Tag: ಪರಿಸರ ಪ್ರೇಮಿ

  • ರಾಜ್ಯಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಎಂದೇ ಫೇಮಸ್ ಆಗಿದ್ದ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

    ರಾಜ್ಯಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಎಂದೇ ಫೇಮಸ್ ಆಗಿದ್ದ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

    ದಾವಣಗೆರೆ: ಸಾಲುಮರದ ವೀರಾಚಾರಿ, ಪರಿಸರ ಪ್ರೇಮಿ (Environmental Lover) ಎಂದೇ ಪ್ರಸಿದ್ಧಿ ಪಡೆದ ಮಿಟ್ಲಕಟ್ಟೆ ವೀರಾಚಾರಿ (Mitlakatte Veerachari) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರಾಜ್ಯ ಪ್ರಶಸ್ತಿ ವಿಜೇತ, ಪಬ್ಲಿಕ್ ಹೀರೋ ಆಗಿದ್ದ ಸಾಲುಮರದ ವೀರಾಚಾರಿ ಮಧ್ಯರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಸಾಲುಮರಗಳನ್ನು ಬೆಳೆಸಿದ್ದ ಪರಿಸರ ಪ್ರೇಮಿ ಮಿಟ್ಲಕಟ್ಟೆ ಅವರಿಗೆ ಈ ಹಿಂದೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು (State Award Winner) ಕೂಡ ನೀಡಿತ್ತು. ಇದನ್ನೂ ಓದಿ: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಕೇಸ್ – ಸಹಜ ಸಾವು ಎಂದ ಸಿಬಿಐ ವರದಿ ತಿರಸ್ಕೃತ

    ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ (Fair Price Shop) ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ನ್ಯಾಯಬೆಲೆ ಅಕ್ರಮದ ವಿರುದ್ಧ ನಿರಂತರವಾಗಿ ಕಳೆದ ಒಂದು ವರ್ಷದಿಂದ ವೀರಾಚಾರಿ ಅವರು ಹೋರಾಟ ನಡೆಸುತ್ತಿದ್ದರು. ಆದರೆ ಸೋಮವಾರ ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕೋ? ಬೇಡವೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು.

    ಈ ಹಿಂದೆ ಮಿಟ್ಲಕಟ್ಟೆ ವೀರಾಚಾರಿ ಅವರು, ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವುದಾಗಿ ವಾಗ್ದಾನ ಮಾಡಿದ್ದರು. ಇದೀಗ ವಾಗ್ದಾನದಂತೆ ಸೋಮವಾರ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ.ಇದನ್ನೂ ಓದಿ: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಕೇಸ್ – ಸಹಜ ಸಾವು ಎಂದ ಸಿಬಿಐ ವರದಿ ತಿರಸ್ಕೃತ

    ಇದೀಗ ಮಿಟ್ಲಕಟ್ಟೆ ಗ್ರಾಮದ ಯಾರು ಕೂಡ ಬರದಂತೆ ರಸ್ತೆಗಳನ್ನು ಗ್ರಾಮಸ್ಥರು ಬಂದ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಹಾರ ಇಲಾಖೆ ಅಧಿಕಾರಿಗಳು ಬರುವರೆಗೂ ಶವವನ್ನು ಕುಣಿಕೆಯಿಂದ ಕೆಳಗಿಸದಂತೆ ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ : ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದರಾಮಪ್ಪ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಗ್ರಾಮಸ್ಥರನ್ನು ನ್ಯಾಯಬೆಲೆ ಅಂಗಡಿಯಿಂದ ಕಳುಹಿಸಿ, ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

    ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ರವರು ಇಂದು ನಿಧನರಾಗಿದ್ದಾರೆ.

    ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಇದನ್ನೂ ಓದಿ: ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ

    ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ ಬೆಳಸುವುದರ ಜೊತೆ ಅರಣ್ಯ ಸಂರಕ್ಷಣೆ ಸಹ ಮಾಡಿದ್ದ ಮಹಾದೇವ ವೇಳಿಪ ಅವರು ಜನಪದ ಹಾಡುಗಳನ್ನು ಸಾವಿರ ಲೆಕ್ಕದಲ್ಲಿ ನಿರಂತರವಾಗಿ ಹಾಡುತಿದ್ದರು. ನಾಟಿ ವೈದ್ಯ ಸಹ ಆಗಿದ್ದ ಇವರ ಸರಳ ಸಜ್ಜನಿಕೆ ಎಲ್ಲರನ್ನೂ ಸೆಳೆಯುತಿತ್ತು. ಕಳೆದ ಎರಡು ದಿನದಿಂದ ಅನಾರೋಗ್ಯ ಪೀಡಿತರಾಗಿದ್ದ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ಬೆನ್ನ ಮೇಲೆ ಎಸ್‍ಪಿ ಸ್ಟಿಕ್ಕರ್ ಅಂಟಿಸಿದ ವೀಡಿಯೋ ವೈರಲ್ – ಮಹಿಳೆ ಹೇಳಿದ್ದೇನು?

  • ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿದ್ದಾರೆ ಕಾಮೇಗೌಡರು- ಸಿನಿಮಾ ಆಗಲಿದೆ ಸಾಧನೆ

    ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿದ್ದಾರೆ ಕಾಮೇಗೌಡರು- ಸಿನಿಮಾ ಆಗಲಿದೆ ಸಾಧನೆ

    ಬೆಂಗಳೂರು: ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡರ ಸಾಧನೆ ಮೈ ಜುಮ್ ಎನ್ನಿಸುವಂಥದ್ದು, ಕೆರೆ ತೋಡುವ ಅವರ ಆಸಕ್ತಿ ಅಗಾಧವಾದದ್ದು ಎಂಬುದು ಈಗಾಗಲೇ ತಿಳಿದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮನ್ ಕೀ ಬಾತ್‍ನಲ್ಲಿ 80ರ ಇಳಿ ವಯಸ್ಸಿನ ಕಾಮೇಗೌಡರ ಸಾಧನೆಯನ್ನು ಕೊಂಡಾಡಿದ್ದಾರೆ. ಇದೇ ಸಂದರ್ಭದಲ್ಲಿ ಇನ್ನೊಂದು ಸಂತಸದ ವಿಚಾರ ಹೊರ ಬಿದ್ದಿದೆ.

    ಹೌದು ಸ್ವಾರ್ಥಕ್ಕಾಗಿ ಮರ, ಗಿಡಗಳನ್ನು ಕಡಿದು ಭೂಮಿಯನ್ನು ಬರುಡಾಗಿಸುತ್ತಿರುವವರ ಮಧ್ಯೆ ಕಾಮೇಗೌಡರು ಇಂದಿನ ಯುವ ಪೀಳಿಗೆಗೆ ಮಾದರಿ. ಇವರ ಜೀವನವನ್ನು ಪ್ರತಿಯೊಬ್ಬ ಯುವಕರು ಅರಿಯಬೇಕು, ಸಾಧನೆ ಎಂದರೆ ಕೇವಲ ಒಳ್ಳೆಯ ಕೆಲಸ ಗಿಟ್ಟಿಸಿಕೊಳ್ಳುವುದಲ್ಲ. ಪ್ರಕೃತಿಯನ್ನು ಆರಾಧಿಸುವುದು, ಪ್ರಕೃತಿಯೊಂದಿಗೆ ಬೆರೆಯುವುದು ಎಂಬುದನ್ನು ಕಾಮೇಗೌಡರು ನಿರೂಪಿಸಿದ್ದಾರೆ. ಹೀಗಾಗಿ ಅವರ ಸಾಧನೆಯನ್ನು ತೆರೆ ಮೇಲೆ ತರಲು ಬರಹಗಾರ, ನಿರ್ದೇಶಕ, ನಿರ್ಮಾಪಕ ದಯಾಳ್ ಪದ್ಮನಾಭನ್ ನಿರ್ಧರಿಸಿದ್ದಾರೆ.

    ಈಗಾಗಲೇ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಕಾಮೇಗೌಡರ ಜೀವನಾಧಾರಿತ ಡಾಕ್ಯೂಮೆಂಟ್ರಿ ಸಿದ್ಧಪಡಿಸಲು ತಯಾರಿ ನಡೆಸಿದ್ದು, ಸಿನಿಮಾದ ಪೋಸ್ಟರ್‍ನ್ನು ಸಹ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಅವರ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟರ್ ನ ಫೋಟೋ ಹಾಕಿ ಸಾಲುಗಳನ್ನು ಬರೆದಿರುವ ದಯಾಳ್ ಪದ್ಮನಾಭನ್, ಶ್ರೀ ಕಾಮೇಗೌಡ ಅವರ ಸಾಧನೆಯ ಡಾಕ್ಯೂಮೆಂಟ್ರಿ ನಿರ್ಮಾಣ ಮಾಡುತ್ತಿರುವುದಕ್ಕೆ ಡಿ ಪಿಕ್ಚರ್ಸ್ ಹಾಗೂ ಓಂ ಪ್ರೊಡಕ್ಷನ್ಸ್ ಹೌಸ್ ಹೆಮ್ಮೆ ಹಾಗೂ ಸಂತಸ ಪಡುತ್ತದೆ. ಇದನ್ನು ನಾನೇ ನಿರ್ದೇಶಿಸುತ್ತಿದ್ದೇನೆ. ಕಾಮೇಗೌಡರ ಸಾಧನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಪ್ರಯತ್ನ ಇದಾಗಿದೆ. ಚಿಯರ್ಸ್ ಎಂದು ಬರೆದುಕೊಂಡಿದ್ದಾರೆ.

    D PICTURES & OM PRODUCTION HOUSE are proud & glad to produce a Documentary film on Sri.Kamegowda to be Directed by me..!…

    Posted by Dayal Padmanabhan on Monday, June 29, 2020

    ಅಂದಹಾಗೆ ಸಿನಿಮಾಗೆ ದಿ ಗುಡ್ ಶಫರ್ಡ್(ಉತ್ತಮ ಕುರುಬ) ಎಂಬ ಟೈಟಲ್ ಇಟ್ಟಿದ್ದಾರೆ. ದಯಾಳ್ ಪದ್ಮನಾಭ್ ಅವರ ಪೋಸ್ಟ್‍ಗೆ ಹಲವರು ಕಮೆಂಟ್ ಮಾಡಿದ್ದು, ಉತ್ತಮ ಪ್ರಾಜೆಕ್ಟ್ ಆಯ್ಕೆ ಮಾಡಿಕೊಂಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿನಿಮಾ ನೋಡಲು ಕಾತುರರಾಗಿದ್ದೇವೆ ಎಂದು ಹೇಳಿದ್ದಾರೆ

    ದಯಾಳ್ ಪದ್ಮನಾಬ್ ಅವರು ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಗುರುತಿಸಿಕೊಂಡಿದ್ದು, ಸರ್ಕಸ್, ಘರ್ಷಣೆ, ಹಗ್ಗದ ಕೊನೆಯಂತಹ ಸಿನಿಮಾಗಳ ಕಥೆಯನ್ನು ಬರೆದು ನಿದೇರ್ಶಿಸಿದ್ದಾರೆ. ಅಲ್ಲದೆ ಆ ಕರಾಳ ರಾತ್ರಿ, ಪುಟ 109, ರಂಗನಾಯಕಿ-1 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಪ್ರಸ್ತುತ 9ನೇ ದಿಕ್ಕು ಚಿತ್ರವನ್ನು ತಾವೇ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಇದರ ನಡುವೆ ಇದೀಗ ಕಾಮೇಗೌಡರ ಜೀವನಾಧಾರಿತ ಚಿತ್ರವನ್ನು ಮಾಡುವ ಕುರಿತು ಘೋಷಿಸಿದ್ದಾರೆ.

    ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿದ ಮಂಡ್ಯ ಜಿಲ್ಲೆಯ ಕಾಮೇಗೌಡರ ಸಾಮಾಜಿಕ ಕಳಕಳಿ ಯುವ ಸಮೂಹಕ್ಕೆ ಮಾದರಿಯಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿ `ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡ ಅವರನ್ನು ಶ್ಲಾಘಿಸಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸಮದೊಡ್ಡಿ ಗ್ರಾಮದ ಕುರಿಗಾಹಿ 83 ವರ್ಷದ ಕಾಮೇಗೌಡರು 16 ಕೆರೆಗಳನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಎರಡು ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ.

    ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿರುವ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸವನ್ನು ಗುರುತಿಸಿದ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

    ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ ಕಾಮೇಗೌಡರು?
    ಕುರಿಗಾಹಿಯಾಗಿರುವ ಕಾಮೇಗೌಡರು ಸುಮಾರು 13 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

    ಕಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನು ಕಂಡು ಆರಂಭದಲ್ಲಿ ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. ಸದ್ಯ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತದೆ. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೆ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

  • 35 ವರ್ಷದಿಂದ ಗಿಡ ನೆಟ್ಟು ಪೋಷಣೆ – ಸಾಲುಮರದ ವೀರಾಚಾರಿ ನಮ್ಮ ಪಬ್ಲಿಕ್ ಹೀರೋ

    35 ವರ್ಷದಿಂದ ಗಿಡ ನೆಟ್ಟು ಪೋಷಣೆ – ಸಾಲುಮರದ ವೀರಾಚಾರಿ ನಮ್ಮ ಪಬ್ಲಿಕ್ ಹೀರೋ

    -ಹಸಿರು ರಥದಲ್ಲಿ ವೃದ್ಧ ದಂಪತಿ ಸಂಚಾರ

    ದಾವಣಗೆರೆ: ಪರಿಸರ ದಿನಾಚರಣೆ ಬಂದಾಗ ಮಾತ್ರ ಗಿಡಗಳನ್ನು ನೆಟ್ಟು ನೀರು ಹಾಕಿ ಫೋಟೋ ತೆಗೆದುಕೊಳ್ಳುವರನ್ನು ನೋಡಿರುತ್ತೇವೆ. ಪ್ರತಿನಿತ್ಯ ಮರಗಿಡಗಳನ್ನು ಬೆಳೆಸುವುದೇ ದಾವಣಗೆರೆಯ ಪರಿಸರ ಪ್ರೇಮಿಯ ದಿನನಿತ್ಯದ ಕಾಯಕ. ಮರ ಗಿಡಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಿದ್ದು, ಹಸಿರು ಇವರ ಉಸಿರಾಗಿದೆ.

    ನಿಸ್ವಾರ್ಥ ಸೇವೆ ಮಾಡುತ್ತ, ಮರ ಗಿಡಗಳನ್ನು ಮಕ್ಕಳಂತೆ ಪೋಷಣೆ ಮಾಡುತ್ತಿರುವ ವೀರಾಚಾರಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಜನರು ಇವರನ್ನು ಪ್ರೀತಿಯಿಂದ ಸಾಲುಮರದ ವೀರಾಚಾರಿ ಎಂದು ಸಹ ಕರೆಯುತ್ತಾರೆ. ದಾವಣಗೆರೆಯ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದವರಾದ ವೀರಾಚಾರಿ ಪರಿಸರದ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದಾರೆ. ಚಿತ್ರದುರ್ಗದ ನಂದಿಹಳ್ಳಿ ಗ್ರಾಮದಿಂದ ಕುಲುಮೆ ಕೆಲಸ ಮಾಡಲು 35 ವರ್ಷದ ಮಿಟ್ಲಕಟ್ಟೆ ಗ್ರಾಮಕ್ಕೆ ಬಂದು ನೆಲೆಸಿದ್ದಾರೆ.

    ಪರಿಸರದ ಬಗ್ಗೆ ಕಾಳಜಿ ಇದ್ದ ವೀರಾಚಾರಿ ದೇವರಬೆಳಕೆರೆ ಗ್ರಾಮ ಪಂಚಾಯಿತಿಗೆ ತೆರಳಿ ಬಸ್ ನಿಲ್ದಾಣದ ಆವರಣದಲ್ಲಿ ನೆಡಲು ಎರಡು ಗಿಡಗಳನ್ನ ಕೇಳಿದ್ದಾರೆ. ಆದರೆ ಗಿಡಗಳನ್ನ ಕೊಡಲು ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರಾಕರಿಸಿದ್ದಾರೆ. ಇದರಿಂದ ಬೇಸರಗೊಂಡ ವೀರಾಚಾರಿ ಗ್ರಾಮ ಪಂಚಾಯಿತಿಯವರಿಗೇ ಸವಾಲ್ ಹಾಕಿದ್ದಾರೆ. ಇನ್ನು ಮುಂದೆ ನಾನೇ ಇಡೀ ದಾವಣಗೆರೆ ಜಿಲ್ಲೆಯ ತುಂಬಾ ಗಿಡ ನೆಡುವುದಾಗಿ ಶಪಥ ಮಾಡಿದ್ದರು.

    ಅಂದಿನಿಂದ ಪ್ರಾರಂಭವಾದ ಗಿಡ ನೆಡುವ ಕಾರ್ಯಕ್ರಮ ಸತತ 35 ವರ್ಷಗಳಲ್ಲಿ ಎರಡೂವರೆ ಸಾವಿರಕ್ಕಿಂತ ಹೆಚ್ಚು ಗಿಡ ನೆಟ್ಟಿದ್ದಾರೆ. ಕೇವಲ ಗಿಡ ನೆಡುವುದು ಮಾತ್ರವಲ್ಲದೆ ಪ್ರತಿನಿತ್ಯ ಗಿಡಗಳಿಗೆ ನೀರು ಹಾಕಿ ಬೆಳೆಸುವುದು ಇವರ ನಿತ್ಯ ಕಾಯಕವಾಗಿದೆ. ಈ ವೇಳೆ ಬಡತನದಲ್ಲಿದ್ದ ವೀರಚಾರಿ ತಮ್ಮ ಚಿನ್ನಾಭರಣಗಳನ್ನು ಮಾರಿ ಗಿಡಗಳನ್ನ ಕೊಂಡು ತಂದು ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಪ್ರತಿ ಗ್ರಾಮದ ಬಸ್ ನಿಲ್ದಾಣಗಳಲ್ಲಿ ಗಿಡ ಹಚ್ಚಿದ್ದಾರೆ.

    ಆರಂಭದಲ್ಲಿ ವೀರಾಚಾರಿಯವರ ಕೆಲಸವನ್ನು ನೋಡಿ ಜನರು ನಗೆಪಾಟಲು ಮಾಡುತ್ತಿದ್ದರಂತೆ. ಆದರೆ ಜನರ ಮಾತುಗಳಿಗೆ ತಲೆಕೆಡಿಸಿಕೊಳ್ಳದ ವೀರಾಚಾರಿ ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದರು. ಇಂದು ವೀರಾಚಾರಿ ಅವರು ಬೆಳೆಸಿದ ಗಿಡಗಳು ಅದೆಷ್ಟೋ ಜನರಿಗೆ ನೆರಳು ನೀಡುತ್ತಿವೆ. ಹಾಗೆಯೇ ಪ್ರಾಣಿ ಪಕ್ಷಿಗಳಿಗೆ ಆಶ್ರಯ ತಾಣಗಳಾಗಿವೆ. ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿವೆ. ಮನೆಯವರು ಸಹ ಹೆಗಲಿಗೆ ಹೆಗಲು ನೀಡಿ ಮರ ಗಿಡಗಳನ್ನು ಬೆಳೆಸಲು ಸಹಾಯ ಮಾಡುತ್ತಿದ್ದಾರೆ. ಬಡತನದಲ್ಲಿ ಕೂಡ ಮನೆ ಒಡವೆ ಒತ್ತೆ ಇಟ್ಟು ಗಿಡಗಳನ್ನು ತರುತ್ತಿದ್ದರು. ನಾವು ಯಾವುದಕ್ಕೂ ವಿರೋಧ ಮಾಡುತ್ತಿರಲಿಲ್ಲ ಎಂದು ವೀರಾಚಾರಿ ಅವರ ಪತ್ನಿ ಅನಸೂಯಮ್ಮ ಹೇಳುತ್ತಾರೆ.

    ಇತ್ತೀಚಿನ ದಿನಗಳಲ್ಲಿ ತಾನಾಯಿತು ತನ್ನ ಮನೆಯಾಯಿತು ಎಂದು ಇರುವ ಜನರ ನಡುವೆ ಈ ರೀತಿ ಪರಿಸರಕ್ಕಾಗಿ ನಿಸ್ವಾರ್ಥ ಸೇವೆ ಮಾಡುತ್ತಿರುವರ ಸಂಖ್ಯೆ ಬಹಳ ವಿರಳ. ಒಟ್ಟಾರೆಯಾಗಿ ಸಾಲುಮರದ ವೀರಾಚಾರಿಯ ಈ ಕಾಯಕಕ್ಕೆ ನಮ್ಮದೊಂದು ಸಲಾಂ.

  • ಮೈತುಂಬಾ ಪ್ಲಾಸ್ಟಿಕ್ ಬ್ಯಾಗ್ – ಇವರು ನಡೆದಾಡುವ ಡಸ್ಟ್‌ಬಿನ್‌!

    ಮೈತುಂಬಾ ಪ್ಲಾಸ್ಟಿಕ್ ಬ್ಯಾಗ್ – ಇವರು ನಡೆದಾಡುವ ಡಸ್ಟ್‌ಬಿನ್‌!

    ಭುವನೇಶ್ವರ: ಒಡಿಶಾದ ಮಯೂರ್ಭಂಜ್‍ನಲ್ಲಿ ಪರಿಸರದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ವ್ಯಕ್ತಿಯೊಬ್ಬರು ನಡೆದಾಡುವ ಡಸ್ಟ್‌ಬಿನ್‌ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.

    ಮಯೂರ್ಭಂಜ್‍ನ ಬರಿಪಾಡ ಗ್ರಾಮದ ನಿವಾಸಿ ಬಿಷ್ಣು ಭಗತ್ (36) ಅವರನ್ನು ಜನರು ನಡೆದಾಡುವ ಡಸ್ಟ್‌ಬಿನ್‌ ಎಂದೇ ಕರೆಯುತ್ತಿದ್ದಾರೆ. ಬಣ್ಣಬಣ್ಣದ ಪಾಲಿಥಿನ್ ಬ್ಯಾಗ್‍ಗಳನ್ನು ಬಟ್ಟೆಗೆ ಅಂಟಿಸಿಕೊಂಡು ಕಸದಬುಟ್ಟಿ ರೀತಿ ದಿನನಿತ್ಯ ತಮ್ಮ ಕೆಲಸಕ್ಕೆ ಹೋಗುತ್ತಿರುವ ಕಾರಣ ಜನರು ಪ್ರೀತಿಯಿಂದ ಈ ಹೆಸರನ್ನು ಇಟ್ಟಿದ್ದಾರೆ.

    ಪ್ಲಾಸ್ಟಿಕ್‍ನಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಆದರಿಂದ `ಪಾಲಿಥಿನ್ ಬ್ಯಾಗ್‍ಗಳನ್ನು ಬಳಸಬೇಡಿ, ಪರಿಸರವನ್ನು ಉಳಿಸಿ’ ಎಂದು ನಿತ್ಯವು ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪರಿಸರ ಮಾಲಿನ್ಯದ ಕುರಿತು ವಿಷ್ಣು ಭಗತ್ ಜಾಗ್ರತಿ ಮೂಡಿಸುತ್ತಿದ್ದಾರೆ.

    ಯಾಕೆ ಹೀಗೆ ವಿಚಿತ್ರವಾಗಿ ಇರ್ತೀರಾ ಎಂದು ಬಿಷ್ಣು ಅವರನ್ನು ಕೇಳಿದರೆ, ನನ್ನನ್ನು ನೋಡಿ ಬಹಳಷ್ಟು ಜನ ಇವನೊಬ್ಬ ಹುಚ್ಚ, ಮೈತುಂಬಾ ಪ್ಲಾಸ್ಟಿಕ್ ಅಂಟಿಸಿಕೊಂಡು ವಿಚಿತ್ರವಾಗಿ ಇರುತ್ತಾನೆ ಅಂತಾ ನಗುತ್ತಾರೆ. ಬರೀ ಒಬ್ಬ ಮನುಷ್ಯ ಹೀಗೆ ಇದ್ದರೆ ಜನಕ್ಕೆ ನೋಡಲು ಆಗೋಲ್ಲ ಆದ್ರೆ ನಿತ್ಯವು ಮನುಷ್ಯ ಪ್ಲಾಸ್ಟಿಕ್ ಬಳಕೆಯಿಂದ ಪರಿಸರವನ್ನು ಮಾಲಿನ್ಯ ಮಾಡುತ್ತಾನೆ. ಅದರಿಂದ ಭೂಮಿ ಇನ್ನ್ಯಾವ ರೀತಿ ಕಾಣಿಸಬಹುದು ಎಂದು ಯೋಚಿಸಿ ಎಂದು ಮರು ಪ್ರಶ್ನೆ ಎಸೆಯುತ್ತಾರೆ.

    ಬಿಷ್ಣು ಅವರನ್ನು ನೋಡಿ ಜನರು ಅವನೊಬ್ಬ ಮೂರ್ಖ, ಮಾಡಲು ಬೇರೇನು ಕೆಲಸವಿಲ್ಲ ಎಂದು ಮಾತಾಡುತ್ತಾರೆ. ಆದ್ರೆ ಬಿಷ್ಣು ಅವರು ಪರಿಸರದ ಮೇಲಿಟ್ಟಿರುವ ಪ್ರೀತಿ ಹಾಗೂ ಅವರು ಮಾಡುತ್ತಿರುವ ಕೆಲಸವನ್ನು ಎಲ್ಲರು ಮೆಚ್ಚಲೇಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಾಲೆ ನಿರ್ಮಾಣಕ್ಕೆ ತನ್ನ ಜಮೀನನ್ನೇ ಸರ್ಕಾರಕ್ಕೆ ದಾನ ಮಾಡಿದ ಹೀರೋ

    ಶಾಲೆ ನಿರ್ಮಾಣಕ್ಕೆ ತನ್ನ ಜಮೀನನ್ನೇ ಸರ್ಕಾರಕ್ಕೆ ದಾನ ಮಾಡಿದ ಹೀರೋ

    ಗದಗ: ಈಗಿನ ಕಾಲದಲ್ಲಿ ಒಂದಂಗುಲ ಜಾಗಕ್ಕಾಗಿ ಹೊಡೆದಾಡಿ ಕೋರ್ಟ್ ಮೆಟ್ಟಿಲು ಹತ್ತಿರುವ ಜನರನ್ನು ಪ್ರತಿದಿನ ಕಾಣುತ್ತಿರ. ಆದರೆ ನಾವು ಇಂದು ನಿಮಗೆ ಹೇಳುತ್ತಿರುವ ಸ್ಟೋರಿ ವಿಭಿನ್ನವಾಗಿದೆ.

    ತನ್ನ ಊರಿನಲ್ಲಿ ಶಾಲೆಯನ್ನು ನಿರ್ಮಾಣ ಮಾಡಲು ಎಲ್‍ಐಸಿ ಏಜೆಂಟ್‍ವೊಬ್ಬರು ತಮ್ಮ 3 ಎರಕೆ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಿದ್ದಾರೆ. ಅಂದಹಾಗೇ ಈ ಸಮಾಜ ಸೇವಕರ ಹೆಸರು ಆನಂದ ಕೃಷ್ಣಾ ಜಿ ಕುಲಕರ್ಣಿ. ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ನಿವಾಸಿಯಾದ ಇವರು ಪರಿಸರ ಪ್ರೇಮಿ, ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕ. ಕೃಷಿ ಜೊತೆ ಎಲ್‍ಐಸಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.

    ಸರ್ಕಾರ 2006ರಲ್ಲಿ ನರೇಗಲ್ ಪಟ್ಟಣಕ್ಕೆ ಸರ್ಕಾರಿ ಹೈಸ್ಕೂಲ್ ಮಂಜೂರು ಮಾಡಿತ್ತು. ಆದರೆ ಕಟ್ಟಡ ಕಟ್ಟೋಕೆ ಯಾರೂ ಜಾಗ ಕೊಡಲಿಲ್ಲ. ಇಂತಹ ಸಮಯದಲ್ಲಿ ನಮ್ಮ ಹೀರೋ ಆನಂದ ಕುಲಕರ್ಣಿ, ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ 3 ಎಕರೆ 5 ಗುಂಟೆ ಜಮೀನನ್ನೇ ಬಿಟ್ಟು ಕೊಟ್ಟಿದ್ದಾರೆ. ಪತಿಯ ಎಲ್ಲಾ ಕೆಲಸಕ್ಕೆ ಪತ್ನಿ ಅರ್ಚನಾ ಸಾಥ್ ನೀಡ್ತಿದ್ದಾರೆ.

    ಪ್ರಸ್ತುತ ಅನೇಕ ಬಡ ಮಕ್ಕಳ ಶಿಕ್ಷಣ, ಊಟ, ವಸತಿ ಜವಾಬ್ದಾರಿಯನ್ನ ಇವರೇ ನೋಡಿಕೊಳ್ಳುತ್ತಿದ್ದಾರೆ. ಪತ್ನಿ ಅರ್ಚನಾ ಎಂ.ಕಾಮ್ ಓದಿದ್ದು, ಮನೆಯಲ್ಲೇ ಉಚಿತವಾಗಿ ಬಡ ಮಕ್ಕಳಿಗೆ ಟ್ಯೂಷನ್ ಮಾಡುತ್ತಿದ್ದಾರೆ.

    ಅಷ್ಟೇ ಅಲ್ಲದೆ ಪರಿಸರ ಪ್ರೇಮಿಯಾಗಿರುವ ಆನಂದ್ ಶಾಲಾ-ಕಾಲೇಜು ಆವರಣ, ದೇವಸ್ಥಾನದ ಬಯಲು, ಪಾಳುಬಿದ್ದ ಸರ್ಕಾರಿ ಜಾಗದಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಿತ್ತಿದ್ದಾರೆ. ಇದುವರೆಗೂ ಸುಮಾರು 5 ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಪೋಷಣೆ ಮಾಡಿದ್ದು, ಅದರಲ್ಲಿ ಬೇವು, ನೆರಳೆ, ಹತ್ತಿ, ಅರಳಿ, ಬನ್ನಿ ಮರಳನ್ನು ಹೆಚ್ಚು ನಾಟಿ ಮಾಡಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಜನಸೇವೆ ಮಾಡುತ್ತಿರುವ ಆನಂದ್ ದಂಪತಿಗೆ ಶುಭ ಹಾರೈಕೆ.

  • 13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

    13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

    ಮಂಗಳೂರು: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ವಲ್ಪ ಡಿಫೆರೆಂಟ್ ಕಾಕ್‍ಟೈಲ್ ಪಾರ್ಟಿ ಆಯೋಜನೆ ಮಾಡುವ ಇವರು ಸದಿಲ್ಲದೇ ಹಸಿರು ಕ್ರಾಂತಿಯನ್ನು ಮಾಡುತ್ತಿದ್ದಾರೆ.

    ಮಂಗಳೂರಿನ ಮೋರ್ಗನ್ಸ್ ಗೇಟ್ ನಿವಾಸಿ ಜೀತ್ ಮಿಲನ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸ್ಮಶಾನದಲ್ಲಿ ಗಿಡ ನೆಟ್ಟರೆ ಯಾರೂ ಅಡ್ಡಿ ಮಾಡಲ್ಲ. ಗಿಡಗಳೂ ಚೆನ್ನಾಗಿ ಬೆಳೀತಾವೆ ಅನ್ನೋ ಉದ್ದೇಶದಿಂದ ಗಿಡಗಳನ್ನು ಹಚ್ಚಿದ್ದಾರೆ. ಹೆದ್ದಾರಿ ಬದಿ ಸೇರಿದಂತೆ ಖಾಲಿ ಇರುವ ಜಾಗದಲ್ಲಿ ಹಸಿರ ರಂಗೋಲಿ ಬಿಡಿಸಿದ್ದಾರೆ. ಕಳೆದ 13 ವರ್ಷಗಳಲ್ಲಿ ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.

    ಜೀತ್ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಪ್ರತಿವರ್ಷ ತಮ್ಮ ಮಕ್ಕಳ ಶಾಲಾ ಪ್ರಾರಂಭೋತ್ಸವ ದಿನದಂದು ಇಡೀ ಕುಟುಂಬ ಗಿಡ ನೆಡುತ್ತದೆ. ಮೊದಲು ಅರಣ್ಯ ಇಲಾಖೆಯವರು ದುಡ್ಡು ಕೊಟ್ಟರೆ ಸಸಿ ಕೊಡ್ತಿದ್ರು. ಆದ್ರೀಗ ಇವರ ಸಮಾಜ ಸೇವೆ ನೋಡಿ, ಉಚಿತವಾಗಿ ಗಿಡ ಕೊಡ್ತಿದೆ. ಇವರಿಗೆ ಒಂದಿಷ್ಟು ಸ್ನೇಹಿತರೂ ಸಾಥ್ ನೀಡಿದ್ದಾರೆ. ಯಾವುದೇ ಪ್ರಚಾರದ ಹಂಗಿಲ್ಲದೆ ನಿಸ್ವಾರ್ಥವಾಗಿ ಬಾನೆತ್ತರಕ್ಕೆ ಮರ ಗಿಡ ಬೆಳೆಸುತ್ತಿದ್ದಾರೆ.

    https://www.youtube.com/watch?v=N4y-gkfHJS8

     

     

  • ಅಳಿವಿನಂಚಿನ ಔಷಧೀಯ ಸಸ್ಯಗಳ ಪೋಷಕ- ಇವರು ಬೆಳೆಸಿದ ಗಿಡ ಗಿನ್ನೀಸ್ ಪುಟ ಸೇರ್ತು!

    ಅಳಿವಿನಂಚಿನ ಔಷಧೀಯ ಸಸ್ಯಗಳ ಪೋಷಕ- ಇವರು ಬೆಳೆಸಿದ ಗಿಡ ಗಿನ್ನೀಸ್ ಪುಟ ಸೇರ್ತು!

    ಧಾರವಾಡ: ಜಿಲ್ಲೆಯಲ್ಲೊಬ್ಬರು ಅಪ್ಪಟ ಪರಿಸರಪ್ರೇಮಿ ಇದ್ದಾರೆ. ಮಕ್ಕಳಿಲ್ಲದ ಇವರಿಗೆ ಗಿಡ, ಮರ, ಔಷಧಿ ಸಸ್ಯಗಳೇ ಮಕ್ಕಳು. ಪರಿಸರದ ಮೇಲಿನ ಇವರ ಅತಿಯಾದ ಪ್ರೀತಿ ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳುವಂತೆ ಮಾಡಿದೆ. ಇವರು ಮಾಡಿದ ಕೆಲಸವೊಂದು ಗಿನ್ನೀಸ್ ದಾಖಲೆ ಪುಟ ಸೇರಿದೆ. ಔಷಧಿ ಸಸ್ಯಗಳನ್ನು ತಮ್ಮ ಮಕ್ಕಳಿಗಿಂತ ಹೆಚ್ಚಾಗಿ ಪೋಷಣೆ ಮಾಡ್ತಿರೋ ಇವರೇ ನಮ್ಮ ಪಬ್ಲಿಕ್ ಹೀರೋ.

    ಧಾರವಾಡದ ಸಾಧನಕೇರಿ ಬಳಿಯಿರುವ ಜಮುಖಂಡಿ ಫ್ಲಾಟ್‍ನ ನಿವಾಸಿ ಪಂಡಿತ ಮುಂಜಿ, ಕರ್ನಾಟಕ ಕೃಷಿ ನಿಗಮದಲ್ಲಿ ನೌಕರಿಯಲ್ಲಿದ್ದರು. ಇವರಿಗೆ ಇನ್ನೂ 10 ವರ್ಷ ಸರ್ವೀಸ್ ಇತ್ತು. ಆದರೆ ಇಷ್ಟರಲ್ಲೇ ಏನಾದ್ರೂ ಸಾಧಿಸಬೇಕೆಂಬ ಛಲ ಹುಟ್ಟಿಕೊಳ್ತು. ಈ ಕಾರಣದಿಂದ ಸ್ವಯಂ ನಿವೃತ್ತಿಯನ್ನೇ ಪಡೆದು ಪಾಪಸ್‍ಕಳ್ಳಿ, ಅಗ್ನಿಮಂಥನ, ಆಡು ಮುಟ್ಟದ ಬಳ್ಳಿ, ಗುಲಗಂಜಿ, ಮಧುನಾಶಿನಿ, ಇನ್ಸುಲಿನ್ ಸೇರಿದಂತೆ ಹಲವು ಬಗೆಯ ಔಷಧಿಯ ಸಸ್ಯಗಳನ್ನು ಬೆಳೆಸುವ ಕಾರ್ಯಕ್ಕೆ ಕೈ ಹಾಕಿದ್ರು. ಇದನ್ನೇ ವೃತ್ತಿ ಮಾಡಿಕೊಂಡು ತಳಿ ಕೂಡಾ ಅಭಿವೃದ್ದಿ ಮಾಡ್ತಿದ್ದಾರೆ.

    1990ರಲ್ಲಿ ಪಂಡಿತ ಮುಂಜಿ 4 ಅಡಿ ಉದ್ದದ ಪಾಪಸ್ ಕಳ್ಳಿ ತಂದು ನೆಟ್ಟರು. ಅದು ಇಂದು 72 ಅಡಿ ಎತ್ತರಕ್ಕೆ ಬೆಳೆದು ಗಿನ್ನೀಸ್ ದಾಖಲೆ ಮಾಡಿದೆ. ಶಾಲಾ ಮಕ್ಕಳಿಗೆ, ದೊಡ್ಡವರಿಗೆ ಔಷಧೀಯ ಸಸ್ಯಗಳನ್ನು ಬೆಳೆಸುವ ಬಗ್ಗೆ ಮಾಹಿತಿ ನೀಡ್ತಿದ್ದಾರೆ. ಯಾರಾದ್ರೂ ಔಷಧೀಯ ಸಸ್ಯಗಳನ್ನ ಕೇಳಿದ್ರೆ ಅವರಿಗೆ ಉಚಿತವಾಗಿ ನೀಡ್ತಾರೆ.

    ಇವರು ತಮ್ಮ ಫ್ಲಾಟ್ ಮುಂದೆ ಹಾಳು ಬಿದ್ದ ಪಾಲಿಕೆ ಜಾಗದಲ್ಲಿ ಗಾರ್ಡನ್ ನಿರ್ಮಾಣ ಮಾಡಿದ್ದಾರೆ. ಪ್ರತಿ ಭಾನುವಾರ ಈ ಬಡಾವಣೆ ಜನರನ್ನೆಲ್ಲಾ ಸೇರಿಸಿಕೊಂಡು ಇಲ್ಲಿ ಸ್ವಚ್ಛ ಮಾಡ್ತಾರೆ. ಗಾರ್ಡನ್‍ನಲ್ಲಿ ಹಕ್ಕಿ ಪಕ್ಷಿಗಳಿಗೆ ಕೃತಕ ಗೂಡುಗಳನ್ನೂ ನಿರ್ಮಾಣ ಮಾಡಿದ್ದಾರೆ. ಈ ಸುಂದರ ಪರಿಸರದಲ್ಲಿ ಮಕ್ಕಳು ಆಟವಾಡ್ತಾರೆ, ಹಿರಿಯರು ವಾಕ್ ಮಾಡಿ ಖುಷಿ ಪಡ್ತಾರೆ.

    ಒಟ್ಟಿನಲ್ಲಿ ತಮಗೆ ಮಕ್ಕಳಿಲ್ಲ ಎಂಬ ಕೊರಗನ್ನು ಪಂಡಿತ ಸಾಹೇಬರು, ಈ ಔಷಧೀಯ ಸಸ್ಯಗಳನ್ನು ಬೆಳೆಸುವ ಮೂಲಕ ಮರೆಯುತ್ತಾರೆ.

    https://www.youtube.com/watch?v=IxnoLgTXOK8