Tag: ಪರಮೇಶ್ವರ ನಾಯ್ಕ್

  • ನಿರ್ಮಾಣ ಪೂರ್ಣವಾಗದ ಕಾಲೇಜು ಕಟ್ಟಡಕ್ಕೂ ಉದ್ಘಾಟನೆ ಭಾಗ್ಯ

    ನಿರ್ಮಾಣ ಪೂರ್ಣವಾಗದ ಕಾಲೇಜು ಕಟ್ಟಡಕ್ಕೂ ಉದ್ಘಾಟನೆ ಭಾಗ್ಯ

    ಬಳ್ಳಾರಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಚಾರ ಜೋರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದೆಲ್ಲಡೆ ಜನಾಶೀರ್ವಾದ ಯಾತ್ರೆ ಹಮ್ಮಿಕೊಂಡಿದ್ದು ರಾಜ್ಯಾದ್ಯಂತ ಸಂಚರಿಸಿ, ವಿವಿಧ ಕಾಮಗರಿಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ಆದ್ರೆ ಬಳ್ಳಾರಿಯಲ್ಲಿ ಪೂರ್ಣಗೊಳ್ಳದ ಕಟ್ಟಡವನ್ನೂ ಉದ್ಘಾಟಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

    ಹೂವಿನಹಡಗಲಿಯಲ್ಲಿ 2008ರಲ್ಲಿ ಕಾಲೇಜು ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ 9 ವರ್ಷ ಕಳೆದ್ರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಸರಿಯಾಗಿ ಹಣ ಬಿಡುಗಡೆಯಾಗದೆ ಅರ್ಧಕ್ಕೆ ನಿಂತಿರುವ ಕಾಲೇಜು ಕಟ್ಟಡದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಆದರೆ ಶಾಸಕರಾದ ಪರಮೇಶ್ವರ್ ನಾಯ್ಕ್, ಇದೇ ತಿಂಗಳ 18ರಂದು ಸಿಎಂ ಸಿದ್ದರಾಮಯ್ಯ ಕೈಯ್ಯಲ್ಲಿ ಈ ಕಾಲೇಜನ್ನು ಉದ್ಘಾಟನೆ ಮಾಡಿಸಲು ಮುಂದಾಗಿದ್ದಾರೆ.

    ಈ ಕಾಲೇಜು ಕಟ್ಟಡವನ್ನು ಸಿಎಂ ಸಿದ್ದರಾಮಯ್ಯರಿಂದ ಇದೇ ತಿಂಗಳ 18ರಂದು ಉದ್ಘಾಟನೆ ಮಾಡಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಸರ್ಕಾರದ ನಡೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗೇನಾದ್ರೂ ಸಿಎಂ ಕಟ್ಟಡ ಉದ್ಘಾಟನೆಗೆ ಮುಂದಾದ್ರೆ ಅಡ್ಡಿಪಡಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

    ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭಿವೃದ್ಧಿ ಪಟ್ಟಿಗೆ ಮತ್ತೊಂದು ಯೋಜನೆಯನ್ನು ಸೇರಿಸಿಕೊಳ್ಳಲು ಮಾಜಿ ಸಚಿವ, ಹಾಲಿ ಶಾಸಕ ಪರಮೇಶ್ವರ ನಾಯ್ಕ್ ಇದೀಗ ಮುಂದಾಗಿರುವುದು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಹಡಗಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

  • ಗಣಿ ನಾಡಲ್ಲಿ ಪರಮೇಶ್ವರ ನಾಯ್ಕ್ ಬೆಂಬಲಿಗರ ದಬ್ಬಾಳಿಕೆ- ಪ್ರಶ್ನೆ ಮಾಡಿದ್ರೆ ಒದ್ದು ಒಳಗೆ ಹಾಕ್ತಾರಂತೆ ಪೊಲೀಸ್ರು

    ಗಣಿ ನಾಡಲ್ಲಿ ಪರಮೇಶ್ವರ ನಾಯ್ಕ್ ಬೆಂಬಲಿಗರ ದಬ್ಬಾಳಿಕೆ- ಪ್ರಶ್ನೆ ಮಾಡಿದ್ರೆ ಒದ್ದು ಒಳಗೆ ಹಾಕ್ತಾರಂತೆ ಪೊಲೀಸ್ರು

    ಬಳ್ಳಾರಿ: ದರ್ಪ ದಬ್ಬಾಳಿಕೆಯಿಂದ ಪರಮೇಶ್ವರ ನಾಯ್ಕ್ ಅವರು ತನ್ನ ಸಚಿವ ಸ್ಥಾನ ಕಳೆದುಕೊಂಡು ಶಾಸಕರಾಗಿದ್ದು, ಇದೀಗ ಇವರ ಬೆಂಬಲಿಗರ ದಬ್ಬಾಳಿಕೆ ಮಾತ್ರ ಇನ್ನೂ ಮುಂದುವರೆದಿದೆ.

    ಶಾಸಕರ ಬೆಂಬಲಿಗರ ಅಕ್ರಮಗಳು, ದರ್ಪ ದಬ್ಬಾಳಿಕೆಗಳಿಗೆ ಇದೀಗ ಪೊಲೀಸರು ಸಹ ಕೈಜೋಡಿಸಿದ್ದಾರೆ. ಹೂವಿನ ಹಡಗಲಿ ತಾಲೂಕಿನ ಹಿರೇಬನ್ನಿಮಟ್ಟಿ ಗ್ರಾಮದ ಐದು ಎಕರೆ ಸರ್ಕಾರಿ ಜಾಗದ ಸಶ್ಮಾನದ ವಿಚಾರದಲ್ಲಿ ಪೊಲೀಸರು ತಮ್ಮ ದರ್ಪ ದಬ್ಬಾಳಿಕೆ ತೋರಿದ್ದಾರೆ.

    ಹಿರೇಬನ್ನಿಮಟ್ಟಿ ಗ್ರಾಮದ ಐದು ಎಕರೆ ಸಶ್ಮಾನದಲ್ಲಿ ಈ ಹಿಂದಿನಿಂದಲೂ ವೀರಶೈವ ಸಮಾಜದ ಬಾಂಧವರು ಅಂತ್ಯ ಕ್ರಿಯೆಗಳನ್ನು ನಡೆಸಿಕೊಂಡು ಬಂದಿದ್ದಾರೆ. ಆದರೆ ಈ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗ್ರಾಮ ಪಂಚಾಯತ್ ಸದಸ್ಯ ಸಿದ್ದನಗೌಡ, ಗುರುಪಾದಗೌಡ, ಸಿಂದನೂರಿನಲ್ಲಿ ಎಫ್‍ಡಿಎ ಆಗಿರುವ ನಾಗರಾಜಗೌಡ ನಿಂಗನಗೌಡ್ರ ಉಳುಮೆ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದ ಗ್ರಾಮದ ಹಾಲೇಶ ಎಂಬವರಿಗೆ ಹುಸೇನ್ ಪೀರ್ ಸಾಬ್ ಮೂಲಕ ಹಡಗಲಿ ಠಾಣೆಯ ಸಿಪಿಐ ಸುಧೀರ ಜಮೀನಿನ ವಿಷಯಕ್ಕೆ ಬಂದ್ರೆ ಒದ್ದು ಒಳಗೆ ಹಾಕುತ್ತೇನೆ ಎಂದು ದಮ್ಕಿ ಹಾಕಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

    ಧಮ್ಕಿ ಹಾಕಿದ ಆಡಿಯೋ ಬಹಿರಂಗವಾಗುತ್ತಿದ್ದಂತೆ ಹಿರೇಬನ್ನಿಮಟ್ಟಿ ಗ್ರಾಮಸ್ಥರು ಶಾಸಕ ಪರಮೇಶ್ವರ ನಾಯ್ಕ್ ಹಾಗೂ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅಲ್ಲದೇ ಸಶ್ಮಾನದ ಜಾಗದ ವಿಚಾರದಲ್ಲಿ ಅನಗತ್ಯವಾಗಿ ಪ್ರವೇಶ ಮಾಡುತ್ತಿರುವ ಪೊಲೀಸರ ವಿರುದ್ಧ ಹಾಲೇಶ ಅವರು ಗೃಹಸಚಿವರು ಹಾಗೂ ಎಸ್‍ಪಿಗೆ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.