Tag: ಪಲ್ಲಕ್ಕಿ ಉತ್ಸವ

  • DMK ಆಡಳಿತ ಪಕ್ಷದಿಂದ ನನಗೆ ಜೀವ ಬೆದರಿಕೆ: ದೇಸಿಗರ್ ಸ್ವಾಮೀಜಿ

    DMK ಆಡಳಿತ ಪಕ್ಷದಿಂದ ನನಗೆ ಜೀವ ಬೆದರಿಕೆ: ದೇಸಿಗರ್ ಸ್ವಾಮೀಜಿ

    ಚೆನ್ನೈ: ಆಡಳಿತಾರೂಢ ಡಿಎಂಕೆ ಪಕ್ಷದಿಂದ ನನಗೆ ಕಿರುಕುಳವಾಗುತ್ತಿದೆ. ನನಗೆ ಜೀವ ಬೆದರಿಕೆಯೂ ಇದೆ ಎಂದು ಮಧುರೈ ಅಧೀನಂ ಧರ್ಮದರ್ಶಿ ಜ್ಞಾನಸಂಬಂಧ ದೇಸಿಗರ್ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

    Pallakki Festival

    ಮಧುರೈ ಜಿಲ್ಲಾಧಿಕಾರಿ ನಿನ್ನೆ ಸಾಂಪ್ರದಾಯಿಕ ಪಲ್ಲಕ್ಕಿ ಉತ್ಸವ ಆಚರಣೆಗೆ ಅನುಮತಿ ನಿರಾಕರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, 500 ವರ್ಷಗಳ ಹಿಂದಿನ ಈ ಧಾರ್ಮಿಕ ಆಚರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ನೋವಾಗಿದೆ. ಈ ಆಚರಣೆಯನ್ನು ಮಾಡಲೇಬೇಕು. ಇದಕ್ಕಾಗಿ ನಾನು ಪ್ರಾಣ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಅಂತಹ ಆಚರಣೆಯನ್ನು ನಿಷೇಧಿಸುವ ಹಕ್ಕು ಯಾವುದೇ ಸರ್ಕಾರ ಅಥವಾ ಸಂಸ್ಥೆಗೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಸ್ವಾಮೀಜಿ ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಆಡಳಿತಾರೂಢ ಡಿಎಂಕೆ ಪಕ್ಷವು ತನಗೆ ಕಿರುಕುಳ ನೀಡುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    MK STALIN AND ANNAMALAI

    ಆಡಳಿತ ಪಕ್ಷದವರು ಗುತ್ತಿಗೆ ಪಡೆದಿರುವ ಜಮೀನಿಗೆ ಬಾಡಿಗೆ ನೀಡುತ್ತಿಲ್ಲ, ಜಮೀನನ್ನೂ ಹಿಂದಿರುಗಿಸುತ್ತಿಲ್ಲ. ನಾನು ಬಾಡಿಗೆ ಕೇಳಿದರೆ, ಅವರು ನನಗೆ ಬೆದರಿಕೆ ಹಾಕುತ್ತಾರೆ. ವಿಧಾನಸಭೆಯಲ್ಲಿ ಮಾತ್ರ ದೇವಸ್ಥಾನ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದೂ ಆರೋಪಿಸುತ್ತಾರೆ. ಜಾತ್ಯಾತೀತ ಎಂದು ಕರೆಯುವ ಸರ್ಕಾರ ಒಂದು ಧರ್ಮವನ್ನು ದುರ್ಬಲಗೊಳಿಸುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರಿಗೇ ಹೇಳುತ್ತೇನೆ ಎಂದಿದ್ದಾರೆ.

  • ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ

    ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ

    ಚೆನ್ನೈ: ತಮಿಳುನಾಡಿನ ಧರ್ಮಪುರಂನ ಅಧೀನಂ ಪೀಠದಲ್ಲಿ ಸ್ವಾಮೀಜಿಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ನಡೆಸುವುದನ್ನು ತಮಿಳುನಾಡು ರಾಜ್ಯ ಸರ್ಕಾರ ನಿಷೇಧಿಸಿದೆ. ಇದರಿಂದ ಕೆರಳಿರುವ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

    MK Stalin (1)

    ಪಲ್ಲಕ್ಕಿ ಉತ್ಸವವನ್ನು ಡಿಎಂಕೆ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಇದರಿಂದ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಕೆರಳಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಧಾರ್ಮಿಕ ಆಚರಣೆಗಳಿಗೆ ಅಡ್ಡಿ ಉಂಟುಮಾಡುತ್ತಿದ್ದಾರೆ. ನಿರ್ಬಂಧ ಹೇರಿದರೆ ನಾನೇ ಪಲ್ಲಕ್ಕಿ ಹೊರುವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್‌ ಮುಖಂಡರು, ವಕೀಲರ ಆಕ್ರೋಶ

    ಮಧುರೈ ಅಧೀನಂ ಪೀಠದ ಮಠಾಧೀಶರಾದ ಜ್ಞಾನಂಸಂಬಂಧ ದೇಶಿಕ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಬ್ರಿಟಿಷರು ಕೂಡ ಈ ಆಚರಣೆಗೆ ಅಡ್ಡಿ ಮಾಡಿರಲಿ. ಈಗೇಕೆ ಅಡ್ಡಿ? ಸರ್ಕಾರಗಳು ಧಾರ್ಮಿಕತೆಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Annamalai_EPS123

    ಈ ಬೆನ್ನಲ್ಲೇ ಧರ್ಮಪುರಂ ಅಧೀನ ಮಠಾಧೀಶರೊಬ್ಬರು ಎಂ.ಕೆ.ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್‌ – ಹೊಸ ಬುಲೆಟ್‌ಪ್ರೂಫ್‌ ಜಾಕೆಟ್‌ ಬೇಕೆಂದ ಭಾರತೀಯ ಸೇನೆ

    ಇಲ್ಲಿನ ಧರ್ಮಪುರಂನ ಅಧೀನ ಪೀಠದಲ್ಲಿ ಪಲ್ಲಕ್ಕಿ ಉತ್ಸವ ನಡೆಯುತ್ತಿತ್ತು. ಸ್ವಾಮೀಜಿಗಳನ್ನು ಪಲ್ಲಕ್ಕಿ ಮೇಲೆ ಕೂರಿಸಿ ಅದನ್ನು ಭಕ್ತರು ಹೊರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಕೆಲ ಸಂಘಟನೆಗಳು ದೂರು ನೀಡಿದ್ದವು. ಇದನ್ನು ಪರಿಗಣಿಸಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸರ್ಕಾರ ಪಲ್ಲಕ್ಕಿ ಮೆರವಣಿಗೆಯನ್ನು ನಿಷೇಧಿಸಿತ್ತು.