– ಕೊಲೆ ಪ್ರಕರಣದ ಕೈದಿಯಿಂದ 10,000 ರೂ. ಮುಂಗಡ ಹಣ ಪಡೆದಿದ್ದ ಸಿಬ್ಬಂದಿ
ಬೆಂಗಳೂರು: ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿ ಸುದ್ದಿಯಾಗಿದ್ದ ಪರಪ್ಪನ್ನ ಅಗ್ರಹಾರ ಜೈಲು ಈಗ ಮತ್ತೊಂದು ಪ್ರಕರಣಕ್ಕೆ ಸುದ್ದಿಯಾಗಿದೆ. ಜೈಲಿನಲ್ಲಿ 20 ಸಾವಿರ ರೂ.ಗೆ ಮೊಬೈಲ್ ಮಾರಾಟ ಮಾಡಲು ಹೋಗಿ ಜೈಲು ಸಿಬ್ಬಂದಿಯೇ ಸಿಕ್ಕಿಬಿದ್ದ ಘಟನೆ ನಡೆದಿದೆ.
ಕೈದಿಗಳಿಗೆ ಮೊಬೈಲ್ ಸರಬರಾಜು ಮಾಡುತ್ತಿದ್ದ ಜೈಲು ವೀಕ್ಷಕ (ವಾರ್ಡನ್) ಅಮರ್ ಪ್ರಾಂಜೆ (29) ನನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ ಆರೋಪಿ. ಈ ಪ್ರಕರಣದಿಂದ ಕಾರಾಗೃಹದಲ್ಲಿ ಅಕ್ರಮಗಳಿಗೆ ಜೈಲು ಸಿಬ್ಬಂದಿಗಳೇ ಸಾಥ್ ನೀಡ್ತಿದ್ದಾರೆ ಅನ್ನೋದು ಮತ್ತೊಮ್ಮೆ ಬಟಾಬಯಲಾಗಿದೆ. ಇದನ್ನೂ ಓದಿ: ವಿದ್ಯಾವಂತರು ʻಎ ಖಾತಾ’ ಪರಿವರ್ತನೆ ಒಪ್ಪುತ್ತಿರೋದಕ್ಕೆ ಧನ್ಯವಾದ; ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ

ಒಳಉಡುಪಿನಲ್ಲಿ ಫೋನ್, ಇರಯ್ ಫೋನ್
ಅಮರ್ ಇದೇ ಅಕ್ಟೋಬರ್ 23ರಂದು ಕರ್ತವ್ಯಕ್ಕೆ ಆಗಮಿಸಿದ್ದ. ಈ ವೇಳೆ ಪ್ರವೇಶದ್ವಾರದಲ್ಲಿ ಕೆಎಸ್ಐಎಸ್ಎಫ್ (KSISF) ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ರು. ಆದ್ರೆ ಅಮೆರ್ ತಪಾಸಣೆಗೆ ನಿರಾಕರಿಸಿ ವಾಪಸ್ ಹೋಗಲು ಮುಂದಾದರು. ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವರನ್ನ ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್ಫೋನ್, ಇಯರ್ ಫೋನ್ ಪತ್ತೆಯಾಗಿದೆ. ಇದನ್ನೂ ಓದಿ: ದತ್ತಪೀಠದ ಗೋರಿಗಳು ನಕಲಿ – ಹಿಂದೂಪರ ಸಂಘಟನೆಗಳ ಆರೋಪ
ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಮೊಬೈಲ್ ಸಮೇತ ಪೊಲೀಸರು ಬಂಧಿಸಿದ್ದಾರೆ. ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲು ಕಾಯಿದೆ ಅನ್ವಯ ಜೈಲಿನ ಒಳಗೆ ಮೊಬೈಲ್ ಬಳಕೆ ನಿಷೇಧ ಇದೆ. ಅಮರ್ ವಿಚಾರಣೆ ವೇಳೆ ಜೈಲಿನಲ್ಲಿರುವ ಕೊಲೆ ಪ್ರಕರಣದ ಕೈದಿಯೊಬ್ಬರಿಂದ 20 ಸಾವಿರ ರೂ.ಗಳನ್ನ ಪಡೆದು ಹೊರಗಡೆಯಿಂದ ಮೊಬೈಲ್ ತಂದು ಕೊಡಲು ಮುಂದಾಗಿದ್ದೆ. ಅದರಂತೆ 10 ಸಾವಿರ ರೂ. ಮುಂಗಡ ಹಣ ಪಡೆದು ಮೊಬೈಲ್ ತಂದು ಒಳಗಡೆ ತಲುಪಿಸಲು ಪ್ರಯತ್ನಿಸಿದ್ದೆ ಎಂದು ಆರೋಪಿ ಅಮರ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಇದನ್ನೂ ಓದಿ: ತೀವ್ರ ಕಳಪೆ ಮಟ್ಟಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ – ಅ.29, 30ರಂದು ಕೃತಕ ಮಳೆ ಸಾಧ್ಯತೆ
ಮೊಬೈಲ್ ಖರೀದಿಗೆ ಹಣ ಕೊಟ್ಟಿದ್ದ ಕೈದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ತಿರ್ಮಾನಿಸಿದ್ದಾರೆ. ಅಮರ್ ಪ್ರಾಂಜೆ 2019ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವೀಕ್ಷಕನಾಗಿ ಕರ್ತವ್ಯ ನಿರ್ವಹಣೆ ಮಾಡ್ತಿದ್ದರು. ಇದನ್ನೂ ಓದಿ: ವೈದ್ಯೆ ಆತ್ಮಹತ್ಯೆ ಕೇಸ್ – ರೇಪ್ ಆರೋಪಿ ಇನ್ಸ್ಪೆಕ್ಟರ್ ಪೊಲೀಸರಿಗೆ ಶರಣು















