Tag: ಪರಾರಿ

  • ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಎಸ್ಕೇಪ್

    ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಎಸ್ಕೇಪ್

    ದೊಡ್ಡಬಳ್ಳಾಪುರ: ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಎಸ್ಕೇಪ್ ಆಗಿ ಸಿಬ್ಬಂದಿಗೆ ತಲೆ ಬಿಸಿ ನೀಡಿದ ಘಟನೆ ದೊಡ್ಡಬಳ್ಳಾಪುರ ಸಮೀಪದ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ.

    ಜ.3 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೊಡ್ಡಬಳ್ಳಾಪುರದ ಮಣಿಪಾಲ್ ಆಸ್ಪತ್ರೆಗೆ ರವಾನೆಯಾಗಿದ್ದ 26 ವರ್ಷದ ಸೋಂಕಿತ ವ್ಯಕ್ತಿ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವೃದ್ಧೆಯ ರಂಪಾಟ

     

     

    ಬೆಳಗ್ಗೆ 11 ಗಂಟೆಗೆ ರೋಗಿ ಆಸ್ಪತ್ರೆಗೆ ದಾಖಲಾಗಿದ್ದು, 11:55 ಕ್ಕೆ ಆತ ಎಸ್ಕೇಪ್ ಆಗಿದ್ದಾನೆ. ಸೋಂಕಿತನನ್ನು ಆಸ್ಪತ್ರೆಯಲ್ಲಿ ಹುಡುಕಿದಾಗ ಆತ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

    ಸೋಂಕಿತನ ಮಾಹಿತಿಯನ್ನು ಆಧರಿಸಿ ಆಸ್ಪತ್ರೆಯ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊರೊನಾ ಸೋಂಕಿತರು 7 ದಿನದಲ್ಲಿ ರಿಕವರಿ ಹೊಂದಿದ್ರೂ, 14 ದಿನ ಕ್ವಾರಂಟೈನ್ ಕಡ್ಡಾಯ: WHO

  • ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್

    ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್

    – ಚಹಾ ಕೊಟ್ಟು ಪ್ರಜ್ಞೆ ತಪ್ಪಿಸಿದ್ಳು

    ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.

    ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ಮದುವೆಗೆ ಒಂದು ದಿನ ಬಾಕಿ ಇರುವಾಗ ಅವಳು ತನ್ನ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ಕುಟುಂಬಸ್ಥರು ಎಚ್ಚರಗೊಂಡು ನೋಡಿದ್ದಾಗ ವಧು  ಕಾಣದೆ ಇರುವುದರಿಂದ ಆತಂಕಗೊಂಡು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

    ಕುಟುಂಬದ ಕೆಲವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 1.5 ಲಕ್ಷ ರೂಪಾಯಿ ಹಾಗೂ ಬೆಲೆಬಾಳುವ ಚಿನ್ನಾಭರಣಗಳೊಂದಿಗೆ ಯುವತಿ ಪರಾರಿಯಾಗಿದ್ದಾಳೆ ಎಂದು ವಧುವಿನ ಕುಟುಂಬಸ್ಥರು ಯುವತಿಯ ವಿರುದ್ಧ ವರ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

    BRIBE

    ವಧುವಿನ ಪೋಷಕರು ಸಾಕಷ್ಟು ಪ್ರಯತ್ನದ ನಂತರ ತಮ್ಮ ಹಿರಿಯ ಮಗಳಿಗೆ ಸೂಕ್ತ ವರನನ್ನು ಕಂಡುಕೊಂಡಿದ್ದರು. ಮದುವೆಗೆ ಎಲ್ಲ ಸಿದ್ಧತೆಗಳು ನಡೆದಿದ್ದವು, ಅತಿಥಿಗಳು ಬಂದಿದ್ದರು ಆದರೆ ಕೊನೆ ಕ್ಷಣದಲ್ಲಿ ಮಗಳು ಮಾಡಿದ ಮೋಸದಿಂದ ಮದುವೆ ನಿಂತಿತು. ಮೊದಲ ಮಗಳು ಮೋಸ ಮಾಡಿ ಹೋಗಿರುವ ವಿಚಾರವಾಗಿ ನೊಂದಿರುವ ಕುಟುಂಬದವರು ತಮ್ಮ ಕಿರಿಯ ಮಗಳನ್ನು ವರನಿಗೆ ಮದುವೆ ಮಾಡುವ ಪ್ರಸ್ತಾಪ ಇಟ್ಟಿದ್ದಾರೆ. ಆಗ ಎರಡೂ ಕಡೆಯ ಹಿರಿಯರ ಚರ್ಚೆಯ ನಂತರ ವರನು ವಧುವಿನ ತಂಗಿಯನ್ನು ಮದುವೆಯಾಗಲು ಒಪ್ಪಿದ್ದಾನೆ. ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ

  • ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ

    ಪ್ರೀತಿಸಿ ಮದ್ವೆಯಾದವಳು ನೆರೆ ಮನೆಯವನೊಂದಿಗೆ ಎಸ್ಕೇಪ್- ವೀಡಿಯೋ ಮಾಡಿ ಪತಿ ಆತ್ಮಹತ್ಯೆ

    ವಿಜಯಪುರ: ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜೊತೆಗೆ ಎಸ್ಕೇಪ್ ಆದ ಘಟನೆ ವಿಜಯಪುರದ  ಜಿ. ತಾಳಿಕೋಟೆ ತಾ. ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ನೇಣಿಗೆ ಶರಣಾಗಿದ್ದಾನೆ.

    ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್ ಪ್ರೀತಿಸಿ ಮದುವೆಯಾಗಿದ್ದ. ಈತನ ಪಕ್ಕದ ಮನೆಯ ಸಹೋದರ ಸಂಬಂಧಿ ಶ್ರೀಶೈಲ್ ಎಂಬವನ ಜೊತೆಗೆ ಸದ್ಯ ಪತ್ನಿ ಎಸ್ಕೇಪ್ ಆಗಿದ್ದಾಳೆ. ತಾಳಿಕೋಟೆ ಪೊಲೀಸ್ ಠಾಣೆಗೆ ಇದರ ಬಗ್ಗೆ ವೆಂಕಟೇಶ್ ದೂರು ಕೂಡ ನೀಡಿದ್ದ. ಆದರೆ ವೆಂಕಟೇಶ್ ಜೊತೆಗೆ ಇರೊಲ್ಲ,  ಪ್ರಿಯಕರ ಶ್ರೀಶೈಲ್ ಜೊತೆಗೆ ಇರುವುದಾಗಿ ಪತ್ನಿ ಹೇಳಿದ್ದಳು. ಕಾರಣ ಆಕೆಯ ಹಕ್ಕುಗಳ ಬಗ್ಗೆ ಗಂಡ ವೆಂಕಟೇಶ್ ಗೆ ಪೊಲೀಸರು ಮನವರಿಕೆ ಮಾಡಿದ್ದರು. ಇದರಿಂದ ಮನನೊಂದು ವೆಂಕಟೇಶ್ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

    ಆತ್ಮಹತ್ಯೆಗೂ ಮುನ್ನ ‘ತನ್ನ ಸಾವಿಗೆ ಶ್ರೀಶೈಲ್ ಹೊಣೆ’ ಎಂದು ಹೇಳಿ ಫೇಸ್ ಬುಕ್ ಲೈವ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಫೇಸ್ ಬುಕ್ ನಲ್ಲಿ ಈ ವೀಡಿಯೋ ಕಂಡು ಜಮೀನಿನಲ್ಲಿ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ವೆಂಕಟೇಶ್ ಪ್ರಾಣ ಉಳಿಸಲು, ಸ್ಥಳೀಯರು ಯತ್ನಿಸಿದ್ದಾರೆ. ಆದರೆ ತಾಳಿಕೋಟೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆಯೆ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ

    ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 27 ಲಕ್ಷ ರೂ. ಅಡುಗೆ ಎಣ್ಣೆಯೊಂದಿಗೆ ಪರಾರಿಯಾಗಿದ್ದ ಆರೋಪಿ ಅಂದರ್

    27 ಲಕ್ಷ ರೂ. ಅಡುಗೆ ಎಣ್ಣೆಯೊಂದಿಗೆ ಪರಾರಿಯಾಗಿದ್ದ ಆರೋಪಿ ಅಂದರ್

    ಹುಬ್ಬಳ್ಳಿ: ಕಂಪನಿ ಪಾಲುದಾರನಿಗೇ ವಂಚಿಸಿ 27 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಎಣ್ಣೆಯ ಲಾರಿಯೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಗೋಕುಲ ರೋಡ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭದ್ರೆಯ ಕಾಲನಿ ಮೂಲದ ಬೆಂಗಳೂರು ನಿವಾಸಿ ಮಹ್ಮದ್ ರಿಜ್ವಾನ್ ಆಶ್ರಫ್ ಬಂಧಿತ ಆರೋಪಿ. ಮಹ್ಮದ್ ಅನಾರ ಅವರು ಸಹೋದರ ಮಹ್ಮದ್ ಜುಬೇರ, ಮಹ್ಮದ್ ಇಸ್ಮಾಯಿಲ್ ಹಾಗೂ ಮಹ್ಮದ್ ರಿಜ್ವಾನ್ ಜೊತೆ ಸೇರಿ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಟಾವರ್ ಸ್ಟಾರ್ ಕಾಂಕ್ರಾಕ್ಟಿಂಗ್ ಟ್ರೇಡಿಂಗ್ ಆ್ಯಂಡ್ ಮ್ಯಾನು ಫ್ಯಾಕ್ಟರಿಂಗ್ ಎಂಬ ಕಂಪನಿ ಹೆಸರಲ್ಲಿ ಅಡುಗೆ ಎಣ್ಣೆ ಟ್ರೇಡಿಂಗ್ ಕಂಪನಿ ಆರಂಭಿಸಿದ್ದರು. ಇದನ್ನೂ ಓದಿ: ಇದೇ ಧೋನಿಯ ಕೊನೆಯ ಐಪಿಎಲ್?

    ಗ್ರಾಹಕರೊಬ್ಬರಿಗೆ ಅಡುಗೆ ಎಣ್ಣೆ ಪೂರೈಸಲೆಂದು ಹುಬ್ಬಳ್ಳಿಯ ಚನ್ನಬಸವೇಶ್ವರ ಆಯಿಲ್ ಮಿಲ್ ಜೊತೆ ಮಾತುಕತೆ ನಡೆಸಿದ್ದರು. ಇದಕ್ಕಾಗಿ 27 ಲಕ್ಷ ರೂಪಾಯಿ ಪಾವತಿಸಿದ್ದರು. 30 ಟನ್ ಎಣ್ಣೆಯನ್ನು ಉಡುಪಿಯ ಗ್ರಾಹಕರಿಗೆ ತಲುಪಿಸುವಂತೆ ಪಾಲುದಾರರಾದ ಮಹ್ಮದ್ ರಿಜ್ವಾನ್ ಹಾಗೂ ಮಹ್ಮದ್ ಇಸ್ಮಾಯಿಲ್‍ಗೆ ತಿಳಿಸಿದ್ದರು. ಆದರೆ ಅವರು ಉಡುಪಿಯ ಗ್ರಾಹಕರಿಗೆ ತಲುಪಿಸದೆ ಪರಾರಿಯಾಗಿದ್ದರು.

    ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‍ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ನೇತೃತ್ವದ ತಂಡ ಅರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

  • ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ – ಪರಾರಿಗೆ ಯತ್ನಿಸಿದ್ದ ಆರೋಪಿ ವಿರುದ್ಧ ಫೈರಿಂಗ್

    ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ – ಪರಾರಿಗೆ ಯತ್ನಿಸಿದ್ದ ಆರೋಪಿ ವಿರುದ್ಧ ಫೈರಿಂಗ್

    ಮೈಸೂರು: ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ವಿರುದ್ಧ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಂದನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.

    ಜನವರಿ 22 ರಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಆರೋಪಿ ಜಯಂತ್ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಅಲ್ಲದೆ ಈ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿತ್ತು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಪೊಲೀಸರು ಆರೋಪಿ ಜಯಂತ್ ಹಾಗೂ ವಿಘ್ನೇಶ್, ದೀಪಕ್‍ನನ್ನು ಬಂಧಿಸಿದ್ದರು. ಆರೋಪಿಗಳು ಹಂದನಹಳ್ಳಿ ಗ್ರಾಮದ ಗೇಟ್ ಬಳಿ ಹೆಡ್ ಕಾನ್ಸ್‍ಟೇಬಲ್ ರವಿ ಸೇರಿದಂತೆ ಇತರೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

    ಈ ವೇಳೆ ಎಸ್‍ಐ ಜಯಪ್ರಕಾಶ್ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರೋಪಿ ಜಯಂತ್ ಕಾಲಿಗೆ ಗುಂಡು ತಗುಲಿದ್ದು ಇದೀಗ ಆತನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಅಲ್ಲದೆ ಆರೋಪಿಗಳ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಪೇದೆಗಳಿಗೂ ಕೆ.ಆರ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗುತ್ತಿದೆ.

  • 1 ಲಕ್ಷ ಬಿಲ್ ಮಾಡಿ ಹೋಟೆಲ್‍ನಿಂದ ವ್ಯಕ್ತಿ ಪಾರಾರಿ

    1 ಲಕ್ಷ ಬಿಲ್ ಮಾಡಿ ಹೋಟೆಲ್‍ನಿಂದ ವ್ಯಕ್ತಿ ಪಾರಾರಿ

    ಬೆಂಗಳೂರು: ಗೋವಾ ಮೂಲಕ ವ್ಯಕ್ತಿಯೊಬ್ಬ ಹೋಟೆಲ್ ಬಿಲ್ ಪಾವತಿಸದೇ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ ತಾನು ದೊಡ್ಡ ವಿಐಪಿ ಎಂಬಂತೆ ಬಾಡಿಗಾರ್ಡ್ ಗಳನ್ನು ಮುಂದಿಟ್ಟುಕೊಂಡು ನಟಿಸಿ ಹೋಟೆಲ್‍ನವರ ಕಣ್ಣಿಗೆ ಮಣ್ಣೆರಚಿದ್ದಾನೆ.

    ಆರೋಪಿಯನ್ನು ಸ್ವಪ್ನಿಲ್ ನಾಯ್ಕ್ ಎಂದು ಗುರುತಿಸಲಾಗಿದೆ. 1,43,243 ಬಿಲ್ ಪಾವತಿಸುವ ಸಮಯ ಬಂದಾಗ ಆರೋಪಿಗಳು ಹೋಟೆಲ್‍ನಿಂದ ಪರಾರಿಯಾಗಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಬಾಡಿಗಾರ್ಡ್ ಗಳಿಗೂ ಹಣ ನೀಡದೆ ಮೋಸ ಮಾಡಿರುವ ಸತ್ಯ ಬೆಳಕಿಗೆ ಬಂದಿದೆ.

    ತನಿಖೆ ವೇಳೆ ಆರೋಪಿ ನಾಯ್ಕ್, ಜನವರಿ 2 ರಂದು ಬೆಂಗಳೂರಿನ ಗಾಂಧಿನಗರದ ಜಿಯಾನ್ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿದ್ದಾನೆ. 6 ದಿನಗಳ ನಂತರ ನಾಯ್ಕ್ ಪತ್ನಿ ಕೂಡ ಆತನ ಜೊತೆಗೂಡಿ ಹೋಟೆಲ್‍ನಲ್ಲಿ ತಂಗಿದ್ದಳು. ಅಲ್ಲದೆ ಬಾಡಿಗಾರ್ಡ್‍ಗಳಿಗೂ ಇನ್ನೂ ಎರಡು ರೂಮ್‍ಗಳನ್ನು ಬುಕ್ ಮಾಡಿದ್ದರು.

    ಬಿಲ್ ಪಾವತಿಸುವ ದಿನ ಬರುತ್ತಿದ್ದಂತೆಯೇ ಆರೋಪಿ ಮತ್ತು ಆತನ ಹೆಂಡತಿ ರಾಮನಗರಕ್ಕೆ ಹೋಗುವ ಮಿನಿ ಬಸ್ ಹತ್ತಿ ಪರಾರಿಯಾಗಿದ್ದಾರೆ. ಇದೇ ವೇಳೆ ಆರೋಪಿಗಳನ್ನು ಹೋಟೆಲ್ ಸಿಬ್ಬಂದಿ ಕಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಅಲ್ಲದೆ ಆರೋಪಿಗಳು ಮಿನಿ ಬಸ್ ಕಂಪನಿ ಮತ್ತು ಆತನ ಬಾಡಿಗಾರ್ಡ್ ಗೆ ಸಹ ಹಣ ನೀಡದೇ ದ್ರೋಹ ಬಗೆದಿದ್ದಾರೆ ಎಂದು ತಿಳಿದುಬಂದಿದೆ.

    ಒಟ್ಟಾರೆ 1,43,243 ರೂಪಾಯಿ ಬಿಲ್ ಪಾವತಿಸದೇ ಆರೋಪಿಗಳು ಹೋಟೆಲ್ ನಿಂದ ಎಸ್ಕೇಪ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ವಧುವಿಗೆ ಕೈಕೊಟ್ಟ ವರ – ಮದ್ವೆ ಮುನ್ನವೇ ಪ್ರೇಯಸಿಯೊಂದಿಗೆ ಎಸ್ಕೇಪ್

    ವಧುವಿಗೆ ಕೈಕೊಟ್ಟ ವರ – ಮದ್ವೆ ಮುನ್ನವೇ ಪ್ರೇಯಸಿಯೊಂದಿಗೆ ಎಸ್ಕೇಪ್

    – ವರನ ಕಡೆಯಿಂದ ವಧು ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮೈಸೂರು: ನಿಶ್ಚಿತಾರ್ಥವಾದ ಬಳಿಕ ವರನಿಗೆ ವಧು ಕೈ ಕೊಡುವುದು ಕೇಳಿದ್ದೇವೆ. ಈ ಮೂಲಕ ಮದುವೆ ಮುರಿದು ಬಿದ್ದ ಅನೇಕ ಉದಾಹರಣೆಗಳು ಕೂಡ ನಮ್ಮ ಕಣ್ಣ ಮುಂದಿವೆ. ಆದರೆ ಮೈಸೂರಿನಲ್ಲಿ ಮಾತ್ರ ವರನೇ ವಧುವಿಗೆ ಕೈ ಕೊಟ್ಟ ಅಚ್ಚರಿಯ ಘಟನೆಯೊಂದು ನಡೆದಿದೆ.

    ಹೌದು. ಮೈಸೂರಿನ ಕೆ.ಆರ್.ಮೊಹಲ್ಲದಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಸುಣ್ಣದಕೇರಿಯ ಉಮೇಶ್ ಪರಾರಿಯಾದ ವರ. ಇಂದು ಸಿಂಚನಾ ಹಾಗೂ ಉಮೇಶ್ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ನಿಶ್ವಯವಾಗಿದ್ದ ವಧು ಬಿಟ್ಟು ವರ ತನ್ನ ಹಳೆಯ ಪ್ರೇಯಸಿಯೊಂದಿಗೆ ಪರಾರಿಯಾಗಿದ್ದಾನೆ.

    ಮದುವೆಗೆ ಒಂದು ದಿನ ಇರುವಾಗಲೇ ಮಾಜಿ ಲವ್ವರ್ ನೊಂದಿಗೆ ಎಸ್ಕೇಪ್ ಆಗಿರುವ ವರ, ಆಕೆಯ ಜೊತೆ ಮದುವೆಯಾಗಿ ತನ್ನ ಮನೆಯವರಿಗೆ ತಿಳಿಸಿದ್ದಾನೆ. ಇತ್ತ ಇಂದು ನಡೆಯುವ ಮದುವೆಗೆ ಕುಟುಂಬಸ್ಥರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದೀಗ ವರನ ಪರಾರಿ ಸುದ್ದಿಯಿಂದ ಕಂಗಾಲಾಗಿದ್ದಾರೆ.

    ಸದ್ಯ ವರ ಉಮೇಶ್ ಕುಟುಂಬಸ್ಥರು ವಧು ಕುಟುಂಬಕ್ಕೆ 5 ಲಕ್ಷ ಹಣ ಕೊಡುವುದಾಗಿ ಹೇಳುತ್ತಿದ್ದಾರೆ. ವಧುವಿನ ಪೋಷಕರು ಕೆ.ಆರ್.ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

  • ಮಾವನ ಜೊತೆ 10 ತಿಂಗ್ಳ ಮಗುವಿನ ಸಮೇತ ಸೊಸೆ ಎಸ್ಕೇಪ್

    ಮಾವನ ಜೊತೆ 10 ತಿಂಗ್ಳ ಮಗುವಿನ ಸಮೇತ ಸೊಸೆ ಎಸ್ಕೇಪ್

    – ಮನೆಯವರಿಗೆ ನಿದ್ದೆ ಮಾತ್ರೆ ನೀಡಿದ್ರು
    – ಸಿಸಿಟಿವಿ ನೋಡಿ ಪತಿ, ಕುಟುಂಬದವರಿಗೆ ಶಾಕ್

    ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಮಗನ ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಕೊನೆಗೆ ಸೊಸೆಯ ಜೊತೆಯೇ ಎಸ್ಕೇಪ್ ಆಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

    ಪಾಣಿಪತ್‍ನ ಸೋನಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮಾವನನ್ನು ಸಲೀಂ ಎಂದು ಗುರುತಿಸಲಾಗಿದೆ. ಸಲೀಂ ತನ್ನ ಸೊಸೆ ಜೊತೆ ಪರಾರಿಯಾಗಿದ್ದಾನೆ. ಇಬ್ಬರೂ ಪ್ಲಾನ್ ಮಾಡಿ ಮನೆ ಬಿಟ್ಟು ಓಡಿ ಹೋಗಿದ್ದಾರೆ.

    ನಾಲ್ಕು ವರ್ಷಗಳ ಹಿಂದೆ ಮಹಿಳೆ ಸಲೀಂ ಮಗ ಅಬ್ದುಲ್ ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ಮೂರು ವರ್ಷದ ಮಗಳು ಮತ್ತು 10 ತಿಂಗಳ ಮಗ ಇದ್ದನು. ಆದರೆ ಮಾವ ಸಲೀಂ ತನ್ನ ಸೊಸೆ ಜೊತೆಯೇ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇವರ ಸಂಬಂಧದ ಬಗ್ಗೆ ಮನೆಯ ಇತರರಿಗೆ ತಿಳಿದಿರಲಿಲ್ಲ. ಆದರೆ ಇತ್ತೀಚೆಗೆ ತಮ್ಮ ಅನೈತಿಕ ಸಂಬಂಧಕ್ಕೆ ಮನೆಯವರು ಅಡ್ಡಿಪಡಿಸುತ್ತಾರೆಂದು ಇಬ್ಬರೂ ಓಡಿ ಹೋಗಲು ನಿರ್ಧರಿಸಿದ್ದರು.

    ಅದರಂತೆಯೇ ಒಂದು ದಿನ ರಾತ್ರಿ ಊಟದಲ್ಲಿ ನಿದ್ದೆ ಮಾತ್ರೆ ಮಿಕ್ಸ್ ಮಾಡಿದ್ದರು. ಮನೆಯವರು ಊಟ ಮಾಡಿದ ನಂತರ ಎಲ್ಲರೂ ನಿದ್ದೆಗೆ ಜಾರಿದ್ದಾರೆ. ಮನೆಯ ಸದಸ್ಯರು ನಿದ್ದೆ ಮಾಡಿದ ನಂತರ ಮೊದಲಿಗೆ ಮಾವ ಸಲೀಂ ಮುಂಜಾನೆ 4 ಗಂಟೆಗೆ ಮನೆಯಿಂದ ಹೊರಗೆ ಹೋಗಿ ಸೊಸೆಗಾಗಿ ಕಾಯುತ್ತಿದ್ದನು. ಸ್ವಲ್ಪ ಸಮಯದ ನಂತರ 10 ತಿಂಗಳ ಮಗುವಿನ ಜೊತೆ ಸೊಸೆ ಮಾವನ ಜೊತೆ ಓಡಿ ಹೋಗಿದ್ದಾಳೆ.

    ಫೋನ್ ತೆಗೆದುಕೊಂಡು ಹೋದರೆ ಮನೆಯವರು ಟ್ರೇಸ್ ಮಾಡುತ್ತಾರೆ ಎಂದು ಇಬ್ಬರು ಫೋನ್‍ಗಳನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಮುಂಜಾನೆ ಮನೆಯವರು ಎದ್ದು ಎಲ್ಲ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಸಂಬಂಧಿಕರ ಬಳಿ ಇವರ ಬಗ್ಗೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ಕೊನೆಗೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ.

    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಆಗ ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಇಬ್ಬರು ಓಡಿ ಹೋಗಿರುವುದು ಕಂಡುಬಂದಿದೆ. ಮಾವ, ಸೊಸೆ ಪರಾರಿಯಾಗುವವರೆಗೂ ಇಬ್ಬರ ಸಂಬಂಧದ ಬಗ್ಗೆ ಮನೆಯವರಿಗೆ ಗೊತ್ತಾಗಿಲ್ಲ. ಇದರಿಂದ ಮನೆಯವರು ಆಘಾತಕ್ಕೊಳಗಾಗಿದ್ದಾರೆ. ಸದ್ಯಕ್ಕೆ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಗಲಭೆ ಮಾಡಿ ಊರು ಬಿಟ್ಟ ಪುಂಡರು – ಎರಡು ಎಟಿಎಂ ಧ್ವಂಸ

    ಗಲಭೆ ಮಾಡಿ ಊರು ಬಿಟ್ಟ ಪುಂಡರು – ಎರಡು ಎಟಿಎಂ ಧ್ವಂಸ

    ಬೆಂಗಳೂರು: ಮಂಗಳವಾರ ರಾತ್ರಿ ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿದ್ದ ದುಷ್ಕರ್ಮಿಗಳು ಊರು ಬಿಟ್ಟು ಪರಾರಿಯಾಗಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

    ಕೆಜಿ ಹಳ್ಳಿ, ಡಿಜೆ ಪೊಲೀಸ್ ಠಾಣೆಗೆ ಬೆಂಕಿ ಹಾಕಿ, ಧ್ವಂಸ ಮಾಡಿದ್ದ ಉದ್ರಿಕ್ತರು ಕಾಲ್ಕಿತ್ತಿದ್ದಾರೆ. ದುಷ್ಕರ್ಮಿಗಳು ಮಂಗಳವಾರ ರಾತ್ರಿ ಗಲಭೆ ಮಾಡಿದ ನಂತರ ರಾತ್ರೋ ರಾತ್ರಿ ಊರು ಬಿಟ್ಟಿದ್ದಾರೆ. ಸದ್ಯಕ್ಕೆ 170 ಮಂದಿ ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಪೊಲೀಸರು ಗೋಲಿಬಾರ್‌ಗೆ ಮೂವರು ಬಲಿಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಮನೆ ಧ್ವಂಸ- ಘಟನೆ ಖಂಡಿಸದೆ ಮೌನ ತಾಳಿದ ಕೈ ನಾಯಕರು

    ಈ ಗಲಭೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಆದರೆ ದುಷ್ಕರ್ಮಿಗಳು ಡಿಜಿ ಹಳ್ಳಿ, ಕೆಜಿ ಹಳ್ಳಿ ಮತ್ತು ಟ್ಯಾನರಿ ರೋಡ್ ತೊರೆದಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಹುಡುಕಾಟ ಮಾಡುತ್ತಿದ್ದಾರೆ.

    ರಾತ್ರಿ ಕಿಡಿಕೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್ ಬೈರಸಂದ್ರದಲ್ಲಿದ್ದ ಹೆಚ್‍ಡಿಎಫ್‍ಸಿ ಮತ್ತು ಕರ್ನಾಟಕ ಬ್ಯಾಂಕ್ ಎರಡು ಎಟಿಎಂ ಅನ್ನು ಸಂಪೂರ್ಣವಾಗಿ ಧ್ವಂಸ ಮಾಡಿದ್ದಾರೆ.

  • ಸೆನಗಲ್‍ನಿಂದ ಭೂಗತ ಪಾತಕಿ ರವಿ ಪೂಜಾರಿ ಎಸ್ಕೇಪ್?

    ಸೆನಗಲ್‍ನಿಂದ ಭೂಗತ ಪಾತಕಿ ರವಿ ಪೂಜಾರಿ ಎಸ್ಕೇಪ್?

    ಬೆಂಗಳೂರು: ನಕಲಿ ಪಾಸ್‍ಪೋರ್ಟ್ ಆರೋಪದಡಿ ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಕರಾವಳಿ ಮೂಲದ ಭೂಗತ ದೊರೆ ರವಿ ಪೂಜಾರಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    ಹೇಗೆ ಪರಾರಿಯಾಗಿದ್ದಾನೆ ಎನ್ನುವುದಕ್ಕೆ ಸ್ಪಷ್ಟತೆ ಸಿಕ್ಕಿಲ್ಲ. ನ್ಯಾಯಾಲಯದಿಂದ ಬೇಲ್ ಪಡೆದು ರವಿ ಪೂಜಾರಿ ಬಿಡುಗಡೆಹೊಂದಿದ್ದಾನೆ. ಈ ಸಂದರ್ಭವನ್ನೇ ಬಳಸಿಕೊಂಡು ಆತ ಸೆನೆಗಲ್ ನಿಂದ ಪರಾರಿಯಾಗಿದ್ದಾನೋ ಅಥವಾ ಜೈಲಿನಿಂದಲೇ ಪರಾರಿಯಾಗಿದ್ದಾನೋ ಎನ್ನುವುದು ಖಚಿತವಾಗಿಲ್ಲ. ರವಿ ಪೂಜಾರಿ ಪರಾರಿಯಾಗಿದ್ದಾನೆ ಎಂದು ಸೆನೆಗಲ್ ಪತ್ರಿಕೆಗಳು ವರದಿ ಮಾಡಿವೆ.

    ಈ ಕುರಿತು ಪೊಲೀಸ್ ವಲಯದಲ್ಲೂ ಚರ್ಚೆ ಆರಂಭವಾಗಿದೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ರವಿ ಪೂಜಾರಿ ಸೆನೆಗಲ್‍ನಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತವಾಗಿ ಯಾರೂ ತಿಳಿಸಿಲ್ಲ.

    ಈ ಸುದ್ದಿ ನಿಜವೇ ಆದರೆ ಹಲವಾರು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ರವಿ ಪೂಜಾರಿಯನ್ನು ಕಾನೂನು ಹೋರಾಟದಡಿ ಗಡೀಪಾರು ಮಾಡುವ ಭಾರತದ ಪೊಲೀಸರ ಪ್ರಯತ್ನಕ್ಕೆ ತಣ್ಣೀರು ಬಿದ್ದಿದೆ. ರವಿ ಪೂಜಾರಿಯನ್ನು ಕರೆತರಲು ಬೆಂಗಳೂರು, ಮುಂಬೈ ಪೊಲೀಸರು ಕಳೆದ 3 ತಿಂಗಳಿಂದ ಸೆನಗಲ್‍ನಲ್ಲಿ ಭಾರೀ ಪ್ರಯತ್ನ ನಡೆಸಿದ್ದರು.

    ಆತನ ವಿರುದ್ಧ ದಾಖಲಾಗಿರೋ ಕೇಸ್‍ಗಳು, ಸಾಕ್ಷ್ಯಾಧಾರಗಳನ್ನು ಫ್ರೆಂಚ್ ಭಾಷೆಗೆ ಭಾಷಾಂತರ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ಅಂತಿಮ ಹಂತದಲ್ಲಿದ್ದು, ಹಸ್ತಾಂತರ ಆಗುವ ನಿರೀಕ್ಷೆ ಇತ್ತು. ಈ ಮಧ್ಯೆ, ರವಿ ಪೂಜಾರಿ ಅರೆಸ್ಟ್ ಕ್ರೆಡಿಟ್‍ಗಾಗಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಡುವೆ ಫೆಬ್ರವರಿ ತಿಂಗಳಲ್ಲಿ ಭಾರೀ ಟ್ವೀಟ್ ಸಮರವೇ ನಡೆದಿತ್ತು.