Tag: ಪವರ್ ಲಿಫ್ಟಿಂಗ್

  • ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ

    ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ

    ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

    ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

    ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಏಕಾಂಗಿಯಾಗಿ ಬಾವಿ ತೋಡಿದ್ದ ಅಕ್ಷತಾ
    ಮಹಾಮಾರಿ ಕೊರೊನಾ ಬಂದ ಸಂದರ್ಭದಲ್ಲಿ ಇಡೀ ದೇಶ ಸ್ತಬ್ಧವಾಗಿತ್ತು. ಈ ಸಂದರ್ಭ ಜನ ಮನೆಯಿಂದಲೇ ಹೊರಗೆ ಬರುತ್ತಿರಲಿಲ್ಲ. ಆಗ ಅಕ್ಷತಾ ಪೂಜಾರಿ ಏಕಾಂಗಿಯಾಗಿ ತನ್ನ ಮನೆಯಲ್ಲಿ ಬಾವಿಯನ್ನು ತೋಡಿ ಸಾಧನೆ ಮಾಡಿದ್ದರು. ಇದನ್ನೂ ಓದಿ: 75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ

  • ದುಬೈನಲ್ಲಿ ನಡೆದ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದ ಬೆಂಗ್ಳೂರು ಹುಡುಗಿ

    ದುಬೈನಲ್ಲಿ ನಡೆದ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದ ಬೆಂಗ್ಳೂರು ಹುಡುಗಿ

    ಬೆಂಗಳೂರು: ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಡುಗಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಪತಾಕೆಯನ್ನು ಹಾರಿಸಿದ್ದಾರೆ.

    ಆನೇಕಲ್ ತಾಲೂಕಿನ ತಮಿಳುನಾಡಿನ ಗಡಿಗೆ ಹೊಂದಿಕೊಂಡಿರುವ ಸೋಲೂರೂ ಗ್ರಾಮದ ನಿವಾಸಿಗಳಾದ ಗುರುಮೂರ್ತಿ ಮತ್ತು ವನಜಾಕ್ಷಿ ದಂಪತಿಯ ಪುತ್ರಿ ಶಾಲಿನಿ ಚಿನ್ನ ಗೆದ್ದ ಹುಡುಗಿ. ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಶಾಲಿನಿ ಬುಧವಾರ ನಡೆದ 63 ಕೆಜಿ ವಿಭಾಗದ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಮೊದಲ ಸ್ಥಾನಗಳಿಸಿ ಶಾಲಿನಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

    ಮಗಳು ಚಿನ್ನದ ಪದಕ ಗೆಲ್ಲುತ್ತಿದ್ದಂತೆ ಪೋಷಕರ ಹರ್ಷ ಮುಗಿಲು ಮುಟ್ಟಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ತುಂಬಿಕೊಂಡಿದೆ. ಶಾಲಿನಿ ತಂದೆ ತಾಯಿ ಹಾಗೂ ಸಹೋದರ ಪರಸ್ಪರ ಸಿಹಿ ತಿನಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ. ಶಾಲಿನಿ ವಿಡಿಯೋ ಕಾಲ್ ಮಾಡುವ ಮೂಲಕ ಪೋಷಕರೊಂದಿಗೆ ಹರ್ಷ ಹಂಚಿಕೊಂಡು ತನ್ನ ಸಾಧನೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

    ಬಡತನದಲ್ಲಿ ಬೆಳೆದಿದ್ದ ಶಾಲಿನಿಯ ಪ್ರತಿಭೆಯನ್ನು ಗುರುತಿಸಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಈಕೆಗೆ ಉಚಿತ ಶಿಕ್ಷಣ ಮತ್ತು ತರಬೇತಿ ನೀಡುತ್ತಿತ್ತು. ಇದೇ ಸಂದರ್ಭದಲ್ಲಿ ಶಾಲಿನಿ ತಂದೆ ಮಾತನಾಡಿ, ಶಾಲಿನಿಯ ಸಾಧನೆಯಿಂದ ತನ್ನ ಜನ್ಮ ಸಾರ್ಥಕವಾಗಿದೆ ಎಂದು ಆಕೆಯ ಬೆಳವಣಿಗೆಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv