Tag: ಪರೇಡ್

  • 100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್- ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್- ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    ನೆಲಮಂಗಲ: ಗ್ರಾಮ ಪಂಚಾಯ್ತಿ ಚುನಾವಣೆ ಮತ್ತು ಮುಂದೆ ಬರುವ ಹಬ್ಬ, ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನೆಲಮಂಗಲ ಉಪವಿಭಾಗ ಪೊಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಉಪವಿಭಾಗದಲ್ಲಿ, ರಾತ್ರೋರಾತ್ರಿ ರೌಡಿಗಳಿಗೆ ಶಾಕ್ ನೀಡಿದ ಪೊಲೀಸರು, 100ಕ್ಕೂ ರೌಡಿಗಳ ಪರೇಡ್ ನಡೆಸಿದ್ದಾರೆ. ನೆಲಮಂಗಲ ಉಪವಿಭಾಗದ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ರೌಡಿಗಳ ಬಳಿಯಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

    100ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ಪೊಲೀಸ್ ಸಿಬ್ಬಂದಿ ಹಾಗೂ ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದೆ. ನಂತರ ಇಂದು ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಪರೇಡ್ ನಡೆಸಿದರು. ಇತ್ತಿಚೇಗೆ ರಿಯಲ್ ಎಸ್ಟೇಟ್, ಲ್ಯಾಂಡ್ ಮಾಫಿಯಾ ದಲ್ಲಿ ಸ್ಥಳೀಯರ ರೌಡಿಗಳ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆ ನೆಲಮಂಗಲ ಡಿವೈಎಸ್‍ಪಿ ಮೋಹನ್, ಸರ್ಕಲ್ ಇನ್ಸ್ ಪೆಕ್ಟರ್ ಶಿವಣ್ಣ ಹಾಗೂ ಮಾದನಾಯಕನಹಳ್ಳಿ ಇನ್ಸ್ ಪೆಕ್ಟರ್ ಸತ್ಯನಾರಯಣ ನೇತೃತ್ವದಲ್ಲಿ ದಾಳಿ ನಡೆಸಿ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಇತ್ತೀಚೆಗೆ ನೆಲಮಂಗಲದಲ್ಲಿ ಯುವಕನ ಕೊಲೆ ಕೇಸ್ ನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ರೌಡಿ ಚಟುವಟಿಕೆಗೆ ಖಡಕ್ ಆಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

  • ಪರೇಡ್ ನಡೆಸುತ್ತಿದ್ದ ವೇಳೆ ಉಗ್ರರಿಂದ ಗುಂಡಿನ ದಾಳಿ

    ಪರೇಡ್ ನಡೆಸುತ್ತಿದ್ದ ವೇಳೆ ಉಗ್ರರಿಂದ ಗುಂಡಿನ ದಾಳಿ

    – ಸಿಆರ್‌ಪಿಎಫ್‌ , ಪೊಲೀಸರಿಂದ ಜಂಟಿ ಪರೇಡ್
    – ಗುಂಡಿನ ದಾಳಿ ನಡೆಸಿ ಪರಾರಿಯಾದ ಉಗ್ರರು

    ಶ್ರೀನಗರ: ಸಿಆರ್‌ಪಿಎಫ್‌  ಯೋಧರು ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಪರೇಡ್ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿರುವ ಘಟನೆ ನಡೆದಿದೆ.

    ಜಮ್ಮು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿ ಕಡೆ ಗುಂಡಿನ ದಾಳಿ ನಡೆಸಿ, ಭಯೋತ್ಪಾದಕರು ಪರಾರಿಯಾಗಿದ್ದಾರೆ. ಇದೀಗ ಪೊಲೀಸರು ಹಾಗೂ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರೆದಿದ್ದು, ಭಯೋತ್ಪಾದಕರಿಗಾಗಿ ಹುಡುಕುವ ಕಾರ್ಯಾಚರಣೆ ನಡೆಸುತ್ತಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

    ಇತ್ತೀಚೆಗೆ ಕುಲ್ಗಮ್ ಜಿಲ್ಲೆಯಲ್ಲಿ ಶಂಕಿತ ಉಗ್ರ ಗುಂಡಿನ ದಾಳಿ ನಡೆಸಿದ್ದಕ್ಕೆ ಜಮ್ಮು ಕಾಶ್ಮೀರದ ಪೊಲೀಸ್ ಹುತಾತ್ಮರಾಗಿದ್ದರು. ಉಗ್ರರು ಹಲವು ಸುತ್ತು ಗುಂಡಿನ ದಾಳಿ ನಡೆದಿಸಿದ್ದಕ್ಕೆ ಅಬ್ದುಲ್ ರಶೀದ್ ದರ್ ಗಂಭೀರ ಗಾಯಗೊಂಡಿದ್ದರು. ಫರಾ ಗ್ರಾಮದಲ್ಲಿನ ಅವರ ಮನೆಯಲ್ಲೇ ಬುಧವಾರ ಘಟನೆ ನಡೆದಿತ್ತು. ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಗ ಹುತಾತ್ಮರಾಗಿದ್ದಾರೆ ಎಂದು ಘೋಷಿಸಲಾಗಿತ್ತು.

    ಕಳೆದ ಕೆಲವು ತಿಂಗಳಿನಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚುತ್ತಿದ್ದು, ಕಳೆದ ತಿಂಗಳು ಐದು ಜನ ಅಪರಿಚಿತ ಉಗ್ರರನ್ನು ಗುಂಡಿನ ಚಕಮಕಿ ವೇಳೆ ಹತ್ಯೆ ಮಾಡಲಾಗಿತ್ತು. ಜಮ್ಮು ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ರೇಬನ್ ಏರಿಯಾದಲ್ಲಿ ಭಾನುವಾರ ಬೆಳಗ್ಗೆ ಘಟನೆ ನಡೆದಿತ್ತು.

    ಮೇನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಕೋಲೋನಲ್ ಹಾಗೂ ಮೇಜರ್ ಸೇರಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಈ ವೇಳೆ ಇಬ್ಬರು ಉಗ್ರರು ಸಹ ಹತರಾಗಿದ್ದರು. ಉತ್ತರ ಕಾಶ್ಮೀರದ ಕುಂಪ್ವಾರಾ ಜಿಲ್ಲೆಯ ಹಂದ್ವಾರಾದ ಚಾಂಜಮುಲ್ಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು.

  • 300ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್

    300ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳಿಗೆ ಆಗ್ನೇಯ ವಿಭಾಗ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ಬೆಂಗಳೂರಿನ ಸಿಎಆರ್ ಸೌತ್ ಗ್ರೌಂಡ್‍ನಲ್ಲಿ ಆಗ್ನೇಯ ವಿಭಾಗದ ರೌಡಿಗಳಿಗೆ ಪರೇಡ್ ನಡೆಸಿ ಪೊಲೀಸರು ವಾರ್ನ್ ಮಾಡಿದ್ದಾರೆ. ಮೂರು ಉಪವಿಭಾಗ ಮತ್ತು 13 ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 300ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ಗ್ರೌಂಡ್‍ಗೆ ಕರೆಸಿ ಯಾವುದೇ ಅಹಿತರ ಘಟನೆಯಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ರೌಡಿ ಚಟುವಟಿಕೆಯಲ್ಲಿ ಭಾಗಿಯಾದರೆ ಪರಿಣಾಮ ನೆಟ್ಟಗಿರಲ್ಲ. ಯಾವುದೇ ಕೇಸ್ ಯಾರ ಮೇಲೆಯೂ ದಾಖಲಾಗಬಾದರು. ಒಂದು ವೇಳೆ ಸಣ್ಣ-ಪುಟ್ಟ ಗಲಾಟೆ ಮಾಡಿಕೊಂಡು ಕೇಸ್ ದಾಖಲಾದರೆ ಸೀದಾ ಜೈಲಿಗೆ ಹೋಗುತ್ತೀರಿ. ನಿಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಇರಬೇಕು. ಏನಾದರೂ ಬಾಲ ಬಿಚ್ಚಿದರೆ ಗೂಂಡಾ ಆಕ್ಟ್ ಹಾಕುತ್ತೀನಿ ಎಂದು ಡಿಸಿಪಿ ಇಷಾ ಪಂಥ್ ರೌಡಿಗಳಿಗೆ ಚಳಿ ಬಿಡಿಸಿದ್ದಾರೆ.

  • ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ ಶನಿವಾರದ ಕಾರ್ಯಕ್ರಮಕ್ಕೆ ನವವಧುವಿನಂತೆ ಸಿಂಗಾರಗೊಂಡಿದೆ.

    ಬೆಳಗ್ಗೆ ಹತ್ತು ಗಂಟೆಯಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದ್ದು ಅಂತಿಮ ಹಂತದ ಕೆಲಸಗಳು, ಭದ್ರತಾ ತಪಾಸಣೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಹತ್ತು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಬಾರಿಯ ಅತಿಥಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಫೂಸಾ ಸಮ್ಮುಖದಲ್ಲಿ ಇಂಡಿಯಾ ಗೇಟ್ ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತ್ಮಾತ ಯೋಧರಿಗೆ ಗೌರವ ವಂದನೆ ಸಲ್ಲಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ.

    ಬೆಳಗ್ಗೆ 10.30ರಿಂದ ಪರೇಡ್ ಗೆ ಅಧಿಕೃತ ಚಾಲನೆ ಸಿಗಲಿದ್ದು, ಮಹಾತ್ಮ ಗಾಂಧಿ 150ನೇ ಜನ್ಮ ದಿನ ಹಿನ್ನೆಲೆಯಲ್ಲಿ ಸ್ತಬ್ಧ ಚಿತ್ರಗಳ ಮೂಲಕ ವಿಶೇಷ ಗೌರವ ಸಲ್ಲಿಸಲು ತಯಾರಿ ನಡೆದಿದೆ. 17 ರಾಜ್ಯಗಳು 6 ಕೇಂದ್ರಾಡಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವಾಲಯದಿಂದ ಗಾಂಧಿಗೆ ಗೌರವ ಸಲ್ಲಿಸಲಾಗುತ್ತಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜೋತ್ಸವದ ಮೇಲೆ ಉಗ್ರರ ಕರಿನೆರಳಿದ್ದು ಜೈಶ್ ಈ ಮೊಹ್ಮದ್ ಉಗ್ರ ಸಂಘಟನೆಯ ಶಂಕಿತ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ರಾಜಪಥ್ ನಿಂದ ಐದು ಕಿಮೀ ವರೆಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದು ಪಾಸ್ ಇದ್ದವರು ಮಾತ್ರ ಜನಪಥ್ ರಸ್ತೆ ಪ್ರವೇಶಿಸಬಹುದಾಗಿದೆ. ವೇದಿಕೆ ಸುತ್ತಲೂ ಮೂರು ಬಗೆಯ ಭದ್ರತೆ ಒದಗಿಲಾಗಿದ್ದು ಎಸ್ಪಿಜಿ, ಬ್ಲಾಕ್ ಕ್ಯಾಟ್ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಗಣ್ಯರಿಗೆ ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ನಿಂದ ಭದ್ರತೆ ನೀಡಲಾಗಿದೆ.

    ಹೇಗೆ ಪರೇಡ್ ಆರಂಭಗೊಳ್ಳುತ್ತದೆ?
    ಶನಿವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಲಿದ್ದಾರೆ. ಬಳಿಕ 9.55ಕ್ಕೆ ಕುದುರೆ ಸಾರೋಟಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿ ಅಮರ್ ಜವಾನ್ ಜ್ಯೋತಿ ಬಳಿ ಆಗಮಿಸಿ ಯುದ್ಧದಲ್ಲಿ ಹುತ್ಮಾತರಾದ ಸೈನಿಕರಿಗೆ ಗೌರವ ವಂದನೆ ಸಲ್ಲಿಸಲಿದ್ದಾರೆ. ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ರಾಷ್ಟ್ರಪತಿಗಳು 10 ಗಂಟೆಗೆ ಪ್ರಧಾನಿ ಸಮ್ಮುಖದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈ ವೇಳೆ ದೇಶದ ಭೂ, ವಾಯು ಮತ್ತು ನೌಕದಳದ ಮುಖ್ಯಸ್ಥರು ಉಪಸ್ಥಿತರಿರಲಿದ್ದಾರೆ. 10.30ಕ್ಕೆ ಅಧಿಕೃತವಾಗಿ ಪರೇಡ್‍ಗೆ ಆರಂಭವಾಗುವ ಸಾಧ್ಯತೆಯಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾಗೇಟ್ ವರೆಗೆ ಒಟ್ಟು ನಾಲ್ಕು ಕಿಮೀ ದೂರ ಹಾಗೂ ಮೂರು ಗಂಟೆಗಳ ಕಾಲ ಪರೇಡ್ ನಡೆಯಲಿದೆ.

    ವಿಶೇಷವಾಗಿ ಮಹಾತ್ಮ ಗಾಂಧೀಜಿ ಭೇಟಿ ಕೊಟ್ಟ ನೆನಪುಗಳನ್ನು ತೋರಿಸಲು 17 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶ ಗಾಂಧೀಜಿಗೆ ಸಂಬಂಧಿಸಿದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

    ಪರೇಡ್ ವಿಶೇಷತೆಗಳು: ಭಾರತೀಯ ಸೇನೆಗೆ ಅವಳವಡಿಸಿಕೊಂಡಿರುವ ಅಮೇರಿಕಾದ ಎಂ777 ಎ2 ಆರ್ಟಿಲರಿ ಗನ್ ಈ ಬಾರಿ ಪರೇಡ್ ವಿಶೇಷ ಪ್ರದರ್ಶನವಾಗಿದೆ. ಅಲ್ಲದೇ ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡಿರುವ ಕೆ9 ವಜ್ರಾ ಆರ್ಟಿಲರಿ ಗನ್ ಕೂಡ ಪ್ರದರ್ಶನವಾಗಲಿದೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ ಸಿದ್ಧಪಡಿಸಿರುವ ಮಧ್ಯಮ ಶ್ರೇಣಿಯ ಏರ್ ಮಿಸೈಲ್, ಅರ್ಜುನಾ ಟ್ಯಾಂಕ್ ಗಳ ರಕ್ಷಣೆಗೆಂದು ನಿರ್ಮಾಣಗೊಂಡಿರುವ ಅರ್ಮರ್ಡ್ ರಿಕವರಿ ವೆಹಿಕಲ್ (ಶಸ್ತ್ರಸಜ್ಜಿತ ರಕ್ಷಣಾ ವಾಹನ) ಕೂಡಾ ಮೊದಲ ಬಾರಿಗೆ ಪ್ರದರ್ಶನ ಮಾಡಲಾಗುತ್ತಿದೆ. ಬಯೋ ಇಂಧನ ಸಾಮರ್ಥ್ಯದಿಂದ ಮೊದಲ ಬಾರಿಗೆ ಹಾರಾಟ ನಡೆಸಲಿರುವ ಎಎನ್ – 32 ವಿಮಾನ ಪರೇಡಿನ ಮತ್ತೊಂದು ವಿಶೇಷವಾಗಿದೆ.

    ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಐಎನ್‍ಎ ದಳದಲ್ಲಿದ್ದ ನಾಲ್ವರು ಯೋಧರು ಇದೆ ಮೊದಲ ಬಾರಿಗೆ ಪರೇಡ್ ನಲ್ಲಿ ಭಾಗಿಯಾಗುತ್ತಿದ್ದು, ಭಾರತೀಯ ಸೇನೆಯ ಮೂರು ದಳಗಳಿಗಾಗಿ ಸಿದ್ಧಪಡಿಸಲಾಗಿರುವ ಶಂಖನಾದ ಹೆಸರಿನ ವಿಶೇಷ ಟ್ಯೂನ್ ಈ ವೇಳೆ ಬಳಕೆ ಮಾಡಲಾಗುತ್ತದೆ. ಮೊದಲ ಬಾರಿಗೆ ಮಹಿಳಾ ಶಕ್ತಿಯ ಪ್ರದರ್ಶನ ನಡೆಯಲಿದ್ದು, ಮೇಜರ್ ಕುಸುಬು ಕನ್ವಾಲ್ ನೇತೃತ್ವದಲ್ಲಿ ದೇಶದ ಅತಿ ಪುರಾತನ ಪ್ಯಾರಾಮಿಲಿಟರಿ ಫೋರ್ಸ್ ಅಸ್ಸಾಂ ರೈಫಲ್ಸ್ ಅನ್ನು ಮುನ್ನಡೆಸಲಿದ್ದಾರೆ. ಮೊದಲ ಬಾರಿಗೆ ಮಹಿಳಾ ಅಧಿಕಾರಿಯಾದ ಕ್ಯಾಪ್ಟನ್ ಶಿಖಾ ಸುರಭಿ ಅವರು ಸೇನೆಯ ಡೇರ್ ಡೇವಿಲ್ಸ್ ಮೋಟಾರ್ ಸೈಕಲ್ ತಂಡದಲ್ಲಿ ಪುರುಷ ಸದಸ್ಯರ ಜೊತೆ ಸೇರಿ ಪ್ರದರ್ಶನ ನೀಡಲಿದ್ದಾರೆ. ಇದನ್ನು ಓದಿ: ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

    ಗಣರಾಜೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣಾ ಆಫ್ರಿಕಾ ಅಧ್ಯಕ್ಷ ಸೈರಿಲ್ ರಾಮ್ಪೂಸಾ ಆಗಮಿಸಲಿದ್ದು, ನಲ್ಸೇನ್ ಮಂಡೇಲಾ ಬಳಿಕ ದಕ್ಷಿಣ ಆಫ್ರಿಕಾದಿಂದ ಗಣರಾಜೋತ್ಸದಲ್ಲಿ ಭಾಗಿಯಾಗಿರುತ್ತಿರುವ ಎರಡನೇ ಅಧ್ಯಕ್ಷರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ನವದೆಹಲಿ: 70ನೇ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಪುರುಷರು ಇರುವ ದಳದ ಸಾರಥ್ಯ ವಹಿಸಲಿದ್ದಾರೆ. ರಾಜಪಥ ಮಾರ್ಗದಲ್ಲಿ ಲೆಫ್ಟಿನೆಂಟ್ ಭಾವನಾ ಕಸ್ತೂರಿ ಅವರ ನೇತೃತ್ವದ 144 ಯೋಧರು ಪರೇಡ್ ನಡೆಸಲಿದ್ದಾರೆ.

    ಎರಡೂವರೆ ವರ್ಷಗಳ ಹಿಂದೆ ಭಾರತೀಯ ಸೇನೆ ಸೇರಿದ್ದ ಹೈದರಾಬಾದ್‍ನ ಯುವ ಅಧಿಕಾರಿ ಭಾವನಾ ಕಸ್ತೂರಿ ತಮ್ಮ ದಳದೊಂದಿಗೆ ಮೈಕೊರೆಯುವ ಚಳಿಯಲ್ಲಿ ಮುಂಜಾನೆ 5.30ಕ್ಕೆ ತಾಲೀಮು ನಡೆಸಿ ಸಿದ್ಧತೆ ಮಾಡಿಕೊಂಡಿದ್ದಾರೆ.

    9 ವರ್ಷ ಹಿಂದೆ ಎನ್‍ಸಿಸಿ ತಂಡದ ಸದಸ್ಯೆಯಾಗಿ ಪರೇಡ್‍ನಲ್ಲಿ ಹೆಜ್ಜೆ ಹಾಕಿದ್ದ ಭಾವನಾ ಅವರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ತಾನು ಸೇನಾ ತಂಡವೊಂದನ್ನು ಮುನ್ನಡೆಸಲಿರುವ ಕುರಿತು ಸಂತಸಗೊಂಡಿದ್ದಾರೆ.

    ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿಯವರ ಮುಂದೆ ನಾನು ತಂಡವನ್ನು ಮುನ್ನಡೆಸಿ ಅವರಿಗೆ ಸೆಲ್ಯೂಟ್ ನೀಡುವುದು ನನ್ನ ಕನಸಿನ ಗಳಿಗೆಯಾಗಿದೆ. ಪರೇಡನ್ನು ವೀಕ್ಷಿಸಲು ಬರುವ ಜನಸ್ತೋಮದ ಕುರಿತು ನಾನು ಪುಳಕಗೊಂಡಿದ್ದೇನೆ. ನನ್ನನ್ನು ನೋಡಿ ಬಹಳಷ್ಟು ಹೆಣ್ಣು ಮಕ್ಕಳು ಖುಷಿ ಪಡಬಹುದು’ಎಂದು ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೇ ಯಾವುದೇ ಪ್ರಶಸ್ತಿಯೂ ಈ ಗೌರವಕ್ಕೆ ಮತ್ತು ನನ್ನ ಮೇಲೆ ಹೊರಿಸಲಾಗಿರುವ ಹೊಣೆಗಾರಿಕೆಗೆ ಸಾಟಿಯಲ್ಲ. ಇದು ನನ್ನ ಜೀವಮಾನದ ಶ್ರೇಷ್ಠ ಪ್ರಶಸ್ತಿಯಾಗಿದೆ ಎಂದು ಬಣ್ಣಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರು ನಂತ್ರ ಎಚ್ಚೆತ್ತ ನೆಲಮಂಗಲ ಪೊಲೀಸರು: ರೌಡಿಗಳಿಗೆ ಖಡಕ್ ವಾರ್ನಿಂಗ್

    ಬೆಂಗ್ಳೂರು ನಂತ್ರ ಎಚ್ಚೆತ್ತ ನೆಲಮಂಗಲ ಪೊಲೀಸರು: ರೌಡಿಗಳಿಗೆ ಖಡಕ್ ವಾರ್ನಿಂಗ್

    ಬೆಂಗಳೂರು: ಪೊಲೀಸರು ಇತ್ತೀಚೆಗೆ ನಗರದ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ಮೂಲಕ ಎಚ್ಚರಿಕೆಯನ್ನ ನೀಡಿದ್ದರು. ಇದರಿಂದ ಎಚ್ಚೆತ್ತ ನೆಲಮಂಗಲ ವ್ಯಾಪ್ತಿಯ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವ ಶಂಕರ್ ನೇತೃತ್ವದಲ್ಲಿ ರೌಡಿ ಪರೇಡ್ ಮಾಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರೌಡಿ ಪರೇಡ್ ನಲ್ಲಿ ಎಸ್.ಪಿ ಖಡಕ್ ವಾರ್ನಿಂಗ್ ಗೆ ಪ್ರತಿಯೊಬ್ಬ ರೌಡಿಶೀಟರ್ ಗಳು ಭಾಗಿಯಾಗಿದ್ದರು. ಒಟ್ಟು 166 ಜನ ರೌಡಿ ಶೀಟರ್ ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದ್ದಾರೆ.

    ಹಿಂದಿನ ನೆಲಮಂಗಲ ಆಗದಂತೆ ಹಾಗೂ ಚಾಲ್ತಿಯಲ್ಲಿರುವ ರೌಡಿಶೀಟರ್ ಗಳು ಮತ್ತೆ ಜನರಿಗೆ ಧಮ್ಕಿ ಹಾಕಿ ಹಫ್ತ ವಸೂಲಿ, ರಿಯಲ್ ಎಸ್ಟೇಟ್ ದಂದೆ ಇನ್ನಿತರ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಖಡಕ್ ವಾರ್ನಿಂಗ್ ನೀಡಿದ್ದೇವೆ. ಹೈವೇ ದರೋಡೆ ಹಾಗೂ ಇತ್ತಿಚೇಗೆ ನಟ ವಿನೋದ್ ರಾಜ್‍ರಿಂದ ಒಂದು ಲಕ್ಷ ಹಣ ದೋಚಿದ ಪ್ರಕರಣಕ್ಕೆ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಎಸ್.ಪಿ ಶಿವಶಂಕರ್ ತಿಳಿಸಿದರು.

    ಇತ್ತೀಚೆಗೆ ಬೆಂಗಳೂರಿಗೆ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಅಲೋಕ್ ಕುಮಾರ್ ಅವರು ನೇಮಕಗೊಂಡಿದ್ದರು. ನೇಮಕವಾದ ಬಳಿಕ ಬಾರ್ ಆಂಡ್ ರೆಸ್ಟೊರೆಂಟ್, ಜೂಜು ಅಡ್ಡೆ ಮತ್ತು ಪಬ್ ಮೇಲೆ ದಾಳಿ ಮಾಡಿ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಬ್ರೇಕ್ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೇ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅವರಲ್ಲಿದ್ದ ವಸ್ತುಗಳನ್ನು ವಶಕ್ಕೆ ಪಡೆದು ಎಚ್ಚರಿಕೆಯನ್ನು ಕೂಡ ಕೊಡುತ್ತಿದ್ದಾರೆ. ಅಲೋಕ್ ಕುಮಾರ್ ಅವರ ಕೆಲಸ ಕಾರ್ಯವನ್ನು ಮೆಚ್ಚಿ ಈಗ ನೆಲಮಂಗಲ ಪೊಲೀಸರು ರೌಡಿಗಳನ್ನು ಕರೆಸಿ ಪರೇಡ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರದಲ್ಲಿ ರೌಡಿಗಳ ಪರೇಡ್!

    ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರದಲ್ಲಿ ರೌಡಿಗಳ ಪರೇಡ್!

    ವಿಜಯಪುರ: ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ವಿಜಯಪುರದಲ್ಲಿ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ರೌಡಿಗಳ ಪರೇಡ್ ನಡೆಸಿದರು.

    ಜಿಲ್ಲೆಯಲ್ಲಿ ಅಧಿಕ ಕ್ರೈಂ ಗಳು ನಡೆಯುವುದರಿಂದ ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಐಜಿಪಿ, ಒಂದೇ ಕೋಮುವಿನ ಗುಂಪುಗಳು ಜಗಳದಲ್ಲಿ ಕಚ್ಚಾಬಾಂಬ್ ಬಳಕೆ ಮಾಡಿದ್ದಾರೆ. ಈ ಬಾಂಬ್ ನಿಷೇಧಿತ ಆಗಿದ್ದು, ನಾಡಬಾಂಬ್ ಬಳಕೆ ಮಾಡಿದ ಸ್ಥಳಕ್ಕೆ ಸಂಜೆ ಭೇಟಿಕೊಡುವುದಾಗಿ ತಿಳಿಸಿದರು. ಅಲ್ಲದೆ ನಿನ್ನೆ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದವರ ಬಳಿ ಹಣ ಕೇಳಿದ್ದಕ್ಕೆ ಪೊಲೀಸ್ ಪೇದೆ ಪರಶುರಾಮನನ್ನು ಅಮಾನತು ಮಾಡಿರುವುದಾಗಿ ತಿಳಿಸಿದರು. ಇದನ್ನು ಓದಿ: ದೂರು ನೀಡಲು ಬಂದವನ ಬಳಿ ಲಂಚ ಪಡೆದ ಪೊಲೀಸ್ ಪೇದೆ! -ವಿಡಿಯೋ ನೋಡಿ

    ಇದೀಗ 491 ವ್ಯಕ್ತಿಗಳು ಜಿಲ್ಲಾಧಿಕಾರಿಗೆ ವೆಪನ್ ಲೈಸೆನ್ಸ್ ಗೆ ಮನವಿ ಮಾಡಿದ್ದಾರೆ. ಅದರಲ್ಲಿ ಯಾರಿಗೆ ಬೇಕು ಅನ್ನುವುದನ್ನು ಗಮನಿಸಿ ಆಮೇಲೆ ಕೊಡುತ್ತೇವೆ. ರೌಡಿಗಳು ಚುರುಕಾಗಿರುವ ಆಧಾರದ ಮೇಲೆ ಪರೇಡ್ ಗೆ ಕರೆಸಲಾಗಿದೆ. 20 ವರ್ಷಗಳಿಂದ ಯಾರ ಹೆಸರಿನಲ್ಲಿ ಕೇಸ್ ಗಳಿಲ್ಲ ಅವರ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ತೆಗೆಯುತ್ತೇವೆ. ನಮ್ಮ ನಿಗಾ ಯಾವಾಗಲೂ ಭೀಮಾತೀರದ ಮೇಲಿರುತ್ತೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Tw2RFpT6AJk

  • ಕಲಬುರಗಿಯಲ್ಲಿ 300ಕ್ಕೂ ಹೆಚ್ಚು ರೌಡಿಗಳ ಬೆವರಿಳಿಸಿದ ಪೊಲೀಸರು!

    ಕಲಬುರಗಿಯಲ್ಲಿ 300ಕ್ಕೂ ಹೆಚ್ಚು ರೌಡಿಗಳ ಬೆವರಿಳಿಸಿದ ಪೊಲೀಸರು!

    ಕಲಬುರಗಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 300ಕ್ಕೂ ಅಧಿಕ ರೌಡಿಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಪ್ರಮುಖವಾಗಿ ಈ ಪರೇಡ್ ನಲ್ಲಿ ಉದ್ದುದ್ದ ಕೂದಲು ಬಿಟ್ಟುಕೊಂಡು ಮತ್ತು ಡಿಫರೆಂಟ್ ಆಗಿ ಹೇರ್ ಸ್ಟೈಲ್ ಬಿಟ್ಟು ಜನರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ತಿರಗಾಡುವ ರೌಡಿಗಳ ಹೇರ್ ಕಟ್ಟಿಂಗ್ ಮಾಡಿಸಲಾಯಿತು.

    ಜನರಿಗೆ ಭಯವನ್ನುಂಟು ಮಾಡುವ ಉದ್ದೇಶದಿಂದ ಕೈಯಲ್ಲಿ ಕೊರಳಲ್ಲಿ ಚೈನು ದಾರ ಕಟ್ಟಿಕೊಂಡಿದ್ದನ್ನ ತೆಗೆದುಹಾಕಿದರು. ಪರೇಡ್ ನಲ್ಲಿ ಖುದ್ದು ಎಸ್‍ಪಿ ಅವರೇ ರೌಡಿಗಳಿಗೆ ಸುಡುಬಿಸಿಲಲ್ಲೇ ಸುಮಾರು ಎರಡು ಗಂಟೆಗಳ ಕಾಲ ಟ್ರೀಟ್ಮೆಂಟ್ ಕೊಟ್ಟರು.

    ಜಿಲ್ಲೆಯಾದ್ಯಂತ ಒಟ್ಟು 3600 ರೌಡಿಗಳಿದ್ದು, ಅದರಲ್ಲಿ 300 ಕ್ಕೂ ಅಧಿಕ ರೌಡಿಗಳು ಈ ಪರೇಡ್ ನಲ್ಲಿ ಭಾಗವಹಿಸಿದ್ದರು. ಇಪ್ಪತ್ತಕ್ಕೂ ಅಧಿಕ ರೌಡಿಗಳ ಹೇರ್ ಕಟಿಂಗ್ ಮಾಡಿಸಿ ಇನ್ಮುಂದೆ ಯಾರೊಬ್ಬರೂ ಸಹ ಡಿಫರೆಂಟ್ ಆಗಿ ಹೇರ್ ಬಿಟ್ಟುಕೊಂಡು ಅಡ್ಡಾಡುವಂತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡಿ ಇಂಥವರಿಗೆ ಮತ ಹಾಕಿ ಅಂತಾ ಬೆದರಿಕೆ ಹಾಕದಂತೆ ಎಚ್ಚರಿಕೆಯನ್ನು ನೀಡಲಾಯಿತು.

  • ನಾಲ್ವರು ರೇಪ್ ಆರೋಪಿಗಳಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ್ರು ಜನ

    ನಾಲ್ವರು ರೇಪ್ ಆರೋಪಿಗಳಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ್ರು ಜನ

    ಭೋಪಾಲ್: ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ.

    ಭಾನುವಾರ ಮಧ್ಯಾಹ್ನ ಭೋಪಾಲ್ ನ ಬೀದಿಗಳಲ್ಲಿ ಆರೋಪಿಗಳ ಮೆರವಣಿಗೆ ಮಾಡಿದ್ದು, ರಸ್ತೆ ಬದಿ ನಿಂತಿದ್ದ ಜನ ನಾಲ್ವರಿಗೂ ಕಪಾಳಕ್ಕೆ ಬಾರಿಸಿದ್ದಾರೆ. ಮಹಿಳೆಯರ ಮೇಲಿನ ಅಪರಾಧಗಳನ್ನ ತಡೆಗಟ್ಟಲು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಈ ಅಭ್ಯಾಸ ಹೆಚ್ಚಾಗುತ್ತಿದೆ ಎಂದು ವರದಿಯಾಗಿದೆ.

    ಶನಿವಾರದಂದು ಮಹಿಳೆ ಮೇಲೆ ಮಾಜಿ ಪ್ರಿಯಕರ ಹಾಗೂ ಆತನ ಸ್ನೇಹಿತನೊಬ್ಬ ಸೇರಿ ಅತ್ಯಾಚಾರವೆಸಗಿದ್ದರು ಎಂದು ಆರೋಪಿಸಲಾಗಿದೆ. ಈ ಇಬ್ಬರಿಗೂ ಮತ್ತಿಬ್ಬರು ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಅಪಹರಣ ಹಾಗೂ ಇನ್ನಿತರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಭೋಪಾಲ್ ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಲೋಧಾ ಹೇಳಿದ್ದಾರೆ.

    ಮಹಿಳೆಯ ಬಾಯ್‍ಫ್ರೆಂಡ್ ಏನೋ ಮುಖ್ಯವಾದ ವಿಷಯ ತಿಳಿಸಬೇಕೆಂದು ಹೇಳಿ ಆಕೆಗೆ ಶನಿವಾರದಂದು ರೆಸ್ಟೊರೆಂಟ್‍ನಲ್ಲಿ ಭೇಟಿಯಾಗುವಂತೆ ಕರೆದಿದ್ದ. ಮಹಿಳೆ ಅಲ್ಲಿಗೆ ಹೋದಾಗ ಆಕೆಯ ಮೊಬೈಲ್ ಕಸಿದುಕೊಂಡಿದ್ದು, ಫೋನ್ ಬೇಕಾದರೆ ತನ್ನ ಜೊತೆ ಸ್ನೇಹಿತನ ರೂಮಿಗೆ ಬರಬೇಕೆಂದು ಹೇಳಿದ್ದ. ಮಹಿಳೆ ಬಲವಂತವಾಗಿ ಬೈಕ್‍ನಲ್ಲಿ ಆತನೊಂದಿಗೆ ಹೋಗಿದ್ದರು ಎಂದು ಲೋಧಾ ಹೇಳಿದ್ದಾರೆ.

    ರೂಮ್ ತಲುಪಿದ ನಂತರ ಮಹಿಳೆಯ ಮಾಜಿ ಪ್ರಿಯಕರನ ಇತರೆ ಮೂವರು ಸ್ನೇಹಿತರು ಅಲ್ಲಿದ್ದರು. ಇಬ್ಬರು ಮಹಿಳೆ ಮೇಲೆ ರೇಪ್ ಮಾಡಿದ್ದು, ಮತ್ತಿಬ್ಬರು ಕಾವಲು ನಿಂತಿದ್ದರು ಎಂದು ಅವರು ತಿಳಿಸಿದ್ದಾರೆ.

    ಮಹಿಳೆ ಅವರಿಂದ ತಪ್ಪಿಸಿಕೊಂಡು ಭಾನುವಾರ ಬೆಳಗ್ಗೆ ಪೊಲೀಸರ ಬಳಿ ದೂರು ದಾಖಲಿಸಿದ್ದರು ಎಂದು ಹೇಳಿದ್ದಾರೆ.

  • ಗಣರಾಜ್ಯೋತ್ಸವ ಪರೇಡ್: ಕೆಚ್ಚೆದೆಯ ಪ್ರದರ್ಶನ ನೀಡಿದ ಮಹಿಳಾ ಬಿಎಸ್‍ಎಫ್ ಬೈಕ್ ತಂಡ

    ಗಣರಾಜ್ಯೋತ್ಸವ ಪರೇಡ್: ಕೆಚ್ಚೆದೆಯ ಪ್ರದರ್ಶನ ನೀಡಿದ ಮಹಿಳಾ ಬಿಎಸ್‍ಎಫ್ ಬೈಕ್ ತಂಡ

    ನವದೆಹಲಿ: ದೆಹಲಿಯ ರಾಜ್‍ಪಥ್‍ನಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಈ ಬಾರಿ ಹಲವು ವಿಶೇಷಗಳಿಂದ ಕೂಡಿತ್ತು. ಪ್ರಮುಖವಾಗಿ ಮೊದಲ ಬಾರಿಗೆ ಆಸಿಯಾನ್ ರಾಷ್ಟ್ರಗಳ ನಾಯಕರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದ ಪೆರೇಡ್ ನಲ್ಲಿ ದೇಶದ ಸಂಸ್ಕೃತಿ ಹಾಗೂ ಮಿಲಿಟರಿ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು.

    ಈ ಬಾರಿಯ ಪರೇಡ್ ನಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಬಿಎಎಸ್‍ಎಫ್ ನ ಮಹಿಳಾ ತಂಡ ರೋಮಾಂಚನಕಾರಿ ಬೈಕ್ ಸ್ಟಂಟ್ ಪ್ರದರ್ಶನವನ್ನು ನೀಡಿತು. ಸಮಾರಂಭದಲ್ಲಿ ಭಾವಹಿಸದ್ದ ಜನರ ಹರ್ಷೋದ್ಗಾರ ಮಹಿಳಾ ಯೋಧರ ಸಾಹಸ ಪ್ರದರ್ಶನಕ್ಕೆ ಮತ್ತಷ್ಟು ಶಕ್ತಿ ನೀಡಿತು.

    ರಾಯಲ್ ಎನ್‍ಫೀಲ್ಡ್ 350 ಸಿಸಿ ಬೈಕ್ ಏರಿ ಬಂದ `ಸೀಮಾ ಭವಾನಿ’ ಹೆಸರಿನ 113 ಮಂದಿ ಮಹಿಳಾ ಬಿಎಸ್‍ಎಫ್ ತಂಡ ತಮ್ಮ ಕೌಶಲ್ಯ ಹಾಗೂ ಧೈರ್ಯದ ಕೆಚ್ಚೆದೆಯ ಪ್ರದರ್ಶನ ನೀಡಿತು.

    ಸಬ್ ಇನ್ಸ್ ಪೆಕ್ಟರ್ ಸ್ಟ್ಯಾನ್ಜಿನ್ ನಿರೊಯಾಂಗ್ (28) ಮುನ್ನಡೆಯಲ್ಲಿ ಪ್ರದರ್ಶನ ನೀಡಿದ ತಂಡ ತಾವು ಯಾವುದೇ ಪುರುಷರಿಗೆ ಕಮ್ಮಿ ಇಲ್ಲ ಎಂಬುವುದನ್ನು ಸಾಬೀತು ಪಡಿಸಿತು. ಬಿಎಸ್‍ಎಫ್ ನ ವಿವಿಧ ರ‍್ಯಾಂಕ್ ಗಳಿಂದ ಆಯ್ಕೆ ಮಾಡಲಾಗಿದ್ದ 25 ರಿಂದ 30 ವರ್ಷದೊಳಗಿನ 113 ಮಹಿಳೆಯರಿಗೆ ತರಬೇತಿಯನ್ನು ನೀಡಲಾಗಿತ್ತು. ಮಹಿಳಾ ಯೋಧರ ಪ್ರದರ್ಶನ ಕಂಡ ಅತಿಥಿಗಳು ಅವರ ಧೈರ್ಯವನ್ನು ಪ್ರಶಂಸಿದರು.

    ಮೊದಲ ಬಾರಿಗೆ ಸೀಮಾ ಭವಾನಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದ ಮಹಿಳಾ ಯೋಧರಿಗೆ ಬಿಎಸ್‍ಎಫ್ ಗೆ ಆಯ್ಕೆಯಾದ ಸಮಯದಲ್ಲಿ ಬೈಕ್ ಸವಾರಿಯೇ ತಿಳಿದಿರಲಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ. ನಂತರ ಅವರಿಗೆ ಕಠಿಣ ತರಬೇತಿ ನೀಡಲಾಗಿತ್ತು. ತಂಡದಲ್ಲಿ ಪಶ್ಚಿಮ ಬಂಗಾಳ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ಕೇರಳ, ದೆಹಲಿ, ಮೇಘಾಲಯ ಮತ್ತು ಹಿಮಾಲಯ ಪ್ರದೇಶ ರಾಜ್ಯಗಳಿಗೆ ಸೇರಿದ್ದ ಮಹಿಳಾ ಸೈನಿಕರು ಸ್ಥಾನ ಪಡೆದಿದ್ದರು. ಪ್ರತಿ ದಿನ ತರಬೇತಿ ನೀಡಲಾಗಿದ್ದು ಈ ವೇಳೆ ಹಲವು ಮಂದಿ ಬಿದ್ದು ಗಾಯಗೊಂಡಿದ್ದರು. ಆದರೆ ಇವೆಲ್ಲವನ್ನೂ ಬದಿಗಿಟ್ಟು ಗಣರಾಜ್ಯೋತ್ಸವ ದಿನ ಅತ್ಯುತ್ತಮ ಪ್ರದರ್ಶನ ನೀಡಿದರು.

    https://www.youtube.com/watch?v=lurFLE-A1K0