Tag: ಪರಶುರಾಮ್ ವಾಗ್ಮೋರೆ

  • ಗೌರಿ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ

    ಗೌರಿ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ

    -ಮಾಧ್ಯಮಗಳ ಜೊತೆ ಮಾತನಾಡಿದ ಪರಶುರಾಮ್ ವಾಗ್ಮೋರೆ, ಮನೋಹರ್ ಯಡವೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಆರೋಪಿಗಳಾದ ಮನೋಹರ್ ಯಡವೆ ಮತ್ತು ಪರಶುರಾಮ್ ವಾಗ್ಮೋರೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

    ಇಂದು ಕೋಕಾ ನ್ಯಾಯಾಲಯಕ್ಕೆ 13 ಆರೋಪಿಗಳನ್ನು ಎಸ್‍ಐಟಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮಾಧ್ಯಮಗಳನ್ನು ನೋಡುತ್ತಲೇ ಪರಶುರಾಮ್ ವಾಗ್ಮೋರೆ, ನಾವು ಏನು ಮಾಡಿಲ್ಲ, ನಾವೆಲ್ಲ ನಿರಪರಾಧಿಗಳು, ಹಿಂದೂ ಪರ ಸಂಘಟನೆಗಳಲ್ಲಿ ಇದ್ದಿದ್ದು ನಿಜ. ಆದರೆ ಕೊಲೆ ಮಾಡೋ ಮಟ್ಟಕ್ಕೆ ಹೋಗೋರಲ್ಲ. ನಮಗೂ ಇದಕ್ಕೂ ಏನು ಸಂಬಂಧ ಇಲ್ಲ ಸುಮ್ಮನೆ ನಮ್ಮನ್ನು ತಂದು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬರು ಹೊಡೀತಿದ್ದಾರೆ, ಒಬ್ಬರು ಕನ್ವಿನ್ಸ್ ಮಾಡುತ್ತಿದ್ದಾರೆ. ನಿಮ್ಮ ಫ್ಯಾಮಿಲಿಗೆ 25 ಲಕ್ಷ, 30 ಲಕ್ಷ ಕೊಟ್ತಿವಿ ಒಪ್ಪಿಕೊಳ್ಳಿ ಎನ್ನುತ್ತಿದ್ದಾರೆ ಅಂತಾ ಹೇಳಿದ್ದಾನೆ.

    ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳದೇ ಇದ್ದಲ್ಲಿ ನಿಮ್ಮ ಅಣ್ಣ ಅಥವಾ ತಮ್ಮ ಅಥವಾ ಗೆಳೆಯರನ್ನು ತಂದು ಫಿಟ್ ಮಾಡ್ತಿವಿ ಎಂದು ಸಿಕ್ಕಾಪಟ್ಟೆ ಟಾರ್ಚರ್ ಕೊಟ್ಟಿದ್ದಾರೆ. 8 ದಿನ ಟಾರ್ಚರ್ ಕೊಟ್ಟಿದ್ದಾರೆ. ಖಾಲಿ ಪೇಪರ್ ಮೇಲೆ ಸ್ಟೇಟ್‍ಮೆಂಟ್ ತಗೊಂಡಿದ್ದಾರೆ, ಖಾಲಿ ಪೇಪರ್‍ನಲ್ಲಿ ಸಹಿ ಪಡೆದಿದ್ದಾರೆ.. ಅವರೆ ಹೇಳಿಕೊಟ್ಟಿದ್ದನ್ನು ಹೇಳಿಸಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಗೆ ಏನಾದರೂ ಆದ್ರೆ ಎಸ್‍ಐಟಿ ಅವರೆ ಹೊಣೆ. ನನ್ನ ತಾಯಿ ಹಾಸಿಗೆ ಹಿಡಿದಿದ್ದಾರೆ. ಇದುವರೆಗೂ ಚೇತರಿಸಿಕೊಂಡಿಲ್ಲ. ಇದಕ್ಕೆಲ್ಲಾ ಯಾರು ಹೊಣೆ? ಇಲ್ಲಿರೋರು ಯಾರೂ ನಮಗೂ ಪರಿಚಯವೇ ಇಲ್ಲ. ಫೋನ್ ಲಿಂಕ್ ಸಹ ಇಲ್ಲ. ಎಲ್ಲರನ್ನೂ ಇಲ್ಲಿ ತಂದು ಗುಡ್ಡೆ ಹಾಕಿದ್ದಾರೆ. ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಅಂತಾ ಪರಶುರಾಮ್ ಹೇಳಿದ್ದಾನೆ.

    ನನಗೂ ಇದಕ್ಕೂ ಸಂಬಂಧವೇ ಇಲ್ಲ. ಅನಾವಶ್ಯಕವಾಗಿ ನಮ್ಮನ್ನು ಇಲ್ಲಿ ತಂದು ಫಿಟ್ ಮಾಡಿದ್ದಾರೆ. ಬಂಧನವಾಗಿರೋರೆಲ್ಲ ನಮಗೆ ಪರಿಚಯವೇ ಇಲ್ಲ. ಇವರೆಲ್ಲಾ ಇಲ್ಲಿ ಬಂದ ಮೇಲೆಯೇ ನಮಗೆ ಗೊತ್ತಾಗಿದ್ದು, ಯಾರದ್ದೋ ಫೋಟೋ ತಂದು ತೋರಿಸಿ, ಇವರು ಪರಿಚಯ ಎಂದು ಒಪ್ಪಿಕೊಳ್ಳಿ ಅಂತಾರೆ. ಮೇ 14ರಂದು ಬಂಧಿಸಿ, ಭಗವಾನ್ ಹತ್ಯೆ ಕೇಸ್ ಒಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಮನೋಹರ್ ಯಡವೆ ಆರೋಪಿಸಿದ್ದಾನೆ.

    ಎಸ್‍ಐಟಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳ ಮೇಲೆ ಬಂಧಿಸಿದ್ದಾರೆ. ಇದೂವರೆಗೂ ಆರೋಪಿಗಳು ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಇಂದು ದಿಢೀರ್ ಅಂತಾ ಮಾಧ್ಯಮಗಳನ್ನು ಕಂಡಕೂಡಲೇ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/oKmyWQuoB5M

  • ಗೌರಿ ಹತ್ಯೆ ಪ್ರಕರಣ-ಮತ್ತೊಬ್ಬ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

    ಗೌರಿ ಹತ್ಯೆ ಪ್ರಕರಣ-ಮತ್ತೊಬ್ಬ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

    ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮತ್ತೊಬ್ಬ ಕಾರ್ಯಕರ್ತನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಆರೋಪಿ ಭರತ್ ನನ್ನು ಬಂಧಿಸಿ, ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಬಂಧಿತರು ಪರಶುರಾಮ್ ವಾಗ್ಮೋರೆಗೆ ಬೆಳಗಾವಿಯಲ್ಲಿ ಆಶ್ರಯ ಕೊಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪರಶುರಾಮ್ ವಾಗ್ಮೋರೆ ನೀಡಿದ್ದ ಮಾಹಿತಿ ಆಧಾರದ ಮೇಲೆ ಭರತ್ ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಎಸ್‍ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜನರನ್ನು ಬಂಧಿಸಿದ್ದು, ಅದರಲ್ಲಿ ಈಗ ಕೊನೆಯ ವ್ಯಕ್ತಿಯೇ ಭರತ್ ಆಗಿದ್ದಾರೆ.

    ಯಾರು ಈ ಪರಶುರಾಮ್ ವಾಗ್ಮೋರೆ?
    ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ನಿವಾಸಿ ಪರಶುರಾಮ್ ವಾಗ್ಮೋರೆ. ವಯಸ್ಸು 26. ಕಟ್ಟಾ ಹಿಂದೂವಾದಿಯಾಗಿದ್ದು, ಶ್ರೀರಾಮಸೇನೆ, ಹಿಂದೂ ಜಾಗೃತಿ ವೇದಿಕೆಯಲ್ಲೂ ಗುರುತಿಸಿಕೊಂಡಿದ್ದ. ಈ ಹಿಂದೆ ಸಿಂಧಗಿ ತಹಶೀಲ್ದಾರ್ ಕಚೇರಿ ಬಳಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ಹೆಸರು ಕೇಳಿ ಬಂದಿತ್ತು. ಪರಶುರಾಮ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು, ಅಮೋಲ್ ಕಾಳೆ, ಮನೋಹರ್ ಯವಡೆಗೆ ಎಂಬವರಿಗೆ ತರಬೇತಿ ನೀಡಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಬಂಧಿಕರ ಅಂಗಡಿಯಲ್ಲಿ ಪರಶುರಾಮ್ ಕೆಲಸ ಮಾಡಿಕೊಂಡಿದ್ದ.

  • ಗೌರಿ ಲಂಕೇಶ್ ಹತ್ಯೆ ಪ್ರಕರಣ- ಎಸ್‍ಐಟಿ ನಡೆಸಿದ ತನಿಖೆಯ ರೋಚಕ ಇನ್ ಸೈಡ್ ಸ್ಟೋರಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ- ಎಸ್‍ಐಟಿ ನಡೆಸಿದ ತನಿಖೆಯ ರೋಚಕ ಇನ್ ಸೈಡ್ ಸ್ಟೋರಿ

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಒಂದು ಹಂತದವರೆಗೆ ತಲುಪಿದೆ. ಶೂಟ್ ಮಾಡಿದ್ದ ಎನ್ನಲಾಗಿರುವ ಆರೋಪಿ ಪರಶುರಾಮ್ ವಾಗ್ಮೋರೆ ಎಂಬ ಯುವಕನನ್ನು ಎಸ್‍ಐಟಿ ಈಗಾಗಲೇ ಬಂಧಿಸಿದೆ. ಆದರೆ ಗೌರಿ ಲಂಕೇಶ್ ಕೊಲೆಯಾದ ಬಳಿಕ ಎಸ್‍ಐಟಿ ಅಧಿಕಾರಿಗಳು ನಡೆಸಿರುವ ತನಿಖೆಯ ರೋಚಕ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅಮೂಲ್ ಕಾಳೆ ರೋಚಕ ಸತ್ಯವನ್ನು ಬಹಿರಂಗ ಮಾಡಿದ್ದಾನೆ. ಈ ಅಮೂಲ್ ಕಾಳೆಗೆ ಯುವಕರನ್ನು ಪರಿಚಯಿಸುತ್ತಿದ್ದ ವ್ಯಕ್ತಿ ಸುಜಿತ್. ಹಿಂದೂಪರ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದ ಸುಜಿತ್, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಮಾರು 10 ಸಾವಿರ ಯುವಕರ ನಂಬರ್ ಪಡೆದುಕೊಂಡಿದ್ದನು. ಬಳಿಕ ಪ್ರತಿಯೊಬ್ಬರಿಗೂ ಕರೆ ಮಾಡಿ ಪರಿಚಯಿಸಿಕೊಂಡಿದ್ದನು. ಫೋನ್ ನಲ್ಲಿ ಮಾತನಾಡುತ್ತಾ, ಧರ್ಮ ವಿರೋಧಿ ಚಟುವಟಿಕೆಗಳನ್ನು ವಿರೋಧಿಸುವವರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದ ಯುವಕರನ್ನು ಸುಜಿತ್ ಆಯ್ಕೆ ಮಾಡಿಕೊಳ್ಳುತ್ತಿದ್ದನು.

    ರೈಫಲ್ ತರಬೇತಿ: ಯುವಕರನ್ನು ಆಯ್ಕೆ ಮಾಡಿಕೊಂಡ ಬಳಿಕ ಎಲ್ಲರೊಂದಿಗೆ ನಯವಾಗಿ ಮಾತನಾಡುತ್ತಾ ಧರ್ಮ ವಿರೋಧಿಗಳನ್ನು ಕೊಲೆ ಮಾಡುವಂತೆ ಪ್ರೇರೇಪಿಸಿ ಮೈಂಡ್ ವಾಶ್ ಮಾಡುತ್ತಿದ್ದನಂತೆ. ಇದೇ ರೀತಿ ಯುವಕರ ಮೈಂಡ್ ವಾಶ್ ಬಳಿಕ ಎಲ್ಲರನ್ನು ‘ದಾದಾ’ ಎಂಬಾತನ ಬಳಿ ಕಳುಹಿಸಿದ್ದನು. ಈ ದಾದಾನ ಅಣತಿಯಂತೆ ಮತ್ತೊಮ್ಮೆ ಯುವಕರ ಪುನರ್ ಆಯ್ಕೆ ನಡೆಯುತ್ತಿತ್ತು. ಆಯ್ಕೆಗೊಂಡ ಯುವಕರಿಗೆ ಸತಾರಾ, ಗೋವಾ, ಮಹಾರಾಷ್ಟ್ರ, ಬೆಳಗಾವಿಯ ನಿರ್ಜನ ಪ್ರದೇಶದಲ್ಲಿ ಏರ್ ಗನ್ ನ ಮೂಲಕ ರೈಫಲ್ ಬಳಸಲು ತರಬೇತಿ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿವೆ.

    ಪಕ್ಕಾ ಶಾರ್ಪ್ ಶೂಟರ್ ಅಂತಾ ತಿಳಿದ ಮೇಲೆ ದಾದಾ ಎಂಬಾತ ಬರೋಬ್ಬರಿ 100 ಯುವಕರನ್ನು ಅಮೂಲ್ ಕಾಳೆಗೆ ಪರಿಚಯಿಸಿದ್ದನು. ಈ 100 ಯುವಕರಲ್ಲಿ ಪರಶುರಾಮ್ ವಾಗ್ಮೋರೆ ಸಹ ಒಬ್ಬ ಎಂದು ಹೇಳಲಾಗುತ್ತಿದೆ. ಹಿಂದೂ ಧರ್ಮದ ಉದ್ಧಾರಕ್ಕಾಗಿ ನೀವು ವಿಷ್ಣುವಿನ ಅವತಾರದಲ್ಲಿ ಜನಿಸಿದ್ದೀಯಾ, ಧರ್ಮದ ವಿರುದ್ಧ ಮಾತನಾಡುವರನ್ನು ಕೊಲ್ಲಬೇಕು. ನಿನ್ನ ಕೈಯಲ್ಲಿರುವ ಬಂದೂಕು ವಿಷ್ಣುವಿನ ಬಳಿಯ ಸುದರ್ಶನ ಚಕ್ರವಿದ್ದಂತೆ. ಯಾರು ಧರ್ಮಕ್ಕೆ ವಿರುದ್ಧ ಮಾತನಾಡುತ್ತಾರೆಯೋ ಅಂತಹವರನ್ನು ಶತ್ರುಗಳ ರೀತಿಯಲ್ಲಿಯೇ ಕೊಂದು ಮುಗಿಸಬೇಕು ಎಂದು ಅಮೂಲ್ ಕಾಳೆ, ಪರಶುರಾಮ್ ವಾಗ್ಮೋರೆಗೆ ಉಪದೇಶ ಮಾಡಿ ಬೆಂಗಳೂರಿಗೆ ಕಳುಹಿಸಿದ್ದ ಎಂಬ ಮಾಹಿತಿಯಿದೆ.

    ಒಟ್ಟು 13 ಹೆಸರಾಂತ ವ್ಯಕ್ತಿಗಳ ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು. ಗೌರಿ ಲಂಕೇಶ್ ಹತ್ಯೆಯ ಬಳಿಕ ಸಾಹಿತಿ, ವಿಚಾರವಾದಿ ಕೆ.ಎಸ್.ಭಗವಾನ್ ಕೊಲೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಅಲಿಯಾಸ್ ಹೊಟ್ಟೆ ಮಂಜನ ಬಂಧನವಾಯಿತು. ಬಂಧನದ ಬಳಿಕ ಎಲ್ಲ ಆರೋಪಿಗಳು ಕೆಲವು ದಿನ ತಮಗೆ ಏನೂ ತಿಳಿಯದಂತೆ ಪ್ರಕರಣದಿಂದ ದೂರ ಉಳಿದುಕೊಂಡಿದ್ದರು. ವಿಚಾರಣೆ ವೇಳೆ ಹೊಟ್ಟೆ ಮಂಜ, ಗಿರೀಶ್ ಕಾರ್ನಾಡ್, ಭಗವಾನ್, ಲಲಿತಾನಾಯಕ್, ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್ ಸೇರಿದಂತೆ ಹಲವರ ಹತ್ಯೆಗೆ ಸ್ಕೆಚ್ ರೂಪಿಸಲಾಗಿತ್ತು ಎಂಬ ಮಾಹಿತಿ ಹೊರಹಾಕಿದ್ದ. ಇದೇ ವಿಚಾರಣೆ ವೇಳೆ ಪ್ರವೀಣ್, ಮನೋಹರ್, ಸುಜಿತ್, ಅಮೂಲ್ ಕಾಳೆ ಸಿಕ್ಕಿ ಬಿದ್ದರು.

    ಯಾರು ಈ ದಾದಾ?:
    ಎಸ್‍ಐಟಿ ಅಧಿಕಾರಿಗಳಿಗೆ ಮೂವರು ಆರೋಪಿಗಳು ಸಿಕ್ಕಿದ್ದು, ಮೂವರಲ್ಲಿ ಪರಶುರಾಮ್ ವಾಗ್ಮೋರೆ ಶೂಟ್ ಮಾಡಿದ್ದಾತ ಎಂಬುದು ಸ್ಪಷ್ಟವಾಗಿದೆ. ಇದೀಗ ಅಮೂಲ್ ಕಾಳೆ ನೀಡಿರುವ ಮಾಹಿತಿ ಆಧಾರದ ಮೇಲೆ ಈ ದಾದಾ ಮಹಾರಾಷ್ಟ್ರದಲ್ಲಿ ಅಡಗಿ ಕುಳಿತಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಮೂಲ್ ಕಾಳೆಯಿಂದ ಮಾಹಿತಿ ಪಡೆದು ಅಧಿಕಾರಿಗಳು ದಾದಾನ ಮುಖ ಚಹರೆಯ ಸ್ಕೆಚ್ ತಯಾರಿಸುತ್ತಿದ್ದಾರೆ. ದಾದಾನಿಂದ ಆಯ್ಕೆಗೊಂಡು ತರಬೇತಿ ಪಡೆದ ಯುವಕರಿಗೆ ಒಬ್ಬೊಬ್ಬ ಹಿಂದೂ ವಿರೋಧಿಯನ್ನು ಕೊಲ್ಲುವಂತೆ ಸೂಚಿಸಲಾಗಿತ್ತು ಎಂಬ ಆತಂಕಕಾರಿ ಮಾಹಿತಿ ಲಭಿಸಿದೆ.

    2013 ರಲ್ಲಿ ನಡೆದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ನಡೆದಿತ್ತು. ದಾಬೋಲ್ಕರ್ ಹತ್ಯೆಯ ಸಂಬಂಧ ಡಾ. ವೀರೇಂದ್ರ ತಾವಡೆ ಎಂಬಾತನನ್ನು ಎನ್‍ಐಎ ಬಂಧಿಸಿತ್ತು. ಈ ಬಂಧಿತ ವೀರೇಂದ್ರ ತಾವಡೆ ಹಿಂದೂ ಸಂಸ್ಥೆಯೊಂದರ ಸದಸ್ಯನೂ ಆಗಿದ್ದ ಎಂದು ತಿಳಿದುಬಂದಿತ್ತು. ಆದ್ರೆ ವೀರೇಂದ್ರನ ವಿರುದ್ಧ ಸೂಕ್ತ ಸಾಕ್ಷಿಗಳು ಲಭ್ಯತೆ ಕಾಡಿದೆ. ಇತ್ತ ಬಂಧಿತನಾಗಿರುವ ಅಮೂಲ್ ಕಾಳೆ ಎಸ್‍ಐಟಿ ಆಧಿಕಾರಿಗಳ ತನಿಖೆಗೆ ಸ್ಪಂದಿಸುತ್ತಿಲ್ಲವಂತೆ. 2015ರಂದು ಧಾರವಾಡದಲ್ಲಿ ವಿಚಾರವಾದಿ, ಚಿಂತಕ ಎಂ.ಎಂ.ಕಲ್ಬುರ್ಗಿಯವರ ಹತ್ಯೆಗೂ ಬಂಧಿತ ಅಮೂಲ್ ಕಾಳೆಗೂ ಸಂಬಂಧವಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

  • ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆ ಹಾಜರು

    ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆ ಹಾಜರು

    ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಪೊಲೀಸ್ ಬಿಗಿ ಭದ್ರತೆಯಲ್ಲಿ ಹಾಜರು ಪಡಿಸಲಾಯಿತು.

    ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 1 ಜನವರಿ, 2012 ರಂದು ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಶುರಾಮನನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಪರಶುರಾಮನನ್ನು ವಿಜಯಪುರ ಜಿಲ್ಲಾ ಒಂದನೇ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಕೆ ಬಿ ಅವರ ಮುಂದೆ ಹಾಜರು ಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನ ಇದೇ ತಿಂಗಳ 16ಕ್ಕೆ ಮುಂದೂಡಿದರು.

    ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆ ಐದನೇ ಆರೋಪಿಯಾಗಿದ್ದು, ಸದ್ಯಕ್ಕೆ ಆತನನ್ನು ದರ್ಗಾ ಜೈಲಿಗೆ ರವಾನಿಸಲಾಗಿದೆ. ಪರಶುರಾಮ್ ವಾಗ್ಮೋರೆಯನ್ನು ಎಸ್‍ಐಟಿ ತಂಡ ಕರೆ ತಂದಿದ್ದು, ಇಂದು ಮತ್ತೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆಗಳಿವೆ.

  • ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸೇನಾಧಿಕಾರಿ ಕೈವಾಡ ಶಂಕೆ?

    ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸೇನಾಧಿಕಾರಿ ಕೈವಾಡ ಶಂಕೆ?

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಬಂಧಿತ ಆರೋಪಿಗಳ ವಿಚಾರಣೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತದ್ದಾರೆ. ಗೌರಿ ಲಂಕೇಶ್ ಹತ್ಯೆಮಪ್ರಕರಣದಲ್ಲಿ ಮಾಜಿ ಸೇನಾಧಿಕಾರಿಯ ಕೈವಾಡ ಇರೋ ಬಗ್ಗೆ ವಿಶೇಷ ತನಿಖಾ ತಂಡ ಅನುಮಾನ ವ್ಯಕ್ತಪಡಿಸಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಬಲಪಂಥೀಯ ಸಂಘಟನೆಯೊಂದರಲ್ಲಿ ಪ್ರಮುಖ ಹುದ್ದೆಯಲ್ಲಿರುವ ನಾಲ್ವರಲ್ಲಿ ಒಬ್ಬರು ನಿವೃತ್ತ ಕರ್ನಲ್. ಇವರೇ ಪ್ರಮುಖ ಆರೋಪಿಯಾಗಿರುವ ಅಮಿತ್ ಕಾಳೆಗೆ ಗೌರಿ ಹತ್ಯೆ ಮಾಡುವಂತೆ ಸೂಚನೆ ನೀಡಿದ್ದರು ಬಗ್ಗೆ ಶಂಕೆಗಳು ವ್ಯಕ್ತವಾಗಿವೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಸಂಚು ರೂಪಿಸಿದ ಬಳಿಕ ಹತ್ಯೆಗೆ ಬೇಕಾದ ತಯಾರಿಗಾಗಿ ಪ್ರತಿ ತಿಂಗಳು ಆ ಬಲಪಂಥೀಯ ಸಂಘಟನೆ ಕಾಳೆಗೆ 1 ಲಕ್ಷದ 25 ಸಾವಿರ ರೂಪಾಯಿಯನ್ನು ನೀಡಿದೆಯಂತೆ. ಇನ್ನು ಪ್ರಕರಣದಲ್ಲಿ ಇನ್ನೂ ಮೂರು ಮಂದಿಗಾಗಿ ಹುಡುಕಾಟ ನಡೆಯುತ್ತಿದ್ದು ಅವರು ತಪ್ಪಿಸಿಕೊಂಡು ಓಡಾಡಲು ಆ ಸಂಘಟನೆಯೇ ನೆರವು ನೀಡ್ತಿದೆ ಅಂತ ಎಸ್‍ಐಟಿ ಮೂಲಗಳು ತಿಳಿಸಿವೆ.

  • ಗೌರಿ ಹಂತಕ ಆರೋಪಿ ವಾಗ್ಮೋರೆಗೆ ಪಶ್ಚಾತ್ತಾಪ – ಕೋರ್ಟ್ ನಲ್ಲಿ ನೀಡ್ತಾನಂತೆ ತಪ್ಪೊಪ್ಪಿಗೆ ಹೇಳಿಕೆ!

    ಗೌರಿ ಹಂತಕ ಆರೋಪಿ ವಾಗ್ಮೋರೆಗೆ ಪಶ್ಚಾತ್ತಾಪ – ಕೋರ್ಟ್ ನಲ್ಲಿ ನೀಡ್ತಾನಂತೆ ತಪ್ಪೊಪ್ಪಿಗೆ ಹೇಳಿಕೆ!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‍ನಲ್ಲಿ ಬಂಧಿತನಾಗಿರುವ ಹಂತಕ ಆರೋಪಿ ಪರಶುರಾಮ್ ವಾಗ್ಮೋರೆಗೆ ಪಶ್ಚಾತಾಪ ಆಗಿದೆಯಂತೆ. ಈ ಹಿನ್ನೆಲೆಯಲ್ಲಿ ಕಾನೂನು ಹೋರಾಟವನ್ನು ನಿಲ್ಲಿಸಿ ತಾನು ಮಾಡಿದ್ದ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಐಪಿಸಿ ಸೆಕ್ಷನ್ 314ರ ಅಡಿಯಲ್ಲಿ ತಪ್ಪೊಪ್ಪಿಗೆ ಸ್ಟೇಟ್‍ಮೆಂಟ್ ನೀಡಲು ತಯಾರಾಗಿದ್ದು, ನಾನು ಮಾಡಿದ್ದು ತಪ್ಪಾಯ್ತು. ನ್ಯಾಯಾಧೀಶರ ಮುಂದೆ ಎಲ್ಲವನ್ನೂ ಹೇಳ್ತೀನಿ ಎಂದಿದ್ದಾನೆ. ಹೀಗಾಗಿ ಎಸ್‍ಐಟಿ ಅಧಿಕಾರಿಗಳು ವಾಗ್ಮೋರೆ ಸ್ಟೇಟ್‍ಮೆಂಟ್ ರೆಕಾರ್ಡ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

    ಒಂದು ವೇಳೆ ಪರಶುರಾಮ್ ವಾಗ್ಮೋರೆ ಸ್ಟೇಟ್‍ಮೆಂಟ್ ಕೊಟ್ಟರೆ, ಈವರೆಗೆ ಬಾಯಿ ಬಿಡದೆ ಸುಮ್ಮನಿದ್ದ ಐವರು ಆರೋಪಿಗಳಿಗೆ ಸಂಕಷ್ಟ ಎದುರಾಗಲಿದೆ.

    ಪರುಶುರಾಮ್ ವಾಗ್ಮೋರೆ, ಎಸ್‍ಐಟಿ ಪೊಲೀಸರ ತನಿಖೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸ್ತಿರೋದು ಎಸ್‍ಐಟಿ ಪೊಲೀಸರಿಗೆ ಖುಷಿ ತಂದಿತ್ತು. ಇದರ ಬೆನ್ನಲ್ಲೆ ಪರುಶುರಾಮ್ ತನ್ನ ತಾಯಿಯನ್ನು ಒಮ್ಮೆ ನೋಡಬೇಕು ಅನ್ನೋ ಆಸೆಯನ್ನು ಎಸ್‍ಐಟಿ ಪೊಲೀಸರ ಮುಂದೆ ಹೇಳಿಕೊಂಡಿದ್ದನು. ಈ ಬೇಡಿಕೆಗೆ ಸ್ಪಂದಿಸಿದ ಎಸ್‍ಐಟಿ ಅಧಿಕಾರಿಗಳು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಎಸ್‍ಐಟಿಯಲ್ಲಿ ಪರುಶುರಾಮ್ ತಾಯಿ ಮತ್ತು ತಂದೆಯನ್ನು ಭೇಟಿಗೆ ಅವಕಾಶ ಮಾಡಿಕೊಟ್ಟಿದ್ರು.

  • ನೀನ್ ಹುಟ್ಟಿದ್ದೇ ಗೌರಿ ಹತ್ಯೆ ಮಾಡಲು, ನಿನ್ನ ಹೆಸರಲ್ಲಿದೆ ಧರ್ಮರಕ್ಷಣೆಯ ಸಂಕೇತ- ಪರಶುರಾಮ್ ವಾಗ್ಮೋರೆಗೆ ಮಾಡಿದ್ರಂತೆ ಬ್ರೈನ್‍ವಾಶ್..!

    ನೀನ್ ಹುಟ್ಟಿದ್ದೇ ಗೌರಿ ಹತ್ಯೆ ಮಾಡಲು, ನಿನ್ನ ಹೆಸರಲ್ಲಿದೆ ಧರ್ಮರಕ್ಷಣೆಯ ಸಂಕೇತ- ಪರಶುರಾಮ್ ವಾಗ್ಮೋರೆಗೆ ಮಾಡಿದ್ರಂತೆ ಬ್ರೈನ್‍ವಾಶ್..!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕ ಆರೋಪಿ ಪರುಶುರಾಮ್ ವಾಗ್ಮೋರೆಯನ್ನ ತನಿಖಾಧಿಕಾರಿಗಳು ಹತ್ಯೆಯಾದ ಸ್ಥಳದಲ್ಲಿ ಮರುಸೃಷ್ಠಿ ಮಾಡಿಸಿದ್ದಾರೆ. ಗೌರಿ ಹತ್ಯೆ ಮಾಡಿದ ಸ್ಥಳದ ಮೃರುಸೃಷ್ಠಿಯ ವೇಳೆ ಹಂತಕ ವಾಗ್ಮೋರೆ ಹತ್ಯೆಯ ರಹಸ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಆರೋಪಿ ವಾಗ್ಮೋರೆ ಮರು ಸೃಷ್ಠಿಯ ವೇಳೆ ತನಿಖಾಧಿಕಾರಿಗಳ ಮುಂದೆ ಹೇಳಿರುವ ಸ್ಫೋಟಕ ಸತ್ಯವನ್ನ ಬಾಯ್ಬಿಟ್ಟಿದ್ದಾನೆ.

    ನೀನು ಕೃಷ್ಣನ ವಂಶಸ್ಥ, ಭಗವಂತನ ವಂಶಸ್ಥ, ನೀನು ಹುಟ್ಟಿರುವುದೇ ಧರ್ಮದ ವಿರುದ್ಧ ಮಾತನಾಡುವ ಗೌರಿ ಲಂಕೇಶ್ ಅಂತವರನ್ನ ಹತ್ಯೆ ಮಾಡಲು. ನಿನ್ನ ಹೆಸರಲ್ಲೇ ಧರ್ಮ ರಕ್ಷಣೆಯ ಸಂಕೇತವಿದೆ ಅಂತೆಲ್ಲಾ ಪರಶುರಾಮ್ ವಾಗ್ಮೋರೆಯನ್ನ ಆರೋಪಿ ಸುಜೀತ್ ಹಾಗೂ ಕಾಳೆ ವಾಗ್ಮೋರೆಯನ್ನ ಪ್ರೇರೇಪಿಸಿದ್ದರಂತೆ. ಅಷ್ಟೇ ಅಲ್ಲ ಗೌರಿ ಲಂಕೇಶ್ ಧರ್ಮದ ವಿರುದ್ಧ ಮಾತನಾಡಿರುವ ವಿಡಿಯೋಗಳನ್ನ ಯುಟ್ಯೂಬ್‍ಗಳಲ್ಲಿ ಪದೇ ಪೇದೆ ತೋರಿಸ್ತಿದ್ದರಂತೆ. ಇದೆನೆಲ್ಲ ನೋಡಿದ ಮೇಲೆ ಸ್ನೇಹಿತರು ಹೇಳುತ್ತಿರುವುದೇ ಸರಿ ಎನಿಸಿತು. ಹೀಗಾಗಿ ಗೌರಿಯನ್ನ ಹತ್ಯೆ ಮಾಡಿದ್ದಾಗಿ ಎಸ್‍ಐಟಿ ತನಿಖಾಧಿಕಾರಿಗಳ ಮುಂದೆ ಆರೋಪಿ ಪರಶುರಾಮ್ ವಾಗ್ಮೋರೆ ತಪ್ಪೊಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ.

    ಇನ್ನು ಪ್ರಕರಣದ ಮರುಸೃಷ್ಠಿಯ ವೇಳೆ ಗೌರಿ ಹತ್ಯೆ ಹೇಗೆ ಮಾಡಿದ್ದು ಅನ್ನೋದರ ಬಗ್ಗೆ ಪರಶುರವಾಮ್ ವಾಗ್ಮೋರೆ ತನಿಖಾಧಿಕಾರಿಗಳ ಮುಂದೆ ಇಂಚಿಂಚು ಬಾಯ್ಬಿಟ್ಟಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಗೌರಿ ಲಂಕೇಶ್ ಮನೆ ಗೇಟ್ ಓಪನ್ ಮಾಡುತ್ತಿದ್ದಂತೆ ಹಣೆಗೆ ಗುರಿ ಇಟ್ಟು ಶೂಟ್ ಮಾಡಿದೆ ಅದು ಯಶಸ್ವಿಯಾಗಲಿಲ್ಲ. ಆಗ ಗೇಟಿನಿಂದ ಒಳಗಡೆ ನುಗ್ಗಿ ಮನಸೋ ಇಚ್ಚೆ ಗುಂಡು ಹಾರಿಸಿದ್ದಾಗಿ ತನಿಖಾಧಿಕಾರಿಗಳ ಮುಂದೆ ಪರಶುರಾಮ್ ವಾಗ್ಮೋರೆ ತಪ್ಪೊಪ್ಪಿಕೊಂಡಿದ್ದಾನೆಂದು ಹೇಳಲಾಗ್ತಿದೆ.

  • ಪರಶುರಾಮ್ ವಾಗ್ಮೋರೆಯ ಆಸೆಯನ್ನು ಈಡೇರಿಸಿದ ಎಸ್‍ಐಟಿ ಅಧಿಕಾರಿಗಳು

    ಪರಶುರಾಮ್ ವಾಗ್ಮೋರೆಯ ಆಸೆಯನ್ನು ಈಡೇರಿಸಿದ ಎಸ್‍ಐಟಿ ಅಧಿಕಾರಿಗಳು

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‍ನಲ್ಲಿ ಆರೋಪಿಯಾಗಿರುವ ಪರುಶುರಾಮ್ ವಾಗ್ಮೋರೆಯ ಆಸೆಯನ್ನು ಎಸ್‍ಐಟಿ ಪೊಲೀಸರು ಈಡೇರಿಸಿದ್ದಾರೆ. ಇದರಿಂದ ವಾಗ್ಮೋರೆ ಫುಲ್ ಖುಷ್ ಆಗಿದ್ದಾನೆ. ಇದನ್ನೂ ಓದಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಮೇಜರ್ ಟ್ವಿಸ್ಟ್!

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಪರುಶುರಾಮ್ ವಾಗ್ಮೋರೆ, ಎಸ್‍ಐಟಿ ಪೊಲೀಸರ ತನಿಖೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸ್ತಿರೋದು ಎಸ್‍ಐಟಿ ಪೊಲೀಸರಿಗೆ ಖುಷಿ ತಂದಿದೆ ಅಂತೆ. ಇದರ ಬೆನ್ನಲ್ಲೆ ಪರುಶುರಾಮ್ ತನ್ನ ತಾಯಿಯನ್ನು ಒಮ್ಮೆ ನೋಡಬೇಕು ಅನ್ನೋ ಆಸೆಯನ್ನು ಎಸ್‍ಐಟಿ ಪೊಲೀಸರ ಮುಂದೆ ಹೇಳಿಕೊಂಡಿದ್ದನು. ಈ ಬೇಡಿಕೆಗೆ ಸ್ಪಂದಿಸಿದ ಎಸ್‍ಐಟಿ ಅಧಿಕಾರಿಗಳು ಭಾನುವಾರ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಎಸ್‍ಐಟಿಯಲ್ಲಿ ಪರುಶುರಾಮ್ ತಾಯಿ ಮತ್ತು ತಂದೆಯನ್ನು ಭೇಟಿಗೆ ಅವಕಾಶ ಮಾಡಿಕೊಟ್ಟಿದ್ರು. ಇದನ್ನೂ ಓದಿ:  ಫೋಟೋ ತೆಗಿಸಿಕೊಂಡವರೆಲ್ಲಾ ಸಂಘಟನೆ ಕಾರ್ಯಕರ್ತರಲ್ಲ – ಗೌರಿ ಲಂಕೇಶ್ ಹತ್ಯೆಗೂ ಸಂಘಟನೆಗೂ ಸಂಬಂಧವಿಲ್ಲ: ಪ್ರಮೋದ್ ಮುತಾಲಿಕ್

    ತನ್ನ ತಾಯಿಯನ್ನು ನೋಡಿದ ಮಗ ಪರುಶುರಾಮ್, ನಾನು ತಪ್ಪು ಮಾಡಿಬಿಟ್ಟೆ ಅಂತಾ ತಾಯಿಯನ್ನು ತಬ್ಬಿ ಕಣ್ಣೀರು ಹಾಕಿದ್ದಾನೆ. ತಾಯಿ ಜಾನಕಿಬಾಯಿ ಕೂಡ ಮಗನನ್ನು ನೋಡಿ ಅಪ್ಪಿ ಮುದ್ದಾಡಿ ಖುಷಿಯಾದ್ರು. ಇದೇ ವೇಳೆ ಮಾತಾನಾಡಿದ ಪರುಶುರಾಮ್ ಪೋಷಕರು, ನನ್ನ ಮಗನನ್ನು ಪೊಲೀಸರು ತುಂಬಾ ಚನ್ನಾಗಿ ನೋಡಿಕೊಂಡಿದ್ದಾರೆ. ಅವನಿಗೆ ಹೊಡೆದಿಲ್ಲ. ನನ್ನ ಮಗ ನಿರ್ದೋಷಿಯಾಗಿ ಹೊರ ಬರ್ತಾನೆ ಅಂತಾ ಭರವಸೆ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

    ಸದ್ಯ ತಾಯಿ ತಂದೆಯನ್ನು ಭೇಟಿಯಾದ ಖುಷಿಯಲ್ಲಿರುವ ವಾಗ್ಮೋರೆ, ಎಸ್‍ಐಟಿ ಪೊಲೀಸರಿಗೆ ಇನ್ನಷ್ಟು ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾನೆ ಅನ್ನೋ ಭರವಸೆ ಎಸ್‍ಐಟಿ ಅಧಿಕಾರಿಗಳಲ್ಲಿ ಮೂಡಿದೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

     

  • ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಮೇಜರ್ ಟ್ವಿಸ್ಟ್!

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಮೇಜರ್ ಟ್ವಿಸ್ಟ್!

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಎಸ್‍ಐಟಿ ತನಿಖೆ ವೇಳೆ ಒಂದಾದಮೇಲೊಂದರಂತೆ ಸ್ಫೋಟಕ ಸತ್ಯಗಳು ಹೊರಬರುತ್ತಿವೆ.

    ಗೌರಿ ಹತ್ಯೆಗೆ ಪರಶುರಾಮ್ ವಾಗ್ಮೋರೆ ಪಡೆದಿದ್ದು ಕೇವಲ 13 ಸಾವಿರ ರೂ. ಅಂತೆ. ಸಂಚುಕೋರರು ಪರಶುರಾಮ್ ಗೆ ಮೊದಲು 3 ಸಾವಿರ ಬಳಿಕ 10 ಸಾವಿರ ನೀಡಿದ್ದಾರೆ. ಹಾಗಿದ್ರೆ ಕೇವಲ 13 ಸಾವಿರಕ್ಕೆ ಹತ್ಯೆ ಮಾಡಲು ವಾಗ್ಮೊರೆ ಒಪ್ಪಿಕೊಂಡಿದ್ಯಾಕೆ ಎಂಬ ಪ್ರಶ್ನೆ ಮೂಡುತ್ತದೆ. ಇದನ್ನೂ ಓದಿ: ಗೌರಿ ಹಂತಕರ ಹಿಟ್‍ಲಿಸ್ಟಲ್ಲಿ ಇದ್ದದ್ದು ಐವರಲ್ಲ- 4 ಜನರಿಂದ 10 ಮಂದಿಯ ಟಾರ್ಗೆಟ್!

    ಪರಶುರಾಮ್ ವಾಗ್ಮೊರೆ ಗೌರಿಯನ್ನು ಕೊಂದಿದ್ದು ಹಣಕ್ಕಲ್ಲ ಬದಲಾಗಿ ಸೈದ್ಧಾಂತಿಕ ವಿರೋಧದಿಂದ ಗೌರಿಯನ್ನು ಹತ್ಯೆ ಮಾಡಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ

    ಹಣಕ್ಕಾಗಿ ಕೊಲ್ಲೊದಾದರೆ ಆಗಲ್ಲ ಅಂತ ಹೇಳಿದ್ದೆ. ಆದ್ರೆ ಗೌರಿಯ ಸೈದ್ಧಾಂತಿಕ ವಿರೋಧಕ್ಕಾಗಿ ಕೊಂದೆ ಅಂತ ಹೇಳಿದ್ದಾನೆ. ಊಟ, ವಸತಿ, ಪ್ರಯಾಣಕ್ಕಾಗಿ ವಾಗ್ಮೋರೆಗೆ ಸಂಚುಕೋರರು ಮೊದಲ ಹಂತದಲ್ಲಿ 3 ಸಾವಿರ ಸೆಟ್ಲ್‍ಮೆಂಟ್ ಮಾಡಿದ್ದು, ಇನ್ನು ಕೊಲೆಯಾದ ಬಳಿಕ ವಾಗ್ಮೋರೆಗೆ ಎರಡನೇ ಹಂತದಲ್ಲಿ 10 ಸಾವಿರ ನೀಡಿರುವುದಾಗಿ ತನಿಖೆ ವೇಳೆ ತಿಳಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

    ಘಟನೆ ವಿವರ:
    ಸೆಪ್ಟಂಬರ್ 5ರಂದು ಕಚೇರಿಯಿಂದ ಮನೆಗೆ ಬಂದ ಗೌರಿ ಅವರು ಕಾರ್ ನಿಲ್ಲಿಸಿ ಗೇಟ್ ತೆಗೆದು ಒಳಗಡೆ ಹೊರಟ್ಟಿದ್ದರು. ಈ ವೇಳೆ ಗೌರಿ ತಲೆಗೆ ಹಿಂಬದಿಯಿಂದ ಫೈರ್ ಮಾಡಲು ಹಂತಕ ರೆಡಿಯಾಗಿದ್ದನು. ಹಿಂದೆ ಯಾರೋ ಬಂದಿದ್ದಾರೆಂದು ಗೊತ್ತಾದ ಕೂಡಲೇ ಗೌರಿ ಹಿಂದಿರುಗಿ ನೋಡಿದಾಗ ಹಂತಕನನ್ನು ನೋಡಿದ್ದಾರೆ. ಕೂಡಲೇ ಯಾರು? ಯಾರು ನೀನು? ಅಂತ ಗಾಬರಿಯಿಂದ ಗೌರಿ ಅವರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗೆ ತಬ್ಬಿಬ್ಬಾದ ಹಂತಕ ತಕ್ಷಣ ಕೈಯಲ್ಲಿದ್ದ ರಿವಾಲ್ವರ್ ಮೂಲಕ ತಲೆಗೆ ಗುಂಡು ಹೊಡೆಯಲು ಫೈರ್ ಮಾಡಿದ್ದ, ಆದ್ರೆ ಅದು ಗುರಿ ತಪ್ಪಿ ಗೋಡೆಗೆ ಸಿಡಿದಿತ್ತು.  ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆ ಕೇಸ್ – ಎಸ್‍ಐಟಿ ಮುಂದೆ ತಪ್ಪೊಪ್ಪಿಕೊಂಡು ಕಣ್ಣೀರಿಟ್ಟ ವಾಗ್ಮೋರೆ!

    ಗೌರಿ ತಪ್ಪಿಸಿಕೊಳ್ತಾರೆ ಅಂತ ಗೊತ್ತಾದಾಗ ಹಂತಕ, ಕ್ಷಣಾರ್ಧದಲ್ಲಿ ಟಾರ್ಗೆಟ್ ಚೇಂಜ್ ಮಾಡಿ, ತಲೆಗೆ ಗುಂಡು ಹೊಡೆಯುವ ಬದಲು, ಹೊಟ್ಟೆ ಮತ್ತು ಎದೆಯ ಭಾಗಕ್ಕೆ ನಾಲ್ಕು ಗುಂಡು ಹೊಡೆದಿದ್ದಾನೆ. ಕೊನೆಯ ಗುಂಡು ಮತ್ತೆ ಗುರಿ ತಪ್ಪಿತ್ತು. ಅಷ್ಟರಲ್ಲಿ ಪತ್ರಕರ್ತೆ ಗೌರಿಯವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹಂತಕ ಸಿಡಿಸಿದ ಮೂರನೇ ಗುಂಡು ನೇರವಾಗಿ ಎದೆಗೆ ನುಗ್ಗಿ ಹೃದಯವನ್ನೇ ಹೊಕ್ಕಿತ್ತು. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಗೆ ಹಂತಕರು ಇಟ್ಟಿದ್ದ ಹೆಸರು `ಅಮ್ಮ’ – ಇನ್ನಿಬ್ಬರು ಹತ್ಯೆಗೂ ಎರಡಕ್ಷರದ ಕೋಡ್‍ವರ್ಡ್

  • ಗೌರಿ ಕೇಸ್ ಸಂಬಂಧ ಎಸ್‍ಐಟಿಯಿಂದ ವಿಚಾರಣೆ ತೀವ್ರ- ರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಬುಲಾವ್

    ಗೌರಿ ಕೇಸ್ ಸಂಬಂಧ ಎಸ್‍ಐಟಿಯಿಂದ ವಿಚಾರಣೆ ತೀವ್ರ- ರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಬುಲಾವ್

    ವಿಜಯಪುರ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಎಸ್‍ಐಟಿ ಬುಲಾವ್ ನೀಡಿದೆ.

    ಬೆಂಗಳೂರಿಗೆ ತೆರಳುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಯಾವ ವಿಚಾರಣೆಗೆ ಎಂಬುದು ಗೊತ್ತಿಲ್ಲ, ಅಲ್ಲಿ ಹೋದ ಬಳಿಕವೇ ಗೊತ್ತಾಗಲಿದೆ. ಪರಶುರಾಮ ನನ್ನ ಜೊತೆ ಬಹಳ ಹತ್ತಿರದಿಂದ ಇದ್ದ, ಅವನು ಇಂತಹ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದು ನನಗೆ ಶಾಕ್ ಆಗಿದೆ. ಪರಶುರಾಮ ಈ ಕೇಸ್ ನಿಂದ ನಿರ್ದೋಷಿ ಆಗಿ ಬರಲಿ ಎಂದು ಆಶಿಸುತ್ತೇನೆ. ಅಲ್ಲದೆ ಅವನು ಬಹಳ ಮುಗ್ಧ ವ್ಯಕ್ತಿಯಾಗಿದ್ದಾನೆ. ಪರಶುರಾಮ ವಾಗ್ಮೋರೆ ಕುಟುಂಬದವರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರಿಗೆ ಸಹಾಯ ಆಗಲಿ ಎಂದು ಫೇಸ್ ಬುಕ್ ನಲ್ಲಿ ಮನವಿ ಮಾಡಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಗೌರಿ ಕೇಸ್: ಪರಶುರಾಮ್ ವಾಗ್ಮೋರೆ ಕುರಿತಂತೆ ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ

    ಪೊಲೀಸ್ ನೋಟಿಸ್ ಮೂಲಕ ರಾಕೇಶ್ ಗೆ ಬೆಂಗಳೂರಿಗೆ ಬರಲು ಬುಲಾವ್ ನೀಡಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯ ಕಲಂ 302, 120(B), 114, 118, 35 ಐಪಿಸಿ 3, 25 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ತನಿಖೆ ನಡೆಸಲು ವಿಚಾರಣೆಗಾಗಿ ಬುಲಾವ್ ಮಾಡಲಾಗಿದೆಯಂತೆ. ಇಂದು ಬೆಳಗ್ಗೆ ಸಿಐಡಿ ಕಚೇರಿಗೆ ಹಾಜರಾಗುವಂತೆ ಸಿಐಡಿ ಮುಖ್ಯ ವಿಚಾರಣಾ ಅಧಿಕಾರಿ ಎಮ್ ಎನ್ ಅನುಚೇತನ್ ರಿಂದ ನೋಟಿಸ್ ನೀಡಲಾಗಿದ್ದು, ಅದರಂತೆ ಹಾಜರಾಗಲು ಶ್ರೀರಾಮಸೇನೆ ವಿಜಯಪುರ ಜಿಲ್ಲಾಧ್ಯಕ್ಷ ರಾಕೇಶ್ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಇವರ ಜೊತೆ ವಾಗ್ಮೋರೆ ತಂದೆ ಕೂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ

    ಸುನೀಲ್

    ಇನ್ನು ಪ್ರಕರಣ ಸಂಬಂಧ ಎಸ್‍ಐಟಿ ವಶದಲ್ಲಿದ್ದ ಸುನಿಲ್ ಅಗಸರ್ ನ್ನು ಬಿಡುಗಡೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ನಿವಾಸಿ ಸುನಿಲ್ ಅಗಸರ್ ಎಸ್‍ಐಟಿ ಪೊಲೀಸರು ಕಳೆದ ರವಿವಾರ ವಶಕ್ಕೆ ತೆಗೆದುಕೊಂಡಿದ್ದರು. ಇನ್ನು ವಿಚಾರಣೆ ಬಳಿಕ ಎಸ್‍ಐಟಿ ಪೊಲೀಸರು ಕ್ಲೀನ್‍ಚಿಟ್ ನೀಡಿ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!