಈ ಕುಟುಂಬದಲ್ಲಿ ಇದೇ ಮೊದಲ ಆತ್ಮಹತ್ಯೆಯಲ್ಲ, ಈ ಹಿಂದೆ ಕೆಲವು ಹಣಕಾಸಿನ ತೊಂದರೆಯಿಂದ ಕಾವ್ಯಾಳ ಅಕ್ಕ ಆತ್ಮಹತ್ಯೆ ಮಾಡಿಕೊಂಡಿದ್ದಳು. ಎರಡು ವರ್ಷಗಳ ಹಿಂದೆ ಕಾವ್ಯಾಳ ತಂದೆ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮನೆಗೆ ಆಧಾರ ಸ್ಥಂಬವಾಗಿದ್ದ ಕಾವ್ಯಾ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿ ಪಿಡಿಓ ಆಗಿದ್ದ, ಇವರ ತಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ನಂತರ ಅನುಕಂಪದ ಆಧಾರದಲ್ಲಿ ತಂದೆ ಕೆಲಸವನ್ನು ಕಾವ್ಯಗೆ ನೀಡಲಾಗಿತ್ತು. ಸದ್ಯ ಈ ಕುಟುಂಬದಲ್ಲಿ ಬೇರೆ ಯಾರು ಇರಲಿಲ್ಲ. ತಾಯಿ ಮಗಳು ಇಬ್ಬರೇ ನನಗೆ ನೀನು ನಿನಗೆ ನಾನು ಎನ್ನುವಂತೆ ಜೀವನ ನಡೆಸುತ್ತಿದ್ದರು.

    ಈ ಕುಟುಂಬ ಕೂಡಾ ಕಾವ್ಯಾಳ ಮೇಲೆ ಅವಲಂಬಿತವಾಗಿತ್ತು, ಆದರೆ ಇದ್ದಕ್ಕಿದಂತೆ ಕಾವ್ಯಾ ಹೀಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಕೆಲಸ ಮಾಡುತ್ತಿದ್ದ ಬೆಗ್ಲಿ ಹೊಸಹಳ್ಳಿ ಪಂಚಾಯಿತಿಯಲ್ಲಿ ಎಲ್ಲರೊಟ್ಟಿಗೆ ಒಳ್ಳೆಯ ಪ್ರೀತಿ, ವಿಶ್ವಾಸ ಗಳಿಸಿದ್ದ ಕಾವ್ಯಾಳಿಗೆ ಕೆಲಸದಲ್ಲೂ ಯಾವುದೇ ಒತ್ತಡ ಇರಲಿಲ್ಲ. ಹಾಗಾಗಿ ಕಾವ್ಯಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರಿಗೂ ಕಾವ್ಯಾಳ ಆತ್ಮಹತ್ಯೆ ಆಘಾತ ಉಂಟುಮಾಡಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಕಾವ್ಯಾ ಆತ್ಮಹತ್ಯೆಗೂ ಮುನ್ನ ತನ್ನ ಫೋನ್ ಒಡೆದು ಹಾಕಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸರಣಿ ಆತ್ಮಹತ್ಯೆಯಿಂದ ನೊಂದು ಇತ್ತೀಚೆಗೆ ನೆಮ್ಮದಿಯಾಗಿದ್ದ ಸಂಸಾರದಲ್ಲಿ ಉಳಿದ ತಾಯಿಗೆ ಈಗ ಮತ್ತೊಂದು ಆತ್ಮಹತ್ಯೆ ಆಘಾತವನ್ನುಂಟು ಮಾಡಿರುವುದಂತೂ ಸುಳ್ಳಲ್ಲ. ಇದನ್ನೂ ಓದಿ: ಅಂಬುಲೆನ್ಸ್ ಚಾಲಕನ ಅಜಾಗರೂಕತೆಗೆ ವ್ಯಕ್ತಿ ಬಲಿ – ಸಂಬಂಧಿಕರಿಂದ ಆರೋಪ