Tag: ಪರಶುರಾಮ್ ವಾಗ್ಮೋರೆ

  • ಗೌರಿ ಲಂಕೇಶ್ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ

    ಗೌರಿ ಲಂಕೇಶ್ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಅಮೋಲ್ ಕಾಳೆ ಎಂದು ಹೇಳಲಾಗುತ್ತಿದೆ. ಪುಣೆಯ ಅಮೋಲ್ ಕಾಳೆಗೆ ಗೌರಿಯವರನ್ನು ಹತ್ಯೆಗೈಯಲು ಸಂಘಟನೆಯೊಂದು ಸುಪಾರಿ ನೀಡಿತ್ತು ಎಂಬ ಸ್ಪೋಟಕ ಮಾಹಿತಿಗಳು ಲಭ್ಯವಾಗಿವೆ. ಇದನ್ನೂ ಓದಿ: ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

    ಸಂಘಟನೆ ನೀಡಿದ್ದ ಕೆಲಸವನ್ನು ನಿರ್ವಹಿಸಲು ಅಮೋಲ್ ಕಾಳೆ ಒಂದು ವರ್ಷದಿಂದ ಸ್ಕೆಚ್ ಹಾಕಿದ್ದನು. ಹತ್ಯೆಗೂ ಒಂದು ವಾರ ಮುನ್ನವೇ ಬೆಂಗಳೂರಿಗೆ ಬಂದಿದ್ದ ಅಮೋಲ್ ಕಾಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು. ಎರಡು ತಿಂಗಳ ಹಿಂದೆ ಬಂಧಿತನಾಗಿರುವ ನವೀನ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನೇ ನಾಯಂಡಹಳ್ಳಿ ಬಾಡಿಗೆ ಮನೆಯನ್ನು ಮಾಡಿಕೊಟ್ಟಿದ್ದನು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

    ಬೆಂಗಳೂರಿಗೆ ಬಂದಿದ್ದ ಅಮೋಲ್ ಕಾಳೆ ಹಂತಕರ ಟೀಂಗಾಗಿ ಹುಡುಕಾಟ ನಡೆಸಿದ್ದನು. ಈ ವೇಳೆ ಅಮೋಲ್ ಕಾಳೆಗೆ ಸಿಕ್ಕಿದ್ದು, ಬರೋಬ್ಬರಿ 9 ಜನ. ಈ ಎಲ್ಲರಲ್ಲಿ ಗೌರಿಯವರನ್ನು ಕೊಲ್ಲಲು ನೇಮಕವಾದವನೇ ಸಿಂಧಗಿಯ ಪರಶುರಾಮ್ ವಾಗ್ಮೋರೆ. ಇದನ್ನೂ ಓದಿ: ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

    ಕೊಲೆಗೂ ಎರಡು ದಿನ ಮುನ್ನ ಅಂದರೆ ಸೆ.3ರಂದು ಪರಶುರಾಮ್ ಬೆಂಗಳೂರಿಗೆ ಬಂದಿದ್ದು, ಸೆ.4ರಂದು ಗೌರಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದ್ರೆ ಸರಿಯಾದ ಸಮಯ, ಸ್ಥಳ ನಿಗದಿಯಾಗದ ಹಿನ್ನೆಲೆಯಲ್ಲಿ ಪ್ಲಾನ್ ಫೇಲ್ ಆಗಿತ್ತು. ಸೆ.5ರಂದು ಹಂತಕರು ಪ್ಲಾನ್ ಮಾಡಿದ್ದಂತೆ ಗೌರಿಯವರನ್ನು ಕೊಂದು ಹಾಕಿದ್ದರು. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

    https://www.youtube.com/watch?v=Muzh1bCrCp8

    https://www.youtube.com/watch?v=1Ik_Z5XZXfY

  • ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

    ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಸಿಂಧಗಿ ಪರಶುರಾಮ್ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ವಿಜಯಪುರ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ನೀಲಕಂಠ ಕಂದಗಲ್ ಫೇಸ್‍ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

    ಫೇಸ್‍ಬುಕ್ ನಲ್ಲಿ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ಬರೆದಿರು ಫೋಟೋವನ್ನು ಶ್ರೀರಾಮ ಸೇನೆಯ ಸಂಚಾಲಕ ಹಾಕಿಕೊಂಡಿದ್ದಾರೆ. ಮಾತೃ ಭೂಮಿಯ ರಕ್ಷಣೆಗಾಗಿ ಮುಡುಪಾಗಿದೆ ನನ್ನ ಪ್ರಾಣ. ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ. ದೇಶದ್ರೋಹಿಗಳಿಗೆ ಹಾಗು ನಕ್ಸಲರಿಗೆ ಬೆಂಬಲಿಸುವವರನ್ನು ಕೊಲ್ಲುವುದು ತಪ್ಪೇ ಅಂತಾ ಬರೆಯಲಾಗಿದೆ. ಇದನ್ನೂ ಓದಿ: ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

    ಪರಶುರಾಮ್ ಬಂಧನವಾದಾಗ ಆತನಿಗೂ ಸೇನೆಗೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀರಾಮ ಸೇನಾ ಸಂಚಾಲಕ ಪ್ರಮೋದ ಮುತಾಲಿಕ್ ಹೇಳಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ನೀಲಕಂಠರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

     ಇದನ್ನೂ ಓದಿ: ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

    https://www.youtube.com/watch?v=AIwNtdKGVGs

    https://www.youtube.com/watch?v=Muzh1bCrCp8

  • ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

    ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

    ಬೆಂಗಳೂರು: ಸತತ 9 ತಿಂಗಳ ಸುದೀರ್ಘ ತನಿಖೆಯ ಬಳಿಕ ಎಸ್‍ಐಟಿ ಗೌರಿ ಲಂಕೇಶ್‍ವರ ಹತ್ಯೆಯ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದಾರೆ. ಆದ್ರೆ ಪರಶುರಾಮ್ ಸಿಕ್ಕಿದ್ದು ಹೇಗೆ ಎಂಬುದರ ಬಗ್ಗೆ ಮಾಹಿತಿಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿವೆ.

    ಮಹಾರಾಷ್ಟ್ರದಲ್ಲಿ ಅಮೋಲ್ ಕಾಳೆಯ ಬಂಧನವಾದಾಗ ಆತನ ಬಳಿ ಡೈರಿಯೊಂದು ಸಿಕ್ಕಿತ್ತು. ಆ ಡೈರಿಯಲ್ಲಿ ನೂರಕ್ಕೂ ಹೆಚ್ಚು ಜನರ ಹೆಸರುಗಳನ್ನು ಬರೆಯಲಾಗಿತ್ತು. ಎಸ್‍ಐಟಿ ಪ್ರತಿಯೊಂದು ಹೆಸರಿನ ಹಿಂದೆ ಬಿದ್ದು ಎಲ್ಲಿಯೂ ಮಾಹಿತಿ ಸೋರಿಕೆಯಾಗದಂತೆ ರಹಸ್ಯವಾಗಿ ತನಿಖೆ ನಡೆಸಿತ್ತು. ಆ ನೂರು ಹೆಸರುಗಳಲ್ಲಿ ಪರಶುರಾಮ್ ವಾಗ್ಮೋರೆ ಹೆಸರು ಎಸ್‍ಐಟಿ ಅಧಿಕಾರಿಗಳನ್ನು ಸೆಳೆದಿತ್ತು.

    ವಾಗ್ಮೋರೆಯ ಕಾಲ್ ಡಿಟೇಲ್ಸ್ ಪರಶೀಲಿಸಿದಾಗ ಗೌರಿ ಹತ್ಯೆಗೂ ಮುನ್ನ ಮತ್ತು ನಂತರದ ಒಂದು ತಿಂಗಳ ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಹಿಂದೆ ಸಿಂಧಗಿಯಲ್ಲಿ ನಡೆದ ಪಾಕಿಸ್ತಾನ ಧ್ವಜಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಇದೇ ಪರಶುರಾಮ್ ಹೈ ಡ್ರಾಮಾ ನಡೆಸಿದ್ದನು. ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟಕೊಂಡು ಭಾನುವಾರ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಗೌರಿ ಹತ್ಯೆಯ ವೃತ್ತಾಂತವನ್ನು ಇಂಚಿಂಚಾಗಿ ಹೊರ ಹಾಕಿದ್ದಾನೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

    ಯಾರು ಈ ಪರಶುರಾಮ್ ವಾಗ್ಮೋರೆ?: ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ನಿವಾಸಿ ಪರಶುರಾಮ್ ವಾಗ್ಮೋರೆ. ವಯಸ್ಸು 26, ಕಟ್ಟಾ ಹಿಂದೂವಾದಿಯಾಗಿದ್ದು, ಶ್ರೀರಾಮಸೇನೆ, ಹಿಂದೂ ಜಾಗೃತಿ ವೇದಿಕೆಯಲ್ಲೂ ಗುರುತಿಸಿಕೊಂಡಿದ್ದನು. ಈ ಹಿಂದೆ ಸಿಂಧಗಿ ತಹಶೀಲ್ದಾರ್ ಕಚೇರಿ ಬಳಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ಹೆಸರು ಕೇಳಿ ಬಂದಿತ್ತು. ಪರಶುರಾಮ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು, ಅಮೋಲ್ ಕಾಳೆ, ಮನೋಹರ್ ಯವಡೆಗೆ ಎಂಬವರಿಗೆ ತರಬೇತಿ ನೀಡಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಬಂಧಿಕರ ಅಂಗಡಿಯಲ್ಲಿ ಪರಶುರಾಮ್ ಕೆಲಸ ಮಾಡಿಕೊಂಡಿದ್ದನು.

    ನನ್ನ ಮಗ ಯಾವುದೇ ತಪ್ಪು ಮಾಡಲಿಲ್ಲ. ವಿನಾಕಾರಣ ನನ್ನ ಮಗನನ್ನು ಬಂಧಿಸಿದ್ದಾರೆ. ಶ್ರೀರಾಮ ಸೇನೆ ಮತ್ತು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದಕ್ಕೆ ಈ ರೀತಿ ಮಾಡಿದ್ದಾರೆ. ನಾವು ಕೂಲಿ ನಾಲಿ ಮಾಡಿ ಬದುಕು ಜನ. ನನ್ನ ಮಗ ಕೊಲೆ ಮಾಡುವಂತಹ ವ್ಯಕ್ತಿಯಲ್ಲ. ಭಾನುವಾರ ಬೆಳಿಗ್ಗೆ 9 ಗಂಟೆಗೆ ಎಸ್ ಐಟಿ ತಂಡ ಹಾಗೂ ಕೆಲ ಸ್ಥಳೀಯ ಪೊಲೀಸ್ ಮನೆಗೆ ಬಂದು ಪಾಕಿಸ್ತಾನ ಧ್ವಜ ಹಾರಿಸಿದ ಬಗ್ಗೆ ವಿಚಾರಣೆಗೆ ಕರೆದೊಯ್ಯುವುದಾಗಿ ತಮ್ಮ ಮಗನನ್ನು ಕರೆದುಕೊಂಡು ಹೋದರು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅರೋಪಿ ಪರಶುರಾಮ ವಾಗ್ಮೋರೆ ಪೋಷಕರು ಹೇಳಿದ್ದಾರೆ. ಇದನ್ನೂ ಓದಿ: ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

    https://www.youtube.com/watch?v=Ov8Gc1Ih8tw

  • ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

    ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ 9 ತಿಂಗಳ ಬಳಿಕ ರೋಚತೆ ಸಿಕ್ಕಿದ್ದು, ಹಂತಕ ಆರೋಪಿ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸುವಲ್ಲಿ ಎಸ್‍ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಾಗಾದ್ರೆ ಸೆಪ್ಟಂಬರ್ 5ರ ರಾತ್ರಿ ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಹೇಗೆ ಎಂಬುದರ ಬಗ್ಗೆ ರೋಚಕ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಅಂದು ಹತ್ಯೆಯ ದಿನ ಹಂತಕ ಬರೋಬ್ಬರಿ ಆರು ಗುಂಡುಗಳನ್ನು ಹಾರಿಸಿದ್ದ. ಅವುಗಳಲ್ಲಿ ನಾಲ್ಕು ಗೌರಿ ದೇಹ ಸೇರಿದ್ದು, ಎರಡು ಮಿಸ್ ಆಗಿ ಗೋಡೆಗೆ ತಗುಲಿದ್ದವು.

    ಹತ್ಯೆಗೆ ಪಾತಕಿಗಳ ಪ್ಲಾನ್ ಹೇಗಿತ್ತು?
    ಗೌರಿ ಲಂಕೇಶ್ ಅವರ ಮೇಲೆ ಗುಂಡು ಹಾರಿಸೋದು ಕನ್ಫರ್ಮ್ ಆದರೆ ನೇರವಾಗಿ ತಲೆಗೆ ಶೂಟ್ ಮಾಡಬೇಕು. ಅರ್ಧ ಜೀವ ಮಾಡಿ ಹಿಂದಕ್ಕೆ ಮರಳಿ ಬರಬಾರದು. ಗುಂಡು ಹಾರಿಸಿದ ಬಳಿಕ ಜೀವ ಹೋಗಿದೆಯೋ ಅಥವಾ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡು ಬರಬೇಕೆಂದು ಪರಶುರಾಮ್ ಗೆ ಸೂಚಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

     

    ಹತ್ಯೆಯ ಕ್ಷಣದಲ್ಲಿ ಏನೇನಾಯ್ತು?
    ಸೆಪ್ಟಂಬರ್ 5ರಂದು ಕಚೇರಿಯಿಂದ ಮನೆಗೆ ಬಂದ ಗೌರಿ ಅವರು ಕಾರ್ ನಿಲ್ಲಿಸಿ ಗೇಟ್ ತೆಗೆದು ಒಳಗಡೆ ಹೊರಟ್ಟಿದ್ದರು. ಈ ವೇಳೆ ಗೌರಿ ತಲೆಗೆ ಹಿಂಬದಿಯಿಂದ ಫೈರ್ ಮಾಡಲು ಹಂತಕ ರೆಡಿಯಾಗಿದ್ದನು. ಹಿಂದೆ ಯಾರೋ ಬಂದಿದ್ದಾರೆಂದು ಗೊತ್ತಾದ ಕೂಡಲೇ ಗೌರಿ ಹಿಂದಿರುಗಿ ನೋಡಿದಾಗ ಹಂತಕನನ್ನು ನೋಡಿದ್ದಾರೆ. ಕೂಡಲೇ ಯಾರು? ಯಾರು ನೀನು? ಅಂತ ಗಾಬರಿಯಿಂದ ಗೌರಿ ಅವರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗೆ ತಬ್ಬಿಬ್ಬಾದ ಹಂತಕ ತಕ್ಷಣ ಕೈಯಲ್ಲಿದ್ದ ರಿವಾಲ್ವರ್ ಮೂಲಕ ತಲೆಗೆ ಗುಂಡು ಹೊಡೆಯಲು ಫೈರ್ ಮಾಡಿದ್ದ, ಆದ್ರೆ ಅದು ಗುರಿ ತಪ್ಪಿ ಗೋಡೆಗೆ ಸಿಡಿದಿತ್ತು.

    ಗೌರಿ ತಪ್ಪಿಸಿಕೊಳ್ತಾರೆ ಅಂತ ಗೊತ್ತಾದಾಗ ಹಂತಕ, ಕ್ಷಣಾರ್ಧದಲ್ಲಿ ಟಾರ್ಗೆಟ್ ಚೇಂಜ್ ಮಾಡಿ, ತಲೆಗೆ ಗುಂಡು ಹೊಡೆಯುವ ಬದಲು, ಹೊಟ್ಟೆ ಮತ್ತು ಎದೆಯ ಭಾಗಕ್ಕೆ ನಾಲ್ಕು ಗುಂಡು ಹೊಡೆದಿದ್ದಾನೆ. ಕೊನೆಯ ಗುಂಡು ಮತ್ತೆ ಗುರಿ ತಪ್ಪಿತ್ತು. ಅಷ್ಟರಲ್ಲಿ ಪತ್ರಕರ್ತೆ ಗೌರಿಯವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹಂತಕ ಸಿಡಿಸಿದ ಮೂರನೇ ಗುಂಡು ನೇರವಾಗಿ ಎದೆಗೆ ನುಗ್ಗಿ ಹೃದಯವನ್ನೇ ಹೊಕ್ಕಿತ್ತು.

    ಪ್ಲಾನ್ ಹೇಗಿತ್ತು?: ಪರಶುರಾಮ್ ಕೊಲೆ ಮಾಡೋದಕ್ಕೆ ಎರಡು ತಿಂಗಳು ಮೊದಲು ಹತ್ಯೆ ನಡೆಸುವ ಬಗ್ಗೆ ಅಭ್ಯಾಸ ಮಾಡಿದ್ದನು. ಯಾವ ರೀತಿ ಕೊಲೆ ಮಾಡ್ಬೇಕು ಅನ್ನೋ ಬಗ್ಗೆ ಅಮೋಲ್ ಕಾಳೆ ತರಬೇತಿ ನೀಡಿದ್ದ. ಬೆಳಗಾವಿ, ಪುಣೆಯಲ್ಲಿ ಎರಡು ತಿಂಗಳ ಟ್ರೈನಿಂಗ್ ಪಡೆದ ಬಳಿಕ ಗೌರಿ ಹತ್ಯೆಯ ದಿನ ಹತ್ತಿರವಾಗಿತ್ತು. ಪರಶುರಾಮ್ ಸೆಪ್ಟೆಂಬರ್ 4 ರಂದೇ ಕೊಲ್ಲುವ ನಿರ್ಧಾರದಿಂದ ಬೆಂಗಳೂರಿಗೆ ಬಂದಿದ್ದನು. ಮೊದಲ ಬಾರಿಗೆ ಬೆಂಗಳೂರಿಗೆ ಬಂದವನೇ ನವೀನ್ ಜೊತೆ ಸೇರಿ ಗೌರಿ ಮನೆಯ ಸುತ್ತ ಸುಳಿದಾಡಿದ್ದಾನೆ.

    ಹಂತಕರು ಸೆಪ್ಟಂಬರ್ 4ರಂದೇ ಗೌರಿಯವರನ್ನು ಕೊಲ್ಲಲು ಡೇಟ್ ಫಿಕ್ಸ್ ಮಾಡಿದ್ದರು. ಆದರೆ, ಸರಿಯಾದ ಸಮಯ, ಅವಕಾಶ ಸಿಗದೆ ಅವತ್ತು ಹತ್ಯೆಯ ಪ್ಲಾನ್ ಪ್ಲಾಪ್ ಆಗಿತ್ತು. ಮರು ದಿನ ಅಂದ್ರೆ ಸೆಪ್ಟೆಂಬರ್ 5ರಂದು ಸಮಯ ಸಾಧಿಸಿ ಗೌರಿಯವರನ್ನ ಮುಗಿಸಿಯೇ ಬಿಟ್ಟಿದ್ದರು.

    https://www.youtube.com/watch?v=ASRV3IF-5Cg

    https://www.youtube.com/watch?v=Ov8Gc1Ih8tw

     

  • ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

    ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬಂಧನಕ್ಕೆ ಒಳಗಾಗಿರುವ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆ ತನಿಖೆಯನ್ನು ದಾರಿ ತಪ್ಪಿಸಲು ಯತ್ನಿಸುತ್ತಿರುವ ವಿಚಾರ ಎಸ್‍ಐಟಿ ಮೂಲಗಳಿಂದ ತಿಳಿದುಬಂದಿದೆ.

    ಪರಶುರಾಮ್ ಸೆಪ್ಟಂಬರ್ 05, 2017ರಂದು ಬೆಂಗಳೂರಿಗೆ ಬಂದು ಕೊಲೆಗೈದು ನಂತರ ಸಿಂಧಗಿ ತೆರಳಿದ್ದ. ಆದರೆ ಹತ್ಯೆಗೆ ಬಳಸಿದ್ದ ಗನ್ ಮಾತ್ರ ಇದೂವರೆಗೂ ಪತ್ತೆಯಾಗಿಲ್ಲ. ಈ ಸಂಬಂಧ ಪರಶುರಾಮ್ ಮಾತ್ರ ಗನ್ ಎಲ್ಲಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ನೀಡದೇ ಸತಾಯಿಸುತ್ತಿದ್ದಾನೆ ಎನ್ನುವ ವಿಚಾರವನ್ನು ಮೂಲಗಳು ತಿಳಿಸಿವೆ.

    ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಇನ್ನೋರ್ವ ಆರೋಪಿ ಅಮೋಲ್ ಕಾಳೆ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿದ್ದ. ಗೌರಿ ಹತ್ಯೆಯ ಬಳಿಕ ಪರಶುರಾಮ್ ನೇರವಾಗಿ ಅಮೋಲ್ ವಾಸವಿದ್ದ ಮನೆಗೆ ತೆರಳಿ ಗನ್ ಹ್ಯಾಂಡವರ್ ಮಾಡಿದ್ದಾನೆ. ಆದರೆ ಸದ್ಯ ಎಸ್‍ಐಟಿ ಅಧಿಕಾರಿಗಳಿಗೆ ಅಮೋಲ್ ವಾಸವಿದ್ದ ಮನೆಯನ್ನು ತೋರಿಸಲು ಪರಶುರಾಮ್ ಹಿಂದೇಟು ಹಾಕುತ್ತಿದ್ದಾನಂತೆ. ನಾನು ಬೆಂಗಳೂರಿನಲ್ಲಿ ಇದ್ದಿದ್ದೆ ಎರಡು ದಿನ. ನನಗೆ ಸರಿಯಾಗಿ ದಾರಿ ಗೊತ್ತಾಗುತ್ತಿಲ್ಲ ಎಂದು ಮನೆ ತೋರಿಸಲು ಪರಶುರಾಮ್ ಸತಾಯಿಸುತ್ತಿದ್ದು, ಪೊಲೀಸರನ್ನು ಸುತ್ತಿಸಿ ಸುತ್ತಿಸಿ ಹೈರಾಣು ಮಾಡುತ್ತಿದ್ದಾನೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

    ಪರಶುರಾಮ್ ಹೇಳಿಕೆಯನ್ನು ಆಧರಿಸಿ ಪೊಲೀಸರು ಅಮೋಲ್ ಕಾಳೆಯನ್ನು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಮೋಲ್ ಪೊಲೀಸ್ ಕಸ್ಟಡಿ ಗುರುವಾರ ಅಂತ್ಯವಾಗುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡದೇ ಸತಾಯಿಸುತ್ತಿದ್ದಾನೆ. ಪರಶುರಾಮ್ ಮಾತ್ರ ಹತ್ಯೆಯ ಬಳಿಕ ಗನ್ ನೇರವಾಗಿ ಅಮೋಲ್‍ಗೆ ಹಸ್ತಾಂತರಿಸೋದಾಗಿ ಹೇಳಿಕೆ ನೀಡಿದ್ದಾನೆ. ಗುರವಾರ ಅಮೋಲ್ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಗನ್ ರಿಕವರಿಗೆ ಅಧಿಕಾರಿಗಳು ಸತತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

    ಮಂಪರು ಪರೀಕ್ಷೆ: ಬಂಧಿತ ಎಲ್ಲ ಆರೋಪಿಗಳು ತಮ್ಮ ಹೇಳಿಕೆಗಳನ್ನು ಬದಲಾವಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಸ್‍ಐ ಅಧಿಕಾರಿಗಳು ಕೆಲವೇ ದಿನಗಳಲ್ಲಿ ಕೋರ್ಟ್ ಗೆ ಮಂಪರು ಪರೀಕ್ಷೆ ನಡೆಸಲು ಅನುಮತಿ ಕೋರಿ ಮನವಿ ಸಲ್ಲಿಸುವ ಸಾಧ್ಯತೆಗಳಿವೆ. ಆರೋಪಿಗಳಾದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್ ಸಾಬ್, ಅಮಿತ್ ದೇಗ್ವೇಕರ್ ಅಲಿಯಾಸ್ ಪ್ರದೀಪ್ ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ ಎಲ್ಲರೂ ಸಮರ್ಪಕ ಮಾಹಿತಿಯನ್ನು ನೀಡುತ್ತಿಲ್ಲ.

    ಈ ಹಿಂದೆ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಮಂಪರ ಪರೀಕ್ಷೆಗೆ ಒಳಪಡಿಸಲು ಎಸ್‍ಐಟಿ ಮನವಿ ಮಾಡಿತ್ತು. ಕೋರ್ಟ್ ನವೀನ್ ಮಂಪರು ಪರೀಕ್ಷೆಗೆ ಅನುಮತಿ ಸಹ ನೀಡಿತ್ತು. ಆದರೆ ಗುಜರಾತ್ ಎಫ್ ಎಸ್ ಎಲ್ ಗೆ ತೆರಳಿದಾಗ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಒಪ್ಪಿರಲಿಲ್ಲ. ಹೀಗಾಗಿ ಎಸ್ ಐಟಿ ತಂಡ ಬೆಂಗಳೂರಿಗೆ ವಾಪಸ್ ಆಗಿದ್ದರು.

    ಯಾರು ಈ ಪರಶುರಾಮ್ ವಾಗ್ಮೋರೆ?: ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ನಿವಾಸಿ ಪರಶುರಾಮ್ ವಾಗ್ಮೋರೆ. ವಯಸ್ಸು 26, ಕಟ್ಟಾ ಹಿಂದೂವಾದಿಯಾಗಿದ್ದು, ಶ್ರೀರಾಮಸೇನೆ, ಹಿಂದೂ ಜಾಗೃತಿ ವೇದಿಕೆಯಲ್ಲೂ ಗುರುತಿಸಿಕೊಂಡಿದ್ದನು. ಈ ಹಿಂದೆ ಸಿಂಧಗಿ ತಹಶೀಲ್ದಾರ್ ಕಚೇರಿ ಬಳಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ಹೆಸರು ಕೇಳಿ ಬಂದಿತ್ತು. ಪರಶುರಾಮ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು, ಅಮೋಲ್ ಕಾಳೆ, ಮನೋಹರ್ ಯವಡೆಗೆ ಎಂಬವರಿಗೆ ತರಬೇತಿ ನೀಡಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಬಂಧಿಕರ ಅಂಗಡಿಯಲ್ಲಿ ಪರಶುರಾಮ್ ಕೆಲಸ ಮಾಡಿಕೊಂಡಿದ್ದ.


    ಹತ್ಯೆಯ ಸಂಚು: ಸೆಪ್ಟಂಬರ್ 5, 2017ರಂದು ಗೌರಿ ಲಂಕೇಶ್ ಹತ್ಯೆಯಾಗಿತ್ತು. ಹತ್ಯೆಗೂ ಮುನ್ನವೇ ಎರಡು ತಿಂಗಳು ಮೊದಲ ಸ್ಥಳದ ಪರಿಶೀಲನೆ ನಡೆಸಿದ್ದರು. ಗೌರಿ ಲಂಕೇಶ್‍ವರನ್ನು ಕೊಲೆ ಮಾಡಲೆಂದೇ ಪರಶುರಾಮ್ ಸಿಂಧಗಿಯಿಂದ ಬೆಂಗಳೂರಿಗೆ ಆಗಮಿಸಿದ್ದನು. ಹತ್ಯೆಗೂ ಹಿಂದಿನ ದಿನ ಅಂದರೆ ಸೆಪ್ಟಂಬರ್ 4ರಂದು ಪರಶುರಾಮ್ ಗೆ ಗನ್ ನೀಡಲಾಗಿತ್ತು.

    https://www.youtube.com/watch?v=VqHQDXg-7ME

    https://www.youtube.com/watch?v=1Ik_Z5XZXfY