Tag: ಪರಿಮಳಾ ಲಾಡ್ಜ್

  • ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ನೀನಾಸಂ ಸತೀಸ್ ನಟನೆಯ `ಪೆಟ್ರೋಮ್ಯಾಕ್ಸ್'(Petromax) ಚಿತ್ರದ ಸೋಲಿನ ನಂತರ ಇದೀಗ `ಪರಿಮಳಾ ಲಾಡ್ಜ್'(Parimala Lodge) ಚಿತ್ರವನ್ನು ನಿರ್ದೇಶಕ ವಿಜಯ್ ಪ್ರಸಾದ್ ಕೈಗೆತ್ತಿಕೊಂಡಿದ್ದಾರೆ. ಈ ವೇಳೆ ದಿವಂಗತ ಬುಲೆಟ್ ಪ್ರಕಾಶ್(Bullet Prakash) ಅವರನ್ನ ನೆನಪಿಕೊಂಡಿದ್ದಾರೆ. ಅವರನ್ನು ನೆನೆದು ಭಾವನ್ಮಾತಕ ಪತ್ರವೊಂದನ್ನ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ತೋತಾಪುರಿ, ಪೆಟ್ರೋಮ್ಯಾಕ್ಸ್ ಚಿತ್ರದ ಗೆಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡೋದರಲ್ಲಿ ಸೋತಿತ್ತು. ಇದೀಗ ʻಪರಿಮಳಾ ಲಾಡ್ಜ್ʼ ಚಿತ್ರಕ್ಕೆ ವಿಜಯ್ ಪ್ರಸಾದ್ ಕೈಹಾಕಿದ್ದಾರೆ. ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಈ ಪತ್ರದ ಮೂಲಕ ತೆರೆದಿಟ್ಟಿದ್ದಾರೆ. ʻಪರಿಮಳಾ ಲಾಡ್ಜ್ʼ ಚಿತ್ರದ ಸಣ್ಣ ತುಣುಕೊಂದು 3 ವರ್ಷಗಳು ಹಿಂದೆ ರಿಲೀಸ್ ಆಗಿತ್ತು. ಹಲವು ಕಾರಣಗಳಿಂದ ಸಿನಿಮಾ ಮುಂದಕ್ಕೆ ಹೋಗಿರಲಿಲ್ಲ. ಇದೀಗ ಮತ್ತೆ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

    ನೀವು ನನಗೆ ಹಾಗಾಗ ನೆನಪಾಗುತ್ತಿರಿ. ಹಾಗೆ ನೆನಪಾದಾಗಲೆಲ್ಲಾ ನಿಮ್ಮ ಕಾಮಿಡಿ ದೃಶ್ಯದ ತುಣುಕುಗಳನ್ನ ನೋಡಿ ಮೌನವಾಗಿ ಬಿಡುತ್ತೇನೆ. `ಗೆಳೆಯ’ ಚಿತ್ರದಲ್ಲಿ ನನಗೆ ಸಿಕ್ಕಾಪಟ್ಟೆ ಇಷ್ಟವಾಗಿ ಹೋದಿರಿ ನಿಮ್ಮೊಳಗಿನ ಹಾಸ್ಯ ಸಮಯದ ಪ್ರಜ್ಞೆ ಅಮೋಘ. ನಿಮ್ಮ ಜೊತೆ ಕೆಲಸ ಮಾಡಬೇಕೆಂಬ ನನ್ನ ಹಂಬಲ ಮತ್ತು ಆಸೆ ಕೇವಲ ಟ್ರೇಲರ್‌ಗೇ ಸೀಮಿತವಾಗಿ ಹೋಗಿದ್ದು ತುಂಬಾ ನೋವಿನ ವಿಚಾರ ಇಂದು ಆಫೀಸಿನಲ್ಲಿ ಪರಿಮಳ ಲಾಡ್ಜ್ ಬರವಣಿಗೆಯಲ್ಲಿ ಇದ್ದೆ. ನಿಮ್ಮ ಪಾತ್ರದ ಬಗ್ಗೆ ಬಂದಾಗ ವಿಪರೀತ ನೆನಪಾದಿರಿ ಹಾಗೆ ಸಂಕಟವೂ ಆಯಿತು.

    ನೀವು ಇದ್ದಿದ್ದರೆ ಗುಡ್ಡೆಮಾಂಸ ಪಾತ್ರವನ್ನ ನುಂಗಿ ನೀರು ಕುಡಿದು ಬಿಡುತ್ತಿದ್ದಿರಿ. ನಿಮ್ಮಿಂದ ಮಾತ್ರ ಆ ಶೈಲಿ ಸಾಧ್ಯ. ನಿಮ್ಮ ನೆನಪಿಗಾಗಿ, ಪ್ರೀತಿಗಾಗಿ ಮತ್ತು ಗೌರವಕ್ಕಾಗಿ ಪಾತ್ರದ ಹೆಸರನ್ನ ಬುಲೆಟ್ ಪ್ರಕಾಶ್ ಅಂತಲೇ ಇಟ್ಟು, ಅಡ್ಡ ಹೆಸರಾಗಿ ಗುಡ್ಡೆಮಾಂಸ ಅಂತ ಉಳಿಸಿಕೊಳ್ಳುತ್ತಿದ್ದೇನೆ. ಆದರೂ ನೀವು ಇಷ್ಟು ಬೇಗ ಹೋಗಬಾರದಿತ್ತು ಹಾಗೆ ಇನ್ನೂ ಬೆಳಗಿ ಬಾಳಬೇಕಿತ್ತು. ಟ್ರೇಲರ್ ಚಿತ್ರೀಕರಣದ ಸಮಯದಲ್ಲಿ ನಿಮ್ಮ ನಗು, ಮಾತು, ಕೀಟಲೆ, ಚೇಷ್ಟೇ ಎಲ್ಲವೂ ನನ್ನಲ್ಲಿ ಇನ್ನೂ ಹಚ್ಚಹಸಿರಾಗೇ ಇದೆ ಮಿಸ್ಸಿಂಗ್ ಯೂ ಸರ್ ಎಂದು ವಿಜಯ್ ಭಾವುಕರಾಗಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪರಿಮಳಾ ಲಾಡ್ಜ್ ಚಿತ್ರದ ವಿರುದ್ಧ ದೂರು

    ಪರಿಮಳಾ ಲಾಡ್ಜ್ ಚಿತ್ರದ ವಿರುದ್ಧ ದೂರು

    ಬೆಂಗಳೂರು: ಪರಿಮಳ ಲಾಡ್ಜ್ ಚಿತ್ರದ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಫಿಲ್ಮ್ ಚೇಂಬರ್ ಗೆ ಲಿಖಿತ ದೂರು ನೀಡಿದೆ.

    ಈ ಚಿತ್ರದಲ್ಲಿ ಬಳಸಿದ ಅಶ್ಲೀಲ ಸಂಭಾಷಣೆ ತೆಗೆಯುವಂತೆ ದೂರಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಅಲ್ಲದೆ ಚಿತ್ರದ ಟೀಸರಿನಲ್ಲಿ ಇರುವ ಅಶ್ಲೀಲ ಸಂಭಾಷಣೆ ತೆಗೆಯದೇ ಇದಲ್ಲಿ ಫಿಲ್ಮಂ ಚೇಂಬರ್ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

    ದೂರಿನಲ್ಲಿ ಏನಿದೆ?
    ವಿಜಯಪ್ರಸಾದ್ ನಿರ್ದೇಶನದ ಲೂಸ್ ಮಾದ, ನೀನಾಸಂ ಸತೀಶ್ ಹಾಗೂ ಸುಮನ್ ರಂಗನಾಥ್ ನಟನೆಯ ಪರಿಮಳ ಲಾಡ್ಜ್ ಎಂಬ ಹೆಸರಿನ ಈ ಚಿತ್ರದ ನಾಯಕ ನಟರ ಮೇಲೆ ಹಾಗೂ ನಿರ್ದೇಶಕ, ನಿರ್ಮಾಪಕ ಅವರ ಮೇಲೆ ಕ್ರಮಕೈಗೊಳ್ಳಲು ಒತ್ತಾಯ ಮಾಡುತ್ತಿದ್ದೇವೆ. ಹಾಗೆ ಈ ಚಿತ್ರದಲ್ಲಿ ಇರುವ ಅಶ್ಲೀಲ ಸಂಭಾಷಣೆ ತೆಗಿಸಬೇಕು ಇಲ್ಲವಾದರೆ ನಾವು ಕೋರ್ಟ್ ಮೊರೆ ಹೋಗಬೇಕಾಗುತ್ತದೆ. ಅದನ್ನು ಮೀರಿ ಇವರು ಈ ಚಿತ್ರವನ್ನು ಬಿಡುಗಡೆ ಮಾಡಿದ ಪಕ್ಷದಲ್ಲಿ ವಾಣಿಜ್ಯ ಮಂಡಳಿ ಮುಂದೆ ಹಾಗೂ ಈ ಚಲನಚಿತ್ರ ಪ್ರದರ್ಶನ ಮಾಡಲು ಚಿತ್ರಮಂದಿರದ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.

    ಇತ್ತೀಚೆಗೆ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ಲೂಸ್ ಮಾದ ಯೋಗಿ ಅವರಿಗೆ ಸಲಿಂಗಕಾಮಿಗಳು ಎಂಬ ಟೈಟಲ್ ನೀಡಲಾಗಿದೆ. ಅಲ್ಲದೇ ಚಿತ್ರದಲ್ಲಿ ನಟಿಸುತ್ತಿರುವ ಪ್ರತಿಯೊಬ್ಬರಿಗೂ ಒಂದೊಂದು ವಿಶೇಷ ಟೈಟಲ್ ನೀಡಿದೆ. ಈ ಸಿನಿಮಾದಲ್ಲಿ ಸುಮನ್ ರಂಗನಾಥ್, ದತ್ತಣ್ಣ, ಬುಲೆಟ್ ಪ್ರಕಾಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ.