Tag: ಪರ್ತಕರ್ತರು

  • ದೆಹಲಿಯಲ್ಲಿ ಹಿಂಸಾಚಾರ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ

    ದೆಹಲಿಯಲ್ಲಿ ಹಿಂಸಾಚಾರ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ

    ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳು ಕೈ ಮೀರಿದೆ. ಪ್ರತಿಭಟನೆಯಿಂದಾಗಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೌಜ್‍ಪುರ, ಗೋಕುಲ್‍ಪುರಿ, ಚಾಂದ್‍ಬಾಗ್ ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಪ್ರತಿಭಟನಾ ಸ್ಥಳದಲ್ಲಿ 144 ಸೆಕ್ಷನ್ ಹೇರಲಾಗಿದೆ.

    ಮೌಜ್‍ಪುರದಲ್ಲಿ ಪತ್ರಕರ್ತ ಆಕಾಶ್ ಅವರಿಗೆ ಗುಂಡಿಕ್ಕಲಾಗಿದೆ. ಇತ್ತ ಖಾಸಗಿ ವಾಹಿನಿಯ ವರದಿಗಾರ ಮತ್ತು ಕ್ಯಾಮೆರಾಮ್ಯಾನ್ ಮೇಲೆ ಗಂಭೀರ ಹಲ್ಲೆ ಮಾಡಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಪೋಲೀಸರು ಗಸ್ತು ತಿರುಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

    ಈ ನಡುವೆ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ವಿರುದ್ಧ ದೂರು ದಾಖಲಾಗಿದೆ. ದೆಹಲಿಯಲ್ಲಿ ಎರಡು ಪೊಲೀಸ್ ಠಾಣೆಯಲ್ಲಿ ಎಎಪಿ ಕಾರ್ಪೋರೇಟರ್ ರೇಷ್ಮಾ ನದೀಮ್ ಮತ್ತು ಹಸೀಬ್ ಉಲ್ ಹಸನ್ ಅವರು ದೂರು ದಾಖಲಿಸಿದ್ದಾರೆ. ಹಿಂಸಾಚಾರಕ್ಕೆ ಜನಸಮೂಹವನ್ನು ಪ್ರಚೋದಿಸಿರುವ ಆರೋಪದ ಮೇಲೆ ವಿಡಿಯೋ ಸಾಕ್ಷ್ಯ ಸಹಿತ ಲಿಖಿತ ದೂರು ದಾಖಲಿಸಲಾಗಿದೆ.

    ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ತುರ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಸಮ್ಮತಿಸಿದೆ. ಬುಧವಾರ ಈ ಅರ್ಜಿ ವಿಚಾರಣೆಗೆ ಬರಲಿದ್ದು, ದೆಹಲಿಯ ಹೊರ ಭಾಗದ ಅಧಿಕಾರಿಗಳಿಂದ ಎಸ್‍ಐಟಿ ತನಿಖೆ ನಡೆಸಬೇಕು ಮತ್ತು ಸೇನೆಯಿಂದ ದೆಹಲಿಯಲ್ಲಿ ಭದ್ರತೆ ಒದಗಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

    ಇತ್ತ ಮತ್ತೊಂದು ಕಡೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಪ್ರತಿಭಟನಾಕಾರರಿಗೆ ರಕ್ಷಣೆ ನೀಡಬೇಕು ಹಾಗೂ ಹಿಂಸಾಚಾರ ನಡೆಸುವ ಪ್ರತಿಭಟನಾಕಾರರ ಮೇಲೆ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲು ಆಗ್ರಹಿಸಿದ್ದಾರೆ.

  • ಹಾಸ್ಟೆಲ್‍ಗೆ ನುಗ್ಗಿ ಸಿಬ್ಬಂದಿ, ವಿದ್ಯಾರ್ಥಿನಿಯರಿಗೆ ನಕಲಿ ಪತ್ರಕರ್ತರಿಂದ ಬೆದರಿಕೆ

    ಹಾಸ್ಟೆಲ್‍ಗೆ ನುಗ್ಗಿ ಸಿಬ್ಬಂದಿ, ವಿದ್ಯಾರ್ಥಿನಿಯರಿಗೆ ನಕಲಿ ಪತ್ರಕರ್ತರಿಂದ ಬೆದರಿಕೆ

    – 6 ಮಂದಿಯನ್ನು ಇಬ್ಬರು ಪೊಲೀಸ್ ವಶಕ್ಕೆ

    ಬಾಗಲಕೋಟೆ: ಪಬ್ಲಿಕ್ ಟವಿಯ ಹೆಸರು ಹೇಳಿಕೊಂಡು ಲೇಡಿಸ್ ಹಾಸ್ಟೆಲ್‍ಗೆ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಬೆದರಿಸಿ, ಅವಾಂತರ ಸೃಷ್ಟಿಸಿದ್ದ 6 ಜನ ನಕಲಿ ಪತ್ರಕರ್ತರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಈ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಓರ್ವ ಮಹಿಳೆ ಹಾಗೂ 5 ಜನ ಪುರುಷರು ತಾವು ಪಬ್ಲಿಕ್ ಟಿವಿಯವರು ಅಂತಾ ಹೇಳಿ ನವನಗರದ 45ನೇ ಸೆಕ್ಟರ್ ನಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ಮಹಿಳಾ ವಸತಿ ನಿಲಯಕ್ಕೆ ಶನಿವಾರ ಭೇಟಿ ನೀಡಿ, ಹಾಸ್ಟಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರಿಗೆ ಬೆದರಿಸಿ ಹಣ ವಸೂಲಿ ಮಾಡಲು ಮುಂದಾಗಿದ್ದರು.

    ಸದ್ಯ ಈ ವಿಷಯ ತಿಳಿಯುತ್ತಿದ್ದಂತೆಯೇ ಪಬ್ಲಿಕ್ ಟಿವಿಯ ಪ್ರತಿನಿಧಿಗಳು ವಸತಿ ನಿಲಯಕ್ಕೆ ಭೇಟಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಘಟನೆಯಿಂದ ಗಾಬರಿಗೊಂಡಿದ್ದ ಹಾಸ್ಟೆಲ್ ಸಿಬ್ಬಂದಿಗೆ ಧೈರ್ಯ ಹೇಳಿ, ಹಾಸ್ಟೆಲ್ ಸಿಬ್ಬಂದಿಯಿಂದ ನವನಗರ ಠಾಣೆಯಲ್ಲಿ ದೂರು ಕೊಡಿಸಲಾಗಿದೆ.

    ಸೆಕ್ಷನ್ 353 ಅಡಿ ಪ್ರಕರಣ ದಾಖಲಿಸಿಕೊಂಡಿರುವ ನವನಗರದ ಮಹಿಳಾ ಠಾಣೆ ಪೊಲೀಸರು, 6 ಮಂದಿ ನಕಲಿ ಪತ್ರಕರ್ತರ ಪೈಕಿ ಕಿಂಗ್‍ಪಿನ್ ಆಗಿದ್ದ ಶಶಿಕಲಾ, ವಿಜಯ್‍ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೀರೇಶ್ ಲಮಾಣಿ, ಸಿದ್ದು ಕಳ್ಳಿಮನಿ, ರಾಮನಗೌಡ ನ್ಯಾಮಗೌಡರ್ ಸೇರಿದಂತೆ 5 ಜನ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    ಈ ನಕಲಿ ಪತ್ರಕರ್ತರು 10 ಜನರ ಒಂದು ತಂಡವನ್ನು ಮಾಡಿಕೊಂಡು ಸುಮಾರು 15 ದಿನಗಳಿಂದ ಪಬ್ಲಿಕ್ ಟಿವಿ ಹೆಸರು ಹೇಳಿಕೊಂಡು ಬಾಗಲಕೋಟೆ ಜಿಲ್ಲೆಯಲ್ಲಿ ಓಡಾಡುತ್ತಿದ್ದರು. ಆದರೆ ಶನಿವಾರ ಮಹಿಳಾ ವಸತಿನಿಲಯಕ್ಕೆ ಪರವಾಣಿಗೆ ಇಲ್ಲದೇ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿನಿಯರಿಗೆ ಬೆದರಿಸಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv