Tag: ಪರೀಕ್ಷಾ ಕೇಂದ್ರ

  • ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ

    ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ

    ತಿರುವನಂತಪುರಂ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಮಹಿಳೆಯರ ಬ್ರಾಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಆಕ್ರೋಶಗೊಂಡ ತಂದೆ ಇದರ ವಿರುದ್ಧ ತನಿಖೆ ಮಾಡುವಂತೆ ಮನವಿ ಮಾಡಿರುವ ಸುದ್ದಿಯೊಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೆಡೆದಿದೆ.

    NEET ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದು, ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಬೊಮ್ಮಾಯಿ ಅಲ್ಲ, ಮೋದಿ ನಿತ್ಕೊಂಡ್ರು ನಾನು ಸ್ಪರ್ಧೆ ಮಾಡ್ತೀನಿ: ಮಲ್ಲಿಕಾರ್ಜುನ್

    EXAM

    ಈ ಹಿನ್ನೆಲೆ ಮಾನವ ಹಕ್ಕುಗಳ ಆಯೋಗವು ಕೊಲ್ಲಂ ಗ್ರಾಮಾಂತರ ಎಸ್‍ಪಿಗೆ ಈ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.

    ದೂರಿನಲ್ಲಿ ಏನಿದೆ?
    ಪ್ರಾಥಮಿಕ ತಪಾಸಣೆಯ ನಂತರ, ಲೋಹ ಶೋಧಕದಿಂದ ಮಹಿಳೆಯರ ಒಳಉಡುಪಿನ ಕೊಕ್ಕೆ ಪತ್ತೆಯಾಯಿತು. ಈ ವೇಳೆ ಸಿಬ್ಬಂದಿ ಅದನ್ನು ತೆಗೆದುಹಾಕಲು ಕೇಳಿದರು. ಇದೇ ರೀತಿ ಸುಮಾರು 90 ಪ್ರತಿಶತ ಮಹಿಳಾ ಅಭ್ಯರ್ಥಿಗಳು ತಮ್ಮ ಒಳಉಡುಪುಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಹಾಕಬೇಕಾಯಿತು. ಇದಾದ ಬಳಿಕ ಪರೀಕ್ಷೆಯನ್ನು ನೀಡುವಾಗ ಅಭ್ಯರ್ಥಿಗಳು ಮಾನಸಿಕವಾಗಿ ತೊಂದರೆಗೀಡಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‍ಟಿಎ) ಡ್ರೆಸ್ ಕೋಡ್‍ನಲ್ಲಿ ಒಳಉಡುಪುಗಳನ್ನು ತೆಗೆದುಹಾಕಲು ಸೂಚಿಸಿಲ್ಲ ಎಂದು ದೂರುದಾರರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • UGCET ಸಾಮಾನ್ಯ ಪ್ರವೇಶ EXAM – ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

    UGCET ಸಾಮಾನ್ಯ ಪ್ರವೇಶ EXAM – ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

    ಹುಬ್ಬಳ್ಳಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಯುಜಿಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜೂ.16, 17 ರಂದು ಹುಬ್ಬಳ್ಳಿಯ 10 ಹಾಗೂ ಧಾರವಾಡದ 16 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.

    ಜೂ.16ರಂದು ಬೆಳಗ್ಗೆ 10:30 ರಿಂದ 11:50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತ ಪರೀಕ್ಷೆಗಳು, ಜೂ.17ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30ರಿಂದ 3:50 ರವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿದೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಅರ್ಚಕರ ಶವ ಪತ್ತೆ, ವಿಗ್ರಹ ನಾಪತ್ತೆ 

    POLICE JEEP

    ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

    ಪರೀಕ್ಷಾ ಕೇಂದ್ರಗಳ ಸಮೀಪದ ಸ್ಕ್ಯಾನಿಂಗ್, ಜೆರಾಕ್ಸ್ ಮತ್ತು ಕಂಪ್ಯೂಟರ್ ಕೇಂದ್ರಗಳು ಪರೀಕ್ಷೆಯ ಸಮಯದಲ್ಲಿ ಕಾರ್ಯ ನಿರ್ವಹಿಸದಂತೆ ನಿರ್ಬಂಧಿಸಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಇದನ್ನೂ ಓದಿ:  ಮೆಟ್ರೋ ಟ್ರೈನ್‍ನಲ್ಲಿ ಬೈಸಿಕಲ್ ಕೊಂಡೊಯ್ಯಲು ಅವಕಾಶ 

    ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಕೈಗೊಳ್ಳುವಂತೆ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತ ಲಾಭೂರಾಮ್ ತಿಳಿಸಿದ್ದಾರೆ.

  • ಪರೀಕ್ಷಾ ಕೇಂದ್ರದ ಗೊಂದಲವೇ SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಕಾರಣ

    ಪರೀಕ್ಷಾ ಕೇಂದ್ರದ ಗೊಂದಲವೇ SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಕಾರಣ

    ಮೈಸೂರು: ಪರೀಕ್ಷಾ ಕೇಂದ್ರ ಅದಲು, ಬದಲು ಗೊಂದಲದಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

    ಅನುಶ್ರೀ ಮೃತ ವಿದ್ಯಾರ್ಥಿನಿ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮಾದಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಅನುಶ್ರೀ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಟಿ. ನರಸೀಪುರದ ವಿದ್ಯೋದಯ ಪಿಯು ಕಾಲೇಜಿಗೆ ತೆರಳಬೇಕಿತ್ತು. ಆದರೆ, ಗೊಂದಲದಿಂದ ಅನುಶ್ರೀ ಟಿ. ನರಸೀಪುರದ ಶಿವಾನಂದ ಶರ್ಮ ಇಂಗ್ಲಿಷ್ ಮಾಧ್ಯಮ ಶಾಲೆಯ ಕೇಂದ್ರಕ್ಕೆ ಹೋಗಿದ್ದಳು. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

    ಈ ವೇಳೆ ಈ ಕೇಂದ್ರದಲ್ಲಿ ಅನುಶ್ರೀ ಎಂಬ ಮತ್ತೊರ್ವ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಕುಳಿತಿದ್ದಳು. ಆಗ ವಿಚಾರಣೆ ನಡೆಸಿದಾಗ ಮೇಲ್ವಿಚಾರಕರು ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸೂಚಿಸಿದ್ದರು. ಈ ಗೊಂದಲದಲ್ಲಿ 20 ನಿಮಿಷ ತಡವಾಗಿ ಪರೀಕ್ಷೆ ಬರೆಯಲು ಆರಂಭಿಸಿದ್ದ ಅನುಶ್ರೀಗೆ ಒತ್ತಡದಿಂದ ಹೃದಯಾಘಾತವಾಗಿದೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ

  • ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

    ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್- 8 ಜನರು ಅರೆಸ್ಟ್

    ಜೈಪುರ: ಭಾನುವಾರ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ವೇಳೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಕೀ ಆನ್ಸರ್ ಹೇಳಿಕೊಟ್ಟ ಹಿನ್ನೆಲೆ ವಿದ್ಯಾರ್ಥಿನಿ ಸೇರಿ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

    ಈ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ರಿಚಾ ತೋಮರ್, ನೀಟ್ ಪರೀಕ್ಷೆ ಭಾನುವಾರ ನಡೆದಿದ್ದು, ನೀಟ್ ಪರೀಕ್ಷೆ ಪೇಪರ್ ಸೋರಿಕೆಯಾಗಿದೆ. ಈ ಹಿನ್ನೆಲೆ 18 ವರ್ಷದ ವಿದ್ಯಾರ್ಥಿನಿ ದಿನೇಶ್ವರಿ ಕುಮಾರಿ ಮತ್ತು ಪರೀಕ್ಷಾ ಕೇಂದ್ರ ಸಿಬ್ಬಂದಿ ರಾಮ್ ಸಿಂಗ್, ಪರೀಕ್ಷಾ ಕೊಠಡಿಯ ಸಿಬ್ಬಂದಿ, ಆಡಳಿತ ಘಟಕದ ಉಸ್ತುವಾರಿ ಮುಖೇಶ್, ದಿನೇಶ್ವರಿ ಚಿಕ್ಕಪ್ಪ ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಂತಾಮಣಿ ಬಳಿ ಭೀಕರ ಅಪಘಾತ – ಆಸ್ಪತ್ರೆಗೆ ಭೇಟಿ ನೀಡಿದ ಕೋಲಾರ ಎಸ್‍ಪಿ 

    ಪರೀಕ್ಷೆ ಪ್ರಾರಂಭವಾದ ಬಳಿಕ ಆರೋಪಿ ರಾಮ್ ಸಿಂಗ್ ಮತ್ತು ಮುಖೇಶ್ ಪರೀಕ್ಷೆ ಪತ್ರಿಕೆಯ ಫೋಟೋಗಳನ್ನು ಜೈಪುರ ಚಿತ್ರಕೂಟ್ ಪ್ರದೇಶದ ಅಪಾರ್ಟ್‍ಮೆಂಟ್‍ನಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಆ ವ್ಯಕ್ತಿಗಳು ಕೀ ಆನ್ಸರ್ ಅನ್ನು ಮುಖೇಶ್ ಅವರಿಗೆ ಕಳುಹಿಸಿದ್ದಾರೆ. ನಂತರ ರಾಮ್ ಸಿಂಗ್ ದಿನೇಶ್ವರಿ ಅವರು ಪ್ರೆಶ್ನೆಗಳಿಗೆ ಉತ್ತರ ಬರೆಯಲು ಸಹಾಯ ಮಾಡಿದ್ದಾರೆ. ದಿನೇಶ್ವರಿ ಚಿಕ್ಕಪ್ಪ ಪರೀಕ್ಷಾ ಕೇಂದ್ರದ ಹೊರಗೆ 10 ಲಕ್ಷ ರೂ. ಹಿಡಿದುಕೊಂಡು ಸಿಬ್ಬಂದಿಗೆ ಕೊಡಲು ಕಾಯುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ:  ಬೆಂಗಳೂರು ಹೋಟೆಲಿನಲ್ಲಿ ಅಗ್ನಿ ಅವಘಡಕ್ಕೆ ಬೊಲೇರೋ ವಾಹನ ಕಾರಣ?

    ಅದು ಅಲ್ಲದೇ ಇ-ಮಿತ್ರ ಕೇಂದ್ರದ ಮಾಲೀಕ ಅನಿಲ್ ಮತ್ತು ಕೋಚಿಂಗ್ ಸೆಂಟರ್ ಮಾಲೀಕ ಅಲ್ವಾರ್ ಅವರನ್ನು ಬಂಧಿಸಲಾಗಿದೆ. ಅವರು 30 ಲಕ್ಷಕ್ಕೆ ಈ ಡೀಲ್ ಮುಗಿಸಿ ನಂತರ ಸಿಕಾರ್ ನಲ್ಲಿ ಕೀ ಆನ್ಸರ್ ಗಳನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಮೂಲಕ ವಿದ್ಯಾರ್ಥಿನಿಗೆ ತಲುಪಿಸುತ್ತಿದ್ದರು ಎಂದು ತಿಳಿಸಿದರು. ಇದನ್ನೂ ಓದಿ:  ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್​ಗಳಿಂದ ಕರೆ

  • ಆಟೋ ಚಾಲಕನ ಎಡವಟ್ಟು- ಪರೀಕ್ಷಾ ಕೇಂದ್ರ ಸಿಗದೇ ವಿದ್ಯಾರ್ಥಿನಿಯರು ಕಣ್ಣೀರು

    ಆಟೋ ಚಾಲಕನ ಎಡವಟ್ಟು- ಪರೀಕ್ಷಾ ಕೇಂದ್ರ ಸಿಗದೇ ವಿದ್ಯಾರ್ಥಿನಿಯರು ಕಣ್ಣೀರು

    ಚಿತ್ರದುರ್ಗ: ಆಟೋ ಚಾಲಕನ ಎಡವಟ್ಟಿನಿಂದಾಗಿ ಪರೀಕ್ಷಾ ಕೇಂದ್ರ ಸಿಗದೇ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯರು ಕಣ್ಣೀರು ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

    ಇಂದಿನಿಂದ ಎಲ್‍ಎಲ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಬರೆಯಲು ಚಿತ್ರದುರ್ಗ ತಾಲೂಕಿನ ಆರು ಜನ ವಿದ್ಯಾರ್ಥಿನಿಯರು ಆಟೋದಲ್ಲಿ ತಮಟಕಲ್ಲು ಗ್ರಾಮದಿಂದ ಆಗಮಿಸಿದ್ದರು. ಆದರೆ ಆಟೋ ಚಾಲಕ ಸಂಪಿಗೆ ಸಿದ್ದೇಶ್ವರ ಶಾಲಾ ಪರೀಕ್ಷಾ ಕೇಂದ್ರ ಬದಲು ಸಂತ ಜೋಸೆಫ್ ಕೇಂದ್ರಕ್ಕೆ ಬಿಟ್ಟು ಹೋಗಿದ್ದಾನೆ.

    ಈ ಸಮಯದಲ್ಲಿ ಪರೀಕ್ಷೆ ತಡವಾಗಿದೆ ಎಂದು ಕಂಗಲಾದ ವಿದ್ಯಾರ್ಥಿನಿಯರು ಸಂತ ಜೋಸೆಫ್ ಪರೀಕ್ಷಾ ಕೇಂದ್ರದ ಬಳಿ ಕಣ್ಣೀರು ಹಾಕಿದ್ದಾರೆ. ನಂತರ ವಿದ್ಯಾರ್ಥಿನಿಯರನ್ನು ಸಮಾಧಾನ ಮಾಡಿದ ಪೊಲೀಸರು, ಇನ್ನೊಂದು ಆಟೋದ ವ್ಯವಸ್ಥೆ ಮಾಡಿ ಸಂಪಿಗೆ ಸಿದ್ದೇಶ್ವರ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ. ಜೊತೆಗೆ ಪರೀಕ್ಷೆಗೆ ತಡವಾಗಿಲ್ಲ ನೀವು ಸರಿಯಾದ ಸಮಯಕ್ಕೆ ಹೋಗುತ್ತೀರಾ ಧೈರ್ಯವಾಗಿರಿ ಎಂದು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಆತ್ಮಸ್ಥೆರ್ಯ ತುಂಬಿ ಕಳುಹಿಸಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕಂಟೈನ್ಮೆಂಟ್ ಝೋನ್‍ನಿಂದ ಪರೀಕ್ಷಾ ಕೇಂದ್ರ ಶಿಫ್ಟ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕಂಟೈನ್ಮೆಂಟ್ ಝೋನ್‍ನಿಂದ ಪರೀಕ್ಷಾ ಕೇಂದ್ರ ಶಿಫ್ಟ್

    ಮೈಸೂರು: ಕಂಟೈನ್ಮೆಂಟ್ ಝೋನ್‍ನಲ್ಲಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರವನ್ನು ಬೇರೆ ಕಡೆಗೆ ಸ್ಥಳಾಂತರಗೊಳಿಸಿ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

    ನಗರದ ಕಂಟೈನ್ಮೆಂಟ್ ಝೋನ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ.

    ಮೈಸೂರಿನ ದೇವರಾಜ ಮೊಹಲ್ಲಾದ ಕೃಷ್ಣವಿಲಾಸ ರಸ್ತೆ ಎರಡು ದಿನಗಳ ಹಿಂದೆಯಷ್ಟೇ ಸೀಲ್‍ಡೌನ್ ಆಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲೇ ಅವಿಲಾ ಕಾನ್ವೆಂಟ್ ಇದ್ದು, ಅಲ್ಲಿಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸಾರ್ವಜನಿಕ ಮುಂದಾಗಿತ್ತು.

    ಈ ಬಗ್ಗೆ ಸ್ಪಷ್ಟೀಕರಣ ರೂಪದ ಕಥೆ ಹೇಳಿದ್ದ ಡಿಡಿಪಿಐ ಪಾಂಡುರಂಗ ಅವರು, “ನಾವು ಪರೀಕ್ಷಾ ಕೇಂದ್ರ ಸ್ಥಳಾಂತರಕ್ಕೆ ಸಿದ್ಧರಿದ್ದೇವೆ. ಈ ಬಗ್ಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರ ಅಭಿಪ್ರಾಯ ಸಂಗ್ರಹಿಸಿದ್ವಿ. ಆದರೆ ಅವರು ಅವಿಲಾ ಕಾನ್ವೆಂಟ್‍ನಲ್ಲೇ ಪರೀಕ್ಷೆ ನಡೆಸಿ ಎನ್ನುತ್ತಿದ್ದಾರೆ. ಆದ್ದರಿಂದ ಅವಿಲಾ ಕಾನ್ವೆಂಟ್‍ನಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಸದ್ಯ ಅವಿಲಾ ಕಾನ್ವೆಂಟ್ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆತಂಕ ಕಡಿಮೆಯಾಗಿದೆ.

    ಜಿಲ್ಲೆಯಲ್ಲಿ 39,822 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320  ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್‌ ಪರೀಕ್ಷಾ  ಕೇಂದ್ರ ತೆರೆಯಲಾಗಿದೆ.

  • ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

    ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ:  ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

    ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.

    ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೂ ಹಳೆಯ ಪರೀಕ್ಷಾ ನೋಂದಣಿ ಸಂಖ್ಯೆ ಇರಲಿದೆ. ಮೊದಲಿಗೆ ತಾವು ಓದಿದ ಶಾಲಾ ಮುಖ್ಯ ಶಿಕ್ಷಕರ ಬಳಿ ತೆರಳಿ ಕೇಂದ್ರ ಬದಲಾವಣೆ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಮುಖ್ಯಸ್ಥರು ಬದಲಾವಣೆ ಮಾಡಿದ ಕೇಂದ್ರದ ಮಾಹಿತಿಯನ್ನ ಎಸ್‍ಎಸ್‍ಎಲ್‍ಸಿ ಬೋರ್ಡಿಗೆ ಮಾಹಿತಿ ಕೊಡಬೇಕಾಗುತ್ತದೆ.

    ಶಿಕ್ಷಣ ಇಲಾಖೆ ಮಾರ್ಗಸೂಚಿ
    * ಈಗ ವಿದ್ಯಾರ್ಥಿಗಳು ಇರುವ ತಾಲೂಕು ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬಹುದು
    * ಒಂದು ಬಾರಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂದರೆ ಮತ್ತೆ ಬದಲಾವಣೆ ಅವಕಾಶ ಇಲ್ಲ
    * ಹೊಸ ಕೇಂದ್ರ ಬದಲಾವಣೆ ನಂತರ ಹಳೆ ಕೇಂದ್ರದಲ್ಲಿ ಬರೆಯಲು ಅವಕಾಶ ಇರೋದಿಲ್ಲ
    * ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್‌ನಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ.
    * ಕೇಂದ್ರ ಮಾತ್ರ ಬದಲಾವಣೆ ಮಾಡಿಕೊಳ್ಳಬಹುದು
    * ಕೇಂದ್ರ ಬದಲಾವಣೆ ಯಾವುದೇ ಶುಲ್ಕ ಇರೋದಿಲ್ಲ
    * ಕೇಂದ್ರ ಬದಲಾವಣೆ ಬಳಿಕ ಪ್ರವೇಶ ಪತ್ರ ಡೌನ್‍ಲೋಡ್‍ಗೆ ಅವಕಾಶ
    * ಶಾಲಾ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ತಾಲೂಕಿನ ಬಿಇಓಗಳ ಮೂಲಕ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.

  • ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

    ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

    – ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

    ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು.

    ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.

    ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಹ ಆಗಿದ್ದಾರೆ. 06 ಸಕ್ರಿಯ ಪ್ರಕರಣಗಳಿದ್ದು ಅವರಲ್ಲಿ ಇಂದು ಸಹ ಇಬ್ಬರು ಡಿಸ್ಚಾರ್ಜ್ ಆಗಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇವಲ 4 ಆ್ಯಕ್ಟೀವ್ ಪ್ರಕರಣಗಳಿರಲಿವೆ ಅಂತ ಸಚಿವ ಸುಧಾಕರ್ ಮಾಹಿತಿ ನೀಡಿದರು.

    ಕೊರೊನಾ ಪರೀಕ್ಷೆಗಳನ್ನ ಮಾಡಿರುವುದರಲ್ಲಿ ಇಡೀ ದೇಶದಲ್ಲಿ ಚಿಕ್ಕಬಳ್ಳಾಪುರ ನಂಬರ್ 1 ಮೊದಲ ಸ್ಥಾನದಲ್ಲಿದೆ. ಕಾರಣ ಜಿಲ್ಲೆಯಲ್ಲಿ ಇದುವರೆಗೂ 6,239 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರಾಸರಿ ಆಧಾರದ ಮೇರೆಗೆ 243 ಮಾದರಿ ಪರೀಕ್ಷೆಗಳಿಗೆ ಒಬ್ಬ ಸೋಂಕಿತರಾಗಿದ್ದಾರೆ. ಹೀಗಾಗಿ ಅತಿ ಹೆಚ್ಚಿನ ಟೆಸ್ಟ್ ಗಳನ್ನ ಮಾಡುವ ಮೂಲಕ ದೇಶದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಿದೆ ಎಂದರು.

    ಈ ಕಷ್ಟಕಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ಅರ್ಥಿಕವಾಗಿ ಪುನಶ್ಚೇತನವಾಗಬೇಕು ಅಂತ ಸರ್ಕಾರ ಹಲವು ಪ್ಯಾಕೇಜ್ ಗಳನ್ನ ಘೋಷಣೆ ಮಾಡಿದೆ. ಇದರ ಜೊತೆ ಜೊತೆ ಎಲ್ಲರ ಜೀವವನ್ನು ಉಳಿಸುವ ಕೆಲಸವನ್ನು ಹೆಲ್ತ್ ವಾರಿಯರ್ಸ್ ಹಾಗೂ ಆಶಾಕಾರ್ಯಕರ್ತೆಯರು, ವೈದ್ಯರು, ಅನೇಕ ಇಲಾಖೆಯ ಆಧಿಕಾರಿಗಳು ಕೊರೊನಾ ನಿಗ್ರಹ ಮಾಡಲು ಭಾಗಿಯಾಗಿದ್ದು ಅವರಿಗೆಲ್ಲಾ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರು.

    ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ಸರ್ಕಾರ ಸ್ಪಂದಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ ರೈತನಿಗೆ 5,000 ಪ್ರೋತ್ಸಾಹ ಧನ. ಆಶಾಕಾಯಕರ್ತೆಯರಿಗೆ 3,000 ಪ್ರೋತ್ಸಾಹ ಧನ ನೀಡಲಾಗುವುದು. ಕೊರೊನಾ ವಾರಿಯರ್ಸ್ ಗೆ ಆರೋಗ್ಯ ವಿಮೆ ಮಾಡಿಸಲಾಗಿದೆ. ಕೊರೊನಾ ಸೋಂಕಿತರು ಹೆಚ್ಚಾಗುತ್ತಾರೆ ಅದಕ್ಕಾಗಿ ಆತಂಕ ಬೇಡ. ಇವತ್ತು ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ವಿದೇಶದಿಂದ ಕನ್ನಡಿಗರು ಆಗಮಿಸುತ್ತಿದ್ದಾರೆ. ಇತರೆ ರಾಜ್ಯಗಳಿಂದಲೂ ನಮ್ಮ ರಾಜ್ಯದವರು ಆಗಮಿಸುತ್ತಿದ್ದಾರೆ. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ಪ್ರಕರಣಗಳ ವರದಿ ಹೆಚ್ಚಾಗುತ್ತಿದೆ. ಉದಾಹರಣೆಗೆ ಹೇಳೋದಾದರೆ ನಿನ್ನೆ ದುಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಅತೀ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಸಮುದಾಯಕ್ಕೆ ಹರಡದಂತೆ ಜನ ಕೂಡ ಎಚ್ಚರ ವಹಿಸಬೇಕು ಎಂದರು.

    ವಲಸೆ ಕಾರ್ಮಿಕರು ವಿಚಾರದಲ್ಲಿ ಕ್ರಮ ಕೈಗೊಳುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೇ ಒಮ್ಮೆಲೆ ಲಕ್ಷಾಂತರ ಮಂದಿ ಕಾರ್ಮಿಕರನ್ನು ಕಳುಹಿಸಬೇಕಾದರೆ ಸಮಸ್ಯೆ ಆಗುತ್ತದೆ. ಹೀಗಾಗಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವುದು. ನಮ್ಮ ಜವಾಬ್ದಾರಿ, ಹಂತ ಹಂತವಾಗಿ ನಾವು ಕಳುಹಿಸಿಕೊಡುತ್ತೇವೆ. ಅಲ್ಲಿಯವರೆಗೂ ವಲಸೆ ಕಾರ್ಮಿಕರು ಆತುರ ಪಡಬೇಡಿ. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನ ಕರೆತರುವುದು ನಮ್ಮ ಕರ್ತವ್ಯ ನಾವು ಅದನ್ನ ಮಾಡ್ತೇವೆ ಎಂದರು.

  • ಗುಮಾಸ್ತನ ಮನೆಯೇ ಪರೀಕ್ಷಾ ಕೇಂದ್ರ – ಮಕ್ಕಳ ಜೊತೆ ದುಡ್ಡು ನೀಡಿ ಕುಳಿತ್ತಿದ್ದವರು ಅರೆಸ್ಟ್

    ಗುಮಾಸ್ತನ ಮನೆಯೇ ಪರೀಕ್ಷಾ ಕೇಂದ್ರ – ಮಕ್ಕಳ ಜೊತೆ ದುಡ್ಡು ನೀಡಿ ಕುಳಿತ್ತಿದ್ದವರು ಅರೆಸ್ಟ್

    ಲಕ್ನೋ: ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆಯಲ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.

    ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆ ಕಾಲೇಜಿನ ಪಕ್ಕದಲ್ಲೇ ಇದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆಯಿಸಿ ಪರೀಕ್ಷೆ ಮಾಡಿದ್ದಾನೆ. ಜೊತೆಗೆ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಬೇರೆಯವರ ಕೈಯಲ್ಲಿ ದುಡ್ಡು ಕೊಟ್ಟು ಪರೀಕ್ಷೆ ಬರೆಸುತ್ತಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗುಮಾಸ್ತನ ಮನೆಯ ಮೇಲೆ ದಾಳಿಮಾಡಿದ್ದಾರೆ. ದಾಳಿ ವೇಳೆ ಗುಮಾಸ್ತ ಎಸ್ಕೇಪ್ ಆಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದಾಗ ನಾವು ಇಲ್ಲಿ ಪರೀಕ್ಷೆ ಬರೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳ ಆರಂಭಗೊಂಡಿದ್ದು, ಸುಮಾರು 56 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಿನಿಂದ ನಡೆಸಬೇಕು ಎಂದು ಉತ್ತರ ಪ್ರದೇಶದ ಶಿಕ್ಷಣ ಇಲಾಖೆ ಬಹಳ ಪ್ರಯತ್ನ ಮಾಡುತ್ತಿದೆ. ಈ ನಡುವೆ ಈ ರೀತಿಯ ಅವ್ಯವಹಾರ ನಡೆಯುತ್ತಿರುವುದು ಕಂಡು ಶಿಕ್ಷಣ ಇಲಾಖೆ ತಲೆಕೆಡಿಸಿಕೊಂಡಿದೆ.

    ಕಳೆದ ವಾರವಷ್ಟೇ ಹೇಗೆ ಮೋಸ ಮಾಡಿ ಪರೀಕ್ಷೆ ಬರೆಯಬೇಕು ಮತ್ತು ನೀವು ನೀವೇ ಮಾತನಾಡಿಕೊಂಡು ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಲಾಗಿತ್ತು.

  • ಪರೀಕ್ಷಾ ಕೇಂದ್ರ ರಣಾಂಗಣ ಅಲ್ಲ ಕ್ರೀಡಾಂಗಣ: ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿಮಾತು

    ಪರೀಕ್ಷಾ ಕೇಂದ್ರ ರಣಾಂಗಣ ಅಲ್ಲ ಕ್ರೀಡಾಂಗಣ: ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿಮಾತು

    ಕಾರವಾರ: ಮಕ್ಕಳು ಪರೀಕ್ಷಾ ಕೇಂದ್ರವನ್ನು ರಣಾಂಗಣ ಎಂದು ಭಯಪಡದೇ ಕ್ರೀಡಾಂಗಣ ಎಂದು ತಿಳಿಯಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

    ಹೊನ್ನಾವರ ನ್ಯೂ ಇಂಗ್ಲಿಷ್ ಶಾಲೆಗೆ ಶನಿವಾರ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆ ಇನ್ನು ಕೇವಲ 92 ದಿನಗಳಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ರಣಾಂಗಣ ಎಂದು ಭಾವಿಸದೆ ಕ್ರೀಡಾಂಗಣ ಎಂದು ಪರಿಗಣಿಸಬೇಕು. ಪರೀಕ್ಷೆಗೆ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

    ಪ್ರಸಕ್ತ ವರ್ಷ ಪೂರ್ವಸಿದ್ಧತಾ ಪರೀಕ್ಷೆಯನ್ನು ನಡೆಸುವ ಕೇಂದ್ರದಲ್ಲೇ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ವಾತಾವರಣ ಪರಿಚಿತವಾಗಿರುವುದರಿಂದ ಧೈರ್ಯವಾಗಿ ಎದುರಿಸಲು ಇದು ಸಹಕಾರಿಯಾಗಲಿದೆ. ನೆರೆ ರಾಜ್ಯಗಳಲ್ಲಿ ಇರುವಂತೆ ನಮ್ಮ ರಾಜ್ಯದಲ್ಲೂ ವಿದ್ಯಾರ್ಥಿಗಳ ಪೋಷಕರು ಪರೀಕ್ಷೆ ಮುಗಿಯುವವರೆಗೂ ಓದುವ ಸಮಯದಲ್ಲಿ ಟಿವಿ ನೋಡುವುದನ್ನು ನಿಲ್ಲಿಸುವ ಸಂಕಲ್ಪ ಮಾಡಬೇಕು ಎಂದರು.

    ವಿದ್ಯಾರ್ಥಿಗಳು ಸಹ ಪರೀಕ್ಷೆ ಮುಗಿಯುವವರೆಗೂ ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಅವರ ಸಲಹೆ ನೀಡಿದರು. ಸಭೆಯಲ್ಲಿ ಶಾಸಕ ದಿನಕರ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.