Tag: ಪಶುಭಾಗ್ಯ ಯೋಜನೆ

  • ಪಶುಭಾಗ್ಯದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ – ಎಚ್‍ಡಿಡಿ ಎದುರೇ ಶಾಸಕರ ವಾಗ್ವಾದ

    ಪಶುಭಾಗ್ಯದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ – ಎಚ್‍ಡಿಡಿ ಎದುರೇ ಶಾಸಕರ ವಾಗ್ವಾದ

    ಹಾಸನ: ಪಶುಭಾಗ್ಯ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ನುಂಗಿ ನೀರು ಕುಡಿದಿದ್ದಾರೆ ಎಂದು ಹಾಸನ ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ಮಾಜಿ ಸಚಿವ ಎ ಮಂಜು ವಿರುದ್ಧ ಆರೋಪ ಮಾಡಿದ್ದಾರೆ.

    ಹಾಸನದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಹಿರಿಯ ಶಾಸಕ ಎ.ಟಿ ರಾಮಸ್ವಾಮಿ ಪಶುಭಾಗ್ಯ ಯೋಜನೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಲಾಗಿದೆ. ಮಾಜಿ ಸಚಿವರು ತಮ್ಮ ಕಡೆಯವರಿಗೆ ಮಾತ್ರ ಸಹಾಯಧನ ಕೊಡಿಸಿದ್ದಾರೆ. ಹಸುವನ್ನೇ ನೇರವಾಗಿ ಖರೀದಿಸಿ ನೀಡಬೇಕಿದ್ದ ಸಹಕಾರಿ ಸಂಘಗಳು ಕೇವಲ ಸಬ್ಸಿಡಿ ಹಣ ನೀಡಿ ಕೈತೊಳೆದುಕೊಂಡಿದೆ ಎಂದು ಆರೋಪಿಸಿದರು. ಇದನ್ನು ಓದಿ: ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ 

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕರ ನೇರ ನೇರ ಆರೋಪ ಮಾಡಿದ್ದು, ಈ ವಿಚಾರದಲ್ಲಿಯೇ ಸ್ವಪಕ್ಷೀಯ ಶಾಸಕರ ನಡುವೆಯೇ ವಾಗ್ವಾದಕ್ಕೆ ಕಾರಣವಾಯಿತು. ಶಾಸಕರ ನಡುವೇ ವಾಗ್ವಾದ ನಡೆಯುತ್ತಿದ್ದರೆ ದೇವೇಗೌಡರು ಮೌನಕ್ಕೆ ಶರಣಾಗಿದ್ದರು. ಹಾಸನದ ಚನ್ನರಾಯಪಟ್ಟಣ ಶಾಸಕ ಸಿಎನ್ ಬಾಲಕೃಷ್ಣ ಮೇಲೆ ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಲಿಂಗೇಶ್ ಅವರು ಆರೋಪಗಳ ಸುರಿಮಳೆಗೈದರು. ಇದನ್ನು ಓದಿ:  `ಮೇಡಂ ಎಣ್ಣೆಕಾಟ ತಪ್ಪಿಸಿ’-ಡಿಸಿ ರೋಹಿಣಿ ಸಿಂಧೂರಿಗೆ ರೇವಣ್ಣ ಮನವಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಶುಭಾಗ್ಯ ಯೋಜನೆಯಲ್ಲಿ ಅಕ್ರಮ – ಸಚಿವರಿಂದ್ಲೇ ನಿಯಮಬಾಹಿರವಾಗಿ ಫಲಾನುಭವಿಗಳ ಆಯ್ಕೆ

    ಪಶುಭಾಗ್ಯ ಯೋಜನೆಯಲ್ಲಿ ಅಕ್ರಮ – ಸಚಿವರಿಂದ್ಲೇ ನಿಯಮಬಾಹಿರವಾಗಿ ಫಲಾನುಭವಿಗಳ ಆಯ್ಕೆ

    ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯ ಸ್ವಕ್ಷೇತ್ರದಲ್ಲೇ ಪಶುಭಾಗ್ಯ ಯೋಜನೆಯಲ್ಲಿ ಗೋಲ್‍ಮಾಲ್ ನಡೆದಿರೋ ಆರೋಪ ಕೇಳಿಬಂದಿದೆ.

    ಸ್ವತಃ ಸಚಿವರೇ ನಿಯಮ ಬಾಹಿರವಾಗಿ ಪಶುಭಾಗ್ಯ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಿರೋ ದಾಖಲೆಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. 2016-17ನೇ ಸಾಲಿನ ಪಶುಭಾಗ್ಯ ಯೋಜನೆಯಡಿ ಯೋಜನೆಗೆ ಸುಮಾರು 1800 ಅರ್ಜಿ ಬಂದಿದ್ದು, ಲಾಟರಿ ಮೂಲಕ ಆಯ್ಕೆ ಮಾಡಬೇಕಿತ್ತು. ಆದ್ರೆ ಅಯ್ಕೆ ಸಮಿತಿ ಅಧ್ಯಕ್ಷರಾಗಿರೋ ಸಚಿವ ರಾಯರೆಡ್ಡಿ ಕೇವಲ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಅಡುಗೆ ಸಹಾಯಕಿಯರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಿಗಷ್ಟೇ ಸಾಲ ಮತ್ತು ಧನಸಹಾಯ ಸೌಲಭ್ಯ ನೀಡಿ ಯೋಜನೆಯ ಉದ್ದೇಶವನ್ನೇ ಬುಡಮೇಲು ಮಾಡಿದ್ದಾರೆ.

    ತಮ್ಮ ಇಚ್ಚೆಗೆ ಬಂದಂತೆ 106 ಫಲಾನುಭವಿಗಳನ್ನು ಆಯ್ಕೆ ಮಾಡಿ ಹಣ ನೀಡಿದ್ದಾರೆ. ಸಮಿತಿ ಸದಸ್ಯರು ಹಾಗೂ ಪಶು ಇಲಾಖೆ ಅಧಿಕಾರಿ ಡಾ.ತಿಪ್ಪಣ್ಣ ತಳಕಲ್, ಸಚಿವರ ಕೈಗೊಂಬೆಯಂತೆ ನಡೆದುಕೊಂಡು ಅರ್ಹ ಫಲಾಭುವಿಗಳಿಗೆ ಅನ್ಯಾಯ ಮಾಡಿದ್ದಾರೆ ಅಂತ ಆರೋಪ ಕೇಳಿಬಂದಿದೆ. ಈ ಬಗ್ಗೆ ಯಲಬುರ್ಗಾ ತಾಲೂಕು ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ನೇತೃತ್ವದಲ್ಲಿ ಬಿಜೆಪಿಯ 11 ಸದಸ್ಯರು ಕೊಪ್ಪಳ ಡಿಸಿ, ಜಿಪಂ ಸಿಇಒ, ಜಿಪಂ ಉಪ ಕಾರ್ಯದರ್ಶಿ ಹಾಗೂ ಎಸಿಬಿಗೆ ದೂರು ನೀಡಿದ್ದಾರೆ.