Tag: ಪರಮಹಂಸ ಆಚಾರ್ಯ

  • ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸುತ್ತೇನೆ: ಪರಮಹಂಸ ಆಚಾರ್ಯ ಘೋಷಣೆ

    ಚುನಾವಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸುತ್ತೇನೆ: ಪರಮಹಂಸ ಆಚಾರ್ಯ ಘೋಷಣೆ

    – ಕಾಂಗ್ರೆಸ್‌ನ ಕೊನೆಯ ವಿಕೆಟ್‌ ಉರುಳಿಸ್ತೇನೆ

    ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸುವುದಾಗಿ ಯತಿ ಕಂಟೋನ್ಮೆಂಟ್ ಪೀಠಾಧೀಶ್ವರ ಜಗದ್ಗುರು ಪರಮಹಂಸ ಆಚಾರ್ಯ (Paramhans Acharya) ಘೋಷಿಸಿದ್ದಾರೆ.

    ಈ ಸಂಬಂಧ ವೀಡಿಯೋ ಬಿಡುಗಡೆ ಮಾಡಿರುವ ಅವರು, ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ರಾಯ್ ಬರೇಲಿ ಕ್ಷೇತ್ರದಿಂದ ಸೋನಿಯಾ ಗಾಂಧಿ (Sonia Gandhi) ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ (Congress) ಕೊನೆಯ ವಿಕೆಟ್ ಅನ್ನು ಉರುಳಿಸುವುದಾಗಿ ತಿಳಿಸಿದ್ದಾರೆ.

    1966ರ ನವೆಂಬರ್ 7ರಂದು ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಇಂದಿರಾ ಗಾಂಧಿ (Indira Gandhi) ಪ್ರಧಾನಿಯಾಗಿದ್ದರು. ಈ ಸಮಯದಲ್ಲಿ ನಾವು ಸಂತರು ಮತ್ತು ಋಷಿಮುನಿಗಳು ಕಾಂಗ್ರೆಸ್ ನಿಂದ ತುಂಬಾ ನೊಂದಿದ್ದೇವೆ ಎಂದಿದ್ದಾರೆ.

    ಧರ್ಮ ಸಾಮ್ರಾಟ್ ಸ್ವಾಮಿ ಕರ್ಪಾತ್ರಿ ಜೀ ಅವರ ನೇತೃತ್ವದಲ್ಲಿ ದೇಶದ ಮೂಲೆ ಮೂಲೆಯಿಂದ ಯುವಕರು, ರೈತರು, ತಾಯಂದಿರು, ಸಹೋದರಿಯರು ಮತ್ತು ಹಿರಿಯರು ಗೋಹತ್ಯೆ ತಡೆಯಲು ದೆಹಲಿ ಸಂಸತ್ ಭವನವನ್ನು ತಲುಪಿದ್ದರು ಆಗ ಅಲ್ಲಿ ಅವರ ಮೇಲೆ ಗುಂಡುಗಳನ್ನು ಹಾರಿಸಲಾಯಿತು. ಅದಕ್ಕಾಗಿಯೇ ನಾನು ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಆಚಾರ್ಯರು ತಿಳಿಸಿದ್ದಾರೆ.

    ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಕಾಂಗ್ರೆಸ್ ಮುಕ್ತ ಭಾರತ ಘೋಷಣೆ ಮಾಡುವುದಾಗಿ ಕರೆ ಕೊಟ್ಟಿದ್ದಾರೆ. ಹೀಗಾಗಿ ವೈಯಕ್ತಿಕವಾಗಿ ಕಾಂಗ್ರೆಸ್‌ನ ಕೊನೆಯ ವಿಕೆಟ್‌ ಉರುಳಿಸುತ್ತೇನೆ. ಈಗ ಭಾರತ ಕಾಂಗ್ರೆಸ್ ಮುಕ್ತವಾಗುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

  • ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಲಕ್ನೋ: ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (NCP) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ವಿರುದ್ಧ ಅಯೋಧ್ಯೆಯ (Ayodhya) ಅರ್ಚಕ ಪರಮಹಂಸ ಆಚಾರ್ಯ (Paramhansa Acharya) ಎಚ್ಚರಿಕೆ ನೀಡಿದ್ದಾರೆ.

    ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಇನ್ನೊಂದು ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡಿದ್ದರೆ ಬಹುಶಃ ಅವರು ಇಲ್ಲಿಯವರೆಗೆ ಬದುಕಿರುತ್ತಿರಲಿಲ್ಲ. ರಾಮನನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ. ಶ್ರೀರಾಮನ ಟೀಕೆಗೆ ಕಿವಿಗೊಡದ ಭಾರತ ಇದು ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಎನ್‌ಸಿಪಿ ನಾಯಕನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಜಿತೇಂದ್ರ ಅವ್ಹಾದ್ ರನ್ನು ನಾನೇ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಜಿತೇಂದ್ರ ಅವ್ಹಾದ್ ಅವರು ನೀಡಿದ ಹೇಳಿಕೆಯು ಅವಹೇಳನಕಾರಿಯಾಗಿದೆ. ಇದು ರಾಮ ಭಕ್ತರ ಭಾವನೆಗೆ ನೋವುಂಟುಮಾಡುತ್ತದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಆಚಾರ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

    ಇದಕ್ಕೂ ಮುನ್ನ ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಎನ್‌ಸಿಪಿ ನಾಯಕನ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಅವರ ಹೇಳಿಕೆ ಸರಿಯಲ್ಲ. ರಾಮನು ವನವಾಸಕ್ಕೆ ಹೋದಾಗ ಗಡ್ಡೆ, ಹಣ್ಣು ತಿನ್ನುತ್ತಿದ್ದರು ಎಂದು ಬರೆಯಲಾಗಿತ್ತೇ ಹೊರತು ಮಾಂಸ ತಿಂದ ಎಂದು ಯಾವುದೇ ಗ್ರಂಥದಲ್ಲಿ ಬರೆದಿಲ್ಲ ಎಂದರು.  ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ಜಿತೇಂದ್ರ ಅವ್ಹಾದ್ ಹೇಳಿದ್ದೇನು..?: ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ತಿಳಿಸಿದ್ದಾರೆ.

  • ಶಾರುಖ್ ಖಾನ್ ಗೆ ಅಂತಿಮ ಸಂಸ್ಕಾರ ಮಾಡಿದ ಅಯೋಧ್ಯೆಯ ಸಾಧು

    ಶಾರುಖ್ ಖಾನ್ ಗೆ ಅಂತಿಮ ಸಂಸ್ಕಾರ ಮಾಡಿದ ಅಯೋಧ್ಯೆಯ ಸಾಧು

    ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಅವರ 13ನೇ ದಿನದ ಕರ್ಮಗಳನ್ನು ರಸ್ತೆ ಮಧ್ಯೆದಲ್ಲೇ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ ಅಯೋಧ್ಯೆಯ (Ayodhya) ತಪಸ್ವಿ ಜಗದ್ಗುರು ಪರಮಹಂಸ ಆಚಾರ್ಯರು (Paramahansa Acharya). ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರಿಗೆ ಕೇಸರಿ ಬಿಕಿನಿ ಹಾಕಿಸಿದ್ದಲ್ಲದೇ, ಹಿಂದೂಗಳಿಗೆ ಅವಮಾನ ಮಾಡುವಂತಹ ಸಾಲುಗಳನ್ನು ಈ ಹಾಡಿನಲ್ಲಿ ಬಳಸಿದ್ದಾರೆ ಎನ್ನುವ ಕಾರಣಕ್ಕಾಗಿ ಹಿಂದೂ ಸಂಪ್ರದಾಯದಂತೆ ಶಾರುಖ್ ತಿಥಿ ಮಾಡಲಾಗಿದೆ.

    ಈ ಹಿಂದೆ ಪಠಾಣ್ (Pathan) ಸಿನಿಮಾವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿ ಇದೇ ಅಯೋಧ್ಯೆಯ ತಪಸ್ವಿ ಶಿಬಿರದ ಜಗದ್ಗುರುಗಳು ಪ್ರತಿಭಟನೆ ಕೂಡ ಮಾಡಿದ್ದಾರೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡದಂತೆ ಒತ್ತಡ ಹೇರಿದ್ದರು. ಇಂದು ಮಡಿಕೆಗೆ ಶಾರುಖ್ ಖಾನ್ ಫೋಟೋ ಅಂಟಿಸಿ, ಅದನ್ನು ರಸ್ತೆಯಲ್ಲೇ ಇಟ್ಟು 13 ದಿನದ ಕರ್ಮಗಳನ್ನು ಮಾಡಿ ತಮ್ಮ ಪ್ರತಿಭಟನೆಯನ್ನು ವ್ಯಕ್ತ ಪಡಿಸಿದ್ದಾರೆ. ಸಂಸ್ಕಾರದ ವೇಳೆ ಹಿಂದೂ ಮಂತ್ರಗಳನ್ನೂ ಪಠಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

    ಅಯೋಧ್ಯೆ ಸಾಧುಗಳು ಈ ಕ್ರಿಯೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಡೆಯ ಬಗ್ಗೆ ಪರ ವಿರೋಧದ ಚರ್ಚೆಗಳು ಕೂಡ ಶುರುವಾಗಿದೆ. ಜೀವಂತವಾಗಿರುವಾಗ ತಿಥಿ ಮಾಡುವಂತಹ ಸಂಪ್ರದಾಯ ಹಿಂದೂಗಳಲ್ಲಿ ಇಲ್ಲ. ಹೀಗಾಗಿ ಗೊತ್ತಿರುವ ಸಾಧುಗಳೇ ಹೀಗೆ ಮಾಡಬಾರದಿತ್ತು ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ನಮ್ಮ ಪಾಲಿಗೆ ಶಾರುಖ್ ಸತ್ತಿದ್ದಾನೆ ಎಂದು ಇನ್ನೂ ಕೆಲವರು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಸಿಕ್ಕರೆ ಜೀವಂತ ಸುಡುವೆ: ಅಯೋಧ್ಯೆಯ ಸಾಧು ಕಿಡಿಕಿಡಿ

    ಶಾರುಖ್ ಖಾನ್ ಸಿಕ್ಕರೆ ಜೀವಂತ ಸುಡುವೆ: ಅಯೋಧ್ಯೆಯ ಸಾಧು ಕಿಡಿಕಿಡಿ

    ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡನ್ನು ವಿರೋಧಿಸಿ ಮಂಗಳವಾರ ವಿಶ್ವ ಹಿಂದೂ ಪರಿಷತ್ ಅಯೋಧ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಯೋಧ್ಯೆಯ (Ayodhya) ತಪಸ್ವಿ ಚಾವ್ನಿ ಮಠದ ಪರಮಹಂಸ ಆಚಾರ್ಯ (Paramahamsa Acharya) ಅವರು ಮಾತನಾಡಿ, ಶಾರುಖ್ ಖಾನ್ ನನ್ನ ಎದುರಿಗೆ ಸಿಕ್ಕರೆ ಜೀವಂತವಾಗಿ ಸುಟ್ಟು ಬಿಡುವೆ ಎಂದು ಗುಡುಗಿದ್ದಾರೆ. ಇಂತಹ ಹೇಳಿಕೆಯು ಆಘಾತಕಾರಿ ಆದಂಥದ್ದು ಎಂದು ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

    ಪ್ರತಿಭಟನೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಾಧು, ‘ಪಠಾಣ್ (Pathan) ಸಿನಿಮಾ ಸನಾತನ ಧರ್ಮಕ್ಕೆ ಅವಮಾನ ಮಾಡಿದೆ. ಸದ್ಯಕ್ಕೆ ಶಾರುಖ್ ಖಾನ್ ಅವರ ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿದ್ದೇವೆ. ಒಂದು ವೇಳೆ ಅವರು ಏನಾದರೂ ನನ್ನ ಎದುರಿಗೆ ಬಂದರೆ ಜೀವಂತವಾಗಿ ಸುಡಲು ಹಿಂದುಮುಂದು ನೋಡುವುದಿಲ್ಲ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಬಿಡುವುದಿಲ್ಲ’ ಎಂದು ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಏನೇ ಪ್ರತಿಭಟನೆ ಮಾಡಿದರೂ, ಸಿನಿಮಾ ತಂಡವಂತೂ ಸುಮ್ಮನೆ ಕೂತಿಲ್ಲ. ಸಿನಿಮಾದ ಎರಡನೇ ಹಾಡು ನಾಳೆ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಈ ಹಾಡಿನ ಒಂದೇ ಒಂದು ಫೋಟೋವನ್ನು ರಿಲೀಸ್ ಮಾಡಲಾಗಿದ್ದು, ದೀಪಿಕಾ ಪಡುಕೋಣೆ ಈ ಹಾಡಿನಲ್ಲೂ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲೂ ಅವರು ಗ್ಲಾಮರ್ ಗೆ ಯಾವುದೇ ಕೊರತೆಯನ್ನು ಮಾಡಿಲ್ಲ. ಹಾಗಾಗಿ ಈ ಹಾಡಿನ ಬಗ್ಗೆಯೂ ಅಷ್ಟೇ ನಿರೀಕ್ಷೆಯನ್ನು ಹೊಂದಲಾಗಿದೆ. ಈ ಹಾಡು ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    ಪಠಾಣ್ ಸಿನಿಮಾದ ಎರಡನೇ ಹಾಡಾದ ‘ಜೂಮೇ ಜೋ ಪಠಾಣ್’ ನಾಳೆ ರಿಲೀಸ್ ಮಾಡುತ್ತಿರುವ ಕುರಿತು ನಿರ್ಮಾಣ ಸಂಸ್ಥೆಯು ವಿಷಯವನ್ನು ಹಂಚಿಕೊಂಡಿದ್ದು, ಈ ಹಾಡು ಕೂಡ ಸಖತ್ ಆಗಿಯೇ ಚರ್ಚೆ ಆಗಲಿದೆ ಎಂದು ಮೊದಲೇ ಹೇಳಿಕೊಂಡಿದೆ. ಹಾಗಾಗಿ ಮತ್ತೇನಾದರೂ ವಿವಾದಕ್ಕೆ ಕಾರಣವಾಗಿರುವ ಅಂಶಗಳು ಇರಬಹುದಾ ಎನ್ನುವ ಚರ್ಚೆ ಕೂಡ ನಡೆದಿದೆ. ಮೊದಲ ಹಾಡಿನಲ್ಲಿ ದೀಪಿಕಾ ಕೇಸರಿ ಬಿಕಿನಿ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೂ, ಚಿತ್ರತಂಡ ಈ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]