Tag: ಪಶುವೈದ್ಯರು

  • ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ

    ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ

    ಬೆಂಗಳೂರು: ಇಲಾಖೆಯ ಬಲವರ್ಧನೆಗೆ ಶ್ರಮಿಸಿ ಇಲ್ಲವೇ ಜಾಗ ಖಾಲಿ ಮಾಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದರು.

    ಕೇಂದ್ರ ಸ್ಥಾನದಲ್ಲಿ ಅಧಿಕಾರಿಗಳು ಇರುವುದೇ ಇಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು. ಕೃಷಿಯೊಂದಿಗೆ ರೈತಾಪಿ ವರ್ಗ ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಸಕಾಲದಲ್ಲಿ ಜಾನುವಾರುಗಳ ಆರೋಗ್ಯ ನೋಡಿಕೊಳ್ಳಲು ಅವರೆಲ್ಲ ನಮ್ಮ ಇಲಾಖೆಯನ್ನು ಅವಲಂಬಿಸಿದ್ದಾರೆ. ಇಂತಹ ಸಮಯದಲ್ಲಿ ಕರ್ತವ್ಯ ಲೋಪವಾದರೆ ಪಶುಪಾಲಕರಿಗೆ ಆರ್ಥಿಕ ಸಂಕಷ್ಟ, ಜಾನುವಾರುಗಳು ಜೀವ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತದೆ ಎಂದು ಅವರು ಮಾತನಾಡಿದರು. ಇದನ್ನೂ ಓದಿ: ಕೋವಿಡ್ ಟಫ್‌ ರೂಲ್ಸ್‌ ಜಾರಿಯಾದ್ರೂ ಪಾದಯಾತ್ರೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ

    ಉತ್ತರಪ್ರದೇಶದಲ್ಲಿ 17 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಆದರೆ ನಮ್ಮಲ್ಲಿ ಅಂದಾಜು 4 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಇಂತಹ ಸಮಯದಲ್ಲಿ ನಿರ್ಹವಣೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಹೆಚ್ಚು ಒತ್ತಡವಿಲ್ಲ. ಹೀಗಾಗಿ ಜಾನುವಾರುಗಳಿಗೆ ಹೆಚ್ಚು ಸಮರ್ಪಕವಾಗಿ ಚಿಕಿತ್ಸೆ ನೀಡಬಹುದಾಗಿದೆ. ನಿಮಗೆ ಬೇರೆ ರಾಜ್ಯದ ಪಶುವೈದ್ಯರಷ್ಟು ಒತ್ತಡವಿಲ್ಲ. ಹೀಗಾಗಿ ಜವಾಬ್ದಾರಿಯಿಂದ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ: ಶಿವರಾಜ್ ತಂಗಡಗಿ

  • ಮಂಡ್ಯದಲ್ಲಿ 20 ಮೇಕೆಗಳ ನಿಗೂಢ ಸಾವು

    ಮಂಡ್ಯದಲ್ಲಿ 20 ಮೇಕೆಗಳ ನಿಗೂಢ ಸಾವು

    ಮಂಡ್ಯ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಮೇಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪಾಲಹಳ್ಳಿ ಗ್ರಾಮದಲ್ಲಿ ಆಡುಗಳನ್ನು ಸಾಕಿ ಜೀವನ ಸಾಗಿಸುತ್ತಿದ್ದ, ಶ್ರೀನಿವಾಸು ಅವರಿಗೆ ಸೇರಿದ ಈ ಮೇಕೆಗಳು ಇಂದು ಬೆಳಿಗ್ಗೆ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನೆನ್ನೆ ಸಂಜೆ ಮೇಕೆಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಗೆ ಕೂಡಿ ಹಾಕಲಾಗಿತ್ತು. ಇದನ್ನೂ ಓದಿ:  ಫಟಾಫಟ್ ಅಂತ ಮಾಡಿ ಬಿಸಿ ಬಿಸಿಯಾದ ಅನ್ನದ ಪಕೋಡ

    ಮೇಕೆಗಳ ನಿಗೂಢ ಸಾವಿನಿಂದ ಮೇಕೆಗಳನ್ನು ಸಾಕಿದ್ದ ವ್ಯಕ್ತಿ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷದ ಪದಾರ್ಥ ತಿಂದು ಸಾವನ್ನಿಪ್ಪಿರಬೇಕೆಂದು ಶಂಕಿಸಿದ್ದಾರೆ.

  • 3 ದಿನದಲ್ಲಿ 200ಕ್ಕೂ ಹೆಚ್ಚು ಶ್ವಾನಗಳ ಸಾವು- ಜನರಲ್ಲಿ ಆತಂಕ

    3 ದಿನದಲ್ಲಿ 200ಕ್ಕೂ ಹೆಚ್ಚು ಶ್ವಾನಗಳ ಸಾವು- ಜನರಲ್ಲಿ ಆತಂಕ

    ಕೊಲ್ಕತ್ತಾ: ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶಾನ್ವಗಳು ಸಾವನ್ನಪ್ಪಿದೆ. ಈ ಮೂಲಕ ಜನರಲ್ಲಿ ಆತಂಕವನ್ನು ಮೂಡಿಸಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ನಡೆದಿದೆ.

    ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ. ಈ ಕುರಿತಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಮೃತಪಟ್ಟ ನಾಯಿಗಳ ದ್ರವವನ್ನು ಸಂಗ್ರಹಿಸಿ ಕೊಲ್ಕತ್ತಾಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ನಾಯಿಗಳ ಶವವನ್ನು ಬಿಷ್ಣುಪುರ ಪುರಸಭೆಯವರು ಒಂದು ಕಡೆ ತೆಗೆದುಕೊಂಡು ಡಂಪಿಂಗ್ ಮಾಡಲಾಗುತ್ತಿದೆ.

    200 ನಾಯಿಗಳು ಸೋಕಿನಿಂದ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಬರುವುದು ಸಮಾನ್ಯವಾಗಿದೆ. ಈ ಕುರಿತಾಗಿ ಆತಂಕಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಇತರ ಪ್ರಾಣಿ ಅಥವಾ ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ ಪರೀಕ್ಷೆ ಮಾಡುತ್ತೇವೆ ಎಂದು ಪಶುವೈದ್ಯರು ಹೇಳಿದ್ದಾರೆ.

  • ಪಶುವೈದ್ಯರ ನಿರ್ಲಕ್ಷಕ್ಕೆ 50 ಕುರಿಗಳ ಮಾರಣಹೋಮ

    ಪಶುವೈದ್ಯರ ನಿರ್ಲಕ್ಷಕ್ಕೆ 50 ಕುರಿಗಳ ಮಾರಣಹೋಮ

    ಗದಗ: ಜಿಲ್ಲೆಯಲ್ಲಿ ಅನಾರೊಗ್ಯಕ್ಕೆ ತುತ್ತಾಗಿ ನಿತ್ಯವೂ ಕುರಿಗಳ ಮಾರಣಹೋಮ ನಡೆಯುತ್ತಿದ್ದರೂ ಪಶು ವೈದ್ಯಾಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಅದೇ ರೀತಿ ಗದಗ ಜಿಲ್ಲೆ ಕಳಸಾಪುರ ಗ್ರಾಮದ ಈರಪ್ಪ ಕನ್ಯಾಳ ಎಂಬ ರೈತನಿಗೆ ಸೇರಿದ 50ಕ್ಕೂ ಅಧಿಕ ಕುರಿಗಳು ಏಕಾಏಕಿ ಸಾವನ್ನಪ್ಪಿವೆ. ಎರಡು ದಿನಗಳಾದರೂ ಪಶುವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡದೆ ಇರುವುದಕ್ಕೆ ಸಾವನ್ನಪ್ಪಿವೆ ಎಂಬದು ನೊಂದ ರೈತರ ಆರೋಪವಾಗಿದೆ.

    ತಡವಾಗಿ ಬಂದ ಮುಖ್ಯ ಪಶುವೈದ್ಯಾಧಿಕಾರಿ ಎಸ್.ಎಸ್.ಹೊಸಮಠ ಹಾಗೂ ಸಹಾಯಕಿ ಜಯಮ್ಮಾ ಅವರನ್ನು ರೈತರು ಹಿಗ್ಗಾ-ಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳ ಮುಖದಲ್ಲಿ ಬೆವರಿಳಿಸುವ ಮೂಲಕ, ಈಗ್ಯಾಕೆ ಬಂದ್ರಿ, ನಮಗೂ ಸ್ವಲ್ಪ ವಿಷಕೊಡಿ. ನಾವು ಕುರಿಗಳು ಸತ್ತ ಹಾಗೆ ಸಾಯುತ್ತೇವೆ ಎಂದು ಈರಪ್ಪನ ಕುಟುಂಬದವರು ಕಣ್ಣೀರಿಟ್ಟರು. ಕುರಿಗಳನ್ನು ಕಳೆದುಕೊಂಡ ರೈತ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

    ಹಲವಾರು ದಿನಗಳಿಂದ ಕುರಿಗಳು ಸಾವನ್ನಪ್ಪುತ್ತಿದ್ದರೂ ಕಾಯಿಲೆಗೆ ಸೂಕ್ತ ಔಷಧ ದೊರೆಯುತ್ತಿಲ್ಲ. ಕುರಿಗಳು ಕಣ್ಣು ಮುಂದೆಯೇ ಸಾಯುತ್ತಿರುವುದನ್ನು ನೋಡಲಾಗದೇ ಕಣ್ಣೀರಿಡುತ್ತಿದ್ದಾರೆ. ಎಲ್ಲಂದರಲ್ಲಿ ನಿತ್ಯವೂ ಕುರಿಗಳು ಸಾವನ್ನಪ್ಪುತ್ತಿವೆ. ಪಶುವೈದ್ಯರು ಹಾಗೂ ಸಿಬ್ಬಂದಿ ಸ್ಥಳಕ್ಕೆ ಬರುತ್ತಿಲ್ಲ, ಕುರಿಗಾಹಿಗಳ ಸಮಸ್ಯ ಆಲಿಸುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.

    ಈ ಬಗ್ಗೆ ವೈದ್ಯಾಧಿಕಾರಿ ಕೇಳಿದರೆ, ನಮಗೆ ತಿಳಿಸದೇ ಕುರಿಗಳಿಗೆ ಅತಿಯಾದ ಉಪ್ಪು ನೀರು ಕುಡಿಸಲಾಗಿದೆ. ಹೀಗಾಗಿ ಕುರಿಗಳು ಸಾವನ್ನಪ್ಪಿವೆ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ಇದು ರೈತರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಯಿತು. ಪಶುವೈದ್ಯಾಧಿಕಾರಿಗಳ ನಿರ್ಲಕ್ಷ ಹಾಗೂ ಸೂಕ್ತ ಔಷಧ ದೊರೆಯದಿರುವುದಕ್ಕೆ ಬೇಸತ್ತ ರೈತರು ಮೃತ ಕುರಿಗಳನ್ನು ಟ್ರ್ಯಾಕ್ಟರ್ ಮೂಲಕ ತೆಗೆದುಕೊಂಡು ಗದಗ ಜಿಲ್ಲಾಡಳಿತ ಭವನದ ಬಳಿಬಂದು ಅಧಿಕಾರಿಗಳ ಮುಂದೆ ತಮ್ಮ ಅಳಲು ತೋಡಿಕೊಂಡರು.

    ಜಿಲ್ಲಾಧಿಕಾರಿ ಕಚೇರಿ ಬಳಿ ಕುರಿಗಳನ್ನು ಹಾಕಿ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ರೈತರಿಗೆ ಸಮಾಧಾನ ಪಡಿಸಿ ಸಾಂತ್ವಾನ ಹೇಳಿದರು. ಜಿಲ್ಲೆಯಲ್ಲಿ ಪಶುವೈದಾಧಿಕಾರಿ ಹಾಗೂ ಸಿಬ್ಬಂದಿ ಕೊರತೆಯಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು ಸಮಸ್ಯ ಬಗೆರಿಸುತ್ತೇನೆ ಹಾಗೂ ನಿಮಗೆ ಸೂಕ್ತ ಪರಿಹಾರ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.