Tag: ಪರಿಷತ್ ಚುನಾವಣೆ

  • ಬೆಂಕಿ ಇಲ್ಲದೆ ಹೊಗೆಯಾಡುತ್ತಾ? – ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಸಿದ್ದು ಗುದ್ದು

    ಬೆಂಕಿ ಇಲ್ಲದೆ ಹೊಗೆಯಾಡುತ್ತಾ? – ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಸಿದ್ದು ಗುದ್ದು

    ಕೋಲಾರ: ರಾಜ್ಯದಲ್ಲಿ 25 ಸ್ಥಾನಗಳ ಪೈಕಿ ಜೆಡಿಎಸ್ 7 ಕಡೆ ಮಾತ್ರ ಅಭ್ಯರ್ಥಿಗಳನ್ನ ಹಾಕಿದೆ ಅಂದ್ರೆ ಉಳಿದ 18 ಕಡೆ ಅಭ್ಯರ್ಥಿಗಳೇ ಇಲ್ಲ ಅಂದ್ರೆ ಏನು ಅರ್ಥ. ಹೊಂದಾಣಿಕೆ ಅಲ್ಲದೆ ಇನ್ನೇನು ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ರು.

    ಕೋಲಾರ ತಾಲೂಕಿನ ನರಸಾಪುರ ಬಳಿ ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ ಬೆಳೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಯಡಿಯೂರಪ್ಪನವರು ಬೆಂಬಲ ಕೇಳಿದ್ದೇವೆ ಎಂದಿದ್ದಾರೆ. ಅಂದರೆ ಚುನಾವಣೆಗೂ ಮೊದಲೇ ಮಾತುಕತೆ ನಡೆದಿದೆ ತಾನೆ ಎಂದ್ರು. ಬೆಂಕಿ ಇಲ್ಲದೆ ಹೊಗೆ ಆಡುತ್ತಾ ಯಡಿಯೂರಪ್ಪ ಸುಮ್ನೆ ಹೇಳ್ತಾರಾ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ರೈತರಿಗೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಬದ್ಧ: ಆರ್. ಅಶೋಕ್

    ಇದೇ ವೇಳೆ ಪರಿಷತ್ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆಲ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನೇನ್ ಜ್ಯೋತಿಷ್ಯ ಹೇಳಲಾ ಎಂದು ಗುಡುಗಿದ್ರು. ಬಳಿಕ ಕಳೆದ ಬಾರಿ 14 ಸ್ಥಾನ ಗೆದ್ದಿದ್ದೆವು. ಈ ಬಾರಿ 15 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ರು. ಅಲ್ಲದೆ ಹಾಸನದ ಎ.ಮಂಜು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರ ಮಗ ಬಿಜೆಪಿ ಸೇರಿಲ್ಲ ಅಂತಾ ಹೇಳಿದ್ದಾನೆ. ಮಂತರ್ ಗೌಡ ಅವರ ತಾಯಿ ಕೊಡಗಿನವರು ಹಾಗಾಗಿ ನಾನು ಅವರನ್ನು ಮಾತನಾಡಿಲ್ಲ, ಇಲ್ಲಿ ಎ ಮಂಜು ಪ್ರಶ್ನೆ ಅಲ್ಲ, ಮಂತರ್ ಗೌಡ ಮುಖ್ಯ ಎಂದು ಹೇಳಿದ್ರು.

  • ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

    ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

    ಬೆಳಗಾವಿ: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಅರ್ಧದಷ್ಟು ಪ್ರಚಾರ ಕಾರ್ಯ ಮಾಡಿದ್ದೇವೆ. ಬಿಜೆಪಿಯಿಂದ ಇಬ್ಬರು ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಚಾಲೆಂಜ್ ಇರೋದು. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆಯನ್ನು ಪಕ್ಷದ ಮೇಲೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲಲೇಬೇಕು. ಲೋಕಸಭಾ ಉಪಚುನಾವಣೆ ನನ್ನ ವಿರುದ್ಧ ಹಣ ಹಂಚಿ ನನ್ನನ್ನು ಸೋಲಿಸಿದ್ದಾರೆ. ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ದುಡ್ಡು ಕೊಟ್ಟು ನನ್ನ ಸೋಲಿಸಿದ್ದಾರೆ. ಆ ನೋವು ನಮಗೆ ಹಾಗೂ ನಮ್ಮ ಕಾರ್ಯಕರ್ತರಿಗೂ ಇದೆ. ಬಹುಶಃ ಲಖನ್ ಜಾರಕಿಹೊಳಿ ಚುನಾವಣೆ ನಿಲ್ತಾರೋ ಇಲ್ವೋ ಅನುಮಾನ. ಪಕ್ಷದ ವರಿಷ್ಠರು ಒಳ್ಳೆಯ ಅವಕಾಶ ಕೊಡ್ತಿವಿ ಅಂದ್ರೆ ವಾಪಸ್ ಪಡಿಯುವ ಅವಕಾಶ ಇದೆ. ಲಖನ್ ಜಾರಕಿಹೊಳಿ ಜೊತೆಗೆ ಮಾತನಾಡುವ ಪ್ರಶ್ನೆ ಇಲ್ಲ ಎಂದು ಕಿಡಿಕಾರಿದರು.

    ಇದು ಪಕ್ಷ ಆಧಾರದ ಮೇಲೆ ಚುನಾವಣೆ. ಕುಟುಂಬ ಆಧಾರದ ಮೇಲೆ ಚುನಾವಣೆ ಅಲ್ಲ. ಜಾರಕಿಹೊಳಿ ಕುಟುಂಬ, ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಫೈಟ್ ಅಲ್ಲ. ನಾವು ಜಾರಕಿಹೊಳಿ ಈ ಕಡೆ ಇದ್ದೇವೆ. ಸಹೋದರರ ಸವಾಲ್, ರಾಜಕೀಯ ಸವಾಲು ಇದ್ದೇ ಇರುತ್ತೆ. ರಮೇಶ್ ಜಾರಕಿಹೊಳಿ ಎಂದಿಗೂ ಸೀರಿಯಸ್ ಆಗೇ ಇರುತ್ತಾರೆ. ಅವರ ತಂಡ ಇರೋದು ನಾವು, ನೀವು ಎಂದು ನೋಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಹೈಟೆಕ್ ವಂಚನೆ

  • ಪರಿಷತ್‌ ಚುನಾವಣೆ- ಕಾಂಗ್ರೆಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

    ಪರಿಷತ್‌ ಚುನಾವಣೆ- ಕಾಂಗ್ರೆಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

    ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಪಕ್ಷವು 17 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

    ನಾಳೆಯೇ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದು ಅಳೆದು ತೂಗಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

    ಅಭ್ಯರ್ಥಿಗಳ ಪಟ್ಟಿ
    ಶಿವಾನಂದ ಪಾಟೀಲ್‌ ಮರ್ತೂರ್‌                                   ಕಲಬುರಗಿ
    ಚನ್ನರಾಜ ಬಸವರಾಜ ಹತ್ತಿಹೊಳಿ                                   ಬೆಳಗಾವಿ
    ಭೀಮಣ್ಣ ನಾಯಕ್‌                                                     ಉತ್ತರ ಕನ್ನಡ
    ಸಲೀಮ್‌ ಅಹ್ಮದ್‌                                                      ಹುಬ್ಬಳ್ಳಿ-ಧಾರವಾಡ-ಗದಗ್-ಹಾವೇರಿ
    ಶರಣ ಗೌಡ ಅನ್ನದಾನ ಗೌಡ ಪಾಟೀಲ್‌                           ರಾಯಚೂರು
    ಬಿ.ಸೋಮಶೇಖರ್‌                                                    ಚಿತ್ರದುರ್ಗ
    ಆರ್‌.ಪ್ರಸನ್ನ ಕುಮಾರ್‌                                               ಶಿವಮೊಗ್ಗ
    ಮಂಜುನಾಥ್‌ ಭಂಡಾರಿ                                              ದಕ್ಷಿಣ ಕನ್ನಡ
    ಎ.ವಿ.ಗಾಯತ್ರಿ ಶಾಂತೇಗೌಡ                                        ಚಿಕ್ಕಮಗಳೂರು
    ಎಂ.ಶಂಕರ್‌                                                             ಹಾಸನ
    ಆರ್‌.ರಾಜೇಂದ್ರ                                                        ತುಮಕೂರು
    ಎಂ.ಜಿ.ಗೂಳಿ ಗೌಡ                                                     ಮಂಡ್ಯ
    ಎಸ್.ರವಿ                                                                ಬೆಂಗಳೂರು ಗ್ರಾಮಾಂತರ
    ಮಂಥರ್‌ ಗೌಡ                                                         ಕೊಡಗು
    ಸುನಿಲ್‌ ಗೌಡ ಪಾಟೀಲ್‌                                              ವಿಜಯಪುರ-ಬಾಗಲಕೋಟೆ
    ಡಿ.ತಿಮ್ಮಯ್ಯ                                                            ಮೈಸೂರು-ಚಾಮರಾಜನಗರ
    ಕೆ.ಸಿ.ಕೊಂಡಯ್ಯ                                                        ಬಳ್ಳಾರಿ

  • ಪರಿಷತ್ ಚುನಾವಣೆ – ಬಳ್ಳಾರಿಯಿಂದ ಟಿಕೆಟ್ ಪಡೆಯಲು ದೆಹಲಿಯಲ್ಲಿ ಕೈ ನಾಯಕರು ಲಾಬಿ

    ಪರಿಷತ್ ಚುನಾವಣೆ – ಬಳ್ಳಾರಿಯಿಂದ ಟಿಕೆಟ್ ಪಡೆಯಲು ದೆಹಲಿಯಲ್ಲಿ ಕೈ ನಾಯಕರು ಲಾಬಿ

    ನವದೆಹಲಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಕಾಂಗ್ರೆಸ್‍ನಿಂದ ಟಿಕೆಟ್ ಪಡೆಯಲು ಅಭ್ಯರ್ಥಿಗಳು ಸಾಕಷ್ಟು ಪ್ರಯತ್ನ ಆರಂಭಿಸಿದ್ದಾರೆ. ಬಳ್ಳಾರಿಯಿಂದ ಟಿಕೆಟ್‍ಗಾಗಿ ಮುಂಡರಗಿ ನಾಗರಾಜ್ ಬಾರಿ ಪ್ರಯತ್ನ ನಡೆಸಿದ್ದಾರೆ.

    ಮುಂಡರಗಿ ನಾಗರಾಜ್ ಪರವಾಗಿ ದೆಹಲಿಯಲ್ಲಿ ಲಾಬಿ ಶುರುವಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಮಾಜಿ ಸಚಿವ ಸಂತೋಷ್ ಲಾಡ್ ಭೇಟಿಯಾಗಿದ್ದು, ದಲಿತ ಎಡ ಸಮುದಾಯದ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಮುಂಡರಗಿ ನಾಗರಾಜ್ ಟಿಕೇಟ್ ನೀಡುವಂತೆ ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಎಡ ಸಮುದಾಯದ ನಾಯಕರು ನೀಡಿರುವ ಶಿಫಾರಸು ಪತ್ರದೊಂದಿಗೆ ಸೋನಿಯಾಗಾಂಧಿ ಭೇಟಿ ಮಾಡಿರುವ ಸಂತೋಷ್ ಲಾಡ್ ಟಿಕೆಟ್‍ಗಾಗಿ ಬಿಗಿ ಪಟ್ಟು ಹಿಡಿದಿದ್ದಾರೆ.

    ಇನ್ನು ಮತ್ತೊಂದು ಕಡೆ ಬಳ್ಳಾರಿಯಿಂದ ಕೆ.ಸಿ ಕೊಂಡಯ್ಯಗೆ ಟಿಕೆಟ್ ನೀಡುವಂತೆ ಮತ್ತೊಂದು ಬಣ ಒತ್ತಾಯಿಸಿದೆ. ಈಗಾಗಲೇ ಎರಡು ಬಾರಿ ಪರಿಷತ್ ಸದಸ್ಯರಾಗಿರುವ ಕೊಂಡಯ್ಯ ಅವರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ. ಕೆ.ಸಿ ಕೊಂಡಯ್ಯ ಅವರಿಗೆ ಹಿರಿಯ ನಾಯಕ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಬಲ ಇದೆ ಎನ್ನಲಾಗಿದೆ. ಇದನ್ನೂ ಓದಿ: ಸೋನಿಯಾಗಾಂಧಿ ಭೇಟಿಯಾದ ಡಿಕೆಶಿ – ಸಂಜೆ ವೇಳೆಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ ಘೋಷಣೆ

    ಈ ಸಂಬಂಧ ದೆಹಲಿಯಲ್ಲಿ ಮಾತನಾಡಿರುವ ಸಂತೋಷ್ ಲಾಡ್, ಬಳ್ಳಾರಿಯಿಂದ ಮುಂಡರಗಿ ನಾಗರಾಜ್ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಎಡ ಸಮುದಾಯ ಬಳ್ಳಾರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿಂದೆ ನಾವು ಅವರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದೆವು. ಈ ಹಿನ್ನಲೆಯಲ್ಲಿ ಹೈಕಮಾಂಡ್ ಗೆ ಮನವಿ ಮಾಡುತ್ತಿದ್ದೇವೆ, ಸೋನಿಯಾಗಾಂಧಿ ಸೇರಿ ಎಲ್ಲ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದೆ. ರಾಜ್ಯದ ಎಡ ಸಮುದಾಯದ ಎಲ್ಲ ನಾಯಕರು ಬೆಂಬಲಿಸಿದ್ದಾರೆ ಎಂದರು.

  • ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಪರಿಷತ್‍ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

    ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಪರಿಷತ್‍ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

    ಬೆಂಗಳೂರು: ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ನಿಂದ ಪರಿಷತ್ ಗೆ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಚಿವ ಮತ್ತು ಸಹಕಾರ ಮಹಾ ಮಂಡಳಿ ಅಧ್ಯಕ್ಷ ಜಿಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

    ಮೈಸೂರು ಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಿಂದ ಪರಿಷತ್ ಚುನಾವಣೆಗೆ ನನ್ನ ಕುಟುಂಬದಿಂದ ಯಾರು ನಿಲ್ಲೋದಿಲ್ಲ. ನನ್ನ ಮಗನೂ ಸ್ಪರ್ಧೆ ಮಾಡೋದಿಲ್ಲ. ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ನಿಂದ ಪರಿಷತ್ ಗೆ ಸ್ಪರ್ಧೆ ಮಾಡೊಲ್ಲ. ನಾನು ಎರಡೂವರೇ ವರ್ಷಗಳಿಂದ ಜೆಡಿಎಸ್ ನಿಂದ ದೂರ ಇದ್ದೇನೆ. ಅವರು ನಮ್ಮನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆದಿಲ್ಲ, ನಾನು ಹೋಗಿಲ್ಲ. ಈಗ ನಮ್ಮ ಕ್ಷೇತ್ರದಲ್ಲಿ ಅಧ್ಯಕ್ಷನನ್ನ ನೇಮಕ ಮಾಡಿ ನನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ನನಗೆ ಕರೆ ಮಾಡಿ ಪಕ್ಷ ಬಿಡಬೇಡಿ ಅಂದ್ರು. ನಾನು ಅವರಿಗೆ ಕ್ಷಮಿಸಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ

    HDD

    ನಿಖಿಲ್ ಕೂಡಾ ನನ್ನ ಮನೆಗೆ ಬಂದಿದ್ದರು. ಅವರಿಗೆ ಎಲ್ಲ ವಿಷಯ ವಿವರವಾಗಿ ಹೇಳಿದ್ದೇನೆ. ನನಗೆ ಎರಡು ಬಾರಿ ಕುಮಾರಸ್ವಾಮಿ ಅವರು ಮಂತ್ರಿ ಸ್ಥಾನ ತಪ್ಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಾನು ಕೇಳಿದ ಮಂತ್ರಿ ಸ್ಥಾನ ಕೊಡಲಿಲ್ಲ. ಹುಣಸೂರು ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನಾಯಕರಿಗೆ ನನ್ನ ಮಗನನ್ನ ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ಅವರಿಂದ ನನಗೆ ಅನ್ಯಾಯ ಆಗಿದೆ. ಈಗ ನಮ್ಮ ಕುಟುಂಬದಿಂದ ಪರಿಷತ್ ಗೆ ಸ್ಪರ್ಧೆ ಮಾಡ್ತಾರೆ ಎಂದು ಸುದ್ದಿ ಹರಡಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಸ್ಪರ್ಧೆ ಮಾಡೊಲ್ಲ. ಟಿಕೆಟ್ ಕೊಡೋಕೆ ನಾವು ಸಿದ್ಧ ಇದ್ದೇವೆ ಅವರು ತೆಗೆದುಕೊಳ್ಳುತ್ತಿಲ್ಲ ಎಂದು ತೋರಿಸೋಕೆ ಸಾರಾ ಮಹೇಶ್ ಹೀಗೆ ಹೇಳ್ತಿದ್ದಾರೆ ಎಂದು ಆರೋಪಿಸಿದರು.

    ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಬಂದ ಸಮಯದಲ್ಲಿ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ತೀರ್ಮಾನ ಮಾಡ್ತೀನಿ. ಒಂದು ಸಾರಿ ಜನರನ್ನು ಕೇಳದೆ ಬಿಜೆಪಿಗೆ ಹೋಗಿ ಅನುಭವಿಸಿದ್ದೇನೆ. ಮತ್ತೆ ಆ ತಪ್ಪು ಮಾಡಲ್ಲ. ಕ್ಷೇತ್ರದ ಜನರ ಅಭಿಪ್ರಾಯ ಕೇಳಿ ಮುಂದಿನ ತೀರ್ಮಾನ ಮಾಡ್ತೀನಿ ಎಂದು ಅವರು ಉತ್ತರಿಸಿದರು. ಇದನ್ನೂ ಓದಿ: ಸಣ್ಣ ವಯಸ್ಸಿನ ದೊಡ್ಡ ಕಲಾವಿದನನ್ನು ಕಳೆದುಕೊಂಡಿದ್ದೇವೆ: ರಮೇಶ್ ಜಾರಕಿಹೊಳಿ

    ಜಿಟಿ ದೇವೇಗೌಡರು 68ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದು, ಈ ಕಾರ್ಯಕ್ರಮವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಕಾರ್ಯಕ್ರಮ ಸಹಕಾರ ಇಲಾಖೆ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಸರಳವಾಗಿ ಆಚರಣೆ ಮಾಡಲಾಯಿತು. ಈ ವೇಳೆ ಸಹಕಾರ ಪತ್ರಿಕೆಯನ್ನು ಸೋಮಶೇಖರ್ ಅವರು ಬಿಡುಗಡೆ ಮಾಡಿದರು.

  • ನಾನು ಮಂತ್ರಿ ಆಗಿರುವವರೆಗೆ ನನ್ನ ಮಗ MLA,MLC ಆಗುವುದು ಬೇಡ: ಈಶ್ವರಪ್ಪ

    ನಾನು ಮಂತ್ರಿ ಆಗಿರುವವರೆಗೆ ನನ್ನ ಮಗ MLA,MLC ಆಗುವುದು ಬೇಡ: ಈಶ್ವರಪ್ಪ

    ಶಿವಮೊಗ್ಗ: ರಾಜ್ಯ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಪಡೆಯಲು ಪೈಪೋಟಿ ನಡೆಯುತ್ತಿದೆ. ಆದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಾನು ಮಂತ್ರಿ ಆಗಿರುವವರೆಗೂ ನನ್ನ ಪುತ್ರ ಕಾಂತೇಶ್ ಎಂಎಲ್‍ಎ, ಎಂಎಲ್‍ಸಿ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಿಂದ ಪರಿಷತ್ ಸ್ಥಾನಕ್ಕೆ ನನ್ನ ಪುತ್ರ ಕಾಂತೇಶ್ ಈ ಬಾರಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ನಾನು ಮಂತ್ರಿ ಆಗಿರುವ ಕಾರಣ ನನ್ನ ಪುತ್ರ ಎಂಎಲ್‍ಎ ಅಥವಾ ಎಂಎಲ್‍ಸಿ ಆಗಕೂಡದು ಎಂದು ತೀರ್ಮಾನಿಸಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆ ಟ್ರಯಲ್

    ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ. ಅಭ್ಯರ್ಥಿಗಳ ಪಟ್ಟಿ ಹೆಚ್ಚು ಕಡಿಮೆ ಫೈನಲ್ ಮಾಡಿ ತೀರ್ಮಾನಿಸಲಾಗಿದೆ. ಅಧ್ಯಕ್ಷರು ಹಾಗು ಮುಖ್ಯಮಂತ್ರಿ ಅವರು ಮತ್ತೊಮ್ಮೆ ಚರ್ಚೆ ಮಾಡಿ ಕೇಂದ್ರದ ನಾಯಕರಿಗೆ ಕಳುಹಿಸುತ್ತಾರೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಪೊಲ್ಯೂಷನ್ ಲಾಕ್‍ಡೌನ್ – 1 ವಾರ ಆನ್‌ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂ

    ಈಗಾಗಲೇ ವರಿಷ್ಠರ ಮುಂದೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಪುತ್ರನ ಹೆಸರು ಬೇಡ ಎಂದು ತಿಳಿಸಿದ್ದೇನೆ. ನನ್ನ ಅಭಿಪ್ರಾಯವನ್ನು ಪಕ್ಷದ ವರಿಷ್ಠರು ಒಪ್ಪುತ್ತಾರೆ ಎಂದು ಭಾವಿಸುತ್ತೇನೆ. ಆದರೆ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ, ಅದಕ್ಕೆ ಯಾವಾಗಲೂ ಬದ್ದನಾಗಿರುತ್ತೇನೆ ಎಂದರು. ಇದನ್ನೂ ಓದಿ: ಲಸಿಕೆ ಹಾಕಿಸದಿದ್ರೂ ಬರುತ್ತೆ ಎರಡು ಡೋಸ್ ವ್ಯಾಕ್ಸಿನೇಷನ್ ಸಕ್ಸಸ್ ಮೆಸೇಜ್!

  • ಪರಿಷತ್ ಚುನಾವಣಾ ಕಾವು: ಸಭಾಪತಿ ಹೊರಟ್ಟಿ ಬೆಂಬಲಿಗನಿಂದ ಜೀವ ಬೆದರಿಕೆ

    ಪರಿಷತ್ ಚುನಾವಣಾ ಕಾವು: ಸಭಾಪತಿ ಹೊರಟ್ಟಿ ಬೆಂಬಲಿಗನಿಂದ ಜೀವ ಬೆದರಿಕೆ

    ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣಾ ಕಾವು ಏರುತ್ತಿದೆ. ಚುನಾವಣೆಗೆ ಆರೇಳು ತಿಂಗಳು ಬಾಕಿ ಇದೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳು ಬ್ಯಾಟ್ ಬೀಸುತ್ತಿದ್ದಾರೆ. ಈ ವಿಚಾರವಾಗಿಯೇ ಬಸವರಾಜ ಹೊರಟ್ಟಿ ಬೆಂಬಲಿಗರೊಬ್ಬರು, ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೊರಟ್ಟಿಯವರ ಬೆಂಬಲಿಗ ಗಜಾನನ ಅನ್ವೇಕರ್, ರವೀಂದ್ರ ಪಾಟೀಲ್ ಎಂಬವರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಬಸವರಾಜ್ ಹೊರಟ್ಟಿಯವರು ವಿರುದ್ಧ ಸಂಘ ಕಟ್ಟಿಕೊಂಡು ಅವರ ವಿರುದ್ಧ ಬರುವ ಚುನಾವಣೆಯಲ್ಲಿ ಪ್ರಚಾರ ಮಾಡಬಾರದು ಎಂದು ಗಜಾನನ ಅನ್ವೇಕರ್, ರವೀಂದ್ರ ಪಾಟೀಲ್‍ಗೆ ಧಮ್ಕಿ ಹಾಕಿರುವ ಬಗ್ಗೆ ಆರೋಪವಿದೆ. ಇದನ್ನೂ ಓದಿ: ಅಮರೀಂದರ್‌ ಹೊಸ ಪಕ್ಷ ಸ್ಥಾಪನೆ – ರೈತರ ಸಮಸ್ಯೆ ಪರಿಹಾರವಾದರೆ ಬಿಜೆಪಿ ಜೊತೆ ಮೈತ್ರಿ

    ತನ್ನ ಸಹರಚರೊಂದಿಗೆ ಆಗಮಿಸಿದ ಗಜಾನನ ಹಾಗೂ ತನ್ನಿಬ್ಬರು ಸಹಚರರು ರವೀಂದ್ರ ಪಾಟೀಲ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಇದನ್ನೂ ಓದಿ: ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ

  • ಷರಿಷತ್ ಚುನಾವಣೆ ದಿನಾಂಕ ಪ್ರಕಟ – ಯಾವ ಪಕ್ಷದಲ್ಲಿ ಯಾರು ಆಕಾಂಕ್ಷಿ?

    ಷರಿಷತ್ ಚುನಾವಣೆ ದಿನಾಂಕ ಪ್ರಕಟ – ಯಾವ ಪಕ್ಷದಲ್ಲಿ ಯಾರು ಆಕಾಂಕ್ಷಿ?

    ನವದೆಹಲಿ: ರಾಜ್ಯಸಭೆ ಬೆನ್ನಲ್ಲೇ ವಿಧಾನ ಪರಿಷತ್ ಗೂ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಏಳು ಸ್ಥಾನಗಳ ಅವಧಿ ಮುಕ್ತಾಯವಾಗುವ ಹಿನ್ನಲೆಯಲ್ಲಿ ಚುನಾವಣೆ ಘೋಷಿಸಿದೆ.

    ಪರಿಷತ್ ಸದಸ್ಯರಾದ ನಾಸೀರ್ ಅಹಮದ್, ಜಯಮ್ಮ, ಹೆಚ್.ಎಂ ರೇವಣ್ಣ, ವೇಣುಗೋಪಾಲ್, ಡಿ.ಯು ಮಲ್ಲಿಕಾರ್ಜುನ್, ಟಿ.ಎ. ಶರವಣ ಅವರ ಅವಧಿ ಜೂನ್ 30ಕ್ಕೆ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಜೂನ್ 29 ರಂದು ಚುನಾವಣೆ ದಿನಾಂಕ ಘೋಷಿಸಲಾಗಿದೆ.

    ಜೂನ್ 11ಕ್ಕೆ ಅಧಿಸೂಚನೆ ಹೊರಡಿಸಲಿದ್ದು, ಜೂಜ್ 18 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್19 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಜೂನ್ 22 ನಾಮಪತ್ರ ಹಿಂಪಡೆಯಲು ಕಡೆಯ ದಿನಾಂಕ. ಜೂನ್ 29 ರಂದು ಬೆಳಗ್ಗೆ ಒಂಭತ್ತು ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗೂ ಮತದಾನ ನಡೆಯಲಿದ್ದು ನಾಲ್ಕು ಗಂಟೆ ಬಳಿಕ ಚುನಾವಣಾ ಆಯೋಗ ಫಲಿತಾಂಶ ಪ್ರಕಟಿಸಲಿದೆ.

    ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1 ಸ್ಥಾನ ಗೆಲ್ಲಬಹುದಾಗಿದ್ದು ರಾಜ್ಯಸಭೆ ಟಿಕೆಟ್ ಕಸರತ್ತಿನ ಬಳಿಕ ವಿಧಾನಸಭೆಗೂ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ ನಲ್ಲಿ ಎರಡು ಸ್ಥಾನಗಳಿಗೆ ನಿವೇದಿತಾ ಅಳ್ವಾ, ಉಗ್ರಪ್ಪ, ಸುದರ್ಶನ್, ಐವಾನ್ ಡಿಸೋಜಾ ಪೈಪೋಟಿ ನಡೆಸುತ್ತಿದ್ದರೆ ಹೆಚ್.ಎಂ.ರೇವಣ್ಣ ನಾಸೀರ್ ಅಹಮದ್ ಮರು ಆಯ್ಕೆ ಬಯಸಿದ್ದಾರೆ. ಇನ್ನು ಭಾರತಿ ಶಂಕರ್, ರಾಣಿ ಸತೀಶ್ ಕೂಡ ರೇಸ್ ನಲ್ಲಿದ್ದಾರೆ

    ಬಿಜೆಪಿಯಲ್ಲಿ ನಾಲ್ಕು ಸ್ಥಾನಗಳಿಗೆ ಪೈಪೋಟಿ ಇದ್ದು ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ಹೆಚ್.ವಿಶ್ವನಾಥ್, ಶಂಕರಪ್ಪ, ಮಾಲೀಕಯ್ಯ ಗುತ್ತೇದಾರ್, ನಿರ್ಮಲ ಕುಮಾರ್ ಸುರಾನಾ ನಡುವೆ ಫೈಟ್ ಏರ್ಪಟ್ಟಿದೆ.

    ಜೆಡಿಎಸ್ ನಿಂದ ಒಂದು ಸ್ಥಾನ ಸಿಗಲಿದ್ದು ಕೋನರೆಡ್ಡಿ, ಬಿ.ಬಿ.ನಿಂಗಯ್ಯ, ಜವರಾಯಿಗೌಡ, ಶರವಣ, ಕುಪೇಂದ್ರ ರೆಡ್ಡಿ ಸ್ಪರ್ಧೆಯಲ್ಲಿದ್ದಾರೆ. ರಾಜ್ಯಸಭೆಯಿಂದ ಶುರುವಾಗಿದ್ದ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ.

    https://www.facebook.com/publictv/posts/4369546059729779

     

  • ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ವಿಜಯಪುರ: ಬಸನಗೌಡ ಪಾಟೀಲ್ ಯತ್ನಾಳ್‍ರಿಂದ ತೆರವಾದ ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ.

    ಸುನೀಲಗೌಡ ಪಾಟೀಲ್ ಅವರು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಎಂಬಿ ಪಾಟೀಲ್, ನನ್ನ ಸಹೋದರ ಸುನೀಲಗೌಡ ಪಾಟೀಲ್ ನನ್ನು ಪರಿಷತ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಜೆಡಿಎಸ್ ನಿರ್ಧಾರ ತೆಗೆದುಕೊಂಡಿದೆ ತಿಳಿಸಿದರು.

    ಎಂಎಲ್ ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳಿಂದ ಗೆಲುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಎಂಎಲ್‍ಸಿ ಚುನಾವಣಾ ಫಲಿತಾಂಶ ಬಂದ ಮೇಲೆ ಯಾರ ಸೋಲು, ಯಾರು ಗೆಲುವು ಗೊತ್ತಾಗುತ್ತದೆ ಎಂದು ಹೇಳಿ ತಿರುಗೇಟು ನೀಡಿದರು.

    ನಾವು ಮತದಾರರ ಮೇಲೆ ವಿಶ್ವಾಸ ಹೊಂದಿದ್ದೇವೆ. ಆದರೆ ಯತ್ನಾಳ್ ಹಾಗೆ ಸ್ವಯಂ ಘೋಷಿತ ಮಾಡಿಕೊಳ್ಳಲು ತಯಾರಿಲ್ಲ. ಮತದಾರರ ಆರ್ಶೀವಾದದಿಂದ ನಮ್ಮ ಗೆಲುವು ಆಗಲಿದೆ ಎಂದು ಎಂಪಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

    ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ನ ಮುಖಂಡರಾದ ಎಸ್ ಆರ್ ಪಾಟೀಲ್, ಉಮಾಶ್ರೀ, ಎಚ್ ವೈ ಮೇಟಿ, ಸಿಎಸ್ ನಾಡಗೌಡ ಮತ್ತು ಜೆಡಿಎಸ್ ಸಚಿವ ಎಂ ಸಿ ಮನಗೂಳಿ, ಶಾಸಕ ದೇವಾನಂದ ಚವ್ಹಾಣ ಕೂಡ ಸಾಥ್ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv