Tag: ಪರೀಕ್ಷೆ ಫಲಿತಾಂಶ

  • ಕಿರಾಣಿ ಅಂಗಡಿ ನಡೆಸುತ್ತಿದ್ದ ಮಹಾಂತೇಶ್ ರಾಯರ್ ಪುತ್ರಿ ಬೆಳಗಾವಿಗೆ ಟಾಪ್

    ಕಿರಾಣಿ ಅಂಗಡಿ ನಡೆಸುತ್ತಿದ್ದ ಮಹಾಂತೇಶ್ ರಾಯರ್ ಪುತ್ರಿ ಬೆಳಗಾವಿಗೆ ಟಾಪ್

    ಬೆಳಗಾವಿ: ಕಿರಾಣಿ ಅಂಗಡಿಯಿಂದ ಜೀವನ ನಡೆಸುತ್ತಿದ್ದ ಮಹಾಂತೇಶ್ ರಾಯರ್ ಅವರ ಪುತ್ರಿಯೊಬ್ಬಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಪ್ರತಿಶತ ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

    ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ನಿವಾಸಿಗಳಾದ ಮಹಾಂತೇಶ ರಾಯರ್ ಹಾಗೂ ಭಾರತೀ ರಾಯರ್ ಅವರ ಪುತ್ರಿ ಸಹನಾ ಮಹಾಂತೇಶ ರಾಯರ್ 10ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಪೋಷಕರು ಹಾಗೂ ಶಾಲೆಯ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಔಟ್‌ ಆಫ್‌ ಔಟ್‌ – ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ

    ಸತ್ತಿಗೇರಿ ಗ್ರಾಮದ ಸಹನಾ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಈಕೆ ಮುಂದೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಬೇಕು ಎಂಬ ಮಹದಾಸೆ ಇಟ್ಟುಕೊಂಡಿದ್ದಾರೆ. ಸಹನಾ ತಂದೆ ಜೀವನ ನಿರ್ವಹಣೆಗಾಗಿ ಕಿರಾಣಿ ಅಂಗಡಿ ನಡೆಸಿ ಕುಟುಂಬ ಸಾಗಿಸುತ್ತಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಸಹನಾ, ಕೋವಿಡ್-19 ಸಂಕಷ್ಟದಿಂದ ತರಗತಿ ಸಮರ್ಪಕವಾಗಿ ನಡೆಯಲಿಲ್ಲ. ಆನ್‌ಲೈನ್ ತರಗತಿಗೆ ಹಾಜರಾಗಲು ನೆಟ್‌ವರ್ಕ್ ಸಮಸ್ಯೆಯೂ ಕಾಡುತಲಿತ್ತು. ಆದರೂ, ಎದೆಗುಂದದೆ ಆತ್ಮವಿಶ್ವಾಸದಿಂದ ಓದು ಮುಂದುವರಿಸಿದೆ. ನನ್ನ ಶಿಕ್ಷಕರು ಮತ್ತು ಪೋಷಕರು ಸಾಕಷ್ಟು ಪ್ರೋತ್ಸಾಹ ನೀಡಿದರು. ಅವರ ನಿರೀಕ್ಷೆಯಂತೆ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದಿದ್ದಾರೆ.

    9ನೇ ತರಗತಿ ವಾರ್ಷಿಕ ಪರೀಕ್ಷೆ ಮುಗಿಯುತ್ತಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿದೆ. ಶಿಕ್ಷಕರ ಪಾಠವನ್ನು ಏಕಾಗ್ರತೆಯಿಂದ ಆಲಿಸುತ್ತಿದ್ದೆ. ನಿತ್ಯ ಮನೆಗೆಲಸ ಮಾಡುತ್ತಲೇ 8 ತಾಸು ಓದುತ್ತಿದ್ದೆ. ಸತತ ಪರಿಶ್ರಮಕ್ಕೆ ಈಗ ಫಲ ಸಿಕ್ಕಿದೆ ಎಂದು ಸಂತಸ ಹಚ್ಚಿಕೊಂಡಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿಯಲ್ಲಿ ಔಟ್ ಆಫ್ ಔಟ್ ತೆಗೆದ ಬೆಂಗಳೂರಿನ ವಿದ್ಯಾರ್ಥಿಗಳು

    ಬಾಗಲಕೋಟೆಗೆ ಇಂದಿರಾ ಟಾಪ್: ಬಾಗಲಕೋಟೆ ತಾಲೂಕಿನ ಚಿಕ್ಕಸಂಶಿ ಗ್ರಾಮದ ವಿದ್ಯಾರ್ಥಿನಿ ಇಂದಿರಾ ನ್ಯಾಮಗೌಡರ್ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಮಂಗಳೂರು ಜಿಲ್ಲೆಯ ಮೂಡಬಿದರೆ ಆಳ್ವಾಸ್‌ನ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿ ಈ ಸಾಧನೆ ಮಾಡಿದ್ದು, ಪೋಷಕರು ಹಾಗೂ ಶಾಲಾ ಶಿಕ್ಷಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

  • ಇಂದು SSLC ಫಲಿತಾಂಶ – ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಗುಡ್‌ನ್ಯೂಸ್!

    ಇಂದು SSLC ಫಲಿತಾಂಶ – ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಗುಡ್‌ನ್ಯೂಸ್!

    ಬೆಂಗಳೂರು: 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ.

    ಇಂದು ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in  ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದನ್ನೂ ಓದಿ: ನಾಗರಹಾವಿನಿಂದ ಯಜಮಾನನ ಪ್ರಾಣ ಉಳಿಸಿ ಜೀವ ಬಿಟ್ಟ ಮುದ್ದಿನ ಶ್ವಾನ

    SSLC

    ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಶುಭ ಹಾರೈಸಿದ್ದಾರೆ.

    2 ವರ್ಷಗಳ ಬಳಿಕ ನಡೆದ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಫೇಲ್ ಆಗುವ ವಿದ್ಯಾರ್ಥಿಗಳಿಗೂ ಸಂಜೀವಿನಿ ನೀಡಲು ಮುಂದಾಗಿದೆ. ಒಂದೆರಡು ಅಂಕಗಳಿಂದ ಫೇಲ್ ಆಗಬಹುದಾದ ವಿದ್ಯಾರ್ಥಿಗಳಿಗೂ ಪಾಸ್ ಅಂಕ ನೀಡಿ ಉತ್ತೀರ್ಣಗೊಳಿಸಲು ನಿರ್ಧರಿಸಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ರೋಗಿಯ ಕಣ್ಣಿಗೆ ಕಚ್ಚಿದ ಇಲಿ

    ಸಾಂದರ್ಭಿಕ ಚಿತ್ರ

    ಒಂದೆರಡು ವಿಷಯಗಳಲ್ಲಿ 1 ಅಥವಾ 2 ಅಂಕಗಳಿಂದ ಫೇಲ್ ಆಗುವ ಹಂತದಲ್ಲಿದ್ದರೆ ಅಂತಹವರಿಗೆ ಗ್ರೇಸ್ ಅಂಕ ನೀಡಿ ಪಾಸ್ ಮಾಡಲು ಮುಂದಾಗಿದೆ. ಅದಕ್ಕೂ ಮುನ್ನ ಶಿಕ್ಷಣ ಇಲಾಖೆಯ ಮಾನದಂಡಗಳನ್ನು ಅನ್ವಯಿಸಬೇಕಾಗುತ್ತದೆ.

    ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

    ಸಾಂದರ್ಭಿಕ ಚಿತ್ರ

    ಮಾನದಂಡಗಳೇನು?
    * ಎಲ್ಲ ವಿದ್ಯಾರ್ಥಿಗಳಿಗೂ ಗ್ರೇಸ್ ಅಂಕ ನೀಡುವ ನಿಯಮ ಅನ್ವಯ ಆಗುವುದಿಲ್ಲ.
    * ವಿದ್ಯಾರ್ಥಿಯು 175 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರಬೇಕು.
    * ಭಾಷಾ ವಿಷಯಗಳಲ್ಲಿ ಕಡ್ಡಾಯವಾಗಿ ಶೇ.35 ಮತ್ತು ಕೋರ್ ಸಬ್ಜೆಕ್ಟ್ ನಲ್ಲಿ ಶೇ.30 ಅಂಕ ಕಡ್ಡಾಯವಾಗಿ ಪಡೆದಿರಬೇಕು.
    * 6 ವಿಷಯಗಳ ಪೈಕಿ 5 ವಿಷಯಗಳಲ್ಲಿ ಉತ್ತಮ ಅಂಕ ಪಡೆದಿರಬೇಕು. ಒಂದು ವಿಷಯದಲ್ಲಿ ಮಾತ್ರ ಕಡಿಮೆ ಅಂಕ ಇರಬೇಕು.
    * ಒಂದು ವಿಷಯದಲ್ಲೂ ಹೆಚ್ಚು ಅಂಕ ಕೊಡಲು ಅವಕಾಶ ಇಲ್ಲ. ಪಾಸ್ ಮಾಡೋಕೆ 2 ರಿಂದ 5 ಅಂಕದ ಒಳಗೆ ಇದ್ದರೆ ಮಾತ್ರ ಈ ಅಂಕ ನೀಡಲು ಸಾಧ್ಯ.
    * ಗರಿಷ್ಠ 3 ವಿಷಯಗಳಿಗೆ ಹೀಗೆ ಅಂಕ ನೀಡಲು ಅವಕಾಶ ಇದೆ.
    * ವಿದ್ಯಾರ್ಥಿಗಳು ಇತರೇ ವಿಷಯಗಳ ಅಂಕ ನೋಡಿ, ಹೆಚ್ಚುವರಿ ಅಂಕಗಳನ್ನು ನೀಡಲಾಗುತ್ತದೆ.

  • ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ – ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ

    ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ – ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ

    ರಾಂಚಿ: ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್ ಘೋಷಿಸಿದ 10ನೇ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮರು ಪರಿಶೀಲನೆ ನಡೆಸುವಂತರೆ ಒತ್ತಾಯಿಸಿದ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ನಡೆಸಿದ್ದ ಲಾಠಿ ಚಾರ್ಜ್ ಕುರಿತಂತೆ ತನಿಖೆ ನಡೆಸಿ ಎಂದು ಶಿಕ್ಷಣ ಸಚಿವ ಜಾಗರಣಾಥ್ ಮಹತೋ ಆದೇಶಿಸಿದ್ದಾರೆ.

    ಆಗಸ್ಟ್ 6ರಂದು ರಾಜ್ಯ ಸಚಿವ ಬನ್ನ ಗುಪ್ತಾ ಅವರ ಎದುರಿಗೆ ಪ್ರತಿಭಟನೆ ನಡೆಸಲು ಧನ್ಭಾದ್ ಕಲೆಕ್ಟರೇಟ್‍ನಲ್ಲಿ ವಿದ್ಯಾರ್ಥಿನಿಯರು ಜಮಾಯಿಸಿದ್ದರು. ಈ ವೇಳೆ ಗುಪ್ತಾರವರು ಸಭೆ ನಡೆಸುತ್ತಿದ್ದಾಗ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು ಗೇಟ್ ಬಳಿ ಬಲವಂತವಾಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಲು ಮುಂದಾಗಿದ್ದಾರೆ.

    ಈ ಬಗ್ಗೆ ಜಾಗರಣಾಥ್ ಮಹತೋ, ಮರು ಮೌಲ್ಯಮಾಪನ ಪರಿಶೀಲಿಸಬಹುದು. ಪರೀಕ್ಷೆಯಲ್ಲಿ ವಿಫಲವಾದ ಯಾವುದೇ ವಿದ್ಯಾರ್ಥಿಗಳು, ಮತ್ತೊಮ್ಮೆ ಪರೀಕ್ಷೆಯನ್ನು ಸ್ವೀಕರಿಸಬಹುದು. ಸದ್ಯ ಲಾಠಿ ಚಾರ್ಚ್ ಕುರಿತಂತೆ ತನಿಖೆ ನಡೆಸಲು ಧನ್ಬಾದ್ ಡಿಸಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮತ್ತೊಂದೆಡೆ ಬಿಜೆಪಿ ಜಾರ್ಖಂಡ್ ಟ್ವಿಟ್ಟರ್‍ನಲ್ಲಿ, ಜಾರ್ಖಂಡ್‍ನ ದಬ್ಬಾಳಿಕೆ ಸರ್ಕಾರ ಜನರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ನಿನ್ನೆ ಧನ್ಭಾದ್‍ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ನಾಚಿಕೆಗೇಡಿನ ಕೆಲಸವಾಗಿದೆ. ಜನರು ಶೀಘ್ರವೇ ಅವರಿಗೆ ಉತ್ತರಿಸಲಿದ್ದಾರೆ ಟ್ವೀಟ್ ಮಾಡಿದೆ. ಇದನ್ನೂ ಓದಿ:ನೀರಜ್ ಚೋಪ್ರಾಗೆ ಸಿನಿಮಾ ಆಫರ್ ನೀಡಿದ ಅಕ್ಷಯ್ ಕುಮಾರ್