Tag: ಪಬ್ಲಿಕ್ ಟಿ.ವಿ

  • ಅಡುಗೆ ಭಟ್ಟನಿಗೆ ಕೊರೊನಾ- ಬೆಳಗ್ಗೆ ಮದುವೆ, ಸಂಜೆ ನವಜೋಡಿ ಕ್ವಾರಂಟೈನ್

    ಅಡುಗೆ ಭಟ್ಟನಿಗೆ ಕೊರೊನಾ- ಬೆಳಗ್ಗೆ ಮದುವೆ, ಸಂಜೆ ನವಜೋಡಿ ಕ್ವಾರಂಟೈನ್

    ತುಮಕೂರು: ದಿನೇ ದಿನೇ ಕೊರೊನಾ ತನ್ನ ಅಟ್ಟಹಾಸ ಮಿತಿಮೀರುತ್ತಿದೆ. ಮದುವೆ ಮನೆ ಅಡುಗೆ ಭಟ್ಟನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿ ಕೊರೊನಾದಿಂದ ಸಂಜೆ ವೇಳೆಗೆ ಕ್ವಾರಂಟೈನ್‍ನಲ್ಲಿ ಲಾಕ್ ಆಗಿದ್ದಾರೆ.

    ಈ ಕೊರೊನಾ ಜಿಲ್ಲೆಯ ಗುಬ್ಬಿಯ ಹೇರೂರಿನ ನವ ಜೋಡಿಯೊಂದು ಕ್ವಾರಂಟೈನ್ ಸೇರುವಂತೆ ಮಾಡಿದೆ. ವಧುವರರಿಗೆ ಕೊರೊನಾ ಬಂದಿಲ್ಲ. ಬದಲಾಗಿ ಮದುವೆ ಮನೆಯಲ್ಲಿ ಅಡುಗೆ ಮಾಡಿದ್ದ ಅಡುಗೆ ಭಟ್ಟನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ನವ ಜೋಡಿ ಸೇರಿದಂತೆ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ.

    ಹೇರೂರಿನ ವರ ಗಿರೀಶ್‍ಗೆ ಕಾಟೇನಹಳ್ಳಿಯ ವಧು ಮೀನಾಕ್ಷಿಯ ಜೊತೆ ವಿವಾಹವಾಗಿತ್ತು. ಹುಡುಗನ ಮನೆ ಆವರಣದಲ್ಲೇ ಮದುವೆ ನಡೆದಿದೆ. ಈ ಮದುವೆಗೆ ಅಡುಗೆ ಮಾಡಲು ಬಂದ ಭಟ್ಟ ಚಿಟ್ಟದ ಕುಪ್ಪೆ ನಿವಾಸಿ 50 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಜೂನ್ 14 ರಂದು ಈತ ಸ್ವಾಬ್ ಕೊಟ್ಟು ಬಂದಿದ್ದ. ರಿಪೋರ್ಟ್ ಬರುವವರೆಗೂ ಈತನನ್ನು ಅಧಿಕಾರಿಗಳು ಕ್ವಾರಂಟೈನ್‍ನಲ್ಲಿ ಇಡಬೇಕಿತ್ತು. ಆದರೆ ಈತ ಎಲ್ಲಾ ಕಡೆ ಓಡಾಡಿಕೊಂಡು ಅಡುಗೆ ಕೆಲಸ ಮಾಡಿಕೊಂಡಿದ್ದ.

    ಜೂನ್ 18 ರಂದು ಅಡುಗೆ ಭಟ್ಟನ ಪಾಸಿಟಿವ್ ರಿಪೋರ್ಟ್ ಬಂದಿದೆ. ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು ಅಡುಗೆ ಭಟ್ಟ ಇದ್ದ ಮದುವೆ ಮನೆಗೆ ದಾಳಿ ಮಾಡಿದ್ದಾರೆ. ಅಡುಗೆ ಭಟ್ಟ, ವಧುವರರು, ಕ್ಯಾಮೆರಾಮನ್, ವಧು ಮತ್ತು ವರನ ಹತ್ತಿರ ಸಂಪರ್ಕ ಇದ್ದವರು ಸೇರಿ ಒಟ್ಟು 56 ಜನರನ್ನು ಕ್ವಾರಂಟೈನ್ ಮಾಡಿದ್ದಾರೆ ಎಂದು ವರನ ಸಂಬಂಧಿ ಪಾತರಾಜು ಹೇಳಿದ್ದಾರೆ.

    ಅಂದಹಾಗೆ ಸೋಂಕಿತ ಅಡುಗೆ ಭಟ್ಟನ ಟ್ರಾವೆಲ್ ಹಿಸ್ಟರಿ ಏನೂ ಇಲ್ಲ. ಟಿ.ಬಿ ಹಾಗೂ ಹೃದಯ ಸಂಬಂಧಿ ಕಾಯಿಲೆ ಇದ್ದ ಈತ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿಂದ ಸೋಂಕು ಈತನಿಗೆ ಹರಡಿರಬಹುದು ಎಂದು ಶಂಕಿಸಲಾಗಿದೆ.

  • ಕೊರೊನಾ ಹಾಟ್‍ಸ್ಪಾಟ್ ಆದ ಭಟ್ಕಳ ಸೀಲ್‍ಡೌನ್ – ಮೆಡಿಕಲ್, ಪೆಟ್ರೋಲ್ ಎಲ್ಲವೂ ಬಂದ್

    ಕೊರೊನಾ ಹಾಟ್‍ಸ್ಪಾಟ್ ಆದ ಭಟ್ಕಳ ಸೀಲ್‍ಡೌನ್ – ಮೆಡಿಕಲ್, ಪೆಟ್ರೋಲ್ ಎಲ್ಲವೂ ಬಂದ್

    – ಭಟ್ಕಳಕ್ಕೆ ಮಂಗಳೂರು ಆಸ್ಪತ್ರೆಯೇ ಕಂಟಕ

    ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ 12 ಕೇಸ್ ಪತ್ತೆಯಾಗಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಇಡೀ ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ. ಐದೂವರೆ ತಿಂಗಳ ಮಗುವಿನಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇಡೀ ಭಟ್ಕಳ ನಗರವನ್ನು ಸೀಲ್‍ಡೌನ್ ಮಾಡಲಾಗಿದೆ.

    ಉತ್ತರಕನ್ನಡ ಜಿಲ್ಲೆಯ ಭಟ್ಕಳವೀಗ ಕೊರೊನಾ ಹಾಟ್‍ಸ್ಪಾಟ್ ತಾಣವಾಗಿದೆ. ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಭಟ್ಕಳದಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬದಿಂದಲೇ ಈ ಕೇಸ್ ಪತ್ತೆಯಾಗಿದೆ. ಮೇ 5ರಂದು ಪಟ್ಟಣದ ಮದೀನಾ ಕಾಲೋನಿಯ 18 ವರ್ಷದ ಯುವತಿ ರೋಗಿ ನಂಬರ್ 659ರಿಂದಲೇ 12 ಜನರಿಗೆ ಸೋಂಕು ತಗುಲಿದೆ. ಯುವತಿಯ ಕುಟುಂಬದ 10 ಮಂದಿ ಹಾಗೂ ಪಕ್ಕದ ಮನೆಯಾಕೆ, ಆಕೆ ಗೆಳತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

    ಅತೀ ಹೆಚ್ಚು ಪಾಸಿಟಿವ್ ಬಂದ ಭಟ್ಕಳದ ಮದೀನ ಕಾಲೋನಿಯನ್ನು ಹಾಟ್‍ಸ್ಪಾಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಇಡೀ ತಾಲೂಕನ್ನ ಕಂಟ್ರೋಲ್‍ಗೆ ತೆಗೆದುಕೊಂಡಿದೆ. ಇಡೀ ಭಟ್ಕಳವನ್ನು 5 ವಲಯಗಳಾಗಿ ವಿಂಗಡಿಸಿ ಪ್ರತಿ ವಲಯಕ್ಕೆ ಓರ್ವ ಪೊಲೀಸ್ ಅಧಿಕಾರಿ ಹಾಗೂ ವಲಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇಂದಿನಿಂದ ಭಟ್ಕಳದಲ್ಲಿ ಖಾಸಗಿ ವೈದ್ಯಕೀಯ ಸೇವೆ, ಮೆಡಿಕಲ್, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ ಎಂದು ಡಿಸಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

    ಸೋಂಕಿಗೆ ಒಳಗಾದ ಹನ್ನೆರಡು ಜನರನ್ನ ಕಾರವಾರದ ವಿಶೇಷ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಭಟ್ಕಳ ಮೂಲದ ಮತ್ತೆರಡು ಕುಟುಂಬದವರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಅವರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ಬೇರೆಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಮಾಹಿತಿ ನೀಡುವಂತೆ ಡಿಸಿ ಕೋರಿದ್ದಾರೆ.

    ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಟ್ಟು 24 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 12 ಜನರು ಈಗಾಗಲೇ ಗುಣಮುಖರಾಗಿ ಮನೆಗಳನ್ನ ಸೇರಿಕೊಂಡಿದ್ದಾರೆ. ಮತ್ತೆ 12 ಪ್ರಕರಣ ದಾಖಲಾಗಿರುವುದು ಅಧಿಕಾರಿಗಳ ವಲಯಕ್ಕೆ ತಲೆನೋವು ಉಂಟುಮಾಡಿದೆ. ಇವರ ಸಂಖ್ಯೆ ಇನ್ನೆರೆಡು ದಿನದಲ್ಲಿ ಮತ್ತಷ್ಟು ಏರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ.

  • ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

    ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ.

    ಬಂಧಿತನನ್ನು 23 ವರ್ಷದ ಹನಮಂತ ಮಹಾಗುಂಡಪ್ಪ ಹುಣಸಗೇರಿ ಎಂದು ಗುರುತಿಸಲಾಗಿದೆ. ಈತ ಮೇ 17ರಂದು ಗ್ರಾಮ ದೇವತೆಯ ಜಾತ್ರೆ ಸಂದರ್ಭದಲ್ಲಿ ಮನೆಗೆ ನುಗ್ಗಿ ಒಬ್ಬಳೇ ಇದ್ದ 29 ವರ್ಷದ ಬುದ್ಧಿಮಾಂದ್ಯ ಯುವತಿಯನ್ನು ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಕತ್ತು ಹಿಸುಕಿ ಕೊಲೆಗೆ ಯತ್ನಿಸಿ ಬಳಿಕ ಪರಾರಿಯಾಗಿದ್ದನು.

    ಈ ಸಂಬಂಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಪತ್ತೆಹಚ್ಚಲು ಯುವತಿಯನ್ನು ತನಿಖೆಗೆ ಒಳಪಡಿಸಲಾಗಿತ್ತು. ದೆಹಲಿ ನಿರ್ಭಯಾ ಪ್ರಕರಣದಲ್ಲಿ ವೈದ್ಯಕೀಯ ಪರಿಶೀಲನೆ ಮಾಡಿದ ವೈದ್ಯರಿಂದಲೇ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ಈ ವೇಳೆ ಯುವತಿಯ ಎದೆಯ ಮೇಲೆ ಕಚ್ಚಿದ ಹಲ್ಲಿನ ಕಲೆಗಳ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಲಾಗಿದೆ. ಅಲ್ಲದೆ ಆತ ಅತ್ಯಾಚಾರವೆಸಗಿದ ಮನೆಯಿಂದ ಮೊಬೈಲ್ ಫೋನ್ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.

    ಖಾಕಿ ಬಲೆಗೆ ಬಿದ್ದ ಆರೋಪಿ ಈ ಹಿಂದೆ ಯುವತಿಯರಿಗೆ ಚುಡಾಯಿಸುತ್ತಿದ್ದನು. ಅಲ್ಲದೆ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜಾತಿ ನಿಂದನೆ ಕೇಸ್‍ನಲ್ಲಿ ಜೈಲಿನಲ್ಲಿದ್ದ ಎನ್ನಲಾಗಿದೆ.

    ಜೈಲಿನಿಂದ ಹೊರ ಬಂದ ತಿಂಗಳ ಒಳಗಾಗಿ ಅಮಾಯಕ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದನು. ಇದರಿಂದ ತಿಂಗಳುಗಳ ಕಾಲ ಆಕೆ ಪ್ರಜ್ಞಾಹೀನಳಾಗಿದ್ದಳು. ಖಾಸಗಿ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸಾ ವೆಚ್ಚವನ್ನು ಜಿಲ್ಲಾಧಿಕಾರಿ ಸ್ಕೀಮ್‍ವೊಂದರಿಂದ ಭರಿಸಲಾಗುವುದು ಎಂದು ಹೇಳಲಾಗಿದೆ. ಸದ್ಯ ಯುವತಿಯು ಸುದೀರ್ಘ ವೈದ್ಯಕೀಯ ಚಿಕಿತ್ಸೆ ಬಳಿಕ ಪ್ರಜ್ಞಾವಸ್ಥೆಗೆ ಬಂದಿದ್ದಾಳೆ. ಪೋರೆನ್ಸಿಕ್ ಲ್ಯಾಬ್ ನಿಂದ ವರದಿ ಬಂದ ತಕ್ಷಣ ಸಮರ್ಪಕ ದಾಖಲೆಗಳ ಸಮೇತ ಚಾರ್ಜ್ ಸೀಟ್ ಸಲ್ಲಿಕೆ ಮಾಡಲಿದ್ದು, ಆರೋಪಿಗೆ ಶಿಕ್ಷೆ ಖಂಡಿತ ಎಂದು ಎಸ್.ಪಿ ಅಭಿನವ್ ಭರವಸೆ ನೀಡಿದ್ದಾರೆ.

  • ಬಿಗ್ ಬುಲೆಟಿನ್  | 25-07-2018

    ಬಿಗ್ ಬುಲೆಟಿನ್ | 25-07-2018

    https://www.youtube.com/watch?v=VKSrUUJrm0c

  • ಬಿಗ್ ಬುಲೆಟಿನ್ | 20-07-2018

    ಬಿಗ್ ಬುಲೆಟಿನ್ | 20-07-2018

    https://www.youtube.com/watch?v=dZhL5fYMyyE