Tag: ಪಬ್ಲಿಕ್ ಟಿವಿ Zamir Ahmed khan

  • ನಾನು ಉದ್ದೇಶ ಪೂರ್ವಕವಾಗಿ ಹೇಳಿಲ್ಲ, ಕ್ಷಮೆ ಕೇಳ್ತೇನೆ: ಜಮೀರ್ ಅಹ್ಮದ್

    ನಾನು ಉದ್ದೇಶ ಪೂರ್ವಕವಾಗಿ ಹೇಳಿಲ್ಲ, ಕ್ಷಮೆ ಕೇಳ್ತೇನೆ: ಜಮೀರ್ ಅಹ್ಮದ್

    ಬೆಂಗಳೂರು: ಸವಿತಾ ಸಮಾಜ ಸಮುದಾಯಕ್ಕೆ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಕ್ಷಮೆ ಕೇಳಿದ್ದಾರೆ.

    ಜೂನ್ 9ರಂದು, ಚಾಮರಾಜಪೇಟೆಯಲ್ಲಿ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ, ವಿವಿಧ ಸಮುದಾಯಗಳಿಗೆ ಪರಿಹಾರ ಘೋಷಣೆ ಕುರಿತು ಸರ್ಕಾರಕ್ಕೆ ಸಲಹೆ ನೀಡುವ ವೇಳೆ, ಬಾಯ್ತಪ್ಪಿನಿಂದ ಸವಿತಾ ಸಮಾಜದ ಬಗ್ಗೆಯ ನಿಷೇಧಿತ ಪದವನ್ನು ಬಳಕೆ ಮಾಡಿದ್ದರು. ಶಾಸಕರ ಈ ಹೇಳಿಕೆಯನ್ನು ರಾಜ್ಯ ಸವಿತಾ ಸಮಾಜ ತೀವ್ರವಾಗಿ ಖಂಡಿಸಿ, ನಿಷೇಧಿತ ಪದವನ್ನ ವಾಪಸ್ ಪಡೆದು, ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಕಾನೂನಾತ್ಮಕ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಸವಿತಾ ಸಮಾಜ ಸಮುದಾಯದ ಆಕ್ರೋಶಕ್ಕೆ ಮಣಿದ, ಶಾಸಕ ಜಮೀರ್, ಬಾಯ್ತಪ್ಪಿನಿಂದ ಆ ಪದ ಬಳಕೆಯಾಗಿದೆ. ಬೇಕು ಎಂದು ಆ ಪದ ಬಳಕೆ ಮಾಡಿಲ್ಲ. ಆ ಪದ ಬಳಕೆಯಿಂದ ನನಗೂ ನೋವಾಗಿದೆ. ನಿಮ್ಮ ಮನಸ್ಸಿಗೆ ನೋವಾಗಿದ್ದರೆ, ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

    ಜಮೀರ್ ಹೇಳಿಕೆ ವೈಯಕ್ತಿಕ:
    ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

    ‘ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಡಿಕೆ ಶಿವಕುಮಾರ್‍ರವರು ತಿಳಿಸಿದ್ದಾರೆ.

    ಜಮೀರ್ ಅಹಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಟೀಕೆ, ಹೇಳಿಕೆ ನೀಡುವ ಮುನ್ನ ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇದು ಪುನಾರವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಿವಕುಮಾರ್‍ರವರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಜಮೀರ್ ಅಹ್ಮದ್ ವಿರುದ್ಧ ಸವಿತಾ ಸಮಾಜ ಆಕ್ರೋಶ

  • ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ: ಜಮೀರ್ ಅಹ್ಮದ್

    ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ: ಜಮೀರ್ ಅಹ್ಮದ್

    ಕೋಲಾರ: ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯಮಾಡಿದರು.

    ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‍ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ. ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ, ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನು ಓದಿ:ಕೊರೊನಾ ನಿಯಮ ಮರೆತು ಲಸಿಕೆಗೆ ಮುಗಿಬಿದ್ದ ಜನರು

    ಪಿಎಂ ಅವರಿಗೆ ತೈಲ ಬೆಲೆ ಏರಿಕೆಯ ತೆರಿಗೆ ಕಡಿಮೆ ಮಾಡಲು ಆಗುತ್ತಿಲ್ಲ. ಕೊರೊನಾ ಸಮಯದಲ್ಲಿ ಯಾರಾದರೂ ಮೋಸ ಮಾಡಿ ಹಣ ತಿಂದರೆ ಹುಳು ಬೀಳುತ್ತೆ. ರಾಜ್ಯ ಸರ್ಕಾರ ಆಟೋ ಚಾಲಕರಿಗೆ ನೀಡಿರುವ ಪರಿಹಾರ ನಾಮಕಾವಸ್ಥೆ, ಅದು ಅಪ್ ಲೋಡ್ ಮಾಡಲು ಅಪ್ಲಿಕೇಶನ್ನೇ ಓಪನ್ ಆಗುತ್ತಿಲ್ಲ, ಅದಕ್ಕೆ ಬದಲಾಗಿ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ 10 ಸಾವಿರ ರೂಪಾಯಿ ಹಾಕಿ. ತಮಿಳುನಾಡಿನಲ್ಲಿ ಅಲ್ಲಿನ ಮುಖ್ಯಮಂತ್ರಿ ಸ್ಟಾಲಿನ್ ಹಣ ಹಾಕಿದ್ದಾರೆ. ಅವರದು ಜನ ಪರ ಕಾಳಜಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

    ನಿನ್ನೆ ಪ್ರಧಾನಿ ಮೋದಿ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಆದರೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಟೆಸ್ಟಿಂಗ್ ಕಡಿಮೆ ಮಾಡಿದ್ದಾರೆ. ಮೊದಲು ಎರಡುವರೆ ಲಕ್ಷ ಟೆಸ್ಟಿಂಗ್ ಮಾಡುತ್ತಿದ್ದರು. ಈಗ 94 ಸಾವಿರ ಜನರಿಗೆ ಟೆಸ್ಟಿಂಗ್ ಮಾಡುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ಈಗ ನೋಡಿದರೆ ವ್ಯಾಕ್ಸಿನ್ ಸಿಗುತ್ತಿಲ್ಲ. ಜನರಿಗೆ ವ್ಯಾಕ್ಸಿನ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲೇ ಅಪಪ್ರಚಾರ ಮಾಡುತ್ತಿದ್ದಾರೆ. ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು. ಇದನ್ನು ಓದಿ:ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ