Tag: ಪರಿಸರ ಸಂರಕ್ಷಣೆ

  • ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

    ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

    ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ ಉತ್ಪಾದನೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆರೆಗಳು ಅಳಿವಿನಂಚಿಗೆ ಸಾಗುತ್ತಿರುವುದು ವಿಷಾದನೀಯ: ಶಶಿಕಲಾ ಜೊಲ್ಲೆ

    ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ. ಜೀವ ವಾಯು ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಕಾಡನ್ನ ಉಳಿಸಿ ಬೆಳೆಸಬೇಕಾಗುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಪ್ರತಿಯೊಬ್ಬರು ಮರಗಳನ್ನ ನೆಟ್ಟು ಪರಿಸರವನ್ನ ರಕ್ಷಿಸಬೇಕು. ಪರಿಸರ ನಾಶದಿಂದ ಭೂಮಿ ವಿನಾಶದತ್ತ ತೆರಳುತ್ತಿದೆ. ಹೀಗಾಗಿ ಮರಗಳನ್ನ ಉಳಿಸಿ ಬೆಳೆಸುವ ಕಾರ್ಯ ನಮ್ಮದಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಹುಕ್ಕೇರಿ ತಹಶೀಲ್ದಾರ ಡಿ.ಎಂ.ಹೂಗಾರ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ, ಪಿ ಎಸ್ ಐ ಸಿದ್ದರಾಮಪ್ಪ ಉನ್ನದ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಟೊಮೆಟೊ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

  • ಮಗ್ಳ ಮದ್ವೆಗೆ ಅತಿಥಿಗಳಿಗೆ ಪರಿಸರವಾದಿಯಿಂದ 5,000ಕ್ಕೂ ಹೆಚ್ಚು ಸಸಿಗಳ ಉಡುಗೊರೆ

    ಮಗ್ಳ ಮದ್ವೆಗೆ ಅತಿಥಿಗಳಿಗೆ ಪರಿಸರವಾದಿಯಿಂದ 5,000ಕ್ಕೂ ಹೆಚ್ಚು ಸಸಿಗಳ ಉಡುಗೊರೆ

    ಚಾಮರಾಜನಗರ: ಸಾಮಾನ್ಯವಾಗಿ ಮದುವೆಯಲ್ಲಿ ಬಂದ ಅತಿಥಿಗಳಿಗೆ ತಾಂಬೂಲದ ಜೊತೆ ಉಡುಗೊರೆಗಳನ್ನು ಕೊಡುವುದು ವಾಡಿಕೆ. ಆದರೆ ಕೊಳ್ಳೇಗಾಲದಲ್ಲಿ ಮದುವೆಯಲ್ಲಿ ಬಂದ ಅತಿಥಿಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಗಿಡಗಳನ್ನು ಗಿಫ್ಟ್ ಆಗಿ ನೀಡುವ ಮೂಲಕ ಹಸಿರೇ ಉಸಿರು ಎನ್ನುವುದನ್ನು ಸಾಬೀತು ಮಾಡಿದ್ದಾರೆ.

    ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪರಿಸರವಾದಿ ಕೃಷ್ಣಮೂರ್ತಿ ಅವರು ಕಳೆದ ಒಂದು ದಶಕದಿಂದ ಪರಿಸರ ಸಂರಕ್ಷಣೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಮರಗಳ ಹನನ, ಅಕ್ರಮ ಮರಳು ಸಾಗಾಣಿಕೆ, ಪ್ರಾಣಿಗಳ ಬೇಟೆ, ಮರಗಳ್ಳತನ ವಿರುದ್ಧ ಹೋರಾಟ ನಡೆಸುತ್ತಿರುವ ಇವರು ತಮ್ಮ ಮಗಳ ಮದುವೆಯಲ್ಲೂ ಪರಿಸರ ಕಾಳಜಿ ಮೆರೆದಿದ್ದಾರೆ.

    ಕೃಷ್ಣಮೂರ್ತಿ ತಮ್ಮ ಮಗಳ ಮದುವೆಗೆ ಬಂದ ಅತಿಥಿಗಳಿಗೆ ಹಾಗು ಬಂಧು- ಬಾಂಧವರಿಗೆ ತಟ್ಟೆ, ಲೋಟ ಮತ್ತಿತರ ಉಡುಗೊರೆ ಬದಲಿಗೆ ಗಿಡಗಳನ್ನು ನೀಡಿದರೆ ಹೇಗೆ ಎಂದು ಚಿಂತಿಸಿ ಅದನ್ನು ಕಾರ್ಯರೂಪಕ್ಕೆ ತಂದಿದ್ದಾರೆ.

    ಕೊಳ್ಳೇಗಾಲದಲ್ಲಿ ನಡೆದ ತಮ್ಮ ಮಗಳು ಕಾವೇರಿಯ ಮದುವೆಗೆ ಬಂದ ಅತಿಥಿಗಳಿಗೆಲ್ಲಾ ಐದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೀಡುವ ಮೂಲಕ ತಮ್ಮ ಪರಿಸರ ಕಾಳಜಿ ಮೆರೆದಿದ್ದಾರೆ. ಮಾವು, ಬೇವು, ನೇರಳೆ, ಸೀಬೆ, ನಿಂಬೆ, ಸಪೋಟ, ಹೊಂಗೆ ಮತ್ತಿತರ ಜಾತಿಯ ಗಿಡಗಳನ್ನು ಅತಿಥಿಗಳಿಗೆ ಉಡುಗೊರೆಯಾಗಿ ನೀಡಲಾಯಿತು.

    ಕೃಷ್ಣಮೂರ್ತಿ ಅವರ ಈ ಕಾಳಜಿಗೆ ಅರಣ್ಯ ಇಲಾಖೆಯೂ ಕೈಜೋಡಿಸಿತ್ತು. ಜೊತೆಗೆ ಮದುವೆಯಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ರೋಲ್ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳಿಗೆ ಕಡಿವಾಣ ಹಾಕಲಾಗಿತ್ತು. ಈ ವಿವಾಹ ಮಹೋತ್ಸವಕ್ಕೆ ಬಂದ ಪ್ರತಿಯೊಬ್ಬರಲ್ಲೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಇದೊಂದು ವಿಭಿನ್ನ ಪ್ರಯತ್ನವಾಗಿತ್ತು.

  • ಪ್ಲಾಸ್ಟಿಕ್ ನಿರ್ಮೂಲನೆಗೆ ಜನಮನ್ನಣೆ- ವಿದೇಶಿ ಉಡುಪು ಧರಿಸೋದೇ ಇಲ್ಲ ಚಿತ್ರದರ್ಗದ ಎಚ್.ಕೆ ಸ್ವಾಮಿ

    ಪ್ಲಾಸ್ಟಿಕ್ ನಿರ್ಮೂಲನೆಗೆ ಜನಮನ್ನಣೆ- ವಿದೇಶಿ ಉಡುಪು ಧರಿಸೋದೇ ಇಲ್ಲ ಚಿತ್ರದರ್ಗದ ಎಚ್.ಕೆ ಸ್ವಾಮಿ

    ಚಿತ್ರದುರ್ಗ: ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ. ಇದು ಪುಸ್ತಕಕ್ಕೆ ಉಳಿದುಕೊಂಡುಬಿಟ್ಟಿದೆ. ಆದ್ರೆ, ಚಿತ್ರದುರ್ಗದ ಪಬ್ಲಿಕ್ ಹೀರೋ ಸ್ವಾಮಿ ಅವರು 10 ವರ್ಷಗಳಿಂದ ನಿರಂತರವಾಗಿ ಪರಿಸರ ರಕ್ಷಣೆ ಮಾಡೋದರ ಜೊತೆಗೆ ಜಾಗೃತಿ ಮೂಡಿಸ್ತಿದ್ದಾರೆ.

    ಚಿತ್ರದುರ್ಗದ ಎಚ್.ಎ.ಕೆ. ಸ್ವಾಮಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸತತ 10 ವರ್ಷಗಳಿಂದಲೂ ಪರಿಸರ ಜಾಗೃತಿ ಮೂಡಿಸ್ತಿದ್ದಾರೆ. ವರ್ಷದ 365 ದಿನವೂ ವಾಯುಮಾಲಿನ್ಯ, ಜಲಮಾಲಿನ್ಯ ಹಾಗು ಶಬ್ದಮಾಲಿನ್ಯ ಮಾಡದಂತೆ ಶಾಲಾ, ಕಾಲೇಜುಗಳ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪರಿಸರ ಹಾನಿಗೆ ಕಡಿವಾಣ ಹಾಕಲು ವಿವಿಧ ಪರ್ಯಾಯ ಆಚರಣೆಗಳನ್ನು ಮಾಡುವಂತೆ ಜನನಿಬಿಡ ಪ್ರದೇಶಗಳಲ್ಲಿ 1,200ಕ್ಕೂ ಅಧಿಕ ಜಾಗೃತಿ ಕಾರ್ಯಕ್ರಮ ಮಾಡಿದ್ದಾರೆ.

    ಕೆಮಿಕಲ್ ಮಿಶ್ರಿತ ಗಣಪತಿಗಳನ್ನು ವಿಸರ್ಜನೆ ಮಾಡದಂತೆ, ಪ್ಲಾಸ್ಟಿಕ್ ಬಳಸದಂತೆ ಕಾಳಜಿ ವಹಿಸ್ತಿದ್ದಾರೆ. ಪ್ಲಾಸ್ಟಿಕ್ ನಿರ್ಮೂಲನ ಆಂದೋಲನ ಅಪಾರ ಜನಮನ್ನಣೆ ಗಳಿಸಿದೆ. ಬರೀ ಹೇಳೋದಷ್ಟೇ ಅಲ್ಲ. ಇದನ್ನ ತಾವೂ ಪಾಲಿಸ್ತಿದ್ದಾರೆ. ಈಗಲೂ ಸೈಕಲ್ ಸವಾರಿ ಮಾಡುತ್ತಾರೆ. ಸ್ವದೇಶಿ ಉಡುಪುಗಳನ್ನೇ ಧರಿಸ್ತಾರೆ ಅಂತ ಸ್ಥಳೀಯ ನಾಗರಾಜ್ ಬೆದ್ರೆ ಹೇಳಿದ್ದಾರೆ.

    https://www.youtube.com/watch?v=QEI5E4CL0pY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv