Tag: ಪಲ್ಟಿ

  • ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿಯುತ್ತಿದೆ ಪೆಟ್ರೋಲ್ ಟ್ಯಾಂಕರ್- 5ಕ್ಕೂ ಹೆಚ್ಚು ಮನೆಗಳು ಭಸ್ಮ

    ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿಯುತ್ತಿದೆ ಪೆಟ್ರೋಲ್ ಟ್ಯಾಂಕರ್- 5ಕ್ಕೂ ಹೆಚ್ಚು ಮನೆಗಳು ಭಸ್ಮ

    ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 5ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

    ಕಡೂರಿನಿಂದ ಹೊಸದುರ್ಗ ಕಡೆಗೆ ಪೆಟ್ರೋಲ್ ಟ್ಯಾಂಕರ್ ಹೋಗುತ್ತಿತ್ತು. ಈ ವೇಳೆ ಲಾರಿ ಪಕ್ಕದಲ್ಲೇ ಬೈಕ್ ಬಂದಿದ್ದು, ಅಪಘಾತ ತಡೆಯಲು ಹೋಗಿ ಲಾರಿ ಪಲ್ಟಿ ಆಗಿದೆ. ಬೈಕ್ ಮೇಲೆ ಪೆಟ್ರೋಲ್ ಟ್ಯಾಂಕರ್ ಬಿದ್ದಿದೆ.

    ಬೈಕಿನ ಮೇಲೆ ಬಿದ್ದ ಬಳಿಕ ಟ್ಯಾಂಕರ್ ಹೊತ್ತಿ ಉರಿದಿದೆ. ಹೊತ್ತು ಉರಿಯುತ್ತಿದ್ದಂತೆ ಕ್ಲೀನರ್ ಸ್ಥಳದಲ್ಲೇ ಸಜೀವ ದಹನವಾಗಿದ್ದರೆ. ಚಾಲಕ ಮೈತುಂಬಾ ಬೆಂಕಿ ಮೆತ್ತಿಕೊಂಡೇ ಓಡಿ ಬಂದಿದ್ದಾನೆ. ಸ್ಥಳೀಯರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಳೆ ಬಂದಿದ್ದ ಕಾರಣ ಲಾರಿ ಪಲ್ಟಿ ಹೊಡೆದಿದೆ. ಅಕ್ಕಪಕ್ಕದಲ್ಲಿ ಮನೆ ಇದ್ದ ಕಾರಣ 5ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿದೆ. 5 ಅಗ್ನಿ ಶಾಮಕ ದಳ ವಾಹನಗಳು ಈಗ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ.

    ಸುಮಾರು 100 ಮೀ. ವ್ಯಾಪ್ತಿಯಲ್ಲಿ ಬೆಂಕಿ ಆವರಿಸಿದ್ದು, ಸದ್ಯ ಅಕ್ಕಪಕ್ಕದ ಮನೆಯಲ್ಲಿದ್ದವರು ಹಿಂದಿನ ಬಾಗಿಲಿನಿಂದ ಹೊರ ಬಂದಿದ್ದಾರೆ.

     

    https://youtu.be/ES0e6bTA3F4

  • ಸೇತುವೆಗೆ ಡಿಕ್ಕಿಯಾಗಿ ಲಾರಿ ಪಲ್ಟಿಯಾದ ರಭಸಕ್ಕೆ ಚಕ್ರಗಳೇ ಉರುಳಿದವು!

    ಸೇತುವೆಗೆ ಡಿಕ್ಕಿಯಾಗಿ ಲಾರಿ ಪಲ್ಟಿಯಾದ ರಭಸಕ್ಕೆ ಚಕ್ರಗಳೇ ಉರುಳಿದವು!

    ಚಿಕ್ಕಮಗಳೂರು: ಕೊಬ್ಬರಿ ತುಂಬಿದ್ದ ಲಾರಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ.

    ಹಾಸನದ ಅರಸೀಕೆರೆಯಲ್ಲಿ ಕೊಬ್ಬರಿ ಲೋಡ್ ಮಾಡಿಕೊಂಡ ಲಾರಿ ಮಹಾರಾಷ್ಟ್ರದತ್ತ ಹೊರಟಿತ್ತು. ಇಂದು ಬೆಳಗ್ಗಿನ ಜಾವ ತರೀಕೆರೆಗೆ ಬರುತ್ತಿದ್ದಂತೆ ಲಾರಿ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ಲಾರಿ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

    ಪಲ್ಟಿಯಾದ ರಭಸಕ್ಕೆ ಒಂದೇ ಒಂದು ಟೈರ್ ಕೂಡ ಲಾರಿಯಲ್ಲಿ ಇಲ್ಲ. ಅಷ್ಟೇ ಅಲ್ಲದೇ ಸೇತುವೆಯಿಂದ ಪಲ್ಪಿಯಾದ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವತಾಶ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಲಾರಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ತರೀಕೆರೆ ಸರ್ಕಾರಿ ಆಸ್ಪತೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ನಡೆದ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಗುಂಡಿಗೆ ಬಿದ್ದ ಹಾಲಿನ ಲಾರಿ

    ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಗುಂಡಿಗೆ ಬಿದ್ದ ಹಾಲಿನ ಲಾರಿ

    ಹಾಸನ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ 50 ಅಡಿ ಆಳದ ಗುಂಡಿಗೆ ಬಿದ್ದ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು ರಸ್ತೆಯ ಕೂಡಿಗೆ ಬಳಿ ನಡೆದಿದೆ.

    ರಾಜಘಟ್ಟ ಗ್ರಾಮದ ಯೋಗರಾಜ್ ಎಂಬುವವರಿಗೆ ಹಾಲಿನ ಲಾರಿ ಸೇರಿದ್ದು, ಬೇಲೂರು ತಾಲೂಕಿನ ವಿವಿಧ ಗ್ರಾಮಗಳಿಂದ ಸುಮಾರು 96 ಹಾಲಿನ ಕ್ಯಾನ್ ಗಳನ್ನು ಲಾರಿಯಲ್ಲಿ ತುಂಬಿಕೊಂಡು ಬರುತ್ತಿದ್ದರು. ತಾಂತ್ರಿಕ ದೋಷದಿಂದ ಲಾರಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ.

    ಸದ್ಯ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನೂ ಹಾಲಿನ ಕ್ಯಾನ್‍ಗಳು ಬೀದಿಯಲ್ಲಿ ಬಿದಿದ್ದು, ಸ್ಥಳೀಯರು ಅದನ್ನು ಬೇರೆ ವಾಹನಕ್ಕೆ ತುಂಬಿಸಲು ಸಹಾಯ ಮಾಡಿದ್ದಾರೆ.

    ಸದ್ಯ ಬೇಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಮಿನಿ ಲಾರಿ ಪಲ್ಟಿಯಾಗಿ ಸ್ಥಳದಲ್ಲಿಯೇ ಕ್ಲೀನರ್ ಸಾವು

    ಮಿನಿ ಲಾರಿ ಪಲ್ಟಿಯಾಗಿ ಸ್ಥಳದಲ್ಲಿಯೇ ಕ್ಲೀನರ್ ಸಾವು

    ರಾಯಚೂರು: ಮಿನಿ ಲಾರಿ ಪಲ್ಟಿಯಾಗಿ ಸ್ಥಳದಲ್ಲಿಯೇ ಕ್ಲೀನರೊಬ್ಬರು ಮೃತಪಟ್ಟ ದುರ್ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಹೊರವಲಯದಲ್ಲಿ ನಡೆದಿದೆ.

    ರಾಯಚೂರಿನ ಮೈಲಾರನಗರ ನಿವಾಸಿ ವೀರೇಶ್ (18) ಮೃತ ಕ್ಲೀನರ್. ರಾಯಚೂರಿನಿಂದ ನೀರಿನ ಪೈಪ್ ಗಳನ್ನ ಕೊರವಿಹಾಳ ಗ್ರಾಮಕ್ಕೆ ಸಾಗಣೆ ಮಾಡಿ, ಮರಳುತ್ತಿರುವ ವೇಳೆ ಘಟನೆ ನಡೆದಿದೆ.

    ಮಿನಿ ಲಾರಿಯಲ್ಲಿದ್ದ ಮೃತ ವೀರೇಶ್ ಹಾಗೂ ಚಾಲಕನ ಇದ್ದರು. ಲಾರಿ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಚಾಲಕನ ಲಾರಿಯಿಂದ ಹೊರಗೆ ಜಿಗಿದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕ್ಲೀನರ್ ವೀರೇಶ್ ಲಾರಿಯಲ್ಲಿಯೇ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ: ಭಾರೀ ಅನಾಹುತದಿಂದ ಪಾರಾದ ಚಾಲಕ!

    ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ: ಭಾರೀ ಅನಾಹುತದಿಂದ ಪಾರಾದ ಚಾಲಕ!

    ರಾಯಚೂರು: ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಯಚೂರಿನ ದೇವದುರ್ಗದ ಗಬ್ಬೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಪೆಟ್ರೋಲ್ ತುಂಬಿಕೊಂಡು ಟ್ಯಾಂಕರ್ ರಾಯಚೂರಿನಿಂದ ಕಲಬುರಗಿಗೆ ಹೊರಟಿತ್ತು. ಗಬ್ಬೂರು ಸಮೀಪದಲ್ಲಿ ಎಮ್ಮೆ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ರಸ್ತೆ ಪಕ್ಕದ ಹೊಲದಲ್ಲಿ ಬಿದ್ದಿದೆ.

    ಟ್ಯಾಂಕರ್ ನಲ್ಲಿ ಸುಮಾರು 12 ಸಾವಿರ ಲೀಟರ್ ಪೆಟ್ರೋಲ್ ಇತ್ತು. ಪಲ್ಟಿಯಾಗಿರುವ ಪರಿಣಾಮ ಸ್ವಲ್ಪ ಪ್ರಮಾಣದ ಪೆಟ್ರೋಲ್ ಸೋರಿಕೆಯಾಗಿದೆ. ಅದೃಷ್ಟವಶಾತ್ ಹೊಲದಲ್ಲಿ ಟ್ಯಾಂಕರ್ ಬಿದ್ದ ಪರಿಣಾಮ ಬೆಂಕಿ ತಗುಲದೆ ಭಾರೀ ಅನಾಹುತವೊಂದು ತಪ್ಪಿದೆ. ಇನ್ನು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಗಬ್ಬೂರು ಪೊಲೀಸರು, ಎರಡು ಕ್ರೇನ್ ಮೂಲಕ ಟ್ಯಾಂಕರ್ ಅನ್ನು ಮೇಲೆತ್ತಿದ್ದಾರೆ. ಕಾರ್ಯಾಚರಣೆ ವೇಳೆ ಕೆಲ ಸಮಯ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

  • 30 ಮಂದಿ ಪ್ರಯಾಣಿಕರಿದ್ದ KSRTC ಸ್ಲೀಪರ್ ಬಸ್ ಪಲ್ಟಿ!

    30 ಮಂದಿ ಪ್ರಯಾಣಿಕರಿದ್ದ KSRTC ಸ್ಲೀಪರ್ ಬಸ್ ಪಲ್ಟಿ!

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಸ್ಲೀಪರ್ ಕೋಚ್ ಬಸ್ಸೊಂದು ಹಳ್ಳಕ್ಕೆ ಪಲ್ಟಿಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಗುಡ್ಡೆಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗುರುವಾರ ರಾತ್ರಿ ಬೆಂಗಳೂರಿನಿಂದ ಹೊರಟ ಬಸ್, ಕೊಪ್ಪ-ಶೃಂಗೇರಿ ಮಧ್ಯೆಯ ಗುಡ್ಡೆಹಳ್ಳಿ ಎಂಬ ಗ್ರಾಮದಲ್ಲಿ ಪಲ್ಟಿಯಾಗಿದೆ. ಮುಂಜಾನೆ ಸುಮಾರು 6 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವತಾಶ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ಬಸ್‍ನಲ್ಲಿ ಸುಮಾರು 25-30 ಜನರಿದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‍ನಲ್ಲಿದ್ದ ನಾಲ್ಕೈದು ಜನರಿಗೆ ಗಂಭೀರ ಗಾಯವಾಗಿರೋದ್ರಿಂದ ಅವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಎನ್.ಆರ್.ಪುರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • 80 ಮಕ್ಕಳಿದ್ದ ಶಾಲಾ ವಾಹನ ಪಲ್ಟಿ – ತಪ್ಪಿತು ಭಾರೀ ಅನಾಹುತ

    80 ಮಕ್ಕಳಿದ್ದ ಶಾಲಾ ವಾಹನ ಪಲ್ಟಿ – ತಪ್ಪಿತು ಭಾರೀ ಅನಾಹುತ

    ವಿಜಯಪುರ: ಚಲಿಸುತ್ತಿದ್ದ ಶಾಲಾ ವಾಹನದ ಟೈರ್ ಸ್ಫೋಟಗೊಂಡು ತೆರೆದ ಬಾವಿಯ ಪಕ್ಕದಲ್ಲೇ ಉರುಳಿಬಿದ್ದ ಘಟನೆ ವಿಜಯಪುರದ ಇಂಡಿ ತಾಲೂಕಿನ ಧೂಳಖೇಡ ಬಳಿ ನಡೆದಿದೆ.

    ಧೂಳಖೇಡ ಗ್ರಾಮದ ಶ್ರೀ ಕಮಲ ಪಬ್ಲಿಕ್ ಸ್ಕೂಲ್ ಗೆ ಸೇರಿದ ಶಾಲಾ ವಾಹನ ಇದಾಗಿದ್ದು, ಶಾಲೆ ಮುಗಿದ ಬಳಿಕ ಸುಮಾರು 80 ವಿದ್ಯಾರ್ಥಿಗಳನ್ನ ಮನೆಗೆ ವಾಪಸ್ ಕರೆತಂದು ಬಿಡುತ್ತಿದ್ದ ವೇಳೆ ಶಿರನಾಳ -ಮರಗೂರ ಮಧ್ಯೆ ನಡೆದಿದೆ. ವಾಹನ ಪಲ್ಟಿಯಾದ ಅಲ್ಪ ಅಂತರದಲ್ಲಿ ತೆರೆದ ಬಾವಿ ಇದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

    ಘಟನೆಗೆ ವಾಹನದ ಟೈರ್ ಸ್ಫೋಟಗೊಂಡಿದ್ದೇ ಕಾರಣ ಎನ್ನಲಾಗಿದ್ದು, ಘಟನೆ ಬಳಿಕ ವಾಹನದ ಚಾಲಕ ಮಾರುತಿ ಹೂಗಾರ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು ವಿದ್ಯಾರ್ಥಿಗಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಖಾಸಗಿ ಶಾಲೆ ಆಡಳಿತ ಮಂಡಳಿ ಹಾಗೂ ವಾಹನ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಬೀದರ್: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ಸ್ಥಳದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೀದರ್ ಹೊರ ವಲಯದ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

    ಬೀದರ್ ವೈದ್ಯಕೀಯ ಮಹಾವಿದ್ಯಾಲಯದ (ಬ್ರೀಮ್ಸ್) ವಿನೋದ ದೊಡಮನಿ (22) ಮೃತ ವಿದ್ಯಾರ್ಥಿ. ಮೃತ ವಿನೋದ ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಿವಾಸಿಯಾಗಿದ್ದು ಹಾಸ್ಟೆಲ್ ನಲ್ಲಿದ್ದುಕೊಂಡು ಎಂಬಿಬಿಎಸ್ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ.

    ಡ್ಯುಕ್ ಬೈಕ್ ಮೇಲೆ ಒಂದು ರೌಂಡ್ ಹೋಗಲು ಕ್ರೇಜ್‍ಗಾಗಿ ಬೆಳಗ್ಗೆ 9 ಗಂಟೆ ಸುಮಾರಿಗೆ ಬೆನಕನಹಳ್ಳಿ ರಸ್ತೆ ಮಾರ್ಗವಾಗಿ ಹೊರಟಿದ್ದ. ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ರಸ್ತೆಯಿಂದ ಹೊರಗೆ ಬಿದ್ದಿದ್ದಾನೆ. ತಲೆ ಹಾಗೂ ಮುಖಕ್ಕೆ ಬಲಬಾದ ಪೆಟ್ಟು ಬಿದ್ದಿದ್ದರಿಂದ ವಿನೋದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ತಂದೆ ಹಾಗೂ ಕೆಲವು ಸಂಬಂಧಿಕರು ಬಂದಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಂಗ್ಳೂರಲ್ಲಿ ರೇಷ್ಮೆ ಗೂಡು ಸಾಗಿಸುತ್ತಿದ್ದ ವಾಹನ ಪಲ್ಟಿ!

    ಬೆಂಗ್ಳೂರಲ್ಲಿ ರೇಷ್ಮೆ ಗೂಡು ಸಾಗಿಸುತ್ತಿದ್ದ ವಾಹನ ಪಲ್ಟಿ!

    ಬೆಂಗಳೂರು: ಗೂಡ್ಸ್ ತುಂಬಿಕೊಂಡು ತೆರಳುತ್ತಿದ್ದ ವಾಹನವೊಂದು ಪಲ್ಟಿಯಾದ ಘಟನೆ ಗೊರಗುಂಟೆ ಪಾಳ್ಯದ ಮಾರ್ಡನ್ ಬ್ರೀಡ್ ಫ್ಯಾಕ್ಟರಿ ಬಳಿ ನಡೆದಿದೆ.

    ವಾಹನದಲ್ಲಿ ರೇಷ್ಮೆ ಗೂಡನ್ನ ತುಂಬಿಕೊಂಡು ಶಿಡ್ಲಘಟ್ಟದಿಂದ ರಾಮನಗರಕ್ಕೆ ಸಾಗಿಸಲಾಗುತ್ತಿತ್ತು. ಈ ವೇಳೆ ಗೊರಗುಂಟೆ ಪಾಳ್ಯದ ಮಾರ್ಡನ್ ಬ್ರೀಡ್ ಫ್ಯಾಕ್ಟರಿ ಬಳಿ ತಿರುವು ತೆಗೆದುಕೊಳ್ಳುವ ವೇಳೆ ಮರದ ಕೊಂಬೆಗೆ ಟಚ್ ಆಗಿ ಗೂಡ್ಸ್ ಗಾಡಿ ಪಲ್ಟಿ ಹೊಡೆದಿದೆ.

    ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಖಾಸಗಿ ಬಸ್ ಪಲ್ಟಿ- ಸ್ಥಳದಲ್ಲೇ ಯುವತಿ ಸಾವು, 9 ಜನರಿಗೆ ಗಾಯ

    ಖಾಸಗಿ ಬಸ್ ಪಲ್ಟಿ- ಸ್ಥಳದಲ್ಲೇ ಯುವತಿ ಸಾವು, 9 ಜನರಿಗೆ ಗಾಯ

    ಬೀದರ್: ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಯುವತಿ ಮೃತಪಟ್ಟು 9 ಜನರು ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ.

    ಸ್ವಾತಿ(24) ಮೃತಪಟ್ಟ ಯುವತಿ. ಬಸ್ ಸೋಲಾಪೂರಯಿಂದ ಹೈದ್ರಾಬಾದ್ ಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಹುಮ್ನಾಬಾದ್ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.